Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬೆಳಗಾವಿ: ನಗರದ ವೇಣುಗ್ರಾಮ ಫೌಂಡೇಶನ್ ವತಿಯಿಂದ ಜಾಂಬೋಟಿಯ ಮಾಧ್ಯಮಿಕ ವಿದ್ಯಾಲಯ ಶಾಲೆಯಪ್ರತಿಭಾನ್ವಿತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಗುರುವಾರ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.ಇದಲ್ಲದೆ ಈ ವೇಳೆ ಅರ್ಹ ಬಡಮಕ್ಕಳ ಶಾಲಾವೆಚ್ಛವನ್ನು ಕೂಡ ನೀಡಲಾಯಿತು.ಬೆಳಗಾವಿ ನಗರದ ವೇಣುಗ್ರಾಮ ಆಸ್ಪತ್ರೆಯ ಆಡಳಿತ ಮಂಡಳಿಯಲ್ಲಿ ಒಬ್ಬರಾದ ಕೀಲು-ಮೂಳೆ ಶಸ್ತ್ರತಜ್ಞ ಡಾ.ಅಶೋಕ ಸಂಪಗಾರ ಅವರು ಫಲಾನುಭವಿಗಳಿಗೆ ಚೆಕ್ಕುಗಳನ್ನು ವಿತರಿಸಿದರು.ಶಾಲೆಯ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ವೇಣುಗ್ರಾಮ ಆಸ್ಪತ್ರೆಯು ಗುಣಮಟ್ಟದ ಸೇವೆಯನ್ನು ನೀಡುತ್ತಿರುವುದಲ್ಲದೆ ಸಮಾಜಮುಖಿ ಕೆಲಸವನ್ನು ಮಾಡುತ್ತಿರುವುದನ್ನು ಶ್ಲಾಘಿಸಿದ್ದಾರೆ. ಫಲಾನುಭವಿ ಮಕ್ಕಳ ಪಾಲಕರು ವೇಣುಗ್ರಾಮ ಫೌಂಡೇಶನ್ ಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಪರವಾಗಿ ಯೋಗೇಶ ದೇಶಪಾಂಡೆ ಉಪಸ್ಥಿತರಿದ್ದರು.

Read More

ಫ್ರೀಡಂಪಾರ್ಕ್‌ನಲ್ಲಿ ಸ್ಪೃಶ್ಯ ಸಮುದಾಯದಿಂದ ಉಗ್ರ ಹೋರಾಟ | ಆತ್ಮಹತ್ಯೆಗೆ ಮಹಿಳೆ ಯತ್ನ! ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸ್ಪೃಶ್ಯ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್​ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಸ್ಪೃಶ್ಯ ಜಾತಿಗಳಾದ ಬಂಜಾರ, ಬೋವಿ, ಕೊರಮ, ಕೊರಚ ಜಾತಿಗಳನ್ನು C ವರ್ಗಕ್ಕೆ ಸೇರ್ಪಡೆ ಮಾಡಿ ಶೇ.5 ರಷ್ಟು ಮೀಸಲಾತಿ ನೀಡಲಾಗಿದೆ. ಆದರೇ, ಹೀಗೆ ಮೀಸಲಾತಿ ಹಂಚಿಕೆ ಮಾಡಿದ್ದರಿಂದ ಸ್ಪೃಶ್ಯ ಜಾತಿಗಳಿಗೆ ಅನ್ಯಾಯ ಆಗಿದೆ ಎಂದು ಇಂದು ಸ್ಪೃಶ್ಯ ಜಾತಿಗಳ ಜನರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದಾರೆ.ಈ ವೇಳೆ ರೊಚ್ಚಿಗೆದ್ದ ಪ್ರತಿಭಟನೆಕಾರರು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮಹಿಳೆಯೊಬ್ಬರು ಸ್ಥಳದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇನ್ನು ಮಹಾರಾಣಿ ಕಾಲೇಜು ಬಳಿ ಪ್ರತಿಭಟನಾಕಾರರು ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಸ್ತೆ ತಡೆಯಿಂದಾಗಿ ಕೆ.ಆರ್.ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಕಲಕೇರಿಯಿಂದ ಸುತ್ತಮುತ್ತಲಿನ ಯಾವುದೇ ಗ್ರಾಮಗಳಿಗೆ ಸಂಪರ್ಕಿಸುವ ಎಲ್ಲ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಅವುಗಳನ್ನು ಅಭಿವೃದ್ಧಿಪಡಿಸುವದು ಅನಿವಾರ್ಯವಾಗಿದ್ದು, ಇದೀಗ ಗ್ರಾಮದ ಜೋಡುಗುಡಿಯಿಂದ ಕೆಇಬಿ ವರೆಗಿನ ಸುಮಾರು ಒಂದು ಕೀ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲು ಚಾಲನೆ ನೀಡಲಾಗುತ್ತಿದೆ ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಬ. ಪಾಟೀಲ, ಕುದರಿಸಾಲವಾಡಗಿ ಅವರು ಹೇಳಿದರು.೨೦೨೫-೨೬ನೇ ಸಾಲಿನ ೩೦೫೪ ರಸ್ತೆ ಸುಧಾರಣೆ ಯೋಜನೆ ಅಡಿಯಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ತಿಳಗೂಳ ಕ್ರಾಸ್ ಕಲಕೇರಿ-ಅಸ್ಕಿ ರಸ್ತೆ ಕಿ.ಮೀ. ೨.೪ ರಿಂದ ೩.೧ರ ವರೆಗೆ ಅಂದಾಜು ೩ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಯ ಭೂಮಿಪೂಜಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಇದೇ ವೇಳೆ ಗ್ರಾಮದ ಬಸ್‌ಸ್ಟ್ಯಾಂಡ ಮತ್ತು ಆಸ್ಪತ್ರೆ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಮತ್ತು ಕಲಕೇರಿ ಹಾಗೂ ಕೋರವಾರ ಗ್ರಾಮಗಳನ್ನು ಹೋಬಳಿ ಮಾಡುವ ನಿಟ್ಟಿನಲ್ಲಿ ನನ್ನ ಪ್ರಯತ್ನಗಳು ನಿರಂತರವಾಗಿದ್ದು, ಸಾಧ್ಯವಾದಷ್ಟು ಈ ಭಾಗದ ರೈತರು ಮತ್ತು ಸಾರ್ವಜನಿಕರಿಗೆ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಕಲಕೇರಿ ಮತ್ತು ಕೋರವಾರ ಶಾಖೆಗೆ ಸಂಬಂಧಿಸಿದ ಸುತ್ತಮುತ್ತಲಿನ ಹಳ್ಳಿಗಳ ರೈತರಿಗೆ ಹಗಲು ಹೊತ್ತಿನಲ್ಲಿ ಹೊಲಗಳಿಗೆ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಲಾದ ಫೀಡರ್‌ನ್ನು ರೈತರ ಅಭಿಲಾಷೆಯಂತೆ ರೈತರ ಒಳಿತಿಗಾಗಿ ಚಾಲನೆ ನೀಡಲಾಗುತ್ತಿದೆ ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಬ. ಪಾಟೀಲ, ಕುದರಿಸಾಲವಾಡಗಿ ಅವರು ಹೇಳಿದರು.ಕಲಕೇರಿಯ ೩೩/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ಮಿಸಲಾದ ನೂತನ ಫೀಡರ್ ಉದ್ಘಾಟನಾ ಸಮಾರಂಭದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.ನೂತನವಾಗಿ ನಿರ್ಮಿಸಲಾದ ಫೀಡರ್‌ನಿಂದ ಕಲಕೇರಿ ಮತ್ತು ಕೋರವಾರ ಶಾಖೆಗೆ ಸಂಬಂಧಿಸಿದ ಹಳ್ಳಿಗಳಾದ ಹಂಚಲಿ, ಬಿಬಿ ಇಂಗಳಗಿ, ಕೊಂಡಗೂಳಿ, ಅಂಬಳನೂರ, ಕೆಸರಟ್ಟಿ, ಬಿಂಜಲಭಾವಿ, ಕೆರುಟಗಿ, ತಿಳಗೂಳ, ಆಲಗೂರ, ಹುಣಶ್ಯಾಳ, ಕುದರಗುಂಡ ಸೇರಿದಂತೆ ಸುಮಾರು ೧೫-೨೦ ಹಳ್ಳಿಗಳಿಗೆ ಉತ್ತಮ ಸಂಪರ್ಕ ನೀಡುವ ಸಲುವಾಗಿ ರೈತರ ಅನುಕೂಲಕ್ಕಾಗಿ ಫೀಡರ್ ಉದ್ಘಾಟಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.ಈ ವೇಳೆ ಕೆಇಬಿ ಕಿರಿಯ ಅಭಿಯಂತರ ಶಂಕರಗೌಡ ಬಿರಾದಾರ, ಶ್ರೀಮತಿ ಅಮೃತ ಜುಟ್ಟಿ, ಎಇ ಸುಬಾಸ ಸಜ್ಜನ, ಶರಣು ಸಜ್ಜನ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ರವರು, ಆಲಮಟ್ಟಿ ಭೆಟ್ಟಿಯ ಸಂಧರ್ಭದಲ್ಲಿ ವಕೀಲರ ಕುರಿತು ಅವಹೇಳನಕಾರಿ ಮಾತನಾಡಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಜಿಲ್ಲಾ ನ್ಯಾಯವಾದಿಗಳ ಸಂಘದ ವತಿಯಿಂದ ಪ್ರತಿಭಟನೆ ಮಾಡುವ ಮೂಲಕ ಮನವಿ ಸಲ್ಲಿಸಲಾಯಿತು.ಆಲಮಟ್ಟಿ ಭೇಟಿಯ ಸಂಧರ್ಭದಲ್ಲಿ ಮತ್ತು ವಿಧಾನ ಸಭೆಯಲ್ಲಿಯೂ ಕೂಡಾ ಡಿಸಿಎಂ ಡಿ.ಕೆ. ಶಿವಕುಮಾರ ರವರು ವಕೀಲರ ಕುರಿತು ಅವಹೇಳನಕರವಾಗಿ ಮಾತನಾಡಿದ್ದು, ಅವರ ಹಗುರವಾದ ಮಾತು ಇಡೀ ವಕೀಲರ ಸಮುದಾಯಕ್ಕೆ ಅವಮಾನಕರವಾಗಿದ್ದು, ಆಗೌರವಯುತವಾದ ಮಾತುಗಳನ್ನು ಖಂಡಿಸಿ ನಮ್ಮ ಸಂಘವು ಕೊರ್ಟ ಕಲಾಸ, ಕಂದಾಯ ಇಲಾಖೆ ಮತ್ತು ಗ್ರಾಹಕರ ವೇದಿಕೆ ಈ ಎಲ್ಲಾ ನ್ಯಾಯಾಲಯಗಳ ಕಾರ್ಯಕಲಾಪಗಳಿಂದ ದೂರ ಉಳಿದು ಪ್ರತಿಭಟಿಸಲಾಯಿತು.ಡಿಸಿಎಂ ಡಿ.ಕೆ. ಶಿವಕುಮಾರ ರವರು ವಕೀಲರ ಕುರಿತು ಅವಹೇಳನಕಾರಿ ಆಡಿದ ಮಾತನ್ನು ಹಿಂಪಡೆಯಬೇಕು. ಹಾಗೂ ವಕೀಲರ ಸಮುದಾಯಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಅಧ್ಯಕ್ಷ ಧರೆಪ್ಪಗೌಡ ಬಿರಾದಾರ, ಉಪಾಧ್ಯಕ್ಷರಾದ ಸುನೀಲ ಬಿರಾದಾರ, ಕಾರ್ಯದರ್ಶಿ ಸುರೇಶ ಚೂರಿ, ಖಜಾಂಚಿ ಎಮ್. ಎ. ಕಾಖಂಡಕಿ,…

Read More

ಹಳಕಟ್ಟಿ ಪ್ರೌಢಶಾಲೆಗೆ ಸಮಗ್ರ ಶಿಕ್ಷಣ ಸಮನ್ವಯಾಧಿಕಾರಿ ಎಂ.ಎ.ಗುಳೇದಗುಡ್ಡ ಬೇಟಿ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಮಕ್ಕಳ ಉಜ್ವಲ ಭವಿಷ್ಯಕ್ಕೆ ಶಿಕ್ಷಕರೇ ಆಧಾರಸ್ತಂಭ. ಗುರುಬಳಗವೇ ಸ್ಪೂತಿ೯ದಾತರು. ಮೊಗ್ಗಿನ ಮನಸ್ಸುಗಳ ಶೈಕ್ಷಣಿಕ ಪ್ರಗತಿ ರೂಪಿಸುವಲ್ಲಿ ಗುರುದೇವೋಭವದ ಪಾತ್ರ ಹಿರಿದು ಎಂದು ಕನಾ೯ಟಕ ಸಮಗ್ರ ಶಿಕ್ಷಣ ವಿಜಯಪುರ ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಎಂ.ಎ.ಗುಳೇದಗುಡ್ಡ ಹೇಳಿದರು.ಸ್ಥಳೀಯ ಎಸ್.ವಿ.ವಿ.ಸಂಸ್ಥೆಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಗೆ ಅನಿರೀಕ್ಷಿತ ಬೇಟಿ ನೀಡಿ ಮಾತನಾಡಿದ ಅವರು, ಕಲಿಕೆಯಲ್ಲಿ ಅಸಮರ್ಥತೆ ಹೊಂದಿರುವ ಮಕ್ಕಳ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಅವರನ್ನು ತಿದ್ದಿ,ತೀಡಿ ಶಿಕ್ಷಣದ ಮುಖ್ಯವಾಹಿನಿಗೆ ತರಬೇಕು. ಆ ದಿಸೆಯಲ್ಲಿ ಕಲಿಕಾಸಕ್ತಿಯಿಂದ ದೂರಿರುವ ಮಕ್ಕಳಲ್ಲಿ ಓದಾಸಕ್ತಿ- ಬರಹಾಸಕ್ತಿ ಮೂಡಿಸಿ ಪ್ರೋತ್ಸಾಹಿಸಬೇಕು. ಓದುವ ಹವ್ಯಾಸ ಹಾಗೂ ಬರವಣಿಗೆ ಕೌಶಲ್ಯ ಮೂಡಿಸಿದರೆ ಮಾತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಕಾಣಲು ಸಾಧ್ಯ ಎಂದರು.ವಿದ್ಯಾರ್ಥಿಗಳ ದಾಖಲಾತಿ, ಹಾಜರಾತಿ, ಸಿಬ್ಬಂದಿ ಹಾಜರಾತಿ, ಪಠ್ಯ ಯೋಜನೆಯ ಮಕ್ಕಳ ಕಲಿಕಾ ಗುಣಮಟ್ಟ ಸೇರಿದಂತೆ ಶೈಕ್ಷಣಿಕ ಯೋಜನೆಗಳ ಅನುಷ್ಟಾನ ಪರಿಶೀಲಿಸಿದರು.ಮಕ್ಕಳಲ್ವಿ ಬೆಂಚ್ ತಾರತಮ್ಯ ಭಾವನೆ ನೀಗಿಸಲು “U” ಶೇಪ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೈತರ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಉತ್ತರ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಂಡು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಶಂಕರಗೌಡ ಹಿರೇಗೌಡರ ಮಾತನಾಡಿ, ಬೆಳೆ ಪರಿಹಾರ ಆಗಸ್ಟ್ ತಿಂಗಳಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ ಸರ್ಕಾರ ಪರಿಹಾರ ನೀಡಬೇಕು, ಬಂಡಿ ದಾರಿ ರಸ್ತೆ ಸುಧಾರಣೆ ಹಾದಿ ಸಮಸ್ಯೆ , ಕಬ್ಬಿನ ವೈಜ್ಞಾನಿಕ ಬಂಬಲ ಬೆಲೆ, ರಾತ್ರಿ ಹೊತ್ತು ವಿದ್ಯುತ್ ಹಳೆಯ ರಾತ್ರಿ ಸಮಯದಲ್ಲಿ ತೋಟದ ಲೈನನ್ನು ರಾತ್ರಿ ನಿರಂತರ ವಿದ್ಯುತ್ ನೀಡಬೇಕು, ಅಕ್ರಮ-ಸಕ್ರಮ ಯೋಜನೆ ಪುನಾ ಜಾರಿಗೆ ತರುವುದು ಶೀಘ್ರ ಸಂಪರ್ಕ ಯೋಜನೆಯಿಂದ ರೈತರಿಗೆ ಆರ್ಥಿಕ ಸಂಕಷ್ಟ ಎದುರಾಗುತ್ತದೆ, ಹಳೆಯ ಆರ್ ಆರ್ ನಂಬರ್ ೧೦೦೦೦ರೂಪಾಯಿ ಮತ್ತು ಹೊಸ ಆರ್ ಆರ್ ನಂಬರ್ ೧೫೦೦೦ರೂಪಾಯಿ ಶುಲ್ಕ ಪಾವತಿಸುವ ಆದೇಶ ಹಿಂಪಡೇಯಬೇಕು ,ವೈಶಾಲಿ ವಿಂಡ್ ಪವರ್ ಎನರ್ಜಿ ಪ್ರೈವೇಟ್ ಲಿಮಿಟೆಡ್ ಗುಲಾಬ್ ರಾಮಚಂದ್ರ ಚವಾಣ್ ಕುಮಟಗಿ ಗ್ರಾಮದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ಹಾಗೂ ಬಿ.ಎಲ್.ಡಿ.ಇಯ ಶ್ರೀ ಬಿ.ಎಮ್. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯ ವಿಜಯಪುರ ಇವರ ಸಹಯೋಗದಲ್ಲಿ ಬುಧವಾರ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನ ಅಂಗವಾಗಿ ಜನಜಾಗೃತಿ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರದ ಅಧ್ಯಕ್ಷರಾದ ಹರೀಶ.ಎ ಅವರು ಹಸಿರು ನಿಶಾನೆ ತೊರುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರದ ಅಧ್ಯಕ್ಷರಾದ ಹರೀಶ.ಎ ಅವರು, ಮಾನಸಿಕ ಆರೋಗ್ಯದ ಕುರಿತು ಸಮುದಾಯದಲ್ಲಿ ತಿಳುವಳಿಕೆ ಮೂಡಿಸಬೇಕು ಶಾಲಾ-ಕಾಲೇಜುಗಳಲ್ಲಿ ಹಾಗೂ ಕೆಲಸದ ಸ್ಥಳದಲ್ಲಿ ಜಾಗೃತಿ ಶಿಬಿರ ಆಯೋಜಿಸಿ ಮಾನಸಿಕ ಸ್ವಾಸ್ಥ್ಯದ ಕುರಿತು ತಿಳಿ ಹೇಳಬೇಕು. ವಿದ್ಯಾರ್ಥಿಗಳು ಓದಿನೆಡೆಗೆ ಒಲವು ಹೊಂದಿ ಜೀವನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಹಿಳೆಯರಿಗಾಗಿ ಕಾಯಕ ಸ್ಪೂರ್ತಿ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ಕೌಶಲ್ಯ ಉನ್ನತೀಕರಣ ಯೋಜನೆ, ಚರ್ಮ ಶಿಲ್ಪ ಯೋಜನೆ, ವಸತಿ ಯೋಜನೆ, ಕಿರು ಆರ್ಥಿಕ ನೇರ ಸಾಲ, ಸ್ವಾವಲಂಭಿ-ಸಂಚಾರಿ ಮಾರಾಟ ಮಳಿಗೆ ಯೋಜನೆಗಳಿಗಾಗಿ ಅಕ್ಟೋಬರ್ ೮ರೊಳಗೆ ಸೇವಾ ಸಿಂಧು ಪೊರ್ಟಲ್ ಮೂಲಕ ಆನಲೈನ್ ಅರ್ಜಿ ಸಲ್ಲಿಸಬಹುದಾಗಿದೆ.ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲೆಯ ಜಿಲ್ಲಾ ಸಂಯೋಜಕರು ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಕಚೇರಿಗೆ ಸಲ್ಲಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರ ಕಚೇರಿಗೆ ಭೇಟಿ ನೀಡಬಹುದಾಗಿದೆ ಎಂದು ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿ ವರ್ಷದಂತೆ ಸೆ.೩೦ರಿಂದ ಅಕ್ಟೋಬರ್ ೦೪ರವರೆಗೆ ರಾಜ್ಯದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳು ಭೇಟಿ ನೀಡಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಸ್ಸು ಮತ್ತು ರೈಲಿನ ಮೂಲಕ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ರಾಜ್ಯದಿಂದ ನಾಗಪುರಕ್ಕೆ ಭೇಟಿ ನೀಡಲಿರುವ ಅನುಯಾಯಿಗಳು ಸಮಾಜ ಕಲ್ಯಾಣ ಇಲಾಖೆಯhttps://swd.karnataka.gov.in ವೆಬ್‌ಸೈಟ್ ಮೂಲಕ ಆ.೨೫ರಿಂದ ಸೆ.೯ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ವಿಜಯಪುರ ಜಿಲ್ಲೆಯ ಅನುಯಾಯಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ ಮನವಿ ಮಾಡಿಕೊಂಡಿದ್ದಾರೆ.

Read More