Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಮಣೂರ ಗ್ರಾಮ ಪಂಚಾಯಿತಿಯಲ್ಲಿ ಬಸವ ಹಾಗೂ ಅಂಬೇಡ್ಕರ್ ವಸತಿ ಯೋಜನೆ ಅಡಿಯ ಮನೆಗಳನ್ನು ಒಂದೇ ಸಮುದಾಯಕ್ಕೆ ಮಂಜೂರ ಮಾಡಿ ಅವರಿಂದ ಹಣ ಪಡೆಯಲಾಗಿದೆ ಎಂದು ಆರೋಪಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ತಹಶೀಲ್ದಾರ ಪ್ರಕಾಶ ಸಿಂದಗಿ ಹಾಗೂ ಇಓ ಭಾರತಿ ಚೆಲುವಯ್ಯ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಸಭೆ ಸೇರಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ಬಸ್ ನಿಲ್ದಾಣ ರಸ್ತೆ, ಮೊಹರೆ ಹಣಮಂತ್ರಾಯ ವೃತ್ತದ ಮೂಲಕ ತಾಲ್ಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ತೆರಳಿ ಧರಣಿ ಕುಳಿತು ಪ್ರತಿಭಟನೆ ಕೈಗೊಂಡರು.ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಶರಣು ಜಮಖಂಡಿ ಮಾತನಾಡಿ, ಬಸವ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ ೨೦೨೨-೨೩ ಹಾಗೂ ೨೦೨೪-೨೫ನೇ ಸಾಲಿನಲ್ಲಿ ಮಂಜೂರಾಗಿದ್ದ ಮನೆಗಳನ್ನು ಪಿಡಿಓ ಹಾಗೂ ನೋಡಲ್ ಅಧಿಕಾರಿಗಳು ಫಲಾನುಭವಿಗಳಿಂದ ಹಣ ಪಡೆದು ನೀಡಿದ್ದಾರೆ ಎಂದರು.ಜಿಲ್ಲಾಧ್ಯಕ್ಷ ಸುಖದೇವ ಕಟ್ಟಿಮನಿ ಮಾತನಾಡಿ, ಗ್ರಾಮಸಭೆಯ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡದೇ ಬೇಕಾಬಿಟ್ಟಿ ಮನೆಗಳನ್ನು ಹಂಚಿಕೆ ಮಾಡಿ, ೧೫ನೇ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಕೋರವಾರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಅತ್ಯುತ್ತಮ ಪ್ರಶಸ್ತಿ ಪಡೆದ ಕಾರಣ ಸಂಘದ ಅಧ್ಯಕ್ಷ ಸಂಗಮೇಶ ಛಾಯಾಗೋಳ ಹಾಗೂ ಸಿಬ್ಬಂದಿಯನ್ನು ವಿಜಯಪುರ ಡಿಸಿಸಿ ಬ್ಯಾಂಕಿನ ಸರ್ವಸಾಧಾರಣ ಸಭೆಯಲ್ಲಿ ಅಧ್ಯಕ್ಷ ಹಾಗೂ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಮತ್ತು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹಾಗೂ ಎಲ್ಲ ನಿರ್ದೇಶಕ ಮಂಡಳಿ ಸನ್ಮಾನಿಸಿದರು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಕೋರವಾರ ಗ್ರಾಮದ ಶ್ರೀಮಹಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಆರಂಭಗೊಂಡಿರುವ ಶ್ರೀಶಿವಯೋಗಿ ಸಿದ್ಧರಾಮೇಶ್ವರ ಪುರಾಣದಲ್ಲಿ ನೂರಾರು ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.ನಾಗಮ್ಮ ಮನಗೂಳಿ ಚಾಲನೆ ನೀಡಿದರು. ಜಯಶ್ರೀ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ರೀಡೆಗಳು ಆಡುವದರಿಂದ ದೈಹಿಕವಾಗಿ ಸದೃಡವಾಗುವದರೊಂದಿಗೆ ಮಾನಸಿಕವಾಗಿ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಜಗದೀಶ ಬೋಳಸೂರ ಹೇಳಿದರು.ನಗರದ ಟಕ್ಕೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆವರಣದಲ್ಲಿ ರವಿವಾರ ಶಿಕ್ಷಕರ ದಿನಾಚರಣೆ ನಿಮಿತ್ಯ ಬಿ.ಆರ್.ಸಿ ವಾಲಿಬಾಲ್ ಗೆಳೆಯರ ಬಳಗದಿಂದ ಏರ್ಪಡಿಸಿದ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸತತ ಐದು ವರ್ಷಗಳಿಂದ ನಿರಂತರವಾಗಿ ಬೆಳಗಿನ ಜಾವ ಸಮಾನ ಮನಸ್ಸಿನ ಶಿಕ್ಷಕರು ಒಡಗೂಡಿ ದೈಹಿಕ ಶ್ರಮದೊಂದಿಗೆ ವಾಲಿಬಾಲ್ ಆಡುತ್ತಿರುವದರಿಂದ ಶಿಕ್ಷಕರ ಆರೋಗ್ಯಕ್ಕೂ ಹಿತಕರವಾಗಿದೆ ಎಂದರು.ತಿಕೋಟಾ ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ತಾಲ್ಲೂಕಾಧ್ಯಕ್ಷ ಚನ್ನಯ್ಯ ಮಠಪತಿ ಮಾತನಾಡಿ, ದೈಹಿಕ ಹಾಗೂ ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡಾಕೂಟ ಸಹಕಾರಿಯಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಶಿಕ್ಷಕರು ಪ್ರತಿದಿನ ವಾಲಿಬಾಲ್ ಆಡುತ್ತಿರುವದು ಖುಷಿ ತಂದಿದೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರ ಸಂಘದ ಖಜಾಂಚಿ ಜುಬೇರ ಕೇರೂರ, ಉರ್ದು ಶಿಕ್ಷಕ ಸಂಘದ ನಗರ ಘಟಕ ಅಧ್ಯಕ್ಷ…
ಏಕ ಕಾಲಕ್ಕೆ ಹದಿನೈದು ಚೌಕಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಉದಯರಶ್ಮಿ ದಿನಪತ್ರಿಕೆ ವರದಿ: ಗುರು ಆರ್ ಹಿರೇಮಠಆಲಮೇಲ: ಪಟ್ಟಣದಲ್ಲಿ ರವಿವಾರ ರಾತ್ರಿ ಗಣೇಶ ವಿಸರ್ಜನೆಯು ಅದ್ದೂರಿಯಾಗಿ ನಡೆಯಿತು.ಕಳೆದ ನಾಲ್ಕು ದಶಕಗಳಿಂದ ಭಾವೈಕ್ಯತೆಯ ನೆಲೆಯಲ್ಲಿ ಇಲ್ಲಿಯ ಗಣೇಶ ಉತ್ಸವಕ್ಕೆ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದೆ.ಕಾರ್ಯಕ್ರಮದ ಉದ್ಘಾಟನೆಗೆ ಒಂದು ವೇದಿಕೆಯನ್ನು ಪಟ್ಪಣ ಪಂಚಾಯತ ಹತ್ತಿರ ಮತ್ತು ಇನ್ನೊಂದು ವೇದಿಕೆಯನ್ನು ಅಂಬಿಗರ ಚೌಡಯ್ಯ ಸರ್ಕಲ್ ನಲ್ಲಿ ಎರಡು ಕಡೆ ಪ್ರಧಾನ ವೇದಿಕೆಗಳನ್ನು ನಿರ್ಮಿಸಲಾಗಿತ್ತು.ಪಟ್ಟಣದಲ್ಲಿ ಹದಿನೈದು ಚೌಕಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳು ಏಕ ಕಾಲಕ್ಕೆ ವಿಸರ್ಜನೆ ಮೆರವಣಿಗೆಯಲ್ಲಿ ಸಾಗಿಬಂದವು. ಒಂದರ ಹಿಂದೆ ಒಂದು ಸಾಲು ಸಾಲು ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗುತ್ತಿದ್ದರೆ ರಸ್ತೆಯ ಎರಡೂ ಕಡೆಗಳಲ್ಲಿ ಜನ ಜಾತ್ರೆ ತುಂಬಿಕೊಂಡಿತು ಪೌರಾಣಿಕ ದೃಶ್ಯಗಳು ಮಹಾಭಾರತ ಮತ್ತು ರಾಮಾಯಣಕ್ಕೆ ಸಂಬಂಧಿಸಿದ ರೂಪಕಗಳು, ಪ್ರಸ್ತುತ ಘಟನೆಗಳಿಗೆ ಸಂಬಂಧಿಸಿದಂತೆ ಚಿತ್ರಗಳು ನಿರ್ಮಾಣ ಮಾಡಲಾಗಿತ್ತು.ರೇವಣಸಿದ್ದೇಶ್ವರ ಚೌಕದಿಂದ ಆರ್ ಸಿ ಬಿ ತಂಡ ಕಪ್ ಕ್ರೀಡಾಪಟು ವಿರಾಟ್ ಕೊಹ್ಲಿ ಮತ್ತು ರಜತ್ ಪಾಟೀದಾರ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ಷಡ್ಯಂತ್ರದ ವಿರುದ್ಧ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ’ ಎಂಬ ಘೊಷಣೆಯೊಂದಿಗೆ ನೂರಾರು ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ಸ್ಥಳೀಯ ಬಸವೇಶ್ವರ ವೃತ್ತದಿಂದ ಆರಂಭಗೊಂಡ ರ್ಯಾಲಿ ತಹಶೀಲ್ದಾರ ಕಚೇರಿ ತಲುಪಿತು. ರ್ಯಾಲಿಯುದ್ದಕ್ಕೂ ಸರ್ಕಾರದ ಹಿಂದೂ ವಿರೋಧ ನೀತಿಯನ್ನು ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಅಪಪ್ರಚಾರ ಮಾಡಿದವರ ವಿರುದ್ಧ ಘೋಷಣೆಗಳನ್ನು ಕೂಗಿದರು.ಚಡಚಣ ತಹಶೀಲದಾರ ಸಂಜಯ ಇಂಗಳೆ ಅವರಿಗೆ ಮನವಿ ಸಲ್ಲಿಸಲಾಯಿತು.ಯುವ ನಾಯಕ ಸಂಜೀವ ಐಹೊಳ್ಳಿ, ಚಡಚಣ ಮಂಡಲ ಅಧ್ಯಕ್ಷ ಕಾಂತುಗೌಡ ಪಾಟೀಲ, ನಾಗಠಾಣ ಮಂಡಲ ಅಧ್ಯಕ್ಷ ಸಿದಗೊಂಡ ಬಿರಾದಾರ, ತಾ.ಪಂ. ಮಾಜಿ ಸದಸ್ಯ ರಾಜು ಝಳಕಿ, ಮುಖಂಡ ಚಿದಾನಂದ ಛಲವಾದಿ ಮತ್ತಿತರರು ಮಾತನಾಡಿ, ಧರ್ಮಸ್ಥಳವು ಸತ್ಯಧರ್ಮದ ನಿಲಯವಾದ ಧರ್ಮಸ್ಥಳ ಕ್ಷೇತ್ರವು ಪರಮಪಾವನ ಸ್ಥಳವಾಗಿದೆ. ಜಾತಿ, ಧರ್ಮಗಳ ಬೇಧಭಾವ ಮರೆತು ಡಾ| ವಿರೇಂದ್ರ ಹೆಗ್ಗಡೆಯವರು ಲಕ್ಷ್ಯಾಂತರ ಬಡವರ ಬದುಕಿಗೆ ಬೆಳಕನ್ನು ನೀಡಿದ್ದಾರೆ ಮತ್ತು ಎಷ್ಟೋ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಜಿಲ್ಲಾ ಶಿಕ್ಷಕರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಶಂಕರ ಹಾವಿನಾಳ ತಿಳಿಸಿದ್ದಾರೆ.ವಿಜಯಪುರ ಜಿಲ್ಲಾ ಅತ್ಯುತ್ತಮ ಶಿಕ್ಷಕರತ್ನ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳು ಖಾಸಗಿ ಶಾಲೆಗಳಲ್ಲಿ ತಮ್ಮ ಸೇವೆ ಕಡ್ಡಾಯವಾಗಿರುವ ತಾಲೂಕಿಗೆ ಒಬ್ಬರಂತೆ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಬಯೋ ಡಾಟಾ, ತಾವು ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯ ಅಧ್ಯಕ್ಷರ ಶಿಫಾರಸು ಪತ್ರ ಹಾಗೂ ಇತ್ತೀಚಿನ ಒಂದು ಭಾವಚಿತ್ರ, ಈ ಮೊದಲು ಪಡೆದಿರುವ ಪ್ರಶಸ್ತಿಗಳ ವಿವರ ಹೊಂದಿರುವ ವಿವರವಾದ ಪತ್ರದೊಂದಿಗೆ ಸೆ.5 ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಿದ ಅರ್ಜಿಗಳು ಸ್ವೀಕರಿಸಲಾಗುವುದು.ಅಧ್ಯಕ್ಷರು/ಕಾರ್ಯದರ್ಶಿಗಳು, ಚಡಚಣ ತಾಲೂಕು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘ ಚಡಚಣ. ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಒಂದಕ್ಕಿಂತ ಹೆಚ್ಚು ಅರ್ಜಿ ಬಂದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಹೆಚ್ಚಿನ ಮಾಹಿತಿಗಾಗಿ ಮೊ.ನಂ. : ೯೧೧೦೮೦೭೪೭೦, ೯೮೪೪೧೯೧೧೪೫, ೮೮೬೭೬೬೯೦೩೭ ಸಂಪರ್ಕಿಸಲು ಪ್ರಕಟಣೆಯಲ್ಲಿ…
ಬಿ ಎಲ್ ಡಿ ಇ ನೂತನ ಕಲಾ ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಪ್ರಾರಂಭೋತ್ಸವ ಉದಯರಶ್ಮಿ ದಿನಪತ್ರಿಕೆ ತಿಕೋಟ: ವಿದ್ಯಾರ್ಥಿಗಳಾದವರು ತಮಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಮುನ್ನುಗ್ಗಿದಾಗ ಮಾತ್ರ ಉತ್ತಮ ಸಾಧನೆ ಮಾಡಬಲ್ಲರು ಎಂದು ವಿಜಯಪುರ ಜಿಲ್ಲಾ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಚಂದ್ರಕಾಂತ ಲೋಕರೆ ಅವರು ಹೇಳಿದರು.ಪಟ್ಟಣದಲ್ಲಿರುವ ಬಿ ಎಲ್ ಡಿ ಇ ಸಂಸ್ಥೆಯ ನೂತನ ಕಲಾ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಬಿಎ, ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸದೊಂದಿಗೆ ಹೆಚ್ಚು ಹೆಚ್ಚು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕುವುದು ಅಗತ್ಯವಿದೆ. ವಿಶೇಷವಾಗಿ ಸಾಂಸ್ಕೃತಿಕವಾಗಿ ನೃತ್ಯ, ಸಂಗೀತ, ನಾಟಕ ಅಭಿನಯ ಇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾದರೆ ಪರಿಪೂರ್ಣ ಚಾರಿತ್ರ್ಯ ನಿರ್ಮಾಣ ಆದಂತಾಗುತ್ತದೆ ಎಂದರು.ಇದೇ ಸಂದರ್ಭದಲ್ಲಿ, ವಿದ್ಯಾರ್ಥಿಗಳು ಹೊಸ ವಿಚಾರಗಳ ಕಡೆ ಗಮನ ಹರಿಸಬೇಕೆಂದು ಸಲಹೆ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಸಣ್ಣ ಅಗಸಿ ಹತ್ತಿರ ಇರುವ ಮೊಮಿನ ಮೊಹಲ್ಲಾದಲ್ಲಿ ಶನಿವಾರದಂದು ಈದ ಮಿಲಾದ-ಉನ್-ನಬಿ ಕಮೀಟಿ ಚಡಚಣ ಇವರ ಸಂಯುಕ್ತ ಆಶ್ರಯದಲ್ಲಿ ಮೊಹಮ್ಮದ್ ಪೈಗಂಬರರ ಜಯಂತ್ಯೋತ್ಸವದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.ಇಮಾಮ ಜಾಮಿಯಾ ಮಸೀದಿಯ ಮೌಲಾನಾ ಅಹ್ಮರಾಜಾ ಬರಕಾತಿ ಮುಲ್ಲಾ ಅವರು ಮಾತನಾಡಿ, ರಕ್ತದಾನ ಮಾಡುವುದರಿಂದ ದೇಹದಲ್ಲಿ ಕಬ್ಬಿಣ ಮತ್ತು ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಿ ಶರೀರದ ಅವಶ್ಯಕತೆಗೆ ತಕ್ಕಂತೆ ಹೊಸ ರಕ್ತ ಉತ್ಪಾದಿಸುತ್ತದೆ ಇದು ಆರೋಗ್ಯಕರ ಹೃದಯಕ್ಕೆ ಕಾರಣವಾಗುವುದರ ಜೊತೆಗೆ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ, ರಕ್ತನಾಳಗಳನ್ನು ಬಲಪಡಿಸಿ ರಕ್ತ ಪರಿಚಲನೆ ಸುಧಾರಿಸುತ್ತದೆ, ವೈದ್ಯರು ಹೇಳಿದಂತೆ 18 ರಿಂದ 65 ವರ್ಷ ವಯಸ್ಸಿನ ಆರೋಗ್ಯವಂತ ವ್ಯಕ್ತಿ, ಕೆಲವು ದೈಹಿಕ ಮತ್ತು ಆರೋಗ್ಯ ಮಾನದಂಡಗಳನ್ನು ಪೂರೈಸಿದರೆ, ಪ್ರತಿ ಮೂರು ತಿಂಗಳಿಗೊಮ್ಮೆ ಅಥವಾ ಕನಿಷ್ಠ ವರ್ಷಕ್ಕೆ ಎರಡು ಬಾರಿ ರಕ್ತದಾನ ಮಾಡಬಹುದು ಒಂದು ದಾನದಲ್ಲಿ ೪೫೦ಮಿಲಿ ರಕ್ತ ಸಂಗ್ರಹಿಸಲಾಗುತ್ತದೆ. 36 ಗಂಟೆಯೊಳಗೆ ನಿಮ್ಮ ದೇಹವು ಕಡಿಮೆಯಾದ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಐತಿಹಾಸಿಕ ಸ್ಮಾರಕಗಳ ಶಿಲಾ ಶಾಸನಗಳು ನಮ್ಮ ಸಂಸ್ಕೃತಿ ಬಿಂಬಿಸುವ ಕುರುಹುಗಳು ಅವುಗಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕರ್ನಾಟಕ ರಾಜ್ಯ ಇತಿಹಾಸ ಅಕಾಡೆಮಿ ಸದಸ್ಯ ನಿಂಗನಗೌಡ ದೇಸಾಯಿ ಹೇಳಿದರು.ಪಟ್ಟಣದ ಹಿಲ್ ಟಾಪ್ನಲಿರುವ ಪದವಿ ಪೂರ್ವ ಕಾಲೇಜಿನಲ್ಲಿ ರವಿವಾರ ಹಮ್ಮಿಕೊಂಡ ಐತಿಹಾಸಿಕ ಪರಂಪರೆ ಉಳಿಸಿ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಸ್ಥಳೀಯ ಇತಿಹಾಸ ಅರಿಯಬೇಕು, ಪ್ರತಿಯೊಬ್ಬರ ತಮ್ಮ ತಮ್ಮ ಊರು, ಗ್ರಾಮದಲ್ಲಿರುವ ಪ್ರಾಚೀನ ದೇವಾಲಯಗಳು, ಕೋಟಿ ಕೊತ್ತಲಗಳು, ಗುಮ್ಮಟಗಳು, ಅರಮನೆಗಳು, ಶಿಲಾಶಾಸನಗಳು ಹಿನ್ನೆಲೆ ಅರಿತು ಮುಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನ ಮಾಡುವ ಮೂಲಕ ನಾಡಿನ ಶ್ರೀಮಂತ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.ಹಿರೇಮಠದ ಪೀಠಾಧಿಪತಿ ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಪ್ರಾಂಶುಪಾಲೆ ಪಾರ್ವತಿ ಅಧ್ಯಕ್ಷತೆ ವಹಿಸಿದ್ದರು, ಸಂಸ್ಥೆ ಅಧ್ಯಕ್ಷ ವಿಶ್ವನಾಥರಡ್ಡಿ ಅಬ್ಬೆತುಮಕೂರು ಪ್ರಾಸ್ತಾವಿಕ ಮಾತನಾಡಿದರು, ಉಪನ್ಯಾಸಕರಾದ ಸುರೇಶ ಪರಸನಹಳ್ಳಿ, ರೇವಣಸಿದ್ದಪ್ಪ ಪೂಜಾರಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಸುನಿತಾ ಹಣಜಿ ನಿರೂಪಿಸಿದರು. ಬಾಪುಗೌಡ ಸ್ವಾಗತಿಸಿದರು,…
