Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ನಾಡಿನ ಪ್ರತಿಯೋಂದು ಹಳ್ಳಿ ಪಟ್ಟಣ ನಗರ ಪ್ರದೇಶಗಳಲ್ಲಿ ಸಂಗೀತ ಲೋಕದ ಜ್ಞಾನ ಪಡೆಯಲು ಹೊಸ ಹೊಸ ಪ್ರತಿಭೆಗಳು ಉದಯಿಸಬೇಕು ಎಂದು ಜಾನಪದ ಕಲಾವಿದ ಬೀಮಪ್ಪ ಸಂಗಪ್ಪ ಬೀಳಗಿ ಹೇಳಿದರು.ಕೊಲ್ಹಾರ ತಾಲೂಕ ಜಾನಪದ ಪರಿಷತ್ ಹಾಗೂ ಕಲಾವಿದರ ಬಳಗದವರು ಪಟ್ಟಣದಲ್ಲಿ ಹಮ್ಮಿಕೊಂಡ ಗದುಗಿನ ವಿರೇಶ್ವರ ಪುಣ್ಯಾಶ್ರಮದ ಹಿಂದಿನ ಪೀಠಾಧಿಕಾರಿಗಳಾದ ಪಂಡಿತ ಪುಟ್ಟರಾಜ ಗವಾಯಿವರ ಹದಿನೈದನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿಶ್ವಕ್ಕೆ ಗಾಯನ ಲೋಕವನ್ನಷ್ಟೆ ಅಲ್ಲದೆ ವಿವಿಧ ಸಂಗೀತ ಕ್ಷೇತ್ರದಲ್ಲಿ ಪ್ರತಿಭಾನ್ವೀತ ಕಲಾವಿದರನ್ನು ಪರಿಚಯಿಸಿದ ಮಹಾನ್ ದೈವಿಶಕ್ತಿಯ ಗುರು ಪುಟ್ಟರಾಜ ಗವಾಯಿಗಳು ಎಂದರು.ಜಾನಪದ ಪರಿಷತ್ ತಾಲೂಕಾ ಅಧ್ಯಕ್ಷ ಮಲ್ಲಪ್ಪ ಈಶ್ವರಪ್ಪ ಗಣಿ ಮಾತನಾಡಿ ಆದುನಿಕ ಜಗತ್ತಿನಲ್ಲಿ ಹಿಂದಿನ ತಲೆಮಾರಿನ ಹಳೇ ಕಾಲದ ಭಜನೆ ಕೀರ್ತನೆ ಹರಿದಾಸ ಇನ್ನೀತರ ಕಲೆಯನ್ನು ಉಳಿಸಿಕೊಂಡು ಮುಂದಿನ ಕಲೆಯನ್ನು ಆರಾಧಿಸುವ ಆಸಕ್ತ ಯುವ ಸಮೂಹ ಕಲಿಕೆಯಲ್ಲಿ ತೊಡಗಿಕೊಂಡು ಸಂಗೀತ ಕ್ಷೇತ್ರದಲ್ಲಿ ನವತಾರೆಗಳು ಉದಯಿಸಲು ಪುಟ್ಟರಾಜರ ಕ್ರಪೆ ಆಗಲಿ ಎಂದರು.ಈ ಸಂದರ್ಭದಲ್ಲಿ ಈರಯ್ಯ ಹಲಗಯ್ಯ ಮಠಪತಿ ಸಾನೀಧ್ಯ ವಹಿಸಿದ್ದರು…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲ್ಲೂಕಿನ ತೆಲಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಗೃಹ ಆರೋಗ್ಯ ಯೋಜನೆಯ ಕಾರ್ಯಕ್ರಮ ವೈದ್ಯಾಧಿಕಾರಿ ಮಹಮ್ಮದ್ ಶಫಿ ಬಾಗವಾನ ಉದ್ಘಾಟಿಸಿದರು.ತೆಲಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಹಮ್ಮದ್ ಶಫಿ ಬಾಗವಾನ ಮಾತನಾಡಿ, ಗೃಹ ಆರೋಗ್ಯ ಯೋಜನೆಯು ಕರ್ನಾಟಕ ಸರ್ಕಾರ ಪ್ರಾರಂಭಿಸಿದ ಆರೋಗ್ಯ ಉಪಕ್ರಮವಾಗಿದ್ದು, ಅಗತ್ಯ ಆರೋಗ್ಯ ಸೇವೆಗಳನ್ನು ನೇರವಾಗಿ ನಿವಾಸಿಗಳ ಮನೆ ಬಾಗಿಲಿಗೆ ಒದಗಿಸುತ್ತಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳ ಆರಂಭಿಕ ಪತ್ತೆ ಮತ್ತು ನಿರ್ವಹಣೆಯನ್ನು ಹೆಚ್ಚಿಸುವ ಮೂಲಕ ತೊಡಕುಗಳು ಮತ್ತು ಅಕಾಲಿಕ ಮರಣಗಳನ್ನು ಕಡಿಮೆ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ. ಮಧುಮೇಹ, ರಕ್ತದೊತ್ತಡ ಮತ್ತು ಅಧಿಕ ರಕ್ತದೊತ್ತಡದಂತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಯೋಜನೆಯಾಗಿದೆ ಎಂದ ಹೇಳಿದರು.ಸಮುದಾಯ ಆರೋಗ್ಯ ಅಧಿಕಾರಿ ಶರಣಬಸು ಗುದ್ದಿ ಮಾತನಾಡ, ಕರ್ನಾಟಕದ ಗೃಹ ಆರೋಗ್ಯ ಯೋಜನೆಯ ಮುಖ್ಯ ಉದ್ದೇಶವೆಂದರೆ ರೋಗಗಳನ್ನು ಶೀಘ್ರವಾಗಿ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಶಿಕ್ಷಕರು ಪಣ ತೊಡಬೇಕು, ಶಿಸ್ತು ಬದ್ದವಾಗಿ ಮಕ್ಕಳಿಗೆ ಕಲಿಸಬೇಕು ಎಂದು ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ತಾಲ್ಲೂಕಿನ ಕೋಟ್ಯಾಳ ಗ್ರಾಮದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ವಿಜಯಪುರ ವತಿಯಿಂದ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಯಾಗಿ ಉನ್ನತಿಕರಿಸಿ ಒಂಬತ್ತನೇ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.2025-26 ನೇ ಸಾಲಿನಲ್ಲಿ ವಿಜಯಪುರ ಗ್ರಾಮೀಣ ತಾಲ್ಲೂಕಿನ ಬಬಲೇಶ್ವರ ಮತಕ್ಷೇತ್ರದಲ್ಲಿ ಸಚಿವರಾದ ಎಂ. ಬಿ. ಪಾಟೀಲ ಅವರ ಶೈಕ್ಷಣಿಕ ಕ್ರಾಂತಿ ಹಾಗೂ ಅವರ ಇಚ್ಚಾ ಶಕ್ತಿಯಿಂದ ಹೊನವಾಡ, ಕೋಟ್ಯಾಳ, ಸಿದ್ದಾಪೂರ(ಅ), ತಿಗಣಿಬಿದರಿ, ನಿಡೋಣಿ, ಕಾತ್ರಾಳ ಒಟ್ಟು ಆರು ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿರುವರು ಎಂದರು.ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಮಧ್ಯದಲ್ಲಿ ಶಾಲೆ ಬಿಡುವದು, ಬಾಲ್ಯ ವಿವಾಹ ತಡೆಗಟ್ಟಲು , ಬಡವರ ಹಾಗೂ ಹಿಂದುಳಿದ ಕುಟುಂಬಗಳಿಗೆ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಹಳೆ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಕೃಷ್ಣಾ ಗಜಾನನ ಮಹಾಮಂಡಳ ಪ್ರತಿಷ್ಠಾಪಿಸದ ಗಣಪತಿ ಮೂರ್ತಿ ಮಂಟಪದ ಮುಂಭಾಗ ಮಂಗಳವಾರ ಜನರಿಗೆ ಸಾಮೂಹಿಕ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಅಪಾರ ಸಂಖ್ಯೆಯ ಜನರು ಪ್ರಸಾದ ಸ್ವೀಕರಿಸಿದರು. ಕೃಷ್ಣಾ ಗಜಾನನ ಮಹಾಮಂಡವು ಹಾಕಿದ ಪ್ಲೆಕ್ಸಿನಲ್ಲಿ ನಮ್ಮ ಮಂಡಳ ನಮ್ಮ ಕುಟುಂಬ, ರಕ್ತ ಸಂಬಂಧಕ್ಕಿಂತ ಸ್ನೇಹದ ನಂಟು ಶಾಶ್ವತ ಎಂಬ ಬರಹ ನೋಡುಗರನ್ನು ಗಮನ ಸೆಳೆಯಿತು. ಪ್ರಸಾದಕ್ಕಾಗಿ ೫ ಕ್ವಿಂಟಾಲ್ ಸುರಾಮ,೧೧ ಕ್ವಿಂಟಾಲ್ ಅನ್ನ, ಸಾಂಬಾರು ತಯಾರಿಸಲಾಗಿದೆ ಎಂದು ಕೃಷ್ಣಾ ಗಜಾನನ ಮಹಾಮಂಡಳದ ಶ್ರೀಕಾಂತ ಕೊಟ್ರಶೆಟ್ಟಿ ಹೇಳಿದರು.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ರಾಜ್ಯಾದ್ಯಂತವಾಗಿ ಹಮ್ಮಿಕೊಂಡಿರುವ ಬಸವ ಸಂಸ್ಕ್ರತಿ ಅಭಿಯಾನದ ಭವ್ಯ ರಥಯಾತ್ರೆ ಸೋಮವಾರ ಪ್ರಮುಖ ಬೀದಿಗಳಲ್ಲಿ ಸಾಗಿ ಬರುವ ಸಂದರ್ಭದಲ್ಲಿ ಜಾಮೀಯ ಮಸೀದಿ ಹತ್ತಿರ ರಥ ಆಗಮಿಸಿದ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ರಥಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಮೆರವಣಿಗೆಯಲ್ಲಿ ಸಾಗಿದ ಶ್ರೀಗಳಿಗೆ,ಬಸವ ಭಕ್ತರಿಗೆ, ರಥಕ್ಕೆ ಪುಷ್ಪ ವೃಷ್ಟಿ ಮಾಡಿದರು.ಮೆರವಣಿಗೆಯಲ್ಲಿ ಸಾಗಿದ ಎಲ್ಲ ಜನರಿಗೆ ಶರಬತ್ತು, ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಗಮನ ಸೆಳೆದರು.ಈ ಸಂದರ್ಭದಲ್ಲಿ ಜಾಮೀಯಾ ಮಸೀದಿಯ ಅಧ್ಯಕ್ಷ ಡಾ.ಶಬ್ಬೀರ ನದಾಫ, ಮುಖಂಡರಾದ ಕಮಲಸಾಬ ಕೊರಬು, ಸಲೀಂ ಸಯ್ಯದ, ಇಸ್ಮಾಯಿಲ ಭಾಗವಾನ, ಚಾಂದಭಾಷಾ ಕೊರಬು, ಎಚ್.ಆರ್.ಬಾಗವಾನ, ಶಬ್ಬೀರ ನಾಯ್ಕೋಡಿ, ಅಲ್ಲಾಭಕ್ಷ ಕೊರಬು, ಅಸ್ಲಂ ಮುಜಾವರ, ಜಾಕೀರ ನದಾಫ, ರಫೀಕ ಹೊಕ್ರಾಣಿ, ಬಸೀರ ಹೊಕ್ರಾಣಿ, ಅಬ್ದುಲರಜಾಕ ಬಾಗವಾನ, ಈಸೂ- ಬಾಗವಾನ, ತೌಫೀಕ ಶಾಬಾದಿ, ರಫೀಕ ನಂದವಾಡಗಿ, ಕೆ.ಎ.ವಾಲೀಕಾರ, ಸೇರಿದಂತೆ ಅನೇಕರು ಇದ್ದರು.

Read More

ಬಿಬಿಎಂಪಿ ಇನ್ನು ಇತಿಹಾಸ | ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಇನ್ನು ಇತಿಹಾಸದ ಪುಟ ಸೇರಿದ್ದು, ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ರಾಜ್ಯ ಸರ್ಕಾರ ಬಿಬಿಎಂಪಿಯನ್ನು ಗ್ರೇಟರ್​ ಬೆಂಗಳೂರು ಪ್ರಾಧಿಕಾರದಡಿ ಐದು ಮಹಾನಗರ ಪಾಲಿಕೆಗಳನ್ನಾಗಿ ರಚನೆ ಮಾಡಿ ಮಂಗಳವಾರ ಅಧಿಸೂಚನೆ ಹೊರಡಿಸಿದೆ.ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಲಾದ 2024ರ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿಯಲ್ಲಿ ಬಿಬಿಎಂಪಿಯನ್ನು ಐದು ಮಹಾನಗರ ಪಾಲಿಕೆಗಳಾಗಿ ರಚನೆ ಮಾಡಿ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.ಈ ಕ್ರಮವು ಬೆಂಗಳೂರು ಪಶ್ಚಿಮ ನಗರ ಮಹಾನಗರ ಪಾಲಿಕೆ, ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, ಬೆಂಗಳೂರು ಪೂರ್ವ ಮಹಾನಗರ ಬಾಲಿಕೆ ಮತ್ತು ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆಗಳ ರಚನೆಗೆ ದಾರಿ ಮಾಡಿಕೊಡುತ್ತದೆ.ಅಧಿಸೂಚನೆಯಲ್ಲಿ ಐದು ನಿಗಮಗಳ ಗಡಿಗಳನ್ನು ಸಹ ನಿಗದಿಪಡಿಸಲಾಗಿದೆ.ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಅಡಿಯಲ್ಲಿ ಹೊಸದಾಗಿ ರಚನೆಯಾದ ಮಹಾನಗರ ಪಾಲಿಗಳಿಗೆ ವ್ಯಾಪಕ ಆಡಳಿತಾತ್ಮಕ ಅನುಭವ ಹೊಂದಿರುವ ಹಿರಿಯ ಅಧಿಕಾರಿಗಳನ್ನು ಆಯುಕ್ತರನ್ನಾಗಿ ನೇಮಿಸಲಾಗುವುದು ಎಂದು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಕೆಸ್ಕಾಂ ನ ಶಾಖಾ ಕಚೇರಿಯಲ್ಲಿ ಸೆ.೪ ರಂದು ಬೆಳಿಗ್ಗೆ ೧೧ಕ್ಕೆ ಸಲಹಾ ಸಮಿತಿಯ ಸಭೆಯನ್ನು ಆಯೋಜಿಸಲಾಗಿದ್ದು, ಸಮಿತಿಯ ಎಲ್ಲ ಸದಸ್ಯರು, ರೈತರು ಹಾಗೂ ಗ್ರಾಹಕರು ಭಾಗಿಯಾಗುವಂತೆ ಹೆಸ್ಕಾಂ ನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಾಜಶೇಖರ ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿಗೆ ಅಲೆಮಾರಿ ಸಮುದಾಯದವರ ಆರ್ಥಿಕ ಅಭಿವೃದ್ಧಿಗಾಗಿವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗಾಗಿ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಬ್ಯಾಂಕಿನ ಸಹಯೋಗದೊಂದಿಗೆ ಉದ್ಯಮಶೀಲತಾ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಪ್ರೇರಣಾ ಮ್ಯಕ್ರೋ ಕ್ರೆಡಿಟ್ ಯೋಜನೆಗಳಡಿ ಅರ್ಜಿಯನ್ನು ಆನಲೈನ್ ಮೂಲಕ ಸಲ್ಲಿಸಬಹುದಾಗಿದೆ.ಸೆಪ್ಟೆಂಬರ್ ೧೭ಕೊನೆಯ ದಿನವಾಗಿದೆ.೨೦೨೩-೨೪ ಮತ್ತು ೨೦೨೪-೨೫ನೇ ಸಾಲಿನಲ್ಲಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖಾ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿಗೆ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರು ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಅನುಷ್ಠಾನ ಸಮಿತಿ ರಚಿಸಬೇಕಾಗಿದ್ದು, ಸಮಿತಿಯ ನಾಮನಿರ್ದೇಶಿತ ಸದಸ್ಯತ್ವಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ ಅರ್ಹ ಆಸಕ್ತರು ದಿನಾಂಕ : ೨೦-೦೯-೨೦೨೫ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶೇ.೨೪.೧೦% ಹಾಗೂ ಶೇ.೭.೨೫% ಯೋಜನೆಯಡಿ ೨೦೨೫-೨೬ನೇ ಸಾಲಿಗೆ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ವಾರ್ಡ್ ನಂ.೦೪ ಹಂಚನಾಳ ತಾಂಡಾ ಪರಿಶಿಷ್ಟ ಜಾತಿ ಜನರಿಗೆ ಕುಡಿಯುವ ನೀರು ಸಂಪರ್ಕ ಕಲ್ಪಿಸುವುದು ಹಾಗೂ ಶೇ.೭.೨೫% ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಅಂತರರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಹಾಗೂ ಇತರೆ ಕ್ರೀಡಾ ಪಟುಗಳಿಗೆ ಕ್ರೀಡಾ ಸಹಾಯ ಧನ ನೀಡುವ ಯೋಜನೆಯಾಗಿದೆ.ಆಸಕ್ತ ಅರ್ಹ ಫಲಾನುಭವಿಗಳು ಪಾಲಿಕೆ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ ೩೦ರೊಳಗಾಗಿ ಪಾಲಿಕೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪಾಲಿಕೆ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More