Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಕೋರವಾರ-ಕೊಕಟನೂರ ಗ್ರಾಮಗಳ ನಡುವಿನ ಸುಮಾರು ೮ ಕಿ.ಮೀ ರಸ್ತೆ ತಗ್ಗು ದಿನ್ನೆಗಳಿಂದ ಕೂಡಿದ್ದು ಪ್ರಯಾಣಿಸಲು ಬಾರದಂತಾಗಿದೆ.ಗ್ರಾಮದ ಮುಖ್ಯ ಸಂಪರ್ಕ ರಸ್ತೆಯ ಜೊತೆಗೆ ಐತಿಹಾಸಿಕ ಶ್ರೀಕೋರವಾರೇಶ(ಹನುಮಾನ) ದೇವಸ್ಥಾನಕ್ಕೆ ತೆರಳುವ ರಸ್ತೆ ಹಾಗೂ ದ್ವಾರಬಾಗಿಲು ಬಳಿ ಇರುವ ಸೇತುವೆ ಸಹ ಬಲಿಗಾಗಿ ಕಾದು ಕುಳಿತಂತೆ ಆಗಿದ್ದು, ನಿತ್ಯ ರಸ್ತೆಯಲ್ಲಿ ಸಂಚಾರ ಮಾಡುವ ಸಾರ್ವಜನಿಕರ ದ್ವಿಚಕ್ರ ವಾಹನ ಸವಾರರು ಒಂದಿಲ್ಲೊಂದು ಗುಂಡಿಯಲ್ಲಿ ಬೀಳುವಂತಾಗಿದೆ.ತಗ್ಗು ಗುಂಡಿಗಳಿಂದ ಕೂಡಿದ ರಸ್ತೆಯ ಸಮಸ್ಯೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರು ಸಹ ಯಾವುದೇ ರೀತಿ ಸ್ಪಂದಿಸಿರುವುದಿಲ್ಲ. ರಸ್ತೆ ಸಮಸ್ಯೆಯ ಕುರಿತು ಮುಂದಿನ ವಾರದೊಳಗಾಗಿ ಪಿಡಿಓ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ರಸ್ತೆ ತಡೆ ಮಾಡಿ ಉಗ್ರ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ವಕ್ತಾರ ಚನ್ನಪ್ಪಗೌಡ ಬಿರಾದಾರ, ಬುಡ್ಡೇಸಾಬ ಅರಬ, ಜುಬೇರ ಕೆರೂಟಗಿ, ರಫೀಕ್ ವಡಗೇರಿ, ಯಾಸೀನ್ ಕೆರೂಟಗಿ, ಶಾಹಿದ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೊಂದಣಿಯಾದ ಫಲಾನುಭವಿಗಳಿಗೆ ಮೇಷನ್ ಸುರಕ್ಷಾ ಕಿಟ್, ಎಲೆಕ್ಟಿçಷಿಯನ್ ಸುರಕ್ಷಾ ಕಿಟ್, ಕಾರಪೆಂಟರ್ ಸುರಕ್ಷಾ ಕಿಟ್, ವೆಲ್ಡಿಂಗ್ ಸುರಕ್ಷಾ ಕಿಟ್, ಪ್ಲಂಬರ್ ಸುರಕ್ಷಾ ಕಿಟ್ & ಪೇಂಟರ್ ಸುರಕ್ಷಾ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.ಫಲಾನುಭವಿಗಳು ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ ಕಾರ್ಡ ಮತ್ತು ಫಲಾನುಭವಿಯ ಭಾವಚಿತ್ರ ದಾಖಲೆಗಳೊಂದಿಗೆ ದಿನಾಂಕ : ೩೦-೦೯-೨೦೨೫ರೊಳಗಾಗಿ ಕಾರ್ಮಿಕ ನಿರೀಕ್ಷಕರ ಕಚೇರಿ, ೧ನೇ ವೃತ್ತ ಮತ್ತು ೨ನೇ ವೃತ್ತ, ಕಲ್ಯಾಣ ಸಮುದಾಯ ಭವನ ಸಿಂದಗಿ ನಾಕಾ ಅಲ್ಲಾಪೂರ ಓಣಿ, ವಿಜಯಪುರ ಕಚೇರಿಗೆ ಅರ್ಜಿ ಸಲ್ಲಿಸಬೇಕು.ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇಲೆ ಕಾರ್ಮಿಕ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ೨೦೨೫-೨೬ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಜೈನ್ ಬಸದಿ-ಸಿಖ್ ಗುರುದ್ವಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜೈನ್ ಮುಖ್ಯ ಅರ್ಚಕರಿಗೆ ಮತ್ತು ಸಿಖ್ ಮುಖ್ಯ ಗ್ರಂಥಿಗಳು ಹಾಗೂ ಸಹಾಯಕ ಅರ್ಚಕರು-ಗ್ರಂಥಿಗಳಿಗೆ ಮಾಸಿಕ ಗೌರವಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹರು ಅರ್ಜಿ ನಮೂನೆಯನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಜಯಪುರ ಕಚೇರಿ ಪಡೆದು, ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : ೩೦-೦೯-೨೦೨೫ರೊಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ, ಅಥವಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಾದ ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ಇಂಡಿಗೆ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಅಧಿಕಾರೇತರ ಅಭ್ಯರ್ಥಿಗಳನ್ನು ಹಾಗೂ ಎಂಎಸ್‌ಡಬ್ಲೂ- ಕಾನೂನು ಪದವಿ ಅಥವಾ ಇತರೆ ಯಾವುದೇ ಪದವಿ ವಿದ್ಯಾರ್ಥಿ ಅಥವಾ ಪದವೀಧರರನ್ನು ಗುರುತಿಸಿ ಅವರನ್ನು ಅರೆಕಾಲಿಕ ಸ್ವಯಂ ಸೇವಕರನ್ನಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ದಿನಾಂಕ : ೦೬-೧೦-೨೦೨೫ರೊಳಗಾಗಿ ವಿಜಯಪುರ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್https://districts.ecourts.gov ನಲ್ಲಿ ಲಭ್ಯವಿರುವ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ಜಿಲ್ಲಾ ನ್ಯಾಯಾಲಯ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್.ಹಾಗರಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಸುಳ್ಳು ಭರವಸೆಗಳನ್ನೇ ಯುವಕರಿಗೆ ನೀಡಿ, ಅವರನ್ನು ಭ್ರಮೆಯಲ್ಲಿಯೇ ಇಟ್ಟು, ಮತ ಪಡೆಯುತ್ತಿರುವ ಕೇಂದ್ರ ಬಿಜೆಪಿ ಸರಕಾರ ಯುವಕರಿಗೆ ಅನ್ಯಾಯ ಮಾಡುತ್ತಿದೆ ಎಂದು ತೇರದಾಳ ಮತಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಪೂಜಾರಿ ಹೇಳಿದರು.ಗ್ರಾಮದ ಬಸ್ ನಿಲ್ದಾಣ ಬಳಿಯ ಬಸವೇಶ್ವರ ವೃತ್ತದಲ್ಲಿ ಪ್ರಧಾನಿ ನರೆಂದ್ರ ಮೋದಿಯವರ ಜನ್ಮದಿನಾಚರಣೆಯ ನಿಮಿತ್ತ ಪಕೋಡಾ (ಭಜಿ) ತಯಾರಿಸಿ ನಿರುದ್ಯೋಗ ದಿನ ಆಚರಣೆ ಮಾಡುವ ಮೂಲಕ ನಡೆಸಿದ ಪ್ರತಿಭಟಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಠಿಸುವ ಭರವಸೆ ನೀಡಿದ ಪ್ರಧಾನಿಯವರು ಇದುವರೆಗೆ ನೀಡಿದ ಯಾವುದೇ ಭರವಸೆ ಈಡೆರಿಸದೆ ದೇಶದ ಜನರಿಗೆ ಮೋಸ ಮಾಡಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಪ್ರಭು ದೊಡವಾಡ, ನಿಂಗಪ್ಪ ದೊಡಮನಿ, ಅಲ್ಲಪ್ಪ ಮುಗಳಖೋಡ, ದಾದೇಸಾಬ ಸರಕಾವಸ, ಯಲ್ಲಪ್ಪ ಭಜಂತ್ರಿ, ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕ ಸಲೀಮ ಸರಕಾವಸ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಪ್ರೊ. ಶ್ರೀನಿವಾಸ ಅವರಿಗೆ ‘ಫಿಸಿಕಲ್ ಎಜುಕೇಟರ್ ಅವಾರ್ಡ್–೨೦೨೫’ ಪುರಸ್ಕಾರ ಲಭಿಸಿದೆ.ಪುರಸ್ಕಾರ ಪಡೆದಿರುವ ಪ್ರೊ. ಶ್ರೀನಿವಾಸ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.ಈ ಪ್ರಶಸ್ತಿಯನ್ನು ಕ್ಯಾಪ್ಟನ್ ಎಂ.ಪಿ. ಸಿಂಗ್ ಸ್ಪೋರ್ಟ್ಸ್ ಟ್ರಸ್ಟ್ (ರಿ) ವತಿಯಿಂದ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಕ್ಯಾಪ್ಟನ್ ಮಂಜೀತ್ ಪಾಳ್ ಸಿಂಗ್, ಅಧ್ಯಕ್ಷ ಸುಖವಿಂದರ್ ಸಿಂಗ್ ಹಾಗೂ ಪ್ರಧಾನ ಕಾರ್ಯದರ್ಶಿ ಸುಖವಂತ್ ಸಿಂಗ್ ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆಯ ಗೊಡೆ ಕುಸಿದು 4 ವರ್ಷದ ಮಗುವಿನ ಮೇಲೆ ಬಿದ್ದ ಪರಿಣಾಮ ಮಗು ಸಾವುನಪ್ಪಿರುವ ಘಟನೆ ತಾಲ್ಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ‌ ರಾಜು ಪತ್ತಾರ್ ಎಂಬುವರ ಮಗ ಸಮರ್ಥ ರಾಜು ಪತ್ತಾರ ವಯಸ್ಸು (೪) ಮೃತ ದುರ್ದೈವಿ.ಘಟನೆ ವಿವರ: ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಣ್ಣಿನ ಗೋಡೆ ಕುಸಿದು ಬಿದ್ದ ಪರಿಣಾಮ ದುರಂತ ಸಂಭವಿಸಿದೆ.ಗುರುವಾರ ಮಧಾಹ್ನ ಮಗು ತನ್ನ‌ ಮನೆಯ ಎದುರು ಆಟ ಆಡುತ್ತಿರುವಾಗ ಎದುರು ಮನೆಯ ಗೊಡೆ ಕುಸಿದು ಮಗುವಿನ ‌ಮೇಲೆ ಬಿದ್ದಿದೆ. ವಿಷಯ ತಿಳಿದ ತದನಂತರ ಗ್ರಾಮಸ್ಥರು ಆ ಮಗುವಿನ ಮೇಲೆ ಕುಸಿದ ಗೊಡೆಯ ಮಣ್ಣನ್ನು ತೆಗೆದು ಮಗುವಿನ ರಕ್ಷಣೆಗೆ ಪ್ರಯತ್ನ ಪಟ್ಟಿದ್ದಾರೆ. ಆದರೆ ಮಗುವಿನ ಉಸಿರಾಟ ತೊಂದರೆ ಇರುವುದರಿಂದ ಚಿಕಿತ್ಸೆಗಾಗಿ ವಿಜಯಪುರ ನಗರಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ ಎಂದು ಕುಟುಂಬದ ಪ್ರಾಥಮಿಕ ಮಾಹಿತಿಯಾಗಿದೆ.ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಗ್ರಾಮ ಆಡಳಿತ…

Read More

“ಸ್ವಸ್ತ ನಾರಿ ಸಶಕ್ತ ಪರಿವಾರ” ಅಭಿಯಾನಕ್ಕೆ ಚಾಲನೆ ನೀಡಿದ ಸಂಸದ ರಮೇಶ ಜಿಗಜಿಣಗಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಅನೇಕ ಜನಪರ ಅಭಿವೃದ್ಧಿ ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿವೆ. ಇಂದು ದೇಶ ಹಾಗೂ ರಾಜ್ಯಾದ್ಯಂತ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನವನ್ನು ೦೨-೧೦-೨೦೨೫ರ ವರೆಗೆ ಹಮ್ಮಿಕೊಳ್ಳಲಾಗಿದ್ದು. ಸಮುದಾಯದ ಅಭಿವೃದ್ಧಿಯ ಸಂಕಲ್ಪವನ್ನು ಹೊಂದಲಾಗಿರುತ್ತದೆ. ಮಹಿಳೆಯರು ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ “ಸ್ವಸ್ತ ನಾರಿ ಸಶಕ್ತ ಪರಿವಾರ “ಅಭಿಯಾನಕ್ಕೆ ಮಹಾನಗರ ಪಾಲಿಕೆಯ ಮಹಾಪೌರ ಎಮ್.ಎಸ್. ಕರಡಿಯವರೊಂದಿಗೆ ಜಂಟಿಯಾಗಿ ಚಾಲನೆ ನೀಡಿ ಅವರು ಮಾತನಾಡಿದರು.ಮಹಾನಗರ ಪಾಲಿಕೆಯ ಮಹಾಪೌರ ಮಡಿವಾಳಪ್ಪ ಕರಡಿ ಮಾತನಾಡಿ, ಸಮಾಜದ ಏಳಿಗೆಗಾಗಿ ಮಹಿಳೆಯರು ಸ್ವಾವಲಂಬಿ ಬದಕನ್ನು ಕಟ್ಟಿಕೊಳ್ಳಲು ಅವರು ಮಾನಸಿಕ, ದೈಹಿಕ, ಕೌಟಂಬಿಕ ಸಮಾಜಿಕವಾಗಿ ಆರೋಗ್ಯವಂತರಾಗಿ ಇರಲು ಈ ಅಭಿಯಾನದಲ್ಲಿ ನಡೆಯುವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಬ್ಲಾಕ್ ಕಾಂಗ್ರೆಸ್ ಪ.ಜಾ. ಘಟಕ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಕೊಪ್ಪಳದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಆರ್. ಪಾಟೀಲ (ಯತ್ನಾಳ) ರವರು ದಲಿತ ಮಹಿಳೆ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ.ಜಾ. ಘಟಕದ ಅಧ್ಯಕ್ಷ ರಮೇಶ ಗುಬ್ಬೇವಾಡ ಅವರು, ಮುಸ್ಲಿಂ ಹೆಣ್ಣುಮಕ್ಕಳು ಅಷ್ಟೇ ಅಲ್ಲ, ದಲಿತ ಹೆಣ್ಣುಮಕ್ಕಳು ಕೂಡ ಚಾಮುಂಡೇಶ್ವರಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ ಎನ್ನುವುದರ ಮುಖಾಂತರ ಸಾಸಕ ಯತ್ನಾಳ ದಲಿತ ಮಹಿಳೆಯನ್ನು ಅವಮಾನಿಸಿದ್ದಾರೆ. ಅಲ್ಲದೆ ಹಲವಾರು ಕಾರ್ಯಕ್ರಮಗಳಲ್ಲಿ ಅವರು ಮಾತನಾಡುವಾಗ ಹಿಂದುಗಳು ನಾವೆಲ್ಲರೂ ಒಂದು, ದಲಿತರು ಮತ್ತು ಹಿಂದುಳಿದವರು ಎಲ್ಲ ಜಾತಿ ಸಮುದಾಯದವರನ್ನು ಒಂದು ಎಂದು ಹೇಳುವ ತಾವು ದಲಿತರನ್ನು ಅವಮಾನಿಸಿ ಮಾತನಾಡಿರುವದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.ಮಹಾನಗರ ಪಾಲಿಕೆ ಸದಸ್ಯರಾದ ಆರತಿ ಶಹಾಪೂರ ಮಾತನಾಡಿ, ಎಲ್ಲ ಹೆಣ್ಣುಮಕ್ಕಳಿಗೆ ಸಮಾನವಾದ ಹಕ್ಕನ್ನು ನೀಡಿರುವ ಬಾಬಾಸಾಹೇಬ ಅಂಬೇಡ್ಕರ ಅವರ ಸಂವಿಧಾನವನ್ನು…

Read More

ಬೆಂಗಳೂರಿನ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ತೊರೆಯಲು ಸ್ವತಂತ್ರ | ಹೋಗೋರನ್ನ ತಡೆಯಲ್ಲ | ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಬೆಂಗಳೂರು: ಮಹಾನಗರದ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ತೊರೆಯಲು ಸ್ವತಂತ್ರವಾಗಿವೆ. ಆದರೆ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಸಂದರ್ಶನದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ‘ನಗರದ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್ ಗಡುವು ನೀಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.ಇದೇ ವೇಳೆ ಉದ್ಯಮಿಗಳ ಬೆಂಗಳೂರು ತೊರೆಯುವ ಟ್ವೀಟ್ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ‘ಬೆಂಗಳೂರಿನ ಬಗ್ಗೆ ತೃಪ್ತಿ ಇಲ್ಲವೆಂದು ಹೋಗೋರನ್ನ ತಡೆಯಲ್ಲ. ಆದರೆ, ಸರ್ಕಾರಕ್ಕೆ ಬೆದರಿಸಲು, ಬ್ಯಾಕ್‌ಮೇಲ್‌ ಮಾಡೋಕೆ ಬರಬೇಡಿ. ಕಂಪನಿಗಳು ತಮ್ಮ ಸ್ಥಳವನ್ನು ಬದಲಾಯಿಸುವ ನಿರ್ಧಾರವು ವ್ಯಾಪಾರ ಸಮಸ್ಯೆಗಳ ಕಾರಣದಿಂದಾಗಿರಬಹುದು.ಬೆಂಗಳೂರು ನೀಡುವ ಸೌಲಭ್ಯಗಳು ಮತ್ತು ಪ್ರತಿಭೆಗಳಿಂದ ತೃಪ್ತರಾಗದಿದ್ದರೆ ಯಾರಾದರೂ ಸ್ಥಳಾಂತರಗೊಳ್ಳಲು ಸ್ವತಂತ್ರರು. ಆದರೆ, ಅವರು ಸರ್ಕಾರವನ್ನು ಬೆದರಿಸಲು…

Read More