Author: editor.udayarashmi@gmail.com

ಲೇಖನ- ವೀಣಾ ಹೇಮಂತಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಮೊತ್ತ ಮೊದಲನೆಯದಾಗಿ ನಾವು ಸಂಸ್ಕಾರ ಎಂಬ ಪದದ ಅರ್ಥವನ್ನು ತಿಳಿಯೋಣ. ಸಂಸ್ಕಾರ ಎಂದರೆ ಸಂಸ್ಕೃತಿ ಸಂಸ್ಕಾರ ಎಂದರೆ ಮೌಲ್ಯಗಳು ಸಂಸ್ಕಾರ ಎಂದರೆ ನಮ್ಮ ನಡೆ ನುಡಿಗಳು ಮತ್ತು ಸಂಸ್ಕಾರ ಎಂದರೆ ಬೆಳವಣಿಗೆ. ಸಂಸ್ಕಾರವು ವ್ಯಕ್ತಿಯಲ್ಲಿ ನೈತಿಕ ಮತ್ತು ಮೌಲಿಕ ವಿಷಯಗಳನ್ನು ಸನಾತನ ಸಂಪ್ರದಾಯದ ಉತ್ತಮ ಮತ್ತು ಮೌಲಿಕ ವಿಷ ವಿಷಯಗಳನ್ನು ತಲೆಮಾರುಗಳಿಂದ ನಡೆದುಕೊಂಡು ಬಂದ ಉನ್ನತ ವಿಷಯಗಳನ್ನು ನಮ್ಮ ಮುಂದಿನ ತಲೆಮಾರಿಗೆ ಸಾಗಿಸುವ ಒಂದು ಮಹೋನ್ನತ ಜವಾಬ್ದಾರಿ. ಉತ್ತಮ ಸಂಸ್ಕಾರಯುತ ಮೌಲ್ಯಗಳನ್ನು ಮಕ್ಕಳಲ್ಲಿ ಅಳವಡಿಸುವ ಮೂಲಕ ಓರ್ವ ಜವಾಬ್ದಾರಿ ಪ್ರಜ್ಞೆಯುಳ್ಳ ನಾಗರಿಕನನ್ನು ಈ ಸಮಾಜಕ್ಕೆ ಕಾಣಿಕೆಯಾಗಿ ನೀಡುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ… ಅದರಲ್ಲೂ ಈ ಜವಾಬ್ದಾರಿಯ ಸಿಂಹ ಪಾಲು ಇರುವುದು ಹೆಣ್ಣು ಮಕ್ಕಳ ಮೇಲೆ.ಸಂಸ್ಕಾರದ ಮೂಲ ತತ್ವಗಳುಮೊದಲನೆಯದಾಗಿ ಮೌಲ್ಯಗಳು, ಪ್ರಾಮಾಣಿಕತೆ, ಗೌರವ, ಶಿಸ್ತು ಮತ್ತು ಸಹಾನುಭೂತಿಯಂತಹ ಮೌಲ್ಯಗಳು ನಮಗೆ ನೈತಿಕತೆಯನ್ನು ನೀಡುತ್ತವೆ. ಮನುಷ್ಯನ ಯೋಚನೆ ಮತ್ತು ಆತನ ಕ್ರಿಯೆಗೆ ಇವುಗಳೇ…

Read More

ವಿಜಯಪುರದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ | ಶಾಸಕ ವಿಠ್ಠಲ ಕಟಕಧೋಂಡ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂವಿಧಾನದ ಮುಂದೆ ದೇಶದ ಎಲ್ಲ ಪ್ರಜೆಗಳು ಸಮಾನರು ಎಂಬ ಸಮಾನತೆ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಮಹತ್ವದಾಗಿದೆ ಎಂದು ಶಾಸಕ ವಿಠ್ಠಲ ಧೋಂಡಿಬಾ ಕಟಕಧೋಂಡ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯರ ರಂಗಮಂದಿರದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನನ್ನ ಮತ ನನ್ನ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನ ಅನೇಕ ದೇಶಗಳಲ್ಲಿ ಹಂತ ಹಂತವಾಗಿ ಸಂವಿಧಾನ ಜಾರಿಗೆ ಬಂದು ಅಲ್ಲಿನ ಜನತೆಗೆ ಸಮಾನತೆ ದೊರಕಲು ದೀರ್ಘ ಕಾಲ ಪಡೆಯಿತು. ಆದರೆ, ವಿವಿಧತೆಯಲ್ಲಿ ಏಕತೆವಿರುವ ಭಾರತ ದೇಶದಲ್ಲಿ ಪ್ರಜಾಪ್ರಭುತ್ವ ಆಧಾರದ ಸಂವಿಧಾನ ಜಾರಿಗೆ ಬಂದ ದಿನದಿಂದಲೇ ಪ್ರತಿಯೊಬ್ಬರಿಗೂ ಸಮಾನತೆ ದೊರೆತಿದೆ ಎಂದು ಅವರು ಹೇಳಿದರು.ಸರ್ವರ ಏಳ್ಗೆಯ ಅಂಶಗಳನ್ನು ಹೊಂದಿರುವ ಪ್ರಜಾಪ್ರಭುತ್ವದ ಸಂವಿಧಾನದ ಆಶಯಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸೋಲಾಪುರ ರಾಷ್ಟ್ರೀಯ ಹೆದ್ದಾರಿ ವಿಜಯ ಟೈಯರ್ಸ್ ಹತ್ತಿರ ಸೆ.೧೩ರಂದು ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಸೋಲಾಪುರ ರಾಷ್ಟ್ರೀಯ ಹೆದ್ದಾರಿ ವಿಜಯ ಟೈಯರ್ಸ್ ಹತ್ತಿರ ತಡೆದು ವಿಚಾರಿಸಿ, ಒಟ್ಟು ೨೧೦ ಕ್ವಿಂಟಲ್ ೪೩ ಕೆಜಿ ರೂ ೪,೭೬,೩೧೦ ಮೌಲ್ಯದ ಪಡಿತರ ಧಾನ್ಯ ಜಪ್ತಿ ಮಾಡಿ ಅಗತ್ಯ ವಸ್ತುಗಳ ಕಾಯ್ದೆ ೧೯೫೫ರ ಮೇರೆಗೆ ಆದರ್ಶನಗರ ಪೋಲಿಸ್ ಠಾಣೆಯಲ್ಲಿ ಗಜಾನನ ಮಕಾಲೆ ಎನ್ನುವವರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.ಈ ದಾಳಿಯಲ್ಲಿ ವಿಜಯಪುರ ನಗರದ ಆಹಾರ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಆದರ್ಶನಗರ ಪಿಎಸ್‌ಐ ಸೀತಾರಾಮ ಲಮಾಣಿ ಸೇರಿದಂತೆ ಪೋಲಿಸ್ ಹಾಗೂ ಆಹಾರ ಇಲಾಖೆಯ ಸಿಬ್ಬಂದಿ ಈ ದಾಳಿಯಲ್ಲಿ ಇದ್ದರು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಸುಮಾರು ಎರಡು ಕೋಟಿಗೂ ಅಧಿಕ ಪರಿಹಾರ ಮೊತ್ತ ಒಳಗೊಂಡಂತೆ ಒಟ್ಟು ೩೭೭೬ ಪ್ರಕರಣಗಳು ಇತ್ಯರ್ಥ ಗೊಂಡಿವೆ ಎಂದು ಹಿರಿಯ ದಿವಾನಿ ನ್ಯಾಯಾಧೀಶ ಕೋಟಪ್ಪ ಕಾಂಬಳೆ ಹೇಳಿದರು.ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತನಲ್ಲಿ ಭಾಗವಹಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ರಾಜಿ ಮೂಲಕ ನ್ಯಾಯ ಇತ್ಯರ್ಥದಿಂದ ನ್ಯಾಯಾಲಯಗಳಿಗೆ ಅಲೆದಾಟ ತಪ್ಪುತ್ತದೆ, ಪರಸ್ಪರ ಸೌಹಾರ್ಧತೆ ಬೆಳೆಯುತ್ತದೆ ಎಂದರು.ರಾಜಿ ಮೂಲಕ ಇತ್ಯರ್ಥಕ್ಕೆ ವಕೀಲರು ಸಹಕಾರ ನೀಡುತ್ತಿದ್ದು ಅವರಿಗೆ ಧನ್ಯವಾದ ಎಂದ ಅವರು ಸಾರ್ವಜನಿಕರು ಸಹ ರಾಜಿ ಸಂಧಾನಕ್ಕೆ ಆದ್ಯತೆ ನೀಡಿ ಪ್ರಕರಣ ಇತ್ಯರ್ಥದ ಮೂಲಕ ನೆಮ್ಮದಿಯ ಜೀವನ ನಡೆಸಲು ಮುಂದೆ ಬರಬೇಕು ಎಂದರು.ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಕ್ರಿಮಿನಲ್ ವಿಮಾ ಪರಿಹಾರ ಪ್ರಕರಣ ರಾಜಿ ಮೂಲಕ ಮುಕ್ತಾಯ ಗೊಂಡಿವೆ ಎಂದರು.ಅದರಲ್ಲಿ ವ್ಯಾಜ್ಯ ಪೂರ್ವ ಬ್ಯಾಂಕ ಟ್ರಾಫಿಕ ಪ್ರಕರಣಗಳು ಹಾಗೂ ಇತರೆ ಸಾರ್ವಜನಿಕ ಉಪಯುಲಕ್ತತಾ ಪ್ರಕರಣ ಸೇರಿವೆ ಎಂದರು.ಕ್ರಿಮಿನಲ್, ಚೆಕ್ ಬೌನ್ಸ, ಕೌಟುಂಬಿಕ ವ್ಯಾಜ್ಯ ವಿಭಾಗದ ದಾವೆ ಸಿವಿಲ್…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಯಾವುದೇ ಅಪರಾಧ ಕೃತ್ಯಗಳು ಜರುಗಿದರೂ ೨೪ ಗಂಟೆಗಳ ಅವಧಿಯಲ್ಲಿ ಅಪಾರಾಧಿಗಳನ್ನು ಪತ್ತೆ ಹಚ್ಚುವ ಈ ತಾಂತ್ರಿಕ ಯುಗದಲ್ಲಿ ತಿಂಗಳುಗಳೇ ಗತಿಸಿದರೂ ಯಾವೊಬ್ಬ ಅಪರಾಧಿಯನ್ನು ತಂದು ಕಟಕಟೆಯಲ್ಲಿ ನಿಲ್ಲಿಸದಿರುವುದು ಪೊಲೀಸರ ಕಾರ್ಯದಕ್ಷತೆಯ ಮೇಲೆ ಸಂಶಯ ವ್ಯಕ್ತವಾಗುತ್ತದೆ ಎಂದು ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಆಕ್ರೋಶ ವ್ಯಕ್ತಪಡಿಸಿದರು.ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನ ಬನ್ನೆಟ್ಟಿ ಗ್ರಾಮದಲ್ಲಿ ಮಹಾದೇವಪ್ಪ ಪೂಜಾರಿ ಎಂಬ ದಲಿತ ವ್ಯಕ್ತಿಯ ಕೊಲೆಯಾಗಿ ನಾಲ್ಕು ತಿಂಗಳಾಗುತ್ತಾ ಬಂದರೂ ಕೊಲೆಗಾರರನ್ನು ಬಂದಿಸದೇ ಇರುವುದು ಪೊಲೀಸ್ ಇಲಾಖೆಯ ವೈಫಲ್ಯತೆಯನ್ನು ಎತ್ತಿ ತೋರಿಸುತ್ತದೆ. ಇಲಾಖೆ ಈ ರೀತಿ ನಿರ್ಲಿಪ್ತತೆ ತೋರುತ್ತಿರುವುದು ಯಾವ ಕಾರಣಕ್ಕೆ? ಇಲ್ಲಿ ಕೊಲೆಗಾರನ ರಕ್ಷಣೆ ಮಾಡಲಾಗುತ್ತಿದೆಯೇ ಅಥವಾ ಯಾವುದೋ ಆಮಿಷಕ್ಕೊಳಗಾಗಿ ತನಿಖೆಯ ದಿಕ್ಕು ತಪ್ಪಿಸಲಾಗುತ್ತಿದಯೇ ಎಂಬುದು ಮೊದಲು ದೃಢವಾಗಬೇಕು. ತನಿಖೆಯಲ್ಲಿನ ಈ ಎಲ್ಲ ವೈಫಲ್ಯಗಳನ್ನು ಖಂಡಿಸಿ ಬರುವ ಸೆ.೧೯ರಂದು ಬನ್ನೆಟ್ಟಿ ಗ್ರಾಮದಿಂದ ಕಾಲ್ನಡಿಗೆಯ ಜಾಥಾ ಪ್ರಾರಂಭಿಸಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯಾದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಸೆ.೧೬ರಂದು ಬೆಳಿಗ್ಗೆ ೧೦ಗಂಟೆಗೆ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಉಚಿತ ಪುಸ್ತಕ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಎಸ್.ಎಮ್.ಪೂಜಾರಿ ತಿಳಸಿದ್ದಾರೆ.ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಚೇರಮನ್ನರು ಹಾಗೂ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ನೆರವೇರಿಸಲಿದ್ದಾರೆ. ಸಾನಿಧ್ಯವನ್ನು ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ವಹಿಸುವರು. ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಸ್.ಎಂ.ಪೂಜಾರಿ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮವಿವಿ ಕುಲಸಚಿವರಾದ ಶಂಕರಗೌಡ ಎಸ್.ಸೋಮನಾಳ ಆಗಮಿಸಲಿದ್ದಾರೆ. ಅತಿಥಿಗಳಾಗಿ ಸಂಸ್ಥೆಯ ಸಹ ಕಾರ್ಯದರ್ಶಿ ಅಶೋಕ ವಾರದ, ಉಪಸ್ಥಿತಿಯನ್ನು ನಿವೃತ್ತ ದೈಹಿಕ ಉಪನ್ಯಾಸಕ, ಸಾಹಿತಿ ಎಂಜೆಎಫ್ ಲಾಯನ್ ಕೆ.ಹೆಚ್.ಸೋಮಾಪೂರ ವಹಿಸುವರು. ವಿದ್ಯಾರ್ಥಿ ಒಕ್ಕೂಟ ಕಾರ್ಯಾಧ್ಯಕ್ಷೆ ಜಿ.ವಿ.ಪಾಟೀಲ, ಪ್ರಧಾನ ಕಾರ್ಯದರ್ಶಿ ಸಂಗಮ್ಮ ಪೂಜಾರಿ ವೇದಿಕೆಯ ಮೇಲೆ ಇರಲಿದ್ದಾರೆ ಎಂದು ಪತ್ರಿಕಾ ವಿಭಾಗದ ಕಾರ್ಯಾಧ್ಯಕ್ಷ ಮಹಾಂತೇಶ ನೂಲಾನವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಳೆ ನೀರಿನಿಂದ ಮನೆ ಪೂರ್ಣ ಆವೃತ್ತವಾಗಿ ಮಾರಾಟಕ್ಕೆ ತಯಾರಿಸಿದ್ದ ಸಿಹಿತಿಂಡಿ ಸಹಿತ ಐವತ್ತು ಸಾವಿರ ಮೌಲ್ಯದ ಇಲೆಕ್ಟ್ರಾನಿಕ್ಸ್ ವಸ್ತುಗಳು ಹಾಳಾದ ಘಟನೆ ಪಟ್ಟಣದಲ್ಲಿ ಭಾನುವಾರ ಜರುಗಿದೆ.ಪಟ್ಟಣದಲ್ಲಿ ಭಾನುವಾರ ರಾತ್ರಿ ಸುರಿದ ಸತತ ಮಳೆಯಿಂದ ಸದಯ್ಯನಮಠ ಸುತ್ತಮುತ್ತಲಿನ ಆನಂದ, ಮಲ್ಲಯ್ಯ, ಶಿವಯ್ಯ ಹಾಗೂ ಶ್ರೀಶೈಲ ಸ್ಥಾವರಮಠ ಎಂಬುವವರ ಮನೆಗಳಿಗೆ ಮಳೆ ನೀರು ಪ್ರವೇಶಿಸಿ ಅವಾಂತರ ಮಾಡಿದೆ. ಮಳೆ ನೀರು ಮನೆಯುದ್ದಕ್ಕೂ ತುಂಬಿದ ಪರಿಣಾಮ ಮಕ್ಕಳು ಸಹಿತ ಕುಟುಂಬದವರೆಲ್ಲ ನಿದ್ರಿಸಲು ಆಗದೇ ಅಸಹಾಯಕರಾಗಿ ಒಂದೆಡೆ ಕುಳಿತರು. ಜೊತೆಗೆ ಸೋಮವಾರ ಸಂತೆಯ ಮಾರಾಟಕ್ಕೆ ಸಿದ್ಧಪಡಿಸಿದ್ದ ಶೇವು, ಬೂಂದೆ ಲಾಡು, ಜಿಲೇಬಿಯಂತಹ ಸಾವಿರಾರು ರೂ.ಗಳ ಮೌಲ್ಯದ ತಿನಿಸುಗಳು ಸಂಪೂರ್ಣವಾಗಿ ಹಾಳಾಗಿವೆ. ಆನಂದ ಸದಯ್ಯನಮಠ ಅವರ ಮನೆಯಲ್ಲಿ ಸುಮಾರು ಒಂದು ಅಡಿಯಷ್ಟು ನೀರು ರಾತ್ರಿ ಇಡೀ ಇದ್ದ ಕಾರಣ ಪ್ರೀಜ್, ಕೂಲರ್ ಸಹಿತ ಹಲವು ಇಲೆಕ್ಟ್ರಾನಿಕ್ಸ್ ವಸ್ತುಗಳು ಹಾನಿಗೊಳಗಾಗಿವೆ.ಪಟ್ಟಣದಲ್ಲಿ ಸುರಿಯುತ್ತಿರುವ ಮಳೆಯಿಂದ ತಗ್ಗಾದ ಪ್ರದೇಶ ಹಾಗೂ ರಸ್ತೆಗಳಲ್ಲಿ ನೀರು ನಿಂತು ಸಾರ್ವಜನಿಕರ ತೊಂದರೆ ಉಂಟು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ. ಪಂಡಿತ ಪುಟ್ಟರಾಜ ಗವಾಯಿಗಳು ಸಂಗೀತ ಲೋಕದ ದಿಗ್ಗಜರು. ಸಾವಿರಾರು ಅಂಧ ಮಕ್ಕಳ ಬಾಳಿಗೆ ನಂದಾದೀಪವಾಗಿ ಸಂಗೀತ ಕ್ಷೇತ್ರಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ. ಗುರು ಕುಮಾರೇಶ್ವರ ಎಂಬ ಕೃಪಾ ಪೋಷಿತ ನಾಟ್ಯ ಸಂಘವನ್ನು ಕಟ್ಟಿ, ಅಂಗವಿಕಲ, ಅನಾಥ, ಬಡ ಮತ್ತು ಅಂಧ ಮಕ್ಕಳಿಗೆ ಉಚಿತ ಆಹಾರ, ಆಶ್ರಯ, ಶಿಕ್ಷಣವನ್ನು ಒದಗಿಸುವಲ್ಲಿ ಶ್ರಮಿಸಿದವರು ಎಂದು ನಿವೃತ್ತ ಸೇನಾನಿ ಭರಮಣ್ಣ ಕಡಕೋಳ ಅವರು ಅಭಿಪ್ರಾಯಪಟ್ಟರು.ಅವರು ನಗರದ ಸೇನಾ ನಗರದ ಶಿವಾಲಯ ದೇವಸ್ಥಾನದಲ್ಲಿ ಗಾನ ತರಂಗ ಸಂಗೀತ ಶಾಲೆಯ ಸಹಯೋಗದಲ್ಲಿ ಜರುಗಿದ ಪಂಡಿತ ಪುಟ್ಟರಾಜ ಗವಾಯಿಗಳ ೧೫ ನೇಯ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಗಾನ ತರಂಗ ಸಂಗೀತ ಶಾಲೆಯ ಶಿಕ್ಷಕ ಶ್ರೀಶೈಲ ಬೀಳೂರ ಮಾತನಾಡುತ್ತಾ, ಗದುಗಿನ ವೀರೇಶ್ವರ ಪುಣ್ಯಾಶ್ರಮವು ಸಂಗೀತ ಲೋಕಕ್ಕೆ ಕೊಡುಗೆ ನೀಡಿದ ನಮ್ಮ ನಾಡಿನ ಶ್ರೇಷ್ಠ ಆಶ್ರಮವಾಗಿದೆ. ಪುಟ್ಟರಾಜ ಗವಾಯಿಗಳು ವಿಕಲಚೇತನ ಮಕ್ಕಳಿಗೆ ಸ್ವತಂತ್ರವಾಗಿ ಬದುಕು ಸಾಗಿಸಲು ಆತ್ವವಿಶ್ವಾಸ ಮೂಡಿಸುತ್ತಾ, ಸಂಗೀತ ಮತ್ತು ಪ್ರವಚನದ ಕಲೆಯನ್ನು ಕಲಿಸುತ್ತಿದ್ದರು ಎಂದು ಹೇಳಿದರು.ಅಧ್ಯಕ್ಷತೆಯನ್ನು…

Read More

ಉದಯರಶ್ಮಿ ದಿನಪತ್ರಿಕೆ ವರದಿ: ಗುರು ಆರ್ ಹಿರೇಮಠಆಲಮೇಲ: ಮಳೆಗಾಲ ಪ್ರಾರಂಭವಾದ ಮೇಲೆ ಭೀಮಾ ನದಿಗೆ ಈಗಾಗಲೇ 2-3 ಬಾರಿ ಅಪಾರ ಪ್ರಮಾಣದ ನೀರು ಹರಿದು ಕಡಿಮೆಯಾಗಿದೆ ಎನ್ನುವಷ್ಟರಲ್ಲಿ ಮತ್ತೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆಮಹಾರಾಷ್ಟ್ರದ ಭೀಮಾ ನದಿ ಪಾತ್ರದ ಪ್ರದೇಶದಲ್ಲಿ ಬೀಳುತ್ತಿರುವ ಅಪಾರ ಪ್ರಮಾಣದ ಮಳೆಯಿಂದಾಗಿ ಉಜನಿ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ನದಿ ಪಾತ್ರಕ್ಕೆ ಹರಿದು ಬಿಡಲಾಗಿದ್ದು, ಭೀಮಾ ನದಿಯ ಉಪನದಿಯಾದ ಸೀನಾ ನದಿಯು ಕೂಡ ತುಂಬಿ ಹರಿಯುತ್ತಿದ್ದು, ಅಫ್ಜಲಪುರ ತಾಲ್ಲೂಕಿನಲ್ಲಿ ಭೀಮಾ ನದಿಗೆ ಸೇರುವ ಬೋರಿ ಹಳ್ಳಕ್ಕೂ ಕೂಡ ಅಪಾರ ಪ್ರಮಾಣದಲ್ಲಿ ನೀರು ಬಂದಿರುವುದರಿಂದ ಮಂಗಳವಾರ ಸಂಜೆ ಅಥವಾ ಬುಧವಾರ ದಿವಸ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ ಸಮೀಪ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೊನ್ನ ಬ್ಯಾರೇಜ್ ಗೆ ಒಟ್ಟು 1 ಲಕ್ಷ 50 ಸಾವಿರ ಒಳ ಹರಿವು ಹಾಗೂ ಹೊರಹರಿವಿನ ಪ್ರಮಾಣ ಇರುವ ಅಂದಾಜು ಇರುವುದರಿಂದ ಭೀಮಾ ನದಿ ಪಾತ್ರದ ವಿಜಯಪುರ ,…

Read More

ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪನೆಗೆ ಈ ದೇಣಿಗೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪಿಸಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಸಿದ್ದಸಿರಿ ಸೌಹಾರ್ದ್ ಸಹಕಾರಿ ಸಂಘ ನಿಯಮಿತದಿಂದ ರೂ.25 ಲಕ್ಷ ದೇಣಿಗೆ ಚೆಕ್ ನ್ನು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಹಸ್ತಾಂತರಿಸಲಾಯಿತು.ಕರ್ನಾಟಕ ರಾಜ್ಯ ಸೌಹಾರ್ದ್ ಸಂಯುಕ್ತ ಸಹಕಾರಿ ನಿ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ನಿ. ನಿರ್ದೇಶಕರಾದ ರಾಮನಗೌಡ ಪಾಟೀಲ ಯತ್ನಾಳ ರವರು, ವಿಜಯಪುರ ನಗರವು ಬೃಹತ್ತಾಗಿ ಬೆಳೆದಿದೆ ಮತ್ತು ವರ್ಷದಿಂದ ವರ್ಷಕ್ಕೆ ಎಲ್ಲ ದಿಕ್ಕಿನಲ್ಲಿಯೂ ಬೆಳೆಯುತ್ತಿದೆ. ಅದಕ್ಕೆ ಅನುಗುಣವಾಗಿ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸಾರ್ವಜನಿಕರ ಸುರಕ್ಷತೆಯಿಂದ ಈ ಸಂಚಾರ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು, ಅಪಘಾತಗಳನ್ನು ತಡೆಯಲು, ಸುಧಾರಿತ ಸಂಚಾರ ಕಣ್ಗಾವಲು ವ್ಯವಸ್ಥೆಗಳು, ಪ್ರಮುಖ ವೃತ್ತಗಳ ಮೇಲ್ವಿಚಾರಣೆ, ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ಮತ್ತು…

Read More