Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚಡಚಣ ಪಟ್ಟಣದಲ್ಲಿ ಹಾಡು ಹಗಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ನುಗ್ಗಿದ ದರೋಡೆಕೋರರು | ಚಾಕು-ಬಂದೂಕು ಹಿಡಿದು ಮುಸುಕುಧಾರಿಗಳಿಂದ ದರೋಡೆ ಉದಯರಶ್ಮಿ ದಿನಪತ್ರಿಕೆ ಚಡಚಣ: ರಾಜ್ಯಾದ್ಯಂತ ಬೆಚ್ಚಿ ಬೀಳಿಸುತ್ತಿರುವ ಬ್ಯಾಂಕ್ ದರೋಡೆ ಪ್ರಕರಣಗಳ ಸಾಲಿಗೆ ಇದೀಗ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆ ಕೂಡ ಸೇರ್ಪಡೆಯಾಗಿದೆ. ಕೇವಲ ೨೦ ನಿಮಿಷಗಳ ಒಳಗಾಗಿ ದರೋಡೆ ನಡೆಸಿ ದರೋಡೆಕೋರರು ಪರಾರಿಯಾಗಿದ್ದಾರೆ.ಜಿಲ್ಲೆಯ ಮನಗೂಳಿಯ ಬ್ಯಾಂಕ್ ಲೂಟಿ ಜನರ ಮನದಿಂದ ಮಾಸುವ ಮುನ್ನವೆ ಸಿನಿಮಿಯ ಮಾದರಿಯಲ್ಲಿ ಮಂಗಳವಾರ ಚಡಚಣ ಪಟ್ಟಣದಲ್ಲಿ ಹಾಡು ಹಗಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೂಟಿ ಮಾಡಲಾಗಿದೆ.ಮಂಗಳವಾರ ಸಂಜೆ ೬.೩೦ರ ಸಮಯಕ್ಕೆ ಅಪರಿಚಿತ ಮುಸುಕುಧಾರಿಗಳು ಸುಮಾರು ೩ ರಿಂದ ೪ ಜನ ಆಯುಧ ಹೊಂದಿದವರು ಗೇಟ್ ಲಾಕ್ ಮಾಡದೇ ಸಿಬ್ಬಂದಿ ಕೆಲಸದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಒಳನುಗ್ಗಿದ ಮೂವರು ಮುಸುಕುಧಾರಿಗಳು ಬ್ಯಾಂಕಿನ ಒಳಗೆ ನುಗ್ಗಿ ಬ್ಯಾಂಕ್ ಸಿಬ್ಬಂದಿಗಳ ಕೈಕಟ್ಟಿ, ಮ್ಯಾನೇಜರ್ ಗೆ ಥಳಿಸಿ, ಆಯುಧ ಪಿಸ್ತೂಲ್ ತೋರಿಸಿ ಗುಂಡು ಹಾರಿಸಿ ಅವರಿಂದ…
ಅಕ್ಕಮಹಾದೇವಿ ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾದಾನಕ್ಕಿಂತ ಸಂಸ್ಕಾರ ಜ್ಞಾನ ಬಹಳ ಮುಖ್ಯವಾಗಿದೆ. ಶಿಸ್ತು ಎಂಬುದು ಜೀವನದ ಅಡಿಗಲ್ಲು. ಹಾಗಾಗಿ ವಿದ್ಯಾರ್ಥಿಗಳಿಗೆ ಶಿಸ್ತು, ಸಹನೆ ತುಂಬಾ ಮುಖ್ಯ ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮವಿವಿ ಕುಲಸಚಿವ ಶಂಕರಗೌಡ ಎಸ್.ಸೋಮನಾಳ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಉಚಿತ ಪುಸ್ತಕ ವಿತರಣಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಗುರಿ ಇರಬೇಕು. ಆ ಗುರಿಯನ್ನ ಇಡೇರಿಸುವ ದಿಸೆಯಲ್ಲಿ ಸತತ ಪರಿಶ್ರಮ ವಹಿಸಬೇಕು. ಶಿಕ್ಷಕ ವೃತ್ತಿ ಜಗತ್ತಿನಲ್ಲಯೇ ಅತ್ಯಂತ ಶ್ರೇಷ್ಠ ಹುದ್ದೆಯಾಗಿದೆ. ವಿದ್ಯಾರ್ಥಿಗಳು ಜೀವನದಲ್ಲಿ ತಮ್ಮ ಗುರಿಯನ್ನು ತಲುಪಬೇಕಾದರೆ ಮೊಬೈಲ್ಗಳಿಂದ ದೂರವಿದ್ದು, ನಿರಂತರ ಓದುವ ಹವ್ಯಾಸ ಬೆಳೆಸಿಕೊಂಡರೆ ಗುರಿ ಮುಟ್ಟಲು ಸಾಧ್ಯ. ಆದಷ್ಟು ಮಕ್ಕಳು ಪತ್ರಿಕೆಗಳನ್ನು ಓದುವ ಹವ್ಯಾಸಗಳನ್ನು ಬೆಳಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಚೇರಮನ್ನರು ಹಾಗೂ…
ಸಿಂದಗಿ ನಗರ ಸಭೆಯ ಅಧ್ಯಕ್ಷ ಶಾಂತವೀರ ಮನಗೂಳಿ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ ಹಾಗೂ ಬೆಂಗಳೂರಿನ ಸಣ್ಣ ಕೈಗಾರಿಕೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಎಂ.ಎಸ್.ಎA.ಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ಝಡ್.ಇ.ಡಿ ಮತ್ತು ಲೀನ್ ಯೋಜನೆಯ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಇತ್ತೀಚೆಗೆ ಸಿಂದಗಿಯ ಹೊಸ ಮಿನಿ ವಿಧಾನಸೌಧದ ಹತ್ತಿರದ ಹೋಟೆಲ್ ಡಾಲ್ಪಿನ್ನಲ್ಲಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಂದಗಿ ನಗರ ಸಭೆಯ ಅಧ್ಯಕ್ಷರಾದ ಶಾಂತವೀರ ಎಂ ಮನಗೂಳಿ ಅವರು ಝಡ್.ಇ.ಡಿ ಮತ್ತು ಲೀನ್ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಬೆಂಗಳೂರಿನ ಸಣ್ಣ ಕೈಗಾರಿಕೆಗಳ ಸಂಘದ ಉಪಾಧ್ಯಕ್ಷರಾದ ನಿಂಗಣ್ಣ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ವಿವಿಧ ಕೈಗಾರಿಕಾ ಸಂಘಗಳ ಅಧ್ಯಕ್ಷರಾದ ಎಸ್.ವಿ.ಪಾಟೀಲ್, ಗಂಗಾಧರ ಸಂಬಣ್ಣಿ, ಪೀಟರ ಅಲೆಕ್ಸಾಂಡರ, ತಮ್ಮಣ್ಣ ಈಳಗೇರ, ಉಪಾಧ್ಯಕ್ಷರಾದ ಬಸವರಾಜ ಅಂಬಲಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಗಂಗಾಧರ ದೇಸಾಯಿ ಅವರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ವತಿಯಿಂದ ಕರ್ನಾಟಕ ರಾಜ್ಯ ಕೌಶಲ್ಯ ಓಲಿಂಪಿಕ್ಸ್–೨೦೨೫ನ್ನು ಆಯೋಜಿಸಲಾಗಿದೆ. ೧೬ ರಿಂದ ೨೫ ವರ್ಷದ ಯುವಜನತೆ ೬೩ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಅವಕಾಶವಿದೆ. ಜಿಲ್ಲಾಮಟ್ಟದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸುಧಾರಿತ ತರಬೇತಿ ನೀಡಿ ವಿಭಾಗ ಮಟ್ಟ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತಿದೆ. ೨೦೨೬ನೇ ಸಾಲಿನ ವಿಶ್ವ ಕೌಶಲ್ಯ ಸ್ಪರ್ಧೆ ಚೀನಾದ ಶಾಂಘೈ ನಗರದಲ್ಲಿ ನಡೆಯಲಿದೆ. ಇದರಲ್ಲಿ ಭಾರತವನ್ನು ಪ್ರತಿನಿಧಿಸಲು ಅವಕಾಶವಿರುತ್ತದೆ. ಈ ಕೌಶಲ್ಯ ಸ್ಪರ್ಧೆಗೆ hಣಣಠಿ://ತಿತಿತಿ.sಞiಟಟiಟಿಜiಚಿಜigiಣಚಿಟ.gov.iಟಿ/home ಲಿಂಕ್ ಬಳಸಿ ಸೆಪ್ಟೆಂಬರ್ ೩೦ರೊಳಗಾಗಿ ನೋಂದಾಯಿಸಿಕೊಳ್ಳಬಹುದು.ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲಿ ಇಂಡಿಯಾ ಸ್ಕಿಲ್ಸ್-೨೦೨೫ರ ಕುರಿತ ಕರಪತ್ರವನ್ನು ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ವಿಶ್ವ ಕೌಶಲ್ಯ ಸ್ಪರ್ಧೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ವಿಶ್ವದ ಅತಿ ದೊಡ್ಡ ವೃತ್ತಿಪರ ಕೌಶಲ್ಯ ಸ್ಪರ್ಧೆಯಾಗಿದ್ದು, ಚೀನಾದ ಶಾಂಘೈ ನಗರದಲ್ಲಿ ೨೦೨೬ರಲ್ಲಿ ನಡೆಯಲಿದೆ. ಈ ಸ್ಪರ್ಧೆಯ ಭಾಗವಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಕರ್ನಾಟಕ ರಾಜ್ಯ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪೋಷಣ್ ಅಭಿಯಾನ ೨೦೨೫ರ ಅಂಗವಾಗಿ ಚಡಚಣ ಪಟ್ಟಣದ ಅಂಗನವಾಡಿ ಕೇಂದ್ರ ೧೦ ರ ಮರಡಿಯ ಶ್ರೀ ಮಹಾದೇವನ ದೇವಸ್ಥಾನದಲ್ಲಿ ಮಂಗಳವಾರ ಜಾಗೃತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ ಶ್ರೀಮತಿ ಸವಿತಾ ಮಲ್ಲಿಕಾರ್ಜುನ ಧೋತ್ರೆ ಮತ್ತು ಅಂಗನವಾಡಿ ಮೇಲ್ವಿಚಾರಕಿ ಸುಮಿತ್ರಾ ಜತ್ತಿ ಮತ್ತು ಮಹಿಳಾ ಮತ್ತು ಶಿಶು ಅಭೀವೃದ್ಧಿ ಇಲಾಖೆಯ ಸಿಬ್ಬಂಧಿಗಳಾದ ವಿ.ಆಯ್.ಕನಸೆ, ಪಿ.ಸಿ.ಇಳೆಗಾಂವ, ಎಸ್.ಎಸ್.ಸೌದಾಗರ ಅವರು ಜಂಟಿಯಾಗಿ ಜ್ಯೋತಿ ಬೇಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಅಂಗನವಾಡಿ ಮೇಲ್ವಿಚಾರಕಿ ಸುಮಿತ್ರಾ ಜತ್ತಿ ಅವರು ಮಾತನಾಡಿ, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಮತ್ತು ಚಿಕ್ಕಮಕ್ಕಳ ಪಾಲಕರಿಗೆ ಪೌಷ್ಟಿಕ ಆಹಾರದ ಮಹತ್ವದ ಕುರಿತು ಮಾಹಿತಿ ನೀಡಲಾಯಿತು.“ಮೊದಲ ೧,೦೦೦ ದಿನಗಳ ಪೋಷಣೆ ಮಗುವಿನ ಆರೋಗ್ಯ ಮತ್ತು ಬುದ್ಧಿ ವಿಕಾಸಕ್ಕೆ ಅಡಿಪಾಯ” ಎಂದು ಸುಮಿತ್ರಾ ಜತ್ತಿ ತಿಳಿಸಿದರು.ಸ್ಥಳೀಯ ಆರೋಗ್ಯ ಸಿಬ್ಬಂದಿ ಸಮತೋಲಿತ ಆಹಾರ ಪದ್ಧತಿ, ಹಣ್ಣು-ತರಕಾರಿ ಸೇವನೆ, ಶುದ್ಧ ನೀರಿನ ಅಗತ್ಯತೆ ಹಾಗೂ ಸ್ತನ್ಯಪಾನದ ಮಹತ್ವವನ್ನು ಗರ್ಭಿಣಿಯರು, ಹಾಲುಣಿಸುವ ತಾಯಂದಿರರಿಗೆ ವಿವರಿಸಿದರು.ಕಾರ್ಯಕ್ರಮದಲ್ಲಿ ಮಹಿಳಾ ಸ್ತ್ರೀ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ನಿಗದಿತ ಸಮಯಕ್ಕೆ ಬಾರದ ಬಸ್ಗಳು ಹಾಗೂ ಬಸ್ಗಳ ಕೊರತೆಯಿಂದ ಸಾರ್ವಜನಿಕರು ಸೇರಿದಂತೆ ವಿದ್ಯಾರ್ಥಿಗಳು ಬಾಗಿಲಲ್ಲಿ ನಿಂತು ಪ್ರಯಾಣಿಸುವಂತಾಗಿದೆ.ಪಟ್ಟಣ ಹಾಗೂ ತಾಲ್ಲೂಕು ಕೇಂದ್ರದಲ್ಲಿನ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಳೆದ ೮ ತಿಂಗಳುಗಳಿಂದ ಬಸ್ ಕೊರತೆಯ ಸಮಸ್ಯೆ ಎದುರಿಸುತ್ತಿದ್ದು, ನಿತ್ಯ ಅಪಾಯಕಾರಿ ಬಾಗಿಲು ಪ್ರಯಾಣ ಮಾಡುವಂತಾಗಿದೆ. ಈ ಕುರಿತು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಿವರಾಜ್ ತಳವಾರ ಮಾತನಾಡಿ, ಬೆಳಿಗ್ಗೆ ಶಾಲಾ ಕಾಲೇಜು ಆರಂಭ ಸಮಯಕ್ಕೆ ಬಸ್ಗಳ ಕೊರತೆ ಅಷ್ಟಾಗಿ ಕಾಡುವುದಿಲ್ಲ. ಆದರೆ ಮಧ್ಯಾನ್ಹ ೧೨ ಗಂಟೆಗೆ ಹಾಗೂ ಸಾಯಂಕಾಲ ೫ ಗಂಟೆಗೆ ಶಾಲೆ, ಕಾಲೇಜುಗಳು ಕೊನೆಗೊಳ್ಳುವ ಸಮಯಕ್ಕೆ ಬಸ್ಗಳು ಇರದ ಕಾರಣ ನಂತರದ ಸಮಯದ ಬಸ್ಗಳಲ್ಲಿ ನೂಕು ನೂಗ್ಗಲು ಉಂಟಾಗಿ ಬಹುತೇಕ ಪ್ರಯಾಣಿಕರು ಅದರಲ್ಲೂ ಶಾಲಾ ವಿದ್ಯಾರ್ಥಿಗಳು ನಿಂತು ಪ್ರಯಾಣಿಸುವ ಅನಿವಾರ್ಯತೆಗೆ ಒಳಗಾಗಬೇಕಾಗಿದೆ.ಕಾಲೇಜು ಬಿಡುವ ಮಧ್ಯಾನ್ಹದ ೧೨.೩೦ ಗಂಟೆಗೆ ಹಾಗೂ ಶಾಲೆ ಬಿಡುವ ಸಾಯಂಕಾಲ ೫.೩೦ ಗಂಟೆಯ ಸಮಯಕ್ಕೆ ಸರಿಯಾಗಿ ದೇವರಹಿಪ್ಪರಗಿಯಿಂದ ಇಂಡಿ ,…
ಸರದಿ ಉಪವಾಸ ಸತ್ಯಾಗ್ರಹದಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಅಸಮಾಧಾನ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸರಕಾರ ಕೈಗಾರಿಕಾ ವಸಾಹಾತು ಪ್ರದೇಶಕ್ಕೆ ವಶಪಡಿಸಿಕೊಳ್ಳುವ ಜಮೀನುಗಳಿಗೆ ರೈತರ ಬೇಡಿಕೆಯಂತೆ ೫೦ ಲಕ್ಷ, ಕೋಟಿವರೆಗೆ ಪರಿಹಾರ ಧನ ಕೊಟ್ಟ ಉದಾಹರಣೆಗಳು ಸಾಕಷ್ಟಿದ್ದರೂ ಕೃಷ್ಣಾ ನದಿ ಹಿನ್ನೀರಿನ ಮುಳಗಡೆಯಾಗುವ ಜಮೀನುಗಳಿಗೆ ಪರಿಹಾರ ಧನ ಕೊಡುವಲ್ಲಿ ಏಕೆ ತಾರತಮ್ಯ ಮಾಡುತ್ತಿದೆ ಎನ್ನುವುದೇ ಈ ಭಾಗದ ರೈತರಿಗೆ ಇವತ್ತಿಗೂ ಪ್ರಶ್ನೆಯಾಗಿ ಉಳಿಯುವದಕ್ಕೆ ನಮ್ಮನ್ನಾಳುವ ಜನಪ್ರತಿನಿಧಿಗಳ ಬೇಜವಾಬ್ದಾರಿತನ ಕಾರಣವಾಗಿದೆ ಎಂದು ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯ ಪ್ರಕಾಶ ಅಂತರಗೊಂಡ ಹೇಳಿದರು.ಪಟ್ಟಣದ ಯುಕೆಪಿ ವೃತ್ತದ ಪ್ರವಾಸಿ ಮಂದಿರದ ಎದುರುಗಡೆ ಕೃಷ್ಣಾ ಮೇಲ್ದಂಡೆ ಯೋಜನೆಯ ೫೨೪ಮೀ ಎತ್ತರಿಸುವ ಅಡಿಯಲ್ಲಿ ಮುಳಗಡೆಯಾಗುವ ಜಮೀನುಗಳಿಗೆ ಯೋಗ್ಯ ಬೆಲೆ ಸಿಗಬೇಕೆಂದು ಆಗ್ರಹಿಸಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರು ಹಮ್ಮಿಕೊಂಡ ಸರದಿ ಉಪವಾಸ ಸತ್ಯಾಗ್ರಹದ ೨ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸುವದರ ಜೊತೆಗೆ ಬೆಂಬಲ ನೀಡಿ ಮಾತನಾಡಿದರು.ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ಇಂದಿನ ಸಚಿವ ಸಂಪುಟದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ…
ಯುಕೆಪಿ 3ನೇ ಹಂತ ಯೋಜನೆ | ನೀರಾವರಿ ಭೂಮಿಗೆ ರೂ.40 ಲಕ್ಷ ಪರಿಹಾರ ನೀಡಲು ಸಚಿವ ಸಂಪುಟ ನಿರ್ಧಾರ ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ(ಯುಕೆಪಿ) ಮೂರನೇ ಹಂತದ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಮಂಗಳವಾರ ಪರಿಹಾರ ನಿಗದಿ ಮಾಡಿದ್ದು, ನೀರಾವರಿ ಭೂಮಿಗೆ ಎಕರೆಗೆ 40 ಲಕ್ಷ ರೂ. ಮತ್ತು ಒಣ ಭೂಮಿಗೆ ಎಕರೆಗೆ 30 ಲಕ್ಷ ರೂ. ಪರಿಹಾರವನ್ನು ನೀಡಲು ನಿರ್ಧರಿಸಿದೆ.ಈ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಯುಕೆಪಿ ಮೂರನೇ ಹಂತವು ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ರಿಂದ 524 ಮೀಟರ್ಗೆ ಹೆಚ್ಚಿಸುವುದನ್ನು ಒಳಗೊಂಡಿರುತ್ತದೆ. ಇದು ಶೇಖರಣಾ ಸಾಮರ್ಥ್ಯವನ್ನು 100 ಟಿಎಂಸಿ ಅಡಿ ಹೆಚ್ಚಿಸುತ್ತದೆ. ಇದಕ್ಕೆ 1.33 ಲಕ್ಷ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಗತ್ಯವಿದೆ. ಇದರಲ್ಲಿ ಮುಳುಗಡೆಯಾಗುವ 75,563 ಎಕರೆ ಭೂಮಿ ಸಹ ಸೇರಿದೆ. ಈ ಪ್ರದೇಶದ ರೈತರು, ಸಚಿವರು ಮತ್ತು ಶಾಸಕರು ನೀರಾವರಿ ಭೂಮಿಗೆ ಎಕರೆಗೆ ಕನಿಷ್ಠ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿನ ಮನಗೂಳಿ ರಸ್ತೆಯ ಇಬ್ರಾಹಿಂಪುರ ಹಿರೇಮಠದಲ್ಲಿ ಇದೇ ದಿ. 19 ರಂದು ಲಿಂ. ಶ್ರೀ. ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳ 114ನೇ ಪುಣ್ಯಾರಾಧನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಪುಣ್ಯಾರಾಧನೆಯ ಅಂಗವಾಗಿ ಅಂದು ಕುಂಭಮೇಳ, ಶ್ರೀಗಳ ಕರ್ತೃಗದ್ದುಗೆಗೆ ರುದ್ರಾಭಿಷೇಕ, ವಿಶೇಷ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.ಪುಣ್ಯಾರಾಧನೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೂಜ್ಯರ ಕೃಪೆಗೆ ಪಾತ್ರರಾಗಬೇಕೆಂದು ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳ ವಂಶಸ್ಥರಾದ ವಿರುಪಾಕ್ಷಯ್ಯ ಹಿರೇಮಠ, ಪ್ರಭು ಹಿರೇಮಠ, ಉಮೇಶ ಹಿರೇಮಠ, ಮಹೇಶ ಹಿರೇಮಠ, ಶಿವಲಿಂಗಯ್ಯ ಹಿರೇಮಠ ಅವರು ಕೋರಿದ್ದಾರೆ.ಪುಣ್ಯಾರಾಧನೆಯ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವೂ ಇಬ್ರಾಹಿಂಪುರ ಹಿರೇಮಠದಲ್ಲಿ ಪುರಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಳೆದ ದಿ. 14 ರಿಂದ ಪುರಾಣ ಪ್ರಾರಂಭವಾಗಿದ್ದು, ದಿ.18 ರಂದು ಮಂಗಲಗೊಳ್ಳುವುದು. ಬೆಳಗಾವಿ ಜಿಲ್ಲೆಯ ಮಾಂಜರಿ, ತುಂಗಳ, ಕೊಕಟನೂರ ಕಾಡಸಿದ್ಧೇಶ್ವರ ಮಠದ ಶ್ರೀ ಗುರುಶಾಂತಲಿಂಗ ದೇಶಿಕೇಂದ್ರ ಶಿವಾಚಾರ್ಯರು ಪುರಾಣವನ್ನು ನಡೆಸಿಕೊಡುತ್ತಿದ್ದಾರೆ. ಪ್ರತಿದಿನ ಸಂಜೆ 6.30 ರಿಂದ 8 ಗಂಟೆಯವರೆಗೆ ಪುರಾಣ ನಡೆಯುತ್ತಿದ್ದು, ಪುರಾಣ ಕೇಳಲು ಬಹುಸಂಖ್ಯೆಯಲ್ಲಿ ಭಕ್ತರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘ(ರಿ) ನಾಗರಾಭಾವಿ ಬೆಂಗಳೂರು, ಇದರ ವಿಜಯಪುರ ಜಿಲ್ಲಾ ಶಾಖೆ ಅಡಿಯಲ್ಲಿ ಸದಸ್ಯತ್ಪ ಅಭಿಯಾನ ಹಾಗೂ ತಿಕೋಟಾ ತಾಲೂಕಿನ ನೂತನ ಅಧ್ಯಕ್ಷರಾಗಿ ಹಣುಮಂತ ಸಿದ್ದಪ್ಪ ಸೂರ್ಯವಂಶಿ ಹಾಗೂ ಉಪಾಧ್ಯಕ್ಷರಾಗಿ ಅನೀಲ ಬಸವರಾಜ ಕಾಂಬಳೆ, ಭಾರತ ಏಕನಾಥ ಜಾಧವ, ಯಲ್ಲಪ್ಪ ದಾಬಡೆ ಆಯ್ಕೆಯಾಗಿದ್ದಾರೆ.ಸೋಮವಾರ ತಿಕೋಟಾ ಸಮುದಾಯದ ಭವನದಲ್ಲಿ ಜಿಲ್ಲಾ ಅಧ್ಯಕ್ಷ ಶ್ರೀನಿವಾಸಮೂರ್ತಿ ಶಾಪೂರ ನೇತೃತ್ವದಲ್ಲಿ ನಡೆದ ಸದಸ್ಯತ್ವ ಅಭಿಯಾನ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಗೌರವಾಧ್ಯಕ್ಷರಾಗಿ ಯಲ್ಲಪ್ಪ ಸೋಮಣ್ಣ ಹೋನಕಟ್ಟಿ. ಪ್ರಧಾನ ಕಾರ್ಯದರ್ಶಿಯಾಗಿ ನಾತಾಜಿ ಸಕಾರಾಮ ಹೋನಕಟ್ಟಿ, ಸಿದ್ದು ಸೂರ್ಯವಂಶಿ, ಖಜಾಂಚಿಯಾಗಿ ಲಕ್ಕಪ್ಪಾ ಹೊಸಮನಿ, ಸಂಘಟನಾ ಕಾರ್ಯದರ್ಶಿಯಾಗಿ ಮಾರುತಿ ಸಮಗಾರ, ಮೋಹನ ತಾಜವ, ಯಶವಂತ ಸಮಗಾರ, ಸದಸ್ಯರಾಗಿ ಶೋಭಾ ಚವ್ಹಾಣ, ಗಣಪತಿ ಶಿಂಧೆ, ಅಮಗೊಂಡ ಹೋನಕಟ್ಟಿ, ಮೋಹನ ಮಾನೆ, ವಿಠ್ಠಲ ಸಂಕಪಾಳ ನೂತನ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಶ್ರೀನಿವಾಸಮೂರ್ತಿ ಶಹಾಪುರ ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲೆಯ ಮತ್ತು ತಿಕೋಟಾ ತಾಲೂಕಿನ ಹರಳಯ್ಯ…
