Author: editor.udayarashmi@gmail.com

ಲೇಖನ- ಡಾ.ಶಶಿಕಾಂತ ಪಟ್ಟಣರಾಮದುರ್ಗ – ಪುಣೆಮೊ:9552002338 ಉದಯರಶ್ಮಿ ದಿನಪತ್ರಿಕೆ ಗದಗ ಜಿಲ್ಲೆಯ ಗಜೇಂದ್ರಗಡ ಪಕ್ಕದ ನಾರಾಯಣಪುರ ಒಂದು ಐತಿಹಾಸಿಕ ಪಟ್ಟಣ. ಕುಮಾರವ್ಯಾಸನ ಸಂಬಂಧಿ ಅಳಿಯ ಚಾಮರಸನ ಹುಟ್ಟು ಊರು. ಅವರಿಬ್ಬರೂ ಸಮಕಾಲೀನರು ಮತ್ತು ಸಾಹಿತಿಕ ಪ್ರತಿಸ್ಪರ್ಧಿಗಳಾಗಿದ್ದರು. ಚಾಮರಸನ ಪ್ರಭುಲಿಂಗ ಲೀಲೆ ಅವತ್ತಿನ ಅತ್ಯಂತ ಶ್ರೇಷ್ಠ ಮಹಾಕಾವ್ಯ. ಇಮ್ಮಡಿ ದೇವರಾಯ ಪ್ರೌಢದೇವರಾಯ ಚಾಮರಸನನ್ನು ಕೆಲ ಕಾಲ ಮಂತ್ರಿಯನ್ನಾಗಿ ಮಾಡಿದನೆಂದು ಇತಿಹಾಸದಲ್ಲಿ ಕೇಳಿ ಬರುತ್ತದೆ.ಚಾಮರಸಸು ಕನ್ನಡದ ಪ್ರಸಿದ್ಧ ಕವಿ. ಇವರು ಪ್ರಭುಲಿಂಗ ಲೀಲೆಯು ಭಾಮಿನಿ ಷಟ್ಪದಿಯಲ್ಲಿ ಬರೆಯಲಾದ ಈತನ ಪ್ರಸಿದ್ಧ ಕಾವ್ಯ. ಇಮ್ಮಡಿ ಪ್ರೌಢದೇವರಾಯರ ರಾಜಾಶ್ರಯದಲಿದ್ದರು. ಅನ್ಯಮತ ಕೋಳಾಹಲ (ಈ ರೀತಿ ಬಿರುದಿದ್ದರೂ ಅವನ ಕಾವ್ಯಗಳಲ್ಲಿ ಯಾವುದೇ ಮತೀಯವಾದ ಕಂಡು ಬರುವುದಿಲ್ಲ), ವೀರಶೈವಾಚಾರ ಮಾರ್ಗ ಸಾರೋದ್ಧಾರ ಇವರ ಬಿರುದುಗಳು.ಪ್ರಸಿದ್ಧಿನಡುಗನ್ನಡದ ಶ್ರೇಷ್ಠ ಕಾವ್ಯ ಎಂದು ಪ್ರಸಿದ್ಧವಾಗಿರುವ ಪ್ರಭುಲಿಂಗಲೀಲೆಯ ಕರ್ತೃ. ಲಿಂಗಾಯತ ಕವಿ. ವಿಜಯನಗರದ ಪ್ರೌಢ ದೇವರಾಯನ ಕಾಲದ ನೂರೊಂದು ವಿರಕ್ತರಲ್ಲಿ ಗಣನೆಯಾಗಿದ್ದಾನೆ. ಈತನ ಸ್ಥಳ ಗದಗ ಇಲ್ಲವೆ ನಾಗಣಾಪುರ ಎಂದು ಹೇಳಲಾಗಿದೆ.ಕಾವ್ಯಹರಿಹರ ರಾಘವಾಂಕರ ತರುವಾಯ ಐತಿಹಾಸಿಕ…

Read More

ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ಪ್ರವಾಸ ಬೇಕಾ? ಹೌದು ಬೇಕೇ ಬೇಕು. ‘ಕೋಶ ಓದಿ ನೋಡು, ದೇಶ ಸುತ್ತಿ ನೋಡು’ ಅಂತ ಅಷ್ಟಿಲ್ಲದೇ ಹೇಳ್ತಾರಾ? ನಮ್ಮ ದೇಶವನ್ನು ಮೊದಲು ಸುತ್ತಿನೋಡಬೇಕು ನಂತರ ಇತರ ದೇಶಗಳನ್ನು ಸಾಧ್ಯವಾದರೆ ಸುತ್ತಿಬಿಡಬೇಕು. ಆದರೆ.. ಆದರೆ…ಸನ್ಯಾಸಿಗಳು ಎಷ್ಟಾದರೂ ಸುತ್ತಿಕೊಳ್ಳಲಿ, ಸಂಸಾರಿಗಳಿಗೆ ಕುಟುಂಬದ ಕಡೆಗೂ ತುಸು ಗಮನವಿರಲಿ.ಕೆಲವು ಜನರು ಊಟಕ್ಕೆ ಉಪ್ಪಿನಕಾಯಿ ತಿನ್ರಪ್ಪ ಎಂದರೆ, ಉಪ್ಪಿನಕಾಯಿಯನ್ನೇ ಊಟದ ರೀತಿ ತಿಂತಾರೆ.ಪ್ರವಾಸ ಜೀವನದ ಒಂದು ಭಾಗವಾಗಬೇಕೇ ಹೊರತು, ಜೀವನ ಪ್ರವಾಸದ ಒಂದು ಭಾಗವಾಗಬಾರದು.ಕೆಲವರಿಗೆ ಅದೇನೋ ಹುಚ್ಚಪ್ಪ ಒಂದು ಬ್ಯಾಗು ನೇತುಹಾಕಿಕೊಂಡು ಹೊರಟುಬಿಡ್ತಾರೆ. ಮನೆ ಇಲ್ಲ ಮಠ ಇಲ್ಲ ಮನೆಯವರ ಯೋಚನೆ ಮೊದಲೇ ಇಲ್ಲ. ಹೊರಗಿನ ಪ್ರಪಂಚ ತಿಳಿಯುವ ಆಸಕ್ತಿ ಅಥವಾ ಒಳಗಿನ ಅಸಮಾಧಾನ ಮರೆಯುವ ಆತುರ ಎರಡೂ ಕಾರಣಗಳಿಂದಲೂ ಮನ ಪ್ರವಾಸದ ಕಡೆ ಎಳೆಯಬಹುದು. ಹೌದು ದೇಹ ಎಲ್ಲಿಗೆ ಬೇಕಾದರೂ ಹೋಗಬಹುದು ರೀ, ಆದರೆ ಮನಸ್ಸು ಕ್ಷಣ ಮಾತ್ರಕ್ಕಾದರೂ ನಮ್ಮವರ, ನಮ್ಮೂರ ಸುತ್ತಿಬರುವುದಾ ಮರೆಯುವುದೇ? ಕೊನೆಗೆ ಸೇರುವ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಸೆಪ್ಟೆಂಬರ್ 10 ರಿಂದ ಸೆಪ್ಟೆಂಬರ್ 17ರ ವರೆಗೆ ಆರು ದಿನಗಳ ಕಾಲ ಪುರುಷರಲ್ಲಿ ಸಂತಾನ ಹೀನತೆ ಮತ್ತು ಪುರುಷರ ವೀರ್ಯದಲ್ಲಿನ ಸಮಸ್ಯೆಗೆ ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಶಿಬಿರ ನಡೆಯಲಿದೆ.ಈ ಸಮಸ್ಯೆ ಎದುರಿಸುತ್ತಿರುವ ಪುರುಷರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ ನಂ. 8073518596 ಕ್ಕೆ ಸಂಪರ್ಕಿಸಬಹುದಾಗಿದೆ, ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತೆಯಲ್ಲಿ ಇ.ಸಿ.ಎಚ್ಎಸ್(Ex- Servicemen Contributory Health Scheme) ಮತ್ತು ಇ.ಎಸ್.ಐ.ಸಿ(Employees State Insurance Corporation) ವಿಮೆ ಅಡಿಯಲ್ಲಿ ನಗದು ರಹಿತವಾಗಿ ನಾನಾ ಕಾಯಿಲೆಗಳಿಗೆ ಸೂಪರ್ ಸ್ಪೇಷಾಲಿಟಿ ಚಿಕಿತ್ಸೆ ಸೌಲಭ್ಯ ಪ್ರಾರಂಭವಾಗಿದೆ.ಸೂಪರ್ ಸ್ಪೇಷಾಲಿಟಿ ಚಿಕಿತ್ಸೆಗಳಾದ ಹೃದಯ ರೋಗ, ನರರೋಗ, ಮೂತ್ರಪಿಂಡ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ, ಮೊಳಕಾಲು ಮಂಡಿ, ಸೋಂಟದ ಕೀಲು ಶಸ್ತ್ರಚಿಕಿತ್ಸೆ, ಚಿಕ್ಕ ಮಕ್ಕಳ ಶಸ್ತ್ರಚಿಕಿತ್ಸೆಗಳಿಗೆ ಸಂಬಂಧಿಸಿದಂತೆ ಮೇಲಿನ ಎರಡು ಆರೋಗ್ಯ ವಿಮೆ ಸೌಲಭ್ಯಗಳು ಲಭ್ಯವಾಗಿವೆ.ಈ ರೋಗಗಳಿಗೆ ಮೇಲಿನ ಯೋಜನೆಗಳ ಉಚಿತ ಸೌಲಭ್ಯ ಪಡೆಯಲು ಬಯಸುವ ಅರ್ಹ ಫಲಾನುಭವಿಗಳು ಸಂಭಂದಪಟ್ಟ ದಾಖಲಾತಿಗಳನ್ನು ಸಲ್ಲಿಸಿ ಚಿಕಿತ್ಸೆಯನ್ನು ಪಡೆಯಬಹುದು ಎಂದು ಆಸ್ಪತ್ರೆಯ ವೈಧ್ಯಕೀಯ ಅಧಿಕ್ಷಕರಾದ ಡಾ. ಆರ್.ಎಂ. ಹೊನ್ನುಟಗಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮೊ. ನಂ. 9591682224 ಸಂಪರ್ಕಿಸಬಹುದಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಟಗಳು ಮಕ್ಕಳ ಶಾರೀರಿಕ ಮಾನಸಿಕ ಆರೋಗ್ಯ ವನ್ನು ಕಾಪಾಡುವಲ್ಲಿ ತುಂಬಾ ಸಹಕಾರಿ. ಕ್ರೀಡೆಗಳಲ್ಲಿ ವಿದ್ಯಾರ್ಥಿಗಳ ಆಸಕ್ತಿ ಹೆಚ್ಚಿಸುವ ಕಾರ್ಯವನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ ಎಂದು ಚಡಚಣ ಕ್ಷೇತ್ರ ಶಿಕ್ಷಣಾಧಿಕಾರಿ ಚಿದಾನಂದ ಕಟ್ಟಿಮನಿ ಹೇಳಿದರು.ಜಿಲ್ಲೆಯ ಇಂಡಿ ತಾಲ್ಲೂಕಿನ ಹಡಲಸಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಝಳಕಿ ವೃತ್ತದ ವ್ಯಾಪ್ತಿಯ ವಲಯ ಮಟ್ಟದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳ ಕ್ರೀಡಾ ಆಸಕ್ತಿ ಮೂಡಿಸುವ ಕಾರ್ಯವನ್ನು ಶಾಲಾ ಹಂತದಲ್ಲಿ ಪ್ರೋತ್ಸಾಹ ನೀಡಬೇಕು. ಜೊತೆಗೆ ಆರೋಗ್ಯ ದಿಂದ ಇರಲು ಆಟಗಳು ತುಂಬಾ ಸಹಕಾರಿ ಎಂದರು.ಚಡಚಣ ಶಿಕ್ಷಕರ ಸೊಸೈಟಿ ಅಧ್ಯಕ್ಷ ಎಸ್ ಎಸ್ ಪಾಟೀಲ ಮಾತನಾಡಿ, ದೇಶಿಯ ಆಟಗಳನ್ನು ಸಂರಕ್ಷಣೆ ಮಾಡಿ ಅವುಗಳನ್ನು ಉಳಿಸಿ ಬೆಳೆಸಬೇಕಿದೆ ಎಂದರು.ಶಿಕ್ಷಣ ಪ್ರೇಮಿ ಸುಭಾಷಚಂದ್ರ ಬಿರಾದಾರ ಮಾತನಾಡಿ, ವಿದ್ಯಾಭ್ಯಾಸ ಜೊತೆಗೆ ಮಕ್ಕಳನ್ನು ಮೋಬೈಲ್ ಗೀಳಿನಿಂದ ಹೊರತರುವ ಶಕ್ತಿ ಆಟಗಳಿಗೆ ಇದೆ ಎಂದರು.ಕ್ರೀಡಾಜ್ಯೋತಿಯನ್ನು ಭೂ ದಾನಿ…

Read More

ವಿಜಯಪುರದಲ್ಲಿ ನಡೆದ ಮಾಸಿಕ ಉಪನ್ಯಾಸ ಗೋಷ್ಠಿಯಲ್ಲಿ ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನ ಸಮೂಹ ಮಾಧ್ಯಮಗಳ ಮಿತಿಮೀರಿದ ಪ್ರಭಾವದಿಂದ ಮತ್ತು ಮೋಬೈಲ್, ವ್ಯಾಟ್ಸಾಪ್, ಫೇಸ್‌ಬುಕ್, ಕಂಪ್ಯೂಟರ್ ಮತ್ತು ಟಿ.ವ್ಹಿ ಧಾರಾವಾಹಿಗಳ ಪ್ರಭಾವದಿಂದ ನಮ್ಮ ಜೀವನ, ಸಂಸ್ಕೃತಿ-ಮೌಲ್ಯಗಳು ಅಧಃಪತನಗೊಳ್ಳುತ್ತಿದೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಪ್ರಾಯಪಟ್ಟರು.ಅವರು ನಗರದ ನವರಸಪುರದ ಸೇನಾ ನಗರದ ಶಿವಾಲಯದಲ್ಲಿ ಸೋಮವಾರ ದಂದು ‘ಬೆಳದಿಂಗಳ ಬೆಳಕಿನೆಡೆಗೆ” ಮಾಸಿಕ ಉಪನ್ಯಾಸ ಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.ಕೇವಲ ಹಣ ಗಳಿಕೆಯತ್ತ ಸಾಗುತ್ತಾ ಸಂಸಾರವೆಂಬ ಸಾಗರದಲ್ಲಿ ಎಲ್ಲದಕ್ಕೂ ನಾನು, ನನ್ನದು ಮತ್ತು ನನ್ನಿಂದ ಎಂಬ ಮಮಕಾರಗಳಿಂದ ನಾವು ಇಂದು ಧಾರ್ಮಿಕ, ನೈತಿಕ ಮತ್ತು ಮೌಲ್ವಿಕ ಚಿಂತನೆಗಳಿಲ್ಲದೇ ಜೀವನವನ್ನು ವೃಥಾ ಹಾಳು ಮಾಡಿಕೊಳ್ಳುತ್ತಿದ್ದೇವೆ. ಅದಕ್ಕಾಗಿ ನಾವೆಲ್ಲರೂ ಇಂದು ಸಂಸಾರವೆಂಬ ಭವಸಾಗರದಿಂದ ಹೊರಬಂದು ನಿಜಗುಣ ಶಿವಯೋಗಿಗಳ ಅಮೃತವಾಣಿ “ಕೆಡುವ ಶರೀರ ಸಾಫಲ್ಯವಾಗುವುದು-ಪರರ ಹಿತ” ಎಂಬಂತೆ ಸನ್ಮಾರ್ಗದ ದಾರಿ ಕಂಡುಕೊಂಡು ನಮ್ಮ ಬದುಕು ಸುಂದರ ಮತ್ತು ನೆಮ್ಮದಿಯುತವಾಗಲು…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಪ್ರವಾಹದಿಂದ ಮತ್ತು ತಾಲೂಕಿನಲ್ಲಿ ಆಗಷ್ಟ ತಿಂಗಳಲ್ಲಿ ಸತತವಾಗಿ ಸುರಿದ ಮಳೆಯಿಂದ ಹಾನಿಗೊಂಡಿರುವ ವಿವಿಧ ಬೆಳೆಗಳನ್ನು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ರೈತರ ಆಕ್ಷೇಪಣೆಗೆ ೭ ದಿನಗಳ ಅವಕಾಶ ನೀಡಲಾಗಿದೆ.ಕೃಷಿ/ತೋಟಿಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಬೆಳೆ ಹಾನಿಯ ಜಂಟಿ ಸಮೀಕ್ಷೆ ಮಾಡಿದ್ದು, ಹಾನಿಗೊಳಗಾದ ರೈತರ ಸಮೀಕ್ಷಾ ವರದಿಯನ್ನು ಚಡಚಣ ತಾಲ್ಲೂಕಿನ ೪೨ ಗ್ರಾಮಗಳಲ್ಲಿ ಮಾಡಿರುವ ಬೆಳೆ ಹಾನಿಯ ಸಮೀಕ್ಷೆಯ ವರದಿಯನ್ನು, ತಾಲೂಕಿನ ೧೩ ಗ್ರಾಮ ಪಂಚಾಯತಿ ಕಟ್ಟಡಗಳು ಹಾಗೂ ಗ್ರಾಮ ಛಾವಡಿ ಮುಂದೆ ಎದ್ದು ಕಾಣುವ ರೀತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳ ಜಂಟಿ ಸಮಿಕ್ಷೆ ವರದಿಯನ್ನು ಅಳವಡಿಸಲಾಯಿತು ಹಾಗೂ ರೈತರಿಂದ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ರೈತರು ೭ ದಿನಗಳೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ಚಡಚಣ ತಹಶೀಲದಾರ ಕಛೇರಿ ಇವರಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.ಅವಧಿ ಮುಗಿದ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ನಿಗದಿತ ಅವಧಿಯಲ್ಲಿ ರೈತರು ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಿ, ಸ್ವೀಕೃತಿ…

Read More

ಅಂಚೆ ಕಛೇರಿಯಲ್ಲಿ ಕೆಟ್ಟು ಹೋದ ಬ್ಯಾಟರಿಗಳು | ಅಸಹಕಾರ ಧೋರಣೆಯ ಸಿಬ್ಬಂದಿ | ಮೂಲಭೂತ ಸೌಕರ್ಯಗಳ ಕೊರತೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಸ್ಥಳೀಯ ಮುಖ್ಯ ಅಂಚೆ ಕಛೇರಿಯಲ್ಲಿ ಬ್ಯಾಟರಿಗಳು ಸಂಪೂರ್ಣವಾಗಿ ಕೆಟ್ಟು ಹೋಗಿದ್ದು, ಸಾರ್ವಜನಿಕರು ಯಾವುದೇ ಕೆಲಸದ ನಿಮಿತ್ಯವಾಗಿ ಅಂಚೆ ಕಛೇರಿಗೆ ಹೋದರೆ, ವಿದ್ಯುತ್ ಇದ್ದರೆ ಮಾತ್ರ ಅವರ ಕೆಲಸ ಕಾರ್ಯಗಳು ಆಗುತ್ತವೆ.ಏಕೆಂದರೆ ಕಚೇರಿಯಲ್ಲಿ ಜನರೇಟರ್ ಇಲ್ಲದ ಕಾರಣ ಕಂಪ್ಯೂಟರ್, ಪ್ರಿಂಟರ್ ಕಾರ್ಯನಿರ್ವಹಿಸುವದಿಲ್ಲ. ನಮಗೆ ತುರ್ತು ಕೆಲಸ ಇದೆ ಎಂದು ಸಾರ್ವಜನಿಕರು ಹೇಳಿದರೆ, ಅಲ್ಲಿನ ಸಿಬ್ಬಂದಿಯ ಉತ್ತರ ಮಾತ್ರ ವಿದ್ಯುತ್ ಇಲ್ಲ.ವಿದ್ಯುತ್ ಬರೋವರೆಗೂ ಅಲ್ಲಿ ಕುಳಿತುಕೊಳ್ಳಲಿಕ್ಕೆ ಆಸನದ ವ್ಯವಸ್ಥೆ ಕೂಡಾ ಇಲ್ಲ. ಗ್ರಾಹಕರು ಕಸದ ರಾಶಿ ತುಂಬಿರುವ, ಸ್ವಚ್ಛತೆ ಇಲ್ಲದ ನೆಲದ ಮೇಲೆ ಕುಳಿತುಕೊಳ್ಳಬೇಕು. ಇಲ್ಲಿ ಗ್ರಾಹಕರಿಗೆ ಮೂಲಭೂತ ಸೌಕರ್ಯಗಳು ಇಲ್ಲದೆ ಇರುವುದು ಎದ್ದು ಕಾಣುತ್ತದೆ. ಮೂತ್ರಾಲಯ ಇಲ್ಲದಿರುವುದು ಕೇಳಿದರೆ ಹಳ್ಳದ ದಂಡೆಗೆ ಹೋಗಿರಿ ಎಂಬ ಉಡಾಫೆ ಉತ್ತರ ಮಾತ್ರ ಸಿಗುತ್ತದೆ.ಇಲ್ಲಿ ಯಾವೊಬ್ಬ ಅಧಿಕಾರಿ, ಸಿಬ್ಬಂದಿ ಸರಿಯಾದ ಮಾಹಿತಿ ನೀಡದೆ ಕಳಿಸುತ್ತಾರೆ.ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ವಾಡ್೯ ನಂ.21 ರಲ್ಲಿ ಬರುವ ಗುರುಪಾದೇಶ್ವರ ನಗರ ಹಾಗೂ ಕುಮುದಾ ನಗರ ಉದ್ಯಾನವನಗಳಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸೋಮವಾರ ಗಿಡಗಳನ್ನು ನೆಡಲಾಯಿತು.ಪಾಲಿಕೆ ಸದಸ್ಯ ಕುಮಾರ ಗಡಗಿ ಅವರು ಗಿಡನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ದೇವೇಂದ್ರ ಹೆಳವರ, ಶಿವಾನಂದ ಚನ್ನಾಳ, ಡಾ.ಮನಗೂಳಿ ಹಾಗೂ ಪಾಲಿಕೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗ್ರಾಮೀಣ ಪ್ರದೇಶದ ಜಾತ್ರೆಗಳು ಜನತೆಯಲ್ಲಿ ಸೌಹಾರ್ದತೆ ಸಾರಲು ಸಹಕಾರಿಯಾಗಿವೆ ಎಂದು ಅನುಗ್ರಹ ಆಸ್ಪತ್ರೆಯ ಖ್ಯಾತನೇತ್ರ ತಜ್ಞ ಪ್ರಭುಗೌಡ ಲಿಂಗದಳ್ಳಿ(ಚಬನೂರ) ಹೇಳಿದರು.ತಾಲ್ಲೂಕಿನ ಮಣ್ಣೂರ ಗ್ರಾಮದಲ್ಲಿ ಸೋಮವಾರ ಅಬೂಸಾಹೇಬ ಜಾತ್ರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿವಿಧ ಜಾತಿ, ಸಮುದಾಯಗಳನ್ನು ಜಾತ್ರೆಗಳು ಒಂದುಗೂಡಿಸುತ್ತವೆ. ಇಂದು ಮುಸ್ಲಿಂ ದೇವರ ಜಾತ್ರೆಯಲ್ಲಿ ಇಡೀ ಗ್ರಾಮದ ಜನತೆ ಪಾಲ್ಗೊಂಡಿರುವುದು ನಾವೆಲ್ಲ ಮಾನವರು ಒಂದೇ ಎಂಬ ಭಾವ ಸಾರುವಂತಿದೆ. ಅಂತೆಯೇ ತಾಲ್ಲೂಕಿನ ಮುಳಸಾವಳಗಿ, ಮಣ್ಣೂರ, ಜಾಲವಾದ ಗ್ರಾಮಗಳ ದರ್ಗಾಗಳ ಉರುಸ್‌ಗಳು ಇಂದಿಗೂ ಭಾವೈಕ್ಯತೆ ಬೆಸೆಯುವ ತಾಣಗಳಾಗಿವೆ ಎಂದರು.ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅಂಬಣ್ಣ ಆನೆಗುಂದಿ, ಅನುಗ್ರಹ ಆಸ್ಪತ್ರೆಯ ಸಂಗಮೇಶ ಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯರಾದ ವಸಂತ ರಾಠೋಡ, ಭೀಮಣ್ಣ ಹರವಾಳ, ರಾಜು ಮಣ್ಣೂರ, ರಾಮಣ್ಣ ಕಮತಗಿ, ಭೀಮಾಶಂಕರಗೌಡ ಪಾಟೀಲ, ಸುರೇಶ ಪ್ಯಾಟಿ ಸೇರಿದಂತೆ ಜಾತ್ರಾ ಕಮಿಟಿಯ ಸರ್ವ ಸದಸ್ಯರು ಇದ್ದರು.

Read More