Author: editor.udayarashmi@gmail.com

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನುಮದಿನ (ಅಕ್ಟೋಬರ್ ೨, ಗುರುವಾರ) ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಪ್ರಶಾಂತ ಕುಲಕರ್ಣಿ ಉಪನ್ಯಾಸಕರುಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯಸಿಂದಗಿಮೊ: 9845442237 ಉದಯರಶ್ಮಿ ದಿನಪತ್ರಿಕೆ “ನನ್ನ ಜೀವನವೇ ನನ್ನ ಸಂದೇಶ” ಎಂದು ಮಹಾತ್ಮ ಗಾಂಧೀಜಿ ಹೇಳಿದ ಮಾತು ಇಂದಿಗೂ ಪ್ರತಿಧ್ವನಿಸುತ್ತಿದೆ. ಅಕ್ಟೋಬರ್ 2 ರಂದು ನಾವು ಗಾಂಧೀಜಿಯ ಜಯಂತಿ ಯನ್ನು ಆಚರಿಸುತ್ತೇವೆ. ಈ ಆಚರಣೆಯ ಅರ್ಥ ಕೇವಲ ಹೂವಿನ ಮಾಲೆ ಹಾಕುವುದು, ಸ್ಮಾರಕ, ಭಾಷಣ ಮಾಡುವುದು, ಸ್ವಚ್ಛತಾ ಕಾರ್ಯಕ್ರಮ ನಡೆಸುವುದಲ್ಲ. ಗಾಂಧೀಜಿಯವರ ಜೀವನದಿಂದ ಮತ್ತು ಚಿಂತನೆಗಳಿಂದ ನಾವು ಕಲಿಯುವುದು, ಅವನ್ನು ನಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ.ಇಂದು ವಿಜ್ಞಾನ ಮತ್ತು ತಂತ್ರಜ್ಞಾನದ ವೇಗದ ಅಭಿವೃದ್ಧಿ, ಜಾಗತೀಕರಣದ ಪ್ರಭಾವ, ಸ್ಪರ್ಧಾತ್ಮಕ ಜೀವನಶೈಲಿ ಇವುಗಳಲ್ಲಿ ಗಾಂಧೀಜಿಯವರ ತತ್ತ್ವಗಳು ಹಳೆಯವು, ಅಪ್ರಸ್ತುತವೆಂದು ಕೆಲವರು ಭಾವಿಸಬಹುದು. ಆದರೆ ವಾಸ್ತವ ಏನೆಂದರೆ, ಗಾಂಧೀಜಿಯವರ ಚಿಂತನೆಗಳು ಕಾಲಾತೀತ. ಅವು ಯಾವ ಯುಗದಲ್ಲಾದರೂ ಮಾನವನ ಬದುಕಿಗೆ ಬೆಳಕು ಚೆಲ್ಲಬಲ್ಲವು. ಅವರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಇಂಡಿ ರಸ್ತೆಯಲ್ಲಿರುವ ಗೋಕಾಕ ಚಳುವಳಿ ಹೋರಾಟಗಾರ ಗಂಗಾಧರ ಕೋರಳ್ಳಿ ಪ್ರತಿಷ್ಠಾಪಿತ ಮಹಾಶಕ್ತಿ ನಾಡದೇವಿ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಮಂಗಳವಾರ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಅನ್ನ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ನೀಲಕಂಠ ಕೋರಳ್ಳಿ, ಮಹಾದೇವಿ ಕೋರಳ್ಳಿ, ವೀಣಾ ಕೋರಳ್ಳಿ ಆದಿತ್ಯ ಕೋರಳ್ಳಿ, ಗಂಗಾಬಾಯಿ ಮನಗೂಳಿ, ತ್ರಿವೇಣಿ ಮನಗೂಳಿ, ಸವಿತಾ ಬಿರಾದಾರ, ನಿಹಾರಿಕಾ ಮಂಟಾಳೆ, ಶಾಂತಾಬಾಯಿ ಬಿದರಿ, ಹಣಮಂತ ಕಲಾದಗಿ, ಶೋಭಾ ಪಾಟೀಲ, ಉಮಾ ಇಟ್ಟಂಗಿ, ಕವಿತಾ ಪ್ಯಾಟಿ ಎಚ್ ಜಿ ವಾಲಿ, ರಾಜೇಂದ್ರ, ಗುರು ಹಿರೇಮಠ, ಸಂಗು ಹಿರೇಮಠ, ಭೀಮರಾಯ ಕುಂಟೋಜಿ, ಕಲ್ಲಪ್ಪ ಶಿವಶರಣ, ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

“ನಾನು ವಿಜ್ಞಾನಿ-2025” ರಾಜ್ಯಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿ ಶಿಬಿರ ಉದಯರಶ್ಮಿ ದಿನಪತ್ರಿಕೆ ಹೊನವಾಡ: ಒಂಬತ್ತು ದಿನಗಳ ಕಾಲ ದೊಡ್ಡಬಳ್ಳಾಪುರದಲ್ಲಿ ನಡೆಯುವ ವಿಶ್ವ ದಾಖಲೆಯ ರಾಜ್ಯ ಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿ ಶಿಬಿರದಲ್ಲಿ ಜಿಲ್ಲೆಯಿಂದಲೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ತಿಕೋಟಾ ತಾಲೂಕಿನ ಅಧ್ಯಕ್ಷರಾದ ಬೀರಪ್ಪ ಖಂಡೆಕಾರ ತಿಳಿಸಿದರು.ಶುಭ ಹಾರೈಕೆಯ ಕಾರ್ಯಕ್ರಮದಲ್ಲಿ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋ ಧನೆ ಪರಿಷತ್ತು, ಇಸ್ರೋ, ಭಾರತ ಸೇವಾದಳ, ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್, ಇಂಟರ್ನ್ಯಾಷನಲ್ ಲಯನ್ಸ್ ಕ್ಲಬ್ ಸೇರಿದಂತೆ ಅನೇಕ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಪಥಮ ಟೆಲಿಸ್ಕೋಪ್ ತರಬೇತಿ ಶಿಬಿರ “ನಾನೂ ವಿಜ್ಞಾನಿ -2025” ನಡೆಯಲಿದೆ. ಬೆಸೆಂಟ್ ಪಾರ್ಕ್, ಸೈಟ್ಸ್ ಕ್ಯಾಂಪ್, ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ)ದಲ್ಲಿ ಅ.1ರಿಂದ ಅ.9ರವರೆಗೆ (9 ದಿನಗಳ ಕಾಲ) ನಡೆಯುವ ಈ ಶಿಬಿರದಲ್ಲಿ ರಾಜ್ಯದ 152 ಮಕ್ಕಳು ಭಾಗವಹಿಸಲಿದ್ದು, ಶಿಬಿರದಲ್ಲಿ…

Read More

ಗ್ರಾಮ ಪಂಚಾಯತ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಎಚ್. ಪಠಾಣ ಆರೋಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯತ ಮತ್ತು ತಾಲ್ಲೂಕು ಪಂಚಾಯತಗಳಿಗೆ ಚುನಾವಣೆ ನಡೆದಿಲ್ಲ. ಸಂವಿಧಾನದ ಅನುಚ್ಛೇದ ೨೪೩ಇ ಪ್ರತಿ ಪಂಚಾಯುತ ಐದು ವರ್ಷಗಳ ಅವಧಿಯನ್ನು ಹೊಂದಿದ್ದು ಚುನಾವಣೆಗಳನ್ನು ಮುಕ್ತಾಯದ ಮೊದಲು ನಡೆಸಬೇಕೆಂದು ಹೇಳುತ್ತದೆ ಎಂದು ಗ್ರಾಮ ಪಂಚಾಯತ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಎಚ್. ಪಠಾಣ ಹೇಳಿದರು.ನಗರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದರೆ ಅಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಝ್ ಅಧಿನಿಯಮ ೧೯೯೩ ಕ್ಕೆ ತಿದ್ದುಪಡಿ ತರುವ ಮೂಲಕ ಕ್ಷೇತ್ರ ವಿಂಗಡನೆ ಆಯೋಗವನ್ನು ರಚಿಸುವ ಮೂಲಕ ಜಿಲ್ಲಾ ಪಂಚಾಯತ ಮತ್ತು ತಾಲ್ಲೂಕು ಪಂಚಾಯತ ಚುನಾವಣೆಗಳನ್ನು ಮುಂದೂಡಿತ್ತು. ಈ ತಿದ್ದುಪಡಿಗೆ ಸಭಾ ತ್ಯಾಗ ಮಾಡುವ ಮೂಲಕ ಹಿಂಬಾಗಿಲಿನಿಂದ ಕಾಂಗ್ರೆಸ್ ಪಕ್ಷವು ಕೈ ಜೋಡಿಸಿತ್ತು. ನಂತರದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೂ ಅದು ಕೂಡ ಜಿಲ್ಲಾ ಪಂಚಾಯತ ಮತ್ತು ತಾಲ್ಲೂಕು…

Read More

ಅಕ್ಕಮಹಾದೇವಿ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: “ಜೀವನದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ ಮಾತ್ರವಲ್ಲ, ಸ್ಪಷ್ಟವಾದ ಗುರಿ ಮತ್ತು ಉದ್ದೇಶ ಅಗತ್ಯ. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಕೇವಲ ಅಂಕಗಳಿಗೆ ಸೀಮಿತಗೊಳಿಸದೆ, ಸಮಾಜಕ್ಕೆ ಕೊಡುಗೆ ನೀಡುವ ರೀತಿಯಲ್ಲಿ ಜ್ಞಾನವನ್ನು ಬಳಸಿಕೊಳ್ಳಬೇಕು” ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯವು ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಸಹಯೋಗದಿಂದ ಇತ್ತೀಚಿಗೆ ಆಯೋಜಿಸಿದ್ದ ‘ಸೈಕಾಲಾಜಿಕಲ್ ಕೌನ್ಸಿಲಿಂಗ್ ಫಾರ್ ಕರಿಯರ್ ಗೈಡನ್ಸ್’ ಎಂಬ ವಿಷಯದ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಗುರಿ-ಉದ್ದೇಶಗಳನ್ನು ಈಡೇರಿಸಿಕೊಳ್ಳುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.ಇದೇ ಸಂದರ್ಭದಲ್ಲಿ ನಗರದ ಆಲ್‌ಅಮೀನ್ ವೈದ್ಯಕೀಯ ಕಾಲೇಜಿನ ಶಸ್ತçಚಿಕಿತ್ಸೆಯ ಸಹಾಯಕ ಪ್ರಾಧ್ಯಾಪಕ ಡಾ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಭಾವೈಕ್ಯತೆಯ ಪ್ರತೀಕವಾಗಿರುವ ಹಜರತ್ ಅರ್ಕಾಟ್ ದರ್ಗಾದ ಉರುಸು ಶ್ರದ್ಧಾ ಭಕ್ತಿಯಿಂದ ಜರುಗಲಿದ್ದು, ಇದರಂಗವಾಗಿ ದಿ.೪ ರಂದು ಝೂಲೂಸ್ ಏ. ಗೌಸಿಯಾ ಎಂಬ ಬೃಹತ್ ಶಾಂತಿಯಾತ್ರೆ ನಡೆಯಲಿದೆ ಎಂದು ಧರ್ಮಗುರು ಮೌಲಾನಾ ಯೂಸೂಫ್ ಖಾದ್ರಿ ಹೇಳಿದರು.ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉರುಸು ಅಂಗವಾಗಿ ಅನೇಕ ಸಿದ್ದತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ, ಮಾನವೀಯತೆ, ಶಾಂತಿ, ಸಹೋದರತೆ ತತ್ವ ಸಾರಿದ ಅರ್ಕಾಟ್ ದರ್ಗಾದ ಹಜರತ್ ಸೈಯ್ಯದ್ ನಾ ಅಬ್ದುಲ್ ಷಾ ಖಾದ್ರಿ ಅವರ ಉರುಸಿನಲ್ಲಿ ಹಿಂದೂ ಮುಸ್ಲಿಂ ಬಾಂಧವರು ಸಾವಿರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ.ಹಸಿದವರಿಗೆ ಅನ್ನ, ಆರೋಗ್ಯ ಸಮಸ್ಯೆ ಎದುರಿಸುವವರಿಗೆ ಪಾರಂಪರಿಕ ಆಯುರ್ವೇದ ಔಷಧಿ ದೊರಕುವ ಮೂಲಕ ದವಾ ಹಾಗೂ ದುವಾ ಎರಡು ಇಲ್ಲಿ ಲಭ್ಯ ಎಂದರು.ಉರುಸು ಅಂಗವಾಗಿ ಶಾಂತಿ ಯಾತ್ರೆ ದಿ.೪ ರಂದು ನಡೆಯಲಿದ್ದು, ದರ್ಗಾದ ಪ್ರಸ್ತುತ ಸಜ್ಜಾದೆ ನಷೀನ್ ಹಜರತ್ ಇಕ್ಬಾಲ್ ಪೀರಾ ಹುಸೈನಿ ಹಾಗೂ ಅವರ ಪುತ್ರ ಡಾ.ಸೈಯ್ಯದ್ ತಕೀ ಪೀರಾ ಹುಸೈನಿ ನೇತೃತ್ವದಲ್ಲಿ ವಿವಿಧ…

Read More

ನಾಳೆ ಐತಿಹಾಸಿಕ ನಗರ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿಗಾಗಿ ಅರಮನೆ ನಗರಿ ಶೃಂಗಾರಗೊಂಡು ಝಗಮಗಿಸುತ್ತ ಸಜ್ಜಾಗಿದೆ. ಈ ಹೊತ್ತಲ್ಲಿ ಮೈಸೂರಿಗೆ ಪ್ರಖ್ಯಾತಿ ತಂದುಕೊಟ್ಟ ಮೈಸೂರು ಅರಸರನ್ನು ನೆನೆಯದಿದ್ದರೆ ಹೇಗೆ? ಅವರ ಕುರಿತು ಈ ವಿಶೇಷ ಲೇಖನ ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ಇದು, ಮೈಸೂರಿಗೆ ʼವಿಶ್ವವಿಖ್ಯಾತ ಮೈಸೂರುʼ ಎಂಬ ಹೆಸರು ತಂದುಕೊಟ್ಟ ಸಾಂಸ್ಕೃತಿಕ ಮೈಸೂರಿನ ರಾಯಭಾರಿಗಳಾದಂತಹ ಅಂಬಾವಿಲಾಸ ಅರಮನೆಯ ಮೈಸೂರು ಒಡೆಯರ ಸ್ವಾರಸ್ಯಕರ ಕಥೆ.ʼಜಗತ್ಪ್ರಸಿದ್ಧ ಮೈಸೂರುʼಮೈಸೂರಿನ ವಿಷಯ ಬಂದಾಗ ಕೆಲವು ವಿಶೇ಼ಷಣಗಳೂ ಸಹ ಅದರೊಂದಿಗೆ ಸೇರಿಕೊಳ್ಳುತ್ತವೆ. ಅದು ಹೇಗೆ ಮೈಸೂರು ಜಗತ್ತಿನಾದ್ಯಾಂತ ಇಷ್ಟೊಂದು ಪ್ರಸಿದ್ಧಿ ಪಡೆಯಿತು. ಇದಕ್ಕೆ ಕಾರಣರಾದವರು ಯಾರು? ಕಾರಣವಾದ ಅಂಶಗಳಾವುವು? ಈ ಕುತೂಹಲ ಮೂಡಲೇಬೇಕಲ್ಲ?. ಸಾಕ್ಷಿ ಕಣ್ಣ ಮುಂದೆಯೇ ಇದೆ. ಅದೇ ಮೈಸೂರು ದಸರಾ. ಅಷ್ಟೆಯೇ? ಅದನ್ನು ಆಚರಿಸಿಕೊಂಡು ಬಂದವರು ಯಾರು? ಹೌದು ಅವರೇ ಮೈಸೂರಿನ ಒಡೆಯರು ಅಥವಾ ಅರಸರು ಅಥವಾ ದೊರೆಗಳು. ಅವರಿಗಿಂತ ಹೆಚ್ಚು ಗೌರವಕ್ಕೆ ಪಾತ್ರರಾಗುವವರು ಯಾರಿರಲು ಸಾಧ್ಯ? ಅದೇಕೆ ಮೈಸೂರಿನ ಅರಸರು…

Read More

ಇಂದು (ಅಕ್ಟೋಬರ-೨ ಗುರುವಾರ) ವಿಶ್ವ ಅಹಿಂಸಾ ದಿನಾಚರಣೆ (ಮಹಾತ್ಮಾ ಗಾಂಧೀಜಿಯವರ ಜನ್ಮ ದಿನ) ತನಿಮಿತ್ಯ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಥಾಮಸ್ ಅಲ್ವಾ ಎಡಿಸನ್ ಅವರು, ಅಹಿಂಸೆಯು ಅತ್ಯುನ್ನತ ನೀತಿಶಾಸ್ತ್ರಕ್ಕೆ ಕಾರಣವಾಗುತ್ತದೆ. ಅದು ಎಲ್ಲಾ ವಿಕಾಸದ ಗುರಿಯಾಗಿದೆ. ನಾವು ಇತರ ಎಲ್ಲಾ ಜೀವಿಗಳಿಗೆ ಹಾನಿ ಮಾಡುವುದನ್ನು ನಿಲ್ಲಿಸುವವರೆಗೆ, ನಾವು ಇನ್ನೂ ಅನಾಗರೀಕರು” ಎಂದು ಹೇಳಿದ್ದಾರೆ. ಸತ್ಯ, ಶಾಂತಿ, ಸತ್ಯಾಗ್ರಹ, ಅಹಿಂಸೆ ಮತ್ತು ತ್ಯಾಗಗಳೆಂಬ ಪಂಚ ಮೂಲಮಂತ್ರ ಜಪಿಸುತ್ತಾ, ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಯಲ್ಲಿ ಹೋರಾಡಿ, ರಾಷ್ಟ್ರಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಪಾತ್ರ ಅನನ್ಯವಾದುದು. ಅಹಿಂಸೆಯೇ ಪರಮೋಧರ್ಮ ಎಂಬುದನ್ನು ಇಡೀ ಜಗತ್ತಿಗೆ ತೋರಿಸಿಕೊಟ್ಟವರೇ ನಮ್ಮ ಗಾಂಧೀ ತಾತ. ರಾಷ್ಟ್ರಪತಿ ಎಂದು ಕರೆಯಿಸಿಕೊಳ್ಳುವ ಮತ್ತು ಅಹಿಂಸೆ, ಸತ್ಯ ಮತ್ತು ಶಾಂತಿಯನ್ನೇ ತಮ್ಮ ಉಸಿರನ್ನಾಗಿಸಿಕೊಂಡು ದೇಶದ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಮುಂಚೂಣಿಯಲ್ಲಿ ಹೋರಾಡಿದ ಮಹಾತ್ಮಾ ಗಾಂಧೀಜಿಯವರ ಜನ್ಮ ದಿನ ಅಕ್ಟೋಬರ-೨ ರಂದು…

Read More

ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷಿ ಆಧಾರಿತ ಸಹಕಾರಿ ಚಳುವಳಿಗೆ ವಿಜಯಪುರ ಜಿಲ್ಲೆಯ ಕೊಡುಗೆ ಅನುಪಮವಾಗಿದೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಬಣ್ಣಿಸಿದರು.ವಿಜಯಪುರ ತಾಲೂಕಿನ ಹೆಗಡಿಹಾಳ ಗ್ರಾಮದಲ್ಲಿ ದಿ.ಆರ್.ಎಂ.ಪಾಟೀಲ ವಾಣಿಜ್ಯ ಸಂಕಿರಣ ಉದ್ಘಾಟಿಸಿ, ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಹಕಾರಿ ರಂಗದಲ್ಲಿ ಇರುವವರಿಗೆ ಪ್ರಾಮಾಣಿಕತೆ, ಸೇವಾ ಬದ್ಧತೆ ಮುಖ್ಯವಾಗಿದೆ. ಅನ್ಯರ ಅಭ್ಯುದಯದಲ್ಲಿ ತಮ್ಮ ಸಂತೃಪ್ತಿ ಕಾಣುವುದೇ ಸಹಕಾರಿ ಧ್ಯೇಯ ಎಂದು ವಿವರಿಸಿದರು.ಗ್ರಾಮೀಣ ಭಾಗದಲ್ಲಿ ರೈತರಿಗೆ ಕೃಷಿ ಹಾಗೂ ತುರ್ತು ಆರ್ಥಿಕ ಅಗತ್ಯಕ್ಕೆ ರಾಷ್ಟ್ರೀಕೃತ ಬ್ಯಾಂಕುಗಳು ನೆರವಿಗೆ ಬರುವುದಿಲ್ಲ. ಆದರೆ ಹಳ್ಳಿಗರ ಆರ್ಥಿಕ ಅಗತ್ಯಕ್ಕೆ ತುರ್ತು ಸ್ಪಂದನೆ ನೀಡುವ ಕೆಲಸವನ್ನು ಗ್ರಾಮೀಣ ಸಹಕಾರಿ ಸಂಸ್ಥೆಗಳು ಮಾಡುತ್ತವೆ. ಹೆಗಡಿಹಾಳ ಗ್ರಾಮದಲ್ಲಿ ಜನ್ಮ ತಳೆದಿರುವ ವಿವಿಧ ಉದ್ದೇಶಗಳ ಸಹಿತ ಗ್ರಾಮೀಣ ಹಾಗೂ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ಶ್ರೀ ಅಂಬಾಭವಾನಿದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ನಿಮಿತ್ಯ ಚಂಡಿಹೋಮ ಹಮ್ಮಿಕೊಳ್ಳಲಾಗಿತ್ತು.ಕಲಬುರಗಿಯ ಸಂಕೇತಾಚಾರ್ಯ ಅಗ್ನಿಹೋತ್ರಿ, ಮಾಧವಾಚಾರ್ಯ ಜೋಶಿ, ಅಖಿಲೇಶಾಚಾರ್ಯ ಚಂಗದಗಿಕರ ಚಂಡಿಹೋಮ ನಡೆಸಿ ಕೊಟ್ಟರು.ಸವಿತಾ ಏಳಸಂಗ ಮತ್ತು ಬಸವರಾಜ ಏಳಸಂಗ ಚಂಡಿಹೋಮದಲ್ಲಿ ಪಾಲ್ಗೊಂಡಿದ್ದರು.ಇಂಡಿಯ ಅರ್ಚಕ ಶಿವಾನಂದ ಪೂಜಾರಿ, ಶಾಂತು ಪೂಜಾರಿ,ರಮೇಶ ಸುಲಾಖೆ, ಕಿರಣ ಬಳಮಕರ, ಸುಭಾಸ ಬಳಮಕರ, ಬಾಬು ಸುಲಾಖೆ, ಅಮರ ಪತಂಗೆ, ಗಣೇಶ ಮಹೀಂದ್ರಕರ, ಸುನೀಲ ಸುಲಾಖೆ, ಬಾಪು ಮಹೀಂಧ್ರಕರ, ಬಾಳು ಕಠಾರೆ, ಸಂಕೇತ ಮಹೀಂದ್ರಕರ, ಕೀರ್ತನ ಮಹೀಂದ್ರಕರ ಮತ್ತಿತರಿದ್ದರು.ಚಂಡಿಹೋಮ ನಂತರ ಉಡಿ ತುಂಬುವ ಕಾರ್ಯಕ್ರಮ, ಆಶೀರ್ವಾದ ಮತ್ತು ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.

Read More