Author: editor.udayarashmi@gmail.com

ಜನಗಣತಿ ಕಾರ್ಯ ಯಶಸ್ವಿಗೊಳಿಸಲು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಾದ್ಯಂತ ಏ. ೧ರಿಂದ ರಾಷ್ಟ್ರೀಯ ಜನಗಣತಿಯ ಮೊದಲ ಹಂತದ ಸ್ವಯಂ ಜನಗಣತಿ ಕಾರ್ಯಾರಂಭವಾಗಿದ್ದು, ಏ. ೧೫ ರೊಳಗಾಗಿ ಪ್ರತಿಯೊಬ್ಬರೂ ತಮ್ಮ ಕುಟುಂಬದವರ ಸ್ವಯಂ ಗಣತಿಗೊಳಪಡಿಸುವ ಮೂಲಕ ಜನಗಣತಿ ಕಾರ್ಯ ಯಶಸ್ವಿಗೆ ಕೈ ಜೋಡಿಸುವಂತೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.ರಾಷ್ಟ್ರೀಯ ಜನಗಣತಿ ೨೦೨೭ ರ ಮೊದಲ ಹಂತದ ಸ್ವಯಂ ಗಣತಿ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಅವರು ಮಾತನಾಡಿದರು.ಸ್ವಯಂ ಗಣತಿ ಅತ್ಯಂತ ಸರಳವಾಗಿದ್ದು, ಕೇವಲ ಐದು ನಿಮಿಷದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ. ಈಗಾಗಲೇ ನಾನು ಆ ಕಾರ್ಯ ಪೂರ್ಣಗೊಳಿಸಿದ್ದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.ದೇಶದ ಮಹತ್ವಾಕಾಂಕ್ಷಿಯ ಜನಗಣತಿ ಪ್ರಕ್ರಿಯೆ ಏ.೧ರಿಂದ ಆರಂಭಗೊಂಡಿದ್ದು, ಜನಗಣತಿ ದೇಶದ ಅಭಿವೃದ್ಧಿಗೆ ಪೂರಕವಾದ ಪ್ರಮುಖ ಕಾರ್ಯವಾಗಿದೆ. ಈ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ನಿಖರ ಮಾಹಿತಿ ನೀಡುವ ಮೂಲಕ ಸಹಕರಿಸಿಬೇಕು. ಏ.೧೫ರವರೆಗೆ ಸ್ವಯಂ ವಿವರ ದಾಖಲಿಸಲು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೇ ನಿರ್ಮಾಣ ಮಾಡಿದ ವಾಣಿಜ್ಯ ಮಳಿಗೆ, ಮನೆ ನಿರ್ಮಾಣ ಮಾಡುತ್ತಿರುವ ಕೆಲ ವ್ಯಾಪಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಕರವೇ ಕಾರ್ಯಕರ್ತರು ತಹಸೀಲ್ದಾರ ಮೂಲಕ ಬುಧವಾರ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಮಾತನಾಡಿ, ಪಟ್ಟಣದ ರಾಜ್ಯ ಬಿಜ್ಜಳ ರಾಜ್ಯ ಹೆದ್ದಾರಿಯಲ್ಲಿರುವ ಬಸ್ ನಿಲ್ದಾಣ ಸಮೀಪ ಲೋಕನಾಥ ನೇಮಿಚಂದ ಅಗರವಾಲ ಅವರು ನಿಯಮ ಬಾಹಿರವಾಗಿ ಐದು ಅಂತಸ್ತಿನ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಪುರಸಭೆಯಿಂದ ಯಾವುದೇ ಅನುಮತಿ (ಪರವಾನಿಗೆ) ಪಡೆಯದೇ ವಾಣಿಜ್ಯ ಮಳಿಗೆ ಮುಂದೆ ಅವೈಜ್ಞಾನಿಕವಾಗಿ ವಿದ್ಯುತ್ ಪರಿವರ್ತಕ ಅಳವಡಿಸಿದ್ದಾರೆ. ಇದು ಸಾರ್ವಜನಿಕರಿಗೆ ಅಪಾಯವಾಗುವ ಸಂಭವವಿದೆ. ಇವರದೇ ಸಿಟಿಎಸ್ ನಂ. 342 ರಲ್ಲಿ ಸಂಪೂರ್ಣ ಸರ್ಕಾರಿ ಉದ್ಯಾನವನ ಜಾಗೆಯಲ್ಲಿ ಕಟ್ಟಡ ನಿರ್ಮಾಣ ಮಾಡಿಕೊಂಡಿದ್ದಾರೆ. ಇನ್ನೊಬ್ಬರು ವಿಜಯಪುರ ರಸ್ತೆಯಲ್ಲಿರುವ ಸರ್ಕಾರಿ ಜಾಗೆಯನ್ನು ಅಕ್ರಮವಾಗಿ ಕಬಳಿಕೆ ಮಾಡಿಕೊಂಡು ಅಲ್ಲಿದ್ದ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಇಂಗಳೇಶ್ವರ ರಸ್ತೆಯಲ್ಲಿರುವ ನಾಗಾವಿ ಯಲ್ಲಮ್ಮದೇವಿ ಜಾತ್ರಾಮಹೋತ್ಸವ ಬುಧವಾರ ಸಂಭ್ರಮ, ಸಡಗರದಿಂದ ಜರುಗಿತು. ಜಾತ್ರೆಯಂಗವಾಗಿ ಪಲ್ಲಕ್ಕಿ ಉತ್ಸವದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ತಾಯಿಜೋಗಮ್ಮರ ಕುಣಿತ, ವಿವಿಧ ವಾದ್ಯ ಮೇಳದೊಂದಿಗೆ ಸಂಭ್ರಮದಿಂದ ಜರುಗಿತು.ನಾಗಾವಿ ಯಲ್ಲಮ್ಮ ದೇವಸ್ಥಾನದಿಂದ ಐದು ಕಳಸ ಹಾಗೂ ಪಲ್ಲಕ್ಕಿ ಉತ್ಸವವು ಪಟ್ಟಣದ ಬಸವೇಶ್ವರ ವೃತ್ತ, ಅಗಸಿ, ಮಹಾರಾಜರ ಮಠದ ಮಾರ್ಗ, ಬಸವಜನ್ಮ ಸ್ಮಾರಕ ಮಾರ್ಗ, ವಿಜಯಪುರ ಮಾರ್ಗವಾಗಿ ಪುನಃ ಬಸವೇಶ್ವರ ವೃತ್ತಕ್ಕೆ ಬಂದು ಬಸವೇಶ್ವರ ದೇವಸ್ಥಾನದ ಬಸವತೀರ್ಥ ಭಾವಿಗೆ ಆಗಮಿಸಿದ ನಂತರ ಗಂಗಾಸ್ಥಳ ಮಾಡಿಕೊಂಡ ನಂತರ ಡೊಳ್ಳು, ಚೌಡಕಿ ಸೇರಿದಂತೆ ಸುಮಂಗಲೆಯರ ಆರತಿಯೊಂದಿಗೆ ಬಸವೇಶ್ವರ ವೃತ್ತದ ಮಾರ್ಗವಾಗಿ ಇಂಗಳೇಶ್ವರ ರಸ್ತೆಯಲ್ಲಿರುವ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಕಳಸಗಳು, ನಾಗಾವಿ ಯಲ್ಲಮ್ಮದೇವಿ ಪಲ್ಲಕ್ಕಿ ಉತ್ಸವ ತಲುಪಿತು. ಕಳಸಗಳಿಗೆ ಪೂಜೆ ನೆರವೇರಿಸಿದ ನಂತರ ದೇವಸ್ಥಾನಕ್ಕೆ ಕಳಸಗಳನ್ನು ಏರಿಸಲಾಯಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ ಜರುಗಿತು.ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ಪಲ್ಲಕ್ಕಿ ಉತ್ಸವದ ಮೆರವಣಿಗೆಯಲ್ಲಿ ಜೋಗಮ್ಮರಾದ ಲಕ್ಷ್ಮೀ ಬಾಗೇವಾಡಿ, ಶರಣವ್ವ ಇಂಗಳೇಶ್ವರ,…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಮೀಪದ ಸುಕ್ಷೇತ್ರ ಯಲಗೂರದ ದೇವಸ್ಥಾನದಲ್ಲಿ ಸಡಗರದಿಂದ ಬುಧವಾರ ಹನುಮ ಜಯಂತಿ ಆಚರಿಸಲಾಯಿತು.ಬೆಳಗ್ಗೆ ಉತ್ಸವ ಮೂರ್ತಿಯನ್ನು ನೂರಾರು ಭಕ್ತರು ಸಕಲ ವಾದ್ಯಗಳೊಂದಿಗೆ ಕೃಷ್ಣಾ ನದಿಗೆ ತೆರಳಿ ಗಂಗಾಪೂಜೆ ಸಲ್ಲಿಸಿ ನಂತರ ದೇವಸ್ಥಾನಕ್ಕೆ ತರಲಾಯಿತು. ಮೂರ್ತಿಯನ್ನು ತೊಟ್ಟಿಲಲ್ಲಿ ಹಾಕಲಾಯಿತು.ಯಲಗೂರೇಶನಿಗೆ ಸಾಮೂಹಿಕ ಪಂಚಾಮೃತ ಅಭಿಷೇಕ ಜರುಗಿತು.ವಿಠ್ಠಲಾಚಾರ್ಯ ಗದ್ದನಕೇರಿ ತೊಟ್ಟಿಲು ಪೂಜೆ ಹಾಗೂ ಪವಮಾನ ಹೋಮ ನೆರವೇರಿಸಿದರು.ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಅನಂತ ಓಂಕಾರ, ಅನ್ನದಾಸೋಹ ಸಮಿತಿ ಅಧ್ಯಕ್ಷ ಶ್ಯಾಮ ಪಾತರದ, ಗೋಪಾಲ ಗದ್ದನಕೇರಿ, ಕೃಷ್ಣ ಕಟ್ಟಿ, ಪಾಂಡುರAಗಾಚಾರ್ಯ ಹೊಸೂರ, ಸಂತೋಷ ಪೂಜಾರ, ಯಲಗೂರದಪ್ಪ ಪೂಜಾರ, ಸಂಜೀವ ಪೂಜಾರ, ಆನಂದ ಪೂಜಾರ, ಎಸ್. ಐ.ಡೆಂಗಿ ಮತ್ತೀತರರು ಇದ್ದರು.ಚೆನ್ನಿಗಾವಿ ಬಂಧುಗಳು ಅನ್ನಪ್ರಸಾದದ ವ್ಯವಸ್ಥೆ ಮಾಡಿದ್ದರು.ಹನುಮ ಜಯಂತಿ ಅಂಗವಾಗಿ ೧೦೦೦ ಮಾವಿನ ಹಣ್ಣುಗಳಿಂದ ಹನುಮನಿಗೆ ಅಲಂಕಾರ ಮಾಡಲಾಗಿತ್ತು.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ನೀರಿಲ್ಲದೆ ಜೀವವಿಲ್ಲ. ನಾಗರಿಕತೆಗಳು ನೀರು ಇದ್ದಲ್ಲಿಯೇ ಬೆಳೆದು ಬಂದಿದ್ದನ್ನು ಇತಿಹಾಸದ ಪುಟಗಳಿಂದ ತಿಳಿದುಕೊಳ್ಳುತ್ತೇವೆ. ಪ್ರತಿಯೊಬ್ಬರೂ ನೀರಿನ ಮಹತ್ವ ಅರಿತು ಮಿತವಾಗಿ ಬಳಕೆ ಮಾಡಬೇಕೆಂದು ಪ್ರಧಾನ ಸಿವ್ಹಿಲ್ ನ್ಯಾಯಾಧೀಶ ಅಮೀತ ಘಟ್ಟಿ ಹೇಳಿದರು.ತಾಲೂಕಿನ ಮುತ್ತಗಿ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ತಾಲೂಕ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾಡಳಿತ ಹಾಗೂ ತಾಲೂಕ ಪಂಚಾಯತಿ ಕಾರ್ಯಾಲಯ ಸಹಯೋಗದಲ್ಲಿ ವಿಶ್ವ ಜಲ ದಿನಾಚರಣೆಯಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಕಲ ಜೀವರಾಶಿಗಳಿಗೂ ನೀರು ಬೇಕು. ನಮ್ಮ ಉಳಿವಿಗೆ ಆಹಾರ, ಗಾಳಿ ಎಷ್ಟು ಮುಖ್ಯವೋ ಅಷ್ಟೇ ನೀರು ಸಹ ಮುಖ್ಯವಾಗಿದೆ. ನೀರು ಪೋಲು, ಹವಾಮಾನ ಬದಲಾವಣೆ ಸೇರಿದಂತೆ ವಿವಿದ ಕಾರಣಗಳಿಂದ ನೀರಿನ ಕೊರತೆ ಹೆಚ್ಚಾಗುತ್ತಿದೆ. ಇದು ಕೈಗಾರಿಕೆ, ಕೃಷಿ ಮತ್ತು ಆರ್ಥಿಕತೆಯ ಮೇಲೆ ಪ್ರಭಾವ ಬೀರುತ್ತದೆ. ಸಿಹಿನೀರಿನ ಮೂಲಗಳನ್ನು ಕಾಪಾಡುವ ಮೂಲಕ ಮುಂದಿನ ಜನಾಂಗಕ್ಕೆ ನೀರನ್ನು ಉಳಿಸಬೇಕಿದೆ. ನೀರಿನ ಮೂಲಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.ನ್ಯಾಯವಾದಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಶ್ರೀ ಚೆನ್ನವೀರ ಸ್ವಾಮೀಜಿ ಬಸ್ ನಿಲ್ದಾಣದ ಎದುರಿಗಿರುವ ಸಾರ್ವಜನಿಕ ಗ್ರಂಥಾಲಯ ಮೇಲ್ಛಾವಣೆ ಕಟ್ಟಡದ ಸಿಮೆಂಟ್ ಪದರು ಕುಸಿದು ಬಿದ್ದಿದೆ.ನಗರದ ಸಾರ್ವಜನಿಕ ಗ್ರಂಥಾಲಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದ ಕಾರಣ ಸಿಮೆಂಟ್ ಪದರು ಉದುರಿ ಕೆಳಗಡೆ ಬಿದ್ದಿದೆ. ಇದರಿಂದ ಅಲ್ಲಿದ್ದ ಸಾಮಗಿಗಳು ಹಾಳಾಗಿದ್ದು, ಅದೃಷ್ಟವಶಾತ್ ಅಲ್ಲಿ ಓದುಗರು ಯಾರು ಇಲ್ಲದ ಕಾರಣ ಯಾರಿಗೂ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ. ಇನ್ನಾದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇತ್ತ ಗಮನ ಹರಿಸಿ ಹೈಟೆಕ್ ಗ್ರಂಥಾಲಯ ನಿರ್ಮಿಸಬೇಕು ಎಂಬುದು ಓದುಗರ ಆಶಯವಾಗಿದೆ.ಈ ಘಟನೆಯ ಕುರಿತು ನಮ್ಮ ಪ್ರತಿನಿಧಿಯೊಂದಿಗೆ ಮಾತನಾಡಿದ ಗ್ರಂಥಾಲಯದ ಸಹವರ್ತಿ ರಾಜಶೇಖರ ಹತ್ತರಕಿ, ಗ್ರಂಥಾಲಯ ದುರಸ್ತಿಯ ಬಗ್ಗೆ ಮೇಲಾಧಿಕಾರಿಗಳಿಗೆ ಅನೇಕ ಬಾರಿ ವರದಿ ಸಲ್ಲಿಸುತ್ತಲೇ ಬಂದಿದ್ದೇವೆ. ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರು ನಮ್ಮ ಮೇಲಾಧಿಕಾರಿಗಳಿಗೆ ಸಿಂದಗಿ, ಬಸವನ ಬಾಗೇವಾಡಿ, ತಾಳಿಕೋಟೆ ತಾಲೂಕಿಗೆ ಹೈಟೆಕ್ ಗ್ರಂಥಾಲಯ ಹೊಸ ಕಟ್ಟಡ ನಿರ್ಮಾಣ ಮಾಡಿಸುವುದಾಗಿ ಭರವಸೆಯನ್ನು ನೀಡಿದ್ದಾರೆ ಸ್ವಲ್ಪ ಕಾಯಿರಿ ಎಂದು ಹೇಳಿದ್ದಾರೆ. ಅದಕ್ಕಾಗಿ ಅವರ ಮಾತಿನಂತೆ…

Read More

ವಿಜಯಪುರದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿರುವ ತೆರಿಗೆ ಸಂಗ್ರಹಣಾ ಪ್ರಗತಿ ಶೇ.೧೦೦ ರಷ್ಟು ಸಾಧಿಸಬೇಕು. ಗುರಿ ಸಾಧನೆಯಲ್ಲಿ ಹಿಂದುಳಿದ ಪಂಚಾಯಿತಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.ವಿಜಯಪುರ ತಾಪಂ ಸಭಾಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಕುರಿತು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದ ಸಾಮಗ್ರಿ ಹಣ ಪಾವತಿ, ಬಾಕಿ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿ, ಬಾಕಿ ಪಾವತಿಗಳನ್ನು ತ್ವರಿತವಾಗಿ ಪಾವತಿ ಮಾಡಿ ಕಾಮಗಾರಿಗಳ ನಿರಂತರತೆ ಕಾಯ್ದುಕೊಳ್ಳಬೇಕು ಎಂದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿಕಾರರ ಇ-ಕೆವೈಸಿ ಪ್ರಕ್ರಿಯೆಯ ಪ್ರಗತಿಯು ನಿರೀಕ್ಷಿತವಾಗಿಲ್ಲ. ಆದ್ದರಿಂದ ಎಲ್ಲ ಕೂಲಿಕಾರರ ಇ-ಕೆವೈಸಿಯನ್ನು ಶೇ. ೧೦೦ರಷ್ಟು ಪೂರ್ಣಗೊಳಿಸಬೇಕು. ಅದೇ ರೀತಿ, ನರೇಗಾ ಯೋಜನೆಯಡಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಾದ್ಯಂತ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ–೧ರ ಸುಸೂತ್ರ ಹಾಗೂ ಪಾರದರ್ಶಕ ನಿರ್ವಹಣೆಗೆ ಒತ್ತು ನೀಡುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಇಂದು ನಗರದ ಸೆಂಟ್ ಜೋಸೆಫ್ ಪ್ರೌಢಶಾಲೆ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಪರೀಕ್ಷಾ ಕೊಠಡಿಗಳಲ್ಲಿ ಮೇಲ್ವಿಚಾರಕರು ಕಟ್ಟುನಿಟ್ಟಾಗಿ ನಿಯಮ ಪಾಲಿಸುತ್ತಿರುವುದನ್ನು ವೀಕ್ಷಿಸಿದರು. ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಗೆ ಮಹತ್ವ ನೀಡಿ, ಕೇಂದ್ರದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮರಾಗಳು, ಡಿಜಿಟಲ್ ನಿಗಾ ವ್ಯವಸ್ಥೆಗಳು ಹಾಗೂ ಅವುಗಳ ನಿರಂತರ ಕಾರ್ಯನಿರ್ವಹಣೆಯನ್ನು ಸಿಇಒ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು, ಪರೀಕ್ಷಾ ಅಧೀಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಲೇಖನ – ಜಯಶ್ರೀ.ಜೆ.ಅಬ್ಬಿಗೇರಿಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಪ್ರತಿ ಊರಾಗೂ ಊರ ಹೊರಗ ಹನುಮಪ್ಪನ ಗುಡಿ ಇರತಾವ ಎಂದು ನಾನು ಸಣ್ಣವಳಿದ್ದಾಗ ನನ್ನಜ್ಜ ಹೇಳಿದ ಮಾತು ನನಗಿನ್ನೂ ನೆನಪಿದೆ. ನನ್ನಜ್ಜ ಹನಮಪ್ಪಗ ವಾರ ಶನಿವಾರ ವಾನರ ಸೈನ್ಯದಂತಿದ್ದ ನಮ್ಮನ್ನ ಕರೆದುಕೊಂಡು ಹೋಗುತ್ತಿದ್ದ ರೀತಿ ಇಂದಿಗೂ ಮನದಲ್ಲಿ ಹಸಿರಾಗಿದೆ. ಈಗ ಊರುಗಳು ಎಕ್ಷಟೆನ್ಷನ್ ಹೆಸರಿನೊಳಗೆ ಆ ಕಡೆ ಈ ಕಡೆ ಬೆಳೆದು ಊರ ಹೊರಗಿನ ಹನುಮಪ್ಪ ಊರ ನಡುವೆ ಬಂದು ನಮ್ಮೆಲ್ಲರ ನಡುವೆ ನಿಂತಿದ್ದಾನೆ. ನಮಗೆಲ್ಲ ಹನುಮಪ್ಪನ ಮುಖ ಕಂಡು ವಿಚಿತ್ರ ಅನಿಸೋದು ನೋಡೋಕೆ ಬಲವಂತನಂತೆ ವಿಶೇಷ ಶಕ್ತಿಯುಳ್ಳವನಂತೆ ಕಂಡರೂ ಅದೇಕೆ ಹನುಮಂತನ ದವಡೆಗಳು ಉಬ್ಬಿವೆ? ಕೈಯ್ಯಲ್ಲಿ ಗುಡ್ಡ ಹಿಡಿದು ಏಕೆ ನಿಂತಿದ್ದಾನೆ? ಹಾರುವ ಪೋಸ್‌ನಲ್ಲೇ ಏಕಿರ‍್ತಾನೆ? ಉಳಿದ ದೇವರುಗಳಂತೆ ಕುಳಿತ ಭಂಗಿಯಲ್ಲಿ ಕಾಣ ಸಿಗುವುದು ತುಂಬಾ ಕಡಿಮೆ. ಎಂಬ ಹಲವಾರು ಪ್ರಶ್ನೆಗಳು ತಲೆತುಂಬ ಗಿರಗಿಟ್ಲೆ ಆಡುವಾಗ ಅವುಗಳನ್ನು ಅಜ್ಜನ ಮುಂದಿಡುತ್ತಿದ್ದೆವು. ಪ್ರಶ್ನೆಗಳಿಗೆಲ್ಲ ಉತ್ತರ ನೀಡಲು ನಮ್ಮಜ್ಜ ತನಗೆ ಗೊತ್ತಿರುವ ಪುರಾಣದ ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂರನೇ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಅತ್ಯಂತ ಸ್ವಾಗತಾರ್ಹ ಮತ್ತು ವಿದ್ಯಾರ್ಥಿ ಸ್ನೇಹಿ ಕ್ರಮವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಕ.ರ.ವೇ) ಅಥಣಿ ತಾಲೂಕು ಅಧ್ಯಕ್ಷ ಶಬೀರ್ ಸಾತಬಚ್ಚೆ ಅವರು ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮೂರನೇ ಭಾಷೆಯು ಪರೀಕ್ಷೆಯ ದೃಷ್ಟಿಯಿಂದ ಕೆಲವೊಮ್ಮೆ ಸವಾಲಾಗಿ ಪರಿಣಮಿಸುತ್ತಿತ್ತು. ಈಗ ಸರ್ಕಾರ ಈ ವಿಷಯಕ್ಕೆ ಅಂಕಗಳ ಬದಲಾಗಿ ಗ್ರೇಡಿಂಗ್ ವ್ಯವಸ್ಥೆ ತರುತ್ತಿರುವುದು ವಿದ್ಯಾರ್ಥಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲಿದೆ. ಇದರಿಂದ ವಿದ್ಯಾರ್ಥಿಗಳು ಇತರ ಪ್ರಮುಖ ವಿಷಯಗಳತ್ತ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗುತ್ತದೆ,” ಎಂದು ಅಭಿಪ್ರಾಯಪಟ್ಟಿದ್ದಾರೆ.”ಶಿಕ್ಷಣ ಕ್ಷೇತ್ರದಲ್ಲಿ ಇಂತಹ ಸುಧಾರಣೆಗಳು ಅತ್ಯಗತ್ಯ. ಕೇವಲ ಅಂಕಗಳ ಬೆನ್ನತ್ತದೆ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪೂರಕವಾದ ವಾತಾವರಣ ನಿರ್ಮಿಸಲು ಈ ಕ್ರಮ ಸಹಕಾರಿಯಾಗಿದೆ. ಸರ್ಕಾರದ ಈ ನಿರ್ಧಾರವು ಲಕ್ಷಾಂತರ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಯ್ದಿದೆ,” ಎಂದು ಶಬೀರ್ ಸಾತಬಚ್ಚೆ ಸರ್ಕಾರದ ಕ್ರಮವನ್ನು ಮುಕ್ತಕಂಠದಿಂದ…

Read More