Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯ ರಶ್ಮಿ ದಿನಪತ್ರಿಕೆ ಅಥಣಿ: ಸಮಾಜದಲ್ಲಿ ಪುರುಷರು ತಮ್ಮ ಮನೆಯ ಹೆಣ್ಣುಮಕ್ಕಳಿಗೆ ನೀಡುವಷ್ಟೇ ಗೌರವವನ್ನು ಇತರ ಮಹಿಳೆಯರಿಗೂ ನೀಡಿದಾಗ ಮಾತ್ರ ಒಂದು ಸುಸಂಸ್ಕೃತ ಕುಟುಂಬ ಮತ್ತು ಸಮಾಜ ನಿರ್ಮಾಣ ಸಾಧ್ಯ, ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾ. ನಾಗಲಕ್ಷ್ಮಿ ಚೌಧರಿ ಪ್ರತಿಪಾದಿಸಿದರು.ಪಟ್ಟಣದ ‘ಭರವಸೆ ಬೆಳಕು ಫೌಂಡೇಶನ್’ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ಹಾಗೂ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಮಾತನಾಡಿ ನಾನು ಕೂಡ ಅಂತರಜಾತಿ ವಿವಾಹವಾಗಿದ್ದು, ಬಸವಣ್ಣನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ನಾವೆಲ್ಲರೂ ಬಸವ ತತ್ವಗಳನ್ನು ಪಾಲಿಸಿದರೆ ಕರ್ನಾಟಕವು ವಿಶ್ವಕ್ಕೆ ಮಾದರಿಯಾಗಬಲ್ಲದು ಇಂದು ಮಹಿಳೆಯರು ಕಾನೂನು ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವೆ ದೊಡ್ಡ ಶಕ್ತಿಯಾಗಿದೆ, ಎಂದರು.ಇದೇ ಸಂದರ್ಭದಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಸಿದ ಅವರು, ಸ್ಥಳೀಯ ಮಹಿಳೆಯರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಸರ್ಕಾರಿ ವಿವಿಧ ಇಲಾಖೆಗಳಲ್ಲಿನ ಲೋಪದೋಷಗಳ ಬಗ್ಗೆ ಬಂದ ದೂರುಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ…
ಹುಬ್ಬಳ್ಳಿ – ಗದಗ ಬೈಪಾಸ್ ಮೂಲಕ ರೈಲು ಓಡಿಸಲು ಕೋರಿಕೆ | ವೈಷ್ಣವ್, ಸೋಮಣ್ಣಗೆ ಸಚಿವ ಎಂ.ಬಿ.ಪಾಟೀಲ ಪತ್ರ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಆಲಮಟ್ಟಿ-ವಂದಾಲ ನಡುವಿನ 9.60 ಕಿ.ಮೀ. ಉದ್ದ ಜೋಡಿಹಳಿ ಕಾಮಗಾರಿ ಮುಗಿದು, ಮಾರ್ಚ್ 25ರಿಂದ ಸಂಚಾರಕ್ಕೆ ಮುಕ್ತವಾಗಿದೆ. ಆದ್ದರಿಂದ ಬೆಂಗಳೂರು-ವಿಜಯಪುರ ನಡುವೆ ಬಹುಕಾಲದ ಬೇಡಿಕೆಯಾಗಿರುವ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸಬೇಕು ಎಂದು ಕೋರಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ವಿ.ಸೋಮಣ್ಣ ಇಬ್ಬರಿಗೂ ಪತ್ರ ಬರೆದಿದ್ದಾರೆ.ಈ ಸಂಬಂಧವಾಗಿ ಅವರು ಮಾರ್ಚ್ 30ರಂದು ತಮ್ಮ ಪತ್ರ ರವಾನಿಸಿದ್ದಾರೆ.ಇದರಲ್ಲಿ ಅವರು, ಗದಗ-ಹೊಟಗಿ ಹಳಿ ದ್ವಿಪಥೀಕರಣ ಯೋಜನೆಯ ಭಾಗವಾಗಿ ಆಲಮಟ್ಟಿ-ವಂದಾಲ ನಡುವಿನ ಕಾಮಗಾರಿ ಈಗ ಮುಗಿದಿದೆ. ಇದು ಮುಗಿದರೆ ಬೆಂಗಳೂರು-ವಿಜಯಪುರ ನಡುವೆ ಎಕ್ಸ್ಪ್ರೆಸ್ ರೈಲು ಆರಂಭಿಸಬಹುದು ಎಂದು ಹಿಂದಿನ ಭೇಟಿಯಲ್ಲಿ ಹೇಳಿದ್ದಿರಿ. ಈಗ ಇದಕ್ಕೆ ಆದ್ಯತೆ ಕೊಡಬೇಕು. ಶೈಕ್ಷಣಿಕ, ವೈದ್ಯಕೀಯ, ಆಡಳಿತಾತ್ಮಕ, ವಾಣಿಜ್ಯ ವಹಿವಾಟು ಇತ್ಯಾದಿಗಳಿಗೆ ನಿತ್ಯವೂ ಬೆಂಗಳೂರಿಗೆ ಬರುವ ವಿಜಯಪುರ…
ವಿಜಯಪುರದಲ್ಲಿ ನಡೆದ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವರ್ಷದುದ್ದಕ್ಕೂ ಸದಾ ಒತ್ತಡದ ಮಧ್ಯೆಯೇ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ನೆಮ್ಮದಿಯ ಜೀವನಕ್ಕಾಗಿ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರು ನಿಭಾಯಿಸುವ ಕರ್ತವ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಪೊಲೀಸರ ಕಾರ್ಯವನ್ನು ಬಣ್ಣಿಸಿದರು.ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಲ್ಲಿನ ಪೊಲಿಸ್ ಕವಾಯತು ಮೈದಾನದಲ್ಲಿ ಗುರುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸದಾ ಸಮಾಜದ ಒಳಿತಿಗಾಗಿ ಯಾವ ಪ್ರತಿಫಲಾಪೇಕ್ಷೆಯಿಲ್ಲದೇ ಹಗಲಿರುಳು ಶ್ರಮಿಸುವ ಪೊಲೀಸರು ಕಾರ್ಯ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದರು.ಜಿಲ್ಲೆಯ ಪೊಲೀಸರ ಕಾರ್ಯದಕ್ಷತೆಗೆ ಹೆಸರುವಾಸಿಯಾಗಿದ್ದಾರೆ. ಇದಕ್ಕೆ ತಾಜಾ ನಿದರ್ಶನವೇ ಇತ್ತೀಚೆಗಷ್ಟೇ ಜಿಲ್ಲೆಯ ಐವರು ಪೊಲೀಸ್ ಅಧಿಕಾರಿ, ಸಿಬ್ಬಂದಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನವಾಗಿದ್ದು, ಹೆಮ್ಮ ತರುವುದರ ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ದಕ್ಷ ಕಾರ್ಯವೈಖರಿಗೆ ಸಾಕ್ಷಿಯಾಗಿದೆ ಎಂದರು.ಪೊಲೀಸ್ ಇಲಾಖೆ ಸಿಬ್ಬಂದಿ ಹಗಲಿರುಳು…
ಬೇಸಿಗೆಯಲ್ಲಿ ಗ್ರಾಹಕರಿಗೆ ಮತ್ತಷ್ಚು ಬಿಸಿಯೇರಿಸಿದ ನಿಂಬೆ | ನಿಂಬೆಯೊಂದಕ್ಕೆ 8 ರೂ.ಗಿಂತ ಹೆಚ್ಚು ಬೆಲೆ | ಇಳುವರಿ ಕಡಿಮೆ ಬಂದದ್ದೇ ಕಾರಣ ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ್ ಎಮ್ ಇಟ್ಟಿಜಮಖಂಡಿ: ಸಾಮಾನ್ಯವಾಗಿ ಬೇಸಿಗೆಯಲ್ಲಿ ಏರಿಕೆಯಾಗುವ ನಿಂಬೆಹಣ್ಣಿನ ದರ ಈ ಬಾರಿ ಕೂಡಾ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಬಿಸಿಲು ಬೇಗೆಯ ನಡುವೆ ನಿತ್ಯ ಬಳಸುವ ನಿಂಬೆ ದರವೂ ಗ್ರಾಹಕರಿಗೆ ಬಿಸಿಯೇರಿಸಿದೆ.ಪಟ್ಟಣದ ಮಾರುಕಟ್ಟೆಯಲ್ಲಿ ನಿಂಬೆಹಣ್ಣು ಕಂಡಿತೆಂದು ಖರೀದಿಗೆ ತೆರಳಿದರೆ ದರ ಬಲು ದುಬಾರಿಯಾಗಿದೆ. ನಿಂಬೆವೊಂದಕ್ಕೆ ಸುಮಾರು 7ರಿಂದ 8 ರೂ.ವರೆಗೆ ಮಾರಾಟ ಮಾಡಲಾಗುತ್ತಿದೆ. ಸಣ್ಣ ಗಾತ್ರದ ನಿಂಬೆ ಹಣ್ಣು ಮಾತ್ರ ಕಡಿಮೆ ದರಕ್ಕೆ ಲಭ್ಯವಿದೆ.ನಿಂಬೆ ಹಣ್ಣು ಸಿಗುವುದು ಕಷ್ಟಬಿಸಿಲ ಬೇಗೆಯ ನಡುವೆ ಗ್ರಾಹಕರಿಗೆ ಬಿಸಿಯೇರಿಸಿದೆ ನಿತ್ಯ ಬಳಸುವ ನಿಂಬುವಿನ ದರ ಸದ್ಯ ಗರಿಷ್ಠ ದರಲ್ಲಿ ಮಾರಾಟ ಮಾಡಲಾಗುತ್ತಿದೆ. ಉತ್ತಮ ಗುಣಮುಟ್ಟದ ನಿಂಬೆ ಹಣ್ಣು ಸಿಗುವುದು ಕಡಿಮೆಯಾಗಿದೆ. ಇದರಿಂದ ಅಗತ್ಯದಷ್ಟು ಕೊಳ್ಳಲೂ ಆಗದೇ ಬಿಡಲೂ ಆಗದೇ ಗ್ರಾಹಕರು ಪರಿತಪಿಸುವಂತಾಗಿದೆ.ನಿಂಬೆಹಣ್ಣಿನ ದರ ಜೇಬಿಗೆ ಕುತ್ತುಆರೋಗ್ಯಕ್ಕೆ ಹಿತಕಾರಿಯಾದ ನಿಂಬೆಯನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಂಜನೇಯ ಸ್ವಾಮಿಯು ಮಹಾದೇವನ ಅವತಾರ, ಅಷ್ಟ ಸಿದ್ಧಿ ಮತ್ತು ನವ ನಿಧಿಯನ್ನು ಹೊಂದಿರುವವನು. ಶಾಶ್ವತವಾದ ಶಕ್ತಿ, ನಿಷ್ಠೆ ಮತ್ತು ಭಕ್ತಿಯನ್ನು ಹೊಂದುತ್ತಾ ಶ್ರೀ ರಾಮನನ್ನು ಒಲಿಸಿಕೊಂಡವನು. ನಾವೆಲ್ಲರೂ ಹನುಮ ಜಯಂತಿಯನ್ನು ಯಾವುದೇ ಜಾತಿ-ಮತ-ಪಂಥಗಳ ಬೇಧವಿಲ್ಲದೇ ಶ್ರದ್ಧೆ, ಭಕ್ತಿ-ಭಾವ ಮತ್ತು ಸಾಮರಸ್ಯತೆಯಿಂದ ಆಚರಿಸೋಣ ಎಂದು ಹಿರಿಯ ಹಿಂತಕ ದ್ರುವ ಕುಲಕರ್ಣಿ ಹೇಳಿದರು.ನಗರದ ಅಥಣಿ ರಸ್ತೆಯಲ್ಲಿರುವ ಎನ್.ಜಿ.ಓ ಕಾಲನಿಯಲ್ಲಿ ಜೈ ಶ್ರೀ ಹನುಮಾನ ಮಂದಿರದಲ್ಲಿ ಆಯೋಜಿಸಿದ್ದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಜೀವನ ನಿರ್ವಹಣೆ, ಮತ್ತು ಸಂಸಾರ ನೌಕೆಯನ್ನು ನಡೆಸುವಲ್ಲಿಯೇ ತಮ್ಮ ಜೀವನ ಸಾಗಿಸುತ್ತಿರುವ ಮನೆ ಹಿರಿಯರು, ಮಹಿಳೆಯರು, ಮಕ್ಕಳ ಮನದಲ್ಲಿ ಕೀರ್ತನೆ, ಹರಿಕಥೆ, ಮಹಾಭಾರತ, ರಾಮಾಯಣದ ಧಾರ್ಮಿಕ ಮತ್ತು ಸಾಂಸ್ಕೃತಿಕ-ಸಂಸ್ಕಾರ, ನಡೆ-ನುಡಿ, ಆಚಾರ-ವಿಚಾರ ಮತ್ತು ಮೌಲ್ವಿಕ ವೈಚಾರಿಕ ವಿಷಯಗಳ ಬಗೆಗೆ ಅರಿವು ಮೂಡಿಸಬೇಕಾಗಿದೆ ಎಂದರು. ಬಿ.ಎಲ್..ಡಿ.ಇ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕಿ ಡಾ. ಜ್ಯೋತಿ ಖೊದ್ನಾಪೂರ ಮಾತನಾಡಿ, ಅಧ್ಯಾತ್ಮ ಮತ್ತು ವಿಜ್ಞಾನ ಎರಡು ಒಂದೇ ನಾಣ್ಯದ ಮುಖಗಳಿದ್ದಂತೆ. ನಮ್ಮ ಋಷಿ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಮಾತೋಶ್ರೀ ಹೇಮಾವತಿ ಹೆಗ್ಗಡೆ ಅಮ್ಮನವರ ಎಪ್ರೀಲ್ 02 ರಂದು ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಚಡಚಣ ಹಾಗೂ ಇಂಡಿ ತಾಲೂಕಿನ ನಿರ್ಗತಿಕರು ಹಾಗೂ ಹಿರಿಯ ಮಹಿಳೆಯರ ಮನೆ ಮನೆಗೆ ಹೋಗಿ ಹಣ್ಣು ಹಂಪಲು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಿನ ಯೋಜನಾಧಿಕಾರಿ ನಟರಾಜ ಎಲ್.ಎಂ ಅವರು, ಮಾತೋಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾದ “ವಾತ್ಸಲ್ಯ” ಕಾರ್ಯಕ್ರಮವು ನಿರ್ಗತಿಕರು ಹಾಗೂ ವಯೋವೃದ್ಧರಿಗೆ ನೆರವಾಗುವ ಉದ್ದೇಶದಿಂದ ಜಾರಿಗೆ ತರಲಾಗಿದ್ದು, ಇದು ಅತ್ಯಂತ ಮಾನವೀಯ ಸೇವೆಯಾಗಿದೆ ಎಂದು ಹೇಳಿದರು.ಇಂಡಿ ಹಾಗೂ ಚಡಚಣ ತಾಲೂಕುಗಳಲ್ಲಿ ಒಟ್ಟು 128 ನಿರ್ಗತಿಕರಿಗೆ ಪ್ರತಿ ತಿಂಗಳು ₹1000 ಮಾಶಾಸನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನೀಡಲಾಗುತ್ತಿದೆ. ಜೊತೆಗೆ 5 ಜನರಿಗೆ ಮನೆ ನಿರ್ಮಾಣ ಕಾರ್ಯವೂ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಮಹಾಂತೇಶ್ ವಿ.ಎ., ಗಣ್ಯರಾದ ವಿಕಾಸ್ ಪಾಟೀಲ, ಡಾ. ರಾಮಕೃಷ್ಣ ಕುಲಕರ್ಣಿ, ಸಮನ್ವಯ ಅಧಿಕಾರಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ನಗರ ಸೇರಿದಂತೆ ತಾಲೂಕಿನಲ್ಲಿ ಹನುಮಾನ ಭಕ್ತರು ಶ್ರದ್ದೆ ಮತ್ತು ಭಕ್ತಿಯಿಂದ ಹನುಮ ಜಯಂತಿ ಆಚರಿಸಿದರು.ನಗರದ ಹಿರೇಇಂಡಿ, ಮಹಾವೀರ ವೃತ್ತದಲ್ಲಿರುವ ಅಗಸಿ ಹನುಮಾನ ಮಂದಿರ, ಕೆಈಬಿ ಹನುಮಾನ ದೇವಸ್ಥಾನ, ಪಂಚಾಯತ ರಾಜ ಆವರಣದಲ್ಲಿರುವ ಹನುಮಾನ ಮಂದಿರ, ಆರೋಗ್ಯ ಇಲಾಖೆಯಲ್ಲಿರುವ ಹನುಮಾನ ಮಂದಿರ,ಮಲ್ಲಿಕಾರ್ಜುನ ದೇವಸ್ಥಾನ , ಸಿಂದಗಿ ರಸ್ತೆ ಸೇರಿದಂತೆ ಇತರೆ ಎಲ್ಲ ಕಡೆಗೂ ಹನುಮ ಜಯಂತಿ ಆಚರಿಸಲಾಯಿತು.ದೇಶಪಾಂಡೆ ತಾಂಡಾ, ಸಾಲೋಟಗಿ ಗ್ರಾಮದ ಮೂರು ಕಡೆ, ಆಳೂರ, ಇಂಗಳಗಿ ಅಗರಖೇಡ ಸೇರಿದಂತೆ ತಾಲೂಕಿನ ಅನೇಕ ಕಡೆ ಹನುಮ ಜಯಂತಿ ಆಚರಿಸಲಾಯಿತು.ಎಲ್ಲ ಕಡೆ ಬೆಳಗ್ಗೆ ಆರತಿ, ಅಭಿಷೇಕ, ಪೂಜೆ ಅಲಂಕಾರ ಪಾಲಕಿ ಮೆರವಣೆಗೆ , ತೊಟ್ಟಿಲು ಹಾಕುವ ಕಾರ್ಯಕ್ರಮ ಜೊತೆಗೆ ಅನ್ನ ಪ್ರಸಾದ ವಿತರಣೆ ನಡೆಯಿತು.
ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ಆಮಂತ್ರಣವಿದ್ದ ಕಾರ್ಯಕ್ರಮದಲ್ಲಿ ಹೋಗಿ ಕುಳಿತಿರುವಾಗ, ನಡೆಯಲಾರದೆ ಊರುಗೋಲಿನ ಸಹಾಯದಿಂದ ನಡೆದು ಒಳಬಂದ ಮಹಿಳೆಯ ಕಡೆಗೆ ನನ್ನ ಕಣ್ಣು ಹರಿಯದೆ ಇರಲಿಲ್ಲ. ದೊಡ್ಡದೊಂದು ಮೈಸೂರು ಸಿಲ್ಕ್ ಸೀರೆ, ಅದಕ್ಕೊಪ್ಪುವ ಕುಪ್ಪಸ, ಕಾಸ್ಟ್ಲಿ ಪುಟಾಣಿ ಬ್ಯಾಗೂ, ದೊಡ್ಡದೊಂದು ಚಿನ್ನದ ಬಳೇ.. ಎಲ್ಲವೂ ಇದೆ. ಆದರೆ ಆಕೆಯ ದಡೂತಿ ದೇಹದ ಭಾರವನ್ನು ಆಕೆಯ ಕಾಲು ಭರಿಸಲಾಗುತ್ತಿಲ್ಲ. ‘ವಾಕಿಂಗ್ ಸ್ಟಿಕ್’ ಆಕೆಯ ಕಾಲಿನ ಸಂಗಾತಿಯಾಗಿ ನಡೆಸುತ್ತಿದೆ. ‘ಇಷ್ಟು ಚಿಕ್ಕ ಕಾರ್ಯಕ್ರಮಕ್ಕೆ ಇಷ್ಟೊಂದು ಆಡಂಬರ ಬೇಕಿತ್ತಾ? ಅನ್ನಿಸಿತು ನನಗೆ. ತಕ್ಷಣವೆ ‘ಹಣವಂತರು. ಪಾಪ! ಇರುವ ಹಣದ ಸದ್ವಿನಿಯೋಗ ಮಾಡಿಕೊಳ್ಳಲೇಬೇಕಲ್ಲಾ.. ಜೊತೆಗೆ ಪ್ರತಿಷ್ಠೆಯ ಪ್ರಶ್ನೆ ಬೇರೆ’ ಎಂದುಕೊಂಡವಳೇ ಸುಮ್ಮನಾದೆ. ವಿಷಯ ಅಷ್ಟೇ ಅಲ್ಲ. ಅದು ನಾ ಮೊದಲೇ ಯಾವಾಗಲೋ ನೋಡಿದ್ದ ಮುಖ.ಹೌದು ಇದು ಅದೇ ಮುಖ.ನಾ ಚಿಕ್ಕವಳಿದ್ದಾಗ ನೋಡಿದ್ದ ಮುಖ. ಬೀಗರ ಔತಣಕ್ಕೆ ಇನ್ವಿಟೇಶನ್ ಕೊಟ್ಟು ಕರೆದಿದ್ದರು. ಟೀಚರ್ ಆಗಿದ್ದ ಅಂಟಿಗೆ ರಜಾ ಇಲ್ಲದ ಕಾರಣ, ರಜೆಗೆಂದು ಅವರ ಮನೆಗೆ ಬಂದಿದ್ದ…
ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಆಂಗ್ಲ ಭಾಷಾ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಮನೆಯ ಮುಂದಿನ ಹೂದೋಟದಲ್ಲಿ ಶತಪಥ ಹಾಕುತ್ತ ಒಂಭತ್ತು ಗಂಟೆಗೆ ರ್ತಿನಿ ಅಂದವರು ಒಂಭತ್ತು ಹೊಡೆದು ಅರ್ಧ ತಾಸಾದರೂ ಇನ್ನೂ ಪತ್ತೆ ಇಲ್ಲ ಆಸಾಮಿ ನನ್ನ ಇವತ್ತಿನ ಮುಂದಿನ ಕೆಲಸ ಎಲ್ಲಾ ಉಲ್ಟಾ ಪಲ್ಟಾ ಆಗ್ತಾವ ಪೆಂಡಿಂಗ್ ಉಳಿತಾವ. ಟೈಂ ಸೆನ್ಸ್ ಇಲ್ಲ ಇವರಿಗೆ. ಇಂಥವರನ ನಂಬಿದರ ಉದ್ಧಾರ ಆದಂಗ ಎಂದು ಬಾರದೇ ಇರುವವರಿಗೆ ಸಹಸ್ರ ನಾಮಾರ್ಚನೆಯನ್ನು ವಟ ವಟಿಸುವಿಕೆಯಲ್ಲಿ ಸಲ್ಲಿಸುತ್ತ ನಮ್ಮ ಟೈಮ್ನ್ನು ಧಾರಾಳವಾಗಿ ಹಾಳು ಮಾಡೋದು ನಮಗೆ ಗೊತ್ತೇ ಆಗುವುದಿಲ್ಲ. ಬದುಕಿರುವವರೆಗೆ ಎಲ್ಲವನ್ನೂ ಗಳಿಸಬೇಕು ಅನುಭವಿಸಬೇಕು ಎನ್ನುವ ಹಟ ನಮ್ಮದು. ಸಾಯುವದಕ್ಕೆ ಮುನ್ನ ಒಂದೆರಡು ದೊಡ್ಡ ಬಂಗಲೆ. ಬಂಗಲೆ ಮುಂದೆ ಐದಾರು ಉದ್ದನೆಯ ಕಾರು ಬ್ಯಾಂಕ್ನಲ್ಲಿ ಬಿಗ್ ಬ್ಯಾಲನ್ಸ್ ಪದವಿ ಬಿರುದು ಸನ್ಮಾನ ಒಟ್ಟಿನೊಳಗೆ ನಮ್ಮ ಸಿರಿವಂತಿಕೆ ನಾಲ್ಕು ಜನರ ಬಾಂiÀiಲ್ಲಿರಬೇಕೆಂದು ಬೆಳಿಗ್ಗೆ ಬೇಗ ಎದ್ದು ರಾತ್ರಿ ಎಷ್ಟು ಹೊತ್ತಾದರೂ ಮನೆ ಸೇರುವುದಿಲ್ಲ. ಏನನ್ನೋ ಗಳಸ್ತಿವಿ ಅಂತ…
