Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಾಸೋಹ ಮತ್ತು ಪರೋಪಕಾರ ಮಾಡುವುದರ ಮೂಲಕ ತಂದೆ ತಾಯಿ,ಗುರು ಹಿರಿಯರ ಋಣಭಾರದಿಂದ ಸ್ವಲ್ಪಮಟ್ಟಿನ ಮುಕ್ತಿ ಪಡೆಯಬಹುದು. ಶರಣರು ಕಲಿಸಿಕೊಟ್ಟ ದಾಸೋಹ ಸಂಸ್ಕ್ರತಿಯಿಂದ ಜ್ಞಾನಾಭಿವೃದ್ಧಿಯಾಗುವುದಲ್ಲದೆ ವರ್ಗಭೇದವಳಿದು ಶಾಂತಿ ನೆಮ್ಮದಿಗಳು ನೆಲೆಸುತ್ತವೆ.ಆಗ ಬದುಕು ಸುಂದರವಾಗುವುದೆಂದು ಪ್ರೊ.ಬಸವರಾಜ ಕಡ್ಡಿಯವರು ಹೇಳಿದರು.ಅವರು ನಗರದ ವೀರಶೈವ ಲಿಂಗಾಯತ ಮಹಾಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಲಿಂ.ಪಾರ್ವತಿ ಗುರುಪಾದಪ್ಪ ಕೋರಿ ಅವರ ಸ್ಮರಣಾರ್ಥ ನಡೆದ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.ವಿ.ಸಿ.ನಾಗಠಾಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಡಾ.ವಿ.ಡಿ.ಐಹೊಳ್ಳಿ ಸ್ವಾಗತಿಸಿದರು. ಜಂಬುನಾಥ ಕಂಚ್ಯಾಣಿಯವರು ಪ್ರಾಸ್ತಾವಿಕ ವಾಗಿ ಮಾತನಾಡಿದರು.ವೇದಿಕೆಯ ಮೇಲಿದ್ದ ಈಶ್ವರಪ್ಪ ಕೋರಿ, ಕೋರಿ ಜಗದೀಶ ಮತ್ತು ಶರಣಪ್ಪ ಮಾತನಾಡಿದರು.ಈರಣ್ಣ ತೊಂಡಿಕಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮ.ಗು.ಯಾದವಾಡ ವಂದಿಸಿದರು.ಕಾರ್ಯಕ್ರಮದಲ್ಲಿ ದೊಡ್ಡಣ್ಣ ಬಜಂತ್ರಿ, ಶಶಿಕಾಂತ ಸಾತಿಹಾಳ, ಸುಜಾತಾ ಪಾಟೀಲ, ಎಸ್.ಎಸ್.ಪಾಟೀಲ, ಪ್ರೊ.ಬಿ.ಜಗದೀಶ, ಎಸ್,ಬಿ. ದೊಡಮನಿ ದಂಪತಿಗಳು , ಎಸ್.ವಾಯ್.ಗದಗ, ನೂತನ ಬ್ಯಾಕೋಡ, ಮುಂತಾದವರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಂಬಾಕು ವಿರೋಧಿ ದಿನದ ಅಂಗವಾಗಿ ವಿಜಯಪುರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎನ್ ಎಸ್ ಎಸ್ ಘಟಕ-I ಮತ್ತು ಘಟಕ-II ನೇತೃತ್ವದಲ್ಲಿ ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಆರೋಗ್ಯಕರ ಮತ್ತು ತಂಬಾಕು ಮುಕ್ತ ಜೀವನಶೈಲಿಯನ್ನು ಪ್ರೋತ್ಸಾಹಿಸಲು ವಿಶೇಷ ಜಾಗೃತಿ ಕಾರ್ಯಕ್ರಮ ಜರುಗಿತು.ಈ ಸಂದರ್ಭದಲ್ಲಿ ಪ್ರೊ.ಮಿಲನ್ ರಾಥೋಡ್ ಹಾಗೂ ಡಾ.ತರನ್ನುಮ್ ಜಬೀನ್ ಖಾನ್ ಮಾತನಾಡಿ, ಧೂಮಪಾನ ಮತ್ತು ತಂಬಾಕು ಉತ್ಪನ್ನಗಳ ಬಳಕೆಯಿಂದ ಜೀವಕ್ಕೆ ಅಪಾಯವೇ ಹೆಚ್ಚು. ತಂಬಾಕಿನಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದರಿಂದ ನಾವೆಲ್ಲ ತಂಬಾಕು ಸೇವನೆ ಮಾಡಬಾರದು. ಪ್ರತಿಯೊಬ್ಬರ ಉತ್ತಮ ಆರೋಗ್ಯ ಸ್ವಾಸ್ತ್ಯ ಸಮಾಜದ ಹೆಗ್ಗುರುತು ಎಂದರು.ತಂಬಾಕಿನ ಅಂಶ ಹೃದಯ ಸಂಬಂಧಿ ರೋಗಕ್ಕೂ ಕಾರಣವಾಗುತ್ತದೆ. ಆ ಹಿನ್ನೆಲೆ ವಿದ್ಯಾರ್ಥಿಗಳು ತಂಬಾಕಿನ ಅಪಾಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸಬೇಕು ಎಂದು ಹೇಳಿದರು.
ವಿಜಯಪುರದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ | ಜಾಗೃತಿ ಜಾಥಾ | ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಅರವಿಂದ್ ಹಾಗರಗಿ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುವಜನತೆ ದುಶ್ಚಟಗಳಿಂದ ದೂರವಿರಬೇಕು, ತಂಬಾಕು ಸೇವನೆ ಸೇವನೆ ತ್ಯಜಿಸಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾಅರ್ಯದರ್ಶಿ ಅರವಿಂದ್ ಎಸ್. ಹಾಗರಗಿ ಹೇಳಿದರು. ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಕಲಬುರಗಿಯ ಇಂಡಿಯನ್ ಕ್ಯಾನ್ಸರ್ ಸೊಸೈಟಿ, ವಿಜಯಪುರದ ನಾಗೂರ್ ನರ್ಸಿಂಗ್ ಕಾಲೇಜು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ದೇಶದ ಭವಿಷ್ಯ. ಯುವಜನತೆ ಯಾವುದೇ ಕಾರಣಕ್ಕೂ ಧೂಮಪಾನ,…
ಮೊದಲ ಪುಟ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.೨೦೨೫ರ ಸೆಪ್ಟೆಂಬರ್ ೧೨ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ ೧೧ ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ. ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ವತಿಯಿಂದ ನೂತನ ಡಿಡಿಪಿಯು ಆಗಿ ಆಧಿಕಾರ ಸ್ವೀಕರಿಸಿದ ಶ್ರೀಯುತ ಕೆ ಎ ಉಪ್ಪಾರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಪ್ರಭಾರಿ ಪ್ರಾಚಾರ್ಯ ರವಿಕುಮಾರ ಗುಮಶೆಟ್ಟಿ,ಉಪನ್ಯಾಸಕ ಬಿ ಎಂ ಕುಂಭಾರ, ದ್ವಿದಸ ಈರಣ್ಣ ಝಳಕಿ ಸೇರಿದಂತೆ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಲೋಕ ಕಲ್ಯಾಣ ಪ್ರಾಥಮಿಕ ಶಾಲೆ ಗೋಳಗುಮ್ಮಟ ಹಿಂದುಗಡೆ ಡಾಲರ್ಸ್ ಕಾಲನಿ ಹತ್ತಿರ ಇರುವ ಶಾಲೆಯ ಆವರಣದಲ್ಲಿ ಶಿಬಿರ ಮುಕ್ತಾಯವಾಯಿತು.ಈ ಶಿಬಿರದಲ್ಲಿ ಒಟ್ಟು ೧೫೦ ವಿದ್ಯಾರ್ಥಿಗಳಿಗೆ ಯೋಗ ಮತ್ತು ಕರಾಟೆ ತರಬೇತಿಯು ಕೊನೆಗೊಂಡಿತು.ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ದಾನಪ್ಪ ಸೂರಗೊಂಡ, ಆಡಳಿತಾಧಿಕಾರಿ ಪ್ರಭು ಕೋಟ್ಯಾಳ, ಮುಖ್ಯ ಗುರು ದಯಾಸಾಗರ ಸೂರಗೊಂಡ ಹಾಗೂ ದೈಹಿಕ ಶಿಕ್ಷಕಿ ಶ್ರೀಮತಿ ಅನಿತಾ ರಜಪುತ, ಶಿಕ್ಷಕರಾದ ಎ.ಎಸ್. ಬಾಸಿಂಗಿ, ಯೋಗ ಮತ್ತು ಕರಾಟೆ ತರಬೇತಿದಾರರಾದ ಬಸವರಾಜ ಎನ್ ಬಾಗೇವಾಡಿ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಮಕ್ಕಳೊಂದಿಗೆ ಹಾಜರಾಗಿದ್ದರು.
ಉದಯರಶ್ಮಿ ದಿನಪತ್ರಿಕೆ ಚಡಚಣ: ನಾಗಠಾಣ ಮತಕ್ಷೇತ್ರ ಅಭಿವೃದ್ಧಿ ಕ್ಷೇತ್ರ ವಾಗಬೇಕೆಂದರೆ ನಾಗಠಾಣ ಶಾಸಕರಾದ ವಿಠ್ಠಲ ಕಟಕಧೋಂಡ ಅವರಿಗೆ ಸಚಿವ ಸ್ಥಾನದ ಅಧಿಕಾರ ಕೊಟ್ಟಾಗ ಮಾತ್ರ ಸಾಧ್ಯವಾಗಲಿದೆ, ಆ ನಿಟ್ಟಿನಲ್ಲಿ ಶಾಸಕ ವಿಠ್ಠಲ ಕಟಕಧೋಂಡ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ ಶಿವುಕುಮಾರ ಅವರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನದ ಅವಕಾಶ ನೀಡಿ ಎಂದು ಕಾಂಗ್ರೆಸ್ ಧುರಿಣ ವಾಸಿಮ್ ಮುಲ್ಲಾ ಒತ್ತಾಯಿಸಿದ್ದಾರೆ.ನಾಗಠಾಣ ಮತಕ್ಷೇತ್ರಕ್ಕೆ ಇಲ್ಲಿಯ ವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ನೂತನ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ ಅವರು ನಾಗಠಾಣ ಮತಕ್ಷೇತ್ರಕ್ಕೆ ಸಚಿವ ಸ್ಥಾನ ನೀಡಿದರೆ ಕರ್ನಾಟಕ ಹಾಗೂ ನಾಗಠಾಣ ಕ್ಷೇತ್ರದ ಇತಿಹಾಸದ ಪುಟದಲ್ಲಿ ನೀವು ಶಾಶ್ವತವಾಗಿ ಉಳಿಯಲಿದ್ದಿರಿ ಎಂದು ಚಡಚಣ ಪಟ್ಟಣದ ಕಾಂಗ್ರೆಸ್ ಧುರಿಣ ವಾಸಿಮ್ ಮುಲ್ಲಾ ಅವರು ಶಾಸಕ ವಿಠ್ಠಲ.ಧೋ ಕಟಕಧೋಂಡ ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಹೈಕಮಾಂಡಗೆ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೂ ಮನವಿ ಮಾಡಿದ್ದಾರೆ.
ಹೈಕಮಾಂಡ ಮುಖಂಡರಿಗೆ ಸಚಿವ ಎಂ.ಬಿ.ಪಾಟೀಲ ಕೋರಿಕೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಿಜಯಪುರ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಬೇಡಿಕೆ ಇದ್ದು, ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡುವಂತೆ ಹೈಕಮಾಂಡ ಮುಖಂಡರಿಗೆ ವಿನಂತಿಸಿದ್ದೇನೆ ಎಂದು ಸಚಿವ ಎಂ.ಬಿ.ಪಾಟೀಲ ಅವರು ತಿಳಿಸಿದ್ದಾರೆ.ಸಚಿವರಾಗಿ ಪ್ರಮಾಣ ಸ್ವೀಕರಿಸುವ ಮುಂಚೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 6 ಜನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಇನ್ನೊಂದು ಸಚಿವ ಸ್ಥಾನ ನೀಡುವಂತೆ ಹೈಕಮಾಂಡ ಮುಖಂಡರಿಗೆ ವೈಯಕ್ತಿಕವಾಗಿ ವಿನಂತಿಸಿದ್ದೇನೆ. ಮುಂದಿನ ಸಚಿವ ಸಂಪುಟದಲ್ಲಿ ಅದು ಈಡೇರಲಿದೆ ಎಂದರು.ಈ ಹಿಂದೆ 5 ವರ್ಷ ಜಲಸಂಪನ್ಮೂಲ ಸಚಿವನಾಗಿ, ಅಲ್ಪ ಅವಧಿಗೆ ಗೃಹ ಸಚಿವನಾಗಿ ಮತ್ತು ಮೂರು ವರ್ಷ ಕೈಗಾರಿಕೆ ಸಚಿವನಾಗಿ ಮಾಡಿದ ಕಾರ್ಯ ನನಗೆ ತೃಪ್ತಿ ತಂದಿದೆ. ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಯವರ ಆಶೀರ್ವಾದದಿಂದ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದೇನೆ. ವಿಜಯಪುರ ಜಿಲ್ಲೆಯ ಜನತೆಯ ಆಶೀರ್ವಾದದಿಂದ ಇದೀಗ…
ಉದಯರಶ್ಮಿ ದಿನಪತ್ರಿಕೆ ವರದಿ: ಬಸವರಾಜ ನಂದಿಹಾಳಬಸವನಬಾಗೇವಾಡಿ: ಮುಂಗಾರು ಹಂಗಾಮಿನ ಆರಂಭವಾಗುತ್ತಿದ್ದಂತೆ ರೈತ ಬಾಂಧವರು ಬಿತ್ತನೆ ಕಡೆಗೆ ಮುಖ ಮಾಡುತ್ತಿದ್ದಾರೆ. ರೈತ ಬಾಂಧವರು ಬಿತ್ತನೆಗೆ ಬೇಕಾದ ಬೀಜಗಳನ್ನು ಖರೀದಿಸುವುದರಲ್ಲಿ ತಲ್ಲೀನರಾಗಿದ್ದಾರೆ. ತಾಲೂಕಿನಲ್ಲಿ ಕಳೆದ ವಾರದಲ್ಲಿ 10.3 ಎಂ.ಎಂ. ಮಳೆಯಾಗಬೇಕಿತ್ತು. 3.8 ಎಂ.ಎಂ ಮಳೆ ಮಾತ್ರ ಆಗಿದೆ. ನಿರೀಕ್ಷೆಯಷ್ಟು ಮಳೆಯಾಗಿಲ್ಲ. ಮಳೆಯ ನಿರೀಕ್ಷೆಯಲ್ಲಿ ರೈತ ಬಾಂಧವರು ಬಿತ್ತನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬುಧವಾರ ಮಧ್ಯಾನ್ಹ ವೇಳೆ ಪಟ್ಟಣ ಸೇರಿದಂತೆ ಕೆಲವೆಡೆ ದಟ್ಟವಾದ ಮೋಡ ಕವಿದ ವಾತಾವರಣದೊಂದಿಗೆ ಆರಂಭವಾದ ಮಳೆ ಕೆಲ ಹೊತ್ತು ಬಂದಿತ್ತು. ಬಿರು ಬಿಸಿಲಿನ ಧಗೆಯಿಂದ ತತ್ತರಿಸಿದ ಜನತೆಗೆ ಕೊಂಚ ತಂಪು ತಂದಿತ್ತು.ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ರೈತರು ಬೀಜ ಪಡೆಯಲು ಸರದಿಯಲ್ಲಿ ನಿಂತು ಮೊದಲು ಟೋಕನ್ ಪಡೆದುಕೊಂಡ ನಂತರ ತಮ್ಮ ಆಧಾರ ಕಾರ್ಡ್ ನೀಡಿ ತಮಗೆ ಅಗತ್ಯವಿರುವ ಬೀಜಗಳಿಗೆ ರಸೀದಿ ಮಾಡಿಸಿಕೊಂಡು ಹಣ ಪಾವತಿ ಮಾಡಿದ ನಂತರ ಬೀಜ ವಿತರಣೆ ಕಾರ್ಯ ಮಾಡುತ್ತಿರುವದು ಕಂಡುಬಂದಿತ್ತು.ಬಸವನಬಾಗೇವಾಡಿ ತಾಲೂಕಿನಲ್ಲಿ ಮುಸಕಿನ ಜೋಳ ನೀರಾವರಿ ಮತ್ತು…
ಉದಯರಶ್ಮಿ ದಿನಪತ್ರಿಕೆ ನಿಡಗುಂದಿ: ಇಟಗಿ ಗ್ರಾಮದಲ್ಲಿ ನಡೆದ ಅಖಂಡ ಕರ್ನಾಟಕ ರೈತ ಸಂಘದ ಗ್ರಾಮ ಶಾಖೆ ಉದ್ಘಾಟನಾ ಸಮಾರಂಭದಲ್ಲಿ ನಿಡಗುಂದಿ ತಾಲೂಕು ನೂತನ ಅಧ್ಯಕ್ಷರಾಗಿ ನಂದು ಮಾಗಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಉಮೇಶ ವಾಲೀಕಾರ ತಿಳಿಸಿದ್ದಾರೆ.ನೂತನ ಅಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಿ ಆದೇಶ ಪತ್ರ ನೀಡಿ ಮಾತನಾಡಿದ ಅವರು, “ಸಂಘದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ, ಸಂಘಕ್ಕೆ ಚ್ಯುತಿ ಬರದಂತೆ ಪ್ರಾಮಾಣಿಕತೆಯಿಂದ ಸಂಘಟನೆ ಮುನ್ನಡೆಸಬೇಕು. ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಸೂಚಿಸಿದರು.
