Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪ್ರತಿ ಗರ್ಭಿಣಿ ಸ್ತ್ರೀಯರಿಗೆ ಗರ್ಭಾವಸ್ಥೆಯಲ್ಲಿ ಇರುವಾಗ ಪೌಷ್ಟಿಕಾಂಶದ ಹಾಗೂ ಕಬ್ಬಿಣಾಂಶದ ಕೊರತೆ ಕಾಣಬಾರದು, ಕೊರತೆ ಆದಲ್ಲಿ ಗರ್ಭಿಣಿಯರಿಗೆ ಗರ್ಭವಸ್ಥೆಯಲ್ಲಿ ಹಾಗೂ ಪ್ರಸವದ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ತುಂಬಾ ಏರುಪೇರುಗಳಾಗಿ ತೊಂದರೆಯಾಗುತ್ತದೆ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾಕ್ಟರ್ ಲಕ್ಷ್ಮಿ ತೆಲ್ಲೂರ ಹೇಳಿದರು.ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭಿಣಿ ಸ್ತ್ರೀಯರಿಗೆ ತಾಲೂಕಿನ ಕೂಡಗಿ ಎನ್ ಟಿಪಿಸಿಯವರು ಕೊಟ್ಟಂತಹ ನ್ಯೂಟ್ರಿಷನ್ ಕಿಟ್ಸ್ ಗಳನ್ನು ಗರ್ಭಿಣಿ ಸ್ತ್ರೀಯರಿಗೆ ವಿತರಿಸಿ ಮಾತನಾಡಿದರು.ನ್ಯೂಟ್ರಿಷನ್ ಕಿಟ್ಸ್ ೨kg ಹೆಸರು ಬೆಳೆ, ೨kg ಮುಕಣಿ ಬೆಳೆ, ೨kg ಶೇಂಗಾ, ೨kg ಬೆಲ್ಲ, ೨ ಪ್ರೋಟೀನ್ ಪೌಡರ್, ೨ ಕಬ್ಬಿಣಾಂಶ ಸಿರಪಗಳನ್ನು ಹೊಂದಿದ್ದು, ಈ ನ್ಯೂಟ್ರಿಷನ್ ಕಿಟ್ಸ್ ಗಳನ್ನು ಗರ್ಭಿಣಿ ಮಹಿಳೆಯರು ಆರೋಗ್ಯವನ್ನು ಕಾಪಾಡಿಕೊಳ್ಳಲು ಉತ್ತಮವಾಗಿ ಬಳಸಿಕೊಳ್ಳಿ ಎಂದರು.ಸ್ತ್ರೀ ರೋಗ ತಜ್ಞ ಡಾ.ಅರುಣ್ ಗಾಣಿಗೇರ್, ಗರ್ಭಿಣಿಯರು ತಪ್ಪದೆ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸೂಚಿಸಿದರು. ಆಶಾ ಕಾರ್ಯಕರ್ತರು ಪ್ರತಿ ಗರ್ಭಿಣಿಯರನ್ನು ತಾಯಿ ಮತ್ತು ಮಕ್ಕಳ…
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಸರಕಾರ ಅಂಬೇಡ್ಕರ ಅಭಿವೃದ್ಧಿ ನಿಗಮದಡಿ ವಿವಿಧ ಸಾಲ ಸೌಲಭ್ಯಗಳಿಗೆ ಫಲಾನುಭವಿಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಮಹಾನಾಯಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ನಾಗೇಶ ಕೊಳ್ಳಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.ಸುದ್ದಿಗಾರೊಂದಿಗೆ ಮಾತನಾಡಿದ ಅವರು,ಸರ್ಕಾರ ಭೂವಡೆತನ ಯೋಜನೆಯಡಿ ಜಮೀನು ಖರೀದಿಯು ನಾಲ್ಕೈದು ವರ್ಷಗಳಿಂದ ನೆಲಗುದಿಗೆ ಬಿದ್ದಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಜಮೀನು ಖರೀದಿ ಮಾಡಲು ಫಲಾನುಭವಿಗಳು ಅರ್ಜಿ ಸಲ್ಲಿಸುತ್ತಲೇ ಇದ್ದಾರೆ. ಆಯ್ಕೆ ಮಾಡುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿರುವುದು ಸರಿಯಲ್ಲ.ಈ ಹಿಂದೆ ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪಡೆದಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು.ಹಾಗೂ ಅಭಿವೃದ್ಧಿ ನಿಗಮದಡಿ ಸಿಗುತ್ತಿರುವ ಸೌಲಭ್ಯಗಳು ಜನ ಸಂಖ್ಯೆಗನುಗುಣವಾಗಿ ಹೆಚ್ಚಿಸಬೇಕು. ತಾಲೂಕಿಗೆ ಎರಡರಿಂದ ಮೂರು ಫಲಾನುಭಿಗಳ ಆಯ್ಕೆ ಮಾಡಲಾಗುತ್ತಿದೆ. ಗಂಗಾ ಕಲ್ಯಾಣ ಕೊಳವೆ ಬಾವಿ ಸೇರಿ ವಿವಿಧ ಸೌಲಭ್ಯಗಳು ಹೆಚ್ಚಿಸಬೇಕು.ಸರಕಾರದ ಮಹತ್ವದ ಯೋಜನೆಯಾಗಿರುವ ನಿಗಮದ ಯೋಜನೆಗಳು ಅರ್ಹರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಗುವಂತಾಗಬೇಕು.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ನಿಟ್ಟಿನಲ್ಲಿ ಕಾಳಜಿವಹಿಸಿ ಸಮೂದಾಯದ ಜನರ ಆರ್ಥಿಕ ಮಟ್ಟ ಸುದಾರಿಸುವ ಕೆಲಸ ಮಾಡಬೇಕು ಎಂದರು.ಜಿಲ್ಲೆಯಲ್ಲಿ…
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಸಚಿವ ಶಿವಾನಂದ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸಮಾಜದಲ್ಲಿ ಬಸವಾದಿ ಶರಣರ ಆಚಾರ-ವಿಚಾರಗಳು, ಧರ್ಮ ಉಳಿಯಬೇಕಾದರೆ ವೀರಶೈವ-ಲಿಂಗಾಯತ ಸಮಾಜ ಬಾಂಧವರು ಒಗ್ಗೂಡುವದು ತುಂಬಾ ಅಗತ್ಯವಿದೆ ಎಂದು ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದ ಬಸವ ಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪರಿಷತ್ತಿನ ಸರ್ವಸದಸ್ಯರ ಮೂವತ್ತೊಂದನೇ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಉಪೇಕ್ಷೆ ಮಾಡದೇ ಬದುಕು ಕಟ್ಟಿಕೊಳ್ಳವುದು ಅನಿವಾರ್ಯ. ಮಾನವೀಯತೆ ಎತ್ತಿಹಿಡಿಯುವದೇ ಧರ್ಮವಾಗಿದೆ. ವೀರಶೈವ-ಲಿಂಗಾಯತ ಧರ್ಮವು ಮಾನವೀಯತೆ ಎತ್ತಿ ಹಿಡಿದ ಧರ್ಮವಾಗಿದೆ.ಇದು ಜಾತ್ಯಾತೀತವಾಗಿ ನಡೆದ ಧರ್ಮವಾಗಿದೆ. ನಮ್ಮಂತಹವರು ರಾಜಕೀಯವಾಗಿ ಬೆಳೆ ಬೇಯಿಸಿಕೊಳ್ಳಲು ಧರ್ಮವನ್ನು ಬಳಸಿಕೊಳ್ಳುತ್ತಾರೆ. ಸಂತರು-ಶರಣರು ಸಮಾಜವನ್ನು ಎಂದಿಗೂ ಒಡೆಯದೇ ಒಗ್ಗೂಡಿಸುವ ಕಾರ್ಯ ಮಾಡಿದ್ದಾರೆ ಎಂದರು.ಬಸವಾದಿ ಶರಣರ ತತ್ವ ಸಂದೇಶಗಳನ್ನು ನಾಡಿನಲ್ಲಿ ಜನಮಾನಸಕ್ಕೆ ಮುಟ್ಟಿಸುವಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸುತ್ತಲೂ ಗಿಡ,ಮರಗಳಿಂದ ಕಂಗೊಳಿಸುವ ಕಾಡು, ನಳನಳಿಸುವ ಹಸಿರಿನಿಂದ ಕಣ್ಮನ ಸೆಳೆಯುವ ವನದ ಮಧ್ಯೆದಲ್ಲಿ ಹುಲಿ, ಸಿಂಹ. ಚಿರತೆ, ಕರಡಿ ಸಹಿತ ಹಲವು ವನ್ಯಜೀವಿಗಳ ದರ್ಶನ. ಇದು ಚಿಣ್ಣರ ವನದರ್ಶನದಲ್ಲಿ ಮಕ್ಕಳ ಸಂತಸದ ಕ್ಷಣಗಳಿಗೆ ಸಾಕ್ಷಿಯಾಗಿ ಮುದನೀಡಿತು.ಅರಣ್ಯ ಇಲಾಖೆ ಸಿಂದಗಿ ಪ್ರಾದೇಶಿಕ ವಲಯದ ಚಿಣ್ಣರ ವನದರ್ಶನ ಮೂಲಕ ಮಕ್ಕಳಲ್ಲಿ ಅರಣ್ಯ, ಗಿಡಮರಗಳು, ಮತ್ತು ವನ್ಯಜೀವಿಗಳ ಕುರಿತು ಅರಿವು ಮೂಡಿಸುವ ಅಂಗವಾಗಿ ಎರಡು ದಿನಗಳ ಕಾಲ ಅರಣ್ಯಾಧಿಕಾರಿ ಜಿ.ಬಿ.ರಾಮಗಿರಿಮಠ ನೇತೃತ್ವದಲ್ಲಿ ಕೈಗೊಂಡ ವನದರ್ಶನದ ಮೂಲಕ ಇಂಗಳಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮದ್ದೇಬಿಹಾಳ ಅರಣ್ಯ ಇಲಾಖೆಯ ಸಸಿ ಉತ್ಪಾದನಾ ಕೇಂದ್ರ, ಹೊಸಪೇಟೆ ಹತ್ತಿರದ ಅಟಲ್ ಬಿಹಾರಿ ವಾಜಪೇಯಿ ಪ್ರಾಣಿ ಸಂಗ್ರಹಾಲಯ ಹಾಗೂ ಮೀಸಲು ಅರಣ್ಯ ಪ್ರದೇಶ ಹಾಗೂ ದರೋಜಿ ಕರಡಿಧಾಮಗಳನ್ನು ವೀಕ್ಷಿಸಿ ಸಂತಸಪಟ್ಟರು.ತಾಲ್ಲೂಕಿನ ಮುಳಸಾವಳಗಿ, ಭೈರವಾಡಗಿ, ದೇವರಹಿಪ್ಪರಗಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳು ಈಗಾಗಲೇ ವನದರ್ಶನ ಮಾಡಿದ್ದು, ಈಗ ಈ ವರ್ಷ ಇಂಗಳಗಿ ಶಾಲೆಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತರಾಷ್ಟಿçಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನನ್ನ ಮತ ನನ್ನ ಹಕ್ಕು ಜಾಗೃತಿ ಅಭಿಯಾನಕ್ಕೆ ರವಿವಾರ ನಗರದ ಗೋಳಗುಮ್ಮಟ ಆವರಣದಲ್ಲಿ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ಕೆ.ಅನಂದ ಚಾಲನೆ ನೀಡಿದರು.ರಾಜ್ಯದ ರಾಜಧಾನಿಯಲ್ಲಿ ಸೆ.೧೫ರಂದು ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರಜಾಪ್ರಭುತ್ವದ ಕುರಿತು ಎಲ್ಲ ಜಿಲ್ಲೆಗಳಿಂದ ಪ್ರತಿನಿಧಿಗಳನ್ನು ಬೈಕ್ ಮೂಲಕ ಪಾಲ್ಗೊಳ್ಳಲಿದ್ದಾರೆ. ನಮ್ಮ ಜಿಲ್ಲೆಯಿಂದಲೂ ಬೈಕ್ ರ್ಯಾಲಿ ಮೂಲಕ ಯುವಕರು ಪ್ರತಿನಿಧಿಸುತ್ತಿದ್ದಾರೆ. ಭವ್ಯವಾದ ಪ್ರಜಾಪ್ರಭುತ್ವ ಪಡೆದ ನಾವುಗಳು ಅದರ ಪಾಲನೆಯನ್ನು ಮಾಡುವುದು ಬಹಳ ಅವಶ್ಯ ಇದೆ ಎಂದು ಹೇಳಿದರು.ಈ ಸಂದರ್ಬದಲ್ಲಿ ಬೈಕ್ ರ್ಯಾಲಿ ಸುರಕ್ಷಿತವಾಗಿ ತಲುಪುವಂತೆ ಶುಭ ಕೋರಿದರು.ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷಣ ನಿಂಬರಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ್ ಪೂಜಾರಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ಸಮಾಜ ಕಲ್ಯಾಣ ಇಲಾಖೆಯ…
ಇಂದು (ಸೆಪ್ಟಂಬರ್ ೧೬, ಮಂಗಳವಾರ) “ವಿಶ್ವ ಓಝೋನ್ ದಿನ”ದ ನಿಮಿತ್ಯ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರತಿಕೋಟಾವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರು, “ಪ್ರತಿಯೊಬ್ಬ ಮನುಷ್ಯನ ಅಗತ್ಯತೆಗಳನ್ನು ಪೂರೈಸಲು ಭೂಮಿಯು ಸಾಕಷ್ಟು ಒದಗಿಸುತ್ತದೆ. ಆದರೆ ಪ್ರತಿಯೊಬ್ಬ ಮನುಷ್ಯನ ದುರಾಶೆಗಳಿಗಲ್ಲ” ಎಂದು ಹೇಳಿದ್ದಾರೆ. ವಿಜ್ಞಾನ-ತಂತ್ರಜ್ಞಾನ ಮತ್ತು ಆಧುನಿಕತೆ ಹೆಸರಿನಲ್ಲಿ ಮಾನವ, ಪಶು, ಪಕ್ಷಿ, ಜೀವಜಂತು, ಸಸ್ಯರಾಶಿಗಳಿಗೆ ಆಶ್ರಯ ತಾಣವಾಗಿರುವ ಪೃಥ್ವಿ, ಪರಿಸರ ಮತ್ತು ರಕ್ಷಾ ಕವಚವಾಗಿರುವ ಓಝೋನ್ ನಾಶ ಮಾಡುತ್ತಿದ್ದಾನೆ. ಸೂರ್ಯನಿಂದ ಹೊರಸೂಸುವ ನೇರಳಾತೀತ ಕಿರಣಗಳನ್ನು ಹೀರಿಕೊಂಡು ಪೃಥ್ವಿಯ ಮೇಲಿನ ಸಕಲ ಜೀವರಾಶಿಗಳನ್ನು ರಕ್ಷಣೆ ಮಾಡುವಲ್ಲಿ ಓಝೋನ್ ಪದರವು ಪ್ರಮುಖ ಪಾತ್ರ ವಹಿಸುತ್ತಿದೆ. ಅದರೆ ಖಾಸಗೀಕರಣ. ಜಾಗತೀಕರಣ ಮತ್ತು ಉದಾರೀಕರಣಗಳಿಂದ ತಲೆ ಎತ್ತುತ್ತಿರುವ ನಗರೀಕರಣ, ಕೈಗಾರಿಕೆ, ಅವಿಷ್ಕಾರ, ಸಂಶೋಧನೆ, ಅಣ್ವಸ್ತ್ರ ಪ್ರಯೋಗ, ಐಷಾರಾಮಿ ವಸ್ತುಗಳ ಉಪಯೋಗ, ಮಿತಿ ಮೀರಿದ ವಾಹನಗಳ ಬಳಕೆಯಿಂದ ಓಝೋನ್ ಪದರದಲ್ಲಿ ರಂಧ್ರಗಳುಂಟಾಗಿ ಕ್ಷೀಣಿಸುತ್ತಿರುವುದು ಆತಂಕಕಾರಿ ಸಂಗತಿ.ಇಂದು ಆಧುನಿಕತೆಗೆ ಮಾರು ಹೋಗುತ್ತಿರುವ ಮಾನವ…
ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಮಹಾಭಾರತದಲ್ಲಿ ಒಂದು ಕಥೆ ಬರುತ್ತದೆ. ಭೀಮ ಮತ್ತು ಅರ್ಜುನ ಇಬ್ಬರೂ ಶಿವನ ದೊಡ್ಡ ಭಕ್ತರು. ಅರ್ಜುನ ದಿನವೂ ಶಿವನನ್ನು ಎರಡು ಗಂಟೆಗಳ ಕಾಲ ಪ್ರಾರ್ಥಿಸುತ್ತಿದ್ದ. ಆದರೆ ಭೀಮ ಕೇವಲ ಎರಡು ನಿಮಿಷ ಪ್ರಾರ್ಥಿಸುತ್ತಿದ್ದ. ಒಂದು ದಿನ ಪ್ರಾರ್ಥನೆ ಮಾಡುವಾಗ ಶಿವ ಪ್ರತ್ಯಕ್ಷನಾಗುತ್ತಾನೆ. ಆಗ ಅರ್ಜುನ ತನ್ನ ಮತ್ತು ಭೀಮನ ನಡುವೆ ನಿಮ್ಮ ಉತ್ತಮ ಭಕ್ತ ಯಾರು ಎಂದು ಶಿವನನ್ನು ಕೇಳುತ್ತಾನೆ. ಹಾಗೆ ಕೇಳುವಾಗ ಅರ್ಜುನನಿಗೆ ಶಿವನ ಉತ್ತಮ ಭಕ್ತ ತಾನೆ ಎಂದು ಖಚಿತವಾಗಿ ಅನಿಸಿರುತ್ತದೆ. ಆದರೆ ಶಿವ ನನ್ನ ಉತ್ತಮ ಭಕ್ತ ಭೀಮ ಎಂದು ಹೇಳುತ್ತಾನೆ. ಆಗ ಅರ್ಜುನ ಅಚ್ಚರಿಯಿಂದ ಶಿವನನ್ನು ಕೇಳುತ್ತಾನೆ. ‘ನಾನು ಪ್ರತಿದಿನ ಎರಡು ಗಂಟೆ ಪ್ರಾರ್ಥನೆ ಮಾಡುತ್ತೇನೆ. ಆದರೆ ಭೀಮ ಕೇವಲ ಎರಡೇ ನಿಮಿಷ ಪ್ರಾರ್ಥನೆ ಮಾಡುತ್ತಾನೆ. ಹಾಗಾದರೆ ಭೀಮ ಹೇಗೆ ಉತ್ತಮ ಭಕ್ತ?’ ಆಗ ಏಕಾಗ್ರತೆಯ ಬಗ್ಗೆ ಶಿವ ಅರ್ಜುನನಿಗೆ ತಿಳಿಸಿ ಹೇಳುತ್ತಾನೆ. ‘ನೀನು…
ಲೇಖನ- ಸಿದ್ಧಾಪುರ ಶಿವಕುಮಾರ್ಲೇಖಕ-ಪತ್ರಕರ್ತ ಉದಯರಶ್ಮಿ ದಿನಪತ್ರಿಕೆ ಇದು ವೈವಿಧ್ಯಮಯ ಜಗತ್ತು. ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಆಯ್ಕೆ ಆಕರ್ಷಣೆ ಮೆಚ್ಚುಗೆ ಅಭಿಮಾನ ಮೂಡುತ್ತವೆ. ಅದು ಅವರವರ ವೈಯಕ್ತಿಕ ಸ್ವಭಾವ ಆಸಕ್ತಿ ಗ್ರಹಿಕೆಗಳ ಮೇಲೆ ಸೃಜಿಸುವಂತಹದ್ದು. ನಮಗೆ ಮೆಚ್ಚುಗೆ ಆದದ್ದು ಇನ್ನೊಬ್ಬರಿಗೆ ಇಷ್ಟವಾಗಲಾರದು. ಆದರೆ ಅಭಿಮಾನ ಆದರ್ಶವಾಗಿರಲು ಅದರದೇ ಆದ ಗೌರವಯುತ ಗ್ರಹಿಕೆ ಮತ್ತು ಅಧ್ಯಯನ ಬೇಕಾಗುತ್ತದೆ. ಅಭಿಮಾನ ಮತ್ತು ಅಭಿಮಾನಿಸಲ್ಪಡುವ ವ್ಯಕ್ತಿತ್ವ ಮತ್ತು ನುಡಿದಂತೆ ನಡೆದ ಬದುಕಿನ ಚಾರಿತ್ರ್ಯ ಸಾರ್ವಜನಿಕ ಹಿತಾಸಕ್ತಿಗೆ ಪೂರಕವಾಗಿದ್ದಲ್ಲಿ ಅವರವರ ಅಭಿಮಾನಕ್ಕೂ ಹೆಮ್ಮೆ ಘನತೆ ಇರುತ್ತದೆ. ಹೀಗಾಗಿಯೇ ಅಭಿಮಾನ ಎಂಬುದು ಅದು ಪರಿಶುದ್ಧ ಅಂತಃಕರಣದ್ದಾಗಿರಬೇಕು. ಏಕಮುಖಿ ಧೋರಣೆಯಿಂದ ಕೂಡಿರಬಾರದು. ತಾನು ಮೆಚ್ಚಿಕೊಂಡವರನ್ನು ಹೊರತುಪಡಿಸಿ ಇತರರಿಗೆ ಶ್ರೇಯಸ್ಸು ಆದರೆ, ಅಸಂಬದ್ಧವಾಗಿ ಕಾಮೆಂಟಿಸಿ ಹೊಟ್ಟೆಕಿಚ್ಚಿನಿಂದ ನರಳಬಾರದು. ಈ ಮಾನಸಿಕ ಕೀಳರಮೆಯ ನರುಳುವಿಕೆ ಎಂದಿಗೂ ಸಜ್ಜನಿಕೆಯಾಗಲಿ ಪ್ರಬುದ್ಧ ಅಭಿಮಾನವಾಗಲಿ ಆಗಲಾರದು. ಇನ್ನೊಬ್ಬರ ಶ್ರೇಯಸ್ಸು ಗೆಲುವು ನಮ್ಮನ್ನು ಕಂಗೆಡಿಸಿದರೆ ನಮ್ಮನ್ನು ನಾವೇ ಅವಿವೇಕಿಗಳಂತೆ ತೋರಿಸಿಕೊಂಡಂತೆ. ದುರಾಭಿಮಾನ ನಮ್ಮ ವ್ಯಕ್ತಿತ್ವಕ್ಕೆ ಖಂಡಿತವಾಗಿ ದಕ್ಕೆ ತರುತ್ತದೆ.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಇದೇ ದಿ.೨೨ ರಿಂದ ಸೆ.೩೦ ರವರೆಗೆ ಎಂಟು ದಿನಗಳ ಕಾಲ ನಡೆಯಲಿರುವ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದ ಯುವ ಪ್ರತಿನಿಧಿ ಮಂಡಳದ ನೇತೃತ್ವವನ್ನು ವಿಜಯಪುರ ಯುವತಿ ಕು.ಶಿಫಾ ಜಮಾದಾರ ವಹಿಸಲಿರುವುದು ಜಿಲ್ಲೆಯ ಇತಿಹಾಸದಲ್ಲಿ ಹೊಸ ಮೈಲುಗಲ್ಲು.ಇದೇ ಪ್ರಥಮ ಬಾರಿಗೆ ಜಾಗತಿಕ ಮಟ್ಟದ ಶೃಂಗ ಸಭೆಯಲ್ಲಿ ವಿಜಯಪುರ ಯುವ ಪ್ರತಿಭೆಯೊಬ್ಬರು ಭಾರತ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.ವಿಶ್ವ ಅಣು ದಿನಾಚರಣೆ ಅಂಗವಾಗಿ ರಷ್ಯಾ ಸರ್ಕಾರ ತನ್ನ ರಾಜಧಾನಿಯಲ್ಲಿ ಸೆ.೨೨ ರಂದು ವಿಶ್ವ ಯುವ ಶೃಂಗ ಸಭೆ ಆಯೋಜಿಸಿದ್ದು, ಭಾರತದಿಂದ ಓರ್ವ ಯುವತಿ, ಓರ್ವ ಯುವಕ ಭಾಗವಹಿಸಲಿದ್ದು, ವಿಜಯಪುರ ಯುವತಿಗೆ ಈ ಅಪೂರ್ವ ಅವಕಾಶ ಪ್ರಾಪ್ತವಾಗಿರುವುದು ಜಿಲ್ಲೆಯಲ್ಲಿ ಹೊಸ ಸಂತಸದ ಅಲೆ ಸೃಷ್ಟಿಸಿದೆ. ಒಟ್ಟು ೧೬೦ ರಾಷ್ಟçಗಳ ಯುವ ಪ್ರತಿನಿಧಿಗಳು ಈ ಶೃಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ.ವಿಶ್ವ ಶಾಂತಿಯಲ್ಲಿ ಯುವಜನರ ಪಾತ್ರ ಎಂಬ ವಿಷಯವಾಗಿ ಕು. ಶಿಫಾ ಜಮಾದಾರ ತಮ್ಮ ವಿದ್ವತಪೂರ್ಣ ವಿಚಾರಗಳನ್ನು ಮಂಡಿಸಲಿದ್ದಾರೆ.ತನ್ನ ಅಧ್ಯಯನವನ್ನು ಶ್ರದ್ಧೆಯಿಂದ…
ವಿಜಯಪುರದ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ಮುಕುಂದ ಕುಲಕರ್ಣಿ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೩೦,೭೫,೧೮೯ ರೂ. ನಿವ್ವಳ ಲಾಭಗಳಿಸುವ ಮೂಲಕ ಪ್ರಗತಿಯತ್ತ ದಾಪುಗಾಲು ಇರಿಸಿದೆ ಎಂದು ಶ್ರೀ ಮಹಾಲಕ್ಷ್ಮೀಸಹಕಾರಿ ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ ಪ್ರಕಟಿಸಿದರು.ವಿಜಯಪುರದ ಶ್ರೀ ಸಂಗನ ಬಸವ ಮಂಗಲ ಕಾರ್ಯಾಲಯದಲ್ಲಿ ನಡೆದ ಶ್ರೀ ಮಹಾಲಕ್ಷೀ ಸಹಕಾರಿ ಬ್ಯಾಂಕ್ ೯೫ ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಬ್ಯಾಂಕಿನ ಪ್ರಗತಿಯನ್ನು ವಿಶ್ಲೇಷಿಸಿದ ಅವರು, ಬ್ಯಾಂಕ ದಿನದಿಂದ ದಿನಕ್ಕೆ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಇದಕ್ಕೆ ಆಡಳಿತ ಮಂಡಳಿ ನಿರ್ದೇಶಕರ ಹಾಗೂ ಸಿಬ್ಬಂದಿಯ ಕಾರ್ಯದಕ್ಷತೆ ಹಾಗೂ ಸದಸ್ಯರ ಸಹಕಾರವೇ ಕಾರಣ ಎಂದರು.ಪ್ರಸ್ತಕ ಆರ್ಥಿಕ ವರ್ಷದಲ್ಲಿ ಬ್ಯಾಂಕಿನ ಒಟ್ಟು ಲಾಭಾಂಶ ೪೬.೪೮ ಲಕ್ಷ ರೂ. ಇದ್ದು ಅದರಲ್ಲಿ ೯.೭೩ ಲಕ್ಷ ರೂ. ತೆರಿಗೆ ಪಾವತಿ ಮಾಡಲಾಗಿದ್ದು ಆ ಮೂಲಕ ೩೦,೭೫,೧೮೯ ರೂ. ನಿವ್ವಳ ಲಾಭ…
