Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರಸಕ್ತ 2024-25 ನೇ ಸಾಲೀನ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿಯುಸಿ ವಾರ್ಷಿಕ ಪರಿಕ್ಷೇಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಮಖಂಡಿ ತಾಲೂಕಾ ಮರಾಠ ಸಮಾಜದ ವಿಧ್ಯಾರ್ಥಿ, ವಿದ್ಯಾರ್ಥಿನಿಯರು ಭವಾನಿ ಕೋ-ಆಪ್ ಕ್ರೇಡಿಟ್ ಸೋಸಾಯಿಟಿ ನಿ. ಸಾವಳಗಿ ಶಾಖೆಯ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದೆ.ಬೇಕಾದ ದಾಖಲಾತಿ:ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ಪಿಯುಸಿ ವಿಧ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಅಂಕಪಟ್ಟಿ, ಎರಡು ಪೋಟೋ, ಆಧಾರ ಕಾರ್ಡ, ಪೂರ್ಣ ವಿಳಾಸದೊಂದಿಗೆ 16-9-2025 ಒಳಗಾಗಿ ಹೆಸರು ನೊಂದಾಯಿಸಿ ಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕ ಸಹದೇವ ಕೇಸ್ಕರ 9844565589, ಅಧ್ಯಕ್ಷ ಉಮೇಶ ಜಾಧವ 9880666671 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರಸಕ್ತ 2024-25 ನೇ ಸಾಲೀನ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿಯುಸಿ ವಾರ್ಷಿಕ ಪರಿಕ್ಷೇಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಮಖಂಡಿ ತಾಲೂಕಾ ಮರಾಠ ಸಮಾಜದ ವಿಧ್ಯಾರ್ಥಿ, ವಿದ್ಯಾರ್ಥಿನಿಯರು ಭವಾನಿ ಕೋ-ಆಪ್ ಕ್ರೇಡಿಟ್ ಸೋಸಾಯಿಟಿ ನಿ. ಸಾವಳಗಿ ಶಾಖೆಯ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದೆ.ಬೇಕಾದ ದಾಖಲಾತಿ:ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ಪಿಯುಸಿ ವಿಧ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಅಂಕಪಟ್ಟಿ, ಎರಡು ಪೋಟೋ, ಆಧಾರ ಕಾರ್ಡ, ಪೂರ್ಣ ವಿಳಾಸದೊಂದಿಗೆ 16-9-2025 ಒಳಗಾಗಿ ಹೆಸರು ನೊಂದಾಯಿಸಿ ಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕ ಸಹದೇವ ಕೇಸ್ಕರ 9844565589, ಅಧ್ಯಕ್ಷ ಉಮೇಶ ಜಾಧವ 9880666671 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿಎಲ್ಡಿಇ ಸಂಸ್ಥೆಯ ಎಸ್.ಬಿ. ಕಲಾ – ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಇದೇ ದಿ.10 ರಂದು ಬೆಳಿಗ್ಗೆ 10 ಕ್ಕೆ ತತ್ವಪದಕಾರ್ತಿಯರ ಲೋಕ ದೃಷ್ಟಿ ಎಂಬ ವಿಷಯದ ಕುರಿತು ರಾಷ್ಟೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ.ಕನ್ನಡ ಸಾಹಿತ್ಯದಲ್ಲಿ ತತ್ವಪದಕ್ಕೆ ತನ್ನದೇ ಆದ ಮಹತ್ವವಿದ್ದು, ಕೀರ್ತನೆ, ವಚನಗಳಂತೆ ತತ್ವಪದಗಳು ಸಹ ಬಹುಮುಖ್ಯ ಪಾತ್ರ ವಹಿಸಿದ್ದು, ತತ್ವಪದಕಾರ್ತಿಯಯರ ತಾತ್ವಿಕ ವಿಷಯಗಳ ಕುರಿತು ಡಾ.ಗುರುಲಿಂಗಪಪ್ ದಬಾಲೆ, ತತ್ವಪದಕಾರ್ತಿಯರ ಕಲ್ಪನೆ ಎಂಬ ವಿಷಯದ ಕುರಿತು ಡಾ.ಗೌರ್ ಮೊದಲಾದ ಹಿರಿಯ ಚಿಂತಕರು ಉಪನ್ಯಾಸ ಮಂಡಿಸಲಿದ್ದಾರೆ. ಬಿಎಲ್ಡಿಇ ವಿವಿ ಸಮ ಕುಲಾಧಿಪತಿ ಡಾ.ವೈ.ಎಂ. ಜಯರಾಜ್, ಡಾ.ದಸ್ತಗೀರ ಸಾಬ್ ದಿನ್ನಿ, ಡಾ.ಶ್ರೀನಿವಾಸ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಎಸ್.ಬಿ. ವಿಜ್ಡಮ್ ಕರಿಯರ್ ಅಕಾಡೆಮಿ ಸಂಸ್ಥಾಪಕ ಶರಣಯ್ಯ ಭಂಡಾರಿಮಠ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ನಿರ್ಮಾಣದ ಮಹತ್ವದ ಹಾದಿ. ಶಿಕ್ಷಕರಾಗಿ ಹೊರಹೊಮ್ಮಲು CET, TET, CTET ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗಿರುವ ಈ ಕಾಲದಲ್ಲಿ, ಸಿಂದಗಿಯ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಉಚಿತ 2 ದಿನಗಳ CET, TET, CTET ಕಾರ್ಯಾಗಾರ ಅತ್ಯಂತ ಸೂಕ್ತವಾಗಿದೆ ಎಂದು ವಿಜಯಪುರದ ಎಸ್.ಬಿ. ವಿಜ್ಡಮ್ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಶರಣಯ್ಯ ಭಂಡಾರಿಮಠ ಅಭಿಪ್ರಾಯಪಟ್ಟರು.ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ, “ಶಿಕ್ಷಕರು ಸಮಾಜದ ಕಣ್ಣುಗಳು, ದಾರಿ ತೋರಿಸುವ ದೀಪಸ್ತಂಭರು. ಉತ್ತಮ ಶಿಕ್ಷಕರನ್ನು ರೂಪಿಸಲು ಇಂತಹ ಕಾರ್ಯಾಗಾರಗಳು ಪೂರಕವಾಗುತ್ತವೆ. ವಿದ್ಯಾರ್ಥಿಗಳು ಸಮಯವನ್ನು ಸರಿಯಾಗಿ ಉಪಯೋಗಿಸಿ, ನಿರಂತರ ಅಭ್ಯಾಸ ಮತ್ತು ಶಿಸ್ತಿನ ಜೀವನವನ್ನು ಅಳವಡಿಸಿಕೊಂಡರೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಕಷ್ಟಕರವಾಗುವುದಿಲ್ಲ. CET, TET, CTET ಪರೀಕ್ಷೆಗಳು ವಿದ್ಯಾರ್ಥಿಗಳ ಕನಸುಗಳನ್ನು ನನಸು ಮಾಡುವ ಹಾದಿಯಾಗಬೇಕು, ಅಡ್ಡಿಯಾಗಬಾರದು”ಎಂದು ತಿಳಿಸಿದರು.ಸಂಸ್ಥೆಯ ಆಡಳಿತಾಧಿಕಾರಿ ಬಿ.ಜಿ. ಮಠ, ವಿದ್ಯಾರ್ಥಿಗಳು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸತ್ಯಸೃತಿ ಎಂ ಅವರು ಸಲ್ಲಿಸಿದ್ದ “ಜಂಬುನಾಥ ಕಂಚ್ಯಾಣಿ ಅವರ ಜೀವನ ಮತ್ತು ಸಾಹಿತ್ಯ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.ಸತ್ಯಸೃತಿ ಎಂ ಅವರು ಕನ್ನಡ ವಿಭಾಗದ ಪ್ರೊ.ಮಹೇಶ ಚಿಂತಾಮಣಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸತ್ಯಸೃತಿ ಎಂ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಲೇಖನ- ಪ್ರೊ.ಶಿವಾನಂದ ಎಸ್.ಪಟ್ಟಣಶೆಟ್ಟರ ಕಾರ್ಯದರ್ಶಿಗಳು.ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಗದಗಹಾಗೂ ಎಸ್.ವ್ಹಿ.ವ್ಹಿ.ಅಸೋಸಿಯೇಷನ್, ಶಿಕ್ಷಣ ಸಂಸ್ಥೆ ಆಲಮಟ್ಟಿ ಉದಯರಶ್ಮಿ ದಿನಪತ್ರಿಕೆ ವಿಶ್ವಗುರು ಅಣ್ಣ ಬಸವಣ್ಣನವರ ನೆಲೆಯಲ್ಲಿ ಸಾಹಿತ್ಯದ ಪರಿಮಳ ಸೂಸುತ್ತಿರುವ ನಂದಿ ಸಾಹಿತ್ಯ ವೇದಿಕೆ ಕೈಂಕರ್ಯ ಅನೂನ್ಯ, ಅನುಪಮ. ಸಾಹಿತ್ಯ ಪರಧಿ ಸಾರುತ್ತಿರುವ ಈ ವೇದಿಕೆಗೆ ಈಗ ಇಪ್ಪತೈದನೆ ವಸಂತದ ಸಾಹಿತ್ಯ ತೃಷೆಯ ಋತುಗಾನ ಎಂಬುದು ಸಂತಸ. ಬಸವ ಜಯಂತಿ ರೂವಾರಿ ಶರಣ ಹರ್ಡೇಕರ ಮಂಜಪ್ಪನವರನ್ನು ಪೂಜ್ಯನೀಯ ಭಾವದಿಂದ ಸ್ಮರಿಸಿ ಮಂಜಪ್ಪನವರ ಕಾಯಕ ತತ್ಪರತೆ ತಿರುಳಿನ ದೃಢ ನಿಲುವು ಹೊಂದಿರುವ ಬಸವನ ಬಾಗೇವಾಡಿಯ ನಂದಿ ಸಾಹಿತ್ಯ ವೇದಿಕೆಯ ಸಮಾಜಮುಖಿ ಸಾಹಿತ್ಯ ಪರ ಕಾಯಕ ಕರುನಾಡಿನ ಸಾಹಿತ್ಯಾಸಕ್ತರ ಮನ ತಣಿಸುತ್ತಿದೆ. ಬಸವೇಶ್ವರರ ನೆಲದಲ್ಲಿ ಸೃಜನಾತ್ಮಕ ಸಾಹಿತ್ಯ ಕೃಷಿ ಬಿತ್ತಿ ಬೆಳೆಯುತ್ತಿದೆ. ಈ ಅನುಪಮ ಕಾರ್ಯ ಸಾಹಿತ್ಯ ಲೋಕದ ವೈವಿಧ್ಯತೆಯ ಪ್ರತಿಬಿಂಬವಾಗಿದೆ. ಸಾಹಿತ್ಯ ಸುಗನ್ನತೆಯ ರಸಸತ್ವದಿಂದಲೇ ನಂದಿ ಸಾಹಿತ್ಯ ವೇದಿಕೆ ನಾಡಿನ ಸಾಹಿತ್ಯ ಪ್ರಿಯರ ಗಮನ ಸೆಳೆಯುತ್ತಿರುವ ಸಾಹಿತ್ಯ ಸೇವಾ ಕಾರ್ಯ ಮಾದರಿಯಾಗಿದೆ.…
ಇಂದು (ಸೆಪ್ಟಂಬರ್ ೧೦, ಬುಧವಾರ) “ವಿಶ್ವ ಆತ್ಮಹತ್ಯೆ ತಡೆ ದಿನ” ದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರತಿಕೋಟಾವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಖ್ಯಾತ್ ಮನಃಶಾಸ್ತ್ರಜ್ಞ ಸಿಗ್ಮಂಡ್ ಫ್ರೀಡ್ ಅವರು, “ಸಾವನ್ನು ಪಡೆಯಲು ಸಾವಿರ ದಾರಿಗಳಿವೆ, ಆದರೆ ಬದುಕನ್ನು ಕಂಡುಕೊಳ್ಳಲು ದಾರಿ ಒಂದೇ ಅದುವೇ ಆತ್ಮವಿಶ್ವಾಸ” ಎಂದು ಹೇಳಿದ್ದಾರೆ. ಇಂದಿನ ದಿನಗಳಲ್ಲಿ ಯುವಕರು ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿವೆ ಅಥವಾ ಫೇಲ್ ಆದಾಗ ಮತ್ತು ಸಾಮಾನ್ಯ ಜನರು ಸಂಸಾರದಲ್ಲಿರುವ ಎದುರಾಗುವ ಸಂಕಷ್ಟ, ರೈತರು ಸಾಲ ಬಾಧೆಯಿಂದ ಮತ್ತು ಕೌಟುಂಬಿಕ ಕಲಹದಂತಹ ಕಾರಣಗಳಿಂದ ಆತ್ಮಹತ್ಯೆಗೆ ಶರಣಾಗುತ್ತಿರುವ ದೃಶ್ಯಗಳು ನಮ್ಮ ಕಣ್ಮುಂದೆ ಕಾಣ ಸಿಗುತ್ತವೆ. ಆತ್ಮಹತ್ಯೆಗೆ ಕಾರಣಗಳು ಹಲವು ಇರಬಹುದು. ಶೈಕ್ಷಣಿಕ ಒತ್ತಡ, ಆತ್ಮವಿಶ್ವಾಸದ ಕೊರತೆ, ಮಾನಸಿಕ ಆಘಾತ, ಆರ್ಥಿಕ ಪರಿಸ್ಥಿತಿ, ಬಡತನ, ಸೋಲು, ಪ್ರೇಮ ವೈಫಲ್ಯ, ಮೋಬೈಲ್ ಮೇಲೆ ಅತಿಯಾದ ವ್ಯಾಮೋಹ, ಪರೀಕ್ಷೆಯಲ್ಲಿ ಅನುತ್ತೀರ್ಣ ಮತ್ತು ದೈಹಿಕ-ಲೈಂಗಿಕ ದೌರ್ಜನ್ಯ ಇತ್ಯಾದಿ ಇವೆಲ್ಲವೂ ಆತ್ಮಹತ್ಯೆಗೆ ಕಾರಣಗಳಾಗಿವೆ. ಭಾರತದಲ್ಲಿ ಶೈಕ್ಷಣಿಕ ಸಾಧನೆಗಾಗಿ…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಒಂದು ಊರಿನಲ್ಲಿ ಸುಭದ್ರ ಎಂಬ ಒಬ್ಬ ಶ್ರೀಮಂತನಾದ ವಜ್ರದ ವ್ಯಾಪಾರಿಯು ವಾಸವಾಗಿದ್ದು, ದೇಶ ವಿದೇಶಗಳಿಗೂ ವಜ್ರದ ಹರಳುಗಳನ್ನು ಮಾರಾಟವನ್ನು ಮಾಡುತ್ತಿದ್ದನು. ಈತನು ತನ್ನ ವ್ಯಾಪಾರದ ಅಂಗಡಿಯನ್ನು ಮತ್ತು ತನ್ನ ಮನೆಯನ್ನು ಕಾಯಲು ಮತ್ತು ರಕ್ಷಣೆಗಾಗಿ ದೊಡ್ಡ ಜಾತಿಯ ಒಂದು ನಾಯಿಯನ್ನು ಸಾಕಿದ್ದನು. ನಾಯಿಯನ್ನು ಪಕ್ಕದ ಪಟ್ಟಣದಿಂದ ಹೆಚ್ಚು ಬೆಲೆಯನ್ನು ಕೊಟ್ಟು ಖರೀದಿಸಿ ತಂದಿದ್ದನು. ನಾಯಿಯು ನೋಡಲು ಗಾತ್ರದಲ್ಲಿ ಬಹಳ ದೊಡ್ಡದಾಗಿದ್ದು, ನೋಡಲು ಅತ್ಯಂತ ಸುಂದರ ಮತ್ತು ಆಕರ್ಷಕವಾಗಿತ್ತು. ಆ ನಾಯಿಯೂ ಸುಭದ್ರನಿಗೆ ಅತ್ಯಂತ ಪ್ರೀತಿ ಪಾತ್ರವಾಗಿತ್ತು. ನಾಯಿಯ ಎತ್ತರವಾದ ನೋಟ ಮತ್ತು ಗಂಭೀರ ಮತ್ತು ಏರು ಧ್ವನಿಯ ಬೊಗಳುವ ಸದ್ದಿನಿಂದ ಸುತ್ತಮುತ್ತಲಿನ ಜನರೆಲ್ಲರೂ ಸುಭದ್ರನ ಮನೆಯ ಸುತ್ತ ಸುಳಿಯಲೂ ಹಿಂದೇಟು ಹಾಕುತ್ತಿದ್ದರು. ಸುಭದ್ರನು ತಾನು ಸಾಕಿದ ನಾಯಿಯ ಕುರಿತು ಒಳಗೊಳಗೆ ಹೆಮ್ಮೆಪಡುತ್ತಿದ್ದನು. ತನ್ನ ವಿಶೇಷ ಜಾರಿಯ ನಾಯಿಗೆ ಸುಭದ್ರನು ತಿನ್ನಲು ಎರಡು ಹೊತ್ತು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಹಾ ಮಾನವತಾವಾದಿಯಾಗಿ, ಸಮಾಜದ ಕಣ್ಣರಳಿಸಿದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರು ಸಾರ್ವಕಾಲಿಕವಾಗಿ ಶ್ರೇಷ್ಠರೇನಿಸಿದ್ದಾರೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಭಾನುವಾರ ನಾರಾಯಣಗುರು ಅವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಮಾತನಾಡಿದರು. ಕೇರಳದಲ್ಲಿ ಜನಿಸಿದ ಇವರು ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದರು. ಶಂಕರಾಚಾರ್ಯರ ಅದ್ವೈತ ಸಾರದಲ್ಲಿ ತಮ್ಮ ದಾರ್ಶನಿಕತೆ ಪ್ರತಿಪಾದಿಸಿ ಎಲ್ಲರನ್ನೂ ಒಂದಾಗಿ ಕಂಡ ಮಹಾನುಭಾವರೆನಿಸಿದ್ದಾರೆ ಎಂದರು.ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಪಿ.ಬಿರಾದಾರ ಹಾಗೂ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ ಮಾತನಾಡಿ, ಸಾಮಾಜಿಕ ಸಮಾನತೆಯ ಹರಿಕಾರ, ಒಂದೇ ಜಾತಿ, ಒಂದೇ ಮತ, ಒಂದೇ ಧರ್ಮ. ದೇಶ ಸೇವೆಯೇ ಈಶ ಸೇವೆ ಎಂದು ಸಾರಿದ ಸ್ತ್ರೀ ಸಮಾನತೆಗಾಗಿ ಶ್ರಮಿಸಿದ ಬ್ರಹ್ಮಶ್ರೀ ನಾರಾಯಣಗುರು ಇವರ ಆದರ್ಶಗಳು ಮತ್ತು ಸಂದೇಶಗಳು ನಮಗೆ ದಾರಿದೀಪಗಳಾಗಿವೆ ಎಂದರು.ಗ್ರಾಮ ಆಡಳಿತಾಧಿಕಾರಿ ಅನೀಲ ರಾಠೋಡ, ರಮೇಶ ಈಳಗೇರ, ರಾವುತ ಅಗಸರ ಸಿಬ್ಬಂದಿ ಚನ್ನಬಸು ಹೊಸಮನಿ, ಕಿಶೋರ…
೬೫ ಲಕ್ಷ.ರೂ ಹಣ ಸಂದಾಯವಾದರೂ ದೊರೆಯದ ಜಮೀನು | ಭ್ರಷ್ಟಾಚಾರದಲ್ಲಿ ಅಧಿಕಾರಿ ಶಾಮೀಲಿನ ಶಂಕೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣ ಪಂಚಾಯಿತಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿಷಯದಲ್ಲಿ ಸುಮಾರು ೬೫ ಲಕ್ಷ ರೂ.ಗಳ ಅವ್ಯವಹಾರ ಆಗಿದ್ದು ಕೂಡಲೇ ಇದರ ಕುರಿತು ಕೂಡಲೇ ಕೂಲಂಕುಷ ತನಿಖೆ ನಡೆಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ತಹಶೀಲ್ದಾರ ಪ್ರಕಾಶ ಸಿಂದಗಿ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಶನಿವಾರ ಆಗಮಿಸಿದ ದಲಿತ ಸಂಘರ್ಷ ಸಮಿತಿ ಹಾಗೂ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಘನತ್ಯಾಜ್ಯ ವಿಲೇವಾರಿ ಘಟಕದ ಜಮೀನಿನ ಖರೀದಿ ವಿಷಯಕ್ಕೆ ಸಂಬಂಧಿಸಿದಂತೆ ನಡೆದಿರುವ ಅವ್ಯವಹಾರದ ಕುರಿತು ತಹಶೀಲ್ದಾರರ ಗಮನ ಸೆಳೆದರು.ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ ಮಾತನಾಡಿ, ಪಟ್ಟಣದ ಘನತ್ಯಾಜ್ಯ ವಿಲೇವಾರಿಗೆ ಅಗತ್ಯವಾದ ಜಮೀನು ಖರೀದಿಗಾಗಿ ೨೦೧೫-೧೬ನೇ ಸಾಲಿನ ೧೪ನೇ ಹಣಕಾಸು ಯೋಜನೆಯಲ್ಲಿ ೧೦.೦೨ ಲಕ್ಷ, ರೂ.ಗಳು ಹಾಗೂ ೧೮-೧೯ನೇ ಸಾಲಿನಲ್ಲಿ ೧೧.೬೪ ಲಕ್ಷ,…
