Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಡಣಿ ಗ್ರಾಮದಲ್ಲಿ ತಾಯಿ ಮಗಳು ಅಪಾಯದಿಂದ ಪಾರು ಉದಯರಶ್ಮಿ ದಿನಪತ್ರಿಕೆ ಆಲಮೇಲ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಆಲಮೇಲ ತಾಲೂಕಿನ ಕಡಣಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ತಾಯಿ ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗುರುವಾರ ರಾತ್ರಿ 10.30 ರ ಸುಮಾರಿಗೆ ಕಡಿಮೆ ಗ್ರಾಮದ ಭೋರಮ್ಮ ಬೀರಪ್ಪ ಪೂಜಾರಿ ಅವರು ಮನೆಯಲ್ಲಿ ತಮ್ಮ ಮಕ್ಕಳೊಂದಿಗೆ ಮಲಗಿಕೊಂಡಿದ್ದಾಗ ಮನೆಯ ಮೇಲ್ಚಾವಣಿಯ ತುಂಡು ಬಿದ್ದ ಪರಿಣಾಮ ಭಯದಲ್ಲಿ ಹೊರಗೆ ಓಡಿ ಬಂದಿದ್ದಾರೆ. ಆ ಸಂದರ್ಭದಲ್ಲಿ ಮನೆಯ ಮೇಲ್ಚಾವಣಿ ಸಂಪೂರ್ಣ ಕುಸಿದು ಬಿದ್ದಿದೆ.ತಾಯಿ ಮತ್ತು ಮಕ್ಕಳಿಗೆ ಸಣ್ಣ ಪ್ರಮಾಣದ ಪೆಟ್ಟುಗಳು ಆಗಿವೆ. ಅದೃಷ್ಟವಶಾತ್ ಸುರಿಯುವ ಮಳೆಯಲ್ಲಿ ಹೊರಗೆ ಓಡಿ ಬಂದಿದ್ದರ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಆಲಮೇಲ ತಹಶಿಲ್ದಾರ್ ಧನಪಾಲ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲಿಸಿ ಸರ್ಕಾರದಿಂದ ದೊರೆಯುವ ಪರಿಹಾರವನ್ನು ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.ಗ್ರಾಮ ಲೆಕ್ಕಾಧಿಕಾರಿ ವೈ ಎಸ್ ಗೊಂದಳಿ, ಶರಣು ವಾಲಿಕಾರ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಮಲ್ಲಿಕಾರ್ಜುನ್ ಪ್ಯಾಟಿ, ಗ್ರಾಪಂ ಸದಸ್ಯ…
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಮರುಸಮೀಕ್ಷೆ ಕುರಿತು ಸೌಹಾರ್ದಯುತ ಚರ್ಚೆ ನಡೆದಿದೆ ಹೊರತು ಯಾವುದೇ ರೀತಿ ಗದ್ದಲ, ಗೊಂದಲ ಉಂಟಾಗಿಲ್ಲ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಮೇಜು ಗುದ್ದಿ ಮಾತನಾಡಿದ್ದೇನೆ. ಪೇಪರ್ ಹರಿದು ಹಾಕಲಾಗಿದೆ. ಸಭೆಯಲ್ಲಿ ಸೌಹಾರ್ದಯುತವಾಗಿ ಚರ್ಚೆ ನಡೆದಿದೆ. ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಸಭೆಯಲ್ಲಿ ಇರಲಿಲ್ಲ. ಆದರೂ ಅವರು ಏರು ದನಿಯಲ್ಲಿ ಮಾತನಾಡಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪಾಗಿ ವರದಿ ಮಾಡಲಾಗಿದೆ. ಆದರೆ, ಲಿಂಗಾಯತ ಸಮುದಾಯಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲಗಳ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಅದನ್ನು ಪರಿಹರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.ಇದು ಜಾತಿ ಗಣತಿಯಲ್ಲ.…
೬.೫ ಕೆ.ಜಿ ಚಿನ್ನಾಭರಣ, ರೂ.೪೧ಲಕ್ಷ ನಗದು ವಶ! ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದಲ್ಲಿ ದಿ.೧೬ ಮಂಗಳವಾರ ನಡೆದ ಎಸ್ಬಿಐ ಬ್ಯಾಂಕ ದರೋಡೆ ಪ್ರಕರಣ ತನಿಖೆ ನಡೆದಿದ್ದು, ಮೊದಲ ಹಂತದಲ್ಲಿ ೧೩೬ ಪ್ಯಾಕೆಟ್ ೬.೫ ಕೆ.ಜಿ. ಚಿನ್ನಾಭರಣ ಮತ್ತು ೪೧ ಲಕ್ಷ ೪ ಸಾವಿರ ನಗದು ಹಣ ಗುರುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್.ಪಿ. ಲಕ್ಷ್ಮಣ ನಿಂಬರಗಿ ಹೇಳಿದರು.ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮಂಗಳವಾರ ಸಂಜೆ ೬.೩೦ ರಿಂದ ೭.೩೦ ಗಂಟೆಯ ಸುಮಾರು ನಡೆದ ಘಟನೆಯಲ್ಲಿ ಎಸ್ಬಿಐ ಬ್ಯಾಂಕ್ನಿಂದ ಸುಮಾರು ೩೯೮ ಪ್ಯಾಕ್ ೨೦ ಕೆ.ಜಿ. ಚಿನ್ನಾಭರಣ, ೧ ಕೋಟಿ ೪ ಲಕ್ಷ ನಗದು ಹಣ ದರೋಡೆ ಮಾಡಿದ್ದಾರೆ. ಘಟನೆ ನಡೆದ ದಿನ ಮಂಗಳವಾರ ಮಹಾರಾಷ್ಟ್ರದ ಹುಲಜಂತಿ ಗ್ರಾಮದಲ್ಲಿ ತಡ ರಾತ್ರಿ ದರೋಡೆಗೆ ಬಳಿಸಿದ ವಾಹನ ಬೈಕ್ಗೆ ಅಪಘಾತವಾಗಿ, ಸ್ಥಳೀಯರ ಜೊತೆ ಜಗಳ ಪ್ರಾರಂಭವಾದಾಗ ದರೋಡೆಕೋರರು ಅಲ್ಲಿನ ಸಾರ್ವಜನಿಕರಿಗೆ ಬೆದರಿಸಿ ಕೆಲ ಬ್ಯಾಗಗಳನ್ನು ತೆಗೆದುಕೊಂಡು ದರೋಡೆಗೆ ಬಳಸಿದ ವಾಹನ…
ಆ.೦೯ ರ ರೈತರ ಬೃಹತ್ ಹೋರಾಟಕ್ಕೆ ತಡೆ | ರೈತರಿಗೆ ಪರಿಹಾರ ಧನ ಒನ್ ಟೈಮ್ ಸೆಟ್ಲಮೆಂಟ್ ಗೆ ಆಗ್ರಹ | ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ವ್ಯಂಗ್ಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಚಾವತ್ ಆರೋಗದ ತೀರ್ಪಿನಂತೆ ರಾಜ್ಯ ಸರ್ಕಾರ ಕೃಷ್ಣಾ ನದಿ ನೀರನ್ನು ಸಂಪೂರ್ಣ ಬಳಕೆ ಮಾಡಿಕೊಳ್ಳಲು ವಿಫಲವಾಗಿದೆ. ಇದರಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನೇ ಅಭಿವೃದ್ಧಿ ಎಂದುಕೊಂಡಿದ್ದಾರೆಂದು ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ವ್ಯಂಗ್ಯವಾಡಿದರು.ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನದಿ ನೀರಿನ ಸಮರ್ಪಕ ಬಳಕೆಯಿಂದ ರೈತರ ಹೊಲಗದ್ದೆಗಳಲ್ಲಿ ನೀರು ಹರಿದು, ನಾಡು ಸಂಪದ್ಭರಿತ ವಾದಾಗ ಅದು ಅಭಿವೃದ್ಧಿ ಎಂದು ವಿವರಿಸಿದರು.ಆಲಮಟ್ಟಿ ಆಣೆಕಟ್ಟು ೫೨೪ ಮೀ.ಗೆ ಹೆಚ್ಚಳಕ್ಕೆ ಮುಂದಾಗದ ಸರಕಾರದ ನಿರ್ಲಿಪ್ತ ಧೋರಣೆಯಿಂದ ಬೇಸತ್ತು ಅಕ್ಟೋಬರ್ ೦೯ ರಂದು ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ ರೈತರಿಗೆ ಸ್ವಯಂ ಕಾಮಗಾರಿ ಕಾರ್ಯಕೈಗೊಳ್ಳಲು…
ದೊಡ್ಡ ವಿಮಾನ, ರಾತ್ರಿ ಹೊತ್ತಿನ ಕಾರ್ಯಾಚರಣೆ ವ್ಯವಸ್ಥೆ ಕಲ್ಪಿಸಲು ಸಚಿವ ಸಂಪುಟ ಅನುಮೋದನೆ | ಸಚಿವ ಎಂ ಬಿ ಪಾಟೀಲ ಮಾಹಿತಿ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಏರ್ಬಸ್-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ʻಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ, ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ವಿಜಯಪುರ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿನ ಒಟ್ಟು ವೆಚ್ಚವು 618.75 ಕೋಟಿ ರೂ.ಗಳಾಗಲಿದೆ. ಎಟಿಆರ್ ಮಾದರಿಯ ನಾಗರಿಕ ವಿಮಾನ ಕಾರ್ಯಾಚರಣೆಗೆ ಸೀಮಿತವಾಗಿದ್ದ ವಿಮಾನ ನಿಲ್ದಾಣದ ಮೂಲ ವಿನ್ಯಾಸವನ್ನು ಏರ್ಬಸ್-320 ಮಾದರಿಯ ವಿಮಾನಗಳ ಕಾರ್ಯಾಚರಣೆಗೂ ಅನುಕೂಲವಾಗುವಂತೆ ಬದಲಿಸಿದ್ದರಿಂದ ವೆಚ್ಚ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿಎಲ್ಡಿಇ ಸಂಸ್ಥೆ ಸಮಕುಲಾಧಿಪತಿ ಡಾ.ವೈ.ಎಂ.ಜೈಯರಾಜ್ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ಪೂರ್ವಜರು ನಕ್ಷತ್ರಗಳ ಆಧಾರದ ಮೇಲೆ ಪಂಚಾಂಗವನ್ನು ನಿರ್ಮಾಣ ಮಾಡಿದ್ದಾರೆ. ಭಾರತದ ಪಂಚಾಂಗ ನಿರ್ಮಾತೃಗಳು ವಿಜ್ಞಾನಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಬಿಎಲ್ಡಿಇ ಸಂಸ್ಥೆ ಸಮಕುಲಾಧಿಪತಿ ಡಾ.ವೈ.ಎಂ.ಜೈಯರಾಜ್ ಹೇಳಿದರು.ನಗರದ ಬಿಎಲ್ಡಿಇ ಸಂಸ್ಥೆಯ ಎಸ್ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಸಂಶೋಧನೆ ಮತ್ತು ಅಭಿವೃದ್ಧಿ ಕೋಶ, ಸ್ನಾತಕೋತ್ತರ ಭೌತ ಶಾಸ್ತ್ರ ಅಧ್ಯಯನ ವಿಭಾಗ ಹಾಗೂ ಎನ್ಟಿಪಿಸಿ ಕೂಡಗಿ, ಕರ್ನಾಟಕ ಸೋಪ್ ಆ್ಯಂಡ್ ಡಿಟರ್ಜಂಟ್ ಲಿಮಿಟೆಡ್ ಬೆಂಗಳೂರು ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ” ಎನರ್ಜಿ, ಎನ್ವಿರಾನ್ಮೆಂಟ್ ಆ್ಯಂಡ್ ಮಟೇರಿಯಲ್ಸ್ ಸೈನ್ಸ್ ” ಎಂಬ ವಿಷಯದ ಕುರಿತು ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ಭಾಗವಹಿಸಿ ಮಾತನಾಡಿದ ಅವರು, ವಿಶ್ವ ವಿಸ್ಮಯಗಳನ್ನು ತನ್ನೋಳಗೆ ಇಟ್ಟುಕೊಂಡಿದೆ ಸಾವಿರಾರು ನಕ್ಷತ್ರಗಳು, ಸೂರ್ಯ ನಮ್ಮ ಪ್ಲಾನೆಟ್ ಸಿಸ್ಟಮ್ ಮುಂದೆ ನಾವುಗಳು ಅತಿ ಸಣ್ಣವರು. ಇಂದಿನ ಯುವ ಸಮುದಾಯ…
ಚಡಚಣ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣ | ಕರ್ನಾಟಕ–ಮಹಾರಾಷ್ಟ್ರ ಪೊಲೀಸರ ಜಂಟಿ ಕಾರ್ಯಾಚರಣೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಮಂಗಳವಾರ ಬ್ಯಾಂಕ್ ದರೋಡೆ ಮಾಡಿದ ಘಟನೆಯ ಹಿನ್ನಲೆಯಲ್ಲಿ ಪಟ್ಟಣದ ಉಮದಿ ಕ್ರಾಸ್ ಬಳಿ ಪೊಲೀಸರು ಎಲ್ಲ ವಾಹನಗಳನ್ನು ತಡೆದು ಪರಿಶೀಲನೆ ನಡೆಸಿ, ಗಡಿ ಭಾಗಗಳಲ್ಲಿ ಹೆಚ್ಚಿನ ಬಿಗಿ ಬಂದೋಬಸ್ತ ಮಾಡಿದ್ದಾರೆ.ದರೋಡೆಕೋರರು ಮಹಾರಾಷ್ಟ್ರ ರಾಜ್ಯದ ಹುಲಜಂತಿ ಗ್ರಾಮದಲ್ಲಿ ವಾಹನದಲ್ಲಿ ಸ್ವಲ್ಪ ಪ್ರಮಾಣದ ನಗದು ಮತ್ತು ಚಿನ್ನಾಭರಣಗಳನ್ನು ಬಿಟ್ಟು ಪರಾರಿಯಾಗಿದ್ದು, ವಾಹನದಲ್ಲಿ ಸ್ವಲ್ಪ ನಗದು ಮತ್ತು ಸ್ವಲ್ಪ ಚಿನ್ನಾಭರಣ ಸಿಕ್ಕಿದ್ದರ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ಕುರಿತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪೊಲೀಸರು ಇಂದು ಗುರುವಾರ ಕೂಡ ಹುಲಜಂತಿ ಗ್ರಾಮಕ್ಕೆ ತೆರಳಿ ಅಲ್ಲಿನ ಸ್ಥಳೀಯರನ್ನು ವಿಚಾರಿಸಿ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.ಸ್ಥಳೀಯ ಎಸ್ಬಿಐ ಬ್ಯಾಂಕಿಗೆ ಇನ್ನೂ ಕೂಡ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ ವ್ಯವಸ್ಥೆ ಮಾಡಲಾಗಿದೆ.
ನಾವು – ನಮ್ಮ ಮಕ್ಕಳು(ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಕುರಿತ ಲೇಖನ ಮಾಲಿಕೆ) ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಮನೆಯಲ್ಲಿ ಅಮ್ಮ ಅಡುಗೆ ಮಾಡುವಾಗ ಮಕ್ಕಳು ಕೂಡ ಹಾಗೆ ಮಾಡುವ ಕೆಲಸಗಳನ್ನು ತದೇಕ ಚಿತ್ತದಿಂದ ನೋಡುತ್ತಾರೆ. ತಾಯಿಯ ಮಾತುಗಳನ್ನು, ಹಾವಭಾವಗಳನ್ನು, ಅಡುಗೆ ಮಾಡುವ ಸಮಯದಲ್ಲಿ ಆಕೆಯ ವೈಖರಿಯನ್ನು ಮಕ್ಕಳು ಅನುಕರಿಸುತ್ತಾರೆ. ಪ್ರಾಯೋಗಿಕವಾಗಿ ಹೀಗೆ ವಸ್ತುಗಳನ್ನು ಮುಟ್ಟಿ ನೋಡಿ ಅನುಭವಿಸಿ ಕಲಿಯುವ ಶಿಕ್ಷಣ ಪದ್ಧತಿಯನ್ನು ನಮ್ಮಲ್ಲಿ ಅನುಷ್ಠಾನಗೊಳಿಸಬೇಕು. ಇದು ಮಕ್ಕಳ ಕಲಿಕಾ ಆಸಕ್ತಿಗೆ ನೆರವಾಗುತ್ತದೆ.ಸಾಧಾರಣವಾಗಿ ಶಿಕ್ಷಣದಲ್ಲಿ ನಾವು ‘ನೋಡಿ ಕಲಿ ಮಾಡಿ ಕಲಿ’ ಎಂಬ ಮಾತುಗಳನ್ನು ಕೇಳಿದ್ದೇವೆ, ಆದರೆ ಸರ್ವೋತ್ಕೃಷ್ಟವಾದ ಶಿಕ್ಷಣ ಪದ್ಧತಿ ಎಂದರೆ ಪರಿಕಲ್ಪನೆ ಆಧಾರಿತ ಶಿಕ್ಷಣ.ಪ್ರಾತ್ಯಕ್ಷಿಕೆಗಳ ಮೂಲಕ ಸ್ವತಹ ಅರಿತು ಕಲಿಯುವ ಈ ಶಿಕ್ಷಣ ಪದ್ಧತಿಯ ಮೂಲಕ ಮಕ್ಕಳನ್ನು ಸರ್ವೋತ್ಕೃಷ್ಟ ವಿದ್ಯಾರ್ಥಿಯನ್ನಾಗಿಸಬಹುದು.ಒಂದು ಭಾಷೆಯನ್ನು ಕಲಿಯಬೇಕಾದರೆ ನಾವು ವರ್ಣಮಾಲೆಯಲ್ಲಿನ ಅಕ್ಷರಗಳನ್ನು ಅವುಗಳ ಉಚ್ಚಾರಗಳನ್ನು ಕಲಿಯುತ್ತೇವೆ. ಸ್ಲೇಟುಗಳಲ್ಲಿ ಪುಸ್ತಕಗಳಲ್ಲಿ ಮತ್ತೆ ಮತ್ತೆ ಬರೆದು ಅಕ್ಷರಗಳನ್ನು ಕಲಿಯುತ್ತೇವೆ. ಪ್ರತಿಯೊಂದು…
ಲೇಖನ- ಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ವಿಕ್ರಮ್ ಅಂಬಾಲಾಲ್ ಸಾರಾಭಾಯ್ (ಆಗಸ್ಟ್ ೧೨, ೧೯೧೯ – ಡಿಸೆಂಬರ್ ೩೦, ೧೯೭೧) ಒಬ್ಬ ಭಾರತೀಯ ಭೌತಶಾಸ್ತ್ರಜ್ಞ ಮತ್ತು ಖಗೋಳಶಾಸ್ತ್ರಜ್ಞರಾಗಿದ್ದರು , ಅವರು ಬಾಹ್ಯಾಕಾಶ ಸಂಶೋಧನೆಯನ್ನು ಪ್ರಾರಂಭಿಸಿದರು ಮತ್ತು ಭಾರತದಲ್ಲಿ ಪರಮಾಣು ಶಕ್ತಿಯನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡಿದರು . ಸಾಮಾನ್ಯವಾಗಿ “ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ” ಎಂದು ಪರಿಗಣಿಸಲ್ಪಡುವ ಸಾರಾಭಾಯ್ ಅವರನ್ನು ೧೯೬೬ ರಲ್ಲಿ ಪದ್ಮಭೂಷಣ ಮತ್ತು ೧೯೭೨ ರಲ್ಲಿ ಪದ್ಮವಿಭೂಷಣ (ಮರಣೋತ್ತರ) ನೀಡಿ ಗೌರವಿಸಲಾಯಿತು .ಆರಂಭಿಕ ಜೀವನ ಮತ್ತು ಶಿಕ್ಷಣವಿಕ್ರಮ್ ಸಾರಾಭಾಯ್ 1919 ರ ಆಗಸ್ಟ್ 12 ರಂದು ಭಾರತದ ಅಹಮದಾಬಾದ್ನಲ್ಲಿ ಗುಜರಾತಿ ಶ್ವೇತಾಂಬರ ಶ್ರೀಮಾಲಿ ಜೈನ ಕುಟುಂಬದಲ್ಲಿ ಜನಿಸಿದರು. ಅವರ ತಂದೆ ಅಂಬಾಲಾಲ್ ಸಾರಾಭಾಯ್ , ಭಾರತೀಯ ಸ್ವಾತಂತ್ರ್ಯ ಚಳವಳಿಗೆ ಬದ್ಧರಾಗಿದ್ದ ಪ್ರಮುಖ ಕೈಗಾರಿಕೋದ್ಯಮಿ.ವೃತ್ತಿಪರ ಜೀವನಭಾರತದಲ್ಲಿ ಬಾಹ್ಯಾಕಾಶ ವಿಜ್ಞಾನದ ತೊಟ್ಟಿಲು ಎಂದು ಕರೆಯಲ್ಪಡುವ ಭೌತಿಕ ಸಂಶೋಧನಾ ಪ್ರಯೋಗಾಲಯವನ್ನು (PRL) 1947 ರಲ್ಲಿ ವಿಕ್ರಮ್ ಸಾರಾಭಾಯ್ ಸ್ಥಾಪಿಸಿದರು. [ 7 ]…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಲ್ಲ ನಿಷೇಧಾತ್ಮಕ ಮನೋಭಾವನೆಗೆ ದಿವ್ಯ ಔಷಧಿಯೇ ನಮ್ಮಲ್ಲಿರುವ ಆತ್ಮವಿಶ್ವಾಸ. ವಿದ್ಯಾರ್ಥಿಗಳು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ಮಾಡುವ ಯಾವುದೇ ಕೆಲಸ-ಕಾರ್ಯದ ಬಗ್ಗೆ ಕೀಳರಿಮೆ, ನನಗೆ ಸಾಧ್ಯವಿಲ್ಲ, ನನ್ನಿಂದ ಅಸಾಧ್ಯ, ನಕಾರಾತ್ಮಕ ಭಾವನೆಗಳನ್ನು ಬಿಟ್ಟು ಸಾಧಿಸಿಯೇ ತೀರುತ್ತೇನೆಂಬ ದೃಢ ಸಂಕಲ್ಪ ಮಾಡಬೇಕು. ಸಾಧಕರು ನಮ್ಮಂತೆ ಸಾಮಾನ್ಯರಾಗಿ ಅಸಾಮಾನ್ಯವಾದ ಸಾಧನೆಗೈದಿದ್ದಾರೆ ಎಂದು ರಮೇಶ ಬಲ್ಲಿದ ಅಭಿಪ್ರಾಯಪಟ್ಟರು.ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ೨೦೨೫-೨೬ ನೇಯ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರೆಡಕ್ರಾಸ್, ಎನ್.ಎಸ್.ಎಸ್ ಮತ್ತು ವಿವಿಧ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ದೀಪ ಬೆಳಗಿಸುವದರ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.ವಿದ್ಯಾರ್ಥಿಗಳು ಶಿಕ್ಷಣವನ್ನು ಕೇವಲ ಅಂಕ, ಪದವಿ, ಉದ್ಯೋಗ ಅಥವಾ ನೌಕರಿಗಾಗಿ ಪಡೆಯದೇ ಪಡೆದ ಜ್ಞಾನದಿಂದ ತಂದೆ-ತಾಯಿ, ಸಮಾಜ, ಸಮುದಾಯ ಮತ್ತು ರಾಷ್ಟ್ರಕ್ಕೆ ಏನನ್ನಾದರೂ ಕೊಡುಗೆ ನೀಡಿ ಋಣ ತೀರಿಸಬೇಕು. ವಿದ್ಯೆಯ ಜತೆಗೆ ಜೀವನದಲ್ಲಿ ಸಂಸ್ಕೃತಿ-ಸಂಸ್ಕಾರ, ಮೌಲ್ವಿಕ, ನೈತಿಕ, ವೈಚಾರಿಕ ಮತ್ತು ಜೀವನಾದರ್ಶಗಳನ್ನು ಅಳವಡಿಸಿಕೊಂಡು ಭವ್ಯ ಭಾರತದ…
