Author: editor.udayarashmi@gmail.com

ವಿಜಯಪುರದಲ್ಲಿ ರೂ.1,36,98,523/- ಮೌಲ್ಯದ “ಲೈಪ್ ಅಗ್ರೋ ಕೆಮಿಕಲ್” ಹೆಸರಿನಲ್ಲಿರುವ ನಕಲಿ ಕ್ರಿಮಿನಾಶಕ ಔಷಧಗಳು ಜಪ್ತಿ! ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕೆಐಎಡಿಬಿ ಸರ್ವೆ ನಂ: 1051/ಎ1/ಎ, ಪ್ಲಾಟ್ ನಂ: 279 ರಲ್ಲಿನ ಗೊಡಾವನದಲ್ಲಿ ಅನಧಿಕೃತವಾಗಿ ನಕಲಿ ಕ್ರಿಮಿನಾಶಕ ಔಷಧಿಗಳು ತಯಾರಿಸುತ್ತಿದ್ದ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಈರ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೆ11 ರಂದು ಸಂಜೆ 4.30 ಗಂಟೆಯ ಸುಮಾರಿಗೆ ಆರೋಪಿತರಾದ ವಿದ್ಯಾಸಾಗರ ತಂದೆ ಚಿನ್ನಾರೆಡ್ಡಿ ಮಲ್ಲಾಬಾದಿ, 42 ವರ್ಷ, ಸಾ|| ಕೊಂಡಗೂಳಿ ಹಾಗೂ ಅಮರ ತಂದೆ ಗುರುನಾಥ ರೆಡ್ಡಿ, 19 ವರ್ಷ, ಸಾ|| ಬೊಳನಿ ತಾ|| ಆಳಂದ ಜಿ|| ಕಲಬುರ್ಗಿ ಇವರು “ಗೋಲ್ಡನ್ ಡ್ರಾಪ್ ಕ್ರಾಪ್ ಪ್ರೋಟೆಕ್ಷನ್” ಎನ್ನುವ ಕಂಪನಿಯ ಬೋರ್ಡ್ ಹಾಕಿಕೊಂಡು ಸದರಿ ಗೋಡಾವನಲ್ಲಿ “ಲೈಪ್ ಅಗ್ರೋ ಕೆಮಿಕಲ್” ಕಂಪನಿಯ ಹೆಸರಿನಲ್ಲಿ ತಾವೇ ತಯಾರಿಸಿದ ನಕಲಿ ಕ್ರಿಮಿನಾಶಕ ಔಷಧಗಳಿಗೆ “ಲೈಪ್ ಅಗ್ರೋ ಕೆಮಿಕಲ್”* ಕಂಪನಿಯ ಲೇಬಲ್‌ಗಳನ್ನು ಅಂಟಿಸಿ, ಅನಧೀಕೃತವಾಗಿ ನಕಲಿ ಕ್ರಿಮಿನಾಶಕ ಔಷಧಗಳನ್ನು ತಯಾರಿಸಿ, ಗೋಡಾವನದಲ್ಲಿ ಸಂಗ್ರಹಿಸಿ ಇಟ್ಟುಕೊಂಡು…

Read More

ಸಿಂದಗಿಯಲ್ಲಿ ೮೪ ಕುಟುಂಬಗಳ ಮನೆಗಳನ್ನು ತೆರವುಗೊಳಿಸಿದ ಕ್ರಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಖಂಡನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಿಂದಗಿ ನಗರದಲ್ಲಿ ೮೪ ಕುಟುಂಬಗಳ ಮನೆಗಳನ್ನು ತೆರವುಗೊಳಿಸಿ ನಿರ್ಗತಿಕರನ್ನಾಗಿ ಮಾಡಿರುವುದು ಅತ್ಯಂತ ಖಂಡನೀಯ, ಕೂಡಲೇ ಈ ಎಲ್ಲ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಬಡವರ ಮೇಲೆ ಗದಾಪ್ರಹಾರ ಮಾಡುವುದು ಸರಿಯಲ್ಲ, ತೆರವು ಕಾಮಗಾರಿ ನಡೆಸುವ ಪೂರ್ವದಲ್ಲಿ ಶಾಶ್ವತ ಪರಿಹಾರ ಕಲ್ಪಿಸುವುದನ್ನು ಬಿಟ್ಟು ಏಕಾಏಕಿ ಕಾಮಗಾರಿ ನಡೆಸಿದರೆ ಬಡವರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು.ಸಿಂದಗಿ ನಗರ ವ್ಯಾಪ್ತಿಯ ವಾರ್ಡ ನಂ-೨೩ ರಲ್ಲಿನ ಸರ್ವೆ ಸಂ- ೮೪೨/೧ಅ ಕ್ಷೇತ್ರ ೪.೦೦ ಎಕರೆ ಪುರಸಭೆಯ ಜಮೀನಿನಲ್ಲಿ ೨೦೦೪ ನೇ ಸಾಲಿನಲ್ಲಿ ಅಂದಿನ ಶಾಸಕರು, ಪುರಸಭೆ ಅಧಿಕಾರಿಗಳು ಹಾಗೂ ತಹಶೀಲ್ದಾರರ ಸಮ್ಮುಖದಲ್ಲಿ ಸರಿಸುಮಾರು ೮೪ ಮುಗ್ಧ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಮಹಾವೀರ ಕಾಲೋನಿಯಲ್ಲಿರುವ ಶ್ರೀ ಸಂಗನಬಸವ ಸಮುದಾಯ ಭವನದಲ್ಲಿ ಇದೇ ಸೆ.೧೪ ರಂದು ಬೆಳಿಗ್ಗೆ ೧೧ ಕ್ಕೆ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ನಿಯಮಿತ ೯೫ ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಕರೆಯಲಾಗಿದೆ.ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದು, ಸದಸ್ಯರು ಸಭೆಗೆ ಪಾಲ್ಗೊಳ್ಳಬೇಕು ಎಂದು ವ್ಯವಸ್ಥಾಪಕಿ ಪದ್ಮಾವತಿ ವಿ ಕುಲಕರ್ಣಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಬಳಗಾನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಾಲಭಾರತಿ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ.ಈ ವೇಳೆ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಎಸ್.ಆಯ್.ಜೋಗೂರ, ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಸತತ ಪ್ರಯತ್ನದ ಫಲವಾಗಿ ಕ್ರೀಡಾ ಸ್ಪೂರ್ತಿ ಇಟ್ಟುಕೊಂಡು ಆಟ ಆಡಿದ್ದರಿಂದ ಓಟ, ಉದ್ದ ಜಿಗಿತ ಹಾಗೂ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುವುದು ಸಂತಸ ತಂದಿದೆ. ವಿದ್ಯಾರ‍್ಥಿಗಳು ಆಟ ಹಾಗೂ ಪಾಠಗಳನ್ನು ಸಮಾನವಾಗಿ ತೆಗೆದುಕೊಂಡು ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.ಈ ವೇಳೆ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಮಾತನಾಡಿ, ಕ್ರೀಡಾ ಸ್ಪೂರ್ತಿಯಿಂದ ಆಟ ಆಡಿದ ವಿದ್ಯಾರ್ಥಿಗಳು ಹಾಗೂ ಸತತವಾಗಿ ತರಬೇತಿ ನೀಡಿದ ಕ್ರೀಡಾ ಶಿಕ್ಷಕಿಯರು ನಮ್ಮ ಶಾಲೆಯ ರತ್ನಗಳು ಇದ್ದಂತೆ ಎಂದು ಶ್ಲಾಘಿಸಿದರು.ಈ ವೇಳೆ ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಲಕ್ಷ್ಮೀಬಾಯಿ ಹಳೇಮನಿ, ಸುವರ‍್ಣ ಸಾರಂಗಮಠ, ಸೀತಾ…

Read More

ಮಾಜಿ ಶಾಸಕ ಭೂಸನೂರ ತಮ್ಮ ತಪ್ಪು ಮುಚ್ಚಿಕೊಳ್ಳಲು ನಮ್ಮ ಕುಟುಂಬದ ಬಗ್ಗೆ ಆಪಾದನೆ | ಶಾಸಕ ಅಶೋಕ ಮನಗೂಳಿ ವಾಗ್ದಾಳಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತೆರವುಗೊಳಿಸಲಾದ ಸರ್ವೇ ನಂ.೮೪೨ರ ಜಾಗೆಯ ಬಗ್ಗೆ ನನಗೇನೂ ಗೊತ್ತೇ ಇಲ್ಲ ಎಂದು ಹೇಳುವ ಮಾಜಿ ಶಾಸಕರು ಉಪ-ಚುನಾವಣೆಯ ಸಂದರ್ಭದಲ್ಲಿ ಆಗಿನ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಇದೇ ವಿಷಯ ಕುರಿತು ಸಲ್ಲಿಸಿದ ಮನವಿ ಪತ್ರ ನಮ್ಮ ಬಳಿ ಇದೆ. ತಮ್ಮ ಅವಧಿಯಲ್ಲಿ ಮಾಜಿ ಶಾಸಕ ಭೂಸನೂರ ಇದರ ಕುರಿತು ಪರಿಹಾರ ಕಂಡುಕೊಳ್ಳಬಹುದಿತ್ತು. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ವೈಯಕ್ತಿಕವಾಗಿ ನಮ್ಮ ಕುಟುಂಬದ ಬಗ್ಗೆ ಆಪಾದನೆ ಮಾಡುವ ಮುಖಾಂತರ ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ್ದಾರೆ ಎಂದು ಶಾಸಕ ಅಶೋಕ ಮನಗೂಳಿ ಹರಿಹಾಯ್ದರು.ಸಿಂದಗಿ ಪಟ್ಟಣದ ಪುರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನನ್ನ ಕುರಿತು ಮಾಡಿದ ೧೬ ಆಪಾದನೆಗಳಲ್ಲಿ ಎಪಿಎಂಸಿಯಲ್ಲಿನ ಕಟ್ಟಡದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಮಾಡಿದ್ದು ನನ್ನ ತಪ್ಪು, ಅದನ್ನು ನಾನು ಒಪ್ಪಿಕೊಂಡು ಕಾರ್ಯಾಲಯವನ್ನು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವೆ ಸೆ.೧೪ರಂದು ದುಬೈನಲ್ಲಿ ನಡೆಯುತ್ತಿರುವ ಏಷ್ಯಾಕಪ್-೨೦೨೫ ಟಿ೨೦ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡ ಗೆದ್ದು ಬರಲಿ ಎಂದು ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಪ್ರಶಿಕ್ಷಣಾರ್ಥಿಗಳು ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದರು.ಈ ವೇಳೆ ಪ್ರಾಧ್ಯಾಪಕ ದಾನಯ್ಯ ಮಠಪತಿ, ಸುಧಾಕರ ಚೌವ್ಹಾಣ, ಚನ್ನು ಕತ್ತಿ ಮಾತನಾಡಿ, ಭೀಕರ ಪೆಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದಕ್ಕೆ ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಉತ್ತರದ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವೇಷ ಹೊಗೆಯಾಡುತ್ತಿದೆ. ಇಂತಹ ಬಿಗುವಿನ ವಾತಾವರಣದಲ್ಲಿ ಉಭಯ ದೇಶಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯುವುದು ಅಷ್ಟು ಸುಲಭದ ಮಾತಲ್ಲ. ಈ ಬಾರಿ ಟಿ-೨೦ ಏಷ್ಯಾ ಕಪ್‌ನಲ್ಲಿ ಪಂದ್ಯಾವಳಿಗಿಂತಲೂ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳ ಕುರಿತು ಹೆಚ್ಚು ಚರ್ಚೆಯಾಗುತ್ತಿದೆ. ಪೆಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆ ಬಳಿಕ ಆಪರೇಷನ್ ಸಿಂಧೂರ ಸೇನಾ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪ್ಲೀಸ್ ನಮ್ಮನ್ನು ಬಿಟ್ಟು ಹೋಗ್ಬೇಡಿ, ನಿಮ್ಮನ್ನ ನಾವು ಬಿಟ್ಟಿರಲ್ಲ, ಅಪ್ಪಿಕೊಂಡು ಕಂಬನಿಯಿಟ್ಟು ನಮ್ಮನ್ನು ಬಿಟ್ಟು ಹೋಗ್ಬೇಡಿ, ಕಾಲು ಹಿಡಿದು ಹೀಗೆ ಮಕ್ಕಳು ಕಣ್ಣೀರಿಡುತ್ತಿದ್ದರೆ, ನೆರೆದವರ ಕಣ್ಣಾಲೆಗಳು ಒದ್ದೆಯಾಗುತ್ತಿತ್ತು. ಇಷ್ಟಕ್ಕೂ ಮಕ್ಕಳ ಈ ರೋಧನೆಗೆ ಕಾರಣ ಶಿಕ್ಷಕಿಯ ವರ್ಗಾವಣೆ.ತಾಲೂಕಿನ ಕೂಡಗಿ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಬಹುಮುಖ ಪ್ರತಿಭೆಯ ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕಿ ಪ್ರತಿಭಾ ತೊರವಿ ಹಠಾತ್ ಬೇರೆ ಶಾಲೆಗೆ ವರ್ಗಾವಣೆ ಸುದ್ದಿ ತಿಳಿದು, ಬೆಳಗಿನ ಪ್ರಾರ್ಥನೆ ಸಮಯ ವರ್ಗಾವಣೆ ವಿಷಯ ಮಕ್ಕಳು ಕಣ್ಣೀರಿಡಲು ಶುರುಮಾಡಿದರು. ತಮ್ಮ ಪಾಠ ಹೇಳಿಕೊಡುವದಷ್ಟೇ ಅಲ್ಲದೆ ಬದುಕು ಹೇಗೆ ಸಾಗಿಸಬೇಕು ಎಂದು ಹೃದಯಸ್ಪರ್ಶಿ ಪಾಠಗಳನ್ನು ಕಲಿಸಿದ್ದ ಶಿಕ್ಷಕಿ ನಮ್ಮನ್ನು ಬಿಟ್ಟು ಬೇರೆ ಶಾಲೆಗೆ ಹೋಗುತ್ತಿದ್ದಾರೆಂಬ ಕಲ್ಪನೆಯೇ ಮಕ್ಕಳಿಗೆ ಸಹಿಸಲಾಗಲಿಲ್ಲ. ಸಣ್ಣಪುಟ್ಟ ಮಕ್ಕಳಿಂದ ಹಿಡಿದು ಹಿರಿಯ ತರಗತಿಯ ವಿದ್ಯಾರ್ಥಿಗಳವರೆಗೂ ಕಣ್ಣೀರಿನಲ್ಲಿ ತೇಲಿದರು. ತರಗತಿಗೆ ಬಂದು ತಾಯಿ ತರಹ ಮುದ್ದಾಡುತ್ತಿದ್ದ, ತಪ್ಪು ಮಾಡಿದಾಗ ಅಳುವ ಬದಲು ತಿದ್ದಿ ಪಾಠ ಕಲಿಸುತ್ತಿದ್ದ…

Read More

ಸಂತ್ರಸ್ತರ ಬೇಡಿಕೆಯಂತೆ 1 ಎಕರೆ ನೀರಾವರಿ ಭೂಮಿಗೆ 55 ಲಕ್ಷ ಒಣ ಬೇಸಾಯಿ 1 ಎಕರೆ ಜಮೀನಿಗೆ 45 ಲಕ್ಷ ರೂ. ಬೆಲೆ ನಿಗದಿಗೆ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಒತ್ತಾಯ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಜಿಲ್ಲೆಯ ಆಲಮಟ್ಟಿ ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದಲ್ಲಿ ಮುಳುಗಡೆ ಹಾಗೂ ಕಾಮಗಾರಿಗೆ ವಿಜಯಪುರ-ಬಾಗಲಕೋಟ ಜಿಲ್ಲೆಗಳ ಸುಮಾರು 1 ಲಕ್ಷ 30 ಸಾವಿರ ಎಕರೆ ಭೂಮಿಗೆ ಸಂತ್ರಸ್ತರ ಬೇಡಿಕೆಯಂತೆ 1 ಎಕರೆ ನೀರಾವರಿ ಭೂಮಿಗೆ 55 ಲಕ್ಷ ಒಣ ಬೇಸಾಯಿ 1 ಎಕರೆ ಜಮೀನಿಗೆ 45 ಲಕ್ಷ ರೂ. ಗಳಂತೆ ಬೆಲೆ ನಿಗದಿ ಮಾಡಿ ಫರಿಹಾರ ನೀಡಬೇಕು ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಒತ್ತಾಯಿಸಿದರು.ಪಟ್ಟಣದ ಎಸ್.ಕೆ. ಬೆಳ್ಳುಬ್ಬಿ ಪದವಿ ಪೂರ್ವ ಕಾಲೇಜ ಆವರಣದ ಕನ್ವೆನ್ಷನ್ ಹಾಲನಲ್ಲಿ ಶನಿವಾರ ಬಿಜೆಪಿ ಬಸವನ ಬಾಗೇವಾಡಿ ಮಂಡಲ ಸಭೆಯ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದರು.ಈಗ ದಿ.16 ರಂದು ವಿಶೇಷ ಸಂಪುಟ ಸಭೆ ಕರೆದಿದ್ದು ಆ ಸಭೆಯಲ್ಲಿ ಹಿನ್ನೀರಿನಲ್ಲಿ ಮುಳಗಡೆಯಾಗಲಿರುವ ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಭೀಮಾ ನದಿ ಜಲಾನಯನ ಪ್ರದೇಶ ಹಾಗೂ ಭೋರಿ ಹಳ್ಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಹಳ್ಳದ ನೀರು ಪುನಃ ಭೀಮಾ ನದಿಗೆ ಸೇರುತ್ತಿರುವ ಕಾರಣದಿಂದಾಗಿ ಭೀಮಾ ನದಿಯಲ್ಲಿ ಮತ್ತೆ ನೀರಿನ ಹರಿವು ಹೆಚ್ಚಾಗಿದೆ.ಈ ಕುರಿತು ಕೆಎನ್‌ಎನ್‌ಎಲ್ ಕಾರ್ಯಪಾಲಕ ಎಂಜಿನಿಯರ್ ಸಂತೋಷಕುಮಾರ ಸಜ್ಜನ್ ಅವರು ಮಾಹಿತಿ ನೀಡಿದ್ದು ಭೀಮಾ ನದಿಯಲ್ಲಿಗ ೩೪ ಸಾವಿರ ಕ್ಯೂಸೇಕ್ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಬ್ಯಾರೇಜ್‌ನಿಂದ ಹೊರಗಡೆ ಬಿಡಲಾಗುತ್ತಿದೆ, ಹೀಗಾಗಿ ಭೀಮಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವ ಕಾರಣದಿಂದ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವುದು ಒಳಿತು ಎಂದು ಮನವಿ ಮಾಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಈ ವರ್ಷದ ಮಳೆಗಾಲ ಭರ್ಜರಿಯಾಗಿದ್ದು ಹಳ್ಳ ಕೊಳ್ಳಗಳು ತುಂಬಿಕೊಂಡು ಜನ ಸಾಮಾನ್ಯರಿಗೆ ಹಳ್ಳ ದಾಟಲು ಕೂಡ ಸಮಸ್ಯೆ ತಂದೊಡ್ಡಿದೆ. ತಾಲೂಕಿನ ಬಿದನೂರ ಗ್ರಾಮದಲ್ಲಿನ ಹಳ್ಳ ತುಂಬಿ ಹರಿದು ಹಳ್ಳದ ಸೇತುವೆ ತುಂಬಿಕೊಂಡಿದ್ದರಿಂದ ಹಳ್ಳ ದಾಟಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಶಿಕ್ಷಕರು ಹರಸಾಹಸ ಪಡುವಂತಾಗಿದೆ.ಬಿದನೂರ ಹಳ್ಳದ ಸೇತುವೆಯ ಎತ್ತರ ಬಹಳ ಕಡಿಮೆ ಇದ್ದು ಪ್ರತಿ ವರ್ಷ ಮಳೆ ಹೆಚ್ಚಾದರೆ ಸೇತುವೆ ಮುಳುಗಡೆಯಾಗುತ್ತಿದೆ ಎಂದು ಎಸ್‌ಡಿಎಂಸಿಯವರು ಕಳೆದ ಬಾರಿಯ ಸಭೆಯಲ್ಲಿ ಚರ್ಚೆ ನಡೆಸಿ ಸಂಬಂಧ ಪಟ್ಟವರ ಗಮನಕ್ಕೆ ತಂದು ಸೇತುವೆ ಎತ್ತರ ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡಿದ್ದಾರು. ಆದರೂ ಕೂಡ ಸಂಬಂಧ ಪಟ್ಟವರು ಸೇತುವೆ ಎತ್ತರಕ್ಕೆ ಹೆಚ್ಚಳಕ್ಕೆ ಕ್ರಮ ಕೈಗೊಂಡಿಲ್ಲ, ಅಲ್ಲದೆ ಅವಗಢ ಸಂಭವಿಸುವ ಮುನ್ನ ಶಾಲೆ ಮಕ್ಕಳು, ಶಿಕ್ಷಕರು, ಸಾರ್ವಜನಿಕರು, ರೈತರಿಗೆ ಅನುಕೂಲ ಮಾಡಿಕೊಡುವ ಕೆಲಸ ಮಾಡಬೇಕು ಎಂದು ಬಿದನೂರ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More