Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿದ್ಯಾರ್ಥಿ, ಯುವ ಸಮೂಹ ನಮ್ಮ ದೇಶ, ಸಂಸ್ಕೃತಿ, ನಮ್ಮ ಪರಂಪರೆಯ ನಿರ್ಮಾಪಕ ಕ್ರಮಗಳನ್ನು ಅಧ್ಯಯನ ಮಾಡಬೇಕು ಎಂದು ತಹಶೀಲ್ದಾರ್ ಕರೆಪ್ಪ ಬೆಳ್ಳಿ ಹೇಳಿದರು.ಸಿಂದಗಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶರಣರ, ದಾರ್ಶನಿಕರ ಜೀವನ ಚರಿತ್ರೆಗಳನ್ನು ಅಧ್ಯಯನ ಮಾಡುವುದರ ಮೂಲಕ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಈ ವೇಳೆ ಈಡಿಗ ಸಮಾಜದ ಅಧ್ಯಕ್ಷ ತಮಣ್ಣ ವಿ.ಈಳಗೇರ, ಕಂದಾಯ ನಿರೀಕ್ಷಕ ಎ.ಆಯ್.ಮಕಾಂದರ, ಸಮಾಜ ಕಲ್ಯಾಣ ಇಲಾಖೆಯ ರಾಯಪ್ಪ ಎಸ್.ಬನ್ನೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ಸಮಾಜದ ಮುಖಂಡರಾದ ಸಚಿನ್ ಈಳಗೇರ, ಅರವಿಂದ ಈಳಗೇರ, ಮಹೇಶ ಗುತ್ತೇದಾರ, ರುಕ್ಮಯ್ಯ ಈಳಗೇರ, ಬಸವರಾಜ ಈಳಗೇರ, ನರಸಯ್ಯ ಈಳಗೇರ, ಸದಾನಂದ ಈಳಗೇರ, ಕಪಿಲ ಈಳಗೇರ, ರಾಮಯ್ಯ ಗುತ್ತೇದಾರ, ಗುರುರಾಜ ಗುತ್ತೇದಾರ ಸೇರಿದಂತೆ ಅನೇಕರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಹಡಗಿನಾಳ ಗ್ರಾಮದ ಶ್ರೀ ಬಸವೇಶ್ವರ ಗಜಾನನ ಯುವಕ ಮಂಡಳಿಯು ಆರ್‌ಎಸ್‌ಎಸ್ ೧೦೦ ಶತಾಬ್ದಿ ನಿಮಿತ್ಯ ಭಾರತ ಮಾತೆಯ ಪೂಜೆ ಮಾಡುವ ಮೂಲಕ ಗಣೇಶ ವಿಸರ್ಜನೆಗೆ ಚಾಲನೆ ನೀಡಿದರು.ಈ ವೇಳೆ ತಾಲೂಕು ಆರ್‌ಎಸ್‌ಎಸ್ ಶಾರೀರಿಕ ಪ್ರಮುಖ ಸುನೀಲ ಬಳುಂಡಗಿ, ಮಲ್ಲಿಕಾರ್ಜುನ ಶಿರಶ್ಯಾಡ, ದೇವಿಂದ್ರ ಬಳುಂಡಗಿ, ಸಾಹೇಬಗೌಡ ಅಡವಿ, ಶ್ರೀಶೈಲ ಶಿರಶ್ಯಾಡ, ಪ್ರಕಾಶ ಶಿರಶ್ಯಾಡ, ಬಸವರಾಜ ಅಡವಿ, ಈರಣ್ಣ ಬಡಿಗೇರ, ಸಾವಳಗಯ್ಯ ಹಿರೇಮಠ, ಗುರುಸ್ವಾಮಿ ಮಠ, ನಾಗರಾಜ ಮುಡಬಾಳ, ಬಸವರಾಜ ನಾಯ್ಕೋಡಿ, ರಮೇಶ ನಾಯ್ಕೋಡಿ, ಭಗವಂತ್ರಾಯ ಮಂದೇವಾಲಿ, ಶರಣಗೌಡ ಅಡವಿ, ಅಶೋಕ ಶಿರಶ್ಯಾಡ ಸೇರಿದಂತೆ ಗ್ರಾಮಸ್ಥರು, ಮಂಡಳಿಯ ಸದಸ್ಯರು, ಸುತ್ತಮುತ್ತಲಿನ ಯುವಕರು ಮೆರವಣಿಗೆಯಲ್ಲಿ ಭಾಗವಿಸಿದರು.

Read More

ಸಿಂದಗಿ ನಗರಸಭೆಯಾಗಿ ಮೇಲ್ದರ್ಜೆಗೇರಿದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಶಾಸಕ ಅಶೋಕ ಮನಗೂಳಿ ಭರವಸೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಿಂದಗಿ ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೇರಿದ ಹಿನ್ನೆಲೆಯಲ್ಲಿ ಪುರಸಭೆ ಮತ್ತು ಮನಗೂಳಿ ಅವರ ಅಭಿಮಾನಿಗಳು ನಗರದಲ್ಲಿ ಶಾಸಕ ಅಶೋಕ ಮನಗೂಳಿ ಅವರ ಅದ್ದೂರಿ ಮೆರವಣಿಗೆ ಮಾಡಿದರು.ಮೆರವಣಿಗೆಯ ಬಳಿಕ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಶಾಸಕ ಅಶೋಕ ಮನಗೂಳಿ ಮಾತನಾಡಿ, ಬರುವ ೨೦೨೮ರ ಚುನಾವಣೆಯ ಒಳಗಾಗಿ ಸಿಂದಗಿ ನಗರಕ್ಕೆ ಸರ್ಕಾರದಿಂದ ರೂ.೧೦೦ಕೋಟಿ ವಿಶೇಷ ಅನುದಾನ ತೆಗೆದುಕೊಂಡು ಬರುವ ಮೂಲಕ ಪಟ್ಟಣದ ರಸ್ತೆಗಳನ್ನು ಸಿ.ಸಿ ರಸ್ತೆಗಳನ್ನಾಗಿ ಮಾಡುತ್ತೇನೆ. ನಗರಸಭೆಯಾದ ಮೇಲೆ ಸಿಂದಗಿಯ ವಾತಾವರಣ ಬದಲಾವಣೆ ಮಾಡಬೇಕೆನ್ನುವ ಕನಸನ್ನು ಹೊತ್ತಿದ್ದೇನೆ. ಎಸಿ ಕಛೇರಿ ಮತ್ತು ಕೆಇಬಿ ಇಇ ಕಛೇರಿ ತರುವ ಪ್ರಯತ್ನದಲ್ಲಿದ್ದೇನೆ. ಸಿಂದಗಿ ಸುಂದರ ನಗರವನ್ನಾಗಿ ಮಾಡುವೆ ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ, ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ, ಅಲಮೇಲ ಪಟ್ಟಣ ಪಂಚಾಯತ್ ಅಧ್ಯಕ್ಷ ಸಾಧಿಕ ಸುಂಬಡ ಅವರು ಮಾತನಾಡಿದರು.ಇದಕ್ಕೂ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಲಾಯನ್ಸ್ ಸಂಸ್ಥೆಯು ಯಾವುದೇ ಆಸೆ, ಆಮಿಷ, ಅಧಿಕಾರಕ್ಕೊಳಗಾಗದೇ ಸಮಾಜ ಸೇವೆಯನ್ನು ಮಾಡುತ್ತ ಬಂದಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆ ೩೧೭ ಬಿ ೫೦ನೇ ಸುವರ್ಣ ಮಹೋತ್ಸವ ಆಚರಿಸುತ್ತಿರುವುದರಿಂದ ವನಮಹೋತ್ಸವ, ಡ್ರಗ್ಸ್, ಕ್ಯಾನ್ಸ್ರ್ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ಗೋವಾ & ಕರ್ನಾಟಕ ಅಂತರಾಷ್ಟ್ರೀಯ ಲಾಯನ್ಸ್ ಸಂಸ್ಥೆ ಜಿಲ್ಲೆ ೩೧೭ ಬಿ ಗವರ್ನರ್ ಪಿ.ಎಂ.ಜೆ.ಎಫ್ ಲಾಯನ್ ಜೈಮೋಲ್ ಜೆ.ನಾಯಕ ಲಾಯನ್ಸ್ ಸದಸ್ಯರಿಗೆ ಸಲಹೆ ನೀಡಿದರು.ಸಿಂದಗಿ ಪಟ್ಟಣದ ಪಿಇಎಸ್ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡ ಸಿಂದಗಿ ಲಾಯನ್ಸ್ ಕ್ಲಬ್ ಹಾಗೂ ಪಿಇಎಸ್ ಸಂಸ್ಥೆಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಲಾಯನ್ಸ್ ಕ್ಲಬ್ ೩೧೭ ಬಿ ಜಿಲ್ಲಾ ಗವರ್ನರ ಸಂದರ್ಶನ ಹಾಗೂ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದ ಅವರು, ಘನ ಸರಕಾರಗಳು ನಾಡಿನ ಹಿತದೃಷ್ಠಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರುತ್ತಿದ್ದಾರೆ. ಆದರೂ ಕೂಡಾ ಅಂತರಾಷ್ಟ್ರೀಯ ಲಾಯನ್ಸ್ ಸಂಸ್ಥೆಯು ನೂರು ವರ್ಷಗಳಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗಳನ್ನು ಗುರುತಿಸಿ ಅವರಿಗಾಗಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದಿಂದ ೨೦೨೫-೨೬ನೇ ಸಾಲಿನಲ್ಲಿ ಗ್ರಾಮೀಣ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಉಪಕರಣ ಪಡೆಯಲು ಅರ್ಹ ಗ್ರಾಮೀಣ ಕುಶಲಕರ್ಮಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಗ್ರಾಮೀಣ ಕುಶಲಕರ್ಮಿಗಳು ದಿನಾಂಕ : ೦೮-೧೦-೨೦೨೫ರೊಳಗಾಗಿ ವೆಬ್‌ಸೈಟ್ www.vijayapura.nic.in ಮೂಲಕ ಅರ್ಜಿ ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಭರ್ತಿ ಮಾಡಿ ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಉಪನಿರ್ದೇಶಕರ ಕಚೇರಿ, ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಕೈಗಾರಿಕಾ ಕೇಂದ್ರದ ಆವರಣ, ಸ್ಟೇಶನ್ ಬ್ಯಾಕ್ ರಸ್ತೆ, ಶಿಕಾರಖಾನೆ, ವಿಜಯಪುರ ಕಚೇರಿ ಖುದ್ದಾಗಿ ಅಥವಾ ಪೋಸ್ಟ್ ಮೂಲಕ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೯೭೨೧೬೨೨೨೨ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗೃಹ ಬಳಕೆಯ ಸಿಲಿಂಡರ್‌ಗಳಿಂದ ಅನಧಿಕೃತವಾಗಿ ರಿಫಿಲಿಂಗ್ ಮಾಡುತ್ತಿರುವ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ೩೧೯೨೦ ರೂ. ಮೌಲ್ಯದ ಒಟ್ಟು ೧೦ ಹೆಚ್‌ಪಿ ಕಂಪನಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ವಿಜಯಪುರ ನಗರದ ಇಬ್ರಾಹಿರಂ ರೋಜಾ ಹತ್ತಿರದಲ್ಲಿ ಪತ್ರಾಸ ಶೆಡ್‌ನಲ್ಲಿ ಹಾಗೂ ನಗರದ ಬಾಗಲಕೋಟ ಕ್ರಾಸ್ ಹತ್ತಿದ ಒಂದು ಪತ್ರಾಸ್ ಶೆಡ್‌ನಲ್ಲಿ ಅನಧಿಕೃತವಾಗಿ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ ಸಂಗ್ರಹಣೆ ಮಾಡಿ ರಿಫಿಲಿಂಗ್ ಮಾಡುತ್ತಿದ್ದ ಸ್ಥಳದಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಸಿಲಿಂಡರ್‌ಗಳು ಸೇರಿದಂತೆ ಒಂದು ತೂಕದ ಯಂತ್ರ ಹಾಗೂ ರಿಫಿಲಿಂಗ್ ಯಂತ್ರವನ್ನು ವಶಪಡಿಸಿಕೊಂಡು ಬಿಎನ್‌ಎಸ್ ಹಾಗೂ ಕಲಂ (೧)(ಎ)(ಬಿ)(ಸಿ) ಮತ್ತು ೪(೧)(ಎ) ಎಲ್‌ಪಿಜಿ ರೆಗ್ಯೂಲೇಷನ್ ಆರ್ಡರ್ ೨೦೦೦ ಹಾಗೂ ಅಗತ್ಯ ವಸ್ತುಗಳ ಕಾಯ್ದೆ ೧೯೫೫ ಕಲಂ ೩ ಸಹ ಕಲಂ ೦೭ರ ಮೆರೆಗೆ ಕ್ರಿಮಿನಲ್ ಮೊಕದ್ದಮೆಯನ್ನು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.ದಾಳಿಯಲ್ಲಿ ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ, ಗಾಂಧಿಚೌಕ್ ಪಿಎಸ್‌ಐ ರಾಜು ಮಮದಾಪುರ ಹಾಗೂ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.

Read More

ಸುಪ್ರೀಂ ಕೋರ್ಟ್ ಟಿಇಟಿ ಕಡ್ಡಾಯ ತೀಪು೯ | ಲಕ್ಷಾಂತರ ಶಿಕ್ಷಕರಿಗೆ ದಿಗಿಲು | ಆದೇಶ ಮರುಪರಿಶೀಲನೆಗೆ ಮನವಿ | ಸಚಿವ ಸಂಪುಟದಲ್ಲಿ ಧೃಡ ನಿಧಾ೯ರಕ್ಕೆ ನುಗ್ಗಲಿ ಒತ್ತಾಯ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಶಿಕ್ಷಕರು ಬಡ್ತಿಗಾಗಿ ಹಾಗೂ ಸೇವೆಯಲ್ಲಿ ಮುಂದುವರೆಯಲು ಕಡ್ಡಾಯ ಅರ್ಹತಾ ಟಿಇಟಿ ಪರೀಕ್ಷೆ ಪಾಸಾಗಬೇಕೆಂದು ಸುಪ್ರೀಂ ಕೋರ್ಟ್ ಈಚೆಗೆ ತೀಪು೯ ನೀಡಿದ್ದು ಇದು ಶಿಕ್ಷಕ ಸಮೂಹದ ಹಿತಾಸಕ್ತಿಗೆ ತೀವ್ರ ವಿರುದ್ಧವಾಗಿದೆಲ್ಲದೇ ಮುಂದಿನ ದಿನಮಾನದಲ್ಲಿ ಶಿಕ್ಷಣ ರಂಗಕ್ಕೆ ಕಠಿಣಾತೀತ ರೀತಿಯಲ್ಲಿ ಮಾರಕವಾಗಿ ಕಾಡಲಿದೆ. ಇದು ಶಾಲಾ ಶಿಕ್ಷಣ ವ್ಯವಸ್ಥೆಗೆ ಅನ್ವಯಗೊಂಡರೆ ಇಡೀ ಶಿಕ್ಷಣ ವ್ಯವಸ್ಥೆಯೇ ಬುಡಮೇಲಾಗಿ ಭಾಗಶಃ ಕುಸಿಯುತ್ತದೆ ಎಂದು ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕ ಆತಂಕ ವ್ಯಕ್ತಪಡಿಸಿದೆ.ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಹಾಗೂ ಪ್ರಧಾನ ಕಾರ್ಯದರ್ಶಿ ಚೇತನ್.ಹೆಚ್.ಎಸ್ ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿ, ಶಿಕ್ಷಕರ ಕುಟುಂಬಗಳು ಮತ್ತು ಶಿಕ್ಷಕ ಸಮುದಾಯದ ವಿಶಾಲ ಹಿತಾಸಕ್ತಿಯ ದೃಷ್ಟಿಯಿಂದ ಗೌರವಾನ್ವಿತ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಮರುಪರಿಶೀಲಿಸಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೈಸೂರು ಪತ್ರಿಕಾ ಛಾಯಾಗ್ರಾಹಕರ ಸಂಘ ದಸರಾ ಹಬ್ಬದ ನಿಮಿತ್ಯ ಹಿರಿಯ ಛಾಯಾಗ್ರಾಹಕ ನೇತ್ರರಾಜು ಸ್ಮರಣಾರ್ಥ ರಾಜ್ಯಮಟ್ಟದ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿಗೆ ವಿಜಯಪುರ ವಿಜಯ ಕರ್ನಾಟಕ ಪತ್ರಿಕೆಯ ಛಾಯಾಗ್ರಾಹಕ ಸುಧೀಂದ್ರ ಕುಲಕರ್ಣಿ ಸೆರೆ ಹಿಡಿದ ಕಾರುಣ್ಣಿಮೆ ಕರಿ ಹರಿಯುವ ಚಿತ್ರ ಆಯ್ಕೆಯಾಗಿದೆ.ಸುಧೀಂದ್ರ ಕುಲಕರ್ಣಿ ಅವರ ಸಾಧನೆಗೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಅಭಿನಂದಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೃಷ್ಣೆಯ ಜಲಧಿಗೆ ಶನಿವಾರ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಈ ಭಾಗದ ಜನತೆಯ ಅಹವಾಲು ಸ್ವೀಕರಿಸುತ್ತಿದ್ದಂತೆ ಮನವಿಗಳ ಮಹಾಪೂರವೇ ಹರಿದುಬಂತು. ವಿವಿಧ ಸಂಘ-ಸಂಸ್ಥೆಯ ಮುಖಂಡರು ತಮ್ಮ ಪ್ರಮುಖ ಕಾರ್ಯಕರ್ತರೊಂದಿಗೆ ಆಲಮಟ್ಟಿಗೆ ಬೆಳಿಗ್ಗೆಯೇ ಆಗಮಿಸಿದರು. ಸಿಎಂ,ಡಿಸಿಎಂ ಬಾಗಿನ ಸಲ್ಲಿಸಿದ ಬಳಿಕ ಜನತೆಯ ಅಹವಾಲು ಸ್ವೀಕಾರಕ್ಕೆ ಮುಂದಾಗ ಹಲವಾರು ಸಂಘಟನೆಯ ಮುಖಂಡರು ಕೈಯಲ್ಲಿ ಮನವಿ ಪತ್ರಗಳನ್ನು ಹಿಡಿದುಕೊಂಡು ದೊರೆಗಳಿಗೆ ಸಲ್ಲಿಸಲು ಪೈಪೋಟಿ ನಡೆಸಿ ಹರಸಾಹಸ ಪಟ್ಟರು. ಈ ವೇಳೆ ಸಿಎಂ, ಡಿಸಿಎಂ ಸಮಾಧಾನ ಚಿತ್ತರಾಗಿ ಮನವಿಗಳನ್ನು ಸ್ವೀಕರಿಸಿದರು.ಐಟಿಐ ಸಿಬ್ಬಂದಿಗಳ ಗೋಳು, ವೇತನಾನುದಾನಕ್ಕೆ ಮನವಿ೧೯೯೭ರ ಪರಿಷ್ಕçತ ವೇತನಾನುದಾನ ಸಂಹಿತೆಯಂತೆ ೨೦೧೮ರಲ್ಲಿ ಪೂರ್ವಭಾವಿ ಪರೀವೀಕ್ಷಣೆಯಾಗಿರುವ ಅನುದಾನರಹಿತ ವೇತನಾನುದಾನ ಮಂಜೂರು ಮಾಡುವವಂತೆ ಸಿಎಂ ಅವರಿಗೆ ಪ್ರಮುಖರು ಮನವಿ ಸಲ್ಲಿಸಿದರು. ಕಳೆದ ವರ್ಷ ಫೆ.೮ರಂದು ವಿಧಾನಸೌಧದ ಮುಂಭಾಗದಲ್ಲಿ ಜರುಗಿದ ಜನಸ್ಪಂದನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇವು. ತಾವು ನಮ್ಮ ಮನವಿಯನ್ನು ಶಾಂತ ಚಿತ್ತ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಅನಕ್ಷರಸ್ತರನ್ನು ಸಾಕ್ಷರರಾಗಿ ಮಾಡಿ ಬದಲಾವಣೆ ತರುವ ದೊಡ್ಡ ಕಾರ್ಯ ಶಿಕ್ಷಕರು ಮಾಡುತ್ತಾರೆ. ಮುಂದೆ ಗುರಿ, ಹಿಂದೆ ಗುರು ಇದ್ದಲ್ಲಿ ಬದುಕಿನಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ಪ್ರತಿಯೊಬ್ಬ ಶಿಕ್ಷಕರು ಸೇವಾ ಮನೋಭಾವನೆಯಿಂದ ಸೇವೆ ಸಲ್ಲಿಸಿ ವಿದ್ಯಾರ್ಥಿಗಳಲ್ಲಿ ಶಿಸ್ತು ದೇಶಪ್ರೇಮ ಬೆಳೆಸಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಹೇಳಿದರು.ಸಿಂದಗಿ ಪಟ್ಟಣದ ರಾಂಪೂರ ರಸ್ತೆಯ ಶ್ರೀಸಮರ್ಥ ವಿದ್ಯಾವಿಕಾಸ ವಿವಿದೋದ್ದೇಶಗಳ ಸಂಸ್ಥೆಯ ಪ್ರೇರಣಾ ಸಮೂಹ ಶಿಕ್ಷಣ ಸಂಸ್ಥೆ ಮತ್ತು ಪ್ರೇರಣಾ ಶಾಲಾ ಮಕ್ಕಳ ಬಳಗದ ಸಹಯೋಗದಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಮಕ್ಕಳಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿ ಬೆಳೆಸುವುದು ಅತೀ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪ್ರೇರಣಾ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ. ಮಕ್ಕಳಲ್ಲಿ ಸಂಸ್ಕಾರ ಸಂಸ್ಕೃತಿ ಬೆಳೆಸುವುದರ ಜೊತೆಗೆ ಒಳ್ಳೆಯ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿದೆ ಎಂದರು.ಈ ವೇಳೆ ಸೋಮಜಾಳ ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಆರ್.ಎಸ್.ನೀರಲಗಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ,…

Read More