Author: editor.udayarashmi@gmail.com

ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ(ನಡಹಳ್ಳಿ) ರಾಜ್ಯ ಸರ್ಕಾರಕ್ಕೆ ಆಗ್ರಹ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಅತಿವೃಷ್ಟಿಯಿಂದ ಹಾಳಾದ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಹೆಕ್ಟೆರ್‌ಗೆ ೨೫ ಸಾವಿರ ಪರಿಹಾರ ನೀಡಬೇಕು ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ(ನಡಹಳ್ಳಿ) ಒತ್ತಾಯಿಸಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದರು. ತಾಲ್ಲೂಕು ಸೇರಿದಂತೆ ತಾಳಿಕೋಟೆ ತಾಲ್ಲೂಕಿನ ಕಲಕೇರಿ ಹೋಬಳಿ ವ್ಯಾಪ್ತಿಯಲ್ಲಿ ಸುಮಾರು ೫೦ ಸಾವಿರ ಹೆಕ್ಟೆರ್‌ದಲ್ಲಿ ಬಿತ್ತನೆಯಾದ ಬೆಳೆ ಸಂಪೂರ್ಣವಾಗಿ ಹಾಳಾಗಿದ್ದು, ಕೂಡಲೇ ಜಿಲ್ಲಾಡಳಿತ ಈ ಪ್ರದೇಶದಲ್ಲಿ ನಷ್ಟದ ಕುರಿತು ವೈಜ್ಞಾನಿಕ ಸಮೀಕ್ಷೆ ಹಾಗೂ ವರದಿಯನ್ನು ಸರ್ಕಾರಕ್ಕೆ ನೀಡಿ ರೈತರಿಗೆ ನೆರವಿಗೆ ನಿಲ್ಲಬೇಕುತಾಲ್ಲೂಕು ವ್ಯಾಪ್ತಿಯಲ್ಲಿ ವಾಡಿಕೆಗಿಂತ ಪ್ರತಿಶತ ೬೦ ಕ್ಕಿಂತ ಹೆಚ್ಚಿನ ಮಳೆಯಾದ ಪರಿಣಾಮ ನೀರಾವರಿಯಿಂದ ವಂಚಿತವಾದ ಒಣಖುಷ್ಕಿ ಭೂಮಿ ಎಂದು ಕರೆಯಲ್ಪಡುವ ಜಮೀನುಗಳು ಸಂಪೂರ್ಣ ಹಾಳಾಗಿವೆ.ಈಗ ಇಂಥ ಪ್ರದೇಶದ ಬೆಳೆಗಳ ಸಮೀಕ್ಷೆಗಾಗಿ ಕೇವಲ ಗ್ರಾಮಾಡಳಿತಾಧಿಕಾರಿ, ಪಿಡಿಓ ಸಹಿತ ಮೂವರನ್ನು ನೇಮಕ ಮಾಡಲಾಗಿದೆ. ಇದರಿಂದ ಬೆಳೆಯ ಹಾನಿಯ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ನಿಡಗುಂದಿ ತಾಲೂಕಿನ ಹಿರಿಯ ರೈತ ಧುರೀಣ ಬಸವರಾಜ ಶಿವಪ್ಪ ಕುಂಬಾರ ಅವರು ಕನಾ೯ಟಕ ರಾಜ್ಯ ರೈತ ಸಂಘದ ಕಾರ್ಯಕಾರಿ ಸಮಿತಿಯ ನೂತನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಬಸವರಾಜ ಕುಂಬಾರ ಅವರನ್ನು ರೈತ ಸಂಘದ ಕಾರ್ಯಕಾರಿ ಸಮಿತಿಗೆ ನೂತನ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ಸಂಘದ ನೀತಿ ಸಿದ್ದಾಂತಗಳಿಗೆ ಬಗ್ದರಾಗಿ ಕಾಯಕ ಗೈಯಲು ಸೂಚಿಸಿದ್ದಾರೆ.ಪ್ರತಿ ಜಿಲ್ಲಾ ಸಮಿತಿ, ತಾಲೂಕು ಸಮಿತಿ ಸೇರಿದಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ರೈತ ಸಂಘ,ಹಸಿರು ಸೇನೆ ಸಂಘಟನೆಯನ್ನು ಇನ್ನಷ್ಟು ಬಲವಾಗಿ ಸಂಘಟಿಸುವ ಹೊಣೆಗಾರಿಕೆ ಬಸವರಾಜ ಕುಂಬಾರ ಅವರಿಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ರೈತಪರ ಹಿತಕಾಪಾಡುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರಬೇಕೆಂದು ಆಶಿಸಿದ್ದಾರೆ. ಈ ನೇಮಕಾತಿ ಆದೇಶಕ್ಕೆ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹಾಗೂ ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ ಜಂಟಿಯಾಗಿ ಅಂಕಿತ ಹಾಕಿ ಆದೇಶಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಂದ್ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ವಿಜಯಪುರ ನಗರದಲ್ಲಿ ಅ.೧೬ ರಂದು ಬೆಳಿಗ್ಗೆ ೬ ಗಂಟೆಯಿಂದ ಮಧ್ಯರಾತ್ರಿಯವರೆಗೆ ಎಲ್ಲಾ ಮದ್ಯ ಮಾರಾಟ ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಬೋಗದಾರರು ಮದ್ಯ ಸಂಗ್ರಹಿಸುವುದು ಮತ್ತು ಮಾರುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಅ.೧೬ರಂದು ವಿಜಯಪುರ ಬಂದ್ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಜಯಪುರ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಅವರು ಆದೇಶಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ತಹಶೀಲ್ದಾರ ಕಚೇರಿ, ನ್ಯಾಯಬೆಲೆ ಅಂಗಡಿ, ಅಂಗನವಾಡಿ-ಗ್ರಾಮ ಒನ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಡಗುಂದಿ ತಹಶೀಲ್ದಾರ ಕಚೇರಿ ಹಾಗೂ ಅಟಲ್ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ವಿವಿಧ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕಾರ್ಯಗಳಿಗೆ ಸ್ಪಂದಿಸಬೇಕು. ಸಕಾಲ ಅರ್ಜಿಗಳನ್ನು ಕೂಡಲೇ ವಿಲೇ ಮಾಡಬೇಕು. ಯಾವುದೇ ಬಾಕಿ ಕಡತಗಳನ್ನು ಉಳಿಸಿಕೊಳ್ಳದೇ ನಿಗದಿತ ಸಮಯದಲ್ಲಿ ವಿಲೆಗೆ ಕ್ರಮ ವಹಿಸಬೇಕು. ಕಚೇರಿ, ಕಚೇರಿ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.ತಹಶೀಲ್ದಾರ ಕಚೇರಿ ಎದುರಿನ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ನ್ಯಾಯ ಬೆಲೆ ಅಂಗಡಿಯಲ್ಲಿ ಸ್ಟಾಕ್ ರಜಿಸ್ಟರ್ ನಿರ್ವಹಣೆ ಮಾಡಬೇಕು. ಗ್ರಾಹಕರಿಗೆ ನಿಗದಿತ ಅವಧಿಯಲ್ಲಿ ಆಹಾರ ಧಾನ್ಯಗಳನ್ನು ಎಲ್ಲ ಪಡಿತರ ಚೀಟಿದಾರರಿಗೆ ಹಂಚುವಂತೆ ಅವರು ಸೂಚನೆ ನೀಡಿದರು.ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಗರದಾದ್ಯಂತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ವಿವಿಧ ೨೪ ಸಹಕಾರಿ ಸಂಘಗಳು ನಿಯಮಾನುಸಾರ ಕಾರ್ಯನಿರ್ವಹಿಸದೇ ಸ್ಥಗಿತಗೊಂಡಿರುವ ಸೌಹಾರ್ದ ಸಹಕಾರಿ ಸಂಘಗಳನ್ನು ಸಮಾಪನೆ ಮಾಡಲು ಕ್ರಮ ವಹಿಸಲಾಗುತ್ತಿದ್ದು, ಈ ಕುರಿತು ಇಂಡಿ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಆಕ್ಷೇಪಣೆಗಳನ್ನು ಆಹ್ವಾನಿಸಿದ್ದಾರೆ.ಇಂಡಿ ಉಪ ವಿಭಾಗದಲ್ಲಿ ನಿಯಮಾನುಸಾರ ಕಾರ್ಯನಿರ್ವಹಿಸದೇ ಇರುವ ಶ್ರೀ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿ., ಇಂಡಿ, ಸಿಂದಗಿ ತಾಲೂಕಿನ ಶ್ರೀ ಬಿಸಿಲು ಸಿದ್ದೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿ., ಗೋಡಿಹಾಳ, ಕೌಶಲ್ಯ ಸೌಹಾರ್ದ ಪತ್ತಿನ ಸಹಕಾರಿ., ಸಿಂದಗಿ, ಶ್ರೀ ಸಿದ್ಧರಾಮೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿ.,ಇಂಡಿ, ಶ್ರೀ ದುರ್ಗಾದೇವಿ ಪ.ಜಾ.ಮತ್ತು ಪ.ಪಂ. ಸೌಹಾರ್ದ ಪತ್ತಿನ ಸಹಕಾರಿ ನಿ., ಹೊರ್ತಿ, ಶ್ರೀ ಮುಕ್ತಾದೇವಿ ಪ.ಜಾ. ಮತ್ತು ಪ.ಪಂ. ವಿವಿದೋದ್ದೇಶಗಳ ಸೌಹಾರ್ದ ಪತ್ತಿನ ಸಹಕಾರಿ ನಿ., ಹಡಲಸಂಗ, ಸಮೃದ್ದಿ ಪತ್ತಿನ ಸೌಹಾರ್ದ ಪತ್ತಿನ ಸಹಕಾರಿ ನಿ., ದೇವರಹಿಪ್ಪರಗಿ, ಸಿಂದಗಿ ಶ್ರೀ ಓಂ ಸಾಯಿ ಸೌಹಾರ್ದ ಪತ್ತಿನ ಸಹಕಾರಿ ನಿ., ಸಿಂದಗಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ೨೦೨೫-೨೬ನೇ ಸಾಲಿನಲ್ಲಿ ಡಿಸೆಂಬರ್ ೨೧ ರಿಂದ ೨೩ ರವರೆಗೆ ಮೌಲ್ಯವರ್ಧನೆ ಮತ್ತು ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳವನ್ನು ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ತೋಟಗಾರಿಕಾ ಮೇಳದಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ವ್ಯಾಪ್ತಿಯಲ್ಲಿ ಬರುವ ೨೪ ಜಿಲ್ಲೆಗಳ ಪ್ರತಿ ಜಿಲ್ಲೆಗೆ ಒಬ್ಬರಂತೆ ಶ್ರೇಷ್ಠ ರೈತ, ರೈತ ಮಹಿಳೆ ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.ಜಿಲ್ಲೆಯ ರೈತ, ರೈತ ಮಹಿಳೆಯರು ಅರ್ಜಿ ನಮೂನೆಯನ್ನು ಮುಖ್ಯಸ್ಥರು, ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ,ತಿಡಗುಂದಿ ಅಥವಾ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ಇವರಿಂದ ಪಡೆಯಬಹುದು ಅಥವಾ ವೆಬ್‌ಸೈಟ್ www.uhsbagalkot.karnataka.gov.inಮೂಲಕ ಪಡೆದು, ಭರ್ತಿ ಮಾಡಿ, ನವೆಂಬರ್ ೫, ೨೦೨೫ ರೊಳಗಾಗಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಮೊ: ೯೪೮೦೬೯೬೩೯೦ ಅಥವಾ ಶುಲ್ಕ ರಹಿತ ಉದ್ಯಾನ ಸಹಾಯವಾಣಿ ಸಂಖ್ಯೆ ೧೮೦೦ ೪೨೫ ೭೯೧೦ ಗೆ ಸಂಪರ್ಕಿಸಬಹುದು ಎಂದು ತಿಡಗುಂದಿ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಶ್ರೀಮಂತ ಸಂಸ್ಕೃತಿ ಪೋಷಿಸುತ್ತ ಸಾರ್ವತ್ರಿಕ ಮೌಲ್ಯಗಳನ್ನು ಜಗತ್ತಿಗೆ ಬಿತ್ತರಿಸುತ್ತಿದೆ. ಅಂತಹ ಮೌಲ್ಯಾಧಾರಿತ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಲು ಇಂದಿನ ಯುವ ಜನಾಂಗ ಹಿಂದೆಟು ಹಾಕುತ್ತಿರುವುದು ವಿಷಾದನೀಯ ಸಂಗತಿ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತರ ಫೆಡರೇಶನದ ರಾಷ್ಟ್ರೀಯ ಅಧ್ಯಕ್ಷ ಡಾ.ಜಾವೀದ ಜಮಾದಾರ ಹೇಳಿದರು.ನಗರದ ಬಿ.ಎಲ್.ಡಿ.ಈ. ಅಸೋಶಿಯೇಶನ್ ಎ.ವಿ.ಎಫ್. ಆಯುರ್ವೇದ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ನೆಹರು ಯುವ ಕೇಂದ್ರ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ ೨೦೨೫ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ಯುವಜನೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಪಾಶ್ಚಾತ್ಯ ಸಂಸ್ಕೃತಿಯ ಅತಿಯಾದ ವ್ಯಾಮೋಹದಿಂದ ಯುವಜನತೆ ನಮ್ಮ ಸಂಸ್ಕೃತಿಯ ಬಗ್ಗೆ ಒಲವು ಬೆಳೆಸಿಕೊಳ್ಳುತ್ತಿಲ್ಲ. ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಕರಣೆ ಮಾಡುವದಕ್ಕಿಂತ ನಮ್ಮ ನೆಲದ ಭವ್ಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕು ಎಂದರು.ಜಾನಪದ ಸಂಸ್ಕೃತಿ ಉಳಿಸಿ ಬೆಳೆಸಲು ಪ್ರತಿಯೊಬ್ಬರು ಪಣತೊಡಬೇಕಾಗಿದೆ. ಜನಪದ ಕಲೆಗಳು ಮಾನವೀಯ ಸಂಬಂಧದ ಸರಪಳಿ ಜಾನಪದ ಕಲೆ ನಮ್ಮ ಪೂರ್ವಜರು ನೀಡಿದ ಅನುಪಮ ಕೊಡುಗೆ,…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಕಳೆದ ೪೫ ದಿನಗಳಿಂದ ಕೆಟ್ಟು ನಿಂತಲ್ಲೆ ನಿಂತಿರುವ ಅಂಬ್ಯುಲೇನ್ಸ ದುರಸ್ತಿಗೊಳಿಸಿ ರೋಗಿಗಳ ಹಾಗೂ ಅಪಘಾತ ಸೇವೆಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.ಈ ವೇಳೆ ಮಾತನಾಡಿದ ಮುಖಂಡರು, ಸರಕಾರದ ಕೆಲಸ ದೇವರ ಕೆಲಸ ಸೇವೆಗೆ ಅಂಬ್ಯುಲೆನ್ಸ ಇಲ್ಲದೆ ನಿತ್ಯ ರೋಗಿಗಳ ಪರದಾಟ ಮುಂದುವರೆದಿದೆ. ಇದನ್ನು ಸಾಕಷ್ಟು ಬಾರಿ ಮೇಲಾಧಿಕಾರಿಗಳ ಗಮನಕ್ಕೂ ತಂದರೂ ಪ್ರಯೋಜನ ಇಲ್ಲದಂತಾಗಿದೆ. ಆದರೆ ಅಧಿಕಾರಿಗಳು ಯಾವುದೆ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಇನ್ನಾದರೂ ಆದಷ್ಟು ಬೇಗನೆ ಅಧಿಕಾರಿಗಳು ಅಂಬ್ಯೂಲೆನ್ಸ ಸೇವೆಗೆ ಅನುಕೂಲ ಮಾಡಿಕೊಡಬೇಕೆಂದು ಪ್ರಮುಖರಾದ ಶಿವಶಂಕರಯ್ಯಾ ಜಿ ಮಠ, ರೈತ ಸಂಘ ಹಾಗೂ ಹಸೀರು ಸೇನೆ ಜಿಲ್ಲಾ ಸಂಚಾಲಕ ನಜೀರ ನಂದರಗಿ, ಶಿವಪ್ಪ ಪಟ್ಟಣಶೆಟ್ಟಿ ಆಗ್ರಹಿಸಿದ್ದಾರೆ. “ಈಗಾಗಲೆ ಡಿಎಚ್ಓ ಅವರ ಗಮನಕ್ಕೆ ಈ ವಿಷಯ ತರಲಾಗಿದೆ. ಅಂಬ್ಯುಲೆನ್ಸ ದುರಸ್ತಿ ಮಾಡಲಾಗುವದೆಂದು ಹೇಳಿದ್ದಾರೆ. ಯಾವಾಗ ಮಾಡಿಸ್ತಾರೋ ಗೊತ್ತಿಲ್ಲ.” – ಡಾ ಅಕ್ಷಯಕುಮಾರ ವಾಗಮೋರೆಪ್ರಾಥಮಿಕ ಆರೋಗ್ಯ ಕೇಂದ್ರ, ತಿಕೋಟಾ.

Read More

ಪಂದ್ಯಾವಳಿಯ ಲಾಂಛನ ಮತ್ತು ಟ್ರೋಪಿ ಬಿಡುಗಡೆಗೊಳಿಸಿ ಶಾಸಕ ಅಶೋಕ ಮನಗೂಳಿ ಭರವಸೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಗಳು ಸಿಂದಗಿ ಪಟ್ಟಣದಲ್ಲಿ ಜರುಗುತ್ತಿರುವುದು ಅತ್ಯಂತ ಸಂತಸ ತಂದಿದೆ. ಪಂದ್ಯಾವಳಿ ಯಶಸ್ವಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿ ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.ಸಿಂದಗಿ ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ. ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಬಾಲಕ ಮತ್ತು ಬಾಲಕಿಯರ ಕುಸ್ತಿ ಪಂದ್ಯಾವಳಿಯ ಲಾಂಛನ ಮತ್ತು ಟ್ರೋಪಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯಿಂದ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಹಾಗೂ ತಾಲೂಕಾಡಳಿತದಿಂದ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು. ಇಂದಿನ ಪಾಲಕರು ಕೇವಲ ಶಿಕ್ಷಣದ ಬಗ್ಗೆ ಮಾತ್ರ ಒಲವನ್ನು ತೋರಿಸುತ್ತಿದ್ದಾರೆ. ಅದರ ಜೊತೆಗೆ ಕ್ರೀಡೆ ಬಗ್ಗೆನೂ ಮಕ್ಕಳಲ್ಲಿ ಹೆಚ್ಚು ಆಸಕ್ತಿಯನ್ನು ಮೂಡಿಸಬೇಕಾಗಿದೆ. ದೈಹಿಕ ಮಾನಸಿಕ ಮತ್ತು ಬೌದ್ಧಿಕ ಪ್ರಕ್ರಿಯೆಗಳು ಕ್ರೀಡೆಗಳಿಂದ ಉತ್ತಮಗೊಳ್ಳುತ್ತವೆ. ಕ್ರೀಡಾ…

Read More

ಬಿಜೆಪಿ ಮಂಡಲ ಮತ್ತು ರೈತ ಮೋರ್ಚಾ ವತಿಯಿಂದ ಅಹೋರಾತ್ರಿ ಧರಣಿ | ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಅತಿವೃಷ್ಟಿಯಿಂದ ಉತ್ತರ ಕರ್ನಾಟಕದಲ್ಲಿ ರೈತರು ಬೆಳೆದ ಬೆಳೆಗಳೆಲ್ಲ ಹಾನಿಯಾಗಿ ಸಂಕಷ್ಟದಲ್ಲಿರುವ ರೈತರ ಬಗ್ಗೆ ಯೋಚನೆ ಮಾಡದೆ ಅಧಿಕಾರಕ್ಕಾಗಿ ಸಭೆ ಮಾಡುತ್ತಿರುವ ಸರಕಾರವನ್ನು ನನ್ನ ನಿರಂತರ ೪೫ ವರ್ಷಗಳ ರಾಜಕಾರಣದಲ್ಲಿ ಇಂತಹ ಹೊಲಸು ಸರಕಾರವನ್ನು ನಾನು ಎಂದು ನೋಡಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದರು.ಸಿಂದಗಿ ಪಟ್ಟಣದ ತಹಶೀಲ್ದಾರ್ ಆವರಣದಲ್ಲಿ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ ವತಿಯಿಂದ ಹಮ್ಮಿಕೊಂಡ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೀವು ಏನಾದರೂ ಮಾಡಿಕೊಂಡ ಹಾಳು ಬಾವಿಗೆ ಬಿಳಿ, ರೈತರ ಕಣ್ಣಿರಿನಲ್ಲಿ ಕೈತೊಳೆದುಕೊಳ್ಳುತ್ತಿದ್ದಾರೆ. ಇದೆಲ್ಲವನ್ನು ಬಿಟ್ಟು ನೀವು ಕುರ್ಚಿಗಾಗಿ ಬಡೆದಾಡುತ್ತಿರುವುದು ಸರಿಯಲ್ಲ. ರೈತರು ಬೆಳೆದ ಬೆಳೆಯಲ್ಲ ಹಾಳಾಗಿ ಹೋಗಿದೆ. ಸರಕಾರದ ಬೆಳೆಹಾನಿ ಸಮೀಕ್ಷೆಯ ವರದಿ ತಪ್ಪಾಗಿದ್ದು, ಸರಿಯಾದ ರೀತಿಯಲ್ಲಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಬೇಕು. ರೈತರಿಗೆ ಪರಿಹಾರ ಸಿಗುವವರೆಗೂ ಧರಣಿ…

Read More