Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಸುಕ್ಷೇತ್ರ ಜಾಯವಾಡಗಿ ಗ್ರಾಮದ ಶಿವಪ್ಪ ವ ಸೋಮನಾಥ ಮುತ್ಯಾನ ದೇವಸ್ಥಾನದ ಹಿಂಭಾಗದಲ್ಲಿದ್ದ 100 ವರ್ಷದ ಬೃಹತ್ ಆಲದ ಮರ ಬುಧವಾರ ಬೆಳಗ್ಗೆ ಧರೆಗೆ ಉರುಳಿತು. ಆಲದ ಮರವು ತಾನಾಗಿಯೆ ಸಾವಕಾಶವಾಗಿ ಯಾವ ಜೀವಿಗೂ ಹಾಗೂ ಯಾವ ವಸ್ತುವಿಗೂ ಹಾನಿಯಾಗದಂತೆ ಧರೆಗೆ ಉರುಳಿದೆ. ಶಿವಪ್ಪ ಮತ್ತು ಸೋಮನಾಥ ಮುತ್ತ್ಯಾ ಅವರ ಶಕ್ತಿ ಒಂದು ಪವಾಡದಿಂದ ಯಾರಿಗೂ ಹಾನಿಯಾಗಿಲ್ಲ.ಸದ್ಭಕ್ತರು ಆ ದೇವರ ಮೇಲೆ ಇಟ್ಟಿರುವ ಅಪಾರವಾದ ಭಕ್ತಿ ನಿಜವಾಗಿ ಇಲ್ಲಿ ಕಾಣಬಗುದಾಗಿದೆ. ಸುಮಾರು 100 ವರ್ಷಗಳ ಹಳೆಯದಾದ ಆಲದ ಮರವು ಎಲ್ಲರಿಗೂ ನೆರಳು ಕೊಟ್ಟು ಎಲ್ಲರಿಗೂ ಬೇಕಾಗಿ ಯಾವದಕ್ಕೂ ಹಾನಿ ಮಾಡದೆ ಒಬ್ಬ ಶರಣರ ಆಯಸ್ಸು ಮುಗಿದಂತೆ ಆ ಮರದ ಆಯಸ್ಸು ಮುಗಿದು ಧರೆಗೆ ಉರುಳಿದೆ. ಅದೇ ಸ್ಥಾನದಲ್ಲಿ ಬರುವ ದಿನಗಳಲ್ಲಿ ಮತ್ತೊಂದು ಮರವು ಉದ್ಭವಿಸಲಿ ಬೆಳೆಯುವಂತಾಗಲೆಂದು ಜಾಯವಾಡಗಿ, ಹರಸೂರಿನ ಕರಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮತ್ತು ಸೋಮನಾಥ, ಶಿವಪ್ಪ ಮುತ್ತ್ಯಾ ಅವರ ಟ್ರಸ್ಟ್ ಕಮಿಟಿ ಪದಾಧಿಕಾರಿಗಳು ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಡಾ.ಅಂಬೇಡ್ಕರ್ ಉದ್ಯಾನವನದಲ್ಲಿ ಬುಧವಾರ ಪುರಸಭೆ ಹಮ್ಮಿಕೊಂಡಿದ್ದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಂಗವಾಗಿ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು,ಮುಖ್ಯಾಧಿಕಾರಿ, ಸದಸ್ಯರು, ಸಿಬ್ಬಂದಿ ಶ್ರಮದಾನ ಮಾಡಿದರು.ಜನ ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲ ಪಡಿಸುವ ನಿಟ್ಟಿನಲ್ಲಿ ದೇಶದೆಲ್ಲೆಡೆ ಆಚರಿಸಲಾಗುತ್ತಿರುವ ಸೆ.17 ರಿಂದ ಅಕ್ಟೋಬರ್ 2 ರ ವರೆಗಿನ 15 ದಿನಗಳ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಪುರಸಭೆಯಿಂದ ಚಾಲನೆ ನೀಡಲಾಯಿತು.ಪಟ್ಟಣದ ಸ್ವಚ್ಛತೆಗೆ ಪಣ ತೊಟ್ಟು, ಶಾಲಾ ಕಾಲೇಜು, ದೇವಾಲಯ ಆವರಣಗಳು ಹಾಗೂ ರಸ್ತೆಗಳನ್ನು ಸ್ವಚ್ಛಗೊಳಿಸುವ ಜೊತೆಗೆ ಪ್ರತಿಯೊಬ್ಬರು ಸ್ವಚ್ಛತೆಯ ಅಭಿಯಾನದಲ್ಲಿ ಸ್ವಯಂ ಪ್ರೇರಿತರಾಗಿ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡು ಸಂಪೂರ್ಣ ಕಸಮುಕ್ತ ಹಾಗೂ ಸ್ವಚ್ಛ ಬಸವನಬಾಗೇವಾಡಿ ಪಟ್ಟಣವನ್ನಾಗಿ ಬದಲಾಯಿಸಲು ಶ್ರಮಿಸಬೇಕೆಂದು ತಿಳಿಸಲಾಯಿತು.ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಉಪಾಧ್ಯಕ್ಷ ಅಶೋಕ ಹಾರಿವಾಳ, ಮುಖ್ಯಾಧಿಕಾರಿ ವಿದ್ಯಾಧರ ಕಲಾದಗಿ ಸೇರಿದಂತೆ ಮಾಜಿ, ಹಾಲಿ ಸದಸ್ಯರು ಹಾಗೂ ಮುಖಂಡರುಗಳು, ಪೌರ ಕಾರ್ಮಿಕರು, ಸಿಬ್ಬಂದಿಗಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್‌ಬಿ ಕಲಾ ಮತ್ತು ಕೆ.ಸಿ.ಪಿ. ವಿಜ್ಞಾನ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಅರ್ಥಶಾಸ್ತ್ರ ವಿಭಾಗದಿಂದ ಬುಧವಾರದಂದು ವಿಜಯಪುರದ ಎಪಿಎಂಸಿ ಕೃಷಿ ಮಾರುಕಟ್ಟೆಗೆ ಕ್ಷೇತ್ರ ಭೇಟಿಯನ್ನು ಆಯೋಜಿಸಿತ್ತು.ಈ ವೇಳೆಯಲ್ಲಿ ಕೃಷಿ ಮಾರುಕಟ್ಟೆಗಳ ಕಾರ್ಯವೈಖರಿ ಮತ್ತು ಮಾರುಕಟ್ಟೆ ಪದ್ಧತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ನೀಡಲಾಯಿತು.ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಕಾರ್ಯವೈಖರಿ, ಹರಾಜು, ಬೆಲೆ ನಿಗದಿ, ತೂಕ, ಶ್ರೇಣೀಕರಣ ಮತ್ತು ಕಮಿಷನ್ ಏಜೆಂಟ್‌ಗಳ ಪಾತ್ರ ಸೇರಿವೆ. ರೈತರಿಗೆ ನ್ಯಾಯಯುತ ಬೆಲೆಗಳನ್ನು ಖಚಿತಪಡಿಸಿಕೊಳ್ಳುವಲ್ಲಿ, ಮಧ್ಯವರ್ತಿಗಳಿಂದ ಶೋಷಣೆಯನ್ನು ಕಡಿಮೆ ಮಾಡುವಲ್ಲಿ ಮತ್ತು ಕೃಷಿ ವ್ಯಾಪಾರದಲ್ಲಿ ಪಾರದರ್ಶಕತೆಯನ್ನು ಉತ್ತೇಜಿಸುವಲ್ಲಿ ನಿಯಂತ್ರಿತ ಮಾರುಕಟ್ಟೆಗಳ ಮಹತ್ವವನ್ನು ಮಾರುಕಟ್ಟೆಯಲ್ಲಿರುವ ಸಂಪನ್ಮೂಲ ವ್ಯಕ್ತಿಗಳು ವಿವರಿಸಿದರು.ಈ ಭೇಟಿಯು ವಿದ್ಯಾರ್ಥಿಗಳಲ್ಲಿ ಸೈದ್ಧಾಂತಿಕ ಜ್ಞಾನ ಮತ್ತು ಪ್ರಾಯೋಗಿಕ ತಿಳುವಳಿಕೆಯ ನಡುವಿನ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡಿತು. ಇದು ಕೃಷಿ ಮಾರುಕಟ್ಟೆ ವ್ಯವಸ್ಥೆಗಳು, ನೀತಿಗಳು ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ APMC ಗಳ ಪಾತ್ರದ ಬಗ್ಗೆ ಅವರ ಅರಿವನ್ನು ಮೂಡಿಸಲಾಯಿತು.ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತರ್ ರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ವಿಜಯಪುರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ದಿ.26 ಶುಕ್ರವಾರ ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ.2024 ಮತ್ತು 2025 ನೇ ಶೈಕ್ಷಣಿಕ ವರ್ಷದಲ್ಲಿ ಬಿ.ಇ ಮತ್ತು ಡಿಪ್ಲೋಮಾ ಪದವಿಯ ಮೆಕ್ಯಾನಿಕಲ್, ಇಲೇಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ಮತ್ತು ಇಲೇಕ್ಟ್ರಾನಿಕ್ಸ್ ಇಲೆಕ್ಟ್ರೀಕಲ್ಸ್ ವಿಭಾಗಗಳಲ್ಲಿ ತೇರ್ಗಡೆ ಹೊಂದಿರುವ ವಿಜಯಪುರ ಹಾಗೂ ಸುತ್ತಲಿನ ಪ್ರದೇಶಗಳ ಎಲ್ಲ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡು, ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.ಅಂತರ್ ರಾಷ್ಟ್ರೀಯ ಬೃಹತ್ ಸಂಸ್ಥೆಯಾಗಿರುವ ಫಾಕ್ಸ್ ಕಾನ್ ಜಗತ್ತಿನಲ್ಲಿಯೇ ಐಪೋನ್ ತಯಾರಿಕೆಯಲ್ಲಿ ಅಗ್ರಗಣ್ಯ ಸಂಸ್ಥೆಯಾಗಿದ್ದು, ಬೆಂಗಳೂರಿನ ದೇವನಹಳ್ಳಿಯಲ್ಲಿ ನೂತನ ಬೃಹತ್ ತಯಾರಿಕಾ ಘಟಕ ಕಾರ್ಯಾರಂಭ ಮಾಡುತ್ತಿರುವ ಹಿನ್ನೆಲೆಯಲ್ಲಿ, ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರವರು, ಫಾಕ್ಸ್ ಕಾನ್ ಆಡಳಿತ ಮಂಡಳಿಗೆ ವಿಜಯಪುರ ಹಾಗೂ ಸುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ತಮ್ಮ ಕಂಪನಿಯಲ್ಲಿ ಹೆಚ್ಚಿನ ಅವಕಾಶ ನೀಡಬೇಕು…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಭೀಮಾ ನದಿಯ ನದಿ ಪಾತ್ರದ ಭಾಗದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಹಾಗೂ ಕರ್ನಾಟಕದಲ್ಲಿಯೂ ಕೂಡ ಎಡಬಿಡದೆ ಸುರಿಯುತ್ತಿರುವ ಮಳೆಯ ಪರಿಣಾಮ ಬೀಮ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಮತ್ತಷ್ಟು ಹೆಚ್ಚಳವಾಗಿದೆಈಗಾಗಲೇ ಉಜನಿ ಜಲಾಶಯದಿಂದ ಬಿಟ್ಟಿರುವ 1 ಲಕ್ಷ ಕ್ಯೂಸೆಕ್ ನೀರು ನದಿ ಅಫ್ಜಲಪುರ ಭಾಗಕ್ಕೆ ಹರಿದು ಬಂದಿದ್ದು ಅಲ್ಲದೇ ಅಫ್ಜಲಪುರ ತಾಲ್ಲೂಕಿನಲ್ಲಿ ಭೀಮಾ ನದಿಗೆ ಸೇರುವ ಬೋರಿ ಹಳ್ಳಕ್ಕೂ ಕೂಡ ಅಪಾರ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಅಲ್ಲದೇ ವಿಜಯಪುರ ಜಿಲ್ಲೆಯ ಆಲಮೇಲ, ಸಿಂದಗಿ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಲೂ ಕೂಡ ಭೀಮಾನದಲ್ಲಿ ನೀರು ಹೆಚ್ಚಳವಾಗುವುದಕ್ಕೆ ಕಾರಣವಾಗಿದೆದೇವಣಗಾಂವ ಸಮೀಪ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೊನ್ನ ಬ್ಯಾರೇಜ್ ಗೆ ಒಟ್ಟು 1 ಲಕ್ಷ 60 ಸಾವಿರ ಒಳ ಹರಿವು ಹಾಗೂ 1ಲಕ್ಷ 70 ಸಾವಿರ ಹೊರಹರಿವು ಇದೆ ಎಂದು ಅಫಜಲಪುರದ ಕೆ ಎನ್ ಎನ್ ಎಲ್ ಇ ಇ ಶಿವಕುಮಾರ ಸ್ವಾಮಿ ತಿಳಿಸಿದ್ದಾರೆಈಗಾಗಲೇ ಅಫಜಲಪುರ ತಾಲೂಕಿನ ಮಣ್ಣೂರು…

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಸಿಮೆಂಟ ತುಂಬಿಕೊಂಡು ಹೊರಟ್ಟಿದ್ದ ಲಾರಿ, ಕಂಕರ ತುಂಬಿಕೊಂಡು ಹೊರಟಿದ್ದ ಟಿಪ್ಪರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನ ಕಾಲು ಕಟ್ ಆಗಿರುವ ಘಟನೆ ತಾಲೂಕಿನ ಗೊಬ್ಬೂರ ವಾಡಿ ಕ್ರಾಸ್ ಬಳಿ ನಡೆದಿದೆ.ಅಪಘಾತದಲ್ಲಿ ಲಾರಿ ಚಾಲಕ ಜೇವರ್ಗಿ ತಾಲೂಕಿನ ಹರವಾಳ ಗ್ರಾಮದ ಶರಣಬಸಪ್ಪ ಸಾಯಬಣ್ಣ ತಳವಾರ(೨೮) ಎಂಬಾತನ ಕಾಲು ಮುರಿದಿದ್ದು ಸ್ಥಳಕ್ಕೆ ದೇವಲ ಗಾಣಗಾಪೂರ ಠಾಣೆ ಪಿಎಸ್‌ಐ ಸಂಗೀತಾ ಸಿಂಧೆ ಹಾಗೂ ಸಿಬ್ಬಂದಿಗಳಾದ ಸಂಗಣ್ಣ ತಳವಾರ, ಹೈವೆ ಪೆಟ್ರೊಲಿಂಗ್ ಎಎಸ್‌ಐ ಹಣಮಂತ ಚವಾಣ, ಎಚ್‌ಸಿಪಿ ಅವ್ವಣ್ಣಗೌಡ, ೧೧೨ ಸಿಬ್ಬಂದಿ ಬೀರಣ್ಣ, ಸಂತೋಷ ಬಿರಾದಾರ ಬಂದು ಗಾಯಗೊಂಡು ನರಳುತ್ತಿದ್ದ ಚಾಲಕನನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ದೇವಲ ಗಾಣಗಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮಹಾರಾಷ್ಟçದ ವೀರ, ಶೀನಾ, ಉಜನಿ ಜಲಾಶಯಗಳಿಂದ ಹಾಗೂ ತಾಲೂಕಿನ ಭೋರಿ ಹಳ್ಳದಿಂದ ಹರಿದು ಭೀಮಾ ನದಿ ಸೇರಿದ ನೀರಿನಿಂದ ೧ ಲಕ್ಷ ೬೦ ಸಾವಿರ ಕ್ಯೂಸೇಕ್ ನೀರು ಹರಿದು ಬಂದಿದೆ ಎಂದು ಕೆಎನ್‌ಎನ್‌ಎಲ್ ಎಇಇ ಸಂತೋಷಕುಮಾರ ಸಜ್ಜನ್ ಮಾಹಿತಿ ನೀಡಿದ್ದಾರೆ.ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾರಿ ಪ್ರಮಾಣದ ನೀರು ನದಿಗೆ ಹರಿದು ಬಂದ ಪ್ರಯುಕ್ತ ಬ್ಯಾರೇಜ್‌ನ ಗೇಟ್‌ಗಳ ಮೂಲಕ ನೀರು ಹೊರಗಡೆ ಬಿಡಲಾಗುತ್ತಿದೆ. ಇದರಿಂದ ದೇವಲ ಗಾಣಗಾಪೂರ, ಘತ್ತರಗಾ ಹಾಗೂ ಚಿನಮಳ್ಳಿ ಬ್ಯಾರೆಜ್‌ಗಳು ಮುಳುಗಡೆಯಾಗಿದ್ದು ಸಾರ್ವಜನಿಕರು ನದಿ ಹತ್ತಿರಕ್ಕೆ ಹೋಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ:”ಪ್ರತಿಯೊಂದು ರಾಷ್ಟ್ರಕ್ಕೂ ತನ್ನದೇ ಆದ ಭಾಷೆಯಿದೆ ಮತ್ತು ಹಿಂದಿ ಭಾಷೆಯು ಬಹುತೇಕ ಪ್ರತಿಯೊಬ್ಬ ಭಾರತೀಯರಿಗೂ ತಿಳಿದಿರುವ ಮತ್ತು ಅದನ್ನು ಹೆಮ್ಮೆಯಿಂದಅಳವಡಿಸಿಕೊಂಡಿದೆ” ಎಂದು ಡಾ.ಕೆ. ಎ.ಪಾಟೀಲ ಹೇಳಿದರು.ನಗರದ ಬಿ.ಎಲ್ ಡಿ ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆಸಿಪಿ ವಿಜ್ಞಾನ ಕಾಲೇಜಿನಲ್ಲಿ ಹಿಂದಿ ವಿಭಾಗದದಿಂದ ಸೆ.೧೭ ಬುಧವಾರದಂದು ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು .ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಹಿಂದಿ ಭಾಷೆ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಅವರ ಮಾರ್ಗದರ್ಶನ ಶ್ಲಾಘನೀಯ ಎಂದು ಹಿಂದಿ ಭಾಷೆಯ ಮಹತ್ವ ತಿಳಿಸಿದರು.ಈ ಸಂದರ್ಭದಲ್ಲಿ ಹಿಂದಿ‌ ವಿಭಾಗದ ಮುಖ್ಯಸ್ಥೆ ಡಾ.ಮೀನಾಕ್ಷಿ ಪಾಟೀಲ, ಪ್ರೊ.ಬಿ.ವಿ ಪಾಟೀಲ, ಡಾ.ಸುಮಿ ಚೋಪಡೆ ಹಾಗೂವಿದ್ಯಾರ್ಥಿಗಳು ಉಪಸ್ಥಿತರಿದ್ದರುಡಾ.ಸುಮಿ ಚೋಪ್ಡೆ ವಂದಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ಶಹಾಪುರ: ಪಟ್ಟಣದ ಶಿಕ್ಷಕ ಸುರೇಶಬಾಬು ಅರುಣಿ ಅವರ ಸುಪುತ್ರಿ ಅನುಷಾ.ಎಸ್.ಅರುಣಿ ಎನ್ ಟಿ ಎ ದಿಂದ ಇತ್ತೀಚಿಗೆ ಪ್ರಕಟವಾದ ಐಸಿಆರ್ / ಸ್ನಾತಕ್ಕೊತರ ಎಂಎಸ್‌ಸಿ ತೋಟಗಾರಿಕಾ ಪದವಿಯಲ್ಲಿ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆಯಲ್ಲಿ 9ನೇ ರಾಂಕ್ ಪಡೆಡಿದ್ದಾರೆ.ವಿದ್ಯಾರ್ಥಿನಿಯ ಸಾಧನೆಗೆ ಉತ್ತರ ಕರ್ನಾಟಕ ಕರವೇ ಸಂಚಾಲಕ ಸತೀಶಕುಮಾರ ಬಿ.ಕೌಲಗಿ, ಮುತ್ತು ಪಟ್ಟಣಶೆಟ್ಟಿ, ಕುಮಾರ ಕಿಣಗಿ ಸೇರಿದಂತೆ ಇತರರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ರಾಜ್ಯ-ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಪ್ಪಿಸಲು ಪರಿಣಾಮಕಾರಿಯಾಗಿ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಾಗುವಂತೆ ಹಾಗೂ ಅಪಘಾತ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮನಗೂಳಿ ಮತ್ತು ಉತ್ನಾಳ ಕ್ರಾಸ್‌ನಲ್ಲಿ ಅಪಘಾತಗಳು ಸಂಭವಿಸುವ ಹಿನ್ಜನಲೆಯಲ್ಲಿ ರಸ್ತೆ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈಗಾಗಲೇ ಮನಗೂಳಿ ಅಂಡರ್‌ಪಾಸ್ ಕಾಮಗಾರಿ ಕೈಗೊಳ್ಳಲು ಕ್ರೀಯಾಯೋಜನೆ ಸಿದ್ಧಪಡಿಸಲಾಗುತ್ತಿದ್ದು, ಯೋಜನಾ ವಿವರಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗುವುದು ಎಂದು ರಾಷ್ಟಿçÃಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಪ್ಪಿಸಲು ಕೈಗೊಂಡ ಕ್ರಮಗಳ ಕುರಿತಾಗಿ ಮಾಹಿತಿ ನೀಡಲಾಯಿತು.ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತ್ರದ, ಡಿವೈಎಸ್‌ಪಿ…

Read More