Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಹಶೀಲ್ದಾರ ಕಾರ್ಯಾಲಯದಲ್ಲಿ ಸಮುದಾಯದ ಪ್ರಮುಖರಿಂದ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಬುಧವಾರ ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮರ ಭಾವಚಿತ್ರಕ್ಕೆ ಸಮುದಾಯದವರು ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಸಿಂದಗಿ ಹಾಗೂ ಶಿಕ್ಷಕ ಅರುಣ ಕೋರವಾರ ಮಾತನಾಡಿದರು.ಕಾರ್ಯಕ್ರಮದಲ್ಲಿ ಶಿರಸ್ತೇದಾರ ಸುರೇಶ ಮ್ಯಾಗೇರಿ, ಸಿಬ್ಬಂದಿ ಚನ್ನಬಸು ಹೊಸಮನಿ, ಶ್ರೀಮಂತ ತಳವಾರ(ನಿವಾಳಖೇಡ) ಸಮುದಾಯದ ವಿಶ್ವನಾಥ ಮೂರುಝಾವದಮಠ(ಆಲಮೇಲ) ನಾಗಯ್ಯ ಮೂರುಝಾವದಮಠ, ತೇಜಣ್ಣ ಕಕ್ಕಳಮೇಲಿ, ಮಹೇಶ ದೊಡಮನಿ, ಗಂಗಾಧರ ಆಲಮೇಲ, ಸುರೇಶ ಬಡಿಗೇರ, ಪ್ರಶಾಂತ ದೊಡಮನಿ, ಕಾಶೀಪತಿ ಬಡಿಗೇರ, ಮಹಾರುದ್ರ ಕಕ್ಕಳಮೇಲಿ, ದೇವೀಂದ್ರ ಕಕ್ಕಳಮೇಲಿ, ಪ್ರಶಾಂತ ಬಡಿಗೇರ, ಕಾಶೀಪತಿ ಬಡಿಗೇರ ಇದ್ದರು.

Read More

ಸರಕಾರಕ್ಕೆ ಗಡುವು ನೀಡಿದ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಪರಿಹಾರವನ್ನು ೩ ಆರ್ಥಿಕ ವರ್ಷದ ಹಂತದಲ್ಲಿ ಕೊಡುವ ನಿರ್ಣಯ ಕೈಗೊಂಡಿರುವದನ್ನು ಸರಕಾರವು ಕೈಬಿಟ್ಟು ಇದೇ ೨೦೨೬ರ ಮಾರ್ಚ ತಿಂಗಳಿನ ಬಜೆಟ್‌ನ ಒಳಗಾಗಿ ಅವಳಿ ಜಿಲ್ಲೆಯ ರೈತರಿಗೆ ಒಂದೇ ಹಂತದಲ್ಲಿ ವಿತರಣೆ ಮಾಡಬೇಕು ಇಲ್ಲದಿದ್ದರೆ ಮುಂದೊಂದು ದಿನ ಉಗ್ರವಾದ ಹೋರಾಟವನ್ನು ಕೈಗೊಳ್ಳಬೇಕಾಗುತ್ತದೆ ಎಂದು ಸರಕಾರಕ್ಕೆ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಗಡುವು ನೀಡಿದರು.ಪಟ್ಟಣದ ಯುಕೆಪಿ ವೃತ್ತದಲ್ಲಿ ಪ್ರವಾಸಿ ಮಂದಿರದ ಎದುರುಗಡೆ ಆಲಮಟ್ಟಿ ಆಣೆಕಟ್ಟನ್ನು ೫೨೪ ಮೀ ಎತ್ತರ ಏರಿಸುವದರಿಂದ ಮುಳಗಡೆಯಾಗುವ ರೈತರ ಜಮೀನುಗಳಿಗೆ ನೀರಾವರಿ ಒಂದು ಎಕರೆಗೆ ೫೫ ಲಕ್ಷ ರೂ, ಒಣ ಬೇಸಾಯಕ್ಕೆ ೪೫ ಲಕ್ಷ ರೂ. ಪರಿಹಾರ ಕೊಡಬೇಕೆಂದು ಆಗ್ರಹಿಸಿ ನಡೆದ ಸರದಿ ಉಪವಾಸ ಸತ್ಯಾಗ್ರಹವನ್ನು ಅವಳಿ ಜಿಲ್ಲೆಯ ರೈತರ ಹಾಗೂ ಗಣ್ಯ ಮಾನ್ಯರ ಜನಪ್ರತಿನಿಧಿಗಳ ಸೂಚಣೆ ಮೇರೆಗೆ ತಾತ್ಕಾಲಿಕವಾಗಿ ಹಿಂತೆಗೆದುಕೊಂಡ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.ಅವಳಿ ಜಿಲ್ಲೆಯಲ್ಲಿ ಬಾಗಲಕೋಟ,…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಇವರ ಪ್ರಯತ್ನದ ಫಲವಾಗಿ ಬಸವನ ಬಾಗೇವಾಡಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕೊಲ್ಹಾರ ತಾಲೂಕಿನ ತಳೇವಾಡ ಗ್ರಾಮಕ್ಕೆ ಸರ್ಕಾರ ಹೊಸದಾಗಿ ಪಶು ಚಿಕಿತ್ಸಾಲಯ ಮಂಜೂರು ಮಾಡಿದೆ.ಈ ಕುರಿತು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್. ಮಂಗಳಗೌರಿ ಅಧಿಕೃತವಾಗಿ ತಳೇವಾಡ ಗ್ರಾಮಕ್ಕೆ ಪಶು ಚಿಕಿತ್ಸಾಲಯ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.ತಳೇವಾಡ ಗ್ರಾಮಕ್ಕೆ ಪಶು ಚಿಕಿತ್ಸಾಲಯ ಮಂಜೂರು ಮಾಡಿದ್ದರಿಂದ ಈ ಭಾಗದ ಹಲವು ಹಳ್ಳಿಗಳ ಜಾನುವಾರು ಪಾಲಕರಿಗೆ ತಮ್ಮ ಪಶುಗಳಿಗೆ ತ್ವರಿತವಾಗಿ ಆರೋಗ್ಯ ಸೇವೆ ಪಡೆಯುವುದಕ್ಕೆ ಅನುಕೂಲ ಆಗಲಿದೆ ಎಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ.ಬಸವನಬಾಗೇವಾಡಿ ವಿಧಾನಸಭೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸುತ್ತಿರುವ ಸಚಿವರಾದ ಶಿವಾನಂದ ಪಾಟೀಲ ಅವರ ಅಭಿವೃದ್ಧಿ ಪರ ಬದ್ಧತೆಗೆ ಕ್ಷೇತ್ರದ ಜನರು ಅಭಿನಂದನೆ ಸಲ್ಲಿಸಿದ್ದಾರೆ.ವಿಜಯಪುರ ಜಿಲ್ಲೆಗೆ ಕೊಲ್ಹಾರ ತಾಲೂಕಿನ ತಳೇವಾಡ ಮಾತ್ರವಲ್ಲದೆ ಇಂಡಿ ತಾಲೂಕಿನ ಬಬಲಾದ,…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ವಿಶ್ವಕರ್ಮ ಸಮಾಜದವರು ಶ್ರಮಜೀವಿಗಳು, ಇತರ ಎಲ್ಲ ಸಮಾಜದವರೊಂದಿಗೆ ಉತ್ತಮ ಬಾಂಧವ ಹೊಂದಿದವರಾಗಿದ್ದಾರೆ ಎಂದು ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮಿಗಳು ಹೇಳಿದರು.ಅವರು ಪಟ್ಟಣದ ಕಾಳಿಕಾ ದೇವಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ವಿಶ್ವಕರ್ಮ ಸಮಾಜದವರು ಪ್ರತಿಯೊಂದು ಗ್ರಾಮದಲ್ಲಿರುವ ಎಲ್ಲ ಸಮಾಜದವರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು ಅವರಿಗೆ ಅವಶ್ಯಕತೆ ಇರುವ ರೈತರಿಗೆ , ಗ್ರಾಮಸ್ಥರಿಗೆ ಪ್ರತಿಯೊಬ್ಬರಿಗೂ ಕೂಡ ಅವಶ್ಯಕವಿರುವ ಎಲ್ಲ ಸಲಕರಣೆಗಳನ್ನು ಮಾಡುವ ಮೂಲಕ ಇತರರಿಗೆ ಸಹಾಯಕ ಜೀವಿಯಾಗಿದ್ದಾರೆ ಎಂದರು.ಧರ್ಮಸಭೆಯ ಸಾನಿಧ್ಯವನ್ನು ಈರಯ್ಯ ಮಹಾಸ್ವಾಮಿಗಳು ಮೂರುಜಾವದಮಠ, ಮುಖ್ಯ ಅತಿಥಿಗಳಾಗಿಆಲಮೇಲ ತಹಸಿಲ್ದಾರ್ ಧನಪಾಲ ಶೆಟ್ಟಿ, ಪಿಎಸ್ಐ ಅರವಿಂದ್ ಅಂಗಡಿ, ಡಾ.ಪತ್ತಾರ, ವಿಶ್ವಕರ್ಮ ಸಮಾಜದ ಹಿರಿಯರಾದ ಲಚ್ಚಪ್ಪ ಪತ್ತಾರ್ ಈರಣ್ಣ ಪತ್ತಾರ, ಚಂದ್ರಕಾಂತ ಅಕ್ಕಲಕೋಟ, ಕಾಶಿನಾಥ್ ಬಡಿಗೇರ, ಈರಣ್ಣ ಪತ್ತಾರ, ಹಾಗೂ ವಿಶ್ವಕರ್ಮ ಸಮಾಜದ ಹಿರಿಯರು ಭಾಗವಹಿಸಿದ್ದರು.ಸಭೆಯಲ್ಲಿ ದಿವಂಗತ ಮೌನೇಶ ಆಚಾರ್ಯರ ಆಸೆಯಂತೆ ಕುಂಭಮೇಳಕ್ಕೆ ಹೋಗಿ ಬಂದ ಭಕ್ತಾದಿಗಳಿಗೆ ಸನ್ಮಾನಿಸಿ ಗೌರವಿಸಿ ಅವರ ಕನಸನ್ನು ನನಸುಗೊಳಿಸುವಲ್ಲಿ ಅವರ ಶ್ರೀಮತಿಯವರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಕಣ್ಣಿನ ತಪಾಸಣೆ ಮಾಡಿ ದೃಷ್ಟಿ ದೋಷ ಇರುವ ಮಕ್ಕಳಿಗೆ ಉಚಿತ ಕನ್ನಡಕ ವಿತರಿಸುವ ಕಾರ್ಯ ಶ್ಲಾಘನೀಯವಾದುದು ಎಂದು ವಿಜಯಪುರ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ತಾಲ್ಲೂಕಿನ ನಾಗಠಾಣ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಶಂಕರ ಕಣ್ಣಿನ ಆಸ್ಪತ್ರೆ, ಟೈಟಾನ ಕಂಪನಿ ಬೆಂಗಳೂರು, ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ನಡೆದ ಕನ್ನಡಕ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ತಾಲ್ಲೂಕಿನ ಸರಕಾರಿ, ಅನುದಾನಿತ ಶಾಲೆಗಳ ಒಟ್ಟು 56,000 ಸಾವಿರ ಮಕ್ಕಳಿಗೆ ಶಾಲೆಗೆ ಹೋಗಿ ಕಣ್ಣಿನ ತಪಾಸಣೆ ಮಾಡಿ ಅದರಲ್ಲಿ 1038 ಮಕ್ಕಳಿಗೆ ಉಚ್ಚ ಗುಣಮಟ್ಟದ ಕನ್ನಡಕಗಳನ್ನು ವಿತರಿಸುವದು. 768 ಮಕ್ಕಳಿಗೆ ಶಸ್ತ್ರ ಚಿಕಿತ್ಸೆಗಾಗಿ ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇಲ್ಲಿಗೆ ಸಿಪಾರಸ್ಸು ಆಗಿದ್ದು, ಅದರಲ್ಲಿ ಈಗಾಗಲೆ 94 ಮಕ್ಕಳು ಉಚಿತ ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದಾರೆ. ಇನ್ನುಳಿದ ಮಕ್ಕಳ ಶಸ್ತ್ರ ಚಿಕಿತ್ಸೆ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಲು ಹೇಳಿದರು.ಜಿಲ್ಲಾ ಅಂಧತ್ವ ನಿವಾರಣಾ ಅಧಿಕಾರಿ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಹದಿ ಹರೆಯದವರು ಆರೋಗ್ಯದ ಕುರಿತು ಕಾಳಜಿ ವಹಿಸಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರದ ನಿರೀಕ್ಷಣಾಧಿಕಾರಿ ಲವ ಚವ್ಹಾಣ ಹೇಳಿದರು.ತಾಲ್ಲೂಕಿನ ಘೋಣಸಗಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರ ಸ್ವಸ್ತ ನಾರಿ ಸ್ವಶಕ್ತ ಪರಿವಾರ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಅಭಿಯಾನದ ಅಂಗವಾಗಿ ಎಲ್ಲ ಗರ್ಭಿಣಿ ಮಹಿಳೆಯರಿಗೆ ಹೆರಿಗೆಯ ಸಮಯದಲ್ಲಿ ಆಗುವ ತೊಡಕುಗಳ ಬಗ್ಗೆ ಮತ್ತು ರಕ್ತ ಹೀನತೆ, ರಕ್ತದೊತ್ತಡ ಮಧುಮೇಹ ಕ್ಯಾನ್ಸರ್, ಹದಿಹರೆಯದವರು ಸ್ವ ಕಾಳಜಿ ವಹಿಸಬೇಕು. ಸಮಾಜದಲ್ಲಿ ಮಹಿಳೆಯರು ಆರೋಗ್ಯವಂತ ಮತ್ತು ಸಬಲ ಜೀವನ ನಡೆಸಲು ಸ್ವಚ್ಛತೆಯ ಬಗ್ಗೆ ಜಾಗೃತಿ ತುಂಬಾ ಅವಶ್ಯಕವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಪ್ರಸವ ಪೂರ್ವ ಗರ್ಭಿಣಿ ಆರೈಕೆ ಮತ್ತು ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಅಂಜನಾ ಪವಾರ, ಸಮುದಾಯ ಆರೋಗ್ಯ ಅಧಿಕಾರಿಜಮಾಲುದ್ದೀನ್ ಮುಲ್ಲಾ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮೀಣ ಭಾಗಗಳಲ್ಲಿ ನಡೆಯುವ ಪ್ರತಿಯೊಂದು ಕ್ರೀಢೆಗಳಿಗೆ ಸಾಂಪ್ರದಾಯಿಕ ಹಿನ್ನೆಲೆಯಿದ್ದು ಅದು ರೈತರ ಜನಜೀವನಕ್ಕೆ ಸ್ಪೂರ್ತಿಯಾಗಿದೆ ಎಂದು ಪ್ರಭುಲಿಂಗೇಶ್ವರ ಅಂತರಾಷ್ಟ್ರೀಯ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ವಿದ್ಯಾಧರ ಸವದಿ ಹೇಳಿದರು.ಗ್ರಾಮದ ಆರಾದ್ಯದೇವತೆ ಶ್ರೀ ಎಲ್ಲಮ್ಮಾದೇವಿ ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ದಾ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಭೂತಾಯಿಯನ್ನು ನಂಬಿರುವ ರೈತರು ಅದಕ್ಕೆ ಉಳುಮೆ ಮಾಡುವ ಎತ್ತುಗಳಿಗೆ ಬಸವಣ್ಣ ದೇವರೆಂದು ಪೂಜಿಸುತಿದ್ದು ಅವುಗಳ ಸಾಮರ್ಥ್ಯ ಮತ್ತು ಅವುಗಳನ್ನು ಮೇಯಿಸುವ ರೈತರ ಸಾಮರ್ಥ್ಯ ಪರೀಕ್ಷಿಸಲು ತೆರಬಂಡಿ, ಕುದುರೆ ಚಕ್ಕಡಿ ಬಂಡಿ ಓಡಿಸುವ ಸ್ಪರ್ದೆ ಸೇರಿದಂತೆ ಹಲವಾರು ಸ್ಪರ್ದೆಗಳನ್ನು ಹಮ್ಮಿಕೊಂಳ್ಳುವ ಸಾಂಪ್ರದಾಯಿಕ ಹಿನ್ನೆಲೆಯಿದ್ದು ಇಂದಿನ ಆಧುನಿಕ ಯುಗದಲ್ಲಿಯೂ ಗ್ರಾಮೀಣ ಭಾಗಗಳಲ್ಲಿ ಅವು ಜೀವಂತವಾಗಿರುವುದು ನಿದರ್ಶನ ಎಂದರು.ಸಮಾರಂಭದ ಸಾನಿಧ್ಯ ವಹಿಸಿದ ಶ್ರೀ ಜನಾರ್ಧನ ಮಹಾರಾಜರು ಪೂಜಾ ಕಾರ್ಯಕ್ರಮ ನೆರವೇರಿಸಿದರು.ಶ್ರೀ ಎಲ್ಲಮ್ಮದೇವಿ ಸೇವಾ ಸಮೀತಿಯ ಕಳ್ಳೆಪ್ಪ ನಡುವಿನಮನಿ, ತಾ.ಪಂ. ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ಮಹಾಂತೇಶ ಜಾಲಿಕಟ್ಟಿ, ಗ್ರಾ.ಪಂ. ಸದಸ್ಯ ಮಹಾಲಿಂಗ ಮಾಯಣ್ಣವರ,…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರಕಾರ, ಜಿಲ್ಲಾಡಳಿತ, ತಾಲೂಕಾಡಳಿತ ಎಲ್ಲರೂ ಸೇರಿ ಸಂತ್ರಸ್ತರಿಗೆ ಶೀಘ್ರದಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯನಿರತರಾಗಿದ್ದು, ಇದು ಅತೀ ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರುವ ಭರವಸೆ ನಮ್ಮೆಲ್ಲರಿಗಿದ್ದು, ಅದೇ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿ ಶೀಘ್ರ ಪಲಾನುಭವಿಗಳ ಮೊಗದಲ್ಲಿ ನಗು ತರುವ ಕಾರ್ಯ ಮಾಡುತ್ತೇವೆ ಎಂದು ದಸಂಸ ಸಮಿತಿ ಜಿಲ್ಲಾ ಸಂಚಾಲಕ ವಾಯ್.ಸಿ.ಮಯೂರ ಹೇಳಿದರು.ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದೆಲ್ಲವನ್ನು ಸಹಿಸದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಶಾಸಕರ ಪ್ರಯತ್ನಕ್ಕೆ ತಣ್ಣೀರೆರೆಚುವ ಹಾಗೂ ಮುಗ್ಧ ಜನತೆಯ ಹಾದಿ ತಪ್ಪಿಸುವ ಕಾರ್ಯ ಮಾಡುತ್ತಿರುವುದು ವಿಷಾದಕರ. ಇದ್ಯಾವುದಕ್ಕೂ ಕಿವಿಗೊಡದೆ ಮುಂದೆ ಕೈಗೊಳ್ಳಬೇಕಾದ ಕ್ರಮಗಳತ್ತ ನೋಟ ಹರಿಸುವುದುದ ಸೂಕ್ತ ಎಂದು ಕಿವಿಮಾತು ಹೇಳಿದರು.ಈ ವೇಳೆ ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಸುರೇಶ ಪೂಜಾರಿ ಮಾತನಾಡಿ, ಶಾಸಕರು ಸಂತ್ರಸ್ತರಿಗೆ ನಿಯೋಜಿತ ಜಾಗೆಯಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೇ ಮನೆ ಕಟ್ಟಿಕೊಳ್ಳಲು ಸರಕಾರದಿಂದ ಸಿಗುವ ಎಲ್ಲ ರೀತಿಯ ಹಣಕಾಸಿನ ಸಹಾಯ ಅಲ್ಲದೇ…

Read More

ವಿಜಯಪುರದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತಿಹಾಸ ಹಾಗೂ ಪುರಾಣ ಪುರುಷರಿಂದ ಗುರುತಿಸಲ್ಪಟ್ಟ ಈ ವಿಶ್ವಕರ್ಮ ಸಮುದಾಯವು ಈ ನಾಡಿನ ಹಾಗೂ ದೇಶದ ಸುಂದರ ಕಲೆಗಳ ನಿರ್ಮಾಣದ ಮೂಲಕ ಮಹತ್ವವಾದ ಕೊಡುಗೆ ಕೊಟ್ಟಿದ್ದಾರೆ ಎಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಲ್ಲಿಯವರೆಗೆ ಕೌಶಲ್ಯ ಆಧಾರಿತ ವೃತ್ತಿಗಳು ಭೂಮಿಯ ಮೇಲೆ ಅಸ್ಥಿತ್ವದಲ್ಲಿರುತ್ತವೆಯೋ ಅಲ್ಲಿಯವರೆಗೆ ವಿಶ್ವಕರ್ಮರು ಅಜರಾಮರಾಗಿತ್ತಾರೆ. ಇವರು ಅತ್ಯಂತ ಹೃದಯವಂತರು. ದೇವಾನುದೇವತೆಗಳ ಮೂರ್ತಿಗಳು, ಆಭರಣಗಳ ತಯಾರಿಕೆಯಲ್ಲಿ ತಮ್ಮ ಅಮೂಲ್ಯವಾದ ಕಲಾ ಕೌಶಲ್ಯದಿಂದ ಗುರುತಿಸಲ್ಪಡುವ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಇಂತಹ ಕಾರ್ಯಕ್ರಗಳಿಗೆ ತಮ್ಮ ಮಕ್ಕಳನ್ನು ಕರೆತಂದು, ದಾರ್ಶನಿಕರ ಸಂದೇಶ ತಿಳಿಸಿಕೊಡಬೇಕು. ವಿಶ್ವಕರ್ಮರ ಆದರ್ಶಗಳು ತಮ್ಮ ಮನೆ ಮನಗಳಲ್ಲಿ ಬೆಳಗಲಿ ಎಂದು ಅವರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಯೋಜನೆ ಅನುಷ್ಠಾನಗಾಗಿ ಸಂತ್ರಸ್ತರಾಗುವ ರೈತರಿಗೆ ಸರ್ಕಾರ ನ್ಯಾಯಸಮ್ಮತ ಪರಿಹಾರ ಘೋಷಿಸಿದೆ. ಇದಕ್ಕಾಗಿ ಮಾಜಿ ಸಚಿವ ಎಸ್.ಆರ್. ಪಾಟೀಲ ಅವರು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಅಭಿನಂದಿಸಿದರು.ಬುಧವಾರ ಬೆಂಗಳೂರಿನಲ್ಲಿ ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಎಸ್.ಆರ್.ಪಾಟೀಲ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತದ ಯೋಜನೆ ಅನುಷ್ಠಾನಕ್ಕೆ ಸರ್ಕಾರ ವಿಶೇಷ ಸಂಪುಟ ಸಭೆ ಕರೆದು ಸುದೀರ್ಘ ಚರ್ಚೆ ನಡೆಸಿದೆ. ಸದರಿ ವಿಶೇಷ ಸಂಪುಟ ಸಭೆಯಲ್ಲಿ ಯೋಜನೆ ಅನುಷ್ಠಾನದಿಂದ ಹಿನ್ನೀರಿನಲ್ಲಿ ಮುಳುಗಡೆಯಿಂದ ಭೂಮಿ ಕಳೆದುಕೊಂಡು ಸಂತ್ರಸ್ತರಾಗುವ ರೈತರಿಗೆ ಪ್ರತಿ ಎಕರೆ ನೀರಾವರಿ ಜಮೀನಿಗೆ 40 ಲಕ್ಷ ರೂ. ಹಾಗೂ ಮಳೆ ಆಶ್ರಿತ ಜಮೀನಿಗೆ 30 ಲಕ್ಷ ರೂ. ಹಾಗೂ ಸಂತ್ರಸ್ತರ ಪುನರ್ವಸತಿಗೆ ಭೂಮಿ ಕಳೆದುಕೊಳ್ಳುವ ರೈತರ ನೀರಾವರಿ 30 ಲಕ್ಷ ರೂ. ಹಾಗೂ ಒಣ ಬೇಸಾಯದ ಜಮೀನಿಗೆ…

Read More