Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಚಡಚಣ: ಸ್ಥಳೀಯ ಶ್ರೀ ಸಮಗಾರ ಹರಳಯ್ಯ ಸಮಾಜದ ಕಾರ್ಯಾಲಯದಲ್ಲಿ ಹರಳಯ್ಯ ಸಮಾಜದ ವತಿಯಿಂದ ಸಮಾಜಕ್ಕೆ ಮಾದರಿಯಾದ ಇಬ್ಬರು ಯುವಕರಿಗೆ ಸನ್ಮಾನ ಸಮಾರಂಭ ಮಾಡಲಾಯಿತು.ಈ ಸಂದರ್ಭದಲ್ಲಿ ಉಚಿತವಾಗಿ ಶ್ರೀಶೈಲ ಯಾತ್ರೆಯನ್ನು ಆಯೋಜಿಸಿದ ಸಮಾಜದ ಯುವ ಮುಖಂಡರಾದ ಶ್ರೀ ಹಣಮಂತ ರಾವುತಪ್ಪ. ಹೊನ್ನಾಕಟ್ಟಿ ಅವರನ್ನು ಸನ್ಮಾನಿಸಲಾಯಿತು.ಕಳೆದ ಮೂರು ವರ್ಷಗಳಿಂದ ಶ್ರೀಶೈಲ, ಮಂತ್ರಾಲಯ, ಮಹಾನಂದಿ, ದೇವರ ಹಿಪ್ಪರಗಿಯ ರಾವುತರಾಯ ಸೇರಿದಂತೆ ಹಲವು ಪವಿತ್ರ ಕ್ಷೇತ್ರಗಳಿಗೆ ಸರ್ವ ಸಮಾಜದ 62 ಜನರಿಗೆ ಉಚಿತ ದರ್ಶನ ಮಾಡಿಸಿರುವ ಸೇವೆಯನ್ನು ಶ್ಲಾಘಿಸಲಾಯಿತು.ಇದೇ ವೇಳೆ ಬಡತನ ಮೆಟ್ಟಿ ನಿಂತು ಎಲ್.ಎಲ್.ಬಿ ಪದವಿ ಓದುತ್ತಿರುವ ಸಮಾಜದ ಯುವಕ ಗೋವಿಂದ ಚಂದ್ರಾಮ. ಹರಳೆ ಅವರು ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ಇಂಗ್ಲೀಷ್ ಮಾಧ್ಯಮದಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷರಾದ ಅಮೋಘಸಿದ್ಧ ಮ. ಬಗಲಿ ಅವರು, “ಸಮಾಜದಲ್ಲಿ ಕಾನೂನು ಶಿಕ್ಷಣ ಪಡೆಯುವವರ ಸಂಖ್ಯೆ ಕಡಿಮೆ ಇರುವುದರಿಂದ ಗೋವಿಂದ ಹರಳೆ ಅವರು ಯುವಕರಿಗೆ ಮಾದರಿಯಾಗಬೇಕು. ಹೆಚ್ಚಿನವರು ಕಾನೂನು ವಿದ್ಯಾಭ್ಯಾಸದ…
ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ್ ಎಮ್ ಇಟ್ಟಿಜಮಖಂಡಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಮಡಿಲಲ್ಲಿರುವ ಜಮಖಂಡಿ ತಾಲೂಕಿನ ಸಣ್ಣ ಗ್ರಾಮ ತುಬಚಿ. ಇಲ್ಲಿರುವ ಶ್ರೀ ಶಿವಲಿಂಗೇಶ್ವರ ಮಠವು ಕೇವಲ ಒಂದು ಧಾರ್ಮಿಕ ಕೇಂದ್ರವಲ್ಲ; ಇದು ಹಿಂದೂ ಮತ್ತು ಮುಸ್ಲಿಂ ಬಾಂಧವ್ಯದ ಬೆಸುಗೆಯಾಗಿರುವ ಅಪರೂಪದ ಪುಣ್ಯಕ್ಷೇತ್ರ. ಜಾತಿ-ಮತಗಳ ಬೇಲಿ ಮೀರಿ ನಿಂತಿರುವ ಈ ಮಠದ ಇತಿಹಾಸ ಮತ್ತು ಪರಂಪರೆ ನಾಡಿಗೆ ಮಾದರಿಯಾಗಿದೆ.ಐತಿಹಾಸಿಕ ಹಿನ್ನೆಲೆ ಮತ್ತು ಪವಾಡಶಿವಲಿಂಗೇಶ್ವರ ಮಹಾಸ್ವಾಮಿಗಳು ನಡೆದಾಡುವ ದೇವರೆಂದೇ ಪ್ರಸಿದ್ಧರು. ಶತಮಾನಗಳ ಹಿಂದೆ ಈ ಭಾಗದಲ್ಲಿ ಸಂಚರಿಸುತ್ತಿದ್ದಾಗ, ಅವರು ತೋರಿದ ಪವಾಡಗಳು ಮತ್ತು ನೀಡಿದ ಸಮಾನತೆಯ ಸಂದೇಶವು ಎಲ್ಲ ವರ್ಗದ ಜನರನ್ನು ಆಕರ್ಷಿಸಿತು.ಪೀಠಾಧಿಕಾರ ಮತ್ತು ಪರಂಪರೆಡಾ. ಅಲ್ಲಮಪ್ರಭು ಪೂಜಾರರು ಬೆಳಗಾವಿಯ ಐತಿಹಾಸಿಕ ರುದ್ರಾಕ್ಷಿ ಮಠದ ಪೀಠಾಧಿಕಾರವನ್ನು ವಹಿಸಿಕೊಂಡ ನಂತರ, ಮಠದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಿದ್ದಾರೆ. ಇವರು ಕೇವಲ ಒಂದು ಮಠಕ್ಕೆ ಸೀಮಿತವಾಗದೆ,ತುಬಚಿ ಶ್ರೀ ಶಿವಲಿಂಗೇಶ್ವರ ಮಠದ ಜವಾಬ್ದಾರಿಯನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಎರಡು ಮಠಗಳ ನಡುವೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ೧೧೯ನೇ ಜಯಂತಿ ಕಾರ್ಯಕ್ರಮವನ್ನು ಏಪ್ರಿಲ್ ೫ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಸೆಟ್ಲೈಟ್ ಬಸ್ ನಿಲ್ದಾಣದ ಹತ್ತಿರ ಇರುವ ಡಾ. ಬಾಬು ಜಗಜೀವನರಾಂ ವೃತ್ತದಿಂದ ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ಜರುಗಲಿದೆ.ಈ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಹಿಳೆ ಪ್ರತಿ ವಿಭಾಗದಲ್ಲಿ ತಮ್ಮ ಪ್ರತಿಭೆ ತೋರುವುದರ ಮೂಲಕ ಪ್ರಬುದ್ಧತೆ ತೋರಿದ್ದಾಳೆ ಎಂದು ಸದಯ್ಯನಮಠ ವೀರಗಂಗಾಧರ ಸ್ವಾಮೀಜಿ ಹೇಳಿದರು.ಪಟ್ಟಣದ ಕಲ್ಮೇಶ್ವರ ಸಭಾವನದಲ್ಲಿ ಬುಧವಾರ ವುಮನ್ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ಅಡಿ ಜರುಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.ಮಹಿಳೆ ಅಬಲೆ ಎನ್ನುವ ಕಾಲ ಮುಗಿಯಿತು. ಏನಿದ್ದರೂ ಈಗ ಮಹಿಳೆ ಸಬಲೆ ಹಾಗೂ ಸರ್ವರಂಗದಲ್ಲೂ ಸಾಧಕಿ ಎಂದರು.ತವರುಮನೆ ಟ್ರಸ್ಟ್ ಅಧ್ಯಕ್ಷೆ ಮಂಜುಳಾ ನಾಯಕ, ಆರೋಗ್ಯ ಇಲಾಖೆಯ ಸುಕನ್ಯಾ ಚಳಗೇರಿ, ಪಿಎಸ್ಐ ಪಿ.ಎಂ.ಚೌರ, ಮೀನಾಕ್ಷಿ ಮಸಬಿನಾಳ, ರೇಣುಕಾ ಬಿರಾದಾರ ಮಹಿಳೆಯರ ಸಾಧನೆಗಳ ಕುರಿತು ಮಾತನಾಡಿದರು.ಸರಸ್ವತಿ ಬಿರಾದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ದೇವಣಗಾಂವ, ಶಬಾನಾ ಯಲಗಾರ, ಪುಷ್ಪಾ ಬಿರಾದಾರ, ಅರ್ಚನಾ ಪಾಟೀಲ, ದಾನಮ್ಮ, ನಂದಿನಿ ಕೋಟ್ಯಾಳ, ಕಮಲಾ ಬಾಗೇವಾಡಿ, ಭಾಗೀರಥಿ ದೇಗಿನಾಳ, ಕೌಶಲ್ಯಾ ಬಾಗೇವಾಡಿ, ಅಂಬಿಕಾ ಕೊಂಡಗೂಳಿ, ರವೀನಾ ಚವ್ಹಾಣ, ನಾಗಮ್ಮಾ ತಳಕೇರಿ, ಶಾಂತಾಬಾಯಿ ಭೈರೋಡಗಿ, ಸುಮಂಗಲಾ ಇಂಡಿ, ಚಾಂದಬಿ ಆಲಮೇಲ, ರೇಣುಕಾ ದಾನಗೊಂಡ, ಭೋರಮ್ಮಾ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ದಿಂದ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ಹೆಗ್ಗಡೆ ಅಮ್ಮನವರ ಹುಟ್ಟುಹಬ್ಬದಂಗವಾಗಿ ಗುರುವಾರ ಸಂಸ್ಥೆಯ ಫಲಾನುಭವಿಗಳಿಗೆ ಹಣ್ಣು-ಹಂಪಲ ವಿತರಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಪ್ರಸನ್ನ ಆರ್. ಅವರು, ಆಶಾಕಿರಣವಾಗಿರುವ ಹೇಮಾವತಿ ಹೆಗ್ಗಡೆ ಅಮ್ಮನವರು ಅನೇಕ ಮಹಿಳೆಯರ ಬದುಕಿಗೆ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ತಾಲೂಕಿನದ್ಯಂತ ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ ಪ್ರತಿ ತಿಂಗಳು ಸಂಸ್ಥೆಯು ಅಸಹಾಯಕ ಹಾಗೂ ಆಶಕ್ತರಿಗೆ ತಾಲೂಕಿನಲ್ಲಿ 54 ಜನರಿಗೆ ತಲಾ ರೂ 1000/-ಹಾಗೂ ಸಿರಿ ಧಾನ್ಯದಿಂದ ತಯಾರಿಸಿರುವ ಪುಷ್ಟಿಯನ್ನು ವಿತರಣೆ ಮಾಡಲಾಗುತ್ತಿದೆ. ಈ ಮಾಶಾಸನ ಫಲಾನುಭವಿಗಳಿಗೆ ಹೇಮಾವತಿ ಅಮ್ಮನವರ ಹುಟ್ಟು ಹಬ್ಬದಂಗವಾಗಿ ಸಂಸ್ಥೆಯು ಹಣ್ಣು ಹಂಪಲಗಳನ್ನು ಅವರ ಮನೆ ಬಾಗಿಲಿಗೆ ಹೋಗಿ ತಲುಪಿಸುವ ಮೂಲಕ ಅಮ್ಮನವರ ಹುಟ್ಟುಹಬ್ಬವನ್ನು ಆಚರಿಸುವ ಜೊತೆಗೆ ಫಲಾನುಭವಿಗಳ ಆರೋಗ್ಯದ ಬಗ್ಗೆ ಹಾಗೂ ಅವರ ದೈನಂದಿನ ಚಟುವಟಿಕೆಗಳ ಬಗ್ಗೆ ವಿಚಾರಿಸಲಾಗುತ್ತಿದೆ ಎಂದರು.ಮಾಶಾಸನ ಸದಸ್ಯರು ಅಮ್ಮನವರ ಹುಟ್ಟು ಹಬ್ಬಕ್ಕೆ ಶುಭಾಶಯಗಳು ಹಾಗೂ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಿವೇಕ ಬ್ರಿಗೇಡ್ ಸಂಘಟನೆಯು ಜ್ಞಾನದಾಸೋಹಿ ಬಂಥನಾಳ ಸಂಗನಬಸವ ಶಿವಯೋಗಿಗಳ ಸ್ಮಾರಕವನ್ನು ವಿಜಯಪುರದಲ್ಲಿ ಸರ್ಕಾರ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ತಹಸೀಲ್ದಾರ ಅವರಿಗೆ ಗುರುವಾರ ಮನವಿ ಸಲ್ಲಿಸಿತು.ಈ ಸಂದರ್ಭದಲ್ಲಿ ವಿವೇಕ ಬ್ರಿಗೇಡ್ ಸಂಘಟನೆಯ ಮುಖ್ಯಸ್ಥ ವಿನುತ ಕಲ್ಲೂರ ಮಾತನಾಡಿ, ಶೈಕ್ಷಣಿಕ ಕ್ರಾಂತಿಯ ಹರಿಕಾರ, ಅಕ್ಷರ ದಾಸೋಹಿ ಬಂಥನಾಳದ ಲಿಂಗೈಕ್ಯ ಸಂಗನಬಸವ ಶಿವಯೋಗಿಗಳು ವಿಜಯಪುರ ಜಿಲ್ಲೆಯಾದ್ಯಂತ ಶಿಕ್ಷಣ ಕ್ರಾಂತಿ ಮಾಡಿದ್ದಾರೆ. ಅಂತಹ ಮಹಾ ಪುರುಷರ ಜೀವನ ಆದರ್ಶಗಳು ನಮ್ಮ ಯುವ ಪೀಳಿಗೆಗೆ ತಿಳಿಸಲು ಹಾಗೂ ಅವರ ಸಂದೇಶ ಶಾಶ್ವತವಾಗಿ ಉಳಿಯಲು ಜಿಲ್ಲೆಯಲ್ಲಿ ಸಂಗನಬಸವ ಶಿವಯೋಗಿಗಳ ಭವ್ಯ ಸ್ಮಾರಕವಾಗಬೇಕು. ಈ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದರು. ಮನವಿ ಪತ್ರವನ್ನು ಗ್ರೇಡ್-2 ತಹಸೀಲ್ದಾರ ಎಚ್.ಎಸ್.ಅರಕೇರಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಶಿವರುದ್ರಯ್ಯ ಹಿರೇಮಠ, ಮಣಿಕಂಠ ಕಲ್ಲೂರ, ರವಿಗೌಡ ಚಿಕ್ಕೊಂಡ, ಉಮೇಶ ಅವಟಿ, ಮಲ್ಲು ಬನಾಶಿ, ಶಿವಾನಂದ ಮ್ಯಾಗೇರಿ, ಸಂಗನಗೌಡ ಪಾಟೀಲ, ಸಚೀನ ಕಲ್ಲೂರ, ಭೀಮು ಬಸ್ತಾಳ,ಶಿವಾನಂದ ಭಟ್ಟಲ, ಶ್ರೀಶೈಲ ಕೋಲಕಾರ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದ ಬಸವೇಶ್ವರ ವೃತ್ತದ ಹತ್ತಿರ ಜೀಣೋದ್ಧಾರವಾಗುತ್ತಿರುವ ಹನುಮಾನ ದೇವಸ್ಥಾನದ ಮುಂಭಾಗ ಯೂಟ್ಯೂಬ್ ಯಶೋಧರ ತಂಡದ ಮುಖ್ಯಕಲಾವಿದ ಶಿವಪುತ್ರ ಹಾಗೂ ಅವರ ತಂಡದಿಂದ ಹನುಮ ಜಯಂತಿಯಂಗವಾಗಿ ದೇವಸ್ಥಾನಕ್ಕೆ ಆಗಮಿಸಿದ ಜನರಿಗೆ ಪ್ರಸಾದ, ಪಾನಕ ವಿತರಿಸಲಾಯಿತು.ಈ ಸಂದರ್ಭದಲ್ಲಿ ಯೂಟ್ಯೂಬ್ ಕಲಾವಿದ ಶಿವಪುತ್ರ ಮಾತನಾಡಿ, ಭಕ್ತರಿಗೆ ಬೇಡಿದ ವರವನ್ನು ನೀಡುವ ಆಂಜನೇಯ ಸ್ವಾಮಿಯ ಜಯಂತಿ ಪ್ರಯುಕ್ತ ಪ್ರಸಾದ ಸೇವೆ ಸಲ್ಲಿಸಲಾಗುತ್ತಿದೆ. ಆಂಜನೇಯ ಸ್ವಾಮಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದರು.ಈ ಸಂದರ್ಭದಲ್ಲಿ ಯೂಟ್ಯೂಬ್ ಕಲಾವಿದರಾದ ಹನುಮಂತ ಯಶೋದರ, ಆನಂದ ಕಸ್ತೂರಿ, ರಾಜು ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸುಕ್ಷೇತ್ರ ಶ್ರೀಶೈಲ ಕ್ಷೇತ್ರಕ್ಕೆ ತೆರಳಿದ್ದ ಮಲ್ಲಯ್ಯನ ಕಂಬಿಗಳನ್ನು ಭಕ್ತರು ವಿವಿಧ ವಾಧ್ಯ ಮೇಳಗಳೊಂದಿಗೆ ಸಂಭ್ರಮ, ಸಡಗರದಿಂದ ಗುರುವಾರ ಬರಮಾಡಿಕೊಂಡರು.ಕಳೆದ ತಿಂಗಳು ಹೋಳಿಹುಣ್ಣಿಮೆ ಮರುದಿನ ಇಲ್ಲಿಂದ ಪಾದಯಾತ್ರಾ ಭಕ್ತರೊಂದಿಗೆ ಕಂಬಿಗಳು ಪಾದಯಾತ್ರೆ ಮೂಲಕ ಶ್ರೀಶೈಲ ಕ್ಷೇತ್ರಕ್ಕೆ ತೆರಳಿದ್ದವು. ದ್ವಾದಶ ಲಿಂಗಗಳಲ್ಲಿ ಒಂದಾದ ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಕ್ಷೇತ್ರದಲ್ಲಿ ಪ್ರತಿ ವರ್ಷ ಯುಗಾದಿ ಹಬ್ಬದಂದು ನಡೆಯುವ ರಥೋತ್ಸವದಲ್ಲಿ ಈ ಭಾಗದ ಜನರು ಭಾಗವಹಿಸಿ ತಮ್ಮ ತಮ್ಮ ಗ್ರಾಮಗಳಿಗೆ ಆಗಮಿಸುತ್ತಾರೆ. ತದ ನಂತರ ಹುಣ್ಣಿಮೆಗೆ ಆಯಾ ಆಯಾ ಗ್ರಾಮಗಳಿಗೆ ಅಂದು ತೆರಳಿದ್ದ ಮಲ್ಲಯ್ಯನ ಕಂಬಿಗಳು ಆಗಮಿಸುವದು ವಾಡಿಕೆ.ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿರುವ ಕಂಬಿ ಕಟ್ಟೆಗೆ ವಾಡಿಕೆಯಂತೆ ಬುಧವಾರ ರಾತ್ರಿ ಮಲ್ಲಯ್ಯನ ಕಂಬಿಗಳು ಬಂದು ತಲುಪಿದವು. ಗುರುವಾರ ಬೆಳಗ್ಗೆ ಇಲ್ಲಿನ ಭಕ್ತರು ಅಶೋಕ ಕುಂಬಾರರ ಮನೆಗೆ ತೆರಳಿ ಅಲ್ಲಿಂದ ನಗಾರಿ, ದೀವಟಿಗೆ, ಪೂಜಾ ಸಾಮಗ್ರಿಗಳೊಂದಿಗೆ ಕಿರಣ ಕುಲಕರ್ಣಿಯವರ ಮನೆಗೆ, ಗೌಡರ ಮನೆಗೆ ವಿವಿಧ ವಾಧ್ಯ ಮೇಳಗಳೊಂದಿಗೆ ತೆರಳಿ ಅವರನ್ನು ಕರೆದುಕೊಂಡು ಕಂಬಿ ಕಟ್ಟೆಗೆ ಆಗಮಿಸಿದರು.…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪ್ರತಿ ಸಮಸ್ಯೆಗೂ ಒಂದು ಪರಿಹಾರವಿದೆ ಎಂಬ ವಿಶ್ವಾಸ ಮನುಷ್ಯನಲ್ಲಿ ಮೂಡಲು ಕಾರಣ ಆತನ ಜ್ಞಾನದ ಬುನಾದಿ ಮತ್ತು ಆತ ತನ್ನ ಕೆಲಸದಲ್ಲಿ ಇಟ್ಟಿರುವ ನಂಬಿಕೆ.ಮನುಷ್ಯನಿಗೆ ಆತ್ಮವಿಶ್ವಾಸ ಬರುವುದು ಆತ ಸಮಸ್ಯೆ ಗಳನ್ನು ನೋಡುವ ಮತ್ತು ಅವುಗಳನ್ನು ಎದುರಿಸುವ ರೀತಿಯಲ್ಲಿ. ಸಮಸ್ಯೆಯನ್ನು ಕಂಟಕ ಎಂದು ನೋಡಿದಾಗ ಮನುಷ್ಯ ಬೇಸರಕ್ಕೊಳ್ಳಗಾಗುತ್ತಾನೆ ಬದಲಾಗಿ ಸಮಸ್ಯೆಯನ್ನು ಸವಾಲಾಗಿ ಭಾವಿಸಿ ಅದರ ಪರಿಹಾರಗಳನ್ನು ಯೋಚಿಸಿದಾಗ ಸಮಸ್ಯೆಗಳು ಸುಲಭವಾಗಿ ಪರಿಹರಿಸಲ್ಪಡುತ್ತವೆ. ಮತ್ತೆ ಕೆಲ ಜನರು ಪರಿಹಾರದಲ್ಲೂ ಸಮಸ್ಯೆಗಳನ್ನು ಹುಡುಕುವರು.ನಮ್ಮಲ್ಲಿರುವ ಜ್ಞಾನ ಮತ್ತು ನಾವು ವಸ್ತು ವಿಷಯಗಳಲ್ಲಿ ಹೊಂದಿರುವ ವಿಶ್ವಾಸ ಮತ್ತು ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ಕೈಗೊಳ್ಳುವ ಚಟುವಟಿಕೆಗಳು ನಮಗೆ ಸವಾಲನ್ನು ಪರಿಹರಿಸಲು ಶಕ್ತಿಯನ್ನು ನೀಡುತ್ತವೆ.ಆದರೆ ಸಂತೋಷದ ವಿಷಯವೆಂದರೆ ಇತ್ತೀಚಿನ ದಿನಗಳಲ್ಲಿ ಎಲ್ಲರೂ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕುವ ಮತ್ತು ಅವುಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಯಶಸ್ವಿಯಾಗುತ್ತಿದ್ದಾರೆ. ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದ್ದೇ ಇದೆ ಎಂಬ ನಂಬಿಕೆ ಜನರಲ್ಲಿ ಕ್ರಮೇಣ ಹೆಚ್ಚಾಗುತ್ತಿದೆ.…
