Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಎನ್‌ಟಿಪಿಸಿ ಕೂಡಗಿಯಿಂದ ಆಲಮಟ್ಟಿ ರಸ್ತೆಗೆ ಹೊಂದಿಕೊಂಡು ಬರುವ ಗದಗ ಹುಟಗಿ ರೇಲ್ವೇ ಮಾರ್ಗಕ್ಕೆ ತೆಲಗಿ ಸಮೀಪ ಹೊಸದಾಗಿ ರೇಲ್ವೇ ಹಳಿಮಾರ್ಗ ಕೆಳಗಡೆ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿತು.ತಾಲೂಕಿನ ಕವಲಗಿ ಗ್ರಾಮದಿಂದ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮದ್ಯದಲ್ಲಿ ಬರುವ ರೇಲ್ವೇ ಮಾರ್ಗದ ಮಾನವ ಕಾವಲುಗಾರ ತಡೆಗೇಟ್ ಬದಲಾಗಿ ಹಳಿ ಕೆಳಬಾಗದಲ್ಲಿ ಸೇತುವೆ ನಿರ್ಮಿಸಲು ದಕ್ಷೀಣ ಮದ್ಯ ರೇಲ್ವೇ ಇಲಾಖೆ ಮಂಜೂರಾತಿ ನೀಡಿ ಕಾಮಗಾರಿ ಪ್ರಾರಂಭಿಸಲು ಸಂಸದ ರಮೇಶ ಜಿಗಜಿಣಗಿಯವರ ಸತತ ಪ್ರಯತ್ನವೇ ಕಾರಣ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.ಸೇತುವೆ ಕಾಮಗಾರಿಗೆ ಅಂದಾಜು ಎಂಟು ಕೋಟಿ ವೆಚ್ಚವಾಗಲಿದೆ. ಈ ಸೇತುವೆ ನಿರ್ಮಾಣವಾಗುವದರಿಂದ ಬೀಳಗಿ ಬಾರಖೇಡ ರಾಜ್ಯ ಹೆದ್ದಾರಿಯಲ್ಲಿ ಕಬ್ಬು ಹೊತ್ತು ಸಾಗಿಸುವ ಮತ್ತು ಎತ್ತರದ ಸಗಟು ತೆಗೆದುಕೊಂಡು ಬರುವ ವಾಹನಗಳಿಗೆ ಬಹಳ ಅನುಕೂಲವಾಗುತ್ತದೆ. ಕಾರಣ ತೆಲಗಿ ರೇಲ್ವೇ ನಿಲ್ದಾಣದ ಹತ್ತೀರವಿರುವ ಕೆಳ ಸೇತುವೆ ಕಿರಿದಾಗಿದ್ದರಿಂದ ಕಬ್ಬಿನ ಟ್ಯಾಕ್ಟರ ಲಾರಿ ಮತ್ತು…

Read More

೧೯೬೪ರಲ್ಲಿ ಪ್ರಾರಂಭವಾದ ಬ್ಯಾಂಕು ೬ ದಶಕಗಳಲ್ಲಿ ರೂ.೧೦೮ಕೋಟಿ ಠೇವಣಿ ಸಂಗ್ರಹ | ರೂ.೭೨ಕೋಟಿ ಸಾಲ ವಿತರಣೆ | ಅಧ್ಯಕ್ಷ ಶರಣಪ್ಪ ವಾರದ ವಿವರಣೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ದಿ.ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕ್ ೬೦ ವರ್ಷಗಳನ್ನು ಪೂರೈಸಿದ ಪ್ರಯುಕ್ತ ಷಷ್ಠಿಪೂರ್ತಿ ಹಾಗೂ ೬೧ನೆಯ ವರ್ಷದ ವಾರ್ಷಿಕ ಮಹಾಸಭೆಯನ್ನು ಸೆ.೨೦ರಂದು ಅನುಗ್ರಹ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶರಣಪ್ಪ ವಾರದ ಹೇಳಿದರು.ಸಿಂದಗಿ ಪಟ್ಟಣದ ದಿ.ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕಿನ ಕಛೇರಿಯಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದ ಸಾನಿಧ್ಯವನ್ನು ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಕೊಳ್ಳಲಿದ್ದು, ಉದ್ಘಾಟನೆಯನ್ನು ಸಿಂದಗಿ ಶಾಸಕ ಅಶೋಕ ಮನಗೂಳಿ ನೆರವೇರಿಸಲಿದ್ದಾರೆ.೧೯೬೪ರಲ್ಲಿ ಪ್ರಾರಂಭವಾದ ಬ್ಯಾಂಕು ೬ ದಶಕಗಳಲ್ಲಿ ರೂ.೧೦೮ಕೋಟಿ ಠೇವಣಿ ಸಂಗ್ರಹಿಸಿದ್ದು, ರೂ.೭೨ಕೋಟಿ ಸಾಲ ವಿತರಿಸಿದ್ದು, ಒಟ್ಟು ೬ ಶಾಖೆಗಳನ್ನು ಹೊಂದಿ ಎಲ್ಲ ಶಾಖೆಗಳು ಸಹಕಾರಿ ರಂಗದಲ್ಲಿ ಎ ಗ್ರೇಡ್‌ನಲ್ಲಿ ಪ್ರಗತಿಯತ್ತ ಸಾಗಲು ನಿರ್ದೇಶಕರ, ವ್ಯವಸ್ಥಾಪಕರ, ಸಿಬ್ಬಂದಿ ವರ್ಗದ ಸಹಕಾರ ಹಾಗೂ ಪರಿಶ್ರಮವೇ…

Read More

ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಾದ್ಯಂತ ಇರುವ ಶಾಲಾ-ಕಾಲೇಜ್ ಆವರಣದ ೧೦೦ ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣಾ ಕಾರ್ಯಕ್ರಮದ ೨೦೨೫-೨೬ನೇ ಸಾಲಿನ ಎರಡನೇ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿಯವರು ಕೊಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ತಂಬಾಕು ಉತ್ಪನ್ನಗಳ ಉಪಯೋಗದಿಂದ ದುಷ್ಪರಿಣಾಮ ಹಾಗೂ ಕಾಯ್ದೆಯ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು.ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕೆ ತನಿಖಾ ದಳಗಳನ್ನು ರಚಿಸಿಕೊಂಡು ಕ್ರೀಯಾಶೀಲತೆಯಿಂದ ಕಾಲ ಕಾಲಕ್ಕೆ ದಾಳಿ ನಡೆಸಬೇಕು. ಎಲ್ಲ ಶಾಲೆಗಳಲ್ಲಿ ಆಗಾಗ ಪಾಲಕರ ಸಭೆ ಜರುಗಿಸಿ, ಮಾಹಿತಿ ನೀಡಬೇಕು.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಅಥ್ಲೆಟಿಕ್ ಹಾಗೂ ಜುಡೋ ಕ್ರೀಡೆಗಳನ್ನು ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.೧೧ ಹಾಗೂ ೧೨ ರಂದು ಏರ್ಪಡಿಸಲಾಗಿದೆ.ಜಿಲ್ಲಾ ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ-ದ್ವೀತಿಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ದಿನಾಂಕ : ೧೧-೦೯-೨೦೨೫ ರಂದು ಬೆಳಿಗ್ಗೆ ೮ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಮೊ: ೭೦೧೯೦೦೮೪೪೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಬೆಂಗಳೂರು (ಕಾಸಿಯಾ) ಇವರ ಸಹಯೋಗದಲ್ಲಿ ಎಂಎಸ್‌ಎಂಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ಯೋಜನೆಯಡಿ ಝಡ್‌ಇಡಿ ಮತ್ತು ಲೀನ್ ಯೋಜನೆಯ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸೆ.೧೧ ರಂದು ಸಿಂದಗಿಯ ಹೋಟೆಲ್ ಡಾಲ್ಪಿನ್‌ನಲ್ಲಿ ಏರ್ಪಡಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ಎಂಎಸ್‌ಎಂಇ ಉದ್ದಿಮೆದಾರರು ಭಾಗವಹಿಸಿ ಒಂದು ದಿನದ ಅರಿವು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸದೃಢವಾದ ಶರೀರದ ರಚನೆಯಲ್ಲಿ ಆಹಾರವು ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಈ ನಿಟ್ಟಿನಲ್ಲಿ ಜನತೆ ಆಹಾರದ ಕಡೆಗೆ ಹೆಚ್ಚು ಗಮನ ಹರಿಸುವ ಅಗತ್ಯವಿದೆ ಎಂದು ಪಟ್ಟಣದ ಖ್ಯಾತ ವೈದ್ಯ ಡಾ. ಎನ್.ಬಿ.ವಜೀರಕರ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಐಕ್ಯೂಎಸಿ,ವಿಜಯಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಮಹಿಳಾ ವೇದಿಕೆಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರತಿದಿನ ಊಟದಲ್ಲಿ ಧಾನ್ಯ, ತರಕಾರಿ ,ದ್ವಿದಳ ಧಾನ್ಯ, ಸಿರಿಧಾನ್ಯ ಮೊಳಕೆ ಒಡೆದ ಕಾಳುಗಳು ಬಳಸಬೇಕು. ಬೇಯಿಸದೇ ಇರುವ ತರಕಾರಿಗಳಾದ ಗಜ್ಜರಿ , ಸೌತೆಕಾಯಿ, ಮೂಲಂಗಿ , ಬಿಟರೂಟ್, ಈರುಳ್ಳಿ , ಬೆಳ್ಳುಳ್ಳಿ ಅನೇಕ ತರಕಾರಿಯನ್ನು ಹೆಚ್ಚಿಗೆ ಬಳಸಬೇಕು. ಮಾಂಸ ಆಹಾರಕ್ಕಿಂತ ಸಸ್ಯ ಆಹಾರವು ಆರೋಗ್ಯಕ್ಕೆ ಹೆಚ್ಚಿನ ಶಕ್ತಿ ತಂದುಕೊಡುತ್ತದೆ. ದೀರ್ಘಕಾಲದವರೆಗೆ ಸದೃಢವಾದ ಶರೀರವನ್ನು ಕಾಪಾಡಿಕೊಳ್ಳಲು ಬೇಕರಿ ಮತ್ತು ಕರಿದ ಪದಾರ್ಥಗಳಿಂದ ದೂರ ಇರಬೇಕು. ವಯಸ್ಕರು ಪ್ರತಿದಿನ ಮೂರರಿಂದ ಮೂರುವರೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ವ್ಯಕ್ತಿ ಶ್ರೀಮಂತನಾಗುತ್ತಾ ಹೋದಂತೆ ವಿಚಾರ ಮತ್ತು ನಡವಳಿಕೆ ಮೃಗವಾಗುತ್ತಾ ಹೋಗಿ ಜ್ಞಾನಿಯಾಗುತ್ತಿದ್ದಂತೆ ಆತನ ವಿಚಾರಗಳಲ್ಲಿ ನಡವಳಿಕೆಗಳಲ್ಲಿ ಗುರುವಾಗುತ್ತಾ ಹೋಗುತ್ತಾನೆ ಎಂದು ಪ್ರಾಚಾರ್ಯ ಕೆ.ಜಿ. ಲಮಾಣಿ ಹೇಳಿದರು.ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಕೂಡಗಿಯಲ್ಲಿ ಏರ್ಪಡಿಸಿದ ರಾಜ್ಯಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಯನ್ನು ಪಡೆದ ಸಮಾಜಶಾಸ್ತ್ರದ ಹಿರಿಯ ಉಪನ್ಯಾಸಕರಾದ ಪ್ರೊ: ಬಸವರಾಜ ಜಾಲವಾದಿಯವರ ಅಭಿನಂದನಾ ಸಮಾರಂಭದ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡುತ್ತಿದ್ದರು.೨೩ ಜಿಲ್ಲೆಗಳಿಗೆ ದೊರೆಯದ ಈ ಪ್ರಶಸ್ತಿ ನಮ್ಮ ಜಿಲ್ಲೆಗೆ ಬಸವಣ್ಣನ ಈ ನೆಲಕ್ಕೆ ಅದೂ ನಮ್ಮ ಕಾಲೇಜಿಗೆ ಇವರ ರೂಪದಲ್ಲಿ ದೊರಕಿದ್ದು ಭಾಗ್ಯವೇ ಸರಿ ಎಂದರು. ಇಂತಹ ಧನಾತ್ಮಕ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಪ್ರೇರೇಪಣೆಗೊಂಡು ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳಬೇಕೆಂದು ಕರೆಕೊಟ್ಟರು.ಪ್ರಾಸ್ಥಾವಿಕ ಮಾತುಗಳನ್ನಾಡಿದ ಪ್ರೊ: ವ್ಹಿ.ಜಿ. ಕಿವುಡಜಾಡರ್ ಮಾತನಾಡಿ, ಅನುಕರಣನೀಯ ವ್ಯಕ್ತಿತ್ವ ಹೊಂದಿದ ಜಾಲವಾದಿಯವರಿಂದ ವಿದ್ಯಾರ್ಥಿಗಳು ಬಹಳ ಕಲಿಯುವುದಿದೆ. ಇಂತಹ ಅರ್ಹ ವ್ಯಕ್ತಿತ್ವದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದಾಗ ಆ ಪ್ರಶಸ್ತಿಗೆ ಘನತೆ ಬರುತ್ತೆ ಅದಕ್ಕಾಗಿ ರಾಜ್ಯಮಟ್ಟದ ಆಯ್ಕೆ ಸಿಬ್ಬಂದಿಗೆ ಧನ್ಯವಾದಗಳು ಎಂದರು.ಎಸ್.ಬಿ. ದೇಸಾಯಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್‌ಎಸ್‌ಎಲ್‌ಸಿ ನಂತರದ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ಸ್ನಾತಕೊತ್ತರ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರು ಪಾವತಿ ಹಾಗೂ ವಿಕಲಚೇತನರಿಗೆ ವಿವಾಹವಾದಲ್ಲಿ ನೀಡಲಾಗುವ ಪ್ರೋತ್ಸಾಹಧನಕ್ಕೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ ೩೦ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ಜಗದೀಶ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗೆ: ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ: ೯೬೦೬೧೫೧೧೪೯, ವಿಜಯಪುರ ತಾಲೂಕ ಪಂಚಾಯತಿಯ ಸಂಯೋಜಕರಾದ ರವಿ ರಾಠೋಡ ಮೊ: ೯೦೩೫೫೫೩೩೩೭, ಇಂಡಿ ತಾಲೂಕ ಪಂಚಾಯತಿಯ ಸಂಯೋಜಕರಾದ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಸಿಂದಗಿ ತಾಲೂಕ ಪಂಚಾಯತಿಯ ಸಂಯೋಜಕರಾದ ಮೊ: ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಮುದ್ದೇಬಿಹಾಳ ತಾಲೂಕ ಪಂಚಾಯತಿಯ ಸಂಯೋಜಕರಾದ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಹಾಗೂ ಬಸವನ ಬಾಗೇವಾಡಿ ತಾಲೂಕ ಪಂಚಾಯತಿಯ ಸಂಯೋಜಕರಾದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ ೧೭ರಂದು ಡಾ.ಬಿ.ಆರ್.ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಸ್ಪರ್ಧೆಗಳಾದ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆ ಹಾಗೂ ಕ್ರೀಡಾ ಸ್ಪರ್ಧೆಗಳಾದ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆಗೆ , ಬಕೆಟ್‌ನಲ್ಲಿ ಬಾಲ್ ಎಸೆಯುವುದು ಮಹಿಳೆ ಹಾಗೂ ಪುರಷರು ಭಾಗವಹಿಸಬಹುದಾಗಿದ್ದು, ೬೦ ರಿಂದ ೭೦ ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.ಹೆಚ್ಚಿನ ಮಾಹಿತಿಗೆ: ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ: ೯೬೦೬೧೫೧೧೪೯, ವಿಜಯಪುರ ತಾಲೂಕ ಪಂಚಾಯತಿಯ ಸಂಯೋಜಕರಾದ ರವಿ ರಾಠೋಡ ಮೊ: ೯೦೩೫೫೫೩೩೩೭, ಇಂಡಿ ತಾಲೂಕ ಪಂಚಾಯತಿಯ ಸಂಯೋಜಕರಾದ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಸಿಂದಗಿ ತಾಲೂಕ ಪಂಚಾಯತಿಯ ಸಂಯೋಜಕರಾದ ಮೊ: ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಮುದ್ದೇಬಿಹಾಳ ತಾಲೂಕ ಪಂಚಾಯತಿಯ ಸಂಯೋಜಕರಾದ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಹಾಗೂ ಬಸವನ ಬಾಗೇವಾಡಿ ತಾಲೂಕ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಇದೇ ಅ.೯ ರಂದು ಆಲಮಟ್ಟಿ ಜಲಾಶಯವನ್ನು ೫೧೯.೬ ಮೀ ನಿಂದ ೫೨೪.೨೫೬ ಮೀ ಎತ್ತರದ ಕಾರ್ಯಾಚರಣೆಯನ್ನು ರೈತ ಸಂಘದಿಂದಲೇ ಆರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದರು.ಆಲಮಟ್ಟಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.ಗ್ಯಾರಂಟಿಗಳ ಭಾಗ್ಯಗಳಲ್ಲಿ, ಅಭಿವೃದ್ಧಿಯ ಗ್ಯಾರಂಟಿ ರಾಜ್ಯ ಸರ್ಕಾರ ಮರೆತಿದ್ದು, ಅದಕ್ಕಾಗಿ ಜಲಾಶಯವನ್ನು ನಾವೇ ರೈತರು ಕೂಡಿಕೊಂಡು ಎತ್ತರಿಸುತ್ತೇವೆ ಎಂದರು.ಪ್ರತಿ ಗ್ರಾಮ, ಗ್ರಾಮಗಳಲ್ಲಿಯೂ ಜಲಾಶಯ ಎತ್ತರದ ಬಗ್ಗೆ ಅರಿವು ಮೂಡಿಸಲಾಗುವುದು, ಸರ್ಕಾರಕ್ಕೂ ಹೋರಾಟದ ಬಗ್ಗೆ ಮೊದಲೇ ತಿಳಿಸಲಾಗುವುದು ಎಂದರು.ಕಳೆದ ಶನಿವಾರ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಯಾವ ಪುರುಷಾರ್ಥಕ್ಕಾಗಿ ಕೃಷ್ಣೆಗೆ ಬಾಗಿನ ಅರ್ಪಿಸಿದರು ಎಂಬುದೇ ತಿಳಿಯುತ್ತಿಲ್ಲ. ಯುಕೆಪಿ ಯೋಜನೆಯನ್ನು ಸಂಪೂರ್ಣ ನಿರ್ಲಕ್ಷ ತಾಳಿದ್ದಾರೆ, ಯಾವುದೇ ಕಾಲಮಿತಿಯಿಲ್ಲ. ಪೂರ್ಣಗೊಳಿಸುವ ಯಾವುದೇ ಜವಾಬ್ದಾರಿಯೂ ರಾಜ್ಯ ಸರ್ಕಾರಕ್ಕಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.ಯುಕೆಪಿಯ ವಿಷಯಗಳಲ್ಲಿ ಎಲ್ಲಾ ಪಕ್ಷದವರು ರಾಜಕೀಯ ಮಾಡುತ್ತಲೇ ಸಾಗುತ್ತಿದ್ದಾರೆ. ಈಗ ಭೂಸ್ವಾಧೀನದ ಪ್ರಶ್ನೆ ಎದ್ದಿದ್ದು, ಅದರಲ್ಲಿಯೂ ರಾಜಕೀಯ ನಡೆಯುತ್ತಿದೆ…

Read More