Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೧೧೦/೩೩/೧೧ಕೆವ್ಹಿ ಆಹೇರಿ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಸಿಂದಗಿ ನಗರ-೦೧ರ ಮಾರ್ಗದ ಮೇಲೆ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ, ಸದರಿ ಮಾರ್ಗಗಳ ಮೇಲೆ ಬರುವ ಕೆಹೆಚ್ಬಿ ಕಾಲೋನಿ, ಬಂದಾಳ ಕ್ರಾಸ್, ವಿವೇಕಾನಂದ ವೃತ್ತ ಬಜಾರ್ ಏರಿಯಾ, ಕನಕದಾಸ ವೃತ್ತ, ಸಂಗಮೇಶ್ವರ ಕಾಲೋನಿ ಹಾಗೂ ಆದರ್ಶ ಶಾಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ.೦೪ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೫ಗಂಟೆಯವರೆಗೆ ವಿದ್ಯುತ್ ವ್ಯತ್ಯೆಯ ಉಂಟಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಚಳುವಳಿ ಹಾಗೂ ಹೋರಾಟಗಳನ್ನು ರೂಪಿಸಿ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದ ಮಹಾತ್ಮ ಗಾಂಧಿಯವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವರ ಹಾದಿಯಲ್ಲಿ ಸಾಗೋಣ ಎಂದು ಕಸಾಪ ತಾಲೂಕಾಧ್ಯಕ್ಷ ವಾಯ್.ಸಿ.ಮಯೂರ ಹೇಳಿದರು.ಸಿಂದಗಿ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಗುರುವಾರದಂದು ಹಮ್ಮಿಕೊಂಡ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಗಾಂಧೀಜಿ ಅವರ ಸತ್ಯ, ಸಮಾನತೆ, ಅಹಿಂಸೆ, ಶಾಂತಿಯ ಬಹುದೊಡ್ಡ ಪ್ರತಿಪಾದಕರಾಗಿದ್ದಾರೆ. ಇಂದು ವಿಶ್ವದಾದ್ಯಂತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.ಈ ವೇಳೆ ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಪಂಡಿತ ಯಂಪುರೆ, ಶಾಂತು ರಾಣಾಗೋಳ, ಅಂಬರೀಷ ಚೌಕಲೆ ಸೇರಿದಂತೆ ಅನೇಕರು ಇದ್ದರು.ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರ:ಪಟ್ಟಣದ ಬಂದಾಳ ರಸ್ತೆಯಲ್ಲಿರುವ ಮಹಿಳಾ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಕಲಕೇರಿ ರಸ್ತೆಯಲ್ಲಿರುವ ಎಲೈಟ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶಾಸಕ ಅಶೋಕ ಮನಗೂಳಿ ಅವರ ಅಧ್ಯಕ್ಷತೆ ಹಾಗೂ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಅವರ ಉಪಸ್ಥಿತಿಯಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯ ಪೂರ್ವಭಾವಿ ಸಭೆಯನ್ನು ಅ.೪ರಂದು ಬೆಳಗ್ಗೆ ೧೦ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಸರಕಾರಿ ಖಾಸಗಿ ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಪದವಿಪೂರ್ವ ಮಹಾವಿದ್ಯಾಲಯಗಳ ಪ್ರಾಚಾರ್ಯರು ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಶಾಂತೇಶ ದುರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಬಿ.ಎಲ್.ಡಿ.ಇ ಸಂಸ್ಥೆಯ ಎ.ವ್ಹಿ.ಎಸ್ ಆರ್ಯುವೇದ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವ್ಹಿ.ಎಸ್. ಆರ್ಯುವೇದ ಮಹಾವಿದ್ಯಾಲಯದ ವಾಗ್ಭಟ ಸಂಭಾಂಗಣದಲ್ಲಿ ಅಕ್ಟೋಬರ್ ೧೫ರ ಬೆಳಿಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿದೆ.೧೫ ರಿಂದ ೨೯ ವರ್ಷದೊಳಗಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಜನಪದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಒಂದು ತಂಡದಲ್ಲಿ ೧೦ ಸ್ಪರ್ಧಿಗಳನ್ನು ಹಾಗೂ ೧೫ ನಿಮಿಷ ಅವಧಿ ನಿಗದಿಪಡಿಸಲಾಗಿದ್ದು, ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಯನ್ನು ಆಯ್ದುಕೊಳ್ಳಬಹುದಾಗಿದೆ. ಜನಪದ ಗೀತೆಯಲ್ಲಿ ಭಾಗವಹಿಸಲು ಒಂದು ತಂಡದಲ್ಲಿ ೧೦ ಸ್ಪರ್ಧಿಗಳನ್ನು ಹಾಗೂ ೦೭ ನಿಮಿಷದ ಅವಧಿ ನಿಗದಿ ಪಡಿಸಲಾಗಿದ್ದು, ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಯನ್ನು ಆಯ್ದುಕೊಳ್ಳಬಹುದಾಗಿದೆ.ಕಥೆ ಬರೆಯುವ ಸ್ಪರ್ಧೆಯಲ್ಲಿ ಭಾಗವಹಿಸುವವರು ೬೦ ನಿಮಿಷಗಳಲ್ಲಿ ೧೦೦೦ ಪದಗಳಿಗೆ ಮೀರದಂತೆ ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಗಳಲ್ಲಿ ಕಥೆ ಬರೆಯಬಹುದಾಗಿದೆ.…
ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಮಳೆ ನಮ್ಮ ಜಿಲ್ಲೆಯಲ್ಲಿಯಾಗಿದ್ದು ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ತ್ವರಿತವಾಗಿ ಕಲ್ಪಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ವಿಡಿಯೋ ಸಂವಾದ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ನಂತರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮೂಲಭೂತ ಸೌಕರ್ಯಗಳಾದ ರಸ್ತೆ, ಶಾಲಾ ಕಟ್ಟಡ, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರುದಂತೆ ಹಾನಿಗೀಡಾದ ಪ್ರದೇಶಗಳಿಗೆ ಅಧಿಕಾರಿಗಳು ತೆರಳಿ ಪ್ರಥಮ ಆದ್ಯತೆ ನೀಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು. ಹಾನಿಗೀಡಾದ ಕಟ್ಟಡಗಳ ಸಮೀಕ್ಷೆ ಕಾರ್ಯ ಕೈಗೊಂಡು ಜಿ.ಪಿ.ಎಸ್ ಪೋಟೊ ಸಮೇತ ವರದಿ ಸಲ್ಲಿಸಬೇಕು. ಚೆಕ್ ಡ್ಯಾಮ್ಗಳು, ಸಣ್ಣ ಸಣ್ಣ…
ಇನ್ನು ಮುಂದೆ ಯಾವುದೇ ಅಪಾಯವಿಲ್ಲ | ಜಿಲ್ಲಾಧಿಕಾರಿ ಡಾ. ಆನಂದ.ಕೆ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಕೆರೆಯ ಮುಂದಿರುವ ಕೃಷಿ ಜಮೀನುಗಳಿಗೆ ಮತ್ತು ಕೆರೆ ಏರಿಯ ಹಾನಿಯನ್ನು ತಡೆಯಲು ಮುನ್ನಚ್ಚರಿಕೆ ಕ್ರಮವಾಗಿ ಚಾನಲ್ ನಿರ್ಮಾಣ ಮಾಡಿ, ನೀರು ಹೊರಹಾಕಿರುವುದರಿಂದ ನೀರಿನ ಮಟ್ಟವು ೧೦ ಅಡಿಗಳಷ್ಟು ಕಡಿಮೆಯಾಗಿದೆ. ಇನ್ನು ಮುಂದೆ ಯಾವುದೇ ಅಪಾಯ ಕಂಡುಬರುವುದಿಲ್ಲವೆಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಕೆರೆಯನ್ನು ೧೯೭೨ ರಲ್ಲಿ ನಿರ್ಮಾಣ ಮಾಡಲಾಗಿದ್ದು.ಈ ಕೆರೆಯ ಸಾಮರ್ಥ್ಯವು ೧೯.೫೦ ಎಂ.ಸಿ.ಎಫ್.ಟಿ. ಇದ್ದು, ಕೆರೆಯ ವಿಸ್ತೀರ್ಣ ೧೮ ಹೆಕ್ಟೆರ್ ಇರುತ್ತದೆ. ಏರಿಯ ಎತ್ತರ ೧೧ ಮೀಟರ ಹಾಗೂ ಉದ್ದ ೪೦೦ ಮೀ ಇದ್ದು, ಪ್ರಸ್ತುತ ಈ ಕೆರೆಯನ್ನು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಇಲಾಖೆಯ ವತಿಯಿಂದ ಕೆರೆ ತುಂಬವ ಯೋಜನೆಯಡಿ ಕೆರೆ ತುಂಬಿಸಲಾಗಿರುತ್ತದೆ.ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಿರುವುದರಿಂದ ಈ ಕೆರೆಯ ಕೋಡಿಯಿಂದ ಸುಮಾರು ಒಂದು ತಿಂಗಳಿಂದ ನೀರು…
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪ ಬೆಂಗಳೂರು: ಬಿಜೆಪಿಯು ‘ವೋಟ್ ಚೋರಿ’ (ಮತ ಕಳ್ಳತನ) ಮೂಲಕ ಜನರ ಆದೇಶವನ್ನು ಕದಿಯಲು ‘ಯೋಜಿತ ಪಿತೂರಿ’ ನಡೆಸುತ್ತಿದೆ. ಇದು ‘ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶುಕ್ರವಾರ ಆರೋಪಿಸಿದ್ದಾರೆ.’ವೋಟ್ ಚೋರಿ’ ಕೇವಲ ಮಹದೇವಪುರ ವಿಧಾನಸಭಾ ಕ್ಷೇತ್ರ ಅಥವಾ ಆಳಂದ ಅಥವಾ ಮಹಾರಾಷ್ಟ್ರದ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಅವರು ಹೇಳಿದ್ದಾರೆ.ಪುಲಕೇಶಿನಗರದಲ್ಲಿ ನಡೆದ ಮತ ಕಳ್ಳತನದ ವಿರುದ್ಧ ಸಹಿ ಅಭಿಯಾನವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನರ ಆದೇಶವನ್ನು ಕದಿಯುವ ‘ವೋಟ್ ಚೋರಿ’ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ಉದ್ದೇಶಪೂರ್ವಕ ದಾಳಿಯಾಗಿದೆ. ಬಿಜೆಪಿಯ ದುಷ್ಟ ಶಕ್ತಿಗಳು ನಿಮ್ಮ ಆಯ್ಕೆಯ ವ್ಯಕ್ತಿಯನ್ನು ಆಯ್ಕೆ ಮಾಡುವ ನಿಮ್ಮ ಹಕ್ಕನ್ನು ಕಸಿದುಕೊಳ್ಳುತ್ತಿವೆ’ ಎಂದು ತಿಳಿಸಿದರು.ಅಂಬೇಡ್ಕರ್, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲಅವರು ಶುಕ್ರವಾರ ವಿಜಯಪುರ ನಗರದ ತೋಟದ ಮನೆಯಲ್ಲಿ ಸಾರ್ವಜನಿಕ ಬನ್ನಿ ವಿನಿಮಯ ಆಚರಿಸಿದರು.ನಗರದ ಜಮಖಂಡಿ ರಸ್ತೆಯಲ್ಲಿರುವ ತಮ್ಮ ತೋಟದ ಮನೆಯಲ್ಲಿತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿ ಮಾತ್ರವಲ್ಲದೆ ವಿಜಯಪುರ, ಬಾಗಲಕೋಟೆ, ಹಾವೇರಿ ಜಿಲ್ಲೆಯಿಂದ ಆಗಮಿಸಿದ್ದ ಜನಸ್ತೋಮದ ಮಧ್ಯೆ ಬನ್ನಿ ವಿನಿಮಯ ಮಾಡಿಕೊಂಡು ವೈರತ್ವ ಮರೆತು ಬನ್ನಿ ತಗೊಂಡ ಬಂಗಾರದಂಗ ಇರೋಣ ಎಂಬ ಸಂದೇಶ ಸಾರಿದರು.ಶುಕ್ರವಾರ ಬೆಳಿಗ್ಗೆಯಿಂದಲೇ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದ ಮನೆಯ ಆವರಣದಲ್ಲಿ ನೆರೆದಿದ್ದ ಅಪಾರ ಜನಸ್ತೋಮ, ವಿವಿಧ ಮಠಾಧೀಶರು, ಮಾಜಿ ಸಚಿವರು, ಹಾಲಿ ಶಾಸಕರು, ರಾಜಕೀಯ ಗಣ್ಯರು, ಮುಖಂಡರು, ರೈತರು, ಸಾರ್ವಜನಿಕರು, ಯುವಕರು, ಮಹಿಳೆಯರು, ಬೆಂಬಲಿಗರು, ಅಭಿಮಾನಿಗಳು, ಸೇರಿದಂತೆ ಸುಮಾರು ಅರ್ಧ ಲಕ್ಷಕ್ಕೂ ಮಿಕ್ಕಿದ ಜನರು ಆಗಮಿಸಿ ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡು ಶುಭಾಶಯ ಕೋರಿದರು.ತಮಗೆ ಪ್ರೀತಿಯಿಂದ ದಸರಾ ಶುಭಾಶಯ ಕೋರಿದ ಸಾರ್ವಜನಿಕರಿಗೆ ಸಚಿವರೂ ಕೂಡ ಬನ್ನಿ…
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಈ ನಾಡಿನಲ್ಲಿ ಎಲ್ಲರೂ ರೈತರನ್ನು ಬಡೆದು ತಿನ್ನುತ್ತಿದ್ದಾರೆ, ಚುನಾವಣಾ ಸಂದರ್ಭದಲ್ಲಿ ನಾನು ರೈತರ ಮಗ ಎಂದು ಮತ ಪಡೆದು ಆರೆಸಿ ಬಂದು ನಂತರ ಹಣ ಮಾಡುವುದು ಅಷ್ಟೇ ಮೂಲ ಉದ್ದೇಶವಿಟ್ಟು ರೈತರನ್ನು ಸುಲಿಗೆ ಮಾಡುವುದು ನಮ್ಮ ಚುನಾಯಿತ ಪ್ರತಿನಿಧಿಗಳ ಕೆಲಸವಾಗಿದೆ, ಆದ್ದರಿಂದ ರೈತರೆಲ್ಲರು ಜಾತಿ, ಮತ, ಪಕ್ಷ, ಬಡವ, ಶ್ರೀಮಂತ ಎನ್ನುವ ಬೇಧಬಾವ ಮಾಡದೇ ಒಂದಾಗಬೇಕು ಅಂದಾಗ ಮಾತ್ರ ರೈತ ಆತ್ಮಹತ್ಯೆಯನ್ನು ತಡೆಯಬಹುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಅವರು ಹೇಳಿದರು.ವಿಜಯಪುರ ತಾಲೂಕಿನ ಆಹೇರಿ ತಾಂಡಾ ನಂಬರ ೧ ರಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚುನ್ನಪ್ಪಾ ಪೂಜೇರಿ ಬಣದ ಗ್ರಾಮಘಟಕ ಉದ್ಘಾಟನೆ, ಶಾಲು ದೀಕ್ಷೆ ಹಾಗೂ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈಗಾಗಲೇ ಜಿಲ್ಲೆಯಲ್ಲಿ…
ಹತ್ಯೆಗೀಡಾದ ಭೀಮನಗೌಡ ಬಿರಾದಾರ ಕುಟುಂಬಕ್ಕೆ ಜೀವ ಭಯ | ಚಡಚಣ ರಾಜ್ಯ ಹೆದ್ದಾರಿ ಬಂದ್ | ಸಂಚಾರ ಅಸ್ತವ್ಯಸ್ತ ಉದಯರಶ್ಮಿ ದಿನಪತ್ರಿಕೆ ಚಡಚಣ: ಸೆ.೩ ರಂದು ದುಷ್ಕರ್ಮಿಗಳಿಂದ ಗುಂಡಿಗೆ ಬಲಿಯಾಗಿದ್ದ ದೇವರನಿಂಬರಗಿ ಗ್ರಾಮದ ಭೀಮನಗೌಡ ಬಿರಾದಾರ ಎಂಬುವರ ಅಪ್ರಾಪ್ತ ಪುತ್ರನ (೨ವರ್ಷದ) ಅಪಹರಣಕ್ಕೆ ಗುರುವಾರ ಸಂಜೆ ದೇವರನಿಂಬರಗಿ ಭೀಮನಗೌಡ ಬಿರಾದಾರ ತೋಟದ ನಿವಾಸದ ಬಳಿ ವಿಫಲಯತ್ನ ನಡೆದಿದ್ದು, ಈ ಬಗ್ಗೆ ಗ್ರಾಮಸ್ಥರಲ್ಲಿ ಮತ್ತೆ ಆತಂಕ ಮೂಡಿದೆ.ಹತ್ಯೆಗೀಡಾದ ದೇವರ ನಿಂಬರಗಿ (ಮಾಜಿ) ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಪ್ರಭಾವಿ ಕಾಂಗ್ರೆಸ್ ಮುಖಂಡ ಭೀಮನಗೌಡ ಬಿರಾದಾರ ಕುಟುಂಬ ಜೀವ ಭಯದಲ್ಲಿದ್ದು, ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ದೇವರ ನಿಂಬರಗಿಯ ನೂರಾರು ಜನ ಗ್ರಾಮಸ್ಥರು ಚಡಚಣದ ಹರಳಯ್ಯ ವೃತ್ತದಲ್ಲಿ ಗುರುವಾರ ರಾತ್ರಿ ಸುಮಾರು ೧೦.೩೦ ಗಂಟೆಗೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.ದೇವರನಿಂಬರಗಿ ಗ್ರಾಮದಲ್ಲಿ ಭೀಮನಗೌಡ ಬಿರಾದಾರ ಹತ್ಯೆಗೆ ಸಂಭಂಧಿಸಿದಂತೆ ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಆದಾಗ್ಯೂ ಗುರುವಾರ ಸಂಜೆ ಗ್ರಾಮದ ಸುನೀಲ ಕಾಂಬಳೆ…
