Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಕ್ಷದ ಸಂಘಟನೆಗೆ ಸಹಕಾರಿಯಾಗುವಂತೆ ಹೂವಿನಹಿಪ್ಪರಗಿ ಬಿಜೆಪಿ ಮಂಡಲ ರಚನೆ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಮನವಿ ಸಲ್ಲಿಸಲಾಯಿತು.ಬೆಂಗಳೂರು ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ ದೇವರಹಿಪ್ಪರಗಿ ಹಾಗೂ ಸಿಂದಗಿ ಮತಕ್ಷೇತ್ರದ ಬಿಜೆಪಿ ಧುರೀಣರು ಹಾಗೂ ಪದಾಧಿಕಾರಿಗಳು ಮಂಡಲ ರಚನೆಯ ಕುರಿತು ಗಮನ ಸೆಳೆದರು.ಈ ಸಂದರ್ಭದಲ್ಲಿ ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಮಾತನಾಡಿ, ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ಸುಮಾರು ೧೩೫ ಕಿ.ಮೀ ವಿಸ್ತಾರವಾಗಿದ್ದು ಮುಂಬರುವ ಜಿಲ್ಲಾ, ತಾಲ್ಲೂಕು, ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳ ಕಾರಣದಿಂದ ಮತ್ತು ಮುಖ್ಯವಾಗಿ ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಅನುಕೂಲವಾಗುವಂತೆ ೪ ಜಿಲ್ಲಾ ಪಂಚಾಯಿತಿಗಳನ್ನೊಳಗೊAಡ ಹೂವಿನಹಿಪ್ಪರಗಿ ಮಂಡಲ ರಚನೆ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರು ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.ಮನವಿಗೆ ಸ್ಪಂದಿಸಿದ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಪಿ.ರಾಜೀವ ಮತ್ತು ಪ್ರೀತಮ್‌ಗೌಡ ನೂತನ ಮಂಡಲ ರಚನೆಯ ಭರವಸೆ ನೀಡಿದರು.ಸಿಂದಗಿ ಮತಕ್ಷೇತ್ರದ ಮಾಜಿ ಶಾಸಕ ರಮೇಶ ಭೂಸನೂರ, ದೇವರಹಿಪ್ಪರಗಿ ಮಂಡಲ ಅಧ್ಯಕ್ಷ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಮುಳಸಾವಳಗಿ ಗ್ರಾಮದ ರಾಜಶೇಖರ ಬಿರಾದಾರ ಕುಟುಂಬಕ್ಕೆ ಸೇರಿದ ಕಬ್ಬು ವಿದ್ಯುತ್ ಅವಘಡದಿಂದ ಬೆಂಕಿಗೆ ಆಹುತಿಯಾಗಿದ್ದು ಸುಮಾರು ೯ ಎಕರೆ ಬೆಳೆ ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ಜರುಗಿದೆ.ಗ್ರಾಮದ ಸರ್ವೇ ನಂ.೩೨೨/೨ ಹಾಗೂ ೩೨೩ರಲ್ಲಿ ಬೆಳೆಯಲಾಗಿದ್ದ ಕಬ್ಬು ಬೆಳೆ ವಿದ್ಯುತ್ ಅವಘಡದಿಂದ ಬೆಂಕಿ ತಗುಲಿ ಹಾನಿಗೀಡಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಸುಮಾರು ಗಂಟೆಗಳ ಕಾಲ ಹರಸಾಹಸ ಪಟ್ಟರು, ಪ್ರಯತ್ನ ಫಲಿಸಲಿಲ್ಲ. ಬೆಂಕಿ ನಂದಿಸುವುದರಲ್ಲಿ ಬಹುತೇಕ ಸುಟ್ಟು ಕರಕಲಾಗಿತ್ತು. ಕಬ್ಬು ಕಟಾವಿಗೆ ಬಂದು ಕಾರ್ಖಾನೆಗೆ ಸಾಗಿಸಬೇಕು ಎನ್ನುವಷ್ಟರಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ೮೦ ಸ್ಪಿಂಕರ್ ಪೈಪ್‌ಗಳು, ೪೦ ಪಿವಿಸಿ ಪೈಪ್‌ಗಳು, ೪೦೦ ಅಡಿ ಕೇಬಲ್ ವೈರ್ ಸೇರಿದಂತೆ ಒಟ್ಟು ೧೫.೯೫ ಲಕ್ಷ ರೂ.ಗಳ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕಂದಾಯ, ಕೃಷಿ, ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದು, ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಲವಾರು ತಿಂಗಳಿನಿಂದ ವಿದ್ಯುತ್ ಅವಘಡದಿಂದ ಕಬ್ಬು ಬೆಳೆ…

Read More

ದೇವರಹಿಪ್ಪರಗಿಯಲ್ಲಿ ಉತ್ತಮ ಶಿಕ್ಷಕ ಮತ್ತು ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ವಿತರಣೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶಾಲೆ ಮತ್ತು ಅಂಗನವಾಡಿಗಳು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಮೂಲಕೇಂದ್ರಗಳಾಗಿವೆ. ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ನೇಹಸಂಸ್ಥೆ, ಐಎಲ್‌ಪಿ-ಕಲಿಕಾ ಚೇತನ ಯೋಜನೆಯಡಿ ಜರುಗಿದ ಉತ್ತಮ ಶಿಕ್ಷಕ ಮತ್ತು ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಇಂದು ಸ್ಥಳೀಯ ಮಟ್ಟದಲ್ಲಿ ಇಂತವರನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ತುಂಬಾ ಒಳ್ಳೆಯ ಕಾರ್ಯ. ನಾವು ಪಡೆದುಕೊಂಡ ಪ್ರಶಸ್ತಿಗಳು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಎಂದರು.ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಮಾತನಾಡಿ, ಸದೃಢ ಮತ್ತು ಸಮರ್ಥ ಸಮಾಜದ ನಿರ್ಮಾಣಕ್ಕೆ ಶಿಕ್ಷಣವೇ ಭದ್ರಬುನಾದಿ. ಶಿಕ್ಷಣ ಗುಣಮಟ್ಟದಿಂದ ಕೂಡಿರಬೇಕೆಂದರೆ ಶಿಕ್ಷಕ,ಪಾಲಕ, ಬಾಲಕ ಈ ಮೂವರು ಕೊಂಡಿಯಾಗಿ ಇರಬೇಕು ಎಂದು ಹೇಳುತ್ತಾ, ಶಿಕ್ಷಕರ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘಿಸಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್ ವಾಲೀಕಾರ ಮಾತನಾಡಿ, ದೇಶದ ಭವಿಷ್ಯ ಅಡಗಿರುವುದು…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೊಂಡಗೂಳಿ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಭಾರತೀಯ ಭೀಮಸೇನೆಯ ಪದಾಧಿಕಾರಿಗಳು ಗ್ರಾಮ ಪಂಚಾಯಿತಿ ಪಿಡಿಓ ಎ.ಟಿ.ಅಂಗಡಿ ಅವರಿಗೆ ಮನವಿ ಸಲ್ಲಿಸಿದರು.ತಾಲ್ಲೂಕಿನ ಕೊಂಡಗೂಳಿ ಗ್ರಾಮಪಂಚಾಯಿತಿ ಕಾರ್ಯಾಲಯಕ್ಕೆ ಶುಕ್ರವಾರ ತೆರಳಿದ ಭೀಮಸೇನೆಯ ಕಾರ್ಯಕರ್ತರು ಮೂಲಭೂತ ಸೌಲಭ್ಯಗಳ ಕುರಿತು ಪಿಡಿಓ ಅವರ ಗಮನ ಸೆಳೆದರು.ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಟಿ.ಎಸ್.ಹೆಬ್ಬಾಳ ಮಾತನಾಡಿ, ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕ, ಕೇಶಿರಾಜ ವೃತ್ತದಲ್ಲಿ ಪ್ರಯಾಣಿಕರ ತಂಗುದಾಣ, ಶಾಲೆಯ ಶೌಚಾಲಯದ ಕಂಪೌAಡ ಗೋಡೆ ಎತ್ತರಿಸುವುದು ಹಾಗೂ ಮೈದಾನ ಸ್ವಚ್ಛತೆ, ಗ್ರಾಮದಲ್ಲಿನ ಮೂರು ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಕಿಟಕಿ, ಬಾಗಿಲುಗಳ ರಿಪೇರಿ, ಬಸವೇಶ್ವರ, ಕೇಶಿರಾಜ, ಅಂಬೇಡ್ಕರ್ ವೃತ್ತಗಳು ಹಾಗೂ ಹನುಮಾನ ದೇವಸ್ಥಾನದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಮಹಿಳಾ ಸಾರ್ವಜನಿಕ ಶೌಚಾಲಯ ನಿರ್ಮಾಣ, ಚರಂಡಿ ನಿರ್ಮಾಣ, ಬಸ್ ನಿಲ್ದಾಣ ಕಟ್ಟಡ ಎತ್ತರಿಸುವಿಕೆ, ಹೈಮಾಸ್ಟ್ ದೀಪಗಳ ಅಳವಡಿಕೆ ಹಾಗೂ ಹೊಸ ಬೀದಿದೀಪಗಳ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು…

Read More

ವಿಜಯಪುರದಲ್ಲಿ ಜ.೧೧ರಿಂದ ಮೈಸೂರು ಸ್ಯಾಂಡಲ್ ಸೋಪ್ ಮತ್ತು ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ | ಪ್ರಧಾನ ವ್ಯವಸ್ಥಾಪಕ ಕೆ.ಎಸ್.ಗಂಗಪ್ಪ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ಇದೇ ದಿನಾಂಕ ೧೧ ರಿಂದ ೧೦ ದಿನಗಳ ಕಾಲ ಮೈಸೂರು ಸ್ಯಾಂಡಲ್ ಸೋಪು ಹಾಗೂ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ `ಸೋಪ್ ಮೇಳ’ ಶೀರ್ಷಿಕೆಯಡಿಯಲ್ಲಿ ನಡೆಯಲಿದ್ದು, ಈ ಮೇಳಕ್ಕೆ ಪೂರಕ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮೈಸೂರ ಸ್ಯಾಂಡಲ್ ಸೋಪು ಉತ್ಪಾದನಾ ಘಟಕದ ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಗಂಗಪ್ಪ ಹೇಳಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ಮೈಸೂರು ಸ್ಯಾಂಡಲ್ ಸೋಪು ಹಾಗೂ ಉತ್ಪನ್ನಗಳು ಗ್ರಾಹಕರ ಜನಪ್ರಿಯತೆ ಪಡೆದುಕೊಂಡ ಬ್ರ್ಯಾಂಡ್ ಆಗಿದ್ದು, ಗುಣಮಟ್ಟಕ್ಕೆ ಹೆಸರುವಾಸಿಯಾಗಿವೆ. ಮೈಸೂರು ಸ್ಯಾಂಡಲ್ ಮೊದಲಾದ ಉತ್ಪನ್ನ ಉತ್ಪಾದಿಸುವ ಘಟಕ ೨೦೧೦, ೨೦೧೭ ನೇ ವರ್ಷ ಮತ್ತು ೨೦೧೯ ನೇ ಸಾಲಿಗೆ ಸಾರ್ವಜನಿಕ ಶ್ರೇಷ್ಠತೆಗಾಗಿ ಮುಖ್ಯಮಂತ್ರಿ ರತ್ನ ಪ್ರಶಸ್ತಿಯೂ ಸೇರಿದಂತೆ…

Read More

ಚಡಚಣ ಎಸ್.ಎಸ್.ಎಚ್ ಶಾಲೆಯಲ್ಲಿ ಖಾದ್ಯ ಮೇಳ ಉದ್ಘಾಟಿಸಿದ ಸಂಸ್ಥೆ ಅಧ್ಯಕ್ಷ ಶಂಕರ ಹಾವಿನಾಳ ಸಲಹೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಶ್ರೀ ಎಸ್.ಎಸ್.ಎಚ್. ಇಂಟರನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಖಾದ್ಯ ಪದಾರ್ಥಗಳ ಮಾರಾಟ ಮೇಳ ಶನಿವಾರ ನಡೆಯಿತು.ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷ ಶಂಕರ ಹಾವಿನಾಳ ಖಾದ್ಯ ಮೇಳ ಉದ್ಘಾಟಿಸಿ ಮಾತನಾಡಿ, ಇವತ್ತಿನ ಆಧುನಿಕ ಕಾಲದಲ್ಲಿ ವಿಜ್ಞಾನ ತಂತ್ರಜ್ಞಾನ ಶೀಘ್ರ ಗತಿಯಲ್ಲಿ ಬೆಳೆಯುತ್ತಿದ್ದು, ಮಕ್ಕಳಿಗೆ ಉದ್ಯೋಗಕ್ಕಾಗಿ ವ್ಯಾಪಾರ ವಹಿವಾಟು ಮತ್ತು ಲಾಭ ನಷ್ಟಗಳ ಅರಿವು ಅತೀ ಅವಶ್ಯವಾಗಿದೆ ಎಂದ ಅವರು, ಎಲ್ಲವೂ ಬೋಧನೆಯಿಂದ ಈಡೇರಿಸುವುದು ಅಸಾಧ್ಯ. ಆದರೆ ವಿದ್ಯಾರ್ಥಿಗಳಿಗೆ ತಮ್ಮ ಅಭಿರುಚಿಗಳಿಗೆ ತಕ್ಕಂತೆ ಹವ್ಯಾಸ ಬೆಳೆಸಿಕೊಳ್ಳುವ ಮನೋಭಾವ ಹೊಂದಬೇಕು ಎಂದರು.ಖಾದ್ಯ ತಿನಿಸುಗಳಾದ ಪಾನಿಪುರಿ, ಭೇಳ, ಸ್ಯಾಂಡವಿಚ್, ಕ್ಯಾರೇಟ್ ಹಲ್ವಾ, ಭಂಡಗ, ಖಾರಶೇಂಗಾ, ಫ್ರುಟ್ ಸಲಾಡ್, ಜ್ಯೂಸ್, ಮಿರ್ಜಿಭಜಿ, ಬಟಾಟಿ ಭಜಿ, ಗೋಬಿ ಮಂಚೂರಿ, ಮ್ಯಾಗಿ, ಚೂಡಾ, ಸಮೋಸಾ, ಕರದಂಟು, ಫೈನಾಪಲ್, ವಡಾಪಾವ್, ಮಿಸಾಳ್ ಪಾವ, ಮೈಸೂರಪಾಕ್, ಬೊಂಡಾ, ಫ್ಲಾವರ್ ಮಂಚೂರಿ, ಬದಾಮಿ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಪ್ರಾಥಮಿಕ ಶಾಲಾ ಹಂತದಲ್ಲೆ ಮಕ್ಕಳು ಶಿಕ್ಷಣ ಪಡೆಯುವದರ ಜೊತೆಗೆ ಅವರಲ್ಲಿ ದೈನಂದಿನ ಜೀವನದಲ್ಲಿ ವ್ಯವಹಾರಿಕ ಕೌಶಲ್ಯ ಹೆಚ್ಚಳಕ್ಕೆ ಶಾಲೆಯಲ್ಲಿ ಏರ್ಪಡಿಸಿದ ಮಕ್ಕಳ ಸಂತೆ ಸಹಕಾರಿಯಾಗಿದೆ ಎಂದು ಮಾಣಿಕೇಶ್ವರಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಚಿದಾನಂದ ಅವಟಿ ಹೇಳಿದರು.ತಾಲ್ಲೂಕಿನ ಕನಮಡಿ ಗ್ರಾಮದ ಮಾಣಿಕೇಶ್ವರಿ ಶಿಕ್ಷಣ ಸಂಸ್ಥೆಯ ಕನ್ನಡ ಹಾಗೂ ಆಂಗ್ಲ ಮಾಧ್ಯಮದ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ ಮಕ್ಕಳ‌ ಸಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಕ್ಕಳು ಸ್ಚಯಂ ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಲು ಈ ಸಂತೆ ಮೇಳ ಮಕ್ಕಳ ಬದುಕಿಗೆ ಸಹಕಾರಿಯಾಗಲಿದೆ ಎಂದರು.ತಾಲ್ಲೂಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚನ್ನಯ್ಯ ಮಠಪತಿ ಮಾತನಾಡಿ ಮಕ್ಕಳ ಸಂತೆ ಏರ್ಪಡಿಸುವದರಿಂದ ಮಕ್ಕಳಿಗೆ ತೂಕ, ಲೀಟರ್ ಮಾಪನ, ಸಂಕಲನ, ವ್ಯವಕಲನ, ಗುಣಾಕಾರ ಸೇರಿದಂತೆ ಇತರೆ ಮೌಖಿಕವಾಗಿ ಲೆಕ್ಕ ಮಾಡುವ ಕಲೆ ಬೆಳೆಯುವದು ಎಂದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ ಹೊಸಮನಿ, ಶಂಕರಗೌಡ ಬಿರಾದಾರ, ರಾಮು ಚಡಚಣ, ಮುಖ್ಯೋಪಾಧ್ಯಾಯ ಬಿ.ಎಸ್‌.ಪಡನೂರ, ಗ್ರಾಮಸ್ಥರು ಮಕ್ಕಳು ಇದ್ದರು.

Read More

ಇಂಡಿಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಇಂಡಿ ಪ್ರಖಂಡ ಸಮೀತಿ ವತಿಯಿಂದ ಮನವಿ ಸಲ್ಲಿಕೆ ಉದಯರಶ್ಮಿ ದಿನಪತ್ರಿಕೆ ಇಂಡಿ: ನೆರೆಯ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಶುಕ್ರವಾರ ವಿಶ್ವ ಹಿಂದೂ ಪರಿಷತ್ ಭಜರಂಗದಳ ಇಂಡಿ ಪ್ರಖಂಡ ಸಮೀತಿ ವತಿಯಿಂದ ಶುಕ್ರವಾರ ಪ್ರತ್ರಿಭಟನೆ ನಡೆಸಿ ಶಿರಸ್ಥೇದಾರ ಎಸ್.ಆರ್. ಮುಜಗೊಂಡ ಅವರಿಗೆ ಮನವಿ ಸಲ್ಲಿಸಿದರು.ಪ್ರತಿಭಟನೆಯಲ್ಲಿ ವಿ.ಹಿಂಪ ಜಿಲ್ಲೆಯ ಸಹ ಕಾರ್ಯದರ್ಶಿ ಸುನಿಲ ಜಮಖಂಡಿ, ಜಿಲ್ಲಾ ಪ್ರಮುಖರಾದ ಪ್ರಕಾಶ್ ಬಿರಾದಾರ, ಇಂಡಿ ನಗರ ಘಟಕದ ಅಧ್ಯಕ್ಷ ನೇತಾಜಿ ಪವಾರ, ಬಸವ ಸಮೀತಿ ಅಧ್ಯಕ್ಷ, ಹಿಂದಿನ ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ ಮಾತನಾಡಿ, ಹಿಂದೂಗಳನ್ನು ದ್ವಂಸ ಮಾಡಲು ಬಾಂಗ್ಲಾದೇಶದಲ್ಲಿ ಮರಣ ಮೃದುಂಗ ನಡೆದಿದೆ. ಕೂಡಲೆ ಅಲ್ಲಿನ ಸರಕಾರ ಅದನ್ನು ತಡೆದು ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು. ಭಾರತ ಸರಕಾರ ಇದರಲ್ಲಿ ಮಧ್ಯಸ್ಥಿಕೆ ವಹಿಸಿ ಅವರಿಗೆ ಎಚ್ಚರಿಕೆ ನೀಡಬೇಕು. ಹಿಂದೂಗಳ ನಾಶ ತಡೆಯುವ ಕಾರ್ಯವಾಗಬೇಕೆಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ವಿ.ಹಿಂ.ಪ ತಾಲೂಕ ಉಪಾಧ್ಯಕ್ಷ ವಿಠ್ಠಲ್ ಹೊಸಮನಿ, ತಾಲೂಕ…

Read More

ಬಸಾಪುರ ಗ್ರಾಮಸಭೆಯಲ್ಲಿ ಸಂತ್ರಸ್ತರ ಅಳಲು | ಸಾಗುವಳಿ ಪತ್ರಕ್ಕೆ ಮನವಿ ಉದಯರಶ್ಮಿ ದಿನಪತ್ರಿಕೆ ಸರಗೂರು: ಪ್ರತಿ ಗ್ರಾಮದ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಗ್ರಾಮಸಭೆ ವಿಧಾನಸಭೆ ಆಗಬೇಕು. ಶಾಸಕರ ಇಚ್ಛಾಶಕ್ತಿ ಕೊರತೆ ಮತ್ತು ಸಮಯದ ಅಭಾವದಿಂದ ರೈತರ ಸಮಸ್ಯೆಗಳು ವಿಧಾನಸಭೆಯಲ್ಲಿ ಚರ್ಚೆಗೆ ಬರುವುದು ತೀರಾ ಕಡಿಮೆ. ಈ ನಿಟ್ಟಿನಲ್ಲಿ ಗ್ರಾಮಸಭೆಗೆ ಒಂದು ಅಧಿಕಾರ ಕೊಡಲಾಗಿದೆ. ರೈತರ ಜ್ವಲಂತ ಸಮಸ್ಯೆಗಳು ಅಧಿಕಾರಿಗಳ ಸಮ್ಮುಖದಲ್ಲಿ ಚರ್ಚೆಯಾಗಿ, ಶೀಘ್ರದಲ್ಲಿ ಬಗೆಹರಿಸುವ ನಿಟ್ಟಿನಲ್ಲಿ ಗ್ರಾಮಸಭೆ ವಿಧಾನಸಭೆ ಆಗಬೇಕು ಎಂದು ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಭೂಮಿಪುತ್ರ ಚಂದನ್ ಗೌಡ ಸಿ ಒತ್ತಾಯಿಸಿದರು.ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದ ಗ್ರಾಮಸಭೆಯಲ್ಲಿ ಮಾತನಾಡಿದ ಭೂಮಿಪುತ್ರ ಚಂದನ್ ಗೌಡ, ಕಬಿನಿ ನೀರಿಗೆ ಆಣೆಕಟ್ಟು ನಿರ್ಮಾಣ ಮಾಡುವಾಗ ಅಲ್ಲಿದ್ದ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಯಿತು. ಆದರೆ ಇಲ್ಲಿಯವರೆಗೆ ಸಾಗುವಳಿ ಪತ್ರ ವಿತರಣೆ ಮಾಡಿಲ್ಲ. ಕಳೆದ 5 ದಶಕಗಳಿಂದಲೂ ಬಸಾಪುರ ಗ್ರಾಮದ ರೈತರು ಸಾಗುವಳಿ ಪತ್ರ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿದ್ದಾರೆ. ಆದರೆ…

Read More

ಏಳು ದಿನಗಳ ಕಾಲ ವೈಭವದಿಂದ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉತ್ತರ ಕರ್ನಾಟಕದ ಅಂದದ-ಚೆಂದದ ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವ ಇದೇ ದಿನಾಂಕ ೧೧ ರಿಂದ ಏಳು ದಿನಗಳ ಕಾಲ ವೈಭವದಿಂದ ನಡೆಯಲಿದ್ದು, ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ.ಜಾತ್ರಾ ಮಹೋತ್ಸವ ಅಂಗವಾಗಿ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಶನಿವಾರ ನಗರ ಶಾಸಕ ಹಾಗೂ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಹಾಗೂ ಶ್ರೀ ಸಿದ್ದೇಶ್ವರ ಸಂಸ್ಥೆಯ ಸರ್ವ ನಿರ್ದೇಶಕರ ಸಮ್ಮುಖದಲ್ಲಿ ಚೇರಮನ್ ಬಸಯ್ಯ ಹಿರೇಮಠ ಸಮಗ್ರ ವಿವರಣೆ ನೀಡಿದರು.ಜ.೧೧ ರಂದು ಶ್ರೀ ಸಿದ್ದೇಶ್ವರ ದೇವಾಲಯದಿಂದ ನಂದಿ ಧ್ವಜ ಹಾಗೂ ಗೋಮಾತೆಯ ಮೆರವಣಿಗೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರಕಲಿದ್ದು, ಈ ಮೆರವಣಿಗೆ ಸಿದ್ದೇಶ್ವರ ದೇವಾಲಯ, ಅಟಲ್ ಬಿಹಾರಿ ವಾಜಪೇಯಿ ರಸ್ತೆ ಮಾರ್ಗವಾಗಿ ಸಾಗಿ ಚತುರ್ಮುಖ ಗಣಪತಿ ದೇವಾಲಯಕ್ಕೆ ತಲುಪಲಿದೆ. ಆ ಮೂಲಕ ಜಾತ್ರಾ ಮಹೋತ್ಸವದ ಧಾರ್ಮಿಕ…

Read More