Author: editor.udayarashmi@gmail.com

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ನವದೆಹಲಿ: ಮೈಸೂರು ಚಾಮುಂಡಿ ಬೆಟ್ಟದ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬುಧವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯೊಂದನ್ನು ನಡೆಸಿ ಕರ್ನಾಟಕ ಸರ್ಕಾರವನ್ನು ಅದರಲ್ಲೂ ನಿರ್ದಿಷ್ಟವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಚಾಮುಂಡಿಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಶಿವಕುಮಾರ್ ಹೇಳುತ್ತಾರೆ.ಇತ್ತೀಚೆಗೆ ಅವರು ವಿಧಾನಸಭಾ ಆಧಿವೇಶನದಲ್ಲಿ ಆರೆಸ್ಸೆಸ್ ಪ್ರಾರ್ಥನಾ ಗೀತೆಯನ್ನು ಹಾಡಿ ವಿವಾದ ಸೃಷ್ಟಿಸಿದ್ದರು, ಆದರೆ ಅವರು ಹಾಗೆ ಮಾಡಿದ್ದು ದೆಹಲಿಯಲ್ಲಿರುವ ವರಿಷ್ಠರನನ್ನು ಕೆರಳಿಸಿತ್ತು ಎಂದು ಹೇಳಿದರು. ಹೈಕಮಾಂಡ್ ಗಮನ ಆ ವಿಷಯದಿಂದ ಬೇರೆಡೆ ಸೆಳೆಯಲು ಶಿವಕುಮಾರ್ ಚಾಮುಂಡಿ ಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಅಂತ ಹೇಳಿದ್ದಾರೆ, ಅವರ ಮಾತಿನ ಅರ್ಥವೇನು ಎಂದು ಕಿಡಿಕಾರಿದ್ದಾರೆ.ಚಾಮುಂಡಿ ತಾಯಿ ಈ ನಾಡಿನ ಹಿಂದೂಗಳ ಪಾಲಿನ ಅಧಿದೇವತೆ, ಪೂಜನೀಯಳು, ದಸರಾ ಸಮಯದಲ್ಲಿ ಚಾಮುಂಡಿಗೆ ಪೂಜೆ ಮಾಡಿಯೇ ಮುನ್ನುಡಿ ಇಡಲಾಗುತ್ತದೆ. ತಮ್ಮ ಹೈಕಮಾಂಡ್ ನ್ನು ಸಮಾಧಾನಗೊಳಿಸಲು,…

Read More

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸದನದಲ್ಲಿ ಆರ್ ಎಸ್ ಎಸ್ ಗೀತೆ ಹಾಡಿ ವಿವಾದಕ್ಕೀಡಾಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕ್ಷಮೆ ಕೇಳಬಾರದಿತ್ತು. ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಪ್ರಶ್ನಿಸಿದ್ದಾರೆ.ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. “ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು. ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ? ಎಂದಿದ್ದಾರೆ.ಒಂದು…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನಾದ್ಯಂತ ಬುಧವಾರ ಗಣಪತಿಯ ಹಬ್ಬವನ್ನು ಭಕ್ತಿಯಿಂದ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.ಎಲ್ಲರ ಮನೆಮನೆಗಳಲ್ಲಿ ವಿನಾಯಕನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ಗಣಪತಿಯ ಆರಾಧನೆ ಶ್ರೆದ್ಧೆ, ಭಕ್ತಿಯಿಂದ ನಡೆಯಿತು. ಗಣೇಶನ ಮೂರ್ತಿ ನೋಡಿ ಫುಲ್ ಖುಷಿಯಲ್ಲಿ ಮಕ್ಕಳು ಹೊಸ ಉಡುಪುಗಳಲ್ಲಿ ಕಂಗೊಳಿಸಿದ್ದರು.ಚಡಚಣ ತಾಲೂಕಿನಾದ್ಯಂತ ಯಾವುದಕ್ಕೂ ಏನು ಕಡಿಮೆ ಇಲ್ಲದಂತೆ ಬೀದಿ ಬೀದಿಗಳಲ್ಲೂ ವಿಘ್ನ ನಿವಾರಕ, ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕ, ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.ಇಂದೇ ಹಬ್ಬವಾಗಿದ್ದರಿಂದ ಬಹುತೇಕ ಕಡೆ ಹೆಚ್ಚು ಗಣಪತಿ ಮೂರ್ತಿಗಳನ್ನ ಯುವಕರು ಪ್ರತಿಷ್ಠಾಪನೆ ಮಾಡಿದ್ದರು .

Read More

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ‌ರಿಂದ ಬಸ್ ಸೇವೆ ಪ್ರಾರಂಭಿಸುವಂತೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ- ವಿಜಯಪುರ ಮತ್ತು ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಇಂದು ಮಂಗಳವಾರದಿಂದ ಪ್ರಾರಂಭವಾಗಿದೆ.ಸಾರವಾಡ ಗ್ರಾಮಸ್ಥರ ಬೇಡಿಕೆ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಈ ಬಸ್ ಸೇವೆ ಪ್ರಾರಂಭಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ‌ ಈ ಬಸ್ ಸೇವೆ ಪ್ರಾರಂಭಿಸಿದೆ.ಮಂಗಳವಾರ ಬಬಲೇಶ್ವರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಳೆ ಗಿಡ, ಕಬ್ಬು, ಮಾವಿನ ಎಲೆಗಳು, ರಿಬ್ಬನ್ ಕಟ್ಟಿ ಶೃಂಗರಿಸಿದ ಎರಡು ಬಸ್ಸುಗಳ ಸಂಚಾರಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು‌ ಅಧ್ಯಕ್ಷ ಮಲ್ಲು ದಳವಾಯಿ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ಅವರು ಈ ಭಾಗದ ಗ್ರಾಮಸ್ಥರಿಗೆ ಅನುಕೂಲಕ್ಕಾಗಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ನಿವಾಸಿ, ಭಾರತ ಸರ್ಕಾರದ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರೊಡಕ್ಷನ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚನ್ನಬಸವ ಕೊಟಗಿಯವರಿಗೆ ಹರಿಯಾಣ ರಾಜ್ಯದ ಫರಿದಾಬಾದ್‌ನ ಮ್ಯಾಜಿಕ್ & ಆರ್ಟ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.ಕೊಟಗಿಯವರು ಒಬ್ಬ ಕಲಾವಿದ ಹಾಗೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಾ, ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳಲ್ಲಿ ಪ್ರವಾಸಿಗರ ಮಾರ್ಗದರ್ಶಕರಾಗಿ, ಸಂಘಟಕರಾಗಿ, ಸಂಘ-ಸಂಸ್ಥೆಗಳ ಪ್ರತಿನಿಧಿಯಾಗಿ, ಗಣ್ಯವ್ಯಕ್ತಿಗಳ ಆಪ್ತ ಸಹಾಯಕರಾಗಿ ಹತ್ತಾರು ಸೇವೆಗಳನ್ನು ಸಲ್ಲಿಸುತ್ತಾ, ವಿವಿಧ ಖಾಸಗಿ ಟಿ.ವಿ ಚಾನೆಲ್‌ಗಳು ಹಾಗೂ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಚಂದನ ವಾಹಿನಿಯಲ್ಲಿ ಕರ್ತವ್ಯದಲ್ಲಿರುವ ಇವರ ಸೇವೆಯನ್ನು ಗುರುತಿಸಿ ಹರಿಯಾಣ ರಾಜ್ಯದ ಫರಿದಾಬಾದ್‌ನ ಮ್ಯಾಜಿಕ್ & ಆರ್ಟ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.ಸೆ೧೩ ರಂದು ಫರಿದಾಬಾದ್‌ನ ದಿ ಕ್ಯಾಸ್ಟಲ್ ಆಫ್ ಆರ್ಟ್ ಥಿಯೇಟರ್ ನಲ್ಲಿ ನಡೆಯುವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಸದರಿ ವಿಶ್ವವಿದ್ಯಾಲಯದ ನಿರ್ದೇಶಕರು, ಡೀನ್, ರಿಜಿಸ್ಟಾçರ್ ಹಾಗೂ ಸಂಸ್ಥೆಯ ಸಂಪರ್ಕ ಅಧಿಕಾರಿ…

Read More

ಪತ್ರಕರ್ತೆ ಪ್ರೇಮಾ ಕುಲಕರ್ಣಿ ಅವರು ರಚಿಸಿರುವ ‘ಹೂ ಮಾಲೆ’ ಗ್ರಂಥ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿದ ಲೇಖಕಿ ಭಾರತಿ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಠ್ಯಪುಸ್ತಕ ರಚನೆ ರಾಜಕೀಯ ಪ್ರೇರಿತವಾಗಿರಬಾರದು, ಅದು ರಾಜಕೀಯ ಮುಕ್ತವಾಗಿರಬೇಕು, ಮಾನವೀಯತೆ, ಪ್ರೀತಿ ಬೋಧಿಸುವ ಪಠ್ಯ ಹಿಂದೆಂದಿಗಿಂತಲೂ ಈಗ ಅಗತ್ಯವಾಗಿದೆ ಎಂದು ಖ್ಯಾತ ಲೇಖಕಿ ಭಾರತಿ ಪಾಟೀಲ ಹೇಳಿದರು.ವಿಜಯಪುರದ ಜಿಲ್ಲಾ ಪಂಚಾಯತ ಬಳಿ ಇರುವ ಗಾಂಧೀ ಭವನದಲ್ಲಿಶ್ರೀ ಹಲಗಣೀಶ ಪ್ರಕಾಶನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿಆಯೋಜಿಸಲಾಗಿದ್ದಪತ್ರಕರ್ತೆ ಪ್ರೇಮಾ ಕುಲಕರ್ಣಿ ಅವರು ರಚಿಸಿರುವ ‘ಹೂ ಮಾಲೆ’ ಗ್ರಂಥ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿದ ಅವರು, ಇಂದು ಹೊಡಿ, ಬಡಿ, ಕಡಿ ಸಾಹಿತ್ಯವೇ ಮಕ್ಕಳಲ್ಲಿ ಪ್ರಭಾವ ಬೀರುತ್ತಿದೆ, ಮಕ್ಕಳಿಗೆ ಹಾಡು ಹೇಳಲು ಹೇಳಿದರೆ ಹೊಡಿ ಮಗ ಹಾಡು ಹೇಳುತ್ತಾರೆ, ಹೀಗಾಗಿ ಪಠ್ಯದಲ್ಲಿ ಮಾನವೀಯತೆ, ಪ್ರೀತಿ ಪ್ರತಿಪಾದಿಸುವ ವಿಷಯಗಳು ಪಠ್ಯದಲ್ಲಿರಬೇಕು ಎಂದರು‌.ಇಂದು ವಾಕ್ ಸ್ವಾತಂತ್ರ್ಯ ದುರಪಯೋಗವಾಗಿ ಒಂದು ರೀತಿ ವಾಕರಿಕೆ ಸ್ವಾತಂತ್ರ್ಯವಾಗಿ ಬುರುಡೆ ಸ್ವಾತಂತ್ರ್ಯ ರೀತಿಯಲ್ಲಿ ಪ್ರತಿಧ್ವನಿತವಾಗುತ್ತಿರುವುದು ನೋವಿನ ಸಂಗತಿ…

Read More

ಅಚ್ಚುಕಟ್ಟಾಗಿ ಕ್ರೀಡಾಕೂಟ ಸಂಯೋಜನೆ | ಆಟೋಟಗಳ ರಸದೌತಣ ಸವಿದ ಕ್ರೀಡಾಪ್ರಿಯರು ಉದಯರಶ್ಮಿ ದಿನಪತ್ರಿಕೆ ವರದಿ: ಗುಲಾಬಚಂದ ಜಾಧವವಿಜಯಪುರ: ಜಿಲ್ಲೆಯ ಆಲಮಟ್ಟಿಯ ರಾವಬಹದ್ದೂರ ಡಾ. ಫ.ಗು.ಹಳಕಟ್ಟಿ ಪ್ರೌಢಶಾಲಾ ಅಂಗಳದಲ್ಲಿ ಕ್ರೀಡಾ ಹಬ್ಬದ ಸಡಗರ, ಸಂಭ್ರಮ ಜೋರಾಗಿತ್ತು.ಪ್ರಸಕ್ತ 2025-26 ನೇ ಸಾಲಿನ ನಿಡಗುಂದಿ “ಎ” ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಎರಡು ದಿನಗಳ ಕಾಲ ಕ್ರೀಡಾ ಪ್ರಿಯ ಅಭಿಮಾನಿಗಳಿಗೆ ಸಖತ್ ರಸದೌತಣ ನೀಡಿತು. ಆಲಮಟ್ಟಿಯ ಹಳಕಟ್ಟಿ ಪ್ರೌಢಶಾಲೆ ಅತಿಥ್ಯದಲ್ಲಿ ಸಂಯೋಜನೆಗೊಂಡಿದ್ದ ಈ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ಶನಿವಾರ ಮುಕ್ತಾಯವಾಯಿತು.ನೂರಾರು ಸಂಖ್ಯೆಯಲ್ಲಿ ಕ್ರೀಡಾಪಟುಗಳು ವಿವಿಧ ಆಟೋಟಗಳ ಸ್ಪಧೆ೯ಯಲ್ಲಿ ಭಾಗವಹಿಸಿ ತಮ್ಮ ಆಟಗಳ ಕೌಶಲ್ಯ, ವಿಶೇಷ ಕಸರತ್ತು ಪ್ರದರ್ಶಿಸುವ ಮೂಲಕ ಕ್ರೀಡಾ ಪ್ರೇಮಿಗಳ ಮನ ಗೆದ್ದರು. ಬಾಲಕ,ಬಾಲಕಿಯರ ವಿಭಾಗದ ಗುಂಪು ಆಟಗಳಾದ ವಾಲಿಬಾಲ್, ಕಬಡ್ಡಿ, ಖೋಖೋ, ಥ್ರೋಬಾಲ್ ಪಂದ್ಯಗಳು ಆರಂಭದಿಂದಲೂ ಅಂತ್ಯದವರೆಗೂ ತೀವ್ರತರ ಹಣಾಹಣಿಯಿಂದ ಜರುಗಿದವು. ಅದರಲ್ಲೂ ಸೆಮಿ ಫೈನಲ್, ಫೈನಲ್ ಪಂದ್ಯಗಳನ್ನು ಪ್ರೇಕ್ಷಕರು ತುದಿಗಾಲ ಮೇಲೆ ನಿಂತು ತಮ್ಮ ಊಸಿರು ಬಿಗಿಹಿಡಿದು ನೋಡುವಂತಾಗಿತ್ತು. ಒಂದೊಂದು ಅಂಕ…

Read More

ವಿಜಯಪುರ ಬಂಜಾರಾ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾ ಗಣೇಶನ ಪ್ರತಿಷ್ಠಾಪನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಲ್ಲೆಡೆ ವಿಘ್ನ ವಿನಾಶಕ ಗಣೇಶನ ಹಬ್ಬದ ಸಡಗರ ಸಂಭ್ರಮ ಜೋರಾಗಿದೆ. ಮನೆ ಮನೆಗಳಲ್ಲಿಯೂ ಗಣೇಶನ ಮೂರ್ತಿಗಳನ್ನು ಇಟ್ಟು ಜನರು ಭಕ್ತಿ ಭಾವದಿಂದ ಪೂಜೆ ಮಾಡುತ್ತಿದ್ದಾರೆ. ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಗಜಾನನ ಮೂರ್ತಿಗಳನ್ನು ಇಡಲು ಯುವ ಹೈಕಳು ಕುಣಿದು ಕುಪ್ಪಳಿಸಿ ಲಂಬೋಧರನನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಇಷ್ಟೆ ಅಲ್ಲ, ವಿವಿಧ ಶಾಲಾ ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ಸಂಘ ಸಂಸ್ಥೆಗಳಲ್ಲಿಯೂ ಗಣೇಶನ ಮೂರ್ತಿ ಇಟ್ಟು ಪೂಜೆ ಮಾಡಲಾಗುತ್ತಿದೆ.ಹೀಗೆ ನಗರದ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ವರ್ಧಕ ಸಂಘದ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರದಂದು ಮಣ್ಣಿನ ‘ವಿದ್ಯಾಗಣಪತಿ’ಯನ್ನು ಪ್ರತಿಷ್ಠಾಪಿಸಲಾಯಿತು.ಬೆಳಗಿನ ಜಾವ ವಿದ್ಯಾರ್ಥಿಗಳು ಆದರ್ಶ ನಗರದ ‘ಗಣಪತಿ ದೇವಾಸ್ಥಾನದಿಂದ ಮೆರವಣಿಗೆಯ ಮೂಲಕ ವಿವಿಧ ವಾದ್ಯ ವೈಭಗಳೊಂದಿಗೆ ಶಾಲಾ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು.ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಬಿ.ಪವಾರ ಮಾತನಾಡುತ್ತ, ವಿನಾಶ ಮತ್ತು ಪರಸ್ಪರ ಪ್ರೀತಿ, ವಿಶ್ವಾಸ, ವಾತ್ಸಲ್ಯದಿಂದ ಬೆರೆತು ಬಾಳಲು ಇಲ್ಲಿ ವಿವಿಧ ಚಟುವಟಿಕೆ ನಡೆಸಲಾಗಿದೆ.…

Read More

ವಿಜಯಪುರದ ಬಸವೇಶ್ವರ ಭವನದ 4 ನೇ ವಾಷಿ೯ಕೋತ್ಸವ ಸಮಾರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವಣ್ಣನವರ ತತ್ವ, ಸಿದ್ಧಾಂತಗಳು ಸಾರ್ವಕಾಲಿಕ ಪ್ರಸ್ತುತದಲ್ಲಿವೆ. ಜಗಕ್ಕೆ ನೀಡಿದ ಕಾಯಕ ತತ್ವದ ಮಹತ್ವ ಅತ್ಯಂತ ಶ್ರೇಷ್ಠತೆಯ ಶ್ರೇಣಿಯಲ್ಲಿ ಮಿನುಗಿವೆ ಎಂದು ನಾಗಠಾಣ ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.ವಿಜಯಪುರ ನಗರದ ಶುಭಮಸ್ತು ಕಾಲೋನಿಯಲ್ಲಿ ಬಸವ ಶ್ರೀ ವಿವಿಧೋದ್ದೇಶ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಬಸವೇಶ್ವರ ಭವನದ ನಾಲ್ಕನೇ ವಾಷಿ೯ಕೋತ್ಸವ ಸಮಾರಂಭ ಹಾಗೂ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕಾಯಕ ಪವಿತ್ರತೆಯ ದಾರಿಮಾರ್ಗವನ್ನು ಸಮಾಜಕ್ಕೆ ಬಸವಣ್ಣನವರು ತೋರಿಸಿದ್ದಾರೆ ಎಂದರು.ಕಾಯಕ ಜೀವ ಬಸವಣ್ಣನವರು ಸಕಲರಿಗೂ ಮಾದರಿಯಾಗಿದ್ದಾರೆ. ಅವರು ಏನು ಹೇಳುತ್ತಿದ್ದರೋ ಅದನ್ನೇ ಮಾಡಿದ್ದಾರೆ. ನುಡಿದಂತೆ ನಡೆದಿರುವ ಬಸವಣ್ಣನ ಚಿಂತನೆಗಳು ಅನುಪಮವಾಗಿವೆ. ಸಮಾಜಕ್ಕೆ ಅತ್ಯಂತ ಸರಳ ರೀತಿಯಲ್ಲಿ ಕಾಯಕವೇ ಕೈಲಾಸ ಎಂಬುದನ್ನು ಮನವರಿಕೆ ಮಾಡಿಕೊಟ್ಟ ಅದ್ಭುತ ಮಹಾನ ಚೇತನರಾಗಿದ್ದಾರೆ ಎಂದರು.ಬಸವಣ್ಣನವರ ಭಾವಾಧಾರದ ಮೇಲೆ ಇಲ್ಲಿ ಬಸವೇಶ್ವರ ಭವನ ನಿಮಿ೯ಸಿದ್ದು, ಭವನದ ನಾಲ್ಕನೇ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲ್ಲೂಕಿನ ಸೋಮಜಾಳ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಮಲಘಾಣ ವಲಯದ ಸೋಮಜಾಳ ಕಾರ್ಯಕ್ಷೇತ್ರದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಗುರುಗಳಾದ ಆರ್.ಎಸ್ ನೀರಲಗಿ ವಹಿಸಿದ್ದರು, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಂತೋಷ ಅಮರಗೊಂಡ ಮಾತನಾಡಿ, ಮಕ್ಕಳಿಗೆ ದುಶ್ಚಟಗಳಿಂದ ಆರೋಗ್ಯದ ಮೇಲೆ ಆಗುವ ಕೆಟ್ಟ ಪರಿಣಾಮಗಳ ಬಗ್ಗೆ ತಿಳಿಹೇಳುವ ಮೂಲಕ ಮಾದಕ ವಸ್ತುಗಳ ಬಳಕೆ ಮಾಡಬಾರದು ಹಾಗೂ ಪೌಷ್ಠಿಕ ಆಹಾರ ಸೇವನೆ ಮಾಡಬೇಕು ಇದರಿಂದ ಆರೋಗ್ಯ ಚೆನ್ನಾಗಿರುತ್ತದೆ, ಯೋಗ, ಧ್ಯಾನ ಪ್ರಾಣಾಯಾಮ ಮಾಡುವ ಹವ್ಯಾಸ ರೂಢಿಸಿಕೊಳ್ಳಿ ಎಂದರು.ಶಿಕ್ಷಕ ಬಿ. ಎಸ್. ಅರಳಗುಂಡಗಿ ಮಾತನಾಡಿ ಯೋಜನೆಯ ಧ್ಯೇಯೋದ್ದೇಶಗಳ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.ಎಸ್. ಪಿ. ಕಲ್ಲೂರು, ಬಿ ಎಂ. ಕಡಲಗೊಂಡ, ಎನ್. ಎಸ್. ಬಿರಾದಾರ, ಬಿ. ಎಸ್. ಬಿರಾದಾರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವಲಯ ಮೇಲ್ವಿಚಾರಕಿ ಸವಿತಾ ಪೂಜೇರಿ, ಯೋಜನೆಯ ಕಾರ್ಯ ಕ್ರಮಗಳ ಕುರಿತು ಮಾಹಿತಿ ನೀಡಿದರು.ಎಲ್ಲ ಶಿಕ್ಷಕ ವೃಂದದವರು ಮತ್ತು ಸಿ ಎಸ್ ಸಿ…

Read More