Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿಯಲ್ಲಿ ಡಾ.ರಾಧಾಕೃಷ್ಣನ್ ಜನ್ಮದಿನೋತ್ಸವ ಉದ್ಘಾಟಿಸಿದ ಪುರಸಭೆ ಅದ್ಯಕ್ಷ ಡಾ.ಶಾಂತವೀರ ಮನಗೂಳಿ ಭರವಸೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಡಾ.ಸರ್ವಪಲ್ಲಿ ರಾಧಾಕೃಷ್ಣರು ವಿವಿಯ ಕುಲಪತಿ, ಪ್ರಾಧ್ಯಾಪಕ, ಉಪರಾಷ್ಟ್ರಪತಿ, ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿ ಶಿಕ್ಷಕ ಸಮೂಹಕ್ಕೆ ದಾರಿ ದೀಪವಾಗಿದ್ದಾರೆ. ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿರುವುದು ಶಿಕ್ಷಕರು ನೀಡುವ ಶಿಕ್ಷಣ ಜೀವನದುದ್ದಕ್ಕೂ ಮರೆಯದಂತಹ ಸಂಬಂಧ ಬೆಳೆಸುತ್ತಾರೆ ಎಂದು ಪುರಸಭೆ ಅದ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಗುಂದಗಿ ಪಂಕ್ಷನ್ ಹಾಲ್ನಲ್ಲಿ ವಿಜಯಪುರ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕಾಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಕಾರ್ಯಾಲಯ ಹಾಗೂ ಶಿಕ್ಷಕರ ದಿನೋತ್ಸವ ಸಮಿತಿಯ ಸಹಯೋಗದಲ್ಲಿ ಹಮ್ಮಿಕೊಂಡ ಡಾ.ಸರ್ವಪಲ್ಲಿ ರಾಧಾಕೃಷ್ಣನ್ರ ೧೩೭ನೇ ಜನ್ಮದಿನೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಸಿಂದಗಿ ಪುರಸಭೆಯು ಇಂದು ನಗರ ಸಭೆಯಾಗಿ ಮೇಲ್ದರ್ಜೆಗೆರಿದೆ. ಇದರಿಂದ ಸಾಕಷ್ಟು ಅನುದಾನ ಹರಿದು ಬರುತ್ತದೆ. ಅದನ್ನು ಶಾಲೆ-ಕಾಲೇಜು, ಅಂಗನವಾಡಿ ಕೇಂದ್ರಗಳನ್ನು ನಿರ್ಮಾಣ ಮಾಡುವ ಮೂಲಕ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮುನ್ನುಡಿ ಬರೆಯುತ್ತೇವೆ ಎಂದು ತಿಳಿಸಿದರು.ಈ ವೇಳೆ ಕಲಬುರ್ಗಿ ವಿವಿಯ ಕನ್ನಡ ಅಧ್ಯಯನ…
ವಿಜಯಪುರದಲ್ಲಿ ಶಿಕ್ಷಕರ ದಿನಾಚರಣೆ | ಜಿಲ್ಲಾ ಆತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ | ಸಂಸದ ರಮೇಶ ಜಿಗಜಿಣಗಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಸಮಾಜದಲ್ಲಿ ಮಹತ್ವದ್ದಾಗಿದ್ದು, ಶಿಕ್ಷಕರಿಗೆ ಸಮಾಜದಲ್ಲಿ ಬಹಳ ಗೌರವದ ಸ್ಥಾನವಿದ್ದು, ಶಿಕ್ಷಕರು ನಿರ್ವಹಿಸುವ ಕಾರ್ಯ ಅನನ್ಯವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ ಹಾಗೂ ನಗರ ವಲಯ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಗೆ ಪೂರಕವಾಗಿ ಪಾಠ ಬೊಧನೆ ಮಾಡುವ ಮೂಲಕ ಮುಂದಿನ ಉತ್ತಮ ನಾಗರಿಕರನ್ನಾಗಿ ರೂಪಿಸುವ ಬಹು ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ. ಮಕ್ಕಳ ಅಂತರಾಳವನ್ನು ಅರಿತು, ಪರಿಣಾಮಕಾರಿಯಾಗಿ ಬೋಧನೆ ಮಾಡುವ ಮೂಲಕ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಲ್ಲಿ ಕಳೆದ ಎರಡು ದಿನಗಳ ಕಾಲ ಗ್ರಾಮದಲ್ಲಿ ಸಂಭ್ರಮ ಮೂಡಿಸಿದ್ದ ಆರಾದ್ಯದೈವ ಶ್ರೀ ಪ್ರಭುಲಿಂಗೇಶ್ವರ ಕಿಚಡಿ ಜಾತ್ರೆ ಹಾಗೂ ರಥೋತ್ಸವವು ಹಲವಾರು ವಿಶೇಷಗಳೊಂದಿಗೆ ವಿಜ್ರಂಭನೆಯಿಂದ ನೆರವೇರಿತು.ಬುಧವಾರ ಮುಂಜಾನೆಯೇ ಸರದಿಯಲ್ಲಿ ನಿಲ್ಲಲು ಪ್ರಾರಂಭಿಸಿದ ಕಿಚಡಿ ತಯಾರಿಸುವ ಸಾಮಗ್ರಿ ಒಯ್ಯುವ ಸೇವಾ ನಿರತ ಅಲಂಕೃತ ಟ್ರ್ಯಾಕ್ಟರಗಳು ಸಂಜೆಯ ಹೊತ್ತಿಗೆ ನೂರರ ಗಡಿ ದಾಟಿದ್ದವು ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಿಂದ ಸುಮಾರು ಎರಡು ಕಿ.ಮಿ. ವರೆಗೆ ಸರದಿ ಸಾಲಿನಲ್ಲಿ ನಿಂತಿದ್ದವು ರಾತ್ರಿ ೧೦ ಘಂಟೆಯಿಂದ ಓಂ ಪ್ರಭುಲಿಂಗೇಶ್ವರ ಸೇವಾ ಸಮೀತಿಯ ಪ್ರಮುಖರು ಕಿಚಡಿ ಪ್ರಸಾದದ ಸಾಮಗ್ರಿಯನ್ನು ಪ್ರತಿಯೊಂದು ಟ್ರ್ಯಾಕ್ಟರಗಳಲ್ಲಿ ಗ್ರಾಮದಿಂದ ಒಂದು ಕಿ.ಮಿ. ದೂರದ ಗುಡ್ಡದ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ಸಾಗಿಸಲಾಯಿತು ಈ ಅಲಂಕೃತ ಟ್ರ್ಯಾಕ್ಟರಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಒಂದೊಂದು ಟ್ರ್ಯಾಕ್ಟರಗಳ ಶೃಂಗಾರಕ್ಕೆ ರೈತರು ಇಪ್ಪತ್ತು ಸಾವಿರದಿಂದ ಒಂದು ಲಕ್ಷ ರೂ.ಗಳವರೆಗೆ ಖರ್ಚು ಮಾಡಿರುತ್ತಾರೆ.ಗುರುವಾರ ಬೆಳಿಗ್ಗೆ ೬ ಘಂ,ಗೆ ನಡೆಯುವ ರುದ್ರಾಭಿಷೇಕದೊದಿಗೆ ಪ್ರಾರಂಭಗೊಂಡ ಜಾತ್ರೆಯಲ್ಲಿ ಷಟಸ್ಥಲ ಧ್ವಜಾರೋಹಣ, ಅಡ್ಡ ಪಲ್ಲಕ್ಕಿ ಮಹೋತ್ಸವ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದ ಪಿ.ಪಿ. ಮಾಳಿಗಡ್ಡಿ ಮಠದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರದಂದು ಶಿಕ್ಷಣತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ಎಸ್.ಡಿ. ಹಿರೇಮಠ, ಹಾಗೂ ಸಹ ಶಿಕ್ಷಕರು ಈ ಸಂಧರ್ಬದಲ್ಲಿ ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ರೇವತಗಾಂವ: ನಮ್ಮಲ್ಲಿ ಗುರುಗಳಿಗೆ ಪರಮ ಪವಿತ್ರ ದೇವರ ಸ್ಥಾನವಿದೆ. ತಂದೆ, ತಾಯಿ ಮತ್ತು ಗುರುಗಳು ಪ್ರತಿಯೊಬ್ಬರ ಬದುಕನ್ನು ರೂಪಿಸುವ ಪ್ರಮುಖ ಶಕ್ತಿಗಳು. ಪ್ರತಿಯೊಬ್ಬರ ಬಾಳಿನಲ್ಲೂ ಜ್ಞಾನದ ದೀವಿಗೆ ಹಚ್ಚುವವರು ಗುರುಗಳು, ತಂದೆ ಮತ್ತು ತಾಯಿ ಇಬ್ಬರನ್ನೂ ಶಿಕ್ಷಕರೊಬ್ಬರಲ್ಲೇ ಕಾಣಲು ಸಾಧ್ಯ. ಇಂತಹ ಗುರುಗಳಿಗೆ ಮೀಸಲಾದ ದಿನವೇ ‘ಶಿಕ್ಷಕರ ದಿನಾಚರಣೆ’. ಶಿಕ್ಷಕ ವೃತ್ತಿ ಎಂಬುದು ಅತ್ಯಂತ ಕಠಿಣ ಮತ್ತು ಜವಾಬ್ದಾರಿಯುತ ವೃತ್ತಿ. ಎಲ್ಲರ ಬದುಕು ಸಮರ್ಥವಾಗಿ ರೂಪುಗೊಳ್ಳುವಲ್ಲಿ ಶಿಕ್ಷಕರ ಪಾತ್ರ ಹಿರಿದು ಎಂದು ರೇವತಗಾಂವ ಗ್ರಾಮದ ಶಿಕ್ಷಕ ಎಸ್.ಡಿ.ಆದಿಗೊಂಡೆಯವರು ಹೇಳಿದರು.ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಶಿಕ್ಷಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ರಾಧಾಕೃಷ್ಣನ್ರವರ ಭಾವಚಿತ್ರ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಈ ವೇಳೆಯಲ್ಲಿ ಎಸ್.ಜೆ.ಬಿಜ್ಜರಗಿ ಮಾತನಾಡಿದರು.ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆಲಮಟ್ಟಿ ಈಗ ಶೃಂಗಾರಮಯ | ಜಲರಾಶಿ, ಹೂಘಮ, ರಮ್ಯತೆಯ ಸಿರಿಗಂಧ | ಕೃಷ್ಣೆ ಜಲಧಿಗೆ ಪವಿತ್ರತೆಯ ಉತ್ಕಟ ಸ್ಥಾನಮಾನ ಉದಯರಶ್ಮಿ ದಿನಪತ್ರಿಕೆ ವರದಿ: ಸಂಪದಾ ಹಿರೇಮಠ ಆಲಮಟ್ಟಿ: ಉತ್ತರ ಕರ್ನಾಟಕದ ರೈತರ ಜೀವನಾಡಿ ಕೃಷ್ಣೆಯ ಒಡಲಿಗೆ ಇದೇ ಶನಿವಾರ ಶ್ರದ್ಧೆ, ಭಕ್ತಿಪೂರ್ವಕ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆಯ ಸುಯೋಗ. ಆ ನಿಮಿತ್ಯ ಆಲಮಟ್ಟಿ ಅಂಗಳಕ್ಕೆ ಈಗ ಅಂದ ಚೆಂದದ ಸ್ಪರ್ಶ ! ಇಲ್ಲಿನ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ಆವರಣ ಮಧುವಣಗಿತ್ತಿಯಂತೆ ಅಲಂಕಾರದ ತೋರಣದಲ್ಲಿ ಮಿನುಗಿ ಗಮನ ಸೆಳೆಯುತ್ತಿದೆ. ಅತ್ಯಾಕರ್ಷಕ ರೂಪದಲ್ಲಿ ಬಾಗಿನ ಸಲ್ಲಿಕೆಯ ಸ್ಥಳ ಸೇರಿದಂತೆ ಹಲ ವೃತ್ತಗಳು ಘಮಘಮಿಸುವ ಹೂ ಪೋರಣಗಳ ಅಲಂಕಾರದಿಂದ ಕಂಗೊಳಿಸಿ ಕೃಷ್ಣೆ ಜಲಧಿಗೆ ಪವಿತ್ರತೆಯ ಉತ್ಕಟ ಸ್ಥಾನಮಾನ ಸಾಕ್ಷೀಕರಿಸುತ್ತಿವೆ. ಹಸಿಯೋನ್ಮಾದ ಶೃಂಗಾರ ಕಾವ್ಯದ ಲಾಲೀತ್ಯದಲ್ಲಿ ಹೃನ್ಮನ ತಣಿಸುತ್ತಿವೆ. ಅಭೂತಪೂರ್ವ ಐತಿಹ್ಯ ನೋಟ ಬೀರುತ್ತಿವೆ. ತಂಪು ವಾತಾವರಣದ ಕಂಪಿನಲ್ಲಿ ಆಣೆಕಟ್ಟು ಮುಂಭಾಗದ ಹಾಗೂ ಅಕ್ಕಪಕ್ಕದ ಪರಿಸರ ಹಿತಮಯವಾಗಿ…
ವಿಜಯಪುರ ಜಿಲ್ಲಾಧಿಕಾರಿ ಆನಂದ ಕೆ. ಮಾಹಿತಿ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ರಾಜ್ಯ ಸರ್ಕಾರದ ಪ್ರಮುಖ ನೀರಾವರಿ ಯೋಜನೆಯಲ್ಲೊಂದಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸ್ಥಾನ ಆಲಮಟ್ಟಿಯ ತುಂಬಿದ ಕೃಷ್ಣೆಯ ಜಲಧಿಗೆ ಶನಿವಾರ ಬಾಗಿನ ಅರ್ಪಿಸಲಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಆನಂದ ಕೆ. ಹೇಳಿದರು.ಶುಕ್ರವಾರ ಆಲಮಟ್ಟಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೆ.೬ ಶನಿವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವರು, ಡಿಸಿಎಂ ಆಗಿರುವ ಡಿ.ಕೆ.ಶಿವಕುಮಾರ, ಅವಳಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ಸೇರಿದಂತೆ ಗಣ್ಯರು ಆಗಮಿಸಲಿದ್ದು, ಶಿಷ್ಟಾಚಾರ ಮತ್ತು ಸುರಕ್ಷಿತ ಭದ್ರತೆಗೆ ಅಗತ್ಯ ಪೂರ್ವ ಸಿದ್ದತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.ಸ್ಥಳ ಬದಲಾವಣೆ: ತುಂಬಿದ ಕೃಷ್ಣೆಯ ಜಲಧಿಗೆ ಬಾಗಿನ ಅರ್ಪಿಸಲು ನಿಗದಿತ ಸ್ಥಳದಿಂದ ಸುಮಾರು ಎರಡು ನೂರು ಮೀ. ಅಂತರದಲ್ಲಿ ಜಲಾಶಯದ ಮೇಲ್ಭಾಗದಿಂದ ಗಂಗಾ ಪೂಜೆ ಮತ್ತು ಬಾಗಿನ ಅರ್ಪಣೆ ಮಾಡಲು ಎಲ್ಲಾ ಪೂರ್ವ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.ಈ ಸಂದರ್ಭದಲ್ಲಿ ಜಿಪಂ. ಸಿಇಒ ರಿಷಿ ಆನಂದ, ಮುಖ್ಯ ಅಭಿಯಂತರ ಡಿ.ಬಸವರಾಜ, …
ರೈತ ಮುಖಂಡ ಅರವಿಂದ ಕುಲಕರ್ಣಿ ಹಾಗೂ ಧುರೀಣ ಅಶೋಕಗೌಡ ಪಾಟೀಲ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕುದುರಿ ಸಾಲವಾಡಗಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಮಾಡುವ ನೆಪದಲ್ಲಿ ಸ್ವಂತ ಜಾಗೆಯಲ್ಲಿ ನಿರ್ಮಿಸಿದ ಮನೆಗಳಲ್ಲಿ ಬಹು ಕಾಲದಿಂದಲೂ ವಾಸವಾಗಿದ್ದ ಕುಟುಂಬಗಳನ್ನು ಅಭಿವೃದ್ಧಿಯ ನೆಪದಲ್ಲಿ ಅಂದಾಜು ೧೪೨ ಮನೆಗಳ ಕುಟುಂಬಗಳನ್ನು ಹೊರ ಹಾಕಿ ಎಲ್ಲ ಮನೆಗಳನ್ನು ಜೆ,ಸಿ.ಬಿ ಯಂತ್ರಗಳಿಂದ ನೆಲಸಮ ಮಾಡುವ ಮೂಲಕ ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕರು ಸ್ವಲ್ಪವೂ ಮಾನವಿಯತೆ ಇಲ್ಲದಂತೆ ವರ್ತಿಸಿದ್ದಾರೆ ಎಂದು ಎಂದು ರೈತ ಮುಖಂಡ ಅರವಿಂದ ಕುಲಕರ್ಣಿ ಹಾಗೂ ಕುದರಿ ಸಾಲವಾಡಗಿ ಗ್ರಾಮದ ಧುರಿಣರಾದ ಅಶೋಕಗೌಡ ಪಾಟೀಲ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಶುಕ್ರವಾರದಂದು ವಿಜಯಪುರ ನಗರದ ಅಂಬೇಡ್ಕರ ಭವನದಲ್ಲಿ ಕರೆದಿದ್ದ ಜಂಟಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲರು ಪೋಲೀಸ್ ಇಲಾಖೆ ಬಳಸಿಕೊಂಡು ಪೈಶಾಚಿಕ ಕೃತ್ಯವೆಸಗಿದ್ದಾರೆ. ಈಗ ಮನೆ ಕಳೆದುಕೊಂಡ ಕುಟುಂಬಸ್ಥರು ದಿಕ್ಕೂ ದೆಸೆ ಇಲ್ಲದಂತೆ ಬೀದಿ ಪಾಲಾಗಿದ್ದಾರೆ. ಮನೆ ಕಳೆದುಕೊಂಡ…
ವಿಜಯಪುರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರಕ್ಕೆ 2025-26ನೇ ಶೈಕ್ಷಣಿಕ ವರ್ಷದಲ್ಲಿ ಮಂಜೂರು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರಕ್ಕೆ 2025-26ನೇ ಶೈಕ್ಷಣಿಕ ವರ್ಷದಲ್ಲಿ ಎಂ.ಬಿ.ಬಿ.ಎಸ್ ಕೋರ್ಸಿಗೆ 50 ಹೆಚ್ಚುವರಿ ಸೀಟುಗಳು ಮಂಜೂರಾಗಿವೆ.ಇದರಿಂದಾಗಿ ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜಿನಲ್ಲಿ ಈ ಬಾರಿ ಒಟ್ಟು 250 ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಪ್ರಥಮ ವರ್ಷಕ್ಕೆ ಪ್ರವೇಶ ಸಿಗಲಿದೆ.ಕಾಲೇಜು ಈ ವರ್ಷದ ಜನೇವರಿಯಲ್ಲಿ ಹೆಚ್ಚುವರಿ ಸೀಟು ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿತ್ತು. ಅದರಂತೆ ಜೂನ್ 2025ರಲ್ಲಿ ನ್ಯಾಶನಲ್ ಮೆಡಿಕಲ್ ಕಮಿಷನ್(National Medical Commission) ಅಧಿಕಾರಿಗಳು ಕಾಲೇಜು ಮತ್ತು ಆಸ್ಪತ್ರೆಗೆ ಆಗಮಿಸಿ ಇಲ್ಲಿ ಲಭ್ಯವಿರುವ ಮೂಲಭೂತ ಸೌಲಭ್ಯಗಳು, ವೈದ್ಯಕೀಯ ಸಲಕರಣೆಗಳು, ಅರ್ಹ ತಜ್ಞವೈದ್ಯರು, ನರ್ಸಿಂಗ್ ಸಿಬ್ಬಂದಿ, ರೋಗಿಗಳ ದಾಖಲಾತಿ ಹಾಗೂ ಇನ್ನಿತರ ಸೌಲಭ್ಯಗಳ ಕುರಿತು ಮೌಲ್ಯಮಾಪನ ನಡೆಸಿ ವರದಿ…
ಚಡಚಣದ ಸೋಮಶೇಖರ ಪಟ್ಟಣಶೆಟ್ಟಿಯಿಂದ ತಹಶೀಲ್ದಾರಗೆ ಮನವಿ ಉದಯರಶ್ಮಿ ದಿನಪತ್ರಿಕೆ ಚಡಚಣ: ಇತ್ತೀಚಿಗೆ ಪಟ್ಟಣದ ಹೊರವಲಯದಲ್ಲಿ ನಿರ್ಮಾಣವಾಗಿರುವ ಡೈಮಂಡ ಪಾರ್ಕ್ ಸಂಪೂರ್ಣ ಕಾನೂನ ಬಾಹೀರವಾಗಿ ನಿರ್ಮಿಸಲಾಗಿದೆ. ಇದು ಸಿಟಿ ಸರ್ವೆಯಲ್ಲಿ ಬರುವದಿಲ್ಲ. ಆದರೂ ಚಡಚಣ ಪ.ಪಂ.ನವರು ಈಗಾಗಲೇ ಸುಮಾರು ೪೦% ಉತಾರೆಗಳನ್ನು ನೀಡಿದ್ದಾರೆ ಎಂದು ಸೋಮಶೇಖರ ಪಟ್ಟಣಶೆಟ್ಟಿ ಆರೋಪಿಸಿ ಚಡಚಣ ತಹಶೀಲದಾರ ಸಂಜಯ ಇಂಗಳೆ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ಅವರು, ಪಟ್ಟಣವು ೨೦೧೬ರಲ್ಲಿ ಗ್ರಾ.ಪಂ.ನಿಂದ ಪ.ಪಂ.ಗೆ ಮೇಲ್ದರ್ಜೆಗೇರಿದ್ದು, ಪಟ್ಟಣವು ಪ.ಪಂ.ಗೆ ಮೇಲ್ದರ್ಜೆಗೇರುವ ಸಮಯದಲ್ಲಿ ಹೊರಡಿಸಿದ ರಾಜ್ಯಪತ್ರದನ್ವಯ ಘೋಷಿತ ಪ.ಪಂ. ವ್ಯಾಪ್ತಿಯಲ್ಲಿರುವ ಸ.ನಂ.ಗಳು ಚಡಚಣ ಗ್ರಾಮ ಠಾಣಾ ೧ ರಿಂದ ೬ರ ವರೆಗೆ, ೪೮ ರಿಂದ ೮೧ರ ವರೆಗೆ, ೯೯ ರಿಂದ ೧೦೭ರ ವರೆಗೆ, ೧೨೨, ೧೨೪ ರಿಂದ ೧೩೫ರ ವರೆಗೆ, ೧೬೩ ರಿಂದ ೧೮೬ರ ವರೆಗೆ, ೧೯೧ ರಿಂದ ೨೧೬ರ ವರೆಗೆ, ೨೧೮ ರಿಂದ ೨೨೩ರ ವರೆಗೆ, ೨೪೨, ೩೪೨ ರಿಂದ ೩೫೯ರ ವರೆಗೆ, ೪೪೪ ರಿಂದ ೪೪೬ರ…
