Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವ ಕೋಲ್ಹಾರ ಮೂಲ ಸ್ಥಾವರದಿಂದ ಜಲನಗರ ಪಂಪಿನ ಮನೆಯವರೆಗೆ ಅಳವಡಿಸಿರುವ ೯೬೫/೯೦೦ಎಂ.ಎಂ ವ್ಯಾಸದ ಎಂ.ಎಸ್-ಪಿ.ಎಸ್.ಸಿ ಮುಖ್ಯ ಏರು ಕೊಳವೆ ಮಾರ್ಗದ ಚೈನೇಜ ೬.೯೩೦ಕಿ.ಮೀ ಗರಸಂಗಿ ಹಳ್ಳದ ಹತ್ತಿರ, ದಿನಾಂಕ:೦೨.೦೯.೨೦೨೫ ರಂದು ೯೬೫ಮಿ.ಮೀ ವ್ಯಾಸದ ಎಂ.ಎಸ್ ಕೊಳವೆ ಮಾರ್ಗದ ಎಂ.ಎಸ್ ಮ್ಯಾನಹೋಲ್ ಬರ್ಸ್ಟ್ ಆಗಿದ್ದು ಹಾಗೂ ಚೈನೇಜ ೨.೪೦೬ಕಿ.ಮೀ ರಾಚಣ್ಣ ಗುಡಿ ಹತ್ತಿರ, ಚೈನೇಜ ೯.೩೩೨ಕಿ.ಮೀ ರೋಣಿಹಾಳ ಗ್ರಾಮದ ಹತ್ತಿರ, ಚೈನೇಜ ೧೩.೧೬೫ಕಿ.ಮೀ ರೋಣಿಹಾಳ ಕೆರೆ ಹತ್ತಿರ ಹಾಗೂ ಚೈನೇಜ ೪೧.೨೯೦ಕಿ.ಮೀ ಬಾರಾಕೋಟರಿ ತಾಂಡಾ ಹತ್ತಿರ ಹಾಗೂ ಮೊದಲನೇ ಹಂತದ ೪೫೦ಮಿ.ಮೀ ವ್ಯಾಸದ ಎಂ.ಎಸ್ ಮುಖ್ಯ ಏರು ಕೊಳವೆ ಮಾರ್ಗದ, ರಮಜಾನ ಹಳ್ಳ ಬಳೂತಿ ಕ್ರಾಸ ಹತ್ತಿರ ನೀರು ಸೋರುವಿಕೆಯ ತುರ್ತು ದುರಸ್ತಿ ಕಾಮಗಾರಿಗಳನ್ನು ಜಲ ಮಂಡಳಿ ವತಿಯಿಂದ ಕೈಗೊಳ್ಳಲಾಗಿದೆ.ಆದ್ದರಿಂದ, ಸೆಪ್ಟೆಂಬರ್ ೩ರಂದು ವಿಜಯಪುರ ನಗರಕ್ಕೆ ಕೋಲ್ಹಾರದ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸರಬರಾಜು ಆಗುವ ಪ್ರದೇಶಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ…
ಬಸವ ನಾಡಿನಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ | ಸಚಿವ ಶಿವಾನಂದ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವ ನಾಡು ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೊಂದಿರುವ ನಾಡಾಗಿದ್ದು, ಸಾಂಸ್ಕೃತಿಕ ಪರಂಪರೆ ಪೂರ್ವಿಕರ ಬಳುವಳಿ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಹೇಳಿದರು.ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವನ ಬಾಗೇವಾಡಿಯ ಶ್ರೀ ಬಸವೇಶ್ವರ ದೇವಾಲಯದ ಅಂತರಾಷ್ಟ್ರೀಯ ಶಾಲೆಯ ಶ್ರೀನಂದೀಶ್ವರ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಬಸವನ ಬಾಗೇವಾಡಿ ತಹಸೀಲ್ದಾರರಾದ ವಾಯ್. ಎಸ್. ಸೋಮನಕಟ್ಟಿ ಅವರು ಮಾತನಾಡಿ, ಇಂದಿನ ಯುವ ಪೀಳಿಗೆಯು ಮೊಬೈಲ್, ರೀಲ್ಸ್ನಂತಹ ಕೆಟ್ಟ ಸಂಸ್ಕೃತಿಯನ್ನು ಬಿಟ್ಟು ದೇಸಿಯ ಜಾನಪದ ಮತ್ತು ವಚನ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕೆಂದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಿವಕುಮಾರ ಪತ್ತಾರ ಕೊಳಲು ವಾದನ, ಮಹೇಶ್ ಭಂಟನೂರ ಸುಗಮ ಸಂಗೀತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಅತಿವೃಷ್ಟಿ ಮಳೆಯಿಂದ ಬೆಳೆಗಳು ಒಣಗಿ ಹೋಗುತ್ತಿವೆ. ಹೆಸರು, ಉದ್ದು, ಸೊಯಾಬಿನ್, ಹತ್ತಿ, ಮೆಕ್ಕೆಜೋಳ, ಸಜ್ಜೆ ಹಾಗೂ ತೊಗರಿ ಸೇರಿದಂತೆ ಅನೇಕ ಬೆಳೆಗಳು ಒಣಗಿ ಅನ್ನದಾತ ಸಂಕಷ್ಟದಲ್ಲಿದ್ದಾನೆ. ಈ ಕೂಡಲೇ ಹಾನಿಯಾದ ಬೆಳೆ ಸಮಿಕ್ಷೆ ನಡೆಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಮುಂದಾಗಲಿ ಮತ್ತು ವಿಶೇಷ ಪರಿಹಾರ ನೀಡಬೇಕೆಂದು ಶಿರಸ್ತೆದಾರ ಎಸ್ ಆರ್ ಮುಜಗೊಂಡ ಅವರಿಗೆಕರ್ನಾಟಕ ಪ್ರಾಂತ ರೈತ ಸಂಘ (ಕೆ.ಪಿ.ಆರ್.ಎಸ್) ತಾಲೂಕಾ ಸಮಿತಿಯಿಂದ ಮನವಿ ಸಲ್ಲಿಸಿದರು.ನಗರದ ತಾಲ್ಲೂಕು ಆಡಳಿತ ಸೌಧದ ಎದುರು ಪ್ರತಿಭಟಿಸಿ ಕರ್ನಾಟಕ ಪ್ರಾಂತ ರೈತ ಸಂಘ ತಾಲ್ಲೂಕು ಅಧ್ಯಕ್ಷ ಭೀಮರಾಯ ಪೂಜಾರಿ ಮಾತನಾಡಿ, ಜಿಲ್ಲೆಯ ಆರ್ಥಿಕತೆ ನಿರ್ಧಾರವಾಗುವುದೇ ತೊಗರಿ, ಹೆಸರು ಉದ್ದು, ಸೊಯಾಬಿನ್, ಹತ್ತಿ ಬೆಳೆ, ಮೆಕ್ಕೆಜೋಳ, ಸಜ್ಜೆ ಉತ್ತಮ ಫಸಲು ಬಂದಾಗ ಬಂದರೆ ಮಾತ್ರ. ಆದರೆ ಅದೆ ಬೆಳೆಗಳು ಕೈ ಕೊಟ್ಟಾಗ ಅನ್ನದಾತರ ಬದುಕು ಹಾಗೂ ಜಿಲ್ಲೆಯ ಆರ್ಥಿಕ ಪರಿಸ್ಥಿತಿ ಏನಾಗಿರಬಾರದು. ಅದಕ್ಕಾಗಿ ಅತ್ಯಂತ ಕಷ್ಟದ ಶೋಚನೀಯ ಪರಿಸ್ಥಿತಿಯಲ್ಲಿರುವ ಅನ್ನದಾತನ ಬದುಕಿಗೆ ಆಶ್ರಯಬೇಕಾಗಿದ್ದು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಡಿಜೆ ಸಹಿತ ಯಾವುದೇ ಅಬ್ಬರದ ಸಂಗೀತವಿಲ್ಲದೇ, ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಹಿಡಿದು, ಬಸವಣ್ಣನವರ ವಚನ, ಶಿವನಾಮ ಹಾಗೂ ಭಜನೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣೇಶ ವಿಸರ್ಜನೆ ಜರುಗಿತು.ತಾಲ್ಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಭಾನುವಾರ ಸಾಯಂಕಾಲ ಗಣೇಶ ವಿಸರ್ಜನೆಯ ಅಂಗವಾಗಿ ಸೈಕಲ್ಗಳ ಮೂಲಕ ಮೆರವಣಿಗೆಯನ್ನು ಮಾಡಿ, ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಹಿಡಿದುಕೊಂಡು, ಬಸವಣ್ಣನವರ ವಚನಗಳನ್ನು ಹಾಡುತ್ತಾ, ಜೊತೆಗೆ ಶಿವನಾಮ ಪಠಿಸುತ್ತಾ, ಭಜನೆಯೊಂದಿಗೆ ಗ್ರಾಮದ ಪ್ರತಿಯೊಂದು ಬೀದಿಗಳ ಮೂಲಕ ಹಾದು ಬಹಳ ವಿಶಿಷ್ಟ ರೀತಿಯಲ್ಲಿ ಗಣನಾಥನ ವಿಸರ್ಜನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದÀ ಅಧ್ಯಕ್ಷ ಜಿ.ಪಿ.ಬಿರಾದಾರ, ಮುತ್ತು ಮೆಳ್ಳಿಗೇರಿ, ಮಲಕು ಸುರಗಿಹಳ್ಳಿ, ಕಲ್ಲಪ್ಪ ಮೂಲಿಮನಿ, ಸಿದ್ದು ಹದರಿ, ವಿಶ್ವನಾಥ ಸರಬಡಗಿ, ಸಿದ್ದು ಬಡಿಗೇರ, ಹಣಮಂತ ನಾಗರಳ್ಳಿ, ಸಂಜು ನಾಯ್ಕೋಡಿ, ಶಿವಪುತ್ರ ಗಬ್ಬೂರ, ಸಂದೀಪ ಬಿರಾದಾರ, ಸಂತೋಷ ಬಿರಾದಾರ, ಸಾಹೇಬಗೌಡ ಸುರಗಿಹಳ್ಳಿ, ಸಾಹೇಬಗೌಡ ನಾಗರಳ್ಳಿ, ಸಿದ್ದಾರ್ಥ ವಾಲೀಕಾರ ಹಾಗೂ ಶಾಲಾಮಕ್ಕಳು ಇದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ ಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿ ಶ್ರೀಮತಿ ಕಾಶಿಬಾಯಿ ಬಿರಾದಾರ ಅವರ ವೃತ್ತಿಯಿಂದ ನೀವೃತ್ತಿಹೊಂದಿದ ಹಿನ್ನೆಲೆ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ವೇಳೆಯಲ್ಲಿ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಮಾತನಾಡಿ ನಮ್ಮ ಮಹಾವಿದ್ಯಾಲಯದಲ್ಲಿ ಅತ್ಯಂತ ಕರ್ತವ್ಯ ನಿಷ್ಠೆಯಿಂದ, ಯಾವುದೆ ನ್ಯೂನ್ಯತೆ ಇಲ್ಲದೆ, ಪ್ರಾಮಾಣಿಕತೆಯಿಂದ ಸಂಸ್ಥೆಯಲ್ಲಿ ತಿಕೋಟಾದಿಂದ ವೃತ್ತಿ ಪ್ರಾರಂಭಿಸಿ ನಮ್ಮ ಮಹವಿದ್ಯಾಲಯ ಸೇರಿಂದಂತೆ ಒಟ್ಟು ೩೧ ವರ್ಷಗಳ ತಮ್ಮ ಸೇವೆಯನ್ನು ಗೈದಿದ್ದಾರೆ ಇವರ ನೀವೃತ್ತಿ ಜೀವನದ ಸುಖಕರವಾಗಿ ಸಾಗಲೆಂದು ಶುಭ ಹಾರೈಸಿದರು.ಈ ವೇಳೆಯಲ್ಲಿ ಎಲ್ ಎಸ್ ಪೂಜಾರಿ, ದುಲಂಗೆ ಮಾತನಾಡಿದರು.ಮಹಾವಿದ್ಯಾಲಯದಿಂದ ಶ್ರೀಮತಿ ಕಾಶಿಬಾಯಿ ಬಿರಾದಾರ ದಂಪತಿಗಳಿಗೆ ಸನ್ಮಾಸಿಲಾಯಿತು.ಈ ಸಂದರ್ಭಲ್ಲಿ ಬಿಎಲ್ಡಿಇ ಸಂಸ್ಥೆಯ ಕಛೇರಿ ನಿವೃತ್ತ ಅಧೀಕ್ಷಕರು ಶ್ರೀ.ಎಸ್.ಕೆ ಬಿರಾದಾರ, ಕೆ.ಕೆ.ಪಾಟೀಲ, ಉಪ್ರಾಚಾರ್ಯ ಡಾ.ಅನೀಲ.ಭೀ,ನಾಯಕ, ಐಕ್ಯೂಎಸಿ ನಿರ್ದೇಶಕ ಡಾ.ಪಿ.ಎಸ್ ಪಾಟೀಲ, ಕಛೇರಿ ಆಧೀಕ್ಷಕ ಎಸ್.ಬಿ.ಹೇರಲಗಿ, ಜಗದೀಶ ಪಾಟೀಲ ಸೇರಿದಂತೆ ಇನ್ನಿತರ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.ಡಾ.ಉಷಾದೇವಿ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶೇಷ ಅತಿಥಿ ಉಪನ್ಯಾಸ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೈನಂದಿನ ಜೀವನದಲ್ಲಿ ವ್ಯಾಯಾಮವು ನಮ್ಮ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಹಲವಾರು ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ದೈಹಿಕ ವ್ಯಾಯಾಮದಲ್ಲಿ ತೊಡಗುವುದು ಅವಶ್ಯಕ ಎಂದು ನಗರದ ಬಿ ಎಲ್ ಡಿ ಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ದೈಹಿಕ ನಿರ್ದೇಶಕಿ ಡಾ.ಸವಿತಾ ಅನ್ನೆಪ್ಪನವರ ಹೇಳಿದರು.ನಗರದ ಬಿ ಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ,ಕ್ರೀಡಾ ವಿಭಾಗದ ಸಹಯೋದಲ್ಲಿ ದಿನಾಂಕ ೩೦-೦೮-೨೦೨೫ ಶನಿವಾರದಂದು ಅಯೋಜಿಸಿದ ‘ದೈನಂದಿನ ಜೀವನದಲ್ಲಿ ಫಿಟ್ನೆಸ್ನ ಮಹತ್ವ’ ದ ಕುರಿತು ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ನಮ್ಮ ಜೀವನದಲ್ಲಿ ವ್ಯಾಯಾಮದ ಪ್ರಾಮುಖ್ಯತೆ ವಹಿಸುತ್ತದೆ ಅದರಂತೆ ನಿಯಮಿತವಾಗಿ ನಿದ್ರೆ,ಊಟ ಎಲ್ಲವನ್ನು ನಮ್ಮ ಜೀವನದ್ಲಿ ಫಿಟ್ನೆಸ್ಸ್ ಕಾಯ್ದುಕೊಳ್ಳಲು ಸಾಹಯಕ ಆದ್ದರಿಂದ ದಿನಂಪ್ರತಿಯಾಗಿ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಮಖಂಡಿ ಉಪವಿಭಾಗಾಧಿಕಾರಿಗಳ ಪಿಠೋಪಕರಣ ಜಪ್ತಿ ಮಾಡಲು ಆದೇಶ ಮಾಡಿದೆ. ನ್ಯಾಯಾಲಯದ ಆದೇಶದ ಮೇರೆಗೆ ವಕೀಲ ಎಲ್. ಎನ್. ಸುನಗದ ಅವರು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರ ಸರ್ಕಾರಿ ವಾಹನ ಜಪ್ತಿ ಮಾಡಿದ ಘಟನೆ ಸೋಮವಾರ ನಡೆದಿದೆ.ಘಟನೆ ಹಿನ್ನೆಲೆ: ಮುಧೋಳ ತಾಲೂಕಿನ ಬೆಳಗಲಿ ಗ್ರಾಮದ ಬಾಳಪ್ಪ ಕಪ್ಪಲಗುದ್ದಿ, ದರೆಪ್ಪ ಕಪ್ಪಲಗುದ್ದಿ ಎಂಬುವವರಿಗೆ ಸೇರಿದ 4 ಎಕರೆ 28 ಗುಂಟೆ ಜಮೀನನ್ನು ಕೆರೆ ನಿರ್ಮಾಣಕ್ಕೆಂದು 2005-06ರಲ್ಲಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಘಟನೆ ನಡೆದು ಹಲವು ವರ್ಷ ಕಳೆದರೂ ಈವರೆಗೂ ಸರ್ಕಾರ ಪರಿಹಾರ ನೀಡಿಲ್ಲ. ಆದ್ದರಿಂದ ಬಾಳಪ್ಪ ಮತ್ತು ದರೆಪ್ಪ ಕಪ್ಪಲಗುದ್ದಿ ಎಂಬ ರೈತರು ತಮ್ಮ ಜಮೀನಿಗೆ ಪರಿಹಾರ ದೊರಕಿಸಿಕೊಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಸುಶಾಂತ ಮಹಾವೀರ ಚೌಗಲೆ ಅವರು ಬಡ್ಡಿ ಸಮೇತ 43.33,306 ಪರಿಹಾರ ನೀಡುವಂತೆ ಆದೇಶ ನೀಡಿದ್ದರು.ಆದರೆ ಇದುವರೆಗೂ ಪರಿಹಾರ ನೀಡದ ಹಿನ್ನೆಲೆಯಲ್ಲಿ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸರ್ಕಾರ ಮುಳುಗಡೆ ಕೆಲಸ ಪೂರ್ಣಗೊಳಿಸಬೇಕು. ಸರ್ಕಾರ ಅನುದಾನ ನೀಡುತ್ತಿಲ್ಲ, ಕೆಲಸಗಳಾಗುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗಿದೆ. ಹಣಕ್ಕಾಗಿ ಮತ ಮಾರಿಕೊಂಡವರು ಚುನಾಯಿತ ಸದಸ್ಯರಿಂದ ಯಾವ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯ? ದುಡ್ಡಿಗಾಗಿ ವೋಟು ಹಾಕಿದವರು ಅಭಿವೃದ್ಧಿ ಕೇಳಲು ಹೇಗೆ ಸಾಧ್ಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದರು.ನಗರದ ಕಡಪಟ್ಟಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು ರಮಾನಿವಾಸ ನಿರೀಕ್ಷಣಾ ಮಂದಿರದಲ್ಲಿ ಸೋಮವಾರ ಸುದ್ದಿಗಾರ ರೊಂದಿಗೆ ಮಾತನಾಡಿದರು.ಅಭಿವೃದ್ಧಿ ಕೆಲಸಗಳನ್ನು ಕೇಳುವ ನೈತಿಕತೆಯನ್ನು ಹಣ ಪಡೆದ ಮತದಾರರು ಕಳೆದುಕೊಂಡಿದ್ದಾರೆ ಎಂದು ಹೇಳಿದರು.ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಕೇಂದ್ರಗಳಲ್ಲಿ ಶಾಲೆಗಳ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಸರ್ಕಾರಕ್ಕೆ ಮಾಹಿತಿ ನೀಡಿದ್ದೇನೆ. ಯಾವುದೇ ಕೆಲಸವಾಗುತ್ತಿಲ್ಲ ಎಂದು ಶಾಸಕ ಜಗದೀಶ ಗುಡಗುಂಟಿ ಸಭಾಪತಿಗಳ ಗಮನ ಸೆಳೆದಾಗ ಸಭಾಪತಿಗಳು ಈ ರೀತಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.ನಂತರ ಹಿರಿಯ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಹೊರಟ್ಟಿ ಅವರು, ಸಮಸ್ಯೆಯ ಕುರಿತು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಉತ್ತರ ಕರ್ನಾಟಕದ…
ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಚಡಚಣ: ಝಳಕಿ ಗ್ರಾಮದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸನ್೨೦೨೫-೨೬ನೇ ಸಾಲಿನ ಸಂಸ್ಕೃತಿಕ ಕ್ರೀಡೆ, ರಾ. ಸೇ. ಯೋ, ರೇಡ್ ಕ್ರಾಸ್, ಸ್ಕೌಟ್ & ಗೈಡ್ಸ್ ಹಾಗೂ ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಬಿ.ಎ., ಬಿ.ಕಾಮ್., ಬಿ.ಎಸ್.ಸಿ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಉದ್ಘಾಟನೆಯನ್ನು ಶಾಸಕ ಯಶವಂತರಾಯಗೌಡ ಪಾಟೀಲ್ ಜ್ಯೋತಿಬೆಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ವಿದ್ಯಾರ್ಥಿಗಳಿಗೆ ಬೇಕಾಗುವ ಶಿಕ್ಷಣ ಕೊಡೊದು ಶಿಕ್ಷಕರ ಕರ್ತವ್ಯ, ಅದನ್ನ ಉಪಯೋಗ ಪಡಿಸಿಕೊಂಡು ಜೀವನದಲ್ಲಿ ಪ್ರಗತಿ ಸಾಧಿಸೋದು ವಿದ್ಯಾರ್ಥಿಗಳ ಆದ್ಯಕರ್ತವ್ಯ ಎಂದರು, ನಮ್ಮ ಹಿರಿಯರು ಶಾಲಾ, ಕಾಲೇಜುಗಳಿಗೆ ದೇವಸ್ಥಾನ ಎಂದು ಶಿಕ್ಷಕರಿಗೆ ದೇವರು ಎಂದು ವಿದ್ಯಾರ್ಥಿಗಳಿಗೆ ಪೂಜಾರಿ ಸ್ಥಾನ ಕೊಟ್ಟಿರೋದು ಸುಮ್ಮನೆ ಅಲ್ಲ, ಶಾಲೆ ಮಠ ಮಾನ್ಯಗಳಿಗಿಂತ ದೊಡ್ಡದು, ಅದಕ್ಕಾಗಿ ಇವತ್ತು ಜಿಲ್ಲೆಯಲ್ಲಿ ಇರುವಂತಹ ಉನ್ನತ ಮಟ್ಟದ ಶಾಲಾ ಕಾಲೇಜುಗಳು ನಮ್ಮ ಇಂಡಿ ತಾಲೂಕಿನಲ್ಲಿ ಇರೋದು ನಮ್ಮ ಪುಣ್ಯ ಇದಕ್ಕೆಲ್ಲ ಕಾರಣ ನಮ್ಮ ಸರ್ಕಾರದ…
ಸಿಟಿ ಸರ್ವೇ ವ್ಯಾಪ್ತಿಯಲ್ಲಿ ಬರದಿದ್ದರೂ ಪ.ಪಂ.ನಿಂದ ಶೇ.40 ಉತಾರೆ ಹಂಚಿಕೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಇತ್ತೀಚಿಗೆ ಪಟ್ಟಣದ ಹೊರವಲಯದಲ್ಲಿ ನಿರ್ಮಾಣವಾಗಿರುವ ಡೈಮಂಡ ಪಾರ್ಕ ಸಂಪೂರ್ಣ ಕಾನೂನ ಬಾಹೀರವಾಗಿ ನಿರ್ಮಿಸಲಾಗಿದೆ ಎಂದು ಸೋಮಶೇಖರ ಚನ್ನಪ್ಪ ಪಟ್ಟಣಶೆಟ್ಟಿ ಆರೋಪಿಸಿದ್ದಾರೆ.ಪಟ್ಟಣವು ಗ್ರಾ.ಪಂ.ನಿಂದ ಪ.ಪಂ.ಗೆ ಮೇಲ್ದಜೆಗೇರಿ ಸುಮಾರು 9 ವರ್ಷ ಗತಿಸಿವೆ. ಆದರೆ, ಗ್ರಾ.ಪಂ.ನಿಂದ ಪ.ಪಂ.ಗೆ ಮೇಲ್ದಜೆಗೇರುವ ಸಮಯದಲ್ಲಿ ಹೊರಡಿಸಿದ ರಾಜ್ಯಪತ್ರದಲ್ಲಿ ನಮೂದಿಸಿದ ಸರ್ವೇ ನಂಬರಗಳ ಪೈಕಿ ಸಧ್ಯ ನಿರ್ಮಿಸಲಾಗಿರುವ ಡೈಮಂಡ ಪಾರ್ಕನ ಸ.ನಂ. 244/2, 245/1, 245/2, 246/* ಗಳು ಈ ಜಮೀನವು ಸಿಟಿ ಸರ್ವೇ ವ್ಯಾಪ್ತಿಯಲ್ಲಿ ಬರುವುದಿಲ್ಲ. ಆದರೂ ಈ ಸ.ನಂ.ಗಳನ್ನು ಭೂಪರಿವರ್ತನೆ ಮಾಡಿ, ಸುಮಾರು 40 ಎಕರೆ 38 ಗುಂಟೆ ಜಾಗೆಯಲ್ಲಿ ವಿವಿಧ ಅಳತೆಯ 759 ಪ್ಲಾಟುಗಳನ್ನು ಪೈಕಿ ಶೇ.40 ಪ್ಲಾಟುಗಳ ಉತಾರೆಯನ್ನು ಪ.ಪಂ.ಯಿಂದ ಪೂರೈಸಲಾಗಿದೆ ಎಂದು ಆರೋಪಿಸಿದ ಅವರು, ಈ ಪಾರ್ಕ ಎಲ್ಲ ಕಾನೂನುಗಳನ್ನು ಗಾಳಿಗೆ ತೂರಿ ಪಾರ್ಕನ್ನು ನಿರ್ಮಾಣ ಮಾಡಿದ್ದರೂ ಕೂಡ ಪ.ಪಂ.ನವರು ಇದನ್ನೆಲ್ಲ ಗಮನಿಸದೆ ಹೇಗೆ ಉತಾರೆಗಳನ್ನು ಪೂರೈಸಿದ್ದಾರೆ…
