Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದಲ್ಲಿ ಕರ್ನಾಟಕ ರಣಧೀರ ಪಡೆ ಸಂಘಟನೆಯ ವತಿಯಿಂದ ನೂತನ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾಗಿ ಆಯ್ಕೆಯಾದ ವಾಯ್.ಸಿ.ಮಯೂರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.ಈ ವೇಳೆ ಕರಪ ಉ.ಅಧ್ಯಕ್ಷ ಸಂತೋಷ ಮಣಿಗಿರಿ, ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ, ಸಿದ್ದು ತಮದೊಡ್ಡಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.
ದೇವರನಿಂಬರಗಿ ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ರೌಡಿ ಶೀಟರ್ ಬರ್ಬರ ಹತ್ಯೆ | ಗ್ರಾ.ಪಂ. ಅಧ್ಯಕ್ಷ ಭೀಮನಗೌಡ ಬಿರಾದಾರ ಕೊಲೆಯಾದ ದುರ್ಧೈವಿ ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ದೇವರನಿಂಬರಗಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ರೌಡಿ ಶೀಟರ್ನ ಮೇಲೆ ಅಪರಿಚಿತರು ಏಕಾಏಕಿ ಗುಂಡಿನ ದಾಳಿ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದೇವರನಿಂಬರಗಿ ಗ್ರಾಮದಲ್ಲಿ ಬುಧವಾರ ನಡೆದಿದೆ.ಗುಂಡಿನ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ದೇವರನಿಂಬರಗಿ ಗ್ರಾ.ಪಂ. ಅಧ್ಯಕ್ಷ ಭೀಮನಗೌಡ ಕಲ್ಲನಗೌಡ ಬಿರಾದಾರ (೪೦) ಎಂದು ಗುರುತಿಸಲಾಗಿದೆ.ಭೀಮನಗೌಡ ಬೆಳಿಗ್ಗೆ ಸುಮಾರು ೮:೫೦ ಗಂಟೆಗೆ ದೇವರನಿಂಬರಗಿ ಗ್ರಮದಲ್ಲಿರುವ ಶ್ರೀಮಂತ ಭೀಮಾಶಂಕರ ನಾವಿ ಎಂಬುವವರ ಸಲೂನಿಗೆ ಹೇರ್ ಕಟಿಂಗ್ ಮಾಡಿಸಿಕೊಳ್ಳಲೆಂದು ತೆರಳಿದಾಗ ನಾಲ್ಕು ಜನ ಅಪರಿಚಿತ ಮುಸುಕುಧಾರಿಗಳು ಸಲೂನಿಗೆ ನುಗ್ಗಿ ಮೃತ ಭೀಮನಗೌಡನ ಕಣ್ಣಿಗೆ ಖಾರದ ಪುಡಿ ಎರಚಿ ಆತನ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿ, ಪರಾರಿಯಾಗಿದ್ದಾರೆ.ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಘಟನೆಯ ಕುರಿತು ಶೋಧ ನಡೆಸಿ, ಆರೋಪಿಗಳನ್ನು ಬಂಧಿಸಿ, ತೀವ್ರ ತನಿಖೆಗೆ ಒಳಪಡಿಸಿದ್ದಾರೆ.ಸಾಯಂಕಾಲ ಮೃತ ಭೀಮನಗೌಡ ಶರೀರವನ್ನು…
ವಿಜಯಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ದುರ್ಘಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಏಳನೇ ದಿನದ ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ಅವಘಡದಿಂದ ಓರ್ವ ಯುವಕ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಗಾಂಧಿಚೌಕ್ ಬಳಿಯ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ.ಇಲ್ಲಿನ ಡೋಬಲೆ ಗಲ್ಲಿ ನಿವಾಸಿಶುಭಂ ಸಂಕಳ (21) ಮೃತ ಯುವಕ.ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಣೇಶನ ಮೂರ್ತಿ ಸಾಗಲು ಕೋಲಿನಿಂದ ವಿದ್ಯುತ್ ತಂತಿ ಎತ್ತುವ ಸಂದರ್ಭ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ನಡೆದಿದೆ.ಯುವಕ ಶುಭಂ ಸಂಕಳ ಸ್ಥಳದಲ್ಲಿಯೇ ಅಸುನೀಗಿದರೆ, ಪ್ರಭಾಕರ ಜಂಗಲೆ ಹಾಗೂ ಲಖನ್ ಚವ್ಹಾಣ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.ನಗರದಲ್ಲಿ ಏಳನೇ ದಿನದ ನೂರಾರು ಗಣೇಶನ ಮೂರ್ತಿಗಳನ್ನು ರಾತ್ರಿಯಿಡಿ ವಿಸರ್ಜನೆ ಮಾಡಲಾಗಿದೆ.ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಕನ್ನಡ ಅನುದಾನಿತ ಪ್ರಾಥಮಿಕ ಶಾಲೆಯ ಮಕ್ಕಳು ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ವೀರಾಗ್ರಣಿ ಪ್ರಶಸ್ತಿ ಪಡೆದುವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆದ ಮಕ್ಕಳಿಗೆ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿದ ಸಂಸ್ಥೆಯ ಅದ್ಯಕ್ಷ ಎಸ್.ಆಯ್.ಜೋಗೂರ ನಮ್ಮ ಶಾಲೆಯ ಮಕ್ಕಳು ನಿರಂತರ ಆಟದ ಪ್ರಯತ್ನದ ಫಲವಾಗಿ ಓಟ, ಉದ್ದ ಜಿಗಿತ, ಡಿಸ್ಕಸ್ ಥ್ರೂ, ಗುಂಡು ಎಸೆತ ಹಾಗೂ ಖೋ-ಖೋ ಮತ್ತು ಕಬಡ್ಡಿಯಲ್ಲಿ ಉತ್ತಮ ಪ್ರದರ್ಶನ ನೀಡಿ ವಲಯ ಮಟ್ಟಕ್ಕೆ ಆಯ್ಕೆ ಆಗಿದ್ದು ಸಂತೋಷ ತಂದಿದೆ. ನಿಮ್ಮ ಕ್ರೀಡಾ ಸ್ಪೂರ್ತಿಯಿಂದ ನಿಮ್ಮ ಆರೋಗ್ಯ ಹಾಗೂ ಮಾನಸಿಕ ಶಕ್ತಿ ವೃಧ್ಧಿ ಆಗುತ್ತದೆ ಹಾಗಾಗಿ ಪಾಠದ ಜೊತೆಗೆ ಕ್ರೀಡೆಯೂ ಮುಖ್ಯ ಎಂದರು.ಈ ವೇಳೆ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ, ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ದೈಹಿಕ ಶಿಕ್ಷಕಿಯರಾದ ಸೀತಾ ಆರೇಶಂಕರ, ಸರುಬಾಯಿ ಬಂಡಗರ, ಸುನೀತಾ ಗುಂಡದ, ವೀಣಾ ರಾಂಪೂರಮಠ, ರಕ್ಷಿತಾ ಹಡಪದ ಮುಂತಾದವರು ಇದ್ದರು
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪುಸ್ತಕಗಳು ಮಾನವನ ಆತ್ಮೀಯ ಗೆಳೆಯನಂತಿರಬೇಕು. ಓದುವ ಹವ್ಯಾಸ ಸನ್ಮಾರ್ಗದ ದಾರಿಯತ್ತ ಕರೆದುಕೊಂಡು ಹೋಗುತ್ತವೆ. ಇದರಿಂದ ಮಾನಸಿಕ ಆರೋಗ್ಯ ವೃದ್ಧಿಗೊಳ್ಳುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಡಾ.ಕುಶಾಲ ಬರಗೂರ ಹೇಳಿದರು.ಅವರು ಶನಿವಾರ ಜಿಲ್ಲೆಯ ಸಿಂದಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಮ್ಮಿಕೊಂಡಿದ್ದ “ನನ್ನ ಮೆಚ್ಚಿನ ಪುಸ್ತಕ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ನಾಡಿನಾದ್ಯಂತ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿಗಳಲ್ಲಿ ಪುಸ್ತಕ ಅಭಿರುಚಿಯನ್ನು ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ ಎಂದರು.ಉದ್ಘಾಟನೆಯನ್ನು ನೆರವೇರಿಸಿ ಕಲಬುರಗಿಯ ವಿಮರ್ಶಕ ಡಾ.ಶ್ರೀಶೈಲ ನಾಗರಾಳ ಮಾತನಾಡಿ ತಾಯಿ ಭಾಷೆ ಕನ್ನಡವಾಗಿರುವುದರಿಂದ ಕನ್ನಡವನ್ನೇ ಹೆಚ್ಚಾಗಿ ಬಳಸಿಕೊಳ್ಳಲು ಕರೆ ನೀಡಿದರು. ಯುವಕರು ಪುಸ್ತಕವನ್ನು ಪ್ರೀತಿಸುವುದರಿಂದ ಅವರಲ್ಲಿ ಕೀರ್ತಿ, ಸಂಪತ್ತು ಎಲ್ಲವೂ ದೊರೆಯುತ್ತದೆ, ವಿಧ್ಯಾರ್ಥಿಗಳಲ್ಲಿ ಇಂತಹ ಆಸಕ್ತಿ ಶಾಲಾ ಕಾಲೇಜುಗಳು ಬೆಳೆಸಬೇಕಿದೆ ಎಂದರು.ಯುವ ಸಾಹಿತಿ ದೇವು ಮಾಕೊಂಡ ವಿದ್ಯಾರ್ಥಿಗಳಲ್ಲಿ ಜ್ಞಾನಾಬಿರುಚಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಆಲಮೇಲದ ಪ್ರಕಾಶಕ ಡಾ. ರಮೇಶ ಕತ್ತಿ ಅತಿಥಿಗಳಾಗಿ ಮಾತನಾಡಿದರು. ಅಧ್ಯಕ್ಷತೆಯನ್ನು…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಲ್ಲಿ ಸೆ. ೪ ರಂದು ನಡೆಯಲಿರುವ ಕಿಚಡಿ ಜಾತ್ರೆಗಾಗಿ ನಿರ್ಮಿಸಲಾದ ಬೃಹತ್ ರಥದ ಕಳಶ ಹಾಗೂ ಉಚ್ಚಾಯಿ (ಉತ್ಸವ ಮೂರ್ತಿ)ಯ ಪುರ ಪ್ರವೇಶ ಕಾರ್ಯಕ್ರಮ ಸೋಮವಾರ ನಡೆಯಿತು.ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳ ಹಾಗೂ ಶ್ರೀ ಜನಾರ್ಧನ ಮಹಾರಾಜರ ಸಾನಿಧ್ಯದಲ್ಲಿ ನಡೆದ ವಿಶೇಷ ಪೂಜೆಯೊಂದಿಗೆ ಸ್ಥಳಿಯ ಬಸ್ ನಿಲ್ದಾಣದ ಮಹಾದ್ವಾರದಿಂದ ನೂರಾರು ಮಹಿಳೆಯರಿಂದ ಆರತಿ ಕುಂಭ, ಸಕಲ ವಾದ್ಯ ವೃಂದಗಳೊಂದಿಗೆ ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ವರೆಗೆ ಮೆರವಣಿಗೆ ಮೂಲಕ ತರಲಾಯಿತು ಪ್ರಭುಲಿಂಗ ಸೇವಾ ಸಮೀತಿಯ ಪ್ರಮುಖರಾದ ರಾಮಣ್ಣ ಮುಗಳಖೋಡ, ಪುಂಡಲಿಕಪ್ಪಾ ಪೂಜಾರಿ, ಅಣ್ಣಪ್ಪಗೌಡ ಪಾಟೀಲ, ಬಾಳಪ್ಪ ಹಳಿಂಗಳಿ, ರಾಚಯ್ಯ ಮಠಪತಿ, ರಾಮಣ್ಣ ಬಗನಾಳ, ಗುರಪ್ಪ ಬಳಗಾರ, ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪ ಪೂಜಾರಿ, ಪರಪ್ಪಾ ಪಾಲಭಾವಿ, ಬೀರಪ್ಪ ಹಳೆಮನಿ, ಪ್ರಕಾಶ ಪಾಟೀಲ, ಬಸವರಾಜ ಕುಂಚನೂರ, ಅಶೋಕ ಧಡೂತಿ, ಆನಂದ ಕವಟಿ, ಅಶೋಕ ಮೋಟಗಿ, ಪ್ರಭು ಮುಧೋಳ, ಅವ್ವನಪ್ಪ ಮುಗಳಖೋಡ ಸೇರಿದಂತೆ ಹಲವಾರು ಜನ ಪ್ರಮುಖರು ಭಾಗವಹಿಸಿದ್ದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮತ್ತು ವ್ಯಕ್ತಿತ್ವದ ಬೆಳವಣಿಗೆಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕಟಿಬದ್ಧವಾಗಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಭರವಸೆ ನೀಡಿದರು.ಇಲ್ಲಿಯ ಮಹಿಳಾ ವಿವಿಯ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ನಾತಕೋತ್ತರ ತರಗತಿಗಳ ಪ್ರವೇಶಾತಿ ಕೌನ್ಸಿಲಿಂಗ್ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಜ್ಞಾನಾರ್ಜನೆಗೆ ಬೇಕಾದ ಎಲ್ಲ ಬಗೆಯ ಅವಕಾಶಗಳನ್ನು ಮಹಿಳಾ ವಿವಿ ಸೃಷ್ಟಿಸುತ್ತದೆ ಎಂದರು.ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅತ್ಯಾಧುನಿಕ ಬೋಧನಾ ತಂತ್ರಗಳು- ಸ್ಮಾರ್ಟಬೋರ್ಡ್ ಮತ್ತು ಡಿಜಿಟಲ್ ಕ್ಲಾಸ್ರೂಂ, ಮಲ್ಟಿಮೀಡಿಯಾ ಲ್ಯಾಬ್ ಮತ್ತು ಲಾಂಗ್ವೇಜ್ ಲ್ಯಾಬ್, ಸುಸಜ್ಜಿತ ಪ್ರಯೋಗಾಲಯಗಳು, ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆ, ಸಾಪ್ಟವೇರ್ ಟೆಕ್ನಾಲಜಿ ಪಾರ್ಕ್, ೨೪x೭ ಇಂಟರ್ನೆಟ್ ಸೌಲಭ್ಯ, ಮಕ್ಕಳ ಲಾಲನೆ-ಪಾಲನೆಗೆ ಡೇಕೇರ್ ಸೆಂಟರ್, ನಗರದ ವಿವಿಧ ಭಾಗಗಳಿಂದ ವಿಶ್ವವಿದ್ಯಾಲಯಕ್ಕೆ ವಾಹನ ವ್ಯವಸ್ಥೆ ಮುಂತಾದ ಸೌಲಭ್ಯಗಳನ್ನು ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಒದಗಿಸಲಾಗಿದೆ ಎಂದು ಅವರು ವಿವರಿಸಿದರು.ಮಹಿಳೆಯರಿಗೆ ಉನ್ನತ ಶಿಕ್ಷಣದ ಅವಕಾಶಗಳ ಹೆಬ್ಬಾಗಿಲನ್ನೇ ತೆರೆದಿರುವ ಅಕ್ಕಮಹಾದೇವಿ…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಕಳೆದ ಎರಡು ತಿಂಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಬಿತ್ತಿದ ಬೆಳೆಗಳು ಕೈಗೆ ಬಾರದ ಸ್ಥಿತಿಯನ್ನು ಅರಿತು ವಿವಿಧ ಬೇಡಿಕೆಗಳನ್ನು ಇಡೇರಿಸಲು ತಹಸೀಲ್ದಾರ ಸುರೇಶ ಚವಲರ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ತಾಲ್ಲೂಕಾಧ್ಯಕ್ಷ ಸಾತಲಿಂಗಯ್ಯ ಸಾಲಿಮಠ ಅತಿ ಹೆಚ್ಚು ಮಳೆಯಾಗುತ್ತಿರುವದರಿಂದ ತಾಲ್ಲೂಕಿನ ರೈತರು ತಲೆಯ ಮೇಲೆ ಕೈಹೊತ್ತು ಕುಳಿತುಕೋಳ್ಳುವಂತಾಗಿದೆ. ತೋಗರಿ, ಗೋವಿನ ಜೋಳ, ಹೆಸರು, ಉದ್ದು, ಶೇಂಗಾ ಬಿತ್ತನೆಯಾಗಿದ್ದು ಬೆಳೆಗಳು ಹಾಳಾಗಿವೆ ಎಂದರು.ರೈತ ಮುಖಂಡ ಯಾಕುಬ ಜತ್ತಿ ಮಾತನಾಡಿ ದ್ರಾಕ್ಷಿ, ದಾಳಿಂಬೆ, ಕಬ್ಬು ಬೆಳೆಯುವ ರೈತರಿಗೆ ಅಂಗಡಿ ವ್ಯಾಪಾರಸ್ಥರು ಗೊಬ್ಬರ, ಔಷಧ ಹಾಗೂ ಕೀಟನಾಶಕ ಕಳಪೆ ನೀಡುತ್ತಿದ್ದು ಮತ್ತು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ಇದ್ದು ಇದ್ದನ್ನು ನ್ಯಾಯುತವಾಗಿ ತನಿಕೆ ನಡೆಸಿ ಸೂಕ್ತ ಕ್ರಮ ಕೈಗೋಳ್ಳಬೇಕು. ದ್ರಾಕ್ಷಿ ಬೆಳೆ ವಿಮೆ ಬಿಡುಗಡೆ ಬಗ್ಗೆ ಶೀಘ್ರವೇ ಕ್ರಮ ಕೈಗೋಳ್ಳಬೇಕೆಂದು ಆಗ್ರಹಿಸಿದರು.ಪ್ರಧಾನ ಮಂತ್ರಿ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಹುನಗುಂದ-ತಾಳಿಕೋಟೆ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿ, ತಂಗಡಗಿಯ ಸಿದ್ರಾಮೇಶ್ವರ ವೃತ್ತದಲ್ಲಿ ಯುವಜನ ಸೇನೆಯ ಅಧ್ಯಕ್ಷ ಶಿವಾನಂದ ವಾಲಿ ತಮ್ಮ ಬೆಂಬಲಿಗರೊಂದಿಗೆ ಧರಣಿ ಸತ್ಯಾಗ್ರಹ ಆರಂಭಿಸಿದ್ದರು.ಈ ವೇಳೆ ಉದಯರಶ್ಮಿಯೊಂದಿಗೆ ವಾಲಿ ಮಾತನಾಡಿ, ತಂಗಡಗಿ ಗ್ರಾಮದಲ್ಲಿನ ಮನೆಗಳನ್ನು ತೆರವುಗೊಳಿಸಿ, ರಸ್ತೆ ಅಗಲೀಕರಣ ಮಾಡದೇ ಕಾಮಗಾರಿ ಪೂರ್ಣಗೊಳಿಸಲಾಗಿದೆ. ರಸ್ತೆಯ ಎರಡು ಬದಿ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು ಇವು ಮಳೆ ನೀರು ತುಂಬಿ ಚರಂಡಿಯ ಕೊಳಚೆ ನೀರು ಊರೊಳಗೆ ಹರಿಯುತ್ತದೆ. ಇದರಿಂದ ಗಲೀಜು ವಾತಾವರಣ ನಿರ್ಮಾಣವಾಗಿ ರೋಗಗಳು ಹರಡುತ್ತಿವೆ. ಈ ಸಮಸ್ಯೆ ಇದ್ದರೂ ಟೂಲ್ ಮಾತ್ರ ಸಂಗ್ರಹಿಸಲಾಗುತ್ತಿದೆ. ರಸ್ತೆ ಕಾಮಗಾರಿ ಪೂರ್ತಿಯಾಗದೇ ಟೂಲ್ ಸಂಗ್ರಹಿಸುವದು ಕಾನೂನು ಬಾಹಿರವಾಗಿದೆ. ಈಗ ಸಮಸ್ಯೆಯನ್ನು ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇಂದು ಧರಣಿ ಆರಂಭಿಸಿದ್ದೇವೆ. ಕೂಡಲೇ ಸಂಬAಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದರೆ ದಿನೇ ದಿನೇ ಹೋರಾಟವನ್ನು ಉಗ್ರವಾಗಿಸುತ್ತೇವೆ ಎಂದಿದ್ದರು.ಬಳಿಕ ಪ್ರತಿಭಟನಾ ಸ್ಥಳಕ್ಕೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಕಾರ್ಯಪಾಲಕ…
