Subscribe to Updates
Get the latest creative news from FooBar about art, design and business.
Author: editor.udayarashmi@gmail.com
ರಸ್ತೆ ಅಗಲೀಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸರ್ಕಾರ ರಸ್ತೆ ಅಗಲೀಕರಣ ಮಾಡಲು ಕೆಲವು ನಿಯಮಾವಳಿಗಳನ್ನು ರೂಪಿಸಿದೆ. ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿನ ಜಿಲ್ಲಾ ಮುಖ್ಯ ರಸ್ತೆಯ ಅಗಲೀಕರಣ ಮಾಡುವ ಈ ನಿಯಮಾವಳಿಗಳನ್ನು ಗಾಳಿ ತೂರಿ ರಸ್ತೆ ಅಗಲೀಕರಣ ಮಾಡುವ ಮೂಲಕ 142 ಕುಟುಂಬಗಳು ನಿರಾಶ್ರಿತರಾಗುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಅನ್ಯಾಯವಾದ ಜನರಿಗೆ ನ್ಯಾಯ ಸಿಗುವವರೆಗೂ ಈ ಹೋರಾಟಕ್ಕೆ ಸದಾ ನನ್ನಬೆಂಬಲವಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.ಪಟ್ಟಣದ ಮಿನಿವಿಧಾನಸೌಧದ ಆವರಣಗೋಡೆಗೆ ಹೊಂದಿಕೊಂಡಂತೆ ಹಾಕಲಾಗಿರುವ ಶಾಮಿಯಾನದಲ್ಲಿ ಕಳೆದ ಮೂರು ದಿನಗಳಿಂದ ತಾಲೂಕಿನ ಕುದರಿಸಾಲವಾಡಗಿ ಗ್ರಾಮದ ರಸ್ತೆ ಅಗಲೀಕರಣ ನೆಪದಲ್ಲಿ ಸ್ವಂತ ಮನೆಗಳನ್ನು ದ್ವಂಸಮಾಡಿ 142 ಕುಟುಂಬಗಳನ್ನು ಬೀದಿಗೆ ತಳ್ಳಿದ ಕ್ರಮವನ್ನು ಖಂಡಿಸಿ ಹಾಗೂ ನಿರಾಶ್ರಿತರಿಗೆ ಸೂಕ್ತ ಪರಿಹಾರ ನೀಡುವದು, ತಪಿಸ್ಥತ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು,…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿದ್ಯಾರ್ಥಿಗಳ ಸಾಧನೆಗೆ ಅಡ್ಡಿಯಾಗುವ ಮೊಬೈಲ್ ದುರ್ಬಳಕೆಯಿಂದ ದೂರವಿದ್ದುಕೊಂಡು ಆಧುನಿಕ ಜಗತ್ತಿನಲ್ಲಿ ಸವಾಲುಗಳನ್ನು ಮೆಟ್ಟಿ ನಿಲ್ಲಲು ಸಕಾರಾತ್ಮಕ ಭಾವನೆಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವಂತಾಗಬೇಕೆಂದು ಕಂದಾಯ ವಿಭಾಗಾಧಿಕಾರಿ ಗುರುನಾಥ ದಡ್ಡೆ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್. ಎಸ್. ಎಸ್,ಐ ಕ್ಯೂ ಎ ಸಿ ಹಾಗೂ ವಿವಿಧ ಘಟಕಗಳ ಉದ್ಘಾಟನೆ ಸಮಾರಂಭ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣದಿಂದ ವೈಯಕ್ತಿಕ ಹಾಗೂ ಸಾಮಾಜಿಕ ಬದಲಾವಣೆ ಸಾಧ್ಯವಾಗುತ್ತದೆ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಚ ಪಟ್ಟಣಶೆಟ್ಟಿ ಮಾತನಾಡಿ, ಈ ಕಾಲೇಜಿನಲ್ಲಿ ಉತ್ತಮ ಶಿಕ್ಷಣ ದೊರಕುತ್ತಿದೆ. ಬಡ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಈ ಕಾಲೇಜಿಗೆ, ನಿಮ್ಮ ತಂದೆ ತಾಯಂದಿರಿಗೆ ಕೀರ್ತಿ ತರುವ ಕಾರ್ಯ ವಿದ್ಯಾರ್ಥಿಗಳು ಮಾಡುವಂತಾಗಬೇಕು. ಕಾಲೇಜಿನ ಅಭಿವೃದ್ಧಿಗೆ ನಾನು ಸದಾ ಸಿದ್ಧನಾಗಿದ್ದೇನೆ. ಎಲ್ಲರೂ ಕಾಲೇಜಿನ ಪ್ರಗತಿಗೆ ಶ್ರಮಿಸಬೇಕು ಎಂದು ಹೇಳಿದರು.ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ವಿದ್ಯಾರ್ಥಿಗಳು…
ಉದಯರಶ್ಮಿ ದಿನಪತ್ರಿಕೆ ವರದಿ: ಬಸವರಾಜ ನಂದಿಹಾಳಬಸವನಬಾಗೇವಾಡಿ: ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲು ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರು ಭರದ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಪಟ್ಟಣದಲ್ಲಿ ಕೆಲ ದಿನಗಳಿಂದ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಹೊಸ ಬಟ್ಟೆ, ಸೀರೆ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಟ್ಟೆ ಅಂಗಡಿಗಳಲ್ಲಿ ಕಂಡು ಬರುತ್ತಿದ್ದಾರೆ. ದೀಪಾವಳಿ ಹಬ್ಬವು ನಾಳೆಯಿಂದ ಆರಂಭವಾಗುತ್ತಿರುವದರಿಂದಾಗಿ ಶನಿವಾರ ಬಟ್ಟೆ ಅಂಗಡಿ ಸೇರಿದಂತೆ ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ವಿವಿಧೆಡೆಗಳಿಂದ ಜನರು ಆಗಮಿಸಿದ್ದು ಕಂಡು ಬಂತು.ದೀಪಾವಳಿ ಹಬ್ಬಕ್ಕೆ ಬೇಕಾದ ಪೂಜಾ ಸಾಮಗ್ರಿಗಳು, ಆಕಾಶ ಬುಟ್ಟಿ, ಹೊಸ ಬಟ್ಟೆ ಸೇರಿದಂತೆ ಇನ್ನೀತರ ವಸ್ತುಗಳನ್ನು ಖರೀದಿಸುವಲ್ಲಿ ಜನರು ತುಂಬಾ ಬ್ಯುಸಿಯಾಗಿದ್ದಾರೆ. ದೀಪಾವಳಿ ಹಬ್ಬವನ್ನು ಎಲ್ಲ ಜನರು ಆಚರಿಸಲು ಸಿದ್ದಗೊಳ್ಳುತ್ತಿದ್ದಾರೆ.ವರ್ಷಕ್ಕೊಮ್ಮೆ ಬರುವ ಈ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲು ಕಳೆದ ಹಲವು ದಿನಗಳಿಂದಲೇ ಜನರು ತಮ್ಮ ಮನೆ, ಅಂಗಡಿ-ಮುಂಗಟ್ಟುಗಳ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ ಕೊಂಡಿದ್ದರು. ಇದೀಗ ಸಂಭ್ರಮದ ದೀಪಾವಳಿ ಹಬ್ಬಕ್ಕೆ ಕ್ಷಣ ಗಣನೆ ಆರಂಭವಾಗಿದೆ.ಭಾನುವಾರ ನೀರು ತುಂಬುವ ಹಬ್ಬದಿಂದ ಆರಂಭವಾಗುವ ದೀಪಾವಳಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ೫೦ ನೇ ವರ್ಷದ ಸುವರ್ಣ ಮಹೋತ್ಸವ ಸಮಾರಂಭದ ಅಂಗವಾಗಿ ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ-ಸಂಸ್ಥೆಗಳನ್ನು ಗುರುತಿಸುವುದಕ್ಕಾಗಿ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ಪ್ರಶಸ್ತಿಯನ್ನು ವ್ಯಕ್ತಿ ಮತ್ತು ಸಂಸ್ಥೆಗಳ (ಸರ್ಕಾರಿ ವಲಯ, ಸರ್ಕಾರೇತರ ಸಂಸ್ಥೆ, ಕಂಪನಿ ಟ್ರಸ್ಟುಗಳು ಇತರೆ) ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆ ಕ್ಷೇತ್ರಗಳಲ್ಲಿನ ಗಣನೀಯ ಸೇವೆಗಾಗಿ ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ ಮೂರು ವ್ಯಕ್ತಿಗಳಿಗೆ-ಸಂಸ್ಥೆಗಳಿಗೆ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಪರಿಸರ ಸಂರಕ್ಷಣೆ-ಪರಿಸರ ವ್ಯವಸ್ಥಾಪನೆ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ, ಆರಂಭಶೀಲತೆ, ಯೋಜನೆ, ಕಾರ್ಯಕ್ರಮಗಳ ಮೂಲಕ ನೀಡಿರುವ ಕೊಡುಗೆಯ ಮೌಲ್ಯನಿರ್ಣಯ ಮಾಡಲಾಗುವುದು.ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಸರ್ಕಾರೇತರ ಸಂಸ್ಥೆಗಳಿದ್ದಲ್ಲಿ ನೊಂದಣಿಯಾಗಿ ಕನಿಷ್ಠ ಮೂರು ವರ್ಷಗಳಾಗಿರಬೇಕು. ಈ ಪ್ರಶಸ್ತಿಗಾಗಿ ಪರಿಗಣಿಸಲಾಗುವ ವ್ಯಕ್ತಿ, ಸಂಸ್ಥೆಯ ಆರಂಭಶೀಲತೆ, ಕಾರ್ಯಕ್ರಮಗಳು, ಸುಸ್ಥಿರ ಯೋಜನೆಗಳು, ಕೊಡುಗೆಗಳ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಕ್ಟೋಬರ್ ೨೧ ರಂದು ಬೆಳಿಗ್ಗೆ ೮ ಗಂಟೆಗೆ ವಿಜಯಪುರ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ವಿಜಯಪುರ ಜಿಲ್ಲಾ ಪೊಲೀಸ್ ಕವಾಯತ ಮೈದಾನದಲ್ಲಿ ಆಚರಿಸಲಾಗುವುದು.ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಹರೀಶ ಎ.ಅವರು ಆಗಮಿಸುವರು. ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಮತ್ತು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ವಿಶೇಷ ಅತಿಥಿಗಳಾಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮನಗೌಡ ಹಟ್ಟಿ ಉಪಸ್ಥಿತರಿರುವರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ವೀರ ಪರಿವಾರ ಸಹಾಯತಾ ಯೋಜನೆ-೨೦೨೫ರ ಅಡಿಯಲ್ಲಿ ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರಿಗೆ ಕಾನೂನು ಸಲಹೆಗಳನ್ನು ನೀಡಲು ಉಚಿತ ಕಾನೂನು ಸೇವೆಗಳ ಕ್ಲಿನಿಕ್ನ್ನು ಪ್ರಾರಂಭಿಸಲಾಗಿದೆ.ಪ್ರತಿ ಗುರುವಾರ ಬೆಳಿಗ್ಗೆ ೧೧ ಗಂಟೆಯಿಂದ ಸಂಜೆ ೫ಗಂಟೆಯವರೆಗೆ ವಕೀಲರಾದ ಜಾವೇದ್ ಎಸ್ ಗುಡಗಂಟಿ ಅವರು ಕಾನೂನು ಸೇವೆಗಳ ಕುರಿತು ಜಿಲ್ಲಾ ಸೈನಿಕ ಕಾರ್ಯಲಯದಲ್ಲಿ ಸಲಹೆ ನೀಡಲಿದ್ದು, ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದ ಕ್ರೀಡಾ ಇಲಾಖೆಯ ವತಿಯಿಂದ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಕ್ರೀಡಾ ಸಾಧಕರಿಂದ ಅರ್ಜುನ ಪ್ರಶಸ್ತಿ, ರಾಷ್ಟೀಯ ಕ್ರೀಡಾ ಪೋಷಕ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ ಹಾಗೂ ಧ್ಯಾನ್ ಚಂದ್ ಖೇಲ್ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ಕ್ರೀಡಾ ಸಾಧಕರು ವೆಬ್ಸೈಟ್ ತಿತಿತಿ.ಜbಣಥಿಚಿs.sಠಿoಡಿಣs.govನಲ್ಲಿ ಅಕ್ಟೋಬರ್ ೨೮ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೧೧-೨೩೩೮೭೪೩೨, ಉಚಿತ ಸಹಾಯವಾಣಿ ಸಂಖ್ಯೆ: ೧೮೦೦-೨೦೨-೫೧೫೫, ೧೮೦೦-೨೫೮-೫೧೫೫ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕಯ ನಿರ್ದೇಶಕರಾದ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಬೆಂಗಳೂರಿನ ವಿದ್ಯಾನಗರದಲ್ಲಿರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ಖೇಲೋ ಇಂಡಿಯಾ ನಿಯಮನುಸಾರ ಸ್ಟೆçಂಥ್ ಆ್ಯಂಡ್ ಕಂಡಿಷನಿಂಗ್ ಎಕ್ಸರ್ಟ್ ಲೀಡ್, ಯಂಗ್ ಪ್ರೋಪೆಷನಲ್ ಹಾಗೂ ಮೆಸ್ ಗೌರವ ಧನದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯಲಯದಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳನ್ನು ನೋಟರಿ ಮಾಡಿಸಿ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಿಗೆ ನವೆಂಬರ್ ೧೬ರೊಳಗಾಗಿ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೫೧೦೮೫ ಹಾಗೂ ೭೦೧೯೦೦೮೪೪೩ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕಯ ನಿರ್ದೇಶಕರಾದ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿ ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಗಾಯನ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶ್ರೀಮತಿ ವಿಜಯಾ ಕೋಲ್ಹಾರ ಅವರಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಹಾಗೂ ಸರ್ಕಾರಿ ನಿವೃತ್ತ ನೌಕರರ ಸಂಘ ವತಿಯಿಂದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಎಸ್. ಪಿ. ಬಿರಾದಾರ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ, ಜಗದೀಶ ಕೆಂಪಲಿಂಗಣ್ಣವರ, ರೇಣುಕಾ ಹುಣಸಗಿಡದ, ಯೋಶದ ಗುಜ್ಷರ, ಎ.ಎಸ್. ನಿಂಬಾಳ, ಮಲ್ಲಿಕಾರ್ಜುನ ಶಿಮಗೊಂಡ ಇತರರು ಉಪಸ್ಥಿತರಿದ್ದರು.
ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್ಸಿಪಿ-ಟಿಎಸ್ಪಿ ಇದೊಂದು ಕಾಯ್ದೆಯಾಗಿದೆ. ಈ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಲು ಅಧಿಕಾರಿಗಳು ಈ ಕಾಯ್ದೆಯ ಗಂಭೀರತೆಯನ್ನು ಅರಿತುಕೊಂಡು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ೨೦೨೫-೨೬ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಸೆಪ್ಟಂಬರ್ ೨೦೨೫ರ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಸ್ಸಿಪಿ-ಟಿಎಸ್ಪಿ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಬೇಕು. ಸಂಬಂಧಿಸಿದ ಇಲಾಖೆಗಳು ಈ ಎಸ್ಸಿಪಿ-ಟಿಎಸ್ಪಿ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ಇದ್ದ ಸಂದರ್ಭದಲ್ಲಿ ಶೋಕಾಸ್ ನೋಟಿಸ್ ನೀಡಲು ಹಾಗೂ ನಿಗದಿತ ಅವಧಿಯಲ್ಲಿ ಎಸ್ಸಿಪಿ ಟಿಎಸ್ಪಿ ಅನುದಾನ ವೆಚ್ಚ ಮಾಡದೇ ಬಾಕಿ ಉಳಿಸಿಕೊಂಡಲ್ಲಿ ಕ್ರಮ ಜರುಗಿಸಲು ಅವಕಾಶವಿರುವುದರಿಂದ ಇದಕ್ಕೆ ಆಸ್ಪದ ನೀಡದೇ,…
