Author: editor.udayarashmi@gmail.com

ಸಿಂದಗಿ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಭರವಸೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಉದ್ಯಾನಗಳನ್ನು ಹಂತ-ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು. ಜನರ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ವಾರ್ಡ್ ನಂ.೧೩ರಲ್ಲಿ ೨೦೨೫-೨೬ನೆಯ ಸಾಲಿನ ೧೫ನೆಯ ಹಣಕಾಸು, ಪುರಸಭೆ ನಿಧಿ ಹಾಗೂ ಎಸ್‌ಎಫ್‌ಸಿ ಯೋಜನೆಯಡಿಯಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡ ೩೧.೫೨ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಹಾಗೂ ಉದ್ಯಾನ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇತ್ತಿಚಗೆ ವಾರ್ಡ್ ನಂ.೧೩ಕ್ಕೆ ಭೇಟಿ ನೀಡಿ ಸಮಸ್ಯಗಳನ್ನು ಆಲಿಸ ಪರಿಹರಿಸುವುದಾಗಿ ಭರವಸೆ ನೀಡಿದ್ದು, ಆ ಪ್ರಕಾರವಾಗಿ ನಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ ಎಂದರು.ಈ ವೇಳೆ ಶಾಸಕ ಅಶೋಕ ಮನಗೂಳಿ ಮಾತನಾಡಿ, ಸಿಂದಗಿ ನಗರದ ಮಹಾಜನತೆ ಮನಗೂಳಿ ಅವರ ಮನೆತನಕ್ಕೆ ರಾಜಕೀಯ ಶಕ್ತಿಯಾಗಿ ನಿಂತಿದ್ದೀರಿ. ಸಿಂದಗಿ ನಗರದ ಸೌಂದರ್ಯೀಕರಣಕ್ಕೆ ಎಲ್ಲ ಪುರಸಭೆ ಸದಸ್ಯರು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಪ್ರತಿ ವಾರ್ಡಿನ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಸಂತರು, ಶರಣರು, ಪ್ರವಾದಿಗಳು ನಡೆದಾಡಿದಂತಹ ನೆಲ ನಮ್ಮದು. ಸೌಹಾರ್ದತೆಗೆ ಧಕ್ಕೆ ಬರದಂತೆ ಎಚ್ಚರಿಕೆ ವಹಿಸಿ ಹಬ್ಬಗಳನ್ನು ಆಚರಿಸಬೇಕು ಎಂದು ಸಿಂದಗಿ ಪಿಎಸ್‌ಐ ಆರೀಫ್ ಮುಷಾಪುರಿ ಸೂಚಿಸಿದರು.ತಾಲೂಕಿನ ಮೋರಟಗಿ ಗ್ರಾಮದ ಹೊರಪೊಲೀಸ್ ಠಾಣೆಯಲ್ಲಿ ಗೌರಿ-ಗಣೇಶ ಹಾಗೂ ಈದ್-ಮಿಲಾದ್ ಪ್ರಯುಕ್ತ ಹಮ್ಮಿಕೊಂಡ ಶಾಂತಿ ಸಭೆಯಲ್ಲಿ ಮಾತನಾಡಿದರು.ಪರವಾನಿಗೆ ಕಡ್ಡಾಯ: ಸರಕಾರದ ಆದೇಶವನ್ನು ಚಾಚು ತಪ್ಪದೇ ಪಾಲಿಸುವುದು ನಮ್ಮೆಲ್ಲರ ಆದ್ಯಕರ್ತವ್ಯ. ಡಿಜೆಗೆ ಸಂಬಂಧಪಟ್ಟಂತೆ ಸರಕಾರ ಅಧಿಕೃತವಾಗಿ ಇನ್ನು ಪರವಾನಿಗೆ ನೀಡಿಲ್ಲ. ಮುಂಚಿತವಾಗಿ ಸೋಲಾಪುರ್ ಇಂಡಿಯಂತಹ ಪಟ್ಟಣಕ್ಕೆ ಹೋಗಿ ಅಡ್ವಾನ್ಸ್ ದುಡ್ಡು ಕೊಟ್ಟು ಬುಕ್ ಮಾಡುವ ಕೆಲಸ ಮಾಡಬೇಡಿ. ಸರಕಾರ ಆದೇಶ ನೀಡಿದರೆ ಪರವಾನಿಗೆ ನೀಡುತ್ತೇವೆ. ಅದರ ಜೊತೆಗೆ ಕೆಇಬಿ, ಮೈಕ್ ಸೌಂಡ್, ಪಿಡಬ್ಲ್ಯೂಡಿಗೆ ಸಂಬಂದಿಸಿದ ಅಧಿಕಾರಿಗಳನ್ನು ಭೇಟಿ ಮಾಡಿ ಕಡ್ಡಾಯವಾಗಿ ಪರವಾನಿಗೆ ಪಡೆಯಬೇಕು. ಪರವಾನಿಗೆ ಇಲ್ಲದೇ ಹೋದಲ್ಲಿ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ಕಮೀಟಿಯವರು ಜವಾಬ್ದಾರರಾಗುತ್ತೀರಿ ಎಂದು ಎಚ್ಚರಿಕೆ ನೀಡಿದರು.ಶಾಂತಿ ಸಭೆಯಲ್ಲಿ ಮಾಜಿ ಜಿಪಂ ಸದಸ್ಯ ಎನ್.ಆರ್.ತಿವಾರಿ, ರವಿಕಾಂತ ನಡುವಿನಕೇರಿ, ಶಿವಾನಂದ ಕೆರಿಗೊಂಡ…

Read More

ಮಿನಿ ವಿಧಾನಸೌಧದ ಎರಡನೆ ಹಂತದ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಅಶೋಕ ಮನಗೂಳಿ ಭರವಸೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರಕಾರ ಬದಲಾವಣೆಯಾದ ಹಿನ್ನೆಯಲ್ಲಿ ಈ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ನೆನೆಗುದಿಗೆ ಬಿದ್ದ ಈ ಕಾಮಗಾರಿಗೆ ಚಾಲನೆ ನೀಡಿದ್ದೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ನಗರದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌಧದ ಎರಡನೆ ಹಂತದ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ರೂ.೫ಕೋಟಿ ಹಾಗೂ ಕಂಪೌಂಡ ನಿರ್ಮಾಣಕ್ಕೆ ಪೌರಾಡಳಿತ ಇಲಾಖೆ ವತಿಯಿಂದ ಮಂಜೂರಾದ ರೂ.೧ಕೋಟಿ ಮೊತ್ತದ ಕಾಮಗಾರಿಗೆ ಭೂಮಿ ಪೂಜೆಯಲ್ಲಿ ನೆರವೇರಿಸಿ ಮಾತನಾಡಿದ ಅವರು, ಕಂದಾಯ ಮತ್ತು ಪೌರಾಡಳಿತ ಸಚಿವರು ಸೇರಿ ರೂ.೬ಕೋಟಿ ಅನುದಾನವನ್ನು ಮಂಜೂರು ಮಾಡಿದ್ದಾರೆ. ಬಹುದಿನಗಳಿಂದ ಕುಂಟುತ್ತಾ ನಡೆಯುತ್ತಿದ್ದು ಈ ಕಾಮಗಾರಿಗೆ ಮತ್ತಷ್ಟು ಅನುದಾನ ನೀಡಿ ಬೇಗೆನೆ ಪೂರ್ಣಗೊಳ್ಳಲಿ ಎಂಬುದು ನಮ್ಮ ಇಚ್ಚೆಯಾಗಿದೆ. ಜನೆವರಿ ಅಥವಾ ಡಿಸೆಂಬರ್ ತಿಂಗಳೊಳಗಾಗಿ ಸಿಎಂ ಅವರು ಸಿಂದಗಿ ನಗರಕ್ಕೆ ಆಗಮಿಸುವವರಿದ್ದಾರೆ. ಅವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ. ಸಿಂದಗಿ ನಗರವನ್ನು ವಿಜಯಪುರ…

Read More

ಲೇಖನ- ಮಲ್ಲಪ್ಪ ಸಿದ್ರಾಮ ಖೊದ್ನಾಪೂರತಿಕೋಟಾವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪ್ರಾಣಿಪ್ರೀಯ ತಜ್ಞ ಜಾನ್ ಬಿಲ್ಲಿಂಗ್ಸ್ ಅವರ ಪ್ರಕಾರ, “ಈ ಜಗತ್ತಿನಲ್ಲಿ ತನ್ನ ಮಾಲಿಕನ ಮೇಲೆ ವಿಶ್ವಾಸ, ಪ್ರೀತಿ, ನಂಬಿಕೆಯುಳ್ಳ ಮತ್ತು ತನ್ನ ಜೀವದ ಹಂಗು ತೊರೆದು ಮನೆಯ ಒಡೆಯನನ್ನು ರಕ್ಷಿಸುವ ಏಕೈಕ ಪ್ರಾಣಿ ಎಂದರೆ ಅದುವೇ ಶ್ವಾನ” ಎಂದು ಹೇಳಿದ್ದಾರೆ. ಅನಾದಿ ಕಾಲದಿಂದಲೂ ಮಾನವನ ಸಾಕು ಪ್ರಾಣಿಗಳಲ್ಲಿ ಅತ್ಯಂತ ನಂಬಿಕಸ್ಥ ಸಾಕು ಪ್ರಾಣಿ ಎಂದರೆ ನಾಯಿ. ತನ್ನ ಮಾಲಿಕ ಮತ್ತು ಆತನ ಮನೆಯನ್ನು ಕಾಯುತ್ತಾ ಪ್ರೀತಿಯ ಹಾಗೂ ನಂಬುಗೆಯ ಪ್ರಾಣಿಯಾಗಿದೆ. ಎಲ್ಲ ಪ್ರಾಣಿಗಳಲ್ಲಿ ಅತ್ಯಂತ ಚುರುಕು ಬುದ್ದಿಯಾದ ನಾಯಿ ಮನೆಗಳಲ್ಲಷ್ಟೇ ಅಲ್ಲದೇ ಪೋಲೀಸ್ ಹಾಗೂ gಕ್ಷಣಾ ಪಡೆಯಲ್ಲಿಯೂ ವಿಶಿಷ್ಟ ಸ್ಥಾನವನ್ನು ಪಡದಿರುವುದು ಇನ್ನೊಂದು ವಿಶೇಷ. ಬೇಟೆ, ಕಾವಲು ಕಾಯಲು ಹಾಗೂ ಸ್ಫೋಟಕಗಳನ್ನು ಪತ್ತೆ ಹಚ್ಚುವಲ್ಲಿ ಶ್ವಾನದ್ದು ಎತ್ತಿದ ಕೈ. ಈ ನಾಯಿಯು ವಿಶ್ವಾಸಕ್ಕೆ ಹೆಸರುವಾಸಿಯಾಗಿರುವದರಿಂದ ಸಿಂಡಿಕೇಟ್ ಬ್ಯಾಂಕ್ ಸಹಿತ ತನ್ನ ಬ್ಯಾಂಕಿನ ಚಿನ್ಹೆಯನ್ನಾಗಿ ‘ನಾಯಿ’ ಎಂಬ ನಂಬುಗೆಯ ಪ್ರಾಣಿಯನ್ನೇ ಬಳಸಿರುವುದು ಅದರ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸಂಘ ಸಂಸ್ಥೆಗಳು ಬೆಳೆಯಬೇಕಾದರೆ ಒಗ್ಗಟ್ಟು ಮುಖ್ಯ. ಆಟದ ಜೊತೆಗೆ ಸಮಾಜಮುಖಿ ಕಾರ್ಯದ ಜೊತೆಗೆ ಉತ್ತಮ ಕೊಡುಗೆ ನೀಡುತ್ತ ಬಂದ ಸಂಸ್ಥೆ ಇದಾಗಿದೆ ಎಂದು ಎಸಿ ಶ್ವೇತಾ ಬೀಡಿಕರ ಹೇಳಿದರು.ನಗರದ ತಾಲೂಕಾ ಕ್ರೀಡಾಂಗಣದ ತಾಲೂಕಾ ಬ್ಯಾಡ್ಮಿಂಟನ್ ಇನ್ ಡೋರ್ ಸ್ಟೇಡಿಯಂನಲ್ಲಿ ಜಮಖಂಡಿ ಶಟಲ್ ಬ್ಯಾಡ್ಮಿಂಟನ್ ಸ್ಪೋರ್ಟ್ಸ್ ಇನ್‌ಸ್ಟಿಟ್ಯುಟ್ ಆಶ್ರಯದಲ್ಲಿ ನಡೆದ ಉತ್ತರ ಕರ್ನಾಟಕ ಬ್ಯಾಡ್ಮಿಂಟನ್ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಈ ಸಂಸ್ಥೆಯು ನಿಂತ ನೀರಾಗದೇ ಮುಂದುವರೆಯಬೇಕು. ಗಟ್ಟಿ ನೆಲಗಟ್ಟಿನ ಸಂಘವಾಗಿ ಆಟೋಟದಲ್ಲಿ ಸಾರ್ವಜನಿಕರಿಗೆ ನೆರವಾಗಬೇಕು ಎಂದು ಹೇಳಿದರು.ಡಿವೈಎಸ್ಪಿ ಎಸ್.ರೋಷನ್ ಜಮೀರ್ ಮಾತನಾಡಿ, ಕ್ರೀಡಾ ಪಟುಗಳು ಬೆಳೆಯಬೇಕಾದರೆ ಕ್ರೀಡಾ ಪ್ರೇಮಿಗಳು ಬೇಕು. ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿರುವ ಕ್ರೀಡೆಗೆ ಹೆಚ್ಚಿನ ಪ್ರಾಶಸ್ಕೃ ನೀಡಬೇಕು. ಈ ನಗರ ಕ್ರೀಡೆಗೆ ಹೆಚ್ಚು ಮಹತ್ವ ನೀಡುತ್ತಿದೆ, ಇಲ್ಲಿ ದೇಸೀಯ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವದು ಹೆಮ್ಮೆಯ ಸಂಗತಿ ಎಂದು ಹೇಳಿದರು.ತಹಸೀಲ್ದಾ‌ರ್ ಅನಿಲ ಬಡಿಗೇರ ಮಾತನಾಡಿ, ನಾವಿರುವದು ಸ್ಪರ್ಧಾತ್ಮಕ ಜಗತ್ತಿನಲ್ಲಿ ಆರೊಗ್ಯದತ್ತ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮುಂಬರುವ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಡಿವೈಎಸ್ಪಿ ಎಸ್.ರೋಷನ್ ಜಮೀರ್ ಅವರ ನೇತೃತ್ವದಲ್ಲಿ ಪೋಲೀಸ್ ರೂಟ್ ಮಾರ್ಚ್ ನಡೆಸಿದರು.ನಗರದ ದೇಸಾಯಿ ಸರ್ಕಲ್, ಅಶೋಕ್ ಸರ್ಕಲ್, ಕೋರ್ಟ್ ರೋಡ್, ಹನುಮಾನ ಚೌಕ್, ಪೋಸ್ಟ್ ಚೌಕ್ ಮಾರ್ಗವಾಗಿ ನಗರ ಪೋಲೀಸ್ ಠಾಣೆಯಲ್ಲಿ ಮುಕ್ತಾಯಗೊಂಡಿತು.ಪೋಲೀಸ್ ರೂಟ್ ಮಾರ್ಚ್ ನಲ್ಲಿ ಸಿಪಿಐ ಮಲ್ಲಪ್ಪ ಮಡ್ಡಿ, ನಗರ ಠಾಣೆ ಪಿಎಸ್‌ಐ ಅನೀಲ ಕುಂಬಾರ, ಗ್ರಾಮೀಣ ಠಾಣೆ ಪಿಎಸ್‌ಐ ಜಿ.ಎಂ.ಪೂಜೇರಿ, ಸಾವಳಗಿ ಪಿಎಸ್‌ಐ ಅಪ್ಪಣ್ಣ ಐಗಳಿ ಹಾಗೂ ಪೊಲೀಸ್ ಸಿಬ್ಬಂದಿಗಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: 23 ಆಗಸ್ಟ್ 2023 ರಂದು ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದ ಸವಿ ನೆನಪಿಗಾಗಿ ಭಾರತ ಸರ್ಕಾರವು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಅಧಿಕೃತವಾಗಿ ಘೋಷಿಸಿತು , ಈ ದಿನ ಭಾರತದ ಐತಿಹಾಸಿಕ ಸಾಧನೆಯನ್ನು ಸೂಚಿಸುತ್ತದೆ ಏಕೆಂದರೆ ಇದು ಚಂದ್ರನ ಮೇಲೆ ರೋವರ್ ಇಳಿಸಿದ ವಿಶ್ವದ ನಾಲ್ಕನೇ ದೇಶ ಮತ್ತು ದಕ್ಷಿಣ ಧ್ರುವ ಪ್ರದೇಶದ ಬಳಿ ಇಳಿದ ಮೊದಲ ದೇಶವಾಗಿದೆ. ಇದು ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತದ ಬೆಳೆಯುತ್ತಿರುವ ಪರಾಕ್ರಮವನ್ನು ಸ್ಮರಿಸುತ್ತದೆ ಎಂದು ವಿಜ್ಞಾನ ವಿಭಾಗದ ಉಪನ್ಯಾಸಕಿ ಪ್ರೊ . ಅಶ್ವಿನಿ ಹೀರೆಮಠ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶದ ಬಗ್ಗೆ ಅರಿವು ಮೂಡಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ.ಎಸ್.ಬಿ.ರಾಠೋಡ ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತದ ಸಾಧನೆ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ, ಚಂದ್ರಯಾನ-3 ನಾವೀನ್ಯತೆ, ನಿಖರತೆ ಮತ್ತು ಪರಿಶ್ರಮಕ್ಕೆ ಉದಾಹರಣೆಯಾಗಿದೆ. ಇದಲ್ಲದೆ ಭಾರತದ ಮುಂಬರುವ ಪೀಳಿಗೆಗೆ ವಿಜ್ಞಾನ, ತಂತ್ರಜ್ಞಾನ, ಇಂಜೀನಿಯರಿಂಗ್ ಮತ್ತು ಗಣಿತ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಮತ್ತು ಭಾರತದ ಭವಿಷ್ಯದ ಬಾಹ್ಯಾಕಾಶ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೆ.ಎಸ್.ಆರ್.ಟಿ.ಸಿ, ದಾನೇಶ್ವರಿ ಹಾಗೂ ಮಹಾತ್ಮ ಗಾಂಧಿ ಕಾಲೊನಿಯ ವರದ ಹನುಮಾನ್ ಗಜಾನನ ತರುಣ ಮಂಡಳಿ ವತಿಯಿಂದ ನಾಳೆ ಆ.26 ರ ಮಂಗಳವಾರದಂದು ನಗರದಲ್ಲಿ ವಿಜಯಪುರ ಚಾ ಲಂಬೋದರನ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.ಕೇಂದ್ರದ ಮಾಜಿ ಸಚಿವರು ಹಾಗೂ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ರವರು, ಸಂಜೆ 4 ಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ವೃತ್ತದಲ್ಲಿ ಮೆರವಣಿಗೆ ಚಾಲನೆ ನೀಡಲಿದ್ದು, ನೇತಾಜಿ ಸುಭಾಸಚಂದ್ರ ಭೋಸ್ ರಸ್ತೆ ಮೂಲಕ ಶ್ರೀ ವರದ ಹನುಮಾನ್ ದೇವಸ್ಥಾನ ವರೆಗೆ ಸಾಗಲಿದೆ.ಕಾರಣ ಮುಖಂಡರು, ಹಿತೈಷಿಗಳು, ಹಿಂದೂ ಕಾರ್ಯಕರ್ತರು, ಅಭಿಮಾನಿಗಳು, ಗಣೇಶನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶೋಭೆ ತರಲು ಮಂಡಳಿಯ ಸದಸ್ಯರು ಶ್ರೀ ಸಂತೋಷ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಹೆಬ್ಬಾಳಟ್ಟಿ ಗ್ರಾಮದಲ್ಲಿ ಕುಂಭಮೇಳ ಹಾಗೂ ಧರ್ಮಸಭೆ ಉದ್ಘಾಟಿಸಿದ ವಿಧಾನ ಪರಿಷತ್ತಿನ ಶಾಸಕ ಸುನೀಲಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ ಎಂದು ವಿಧಾನ ಪರಿಷತ್ತಿನ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದಲ್ಲಿ ನೂತನ ಶ್ರೀ ನಂದಿ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಮತ್ತು ಕಳಸಾರೋಹಣದ ಅಂಗವಾಗಿ ಆಯೋಜಿಸಲಾಗಿದ್ದ ಕುಂಭಮೇಳ ಹಾಗೂ ಧರ್ಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಸಚಿವ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿಯಿಂದಾಗಿ ಜಿಲ್ಲೆಯ ಚಿತ್ರಣ ಬದಲಾಗಿದೆ. ವಿಜಯಪುರ ರಾಜ್ಯದಲ್ಲಿ ಶ್ರೀಮಂತ ಜಿಲ್ಲೆಗಳಲ್ಲಿ ಒಂದಾಗುವ ಕಾಲ ಬಂದಿದೆ. ನೀರಾವರಿಯಿಂದಾಗಿ ರೈತರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ರೈತರಲ್ಲಿ ಖರೀದಿ ಸಾಮರ್ಥ್ಯ ಹೆಚ್ಚುತ್ತಿರುವುದರಿಂದ ಕಿರಾಣಿ ವ್ಯಾಪಾರ, ಹೊಟೇಲುಗಳು, ರಸಗೊಬ್ಬರ ವ್ಯಾಪಾರ ಸೇರಿದಂತೆ ವ್ಯಾಪಾರ ವಹಿವಾಟಿದಾರ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗುತ್ತಿದೆ. ಇದು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೂ ಕೊಡುಗೆ ನೀಡುತ್ತಿದೆ. ಆರ್ಥಿಕವಾಗಿ ಸಬಲರಾಗುತ್ತಿರುವ ರೈತರು ತಮ್ಮ ಕುಟುಂಬಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಮೀನಾಕ್ಷಿ ಚೌಕ್ ನಿವಾಸಿ ಶೀತಲ್ ದೀಪಕ್ ಆಪ್ಟೆ ( 68) ಶುಕ್ರವಾರದಂದು ಹೃದಯಾಘಾತದಿಂದ ನಿಧಾನರಾದರು.ಮೃತರಿಗೆ ಪುತ್ರ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಖಜಾಂಚಿ ರಾಹುಲ್ ಆಪ್ಟೆ ಹಾಗೂ ಓರ್ವ ಪುತ್ರಿ, ಓರ್ವ ಸಹೋದರಿ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.ಇವರ ಅಗಲಿಕೆಗೆ ನಗರದ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Read More