Author: editor.udayarashmi@gmail.com

ಪ್ರವಾಹ ಪೀಡಿತ ಊರುಗಳಿಗೆ ಜಿ.ಪಂ ಸಿಇಒ ಭೇಟಿ ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭೋರಿ ಹಳ್ಳ ತುಂಬಿ ಹರಿಯುತ್ತಲಿದ್ದು, ಹಳ್ಳದ ನೀರಿನಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಶುಕ್ರವಾರ ಪ್ರವಾಹ ಪೀಡಿತ ಊರುಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಭನ್ವರಸಿಂಗ್ ಮೀನಾ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ವಿಕ್ಷಣೆ ಮಾಡಿದರು.ಬಳಿಕ ಮಾತನಾಡಿದ ಅವರು ಮಳೆ ಹೆಚ್ಚಾಗಿ ಭೋರಿ ಹಳ್ಳ ತುಂಬಿ ಹರಿಯುತ್ತಿದೆ, ಹಳ್ಳದ ನೀರು ಭೀಮಾ ನದಿ ಸೇರಿಕೊಂಡು ನದಿಯಲ್ಲೂ ನೀರಿನ ಹರಿವು ಹೆಚ್ಚಾಗಿದೆ. ಭೋರಿ ಹಳ್ಳದ ಪಾತ್ರದಲ್ಲಿರುವ ಊರುಗಳಲ್ಲಿ ಮಳೆ ನೀರು, ಹಳ್ಳದ ನೀರಿನಿಂದಾಗಿ ಸಮಸ್ಯೆ ಉಲ್ಬಣಿಸಿದೆ. ಸಮಸ್ಯೆ ಉಲ್ಬಣಿಸಿದ ಕಡೆಗಳಲ್ಲಿ ಸ್ಥಳೀಯ ಪಂಚಾಯಿತಿಯವರಿಂದ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದೇವೆ. ಸಾರ್ವಜನಿಕರು ಕೂಡ ಹಳ್ಳದ ನೀರಿಗೆ ಇಳಿಯುವುದು ಬೇಡ ಎಂದು ಸಲಹೆ ನೀಡಿದರು.ಭೋರಿ ಹಳ್ಳದ ನೀರು ಜನರ ಮನೆಗಳಿಗೆ ನುಗ್ಗಿದ್ದ ಮನೆಗಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.ದಿಕ್ಸಂಗಾ(ಕೆ) ಗ್ರಾಮದಲ್ಲಿ ಪ್ರವಾಹ ಪೀಡಿತ ಕುಟುಂಬಗಳಿಗಾಗಿ ಗ್ರಾಮ ಪಂಚಾಯಿತಿಯಿಂದಾಗಿ ಆಹಾರ ವ್ಯವಸ್ಥೆ…

Read More

ಬೆಂಗಳೂರಿಗೆ ಯೆಲ್ಲೋ ಅಲರ್ಟ್ | ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಇನ್ನೊಂದಿಷ್ಟು ದಿನ ಮುಂದುವರೆಯಲಿದ್ದು ಮುಂದಿನ ನಾಲ್ಕು ದಿನ ಅಂದರೆ ಸೆಪ್ಟೆಂಬರ್ 16ರವರೆಗೂ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಸೆಪ್ಟೆಂಬರ್ 16ವರೆಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿರಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಅಂತೆಯೇ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಜೋರಾಗಲಿದೆ. ವಿಜಯಪುರ, ಕಲಬುರಗಿ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಅಲ್ಲದೆ ದಕ್ಷಿಣ ಒಳನಾಡು, ಉಡುಪಿ, ಉತ್ತರ ಕನ್ನಡ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಜಾರಿ! ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅಬ್ಬರ ಮತ್ತೊಂದಿಷ್ಟು ದಿನ ಮುಂದುವರೆಯುವ…

Read More

ಒಟ್ಟು ೧೪೨೦ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವ್ಯಾಜ್ಯವೊಂದರಲ್ಲಿ ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದ ದಂಪತಿಗಳನ್ನು ಒಂದು ಮಾಡಿ ಲೋಕ್ ಅದಾಲತ್ ಜನಸಾಮಾನ್ಯರಿಗೆ ಸಹಾಯಕಾರಿಯಾಗುತ್ತಿದೆ ಎಂಬ ಸಂದೇಶವನ್ನು ಇಲ್ಲಿನ ನ್ಯಾಯಾಲಯ ಮತ್ತೊಮ್ಮೆ ಸಾಕ್ಷೀಕರಿಸಿದೆ.ಮದುವೆಯಾಗಿ ಎರಡು ವರ್ಷಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ್ದ ಮಹಿಳೆ, ತನ್ನ ಪತಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿದ ಒಂದು ವರ್ಷದಲ್ಲಿ ೯ ಬಾರಿ ನ್ಯಾಯಾಲಯಕ್ಕೆ ಅಲೆದಿದ್ದರು. ದಂಪತಿಗಳಿಬ್ಬರೂ ದೂರಾಗುವ ಸಂಭವವಿತ್ತು. ಇಲ್ಲಿನ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಇಲ್ಲಿನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ರಾಮಮೂರ್ತಿ ಎನ್ ಅವರು ಎರಡೂ ಪಕ್ಷಗಳಿಗೆ ತಿಳುವಳಿಕೆ ಹೇಳಿ, ಮನವೊಲಿಸಿ ಪ್ರಕರಣವನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.ಈ ಮೂಲಕ ಕೌಟುಂಬಿಕ ದೌರ್ಜನ್ಯದ ಅಡಿ ದಾಖಲಾಗಿದ್ದ ಪ್ರಕರಣ, ರಾಜೀ ಸಂಧಾನದ ಮೂಲಕ ಸುಖಾಂತ್ಯ ಕಂಡು ದಂಪತಿಗಳಲ್ಲಿ ಮಂದಹಾಸ ಮೂಡಿದೆ.ಈ ಲೋಕ ಅದಾಲತ್ ನಲ್ಲಿ ಮೂರು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಹಾಗೂ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಮಂಡಲ ಸೇವಾ ಪಾಕ್ಷಿಕ ಕಾರ್ಯಾಗಾರ ಜರುಗಿತು.ಪಟ್ಟಣದ ಪ್ರವಾಸಿಮಂದಿರದಲ್ಲಿ ಶುಕ್ರವಾರ ಮಂಡಲ ಸೇವಾ ಪಾಕ್ಷಿಕ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ ೧೭ ರಿಂದ ಮಹಾತ್ಮಾ ಗಾಂಧಿ ಜನ್ಮದಿನವಾದ ಅಕ್ಟೋಬರ್ ೨ರವರೆಗೆ ಸಾಮಾಜಿಕ ಸೇವಾ ಕಾರ್ಯಗಳ ಕುರಿತಾಗಿ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಮಂಡಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ, ತಾಯಿಯ ಹೆಸರಿನಲ್ಲಿ ಒಂದು ಸಸಿ, ರಕ್ತದಾನ, ಆರೋಗ್ಯಶಿಬಿರ, ಕ್ರೀಡೆ, ಹಾಗೂ ಚಿತ್ರಕಲಾ ಸ್ಪರ್ಧೆಯಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ ಹಾಗೂ ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ ಮಾತನಾಡಿ, ಪ್ರಧಾನಿ ಮೋದಿಯವರ ಜೀವನ ಮತ್ತು ಸಾಧನೆ ಪಕ್ಷದ ಕಾರ್ಯಕರ್ತರಿಗೆ ಪ್ರೇರಣೆಯಾಗಿದೆ. ಅವರ ನಾಯಕತ್ವದಲ್ಲಿ ಜಾಗತಿಕ ವೇದಿಕೆಗಳಲ್ಲಿ ಭಾರತದ ಹೊಸನೋಟ ಹಾಗೂ ಕಲ್ಯಾಣ ಯೋಜನೆಗಳನ್ನು ಇಂದು ಗ್ರಾಮೀಣ ಭಾರತದ ಜನತೆಗೆ ತಿಳಿಸುವುದು ಅಗತ್ಯವಾಗಿದೆ ಎಂದರು.ಜಿಲ್ಲಾ ಸಂಚಾಲಕ ಗೋಪಾಲ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನವರಸಪುರ ಶಾಖಾ ವ್ಯಾಪ್ತಿಯಲ್ಲಿ ಹೆಚ್.ಟಿ ವಾಹಕ ಬದಲಾವಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದರಿಂದ ಸೇನಾ ನಗರ ಫೀಡರ್‌ನ ಮೇಲೆ ಬರುವ ಟ್ರೇಸರಿ ಕಾಲೋನಿ, ರಾಮದೇವ ನಗರ,ಅಯ್ಯಪ್ಪ ಸ್ವಾಮಿ ದೇವಸ್ಥಾನ,ಇಟಗಿ ಕಾಲೋನಿ, ವೇದಾಂತ ಹಾಸ್ಪಿಟಲ್, ನಿಂಬರಗಿ ಬಡಾವಣೆ, ಕುಲಕರ್ಣಿ ಲೇಔಟ್, ಖುರೇಷಿ ಕಾಲೋನಿ ಹತ್ತಿರದ ಪ್ರದೇಶಗಳಲ್ಲಿ ಸೆ.15ರ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಗ್ರಾಹಕರು ಸಹಕರಿಸುವಂತೆ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿರುತ್ತಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್.‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರ, ಎಂ.ಬಿ.ಎ. ವಿಭಾಗದಲ್ಲಿ ನಾನಾ ಕಾರ್ಪೋರೇಟ್‌ ಕಂಪನಿಗಳು ನಡೆಸಿದ ಕ್ಯಾಂಪಸ್‌ ಸಂದರ್ಶನದಲ್ಲಿ ಕಾಲೇಜಿನ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಾನಾ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ.ಕುಮಾರ ಅಭಿಷೇಕ ಬಿಲ್ಲದ, ಕಾವ್ಯಾ ಹಿರೇಮಠ ಅವರು ಪುಣೆಯ ಡಿಸೈನ್‌ ಕರ್ವ ಟೆಕ್ನಾಲಜಿ ಕಂಪನಿಗೆ ಆಯ್ಕೆಯಾದರೆ, ನಿವೇದಿತಾ ತೊಂಡಿಹಾಳ, ಸಚೀನ ಪಟ್ಟಣಶೆಟ್ಟಿ, ಬಸವರಾಜ ದಡ್ಡಿಮನಿ, ಅರುಣ ಮೊಪಗಾರ ಅವರು ಜಿಕ್ಸಿಸ್‌ ಟೆಕ್‌ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ನೇಮಕವಾಗಿದ್ದಾರೆ.ಅದೇ ರೀತಿ ವೀಣಾ ಪಾಟೀಲ, ರೇಖಾ ಮನಗೂಳಿ, ಕೀರ್ತಿ ಪಾಟೀಲ ವಿಜಯಪುರದ ಎಂ.ಜಿ. ಹೆಕ್ಟರ್‌ ಕಂಪನಿಗೆ, ಸನ್ಮಿತಾ ಕುಲಕರ್ಣಿ, ಸ್ವಾತಿ ಬೋಮರಡ್ಡಿ, ಅಶ್ವೀನಿ ಮೊಕಾಶಿ, ಆರ್. ಎನ್. ಎಸ್ ಮೋಟಾರು ಕಂಪನಿಗೆ, ಶ್ರದ್ಧಾ ಅಕ್ಕಿ ಗುಜರಾತಿನ ಮಾನಸ ಸರೋವರ ಫಾರ್ಮರ್‌ ಪ್ರೋಡ್ಯೂಸರ್‌ ಕಂಪನಿ ಲಿಮಿಟೆಡ್‌ಗೆ, ಸೋಮಶೇಖರ ಗಲಗಲಿ ಮುಂಬೈನ ಹೋಮ್‌ ಫಸ್ಟ್‌ ಫೈನಾನ್ಸ್‌ ಕಂಪನಿ ಇಂಡಿಯಾ ಲಿಮಿಟೆಡ್‌ಗೆ, ಸಹನಾ ಜಿ.…

Read More

ವಿಜಯಪುರ ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ದ್ರಾಕ್ಷಿ ಬೆಳೆಗಾರರು ನೂರಾರುನಮಸ್ಯೆಗಳ ಮಧ್ಯ ಸಾವು ನೋವಿನ ಮಧ್ಯ ಹೋರಾಟ ಮಾಡುತ್ತಾ ಜೀವನ ಸಾಗಿಸುವಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು ಆಗ್ರಹ ಮಾಡಿ ಮನವಿ ಸಲ್ಲಿಸಲಾಯಿತು.ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡುತ್ತಾ, ಇಡೀ ಕರ್ನಾಟಕದಲ್ಲಿ ಅಂದಾಜು ೧ ಲಕ್ಷ ಎಕರೆ ದ್ರಾಕ್ಷಿ ಬೆಳೆಯಲಾಗುತ್ತದೆ, ವಿಜಯಪುರದಲ್ಲಿ ೭೦% ದ್ರಾಕ್ಷಿ ಬೆಳೆಯುತ್ತಿದ್ದು, ಇದನ್ನು ನಂಬಿ ೧೫-೨೦ ಸಾವಿರ ರೈತ ಕುಟುಂಬಗಳು ಹಾಗೂ ಸಾವಿರಾರು ರೈತ ಕಾರ್ಮಿಕರು ಬದುಕು ಸಾಗಿಸುತ್ತಿದ್ದಾರೆ, ಆದರೆ ದಲ್ಲಾಳಿಗಳ ಹಾವಳಿ, ಮಾರುಕಟ್ಟೆಯ ಕೊರತೆ, ಕೋಲ್ಡ್ ಸ್ಟೋರೆಜ್ ಕೊರತೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಖರ್ಚು, ಕೂಲಿಯವರ ಪಗಾರ, ಔಷಧ, ಗೊಬ್ಬರ ಇನ್ನಿತರ ಖರ್ಚು ಹತ್ತು ಪಟ್ಟು ಹೆಚ್ಚಾಗಿದೆ, ಇವುಗಳಿಂದ ಗೆದ್ದು…

Read More

ಲೇಖನ- ವೀಣಾ ಹೇಮಂತ ಗೌಡ ಪಾಟೀಲಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಅವಶ್ಯಕತೆಯ ಅರಿವು ಇಂದು ಹಿಂದೆಂದಿಗಿಂತಲೂ ಹೆಚ್ಚಾಗಿದ್ದು, ಇದೀಗ ಪಾಲಕತ್ವದ ಅವಶ್ಯಕತೆಯ ಅರಿವು ಸಾರ್ವತ್ರಿಕವಾಗಿ ಮುನ್ನೆಲೆಗೆ ಬಂದಿದೆ.ಮಕ್ಕಳ ಕಣ್ಣಿಗೆ ಕಂಡದ್ದನ್ನು, ಕೇಳಿದ್ದನ್ನೆಲ್ಲ ಕೊಡಿಸುವುದು, ಮಕ್ಕಳು ಹೇಳಿದಂತೆಯೇ ನಡೆಯುವುದು, ಮಕ್ಕಳು ಬಯಸಿದ್ದನ್ನೇ ಉಣ ಬಡಿಸುವುದು ಒಳ್ಳೆಯ ಪಾಲಕತ್ವ ಎಂಬ ತಪ್ಪು ಕಲ್ಪನೆ ಬಹುತೇಕ ಜನರಲ್ಲಿ ಇದೆ.ಪಾಲಕತ್ವ ಅಂದ್ರೆ ನಮ್ಮ ಎಲ್ಲಾ ಶಸ್ತ್ರಾಸ್ತ್ರಗಳನ್ನು ಕೆಳಗಿಟ್ಟು ಮಕ್ಕಳ ಹೇಳುವ ಎಲ್ಲ ಮಾತುಗಳಿಗೆ ಶರಣಾಗತರಾಗುವುದು ಅಂತ ಅರ್ಥ ಅಲ್ಲ.ಪಾಲಕತ್ವ ಪ್ರತಿಯೊಬ್ಬ ತಂದೆ ತಾಯಿಯು ಹೊರಲೇ ಬೇಕಾದ ಒಂದು ಉನ್ನತ ಜವಾಬ್ದಾರಿ. ಮಾನಸಿಕವಾಗಿ ಮಾಗಿದ ಪಾಲಕತ್ವ ಒಳ್ಳೆಯ ನಾಗರಿಕರನ್ನು ಈ ಸಮಾಜಕ್ಕೆ ಕಾಣಿಕೆಯಾಗಿ ನೀಡುತ್ತದೆಸುಮಾರು 30- 32ರ ವಯಸ್ಸಿನ ಬಿಸಿ ರಕ್ತದ ಪಾಲಕರಲ್ಲಿ ಮಕ್ಕಳ ಮೇಲೆ ಪ್ರಾಬಲ್ಯ ತುಸು ಹೆಚ್ಚೇ ಇರುತ್ತದೆ. ಅಂತಹ ಪಾಲಕರು ತಮಗೆ ಎಲ್ಲಾ ತಿಳಿದಿದೆ, ತಾವು ಹೇಳಿದಂತೆಯೇ ಮಕ್ಕಳು ಕೇಳಬೇಕು ಎಂಬಂತಹ ಧೋರಣೆಯನ್ನು ಹೊಂದಿದ್ದು, ಮಕ್ಕಳ ಮೇಲೆ ವಿಪರೀತ ಒತ್ತಡ…

Read More

ನರಸಲಗಿ ರಾಮಕೃಷ್ಣ ಆಶ್ರಮದ ಶ್ರೀಕಾಂತ್ ಗುರುಜಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಗತ್ತಿನಲ್ಲಿ ಜ್ಞಾನವೇ ಶ್ರೇಷ್ಠ. ಪುಸ್ತಕಗಳು ವಿದ್ಯಾರ್ಥಿಗಳನ್ನು ಎತ್ತರ ಮಟ್ಟಕ್ಕೆ ಕರೆದುಕೊಂಡು ಹೋಗುವ ಶಕ್ತಿ ಹೊಂದಿವೆ ಎಂದು ನರಸಲಗಿ ರಾಮಕೃಷ್ಣ ಆಶ್ರಮದ ಶ್ರೀಕಾಂತ್ ಗುರುಜಿ ಹೇಳಿದರು.ಸಮಾಜ ಕಲ್ಯಾಣ ಇಲಾಖೆಯ ಡಾ ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ನರಸಲಗಿ ಯಲ್ಲಿ “ಅಧಿಕಾರಿಗಳ ನಡೆ ವಸತಿ ನಿಲಯದ ಕಡೆ” ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನಸ್ಸು ಮತ್ತು ಬುದ್ಧಿ ಏಕವಾದಾಗ ಮಾತ್ರ ಸಾಧನೆ ಸಾಧ್ಯವಾಗುವುದು, ವಿದ್ಯಾರ್ಥಿ ನಿಲಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಒದಗಿಸಿದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ನಿಮ್ಮ ಜೀವನವನ್ನು ಸುಂದರಗೊಳಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನೋಡೆಲ್ ಅಧಿಕಾರಿಗಳಾದ ಎಮ್ ಟಿ ಬಿರಾದಾರ ಮಾತನಾಡಿ, ನಿಲಯದಲ್ಲಿ ವಾಸಿಸುವ ವಿದ್ಯಾರ್ಥಿಗಳು ನಿಮ್ಮ ಭವಿಷ್ಯವನ್ನು ಸುಂದರಗೊಳಿಸಲು ಓದುವುದು ನಿಮ್ಮ ಸಂಗಾತಿ ಆಗಬೇಕು, ನಿರಂತರ ಅಭ್ಯಾಸ ನಿಮ್ಮ ಶ್ರೇಷ್ಠ ನಾಗರಿಕರನ್ನಾಗಿ ಮಾಡುವುದು ಎಂದು ವಿದ್ಯಾರ್ಥಿಗಳಿಗೆ ಹಿತ ನುಡಿಗಳನ್ನು ಹೇಳಿ,…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಮಹಿಳೆಯರ ಸ್ವಾವಲಂಬನೆಗೆ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಸಂಜಿವಿನಿ ಯೋಜನೆಗಳು ಸಹಕಾರಿಯಾಗಿವೆ ಎಂದು ರಬಕವಿ-ಬನಹಟ್ಟಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ ಹೇಳಿದರು.ಗ್ರಾಮದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ್ ಬಾಗಲಕೋಟ, ತಾಲೂಕಾ ಪಂಚಾಯತ್ ರಬಕವಿ-ಬನಹಟ್ಟಿ ಹಾಗೂ ಶೃಮಬಿಂದು ಸಂಜೀವಿನಿ ಮಹಿಳಾ ಕಿಸಾನ್ ಪ್ರೊಡ್ಯುಸರ ಕಂಪನಿ ಚಿಮ್ಮಡ ಇವರ ಸಂಯುಕ್ತ ಆಶೃಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಾರ್ಷಿಕ ಸಾಮಾನ್ಯ ಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಒಂದು ಸಾವಿರ ಮಹಿಳೆಯರ ರೈತ ಮಹಿಳೆಯರ ಸದಸ್ಯತ್ವ ಹೊಂದಿರುವ ಈ ಸಂಸ್ಥೆ ಮಹಿಳೆಯರ ಕೌಶಲ್ಯ, ಆರ್ಥಿಕ ಸಬಲೀಕರಣ ಹಾಗೂ ಗ್ರಾಮೀಣ ಭಾಗದ ರೈತ ಮಹಿಳೆಯರ ಶ್ರೇಯೊಭಿವೃದ್ದಿಯ ಗುರಿ ಹೊಂದಿದ್ದು ಪ್ರತಿಯೊಬ್ಬರು ಇದರ ಸದುಪಯೋಗ ಪಡೆಯಬೇಕೆಂದರು.ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿದ ಜಿಲ್ಲಾ ವ್ಯವಸ್ಥಾಪಕ ಭೀಮಾನಂದ ಶೆಟ್ಟರ ಮಾತನಾಡಿ ರೈತ ಮಹಿಳೆಯರಿಂದ ಉತ್ಪಾದಕ ಗುಂಪುಗಳನ್ನು ಮಾಡಿ ಅವರಿಂದ ಕೃಷಿ ಉತ್ಪಣಗಳನ್ನು ನೇರವಾಗಿ ಖರೀದಿಸಿ ಅದರಿಂದ ಗುಣಮಟ್ಟದ ಮೌಲ್ಯ ವರ್ಧಿತ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತೆ ಇದರಿಂದ…

Read More