Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಇದೇ ಸೆಪ್ಟಂಬರ್ ೮ ರಿಂದ ೧೭ರವರೆಗೆ ನಗರದ ಇಂಡಿ ರಸ್ತೆಯಲ್ಲಿರುವ ಚಾಂದನಿ ಫಂಕ್ಷನ್ ಹಾಲ್‌ನಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ.ವಸ್ತು ಪ್ರದರ್ಶನದಲ್ಲಿ ಖಾದಿ ಮಂಡಳಿಯಿಂದ ಧನಸಹಾಯ ಪಡೆದ ಫಲಾನುಭವಿಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸುತ್ತಿದ್ದು, ವಿಜಯಪುರ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ, ದಾವಣಗೆರೆ. ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಬಳ್ಳಾರಿ, ಕೊಪ್ಪಳ, ಬೀದರ, ಮಂಡ್ಯ ಮೈಸೂರು, ಹಾಗೂ ಹೊರ ರಾಜ್ಯಗಳಿಂದ ಅರಳೆ ಖಾದಿ, ಉಣ್ಣೆ ಖಾದಿ, ಪಾಲಿವಸ್ತ್ರ, ಶುದ್ಧ ಖಾದಿ ರೇಷ್ಮೆ ಸೀರೆಗಳು, ಕಸೂತಿ ಸೀರೆಗಳು, ಜಾಕೇಟ್, ಕರದಂಟು, ಸಿಹಿ ತಿಂಡಿಗಳು, ಡಿಜೈನ್ ಬ್ಯಾಗಗಳು, ಬಿದಿರು ಬೆತ್ತ, ರೆಡಿಮೇಡ್ ಶರ್ಟ್ಗಳು, ಪಾದರಕ್ಷೆಗಳಂತಹ ಖಾದಿ ಉತ್ಪನ್ನಗಳು ವಸ್ತು ಈ ಪ್ರದರ್ಶನದಲ್ಲಿ ಕಾಣಬಹುದಾಗಿದೆ.ವಿಜಯಪುರ ಜಿಲ್ಲೆಯ ನಾಗರಿಕರು ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಸೆ೮ರಿಂದ ೧೩ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹೈನುಗಾರಿಕೆ, ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ.೬ ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ರೈತರು ದಿನಾಂಕ : ೦೬-೦೯-೨೦೨೫ರೊಳಗೆ ನೊಂದಾಯಿಸಿಕೊಳ್ಳಬೇಕು. ನೊಂದಣಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಗೀತಾ ಭಜಂತ್ರಿ ಮೊ: ೯೯೮೬೦೫೪೭೫೦ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚಿಗೆ ಸುರಿದ ಮಳೆಯಿಂದಡೋಣಿ ನದಿ ಪ್ರವಾಹದಿಂದಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸಲು ಬಬಲೇಶ್ವರ ತಾಲೂಕಿನ ಬೆಳೆ ಹಾನಿಯಾದ ರೈತರ ಪಟ್ಟಿಯನ್ನು ಸಂಬಂಧಿಸಿದ ಗ್ರಾಮ ಪಂಚಾಯತಿಯ ಕಾರ್ಯಾಲಯದಲ್ಲಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.ಪ್ರಕಟಿತ ಪಟ್ಟಿಗೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಬಬಲೇಶ್ವರದ ಕೃಷಿ ಅಧಿಕಾರಿ ಮಲ್ಲಿಕಾರ್ಜುನ್ ಪೂಜಾರಿ ಮೊ:೭೨೫೯೮೫೬೮೯೦,ಬಬಲೇಶ್ವರದ ತೋಟಗಾರಿಕಾ ಅಧಿಕಾರಿ ಸುರೇಶ ಚವ್ಹಾಣ ಮೊ:೯೮೪೫೭೨೯೨೬೧ ಹಾಗೂ ಕಂದಾಯ ನಿರೀಕ್ಷಕರಾದ ವಿನಯ ಕುಲಕರ್ಣಿ ಮೊ: ೭೪೧೧೭೯೪೩೦೫ ಇವರಿಗೆ ದಿನಾಂಕ:೧೦-೦೯-೨೦೨೫ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಬಬಲೇಶ್ವರ ತಹಶಿಲ್ದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಕಿಚಡಿ ಜಾತ್ರೆಯಲ್ಲಿ ಗ್ರಾಮದ ಯುವಕ ಪ್ರಭು ಕರಿಗಾರ ಸುಮಾರು ೧೨೦ ಕಿಲೋ ಭಾರದ ಜೋಳದ ಚೀಲ ಹೆಗಲ ಮೇಲೆ ಹೊತ್ತು ಮನೆಯಿಂದ ಗುಡ್ಡದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ವರೆಗೆ ಧೀರ್ಗದಂಡ ನಮಸ್ಕಾರ ಹಾಕುವ ಮೂಲಕ ತಮ್ಮ ಹರಕೆ ತೀರಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ರೇವತಗಾಂವ: ಉಮರಜ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನಡೆದ ಪ್ರಸಕ್ತ ಸಾಲಿನ ಪ್ರೌಢ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿವರಗಿ ಗ್ರಾಮದ ಶ್ರೀ ಸಂಗಮೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸುವ ಮೂಲಕ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಜಗದೀಶ ವಾಘಮೋರೆ ಉದ್ದ ಜಿಗಿತದಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ಪ್ರಥಮ ಹಾಗೂ ೧೦೦ ಮೀ ಓಟದಲ್ಲಿ ಪ್ರಥಮ, ಸಮಿತ ಚೌಡಕಿ ೧೫೦೦ ಮೀ ಹಾಗೂ ೩೦೦೦ ಮೀ ಓಟದಲ್ಲಿ ದ್ವಿತೀಯ, ಕಿರಣ ಡೊಳ್ಳಿ ತ್ರಿವಿಧ ಜಿಗಿತದಲ್ಲಿ ದ್ವಿತೀಯ, ಬಾಲಕರ ೪*೧೦೦ ಮೀ ರೀಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಗುರುಗಳು, ಸಿಬ್ಬಂದಿ ವರ್ಗ, ಆಡಳಿತ ಮಂಡಳಿ, ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಹರ್ಷವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ರೇವತಗಾಂವ: ಉಮರಜ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನಡೆದ ಚಡಚಣ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಜಯ ಸಾಧಿಸುವ ಮೂಲಕ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಬಾಲಕರ ವಿಭಾಗದಲ್ಲಿ ಥ್ರೋಬಾಲ್ ಪ್ರಥಮ, ಸಂಗಮೇಶ ಅಡಕೆ ಎತ್ತರ ಜಿಗಿತದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ, ಸಮರ್ಥ ಕುರಗಟಗಿ ೨೦೦ ಮೀ ಓಟದಲ್ಲಿ ಪ್ರಥಮ, ಸಂತೋಷ ಮೇತ್ರೆ ನಡಿಗೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.ಬಾಲಕಿಯರ ವಿಭಾಗದಲ್ಲಿ ಥ್ರೋಬಾಲ್ ಪ್ರಥಮ, ಕಾವೇರಿ ಹಾವಿನಾಳ ೨೦೦ ಮೀ ಓಟದಲ್ಲಿ ಪ್ರಥಮ, ೪೦೦ ಮೀ ರೀಲೆಯಲ್ಲಿ ದ್ವಿತೀಯ, ೩೦೦೦ ಓಟದಲ್ಲಿ ದ್ವಿತೀಯ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ, ಶ್ರೇಯಾ ಸಾಲೋಟಗಿ ಎತ್ತರ ಜಿಗಿತದಲ್ಲಿ ಪ್ರಥಮ ಹಾಗೂ ಅಡೆತಟೆ ಓಟದಲ್ಲಿ ದ್ವಿತೀಯ, ತೇಜಶ್ವಿನಿ ಮಾಳಿ ಗುಂಡು ಎಸೆತದಲ್ಲಿ ದ್ವಿತೀಯ, ವಿದ್ಯಾಶ್ರೀ ಹಕ್ಕೆ ಬಲ್ಲೆ ಎಸೆತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಯಾವ ವಿಜ್ಞಾನಯುಗ, ಗ್ಲೋಬಲ್‌ಯುಗ, ಕಂಪೂಟರ್, ಮೊಬೈಲ್‌ಯುಗ ಬಂದರೂ ಮನಸನ್ನು ಆದ್ಯಾತ್ಮ ಜ್ಞಾನದೆಡೆಗೆ ಪಸರಿಸಿದರೆ ಜೀವನದಲ್ಲಿ ಶಾಂತಿ ನೆಮ್ಮದಿ ದೊರೆಯುತ್ತದೆ ಎಂದು ನಿಡಸೋಸಿ ದುರದುಂಡೇಶ್ವರ ಮಠದ ಶ್ರೀ ಡಾ.ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು.ಉತ್ತರಕರ್ನಾಟಕದ ಸುಪ್ರಸಿದ್ಧ ಜಂಗಮಕ್ಷೇತ್ರ ಚಿಮ್ಮಡದ ಶ್ರೀಪ್ರಭುಲಿಂಗೇಶ್ವರ ಕಿಚಡಿ ಜಾತ್ರೆಯಂಗವಾಗಿ ಹಮ್ಮಿಕೊಂಡಿದ್ದ ವಚನ ಚಿಂತನ ಗೋಷ್ಠಿಯ ದಿವ್ಯಸಾನಿಧ್ಯವಹಿಸಿ ಮಾತನಾಡಿದ ಅವರು ಇಂದು ಐ.ಎ.ಎಸ್, ಐ.ಪಿ.ಎಸ್, ಐಟಿಬಿಟಿ ಸೇರಿದಂತೆ ಉನ್ನತ ಹುದ್ದೆಗಳಲ್ಲಿರುವ ಬಹುತೇಕ ಅಧಿಕಾರಿಗಳು ಮಾನಸಿಕ ನೆಮ್ಮದಿ ಇಲ್ಲದೇ ಬಳಲುತಿದ್ದು ಇಂಥಹ ಜಾತರೆಗಳಲ್ಲಿ ಬಂದು ಪ್ರಸಾದ ಸೇವಿಸಿ ತಮ್ಮ ಮನಸನ್ನು ಪರಿವರ್ತನೆ ಮಾಡಿಕೊಳ್ಳಬಹುದಾಗಿದೆ ಎಂದರು.ಸಂಸದ ಪಿ.ಸಿ. ಗದ್ದಿಗೌಡರ ಮಾತನಾಡಿ ಜಗತ್ತಿನಲ್ಲಿ ಯಾರೂ ಶಾಶ್ವತ ಅಲ್ಲ, ನಮ್ಮ ನಡೆ ನುಡಿಗಳನ್ನು ಕಾಯ್ದುಕೊಂಡು ಜೀವನದಲ್ಲಿ ಯಾರಿಗೂ ತೊಂದರೆಯಾಗದಂತೆ ಬದುಕಿ ಸಾರ್ಥಕತೆಯಿಂದ ಜನಮಾಸರಾಗಬೇಕು ಎಂದರು.ಸಿಂದಗಿ ಸಾರಂಗ ಮಠದ ಶ್ರೀ ಪ್ರಭು ಸಾರಂಗ ಶಿವಾಚಾರ್ಯರು ಮಾತನಾಡಿ ಇಂದಿನ ಆಧುನಿಕ ಕಂಪ್ಯೂಟರ್ ಯುಗದಲ್ಲಿ ಇಂತಹ ಜಾತ್ರೆ, ಉತ್ಸವಗಳಲ್ಲಿ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿರುವುದು ನಮ್ಮ ಸಂಸ್ಕೃತಿಗೆ…

Read More

ಆಲಮಟ್ಟಿ ಅಂಗಳದಲ್ಲಿ ಪೋಲಿಸ್ ಬಿಗಿ ಭದ್ರತೆ ನಿಯೋಜನೆ | ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸುದ್ದಿಗೋಷ್ಠಿ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೆ.೬ ಶನಿವಾರ ಮಧ್ಯಾಹ್ನ ೧೨ ಕ್ಕೆ ಕೃಷ್ಣಗೆ ಆಲಮಟ್ಟಿಯಲ್ಲಿ ಬಾಗಿನ ಅರ್ಪಿಸಲಿದ್ದಾರೆ. ಆ ಹಿನ್ನೆಲೆಯಲ್ಲಿ ಲಾಲ್ ಬಹದ್ದೂರ್ ಜಲಾಶಯ ಸೇರಿದಂತೆ ಆಲಮಟ್ಟಿ ಸುತ್ತಲೂ ಪೋಲಿಸ್ ಬಿಗಿ ಬಂದೋಬಸ್ತ್ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲೆ ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ಗುರುವಾರ ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಬಾಗಿನ ಅರ್ಪಣೆಯ ನಂತರ ಪ್ರವಾಸಿ ಮಂದಿರಕ್ಕೆ ಬಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದರು.ರೈತರು, ಸಾರ್ವಜನಿಕರಿಗೆ ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಲು ಪ್ರವಾಸಿ ಮಂದಿರದ ಬಲಬದಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಮನವಿ ಸಲ್ಲಿಸುವವರು ಮೊದಲೇ ಸ್ಥಳೀಯ ಠಾಣೆಯಲ್ಲಿ ಅನುಮತಿ ಪಡೆಯಬೇಕು, ಒಂದು ಮನವಿಗೆ ನಾಲ್ವರಿಗೆ ಅವಕಾಶ ನೀಡಲಾಗುತ್ತದೆ ಎಂದರು.ಈ ಬಾರಿ ಭದ್ರತೆ ಹೆಚ್ಚಿಸಲಾಗಿದ್ದು ಸಾರ್ವಜನಿಕ ಪ್ರವೇಶ ನಿಷೇಧವಿದೆ ಎಂದರು.ಮಧ್ಯಾಹ್ನ ೩ ಕ್ಕೆ ಆಲಮಟ್ಟಿಯಿಂದ ಅವರು ಬೆಂಗಳೂರಿಗೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ೧೧ನೇ ವಾರ್ಡಿನ ಸರ್ವೆ ನಂ ೫೫೯/೧ ನ ಮುಖ್ಯ ರಸ್ತೆಯಲ್ಲಿ ನಿರ್ಮಿಸಿದ ಅನಧಿಕೃತ ಕಟ್ಟೆಯನ್ನು ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಶಿರಸ್ತೇದಾರರಾದ ಡಿ.ಬಿ.ಭೋವಿ ಹಾಗೂ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿಗೆ ಗುರುವಾರ ಆಗಮಿಸಿದ ೧೧ನೇ ವಾರ್ಡಿನ ರಹವಾಸಿಗಳು ತಮ್ಮ ವಾರ್ಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ನಿರ್ಮಿಸಿದ ಕಟ್ಟೆಯನ್ನು ತೆರವು ಗೊಳಿಸಲು ಆಗ್ರಹಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಮುಖ್ಯಶಿಕ್ಷಕ ಪಾಂಡುರAಗ ಗಂಜ್ಯಾಳ ಮಾತನಾಡಿ, ನಮ್ಮ ಲೇಔಟ್‌ನ ಪ್ರಮುಖ ರಸ್ತೆಯಲ್ಲಿ ಕೆಲವು ದಿನಗಳ ಹಿಂದೆ ಮೃತಪಟ್ಟ ಆಕಳನ್ನು ಹೂಳಲಾಯಿತು. ನಂತರ ಅಗಸ್ಟ್ ೧೫ ರ ರಾತ್ರಿಯಂದು ಏಕಾಏಕಿ ಕೆಲವು ಯುವಕರು ಸೇರಿಕೊಂಡು ಆಕಳು ಹೂಳಿದ ಸ್ಥಳದಲ್ಲಿ ಕಟ್ಟೆ ನಿರ್ಮಿಸಿದ್ದಾರೆ. ಜೊತೆಗೆ ಮುಂದಿನ ದಿನಗಳಲ್ಲಿ ಇದರ ಮೇಲೆ ಕಟ್ಟಡ ನಿರ್ಮಿಸುವ ಇರಾದೆ ಹೊಂದಿದ್ದಾರೆ.ನಮ್ಮ ನಿವೇಶನ ಹೊಂದಿದ ಲೇಔಟ್‌ನಲ್ಲಿ ಮುಂದಿನ ದಿನಗಳಲ್ಲಿ ಸಿಸಿ ರಸ್ತೆ, ಚರಂಡಿ, ಸಹಿತ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿವೆ. ಇವುಗಳಿಗೆಲ್ಲಾ ಕಟ್ಟೆ ಅಡ್ಡಿಯಾಗುತ್ತದೆ.…

Read More

ಕಳಪೆ ಕಾಮಗಾರಿಗೆ ಶೀಘ್ರ ಪರಿಹಾರ ನೀಡುವಂತೆ ಒತ್ತಾಯಿಸಿ ರೈತಸಂಘದಿಂದ ಕೆ.ಬಿ.ಜೆ.ಎನ್.ಎಲ್ ಎಸ್.ಇ ಗೆ ಮನವಿ ಉದಯರಶ್ಮಿ ದಿನಪತ್ರಿಕೆ ನಿಡಗುಂದಿ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಸೋಮನಾಳ ಗ್ರಾಮದ ರೈತ ಮಂಜುನಾಥ ತಳವಾರ ಸರ್ವೇ ನಂಬರ ೧೬೩/೩ ರ ಜಮೀನಿನಲ್ಲಿ ಮುಳವಾಡ ಏತನೀರಾವರಿ ಯೋಜನೆಯಡಿ ವಡವಡಗಿ ಕೆರೆ ನೀರು ತುಂಬುವ ಕಾಮಗಾರಿಗೆ ಸಂಬಂಧಿಸಿದಂತೆ ಈ ರೈತರಿಗೆ ಭೂ ಪರಿಹಾರ ಹಾಗೂ ಇಲ್ಲಿಯವರೆಗೆ ಆಗಿರುವ ನಷ್ಟ ಒದಗಿಸುವುದು ಹಾಗೂ ಈ ನಷ್ಟಕ್ಕೆ ಕಾರಣರಾದ ಇಲಾಖೆ ಅಧಿಕಾರಿಗಳನ್ನ ವಜಾ ಗೊಳಿಸುವುದು ಮತ್ತು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೆ.ಬಿ.ಜೆ.ಎನ್.ಎಲ್‌ನ ಮುಖ್ಯ ಅಭಿಯಂತರ ಡ. ಬಸವರಾಜ ಹಾಗೂ ಡಿ.ಸಿ ಆಯ್.ಎಲ್.ಕಳಸದ ಅವರಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮನವಿ ಸಲ್ಲಿಸಿ ಮಾತನಾಡುತ್ತಾ, ತಮ್ಮ ಇಲಾಖೆಯ ವತಿಯಿಂದ ಮಾಡಿರುವ ಮುಳವಾಡ ಏತನೀರಾವರಿ ಯೋಜನೆಯಡಿ ವಡವಡಗಿ ಕೆರೆ ನೀರು ತುಂಬುವ ಕಾಮಗಾರಿಗೆ ಸಂಬಂಧಿಸಿದಂತೆ ಕಾಮಗಾರಿಯೂ ಸಂಪೂರ್ಣ…

Read More