Author: editor.udayarashmi@gmail.com

ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ ವಿದ್ಯಾರ್ಥಿಗಳಿಗೆ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿರಂತರ ಓದಿನಲ್ಲಿ ಯಶಸ್ಸಿನ ಗುಟ್ಟು ಅಡಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವ ಮೂಲಕ ಗುರಿ ಸಾಧನೆಯಡೆಗೆ ಸಾಗುವುದರೊಂದಿಗೆ ಸತತ ಅಧ್ಯಯನ ಪರಿಶ್ರಮದ ಮೂಲಕ ಗುರಿ ತಲುಪಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರು ಹೇಳಿದರು.ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ವಿಷಯದ ಕುರಿತಾ ನಡೆದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಬೇಕು. ಅದರಲ್ಲೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರ ಓದು ಅಗತ್ಯ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು.ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಎಎಸ್, ಐಎಎಸ್‌ನಂತಹ ಪರೀಕ್ಷೆಗಳ ಪಠ್ಯ ಸಂಗ್ರಹಿಸಿಕೊಂಡು ಹಾಗೂ ಸರಿಯಾಗಿ ಗ್ರಹಿಸಿಕೊಂಡು ಅಭ್ಯಸಿಸಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆಗಳಿಗೆ ಭಯ ಪಡದೆ, ಓದಿರುವ ವಿಷಯವನ್ನು ಅರ್ಥೈಸಿಕೊಂಡು ಟಿಪ್ಪಣಿ ಮಾಡಿಟ್ಟುಕೊಳ್ಳಬೇಕು. ಪುನಃ ಅದೇ ವಿಷಯದ ಅಧ್ಯಯನ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಸಾಧಿಸಲು ಕ್ರೀಡೆಗಳು ಪೂರಕವಾಗಿವೆ. ದಸರಾ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಸ್ಪೂರ್ತಿಯಿಂದ ಭಾಗವಹಿಸಿ ಉತ್ತಮ ಸಾಧನೆ ಮಾಡುವಂತಾಗಬೇಕೆಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಽಕಾರ ಹಾಗೂ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ೨೦೨೫-೨೬ ನೇ ಸಾಲಿನ ಬಸವನಬಾಗೇವಾಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ದಸರಾ ಕ್ರೀಡಾಕೂಟಗಳು ಯುವ ಸಮೂಹವನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತೆ ಉತ್ತೇಜಿಸುತ್ತವೆ.ಗ್ರಾಮೀಣ ಜನರಿಗೆ ದಸರಾ ಕ್ರೀಡಾಕೂಟ ಅವಕಾಶ ನೀಡುತ್ತದೆ. ಆರೋಗ್ಯವಂತ ಮನುಷ್ಯನಿಗೆ ಕ್ರೀಡೆ ಮಹತ್ವದಾಗಿದೆ ಎಂದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶಿವಾನಂದ ಮಂಗಾನವರ ಮಾತನಾಡಿ, ಕ್ರೀಡೆ ಮನುಷ್ಯನ ಬದುಕಿಗೆ ಪ್ರೋತ್ಸಾಹ ಹೆಚ್ಚಿಸುತ್ತದೆ. ಶರೀರ ಸದೃಢವಾಗಿರಲು ಕ್ರೀಡೆ ಮುಖ್ಯವಾಗಿದೆ.ಮೈಸೂರು ಅರಸ ನಾಲ್ವಡಿ…

Read More

ಸೆ.೧ ರಿಂದ ಅ.೧ ರವರೆಗೆ ನಾಡಿನ ಮಠಾಧಿಪತಿಗಳ ಒಕ್ಕೂಟದಿಂದ ಬಸವ ಸಂಸ್ಕ್ರತಿ ಅಭಿಯಾನ | ಸಚಿವ ಶಿವಾನಂದ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ೧೨ ನೇ ಶತಮಾನದ ಬಸವ ಸಂಸ್ಕ್ರತಿ ಅನನ್ಯವಾಗಿದೆ. ಒಂಬೈನೂರು ವರ್ಷಗಳಾದರೂ ಬಸವ ಸಂಸ್ಕ್ರತಿ ನಾಡಿನಲ್ಲಿ ಎಲ್ಲರೂ ಸಾಮರಸ್ಯ, ಸಮಾನತೆಯಿಂದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದ ಬಸವೇಶ್ವರ ದೇವಾಲಯದ ಸಿಬಿಎಸ್ಸಿ ಶಾಲಾ ಆವರಣದಲ್ಲಿನ ನಂದೀಶ್ವರ ರಂಗಮಂದಿರದಲ್ಲಿ ಭಾನುವಾರ ಸಂಜೆ ಶ್ರಾವಣ ಮಾಸದಂಗವಾಗಿ ಒಂದು ತಿಂಗಳ ಕಾಲ ಹಮ್ಮಿಕೊಂಡಿದ್ದ ಮೋಟಗಿಯ ಪ್ರಭು ಚನ್ನಬಸವ ಸ್ವಾಮೀಜಿಯವರ ಬಸವ ಸಂಸ್ಕ್ರತಿ ಪ್ರವಚನದ ಮಂಗಲ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಜಗತ್ತಿಗೆ ಕಾಯಕ, ದಾಸೋಹ, ಸಮಾನತೆ ತತ್ವ ನೀಡುವ ಮೂಲಕ ಎಲ್ಲರೂ ಜಾತ್ಯತೀತವಾಗಿ ಸಾಮರಸ್ಯದಿಂದ ಜೀವನ ಸಾಗಿಸಬೇಕೆಂಬ ಸಂದೇಶ ಸಾರಿದ್ದಾರೆ. ರಾಜ್ಯ ಸರ್ಕಾರ ಬಸವೇಶ್ವರರನ್ನು ರಾಜ್ಯದ ಸಾಂಸ್ಕ್ರತಿಕ ನಾಯಕ ಎಂದು ಘೋಷಣೆ ಮಾಡುವ ಮೂಲಕ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕಳ್ಳರು ನ್ಯಾಯಾಧೀಶರ ಮನೆಯನ್ನೇ ದೋಚಿ ಪರಾರಿಯಾದ ಘಟನೆ ಇಲ್ಲಿನ ಹುಡಕೋ ಬಡಾವಣೆಯಲ್ಲಿ ನಡೆದಿದೆ.ಬಡಾವಣೆಯ ೧೪ನೇ ಕ್ರಾಸ್ ನಲ್ಲಿರುವ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅವರ ಮನಗೆ ಕಳ್ಳರು ನುಗ್ಗಿ ತಮ್ಮ ಕೈಚಳಕವನ್ನು ತೋರಿಸಿದ್ದು ನಗ ನಾಣ್ಯ ದೋಚಿದ್ದಾರೆ. ನ್ಯಾಯಾಲಯಕ್ಕೆ ಸಾಲು ಸಾಲು ರಜೆ ಇರುವ ಹಿನ್ನೆಲೆ ನ್ಯಾಯಾಧೀಶರು ಪರಿವಾರದ ಸಮೇತ ರವಿವಾರ ಬೆಳಿಗ್ಗೆ ತಮ್ಮೂರಿಗೆ ತೆರಳಿದ್ದು, ಮನೆಯಲ್ಲಿ ಯಾರೂ ಇರದನ್ನ ಖಚಿತಪಡಿಸಿಕೊಂಡ ಕಳ್ಳರು ಈ ಕೃತ್ಯ ಎಸಗಿದ್ದಾರೆ.ಸಾಧನಗಳನ್ನು ಬಳಸಿ ಮನೆಯ ಬೀಗವನ್ನು ಸಲೀಸಾಗಿ ತೆಗೆದು ಒಳ ನುಗ್ಗಿದ ಖತರ್ನಾಕ್ ಕಳ್ಳರು ದೇವರ ಕೋಣೆ, ಇನ್ನೀತರ ವಸ್ತುಗಳಿಗೆ ಕೈ ಹಾಕದೇ, ಅಲಮೇರಾ, ಕಬೋರ್ಡ ಗಳನ್ನು ಕಿತ್ತಾಡಿ ನಗನಾಣ್ಯಗಳನ್ನು ದೋಚಿದ್ದಾರೆ ಎನ್ನಲಾಗಿದೆ.ಘಟನೆಯ ಮನೆಯ ಪಕ್ಕದ ಮನೆಯಲ್ಲಿರುವ ನಿವಾಸಿ ನ್ಯಾಯವಾದಿ ಬಿ.ಎ.ಪಾಟೀಲ ಅವರು ಉದಯರಶ್ಮಿಯೊಂದಿಗೆ ಮಾತನಾಡಿ ನಾನು ಸೋಮುವಾರ ನಸುಕಿನ ಜಾವ ೩:೪೫ ಕ್ಕೆ ಎದ್ದು ಮನೆಯ ಎದುರುಗಡೆಯೇ ೪೫ ನಿಮಿಷಗಳ ಕಾಲ ವಾಕಿಂಗ್ ಮಾಡಿದ್ದೇನೆ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ೨೦೨೫-೨೬ನೇ ಸಾಲಿನ ಸ್ನಾತಕೋತ್ತರ ಎಂ.ಪಿ.ಇಡಿ ಕೋರ್ಸ್ಗಳ ವ್ಯಾಸಂಗಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳುUUCMS vÀAvÁæA±ÀzÀ https://uucms.karnataka.gov.in ಮೂಲಕ ಆಗಸ್ಟ್ ೨೮ರವರೆಗೆ ಅರ್ಜಿ ಗಳನ್ನು ಸಲ್ಲಿಸಿ, ಅರ್ಜಿ ಪ್ರತಿಯೊಂದಿಗೆ ಎಲ್ಲ ದಾಖಲೆಗಳನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರೀಡಾ ವಿಭಾಗಕ್ಕೆ ಸಲ್ಲಿಸಬಹುದಾಗಿದೆ. ಆಗಸ್ಟ್ ೩೦ರಂದು ಎಂ.ಪಿ.ಇಡಿ ಕೌನ್ಸಲಿಂಗ ಪ್ರವೇಶ ಪ್ರಕ್ರಿಯೆ ನಡೆಯಲಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿwww.rcub.ac.inವೆಬ್‌ಸೈಟ್ ಸಂಪರ್ಕಿಸಬಹುದಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೈಸೂರು ವಿಶ್ವವಿದ್ಯಾಲಯದೊಂದಿಗೆ ಸಂಯೋಜನೆಗೊAಡಿರುವ ಮೈಸೂರಿನ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ಮಾಸ್ಟರ್ ಆಫ್ ವಿಜ್ಯುಯಲ್ ಆರ್ಟ್ಸ್ (ಎಂ.ವಿ.ಎ) ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಎರಡು ವರ್ಷದಲ್ಲಿನ ನಾಲ್ಕು ಸೆಮಿಸ್ಟರ್ ಪದವಿ ಇದಾಗಿದ್ದು, ಚಿತ್ರಕಲೆ ಹಾಗೂ ಶಿಲ್ಪಕಲೆ ವಿಭಾಗಗಳ ವಿಶೇಷ ಅಧ್ಯಯನಗಳಿರುತ್ತವೆ. ಆಸಕ್ತ ಅಭ್ಯರ್ಥಿಗಳು ಪ್ರವೇಶಾತಿಗಾಗಿ ದಿನಾಂಕ: ೩೦-೦೮-೨೦೨೫ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗಾಗಿ ಆಗಸ್ಟ್ ೩೦ರಂದು ನಡೆಯುವ ಅರ್ಹತೆ ಪರೀಕ್ಷೆಗೆ ಹಾಗೂ ವೈಯಕ್ತಿಕ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಕಚೇರಿ ದೂರವಾಣಿ ಸಂಖ್ಯೆ ೦೮೨೧-೨೪೩೮೯೩೧ಗೆ ಸಂಪರ್ಕಿಸಬಹುದಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಸ್ನಾತಕೋತ್ತರ ವಿಭಾಗಗಳಲ್ಲಿ ಬಾಕಿ ಉಳಿದಿರುವ ಸೀಟುಗಳಿಗಾಗಿ ಯುಯುಸಿಎಂಎಸ್ ತಂತ್ರಾಂಶದ ಮೂಲಕ ದಿನಾಂಕ: ೨೪-೦೮-೨೦೨೫ ರಿಂದ ೨೯-೦೮-೨೦೨೫ ರವರೆಗೆ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ಕಡ್ಡಾಯವಾಗಿ ಯುಯುಸಿಎಂಎಸ್ ತಂತ್ರಾAಶದ ಮೂಲಕ ನಿಗದಿಪಡಿಸಲಾದ ಅರ್ಜಿ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬೇಕು.ದಿನಾಂಕ:೩೦-೦೮-೨೦೨೫ರಂದು ಬಾಕಿ ಉಳಿದಿರುವ ಸೀಟುಗಳನ್ನು ಯುಯುಸಿಎಂಎಸ್ ತಂತ್ರಾAಶದ ಮೂಲಕ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಸೀಟು ಹಂಚಿಕೆ ಮಾಡಿ ಪ್ರವೇಶಾತಿಯನ್ನು ನೀಡಲಾಗುವುದು.ಸ್ನಾತಕೋತ್ತರ ಕೇಂದ್ರ ವಿಜಯಪುರದಲ್ಲಿ ಲಭ್ಯವಿರುವ ಎಲ್ಲ ಸ್ನಾತಕೋತ್ತರ ಕೋರ್ಸಗಳ ಪ್ರವೇಶ ಶುಲ್ಕಗಳನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೇಕಡಾ ೩೦% ಕಡಿಮೆ ಮಾಡಲಾಗಿರುತ್ತದೆ ಹಾಗೂ ಸದರಿ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ದಿನಾಂಕ:೩೦-೦೮-೨೦೨೫ ರಂದು ಬೆಳಿಗ್ಗೆ ೯.೦೦ ಗಂಟೆಗೆ ಹಾಜರಾಗಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ತಿತಿತಿ.ಡಿಛಿub.ಚಿಛಿ.iಟಿ ಜಾಲತಾಣವನ್ನು ವೀಕ್ಷಿಸುವಂತೆ ವಿಶ್ವವಿದ್ಯಾಲಯದ ಉಪ ಕುಲಸಚಿವರ ಪ್ರಕಟಣೆ ತಿಳಿಸಿದೆ.

Read More

ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ನಿವೃತ್ತ ಐಎಎಸ್ ಅಧಿಕಾರಿ ಅಶೋಕ ದಳವಾಯಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅರಣ್ಯ ರಕ್ಷಣೆ ಮಾಡುವ ಮಹತ್ತರ ಜವಾಬ್ದಾರಿಯನ್ನು ನಿಭಾಯಿಸುವ ಅರಣ್ಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ತಮ್ಮ ಕರ್ತವ್ಯದೊಂದಿಗೆ ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸುವುದು ಅಗತ್ಯವಾಗಿದೆ. ಎಲ್ಲರೂ ಆಟೋಟಗಳಲ್ಲಿ ಪಾಲ್ಗೊಳ್ಳುವ ಮೂಲಕ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಂಡು ಕ್ರೀಡಾ ಸ್ಪೂರ್ತಿ ಮೆರೆಯಬೇಕು. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ನಿವೃತ್ತ ಐಎಎಸ್ ಅಧಿಕಾರಿಯಾದ ಅಶೋಕ ದಳವಾಯಿ ಅವರು ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಕಾಯಕವೇ ಕೈಲಾಸ ಎಂಬ ಬಸವಾದಿ ಶರಣರ ನುಡಿಯಂತೆ ನಾವು ನಿರ್ವಹಿಸುವ ಕಾರ್ಯವನ್ನು ಅತ್ಯಂತ ನೈತಿಕವಾಗಿ, ಶ್ರದ್ಧೆಯಿಂದ ನಿರ್ವಹಿಸಬೇಕು. ಅರಣ್ಯ ಇಲಾಖೆ ಅರಣ್ಯೀಕರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದೆ. ಕೆಲಸಗಳ ಒತ್ತಡದ ಮಧ್ಯೆಯೂ ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಆತ್ಮಸ್ಥೈರ್ಯ, ಮುಂದಾಳತ್ವ, ಪರಸ್ಪರ ಪರಿಚಯ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಉರ್ದುಶಾಲೆಯ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ರುಕ್ಕಯ್ಯಾ ಶಿರವಾಳ ಮತ್ತು ಫೌಜಿಯಾ ನಸರುದ್ದಿನ್ ಇವರು ದಿ:೨೪ರಂದು ಆಲಮೇಲದಲ್ಲಿ ಮಹಮ್ಮದಿಯಾ ನಾಥ್ ಕಮೀಟಿ ವಿಜಯಪುರರವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲ್ಲೂಕು ಮಟ್ಟದ ಇಸ್ಲಾಮಿಕ್ ಕ್ವಿಜ್ (ರಸಪ್ರಶ್ನೆ) ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದು ನಗದು ಬಹುಮಾನ ೮೬೦೦ ರೂ.ಗಳು ಹಾಗೂ ಪದಕ ಮತ್ತು ಪ್ರಶಸ್ತಿಪತ್ರ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.ಇವರ ಸಾಧನೆಗೆ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ರಾಮತೀರ್ಥ ಕೆರೆಯ ನೀರು ರಾಸಾಯನಿಕ ಕಾರಣದಿಂದ ಕಪ್ಪು ಹಾಗೂ ಕೆಂಪು ಬಣ್ಣಕ್ಕೆ ತಿರುಗಿದ್ದು ಕೂಡಲೇ ತಾಲ್ಲೂಕು ಆಡಳಿತ ಈ ಕುರಿತು ಕ್ರಮ ಕೈಗೊಳ್ಳಲು ಆಗ್ರಹಿಸಿ ರೈತರು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಲಯಕ್ಕೆ ಸೋಮವಾರ ಆಗಮಿಸಿದ ಪಟ್ಟಣ ಹಾಗೂ ಪಡಗಾನೂರ, ಚಿಕ್ಕರೂಗಿ ಗ್ರಾಮಗಳ ರೈತರು ರಾಮತೀರ್ಥ, ಕಡ್ಲೇವಾಡ ಕೆರೆಗಳ ನೀರು ಕಂದು, ಕೆಂಪು ಬಣ್ಣಕ್ಕೆ ತಿರುಗಿದ ಕುರಿತು ಆತಂಕ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಶೈಲ ಕಬ್ಬಿನ ಮಾತನಾಡಿ, ದೇವರಹಿಪ್ಪರಗಿ ಪಟ್ಟಣದ ಜಹಾಂಗೀರ ಮುಲ್ಲಾ ಎನ್ನುವವರಿಗೆ ಸೇರಿದ ಇಟ್ಟಂಗಿ ಭಟ್ಟಿಯಲ್ಲಿ ಬಳಸಿದ ಯಾವುದೇ ರಾಸಾಯನಿಕ ಕಾರಣದಿಂದ ನೀರು ಹರಿದು ನಮ್ಮೂರ ಧಾಮದ ಭಾವಿ ಸಹಿತ ರಾಮತೀರ್ಥ ಕೆರೆಯ ನೀರು ಸಂಪೂರ್ಣ ಕಂದು ಬಣ್ಣಕ್ಕೆ ತಿರುಗಿ ಬಳಸಲು ಬಾರದಂತಾಗಿವೆ. ಜೊತೆಗೆ ಇದೇ ನೀರು ಕಡ್ಲೇವಾಡ ಕೆರೆಗೆ ಹರಿಯುತ್ತಿರುವುದರಿಂದ ಆ ನೀರು ಸಹ ಕಂದು ಬಣ್ಣಕ್ಕೆ ತಿರುಗಿದೆ. ಈ ನೀರು ಪ್ರಾಣಿ, ಪಕ್ಷಿ,…

Read More