Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವರದಿ: ಶ್ರೀಕಂಠ ಈಶ್ವರ್ಹೆಚ್ ಡಿ ಕೋಟೆ: ಹೆಗ್ಗಡದೇವನ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಪತ್ನಿ ಸೌಮ್ಯ ಅನಿಲ್ ಚಿಕ್ಕಮಾದು ರಾಜಕೀಯಕ್ಕೆ ಬರುತ್ತಾರಾ? ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರಾ..? ತೆರೆಮರೆಯಲ್ಲಿ ರಾಜಕೀಯ ಆಗುಹೋಗು ಗಮನಿಸುತ್ತಾ, ಪತಿ ಅನಿಲ್ ಚಿಕ್ಕಮಾದುಗೆ ಸಲಹೆ, ಸೂಚನೆ ನೀಡುತ್ತಾ ಬರುತ್ತಿರುವ ಸೌಮ್ಯ ಅನಿಲ್ ಚಿಕ್ಕಮಾದು ಸಕ್ರಿಯ ರಾಜಕಾರಣಕ್ಕೆ ಧುಮುಕುತ್ತಾರಾ.. ಈ ಎಲ್ಲ ಪ್ರಶ್ನೆಗಳು ಹೆಚ್ ಡಿ ಕೋಟೆ ಅಥವಾ ಸರಗೂರು ತಾಲೂಕಿನ ಮತದಾರರ ಪ್ರಭುಗಳಲ್ಲಿ ಮಾತ್ರ ಉದ್ಭವಿಸುತ್ತಿಲ್ಲ. ಸ್ವತಃ ಕಾಂಗ್ರೆಸ್ ಕಾರ್ಯಕರ್ತರೇ ಮಾತಾಡಿಕೊಳ್ಳುತ್ತಿದ್ದಾರೆ. ಸಭೆ ಸಮಾರಂಭಗಳು ಮುಗಿದ ಬಳಿಕ ರಾಜಕೀಯ ಪಡಸಾಲೆಯಲ್ಲಿ ಕುಳಿತು ಚರ್ಚಿಸುತ್ತಿದ್ದಾರೆ. ಇದಕ್ಕೆ ಕಾರಣವಾಗಿರುವುದು ಸೌಮ್ಯ ಅನಿಲ್ ಚಿಕ್ಕಮಾದು ಕ್ಷೇತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು. ಜೊತೆಗೆ ಅವರ ಪ್ರಬುದ್ಧ ಮಾತುಗಾರಿಕೆ.ನಂಜನಗೂಡು ತಾಲೂಕಿನ ತಾಂಡವಪುರ ಸಮೀಪದ ಹಳ್ಳಿದಿದ್ದಿ ಗ್ರಾಮದ ಸೌಮ್ಯ ಅನಿಲ್ ಇತ್ತೀಚಿನ ದಿನಗಳಲ್ಲಿ ಕ್ಷೇತ್ರದಲ್ಲಿ ಹೆಚ್ಚು ಸಂಚಾರ ಮಾಡುತ್ತಿದ್ದಾರೆ. ಶುಭ ಸಮಾರಂಭಗಳ ಜೊತೆಗೆ ಕೆಲ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲೆಲ್ಲ ಅನಿಲ್…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಪ್ರಾಥಮಿಕ ಶಾಲಾ ಹಂತದಲ್ಲೆ ಮಕ್ಕಳು ಶಿಕ್ಷಣ ಪಡೆಯುವದರ ಜೊತೆಗೆ ಅವರಲ್ಲಿ ದೈನಂದಿನ ಜೀವನದಲ್ಲಿ ವ್ಯವಹಾರಿಕ ಕೌಶಲ್ಯ ಹೆಚ್ಚಳಕ್ಕೆ ಶಾಲೆಯಲ್ಲಿ ಏರ್ಪಡಿಸಿದ ಮಕ್ಕಳ ಸಂತೆ ಸಹಕಾರಿಯಾಗಿದೆ ಎಂದು ಮಾಣಿಕೇಶ್ವರಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಚಿದಾನಂದ ಅವಟಿ ಹೇಳಿದರು.ತಾಲ್ಲೂಕಿನ ಕನಮಡಿ ಗ್ರಾಮದ ಮಾಣಿಕೇಶ್ವರಿ ಶಿಕ್ಷಣ ಸಂಸ್ಥೆಯ ಕನ್ನಡ ಹಾಗೂ ಆಂಗ್ಲ ಮಾಧ್ಯಮದ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಕ್ಕಳು ಸ್ಚಯಂ ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಲು ಈ ಸಂತೆ ಮೇಳ ಮಕ್ಕಳ ಬದುಕಿಗೆ ಸಹಕಾರಿಯಾಗಲಿದೆ ಎಂದರು.ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚನ್ನಯ್ಯ ಮಠಪತಿ ಮಾತನಾಡಿ ಮಕ್ಕಳ ಸಂತೆ ಏರ್ಪಡಿಸುವದರಿಂದ ಮಕ್ಕಳಿಗೆ ತೂಕ, ಲೀಟರ್ ಮಾಪನ, ಸಂಕಲನ, ವ್ಯವಕಲನ , ಗುಣಾಕಾರ ಸೇರಿದಂತೆ ಇತರೆ ಮೌಖಿಕವಾಗಿ ಲೆಕ್ಕ ಮಾಡುವ ಕಲೆ ಬೆಳೆಯುವದು ಎಂದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ ಹೊಸಮನಿ, ಶಂಕರಗೌಡ ಬಿರಾದಾರ, ರಾಮು ಚಡಚಣ, ಮುಖ್ಯೋಪಾಧ್ಯಾಯ ಬಿ.ಎಸ್.ಪಡನೂರ, ಗ್ರಾಮಸ್ಥರು ಮಕ್ಕಳು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ದೇಶಕ್ಕೆ ಸ್ವಾಮಿ ವಿವೇಕಾನಂದರು ದೊಡ್ಡ ಘನತೆಯಾಗಿದ್ದಾರೆ. ಇವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರವಾದ ಜೀವನ ಸಾಗಿಸಬಹುದು ಎಂದು ದೇವರಹಿಪ್ಪರಗಿಯ ಜಿ.ಎಫ್.ಜಿ.ಸಿ. ಕಾಲೇಜಿನ ದೈಹಿಕ ನಿರ್ದೇಶಕ ಮಲ್ಲಿಕಾರ್ಜುನ ಲಕ್ಷ್ಮೀಶ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ. ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಎನ್.ಎಸ್.ಎಸ್. ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಅವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, ಅಮೇರಿಕಾದ ಚಿಕ್ಯಾಗೋ ಸರ್ವಧರ್ಮದಲ್ಲಿ ವಿವೇಕಾನಂದರ ಭಾಷಣವು ಭಾರತದ ಬಗ್ಗೆ ಮೂಡಿದ್ದ ತಪ್ಪು ಕಲ್ಪನೆಯನ್ನು ಹೋಗಲಾಡಿಸಿ ದೇಶಕ್ಕೊಂದು ಘನತೆ ಗೌರವ ತಂದುಕೊಡುವಲ್ಲಿ ಯಶಸ್ವಿಯಾಯಿತು. ಇದು ಇಡೀ ಪಾಶ್ಚಿಮಾತ್ಯ ದೇಶಗಳು ಭಾರತದ ಪಾದಕ್ಕೆರಗಿದ್ದು ಐತಿಹಾಸಿಕ ದಿನವಾಗಿದೆ ಎಂದರು.ಜ್ಞಾನ, ವಿಜ್ಞಾನ, ಆಧ್ಯಾತ್ಮಿಕತೆ, ಸಂಸ್ಕೃತಿ ಹಾಗೂ ಸಂಸ್ಕಾರಗಳಿಗೆ ತವರು ಮನೆಯಂತಿದ್ದ ಭಾರತದ ಬಗ್ಗೆ ಪಾಶ್ಚಿಮಾತ್ಯ ದೇಶಗಳು ತುಚ್ಛ ಭಾವನೆಯನ್ನುಇಟ್ಟುಕೊಂಡಿದ್ದವು. ಪ್ರಾಚೀನ ಕಾಲದಿಂದಲೂ ಭಾರತ ವಿಜ್ಞಾನದ ಎಲ್ಲ ಕ್ಷೇತ್ರಗಳಲ್ಲಿ ಅಪಾರವಾದ ಜ್ಞಾನವನ್ನು ಜಗತ್ತಿಗೆ ಧಾರೆಯೆದಿದೆ. ಭಾರತದ ತತ್ವ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದಲ್ಲಿ ಸ್ಪೀಡ್ ಲಿಮಿಟ್ ಅಳವಡಿಸುವಂತೆ ವಿವೇಕ ಬ್ರಿಗೇಡ್ ಸಂಘಟನೆಯ ಪದಾಧಿಕಾರಿಗಳು ಸೋಮವಾರ ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಅವರಿಗೆ ಮನವಿ ಸಲ್ಲಿಸಿದರು.ಅವರು ಸಲ್ಲಿಸಿದ ಮನವಿಯಲ್ಲಿ ಪಟ್ಟಣದಲ್ಲಿ ಜನಸಂದಣಿ ಮತ್ತು ವಾಹನಗಳ ಸಂಚಾರವು ಕೂಡ ಹೆಚ್ಚಾಗಿದೆ. ವೃದ್ಧರು, ಮಕ್ಕಳು ನಡೆದಾಡುವ ಸ್ಥಳಗಳಲ್ಲಿ ವಾಹನಗಳು ಅತಿ ವೇಗವಾಗಿ ಸಂಚರಿಸುತ್ತಿವೆ. ಇದರಿಂದಾಗಿ ಕೆಲವೊಂದು ಅಪಘಾತಗಳು ಆಗುತ್ತಿವೆ. ಪಟ್ಟಣ ವ್ಯಾಪ್ತಿಯಲ್ಲಿ ಬರುವ ತಹಸೀಲ್ದಾರ್ ಕಚೇರಿಯಿಂದ ವಿಜಯಪುರ ರಸ್ತೆಯ ಬಸವೇಶ್ವರ ಮಹಾವಿದ್ಯಾಲಯದವರೆಗೆ ಮತ್ತು ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ವಾಹನಗಳ ಚಾಲನೆ ಮಿತಿ 40 ಕಿ.ಮೀ. ಗಂಟೆಗೆ ಸ್ಪೀಡ್ ಲಿಮಿಟ್ ಅಳವಡಿಸಬೇಕು. ಜನ ದಟ್ಟಣೆಯ ಪ್ರದೇಶವಾದ ಬಸವೇಶ್ವರ ದೇವಾಲಯ ಎದುರಿಗೆ ಮತ್ತು ಬಸ್ ನಿಲ್ದಾಣದ ಎದುರಿಗೆ ಹಾಗೂಅಂಬೇಡ್ಕರ್ ವೃತ್ತ, ಸರ್ಕಾರಿ ಆಸ್ಪತ್ರೆ, ಅರಳಿಕಟ್ಟಿ ಮತ್ತು ಬಸವ ಭವನ ಹತ್ತಿರ ಜೀಬ್ರಾ ಕ್ರಾಸ್ ಗಳನ್ನು ಹಾಕಿಸಿ ಅಪಘಾತವನ್ನು ತಡೆಗಟ್ಟಬೇಕೆಂದು ವಿನಂತಿಸಲಾಗಿದೆ.ಈ ಸಂದರ್ಭದಲ್ಲಿ ವಿವೇಕ್ ಬ್ರಿಗೇಡ್ ಸಂಘಟನೆಯ ವಿನುತ ಕಲ್ಲೂರ, ಶಂಕರ ಬೈಕೋಳ, ರವಿ ಚಿಕ್ಕೊಂಡ,ಶಶಿಕಾಂತ ಸ್ಥಾವರಮಠ,ಪ್ರಜ್ವಲ ಕಾರಕೂನ,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಮಾಜದಲ್ಲಿ ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟ್ ಸರ್ಕಾರಕ್ಕಿಂತ ಹೆಚ್ಚು ಕ್ರೀಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ , ಸಾಮೂಹಿಕ ಶ್ರೀಸತ್ಯನಾರಾಯಣ ಪೂಜಾ ವ್ಯವಸ್ಥಾಪನಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಲಯ ಮಟ್ಟದ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜಾ ಹಾಗೂ ಧಾರ್ಮಿಕಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಜೀವನದ ಕಷ್ಟಕಾರ್ಪಣ್ಯಗಳಿಗೆ ಪರಿಹಾರವಾಗಿ ಶ್ರೀಸತ್ಯನಾರಾಯಣ ಪೂಜೆ ಕೈಗೊಳ್ಳುವುದು ಹಿಂದಿನಿAದಲೂ ಬಂದಿದೆ. ಈಗ ಸಮಾಜದಲ್ಲಿ ಸಾಮೂಹಿಕ ಪೂಜೆ ಕೈಗೊಂಡು ಉತ್ತಮ ಕಾರ್ಯ ಮಾಡಿದೆ ಎಂದರು.ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರತಜ್ಞ ಪ್ರಭುಗೌಡ ಲಿಂಗದಳ್ಳಿ(ಚಬನೂರ) ಮಾತನಾಡಿ, ಧರ್ಮಸ್ಥಳ ಟ್ರಸ್ಟ್ ಕೇವಲ ಧಾರ್ಮಿಕ ಕಾರ್ಯಗಳಿಗೆ ಸೀಮಿತವಾಗದೇ ಕೆರೆ ಹೂಳು ತೆಗೆಯುವ ಕಾರ್ಯ ನಿರ್ವಹಿಸಿ ನೀರಾವರಿ ಕ್ಷೇತ್ರಕ್ಕೂ ತನ್ನ ಸೇವೆ ವಿಸ್ತರಿಸಿದೆ ಎಂದು ಹೇಳಿ ಬಳ್ಳಾರಿಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಶಸ್ತ್ರ ಪಡೆಗ ಯೋಧರ ದಿನಾಚರಣೆ ಅಂಗವಾಗಿ ದಿನಾಂಕ : ೧೪-೦೧-೨೦೨೫ರಂದು ಮಾಜಿ ಸೈನಿಕರು ಹಾಗೂ ಅವಲಂಬಿತರುಗಳಿಗೆ ದೂರವಾಣಿ ಮೂಲಕ ಕುಂದು ಕೊರತೆಗಳ ಆಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.ಅಂದು ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆ ಪ್ರಭಾರ ನಿರ್ದೇಶಕರೂ ಆದ ಜಂಟಿ ನಿರ್ದೇಶಕರು ಬೆಂಗಳೂರು ಇವರು ಎಲ್ಲ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಕುಂದು-ಕೊರತೆಗಳನ್ನು ದೂರವಾಣಿ ಮೂಲಕ ಸ್ವೀಕರಿಸಿ, ಅಹವಾಲುಗಳನ್ನು ಆಲಿಸಲಿದ್ದು, ಸ್ಥಿರ ದೂರವಾಣಿ ೦೮೦-೨೫೫೮೯೪೫೯, ಮೊಬೈಲ್ : ೮೧೦೫೨೩೩೮೬೩, ೯೮೭೧೧೦೩೮೧೪ ಹಾಗೂ ೭೮೯೨೨೮೯೬೩೫ ಸಂಖ್ಯೆಗೆ ಕರೆ ಮಾಡಿ ತಮ್ಮ ಕುಂದು ಕೊರತೆಗಳನ್ನು ಸಲ್ಲಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣಾ ಭಾಗ್ಯ ಜಲನಿಗಮದ ಆಲಮಟ್ಟಿ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯ ವಿಳಾಸವನ್ನು ಮರು ನಾಮಕರಣ ಮಾಡಲಾಗಿದೆ.ಪ್ರಸ್ತುತ ಚಾಲ್ತಿಯಲ್ಲಿರುವ ಕಾರ್ಯನಿರ್ವಾಹಕ ಅಭಿಯಂತರರು, ಕೃಭಾಜನಿನಿ, ಆಣೆಕಟ್ಟು ವಿಭಾಗ ಆಲಮಟ್ಟಿ-೫೮೨೦೧, ತಾ:ನಿಡಗುಂದಿ, ಜಿಲ್ಲೆ:ವಿಜಯಪುರ ಕಚೇರಿಯನ್ನು ಮರು ನಾಮಕರಣ ಮಾಡಿ ಕಾರ್ಯನಿರ್ವಾಹಕ ಅಭಿಯಂತರರು, ಕೃಭಾಜನಿನಿ, ಆಣೆಕಟ್ಟು ಸುರಕ್ಷತಾ ಘಟಕ-೨, ಆಲಮಟ್ಟಿ-೫೮೨೦೧, ತಾ:ನಿಡಗುಂದಿ, ಜಿಲ್ಲೆ:ವಿಜಯಪುರ ಎಂದು ಬದಲಾಯಿಸಲಾಗಿದೆ ಎಂದು ಕಾರ್ಯನಿರ್ವಾಹಕ ಅಭಿಯಂತರ ತಾರಾಸಿಂಗ ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಇಂಡಿ ಹಾಗೂ ಜಿಲ್ಲಾ ಹಾಪ್ಕಾಮ್ಸ್ ವಿಜಯಪುರ ಇವರ ಸಹಯೋಗದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಹತ್ತಿರವಿರುವ ತೋಟಗಾರಿಕೆ ಕಚೇರಿ ಆವರಣದ ಬಸವ ವನದಲ್ಲಿ ಜ.೧೩ರಿಂದ ೧೫ರವರೆಗೆ ಫಲ-ಪುಷ್ಪ ಪ್ರದರ್ಶನ ಹಾಗೂ ತೋಗಾರಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಜ.೧೩ರಂದು ಸಂಜೆ ೪ ಗಂಟೆಗೆ ಪ್ರದರ್ಶನ-ಅಭಿಯಾನದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಫಲ-ಪುಷ್ಪ ಪ್ರದರ್ಶನವನ್ನು ಹಾಗೂ ತೋಟಗಾರಿಕೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಖಾತೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಹಣ್ಣು ಮತ್ತು ತರಕಾರಿ ಪ್ರದರ್ಶನ, ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರದ ಶಿವಾನಂದ ಎಸ್.ಪಾಟೀಲ ಅವರು ತರಕಾರಿ ಕೆತ್ತನೆ ಉದ್ಘಾಟಿಸಲಿದ್ದಾರೆ.ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ…
ವಿಜಯಪುರ ಜಿಲ್ಲೆಯಲ್ಲಾದ ಮುಂಗಾರು ಹಂಗಾಮಿನ ಬೆಳೆ ಹಾನಿ ಹಾಗೂ ಪ್ರವಾಹ-ನೈಸರ್ಗಿಕ ವಿಕೋಪದಿಂದ ಜನ-ಜಾನುವಾರು-ಆಸ್ತಿ-ಪಾಸ್ತಿ ಹಾನಿಗಳ ಕುರಿತು ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯ ಜಂಟಿ ನಿರ್ದೇಶಕರಾದ ಮಹೇಶಕುಮಾರ, ಇಸ್ರೋ ಬಾಹ್ಯಾಕಾಶ ಇಲಾಖೆಯ ಆಕಾಶ ಮೋಹನ್, ಬೆಂಗಳೂರಿನ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ಶ್ರೀಮತಿ ಹೊನ್ನಂಬ ಅವರನ್ನೊಳಗೊಂಡ ತಂಡ ಸೋಮವಾರ ವಿಜಯಪುರ ಜಿಲ್ಲೆಗೆ ಆಗಮಿಸಿ ಮುಂಗಾರು ಹಂಗಾಮಿನ ಬೆಳೆ ಹಾನಿ ಹಾಗೂ ಪ್ರವಾಹ-ನೈಸರ್ಗಿಕ ವಿಕೋಪದಿಂದ ಜನ-ಜಾನುವಾರು-ಆಸ್ತಿ-ಪಾಸ್ತಿ ಹಾನಿಗಳ ಕುರಿತು ಪರಿಶೀಲನೆ ನಡೆಸಿತು.ಸೋಮವಾರ ವಿಜಯಪುರಕ್ಕೆ ಭೇಟಿ ನೀಡಿದ ತಂಡ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ತಂಡ, ಜಿಲ್ಲೆಯಲ್ಲಿ ಮುಂಗಾರಿನಲ್ಲಿ ೩೧೪೫೭೮ ಹೆಕ್ಟೇರ್ ಕೃಷಿ ಬೆಳೆ ಹಾಗೂ ೩೧೬೯೨ ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದು, ಎನ್ಡಿಆರ್ಎಫ್-ಎಸ್ಡಿಆರ್ಎಫ್ ಮಾರ್ಗಸೂಚಿಯನ್ವಯ ೩೫೬೬೫.೦೯ ಲಕ್ಷ ರೂ. ಕೃಷಿ ಬೆಳೆ ಹಾಗೂ ೪೪೫೩ ಲಕ್ಷ ರೂ.ಗಳ ತೋಟಗಾರಿಕೆ ಬೆಳೆ ಸೇರಿದಂತೆ ೪೦೧೧೮.೦೯ ಲಕ್ಷ ರೂ.ಗಳನ್ನು ಹಾನಿಯನ್ನು ಅಂದಾಜಿಸಲಾಗಿದೆ.ಪ್ರವಾಹ ಪರಿಸ್ಥಿತಿಯಿಂದ ಜಿಲ್ಲೆಯಲ್ಲಿ ಕಳೆದ ಜೂನ-೦೧ ರಿಂದ ಸೆ.೩೦ರವರೆಗಿನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವದ 2ನೇ ದಿನವಾದ ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ನಂದಿ ಧ್ವಜಗಳ ಭವ್ಯ ಮೆರವಣಿಗೆ ನಡೆಯಿತು.ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷರಾದ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಹಾಗೂ ಜಾತ್ರಾ ಸಮಿತಿ ಸದಸ್ಯರು ಬಾನೆತ್ತರದ ನಂದಿ ಧ್ವಜಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ನಂದಿ ಧ್ವಜಗಳ ಉತ್ಸವಕ್ಕೆ ಚಾಲನೆ ದೊರೆಯಿತು.ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಣಪತಿ ವೃತ್ತ, ಗಾಂಧಿ ಚೌಕ್, ಕಿರಾಣಿ ಬಜಾರ್, ಸರಾಫ್ ಬಜಾರ್, 770 ಲಿಂಗದ ಗುಡಿ ತಲುಪಿತು. ಅಲ್ಲಿಂದ ನೀಲಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ನಂದಿ ಧ್ವಜಗಳು ಮರಳಿ ಸಿದ್ದೇಶ್ವರ ದೇವಸ್ಥಾನ ತಲುಪಿತು. ಸಂಜೆ ಮಂಗಳ ವಾದ್ಯ, ರಾತ್ರಿ ಭಜನಾ ಭಜನಾ ಕಾರ್ಯಕ್ರಮಗಳು ಜರುಗಿದವು.ಮೇಯರ್ ಎಂ.ಎಸ್. ಕರಡಿ, ಸಂಸ್ಥೆಯ ಉಪಾಧ್ಯಕ್ಷರಾದ ಸಂಗು ಸಜ್ಜನ, ಚೇರಮನ್ ಬಸಯ್ಯ ಹಿರೇಮಠ, ಪದಾಧಿಕಾರಿಗಳಾದ ಸದಾನಂದ ದೇಸಾಯಿ, ಬಿ.ಎಸ್.ಸುಗೂರ, ಎಂ.ಎಂ.ಸಜ್ಜನ, ಶಿವಾನಂದ ನೀಲಾ,…
