Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದಿಂದ ತಕ್ಷಣ ಸರ್ಕಾರ ದಲ್ಲಿ ಖಾಲಿಯಿರುವ ಉದ್ಯೋಗಗಳನ್ನ ಭರ್ತಿ ಮಾಡಬೇಕು, ಉದ್ಯೋಗದ ವಯೋಮಿತಿಯನ್ನ ಜಾಸ್ತಿ ಮಾಡಬೇಕೆಂದು ಆಗ್ರಹಿಸಿ ಮಂಗಳವಾರ ಬ್ರಹತ್ ಜನಾಕ್ರೋಶ ಹೋರಾಟ ಹಮ್ಮಿಕೊಳ್ಳಲಾಯಿತು.ಈ ವೇಳೆ ಡಿ ವಿ ಪಿ ಸಂಘಟನೆಯ ರಾಜ್ಯಧ್ಯಕ್ಷ ಶ್ರೀನಾಥ್ ಪೂಜಾರಿ ಮಾತನಾಡಿ, ನಾಡಿನಾದ್ಯಂತ ವಿದ್ಯಾರ್ಥಿ ಯುವಜನರ ನಿರುದ್ಯೋಗದ ಸಮಸ್ಯೆ ತೀವ್ರವಾಗಿದೆ. ನಾಲ್ಕು ವರ್ಷದಿಂದ ಯಾವುದೇ ಸರ್ಕಾರಿ ಹುದ್ದೆಗಳನ್ನು ತುಂಬದೇ ಸತಾಯಿಸುತ್ತಿರುವುದು ಖಂಡನಿಯ. ವಿದ್ಯಾರ್ಥಿ ಯುವ ಜನರು ನೌಕ್ರಿ ಪಡೆಯಬೇಕೆನ್ನುವ ಉದ್ದೇಶದಿಂದ ಹಗಲು ರಾತ್ರಿ ಕಷ್ಟಪಟ್ಟು ಶ್ರಮ ಪಡ್ತಾ ಇದ್ದಾರೆ ಆದರೆ ಸರ್ಕಾರ ಅವರ ಕಷ್ಟಕ್ಕೆ ಪ್ರತಿಫಲವಾಗಿ ಉದ್ಯೋಗ ನೀಡದೆ ಅವರ ಜೀವನವನ್ನು ಹಾಳು ಮಾಡುತ್ತಿರುವುದು ಅತಿ ಖೇದಕರ ಸಂಗತಿ ಎಂದರು.ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, ದಲಿತ ವಿದ್ಯಾರ್ಥಿ ಪರಿಷತ್ ಸುಮಾರು ನಿರುದ್ಯೋಗಿ ಯುವಕರ ಪರವಾಗಿ ಎರಡು ವರ್ಷದಿಂದ ಹೋರಾಟ ಮಾಡುತ್ತಾ ಬಂದಿದೆ. ಆದರೆ ನಮ್ಮನ್ನಾಳುವ ಸರ್ಕಾರಗಳು ನಮ್ಮ ಕಷ್ಟಗಳನ್ನ ಅರ್ಥಮಾಡಿಕೊಳ್ಳದೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಯಾಣಿಕರ ಅಹವಾಲು- ಕುಂದುಕೊರತೆಗಳನ್ನು ಆಲಿಸಲು ಅಕ್ಟೋಬರ್ ೦೬ರ ಮಧ್ಯಾಹ್ನ ೩-೩೦ರಿಂದ ೪-೩೦ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ದೂರವಾಣಿ ಸಂಖ್ಯೆ : ೬೩೬೬೪೨೩೮೮೭ಗೆ ಸಾರ್ವಜನಿಕರು ಕರೆ ಮಾಡಿ ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ ಪ್ರಬಂಧ ಸ್ಪರ್ಧೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮ ಗಾಂಧೀಜಿಯವರ ೧೫೬ನೇ ಜಯಂತಿ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮಾಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪಶೃತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಒಟ್ಟು ೫೭೯ ಶಾಲೆಗಳಿಂದ ೮೧೯೮ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಪ್ರೌಢಶಾಲಾ ವಿಭಾಗದಲ್ಲಿ ವಿಜಯಪುರ ನಗರದ ಜಲನಗರ ಸರ್ಕಾರಿ ಪ್ರೌಢಶಾಲೆ ೧೦ನೇ ತರಗತಿ ವಿದ್ಯಾರ್ಥಿನಿ ಅನ್ನಪೂರ್ಣ ಬ.ಪೂಜಾರಿ ಪ್ರಥಮ, ಇಂಡಿ ತಾಲೂಕಿನ ನಾದ ಕೆ.ಡಿ.ಯ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಸೃಷ್ಟಿ ಹಳೇಮನಿ ದ್ವೀತಿಯ ಸ್ಥಾನ ಹಾಗೂ ಸಿಂದಗಿ ತಾಲೂಕಿನ ಕೆರೂಟರಗಿ ಆರ್.ಎಂ.ಎಸ್.ಎ. ಪ್ರೌಢಶಾಲೆ ವಿದ್ಯಾರ್ಥಿನಿ ಶ್ರೇಯಾ ಮ.ಪಾಟೀಲ ತೃತೀಯ ಸ್ಥಾನ ಪಡೆದಿದ್ದಾರೆ.ಪದವಿಪೂರ್ವ ವಿಭಾಗದಲ್ಲಿ ಕೊಲ್ಹಾರ ತಾಲೂಕಿನ ಕೂಡಗಿ ಸರಕಾರಿ ಪದವಿಪೂರ್ವ ಕಾಲೇಜ್‌ನ…

Read More

ಗಾಣಗಾಪೂರದಲ್ಲಿ ಕಾಳಜಿ ಕೇಂದ್ರಕ್ಕೆ ಭೇಟಿ | ಸಂತ್ರಸ್ತರ ಅಹವಾಲು ಸ್ವಿಕಾರ | ನಿತೀನ್ ಗುತ್ತೇದಾರ ಬೆಂಬಲಿಗರಿಂದ ಬೆಡ್ ಶೀಟ್ ವಿತರಣೆ ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಭಾರಿ ಮಳೆ ಮತ್ತು ಮಹಾರಾಷ್ಟ್ರ ಜಲಾಶಯಗಳಿಂದ ನೀರು ಬಿಡುಗಡೆಯಿಂದಾಗಿ ಕಲಬುರಗಿ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ಪಕ್ಷದ ಹಿರಿಯ ನಾಯಕರೊಂದಿಗೆ ತಾಲೂಕಿನ ಪ್ರವಾಹ ಪೀಡಿತ ಪ್ರದೇಶವಾದ ದೇವಲ ಗಾಣಗಾಪೂರಕ್ಕೆ ಭೇಟಿ ನೀಡಿದರು.ಅವರು ಪ್ರವಾಹ ಪೀಡಿತ ಸ್ಥಳಗಳು ಹಾಗೂ ಕಾಳಜಿ ಕೇಂದ್ರಗಳ ಭೇಟಿ ನೀಡಿ ಮಾತನಾಡುತ್ತಾ ರಾಜ್ಯ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ. ಮುಖ್ಯಮಂತ್ರಿಗಳು ಬರೀ ಜಾತಿ ಗಣತಿಯಲ್ಲಿ ತೊಡಗಿದ್ದಾರೆ. ಕೃಷಿ, ಕಂದಾಯ ಸಚಿವರು ಎಲ್ಲಿದ್ದಾರೋ ಗೊತ್ತಿಲ್ಲ. ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸದಾ ಆಕಾಶದಲ್ಲಿರುತ್ತಾರೆ, ಹೀಗಾಗಿ ನೆಲದ ಮೇಲಿನ ಜನರ ಕಷ್ಟ ಕಾಣೋದಿಲ್ಲ. ಸ್ವತಃ ಅವರ ಚಿತ್ತಾಪುರ ಕ್ಷೇತ್ರದ ಜನರು ಕೂಡ ಅವರ ನಡೆಯಿಂದ ಬೇಸತ್ತು ನನ್ನ ಎದುರು ಅಳಲು ತೋಡಿಕೊಂಡಿದ್ದಾರೆ ಎಂದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ ೭ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು. ಅಂದು ಬೆಳಿಗ್ಗೆ ೯.೩೦ಗಂಟೆಗೆ ನಗರದ ಶ್ರೀ ದೇವಸ್ಥಾನದ ಆವರಣದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ವಿವಿಧ ಕಲಾ ತಂಡಗಳೊಂದಿಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣದವರೆಗೆ ಮೆರವಣಿಗೆ ನಡೆಯಲಿದೆ.ಅಂದು ಬೆಳಿಗ್ಗೆ ೧೦.೩೦ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಎಲ್ಲಾ ಸಮುದಾಯದ ಗಣ್ಯರು ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ರಾಮನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮನಹಳ್ಳಿ ಗ್ರಾಮದ ಧರ್ಮರಾಯಗೌಡ ಪಾಟೀಲ, ಉಪಾಧ್ಯಕ್ಷರಾಗಿ ವಿಭೂತಿಹಳ್ಳಿ ಗ್ರಾಮದ ಅಂಬರೀಷ ಸಾಲಕ್ಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಭೀಮರಾಯ ನಂದರಗಿ, ಸೋಮನಾಥ ಮೇಲಿನಮನಿ, ಬಸವರಾಜ ತೆಲ್ಲೂರ, ಅಮರೇಶ ಅಷ್ಟಗಿ, ಮಾಂತು ಮಾಡ್ಯಾಳ, ವಿಠ್ಠಲ ಸಿಂಧನಕೇರಿ, ಪ್ರಭು ವಾಲಿಕಾರ, ರಮೇಶ ಹಳೆಮನೆ, ಲಕ್ಷ್ಮಣ ಬತಗುಣಕಿ, ನವಾಬ ಸುಂಬಡ, ಗೊಲ್ಲಾಳಪ್ಪ ಗೌಡ ಪಾಟೀಲ, ಬಂದೇನವಾಜ್ ಖಾನ ಗೌಡ, ಶಂಕರಗೌಡ ಭೈರುಣಗಿ ಹಾಗೂ ರಾಮನಹಳ್ಳಿ ,ಗುಡ್ಡಳ್ಳಿ, ವಿಭೂತಿಹಳ್ಳಿ ,ನಾಗರಹಳ್ಳಿ ಗ್ರಾಮಗಳ ಮುಖಂಡರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಜನತೆಯಲ್ಲಿ ಅತೀ ಮಳೆಯಿಂದ ಭೂಮಿ ಕಂಪಿಸಿದ್ದು, ಜನ ಭಯದಿಂದ ಹಳ್ಳಿಗಳತ್ತ ಮುಖ ಮಾಡಿದ್ದಾರೆ. ಇದರ ಕುರಿತು ಜಿಲ್ಲಾಡಳಿತ ತಂತ್ರಾಂಶದಿಂದ ಇನ್ನಷ್ಟು ಮಾಹಿತಿ ಕಲೆ ಹಾಕಿ ಜನರಲ್ಲಿರುವ ಭಯ ಹೋದಲಾಡಿಬೇಕು ಎಂದು ಜಿಲ್ಲಾ ವಕ್ತಾರ ಹಾಗೂ ತಾಲೂಕು ಉಸ್ತುವಾರಿ ಚನ್ನಪ್ಪಗೌಡ ಬಿರಾದಾರ ಮನವಿ ಮಾಡಿಕೊಂಡಿದ್ದಾರೆ.ಸಿಂದಗಿ ಜಯ ಕರ್ನಾಟಕ ಸಂಘಟನೆ ತಾಲೂಕಾ ಘಟಕದ ವತಿಯಿಂದ ತಹಶೀಲ್ದಾರ್ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸುವ ಮೊದಲು ಮಾತನಾಡಿದ ಅವರು, ಮತಕ್ಷೇತ್ರದಲ್ಲಿ ಸತತವಾಗಿ ಸುರಿದ ಮಳೆ ಮತ್ತು ಭೀಮಾ ನದಿಯ ಪ್ರವಾಹದಿಂದ ಹತ್ತಿ, ತೊಗರಿ, ಕಬ್ಬು, ಉದ್ದು, ಈರುಳ್ಳಿ, ಸೂರ್ಯಕಾಂತಿ ಬೆಳೆಗಳು ಸಂಪೂರ್ಣವಾಗಿ ಹಾಳಾಗಿದ್ದು, ರಾಜ್ಯ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದರು.ಈ ವೇಳೆ ಜಯ ಕರ್ನಾಟಕ ಸಂಘಟನೆ ತಾಲೂಕಾಧ್ಯಕ್ಷ ಸಂತೋಷ ಮನಗೂಳಿ ಮಾತನಾಡಿ, ಸತತವಾಗಿ ಸುರಿದ ಮಳೆಯಿಂದ ಆಲಮೇಲ ಮತ್ತು ಸಿಂದಗಿ ತಾಲೂಕಿನ ರೈತರ ಬೆಳೆಗಳು ಹಾನಿಯಾಗಿದ್ದು, ಕೂಡಲೇ ಸಮೀಕ್ಷೆ ಮಾಡಿ ರೈತರಿಗೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ ಸಂಸದ ಖೇಲ್ ಅಬಿಯಾನದ ಅಂಗವಾಗಿ ಏರ್ಪಡಿಸಿದ್ದ ಹಗ್ಗ ಜಗ್ಗಾಟ ಮತ್ತು ರಂಗೋಲಿ ಬಿಡಿಸುವ ಪಂದ್ಯಾವಳಿಯ ಅಂತಿಮ ಪಂದ್ಯಗಳು ಶುಕ್ರವಾರ ಕೊಲ್ಹಾರ ಪಟ್ಟಣದಲ್ಲಿ ನಡೆಯುತ್ತವೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಪಟ್ಟಣದಲ್ಲಿ ಸಾಯಂಕಾಲ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಒಂಬತ್ತು ಜಿಲ್ಹಾ ಪಂಚಾಯತ ಮತ್ತು ಪಟ್ಟಣ ಪಂಚಾಯತ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಪಂದ್ಯಾವಳಿಗಳು ಜರುಗಿದ್ದು ಮಹಿಳೆಯರಿಗಾಗಿ ನಡೆದ ರಂಗೋಲಿ ಸ್ಪರ್ಧೇಯಲ್ಲಿ ಅಂತಿಮ ಹಂತಕ್ಕೆ 27 ಜನರು ಆಯ್ಕೆಯಾಗಿದ್ದು ಹಗ್ಗ ಜಗ್ಗಾಟದಲ್ಲಿ 18 ತಂಡಗಳು ಆಯ್ಕೆಯಾಗಿವೆ ಎಂದು ತಿಳಿಸಿದ ಅವರು ಅಂತಿಮ ಪಂದ್ಯಗಳಲ್ಲಿ ವಿಜೇತರಾದವರಿಗೆ ಸೂಕ್ತ ಬಹುಮಾನ ಕೊಡಲಾಗುವದು ಎಂದರು.ಪ್ರತಿ ವರುಷದಂತೆ ಈ ವರುಷವೂ ಕೂಡಾ ಬನ್ನಿ ವಿನಿಮಯ ಕಾರ್ಯಕ್ರಮ ಪಟ್ಟಣದ ಸ್ವಗ್ರಹದಲ್ಲಿ ನಡೆಸಲಾಗುವದು ಅವಳಿ ಜಿಲ್ಹೆಯಿಂದ ಆಗಮಿಸುವ ಅಭಿಮಾನಿಗಳು ಹಾಗೂ ಕ್ಷೇತ್ರದ ಸಾರ್ವಜನಿಕ ಬಂದುಗಳೊಂದಿಗೆ ಪರಸ್ಪರ ಬನ್ನಿ ವಿನಿಮಯದ ಸ್ನೇಹ ಮೀಲನ ಹಮ್ಮಿಕೊಳ್ಳಲಾಗಿದೆ ಎಂದರು.

Read More

ರಾಷ್ಟ್ರೀಯ ಪೋಷಣ ಮಾಸಾಚರಣೆ-ಸ್ವಸ್ಥನಾರಿ- ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಯಂದಿರು ಸಂಸಾರವನ್ನು ಸಾಗಿಸುವುದರ ಜೊತೆ ಸ್ವಸ್ಥವಾಗಿರಲು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಅವರು ಹೇಳಿದರು.ಮಂಗಳವಾರ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಈಶ್ವರಲಿಂಗ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಆರೋಗ್ಯ ಇಲಾಖೆ ಹಾಗೂ ಬಿ.ಎಲ್.ಡಿ.ಇ ಕಾನೂನು ಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪೋಷಣ ಮಾಸಾಚರಣೆ, ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…

Read More

ಪ್ರವಾಹದಿಂದ ಹಾನಿಗೀಡಾಗಿರುವ ಜಿಲ್ಲೆಗಳಲ್ಲಿ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ | ಪ್ರತಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಹ ಪರಿಸ್ಥಿತಿಯನ್ನು “ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ” ಎಂದು ಪ್ರತಿಪಕ್ಷ ಬಿಜೆಪಿ ಮಂಗಳವಾರ ಆರೋಪಿಸಿದೆ.ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡುವ ಬದಲು ವೈಮಾನಿಕ ಸಮೀಕ್ಷೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಕಲಬುರಗಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಮಹಾರಾಷ್ಟ್ರದ ಉಜನಿ ಮತ್ತು ನೀರಾ ಜಲಾಶಯಗಳಿಂದ ಹೆಚ್ಚುವರಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಭೀಮಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಉಂಟಾಗಿ ಹಾನಿಗೀಡಾಗಿರುವ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು.ಪ್ರವಾಹ ಪೀಡಿತ ಜಿಲ್ಲೆಗಳಿಗೆ ಹೋಗಿ ಅಲ್ಲಿನ ಅಧಿಕಾರಿಗಳು ಮತ್ತು ರೈತರೊಂದಿಗೆ ಕುಳಿತು ಬೆಳೆಗಳಿಗೆ ಪರಿಹಾರ ಘೋಷಿಸಬೇಕಾಗಿತ್ತು ಮತ್ತು ಹಾಳಾದ ರಸ್ತೆಗಳು, ಶಾಲೆಗಳು ಮತ್ತು ಅಂಗನವಾಡಿಗಳ ಪುನಶ್ಚೇತನಕ್ಕೆ ಹಣ…

Read More