Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಸುಧೀರ್ಘ ಅವಧಿಗೆ ಸೇವೆ ಸಲ್ಲಿಸಿದ್ದ ಹಾಗೂ ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಸೇವೆಸಲ್ಲಿಸಿದ್ದ ಪ್ರಹ್ಲಾದ್ ಕುಳಿಲಿ ಅವರು, ಕೆಂಗೇರಿಯ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಿರಿಯ ಪತ್ರಕರ್ತರಾದ ಪ್ರಹ್ಲಾದ ಕುಳಲಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಸಂತಾಪ ವ್ಯಕ್ತಪಡಿಸಿದೆ.ಕ್ರೀಯಾಶೀಲ ಪತ್ರಕರ್ತರಾಗಿದ್ದ ಅವರು, ವರದಿಗಾರರ ಕೂಟ ಕಟ್ಟುವಲ್ಲಿಯೂ ಕ್ರೀಯಾಶೀಲವಾಗಿ ಕೆಲಸ ಮಾಡಿದ್ದ ಅವರನ್ನು ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿತ್ತು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸ್ಮರಿಸಿದ್ದಾರೆ.ಮೃತರ ಆತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲಿ.ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಗಡೂರು ಪ್ರಾರ್ಥಿಸಿದ್ದಾರೆ.
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಂಗ್ರೆಸ್ ಪಕ್ಷವೆಂಬುದು ಅನುಭವ ಮಂಟಪ. ಈ ಅನುಭವ ಮಂಟಪದಲ್ಲಿ ಎಲ್ಲ ಜಾತಿ-ಜನಾಂಗಗಳಿಗೆ ಸಮಸ್ಥಾನ. ಆ ಸಾಮಾಜಿಕ ಹಿನ್ನಲೆಯನ್ನು ಅನುಸರಿಸಿ ಬಹಳಷ್ಟು ಹಿಂದುಳಿದ ಸಮಾಜಗಳು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಕಾರ್ಯ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜಗಳು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಬರಲಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಗುರುವಾರ ವಿಜಯಪುರ ನಗರದ ಗೃಹ ಕಚೇರಿಯಲ್ಲಿ ತಿಕೋಟಾ ಪಟ್ಟಣದ ತಳವಾರ ಸಮುದಾಯದ ನಾನಾ ಮುಖಂಡರನ್ನು ಕಾಂಗ್ರೆಸ್ಸಿಗೆ ಬರಮಾಡಿಕೊಂಡು ಅವರು ಮಾತನಾಡಿದರು.ಮತಕ್ಷೇತ್ರದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಯೋಜನೆಗಳು ಸಕಲ ಸಮುದಾಯಗಳ ಮೆಚ್ಚುಗೆಗೆ ಪಾತ್ರವಾಗಿದ್ದು, ತಿಕೋಟಾ ತಳವಾರ ಸಮುದಾಯದ ಪ್ರಮುಖ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ. ಬಬಲೇಶ್ವರ ಮತಕ್ಷೇತ್ರದಲ್ಲಿ ಇಂದು ರಾಜಕೀಯ ಚಿತ್ರಣವೇ ಬದಲಾಗಿದೆ. ನುಡಿದಂತೆ ನಡೆಯುವ ನಮ್ಮ ಗ್ಯಾರಂಟಿ…
ಇಂದು (ಮೇ ೮, ಶುಕ್ರವಾರ) “ಅಂತರಾಷ್ಟ್ರೀಯ ರೆಡ್ ಕ್ರಾಸ್ ದಿನ” ದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಶ್ರೇಷ್ಠ ಹೋರಾಟಗಾರ ಮಾರ್ಟಿನ್ ಲೂಥರ್ ಕಿಂಗ್ ಅವರು, “ಐiಜಿe’s mosಣ ಠಿeಡಿsisಣeಟಿಣ ಚಿಟಿಜ uಡಿgeಟಿಣ quesಣioಟಿ is, “Whಚಿಣ ಚಿಡಿe ಥಿou ಜoiಟಿg ಜಿoಡಿ oಣheಡಿs?” ಅದನ್ನೇ ಪುರಂದರ ದಾಸರು “ಮಾನವ ಜನ್ಮ ದೊಡ್ಡದು ಅದನ್ನು ಹಾನಿ ಮಾಡಿಕೊಳ್ಳಬೇಡ, ಬದುಕಿರುವಷ್ಟು ಕಾಲದಲ್ಲಿ ಸದಾ ಸಹಾಯ ಹಸ್ತ ಬಂದವರಿಗೆ ನಿಸ್ವಾರ್ಥದಿಂದ ಮಾನವೀಯತೆ ಮೆರೆದು ಸೇವೆ ಮಾಡು ಅಂದಾಗ ನಿಮ್ಮ ಜನ್ಮ ಸಾರ್ಥಕವಾಗುತ್ತದೆ ಎಂದು ಹೇಳಿರುವುದು ನಿಜಕ್ಕೂ ಸತ್ಯವಾದ ಮಾತು. ಪ್ರವಾಹ, ಅಫಘಾತ ಮತ್ತು ಇನ್ನಿತರ ನೈಸರ್ಗಿಕ ವಿಕೋಪದಂತಹ ಸಂದರ್ಭದಲ್ಲಿ ಜೀವನ್ಮರಣದ ಮಧ್ಯೆ ಹೋರಾಟ ಮಾಡುತ್ತಿರುವ ಜೀವಿಗಳನ್ನು ರಕ್ಷಿಸಲು ಮತ್ತು ಅಗತ್ಯವಾದಲ್ಲಿ ರಕ್ತದಾನ ಮಾಡುವದರ ಮೂಲಕ ಅವರನ್ನು ಪ್ರಾಣಾಪಾಯದಿಂದ ಸಂರಕ್ಷಿಸುವುದು ರೆಡ್ ಕ್ರಾಸ್ ಘಟಕದ ಸ್ವಯಂ ಸೇವಕರ ಆದ್ಯ ಕರ್ತವ್ಯವಾಗಿದೆ. ಎಲ್ಲ ದಾನಗಳಲ್ಲಿ ಅತಿ ಶ್ರೇಷ್ಠವಾದ…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಗ್ರಾಮೀಣ ಬಡಜನರಿಗೆ ಉದ್ಯೋಗ ಭದ್ರತೆ ಒದಗಿಸುವ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವಂತರಾಯಗೌಡ ಬಿರಾದಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.ತಿಕೋಟಾ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಉದ್ಯೋಗ ಮಾಡಿದ ಕೂಲಿಕಾರರ ವೇತನ ಪಾವತಿಯಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು, ಪ್ರತಿ ಹಂತದಲ್ಲೂ ಪಾರದರ್ಶಕತೆ ಕಾಪಾಡಬೇಕು. ಎಂಐಎಸ್ನಲ್ಲಿ ಸಮಯಕ್ಕೆ ಸರಿಯಾಗಿ ಮಾಹಿತಿ ದಾಖಲಿಸಬೇಕು ಎಂದು ಸೂಚಿಸಿದರು.ಮನರೇಗಾ ಯೋಜನೆಯಡಿ ಗ್ರಾಮ ಪಂಚಾಯತಿವಾರು ಗುರಿ ನಿಗದಿಪಡಿಸಿರುವ ಮಾನವ ದಿನಗಳ ಸೃಜನೆ ಮಾಡಿ ಗುರಿ ಸಾಧಿಸಲು ಎಲ್ಲರೂ ಕ್ರಮ ವಹಿಸಬೇಕು. ನರೇಗಾ ಕೆಲಸದ ಬೇಡಿಕೆ ಸಲ್ಲಿಸಿದ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಕಾಲಮಿತಿಯೊಳಗೆ ಉದ್ಯೋಗ ಒದಗಿಸಬೇಕು, ಕಾಮಗಾರಿಗಳನ್ನು ನಿಗದಿತ ಸಮಯದೊಳಗಾಗಿ ಪೂರ್ಣಗೊಳಿಸುವತ್ತ ವಿಶೇಷ ಗಮನ ಹರಿಸಬೇಕುಈಗಾಗಲೇ ಅನುಮೋದನೆಗೊಂಡ ಪ್ರಗತಿ ಹಂತದ ಕೂಲಿ ಆಧಾರಿತ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳಡಿ ಪ್ರತಿ…
ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ಪಾಂಚಾಲಿ ಕುಂತಿಯ ಸೊಸೆ.ಮಥುರೆಯ ಶೂರಸೇನನ ಮಗಳು ‘ಪೃಥಾ’, ಕುಂತಿಸಾಮ್ರಾಜ್ಯದ ಕುಂತಿಭೋಜನ ಮಗಳು ‘ಕುಂತಿ’ಯಾದಳು..ಪಾಂಚಾಲ ದೇಶದ ದ್ರುಪದ ಮಹಾರಾಜನ ಮಗಳು ದ್ರೌಪದಿ, ಹಸ್ತಿನಾಪುರದ ಪಾಂಡವರ ಪತ್ನಿ ‘ಪಾಂಚಾಲಿ’ಯಾದಳು..ಯಾವ ಸುಖಕ್ಕೆ.. ಯಾರ ಕೋಪಕ್ಕೆ.. ಯಾವುದರ ಆರಂಭಕ್ಕೆ?ಹಿಂದಿನ ಜನ್ಮದಲ್ಲಿ ನಳಯಾನಿಯಾಗಿದ್ದ ದ್ರೌಪದಿ ಶಿವನನ್ನು ಕುರಿತು ತಪಸ್ಸು ಮಾಡಿ, ಎಲ್ಲಾ ಉತ್ತಮ ಗುಣಗಳು ಅಥವಾ ಕೌಶಲ್ಯಗಳು ಇರುವವ ತನ್ನ ಪತಿಯಾಗಬೇಕು ಎಂಬ ವರಬೇಡಿದ್ದರ ಫಲವಾಗಿ ‘ಎಲ್ಲಾ ಹಣ್ಣುಗಳು ಒಂದೇ ಮರದಲ್ಲಿ ಬಿಡುವುದಿಲ್ಲ’ ಎಂಬ ಪ್ರಾಕೃತಿಕ ಸತ್ಯದಂತೆ, ಎಲ್ಲಾ ಉತ್ತಮ ಗುಣಗಳು ಒಬ್ಬನೇ ಪುರುಷನಲ್ಲಿ ಕ್ರೋಡೀಕೃತವಾಗಿರುವುದಿಲ್ಲವಾದ್ದರಿಂದ, ಉತ್ತಮ ಗುಣಗಳ ಮೊತ್ತವಾದ ಪಂಚಪಾಂಡವರು ಕೃಷ್ಣೆಗೆ(ಕೃಷ್ಣನಂತೆ ಕಪ್ಪಗಿದ್ದ ದ್ರೌಪದಿಗೆ ದೇವತೆಗಳು ‘ಕೃಷ್ಣೆ’ ಎಂದು ಕರೆದರು) ಪತಿಗಳಾದರು.ದೇವಿ ಶ್ಯಾಮಲಾ (ಧರ್ಮನ ಪತ್ನಿ), ಭಾರತೀದೇವಿ (ವಾಯುವಿನ ಪತ್ನಿ), ಸಚಿ ದೇವಿ (ಇಂದ್ರನ ಪತ್ನಿ), ಉಷಾ ದೇವಿ(ಅಶ್ವಿನ್ ನ ಪತ್ನಿ)ಪಾರ್ವತಿ (ಶಿವನ ಪತ್ನಿ) ಇಷ್ಟೂ ಜನ ಪಂಚಕನ್ಯೆಯರ ಸಮ್ಮಿಲನವಾದ ದೇವಿ ಶಿವನನ್ನು ಕುರಿತು ತಪಸ್ಸು ಮಾಡಿ ಉತ್ತಮ…
ನಾಯಿ ಕಡಿತಕ್ಕೊಳಗಾದ ಬಾಲಕನನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ ಡಾ. ಆನಂದ ಕೆ. ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ ಸಂ ೩೫ರ ಫೇವರಚಂದ ಕಾಲೊನಿಯ ರಾಜಕುಮಾರ ಲೇಔಟ್ ನಲ್ಲಿ ನಾಯಿ ಕಡಿತಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವನ್ನು ಭೇಟಿ ಮಾಡಿ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಮಗುವಿನ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸಲಹೆ ಮಾಡಿದರು.ರಾಜಕುಮಾರ ಲೇಔಟ್ ನಿವಾಸಿಯಾಗಿರುವ ೩ ವರ್ಷದ ವಿರಾಜ್ ಸಂತೋಷ ಬಿರಾದಾರ ಮಂಗಳವಾರ ನಾಯಿ ಕಡಿತಕ್ಕೊಳಗಾಗಿದ್ದರಿಂದ ಆತನನ್ನು ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಸುದ್ದಿ ತಿಳಿದ ಜಿಲ್ಲಾಧಿಕಾರಿಗಳು, ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ನಾಯಿ ಕಡಿತಕ್ಕೊಳಗಾದ ಮಗುವಿನ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಮಗು ಔಷಧಿಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಂಡು ಮಾತನಾಡುತ್ತಿದ್ದಾನೆ. ಹಾಗಾಗಿ ಪೋಷಕರ ಆತಂಕಕ್ಕೊಳಗಾಗಬೇಕಿಲ್ಲ ಎಂದರು.ಜೊತೆಗೆ ಬಾಲಕನಿಗೆ ರೇಬೀಸ್ ವಿರೋಧಿ ಲಸಿಕೆಗಳನ್ನು ನೀಡಲಾಗುತ್ತದೆ. ಜಿಲ್ಲಾಸ್ಪತ್ರೆಯಿಂದಲೂ ಸೂಕ್ತ ಲಸಿಕೆಯನ್ನು ಪಡೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಇದೇ ವೇಳೆ ತಿಳಿಸಿದರು.ಪಾಲಿಕೆಯ…
ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿ, ಕೆಪಿಐಗಳ ಅನುಷ್ಠಾನಕ್ಕೆ ಜಿಲ್ಲಾ ಪಂಚಾಯತಿನಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಸಿ.ಬಿ. ಕುಂಬಾರ ಹೇಳಿದರು.ಎಂಪ್ರಿ ಸಂಸ್ಥೆಯು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕ್ರಿಯಾ ಯೋಜನೆ (ಏSಂPಅಅ) ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿಗಳಾದ ಡಾ. ಪವಿತ್ರಾ ಪಿ. ನಾಯಕ್ ಅವರು ಮಾತನಾಡಿ, ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ ಕುರಿತು ಸವಿಸ್ತಾರವಾಗಿ ವಿವರಣೆ ನೀಡಿದರು.ಹವಾಮಾನ ಕಾರ್ಯನೀತಿ, ಕಾರ್ಯತಂತ್ರಗಳು, ವಿವಿಧ ಇಲಾಖೆಗಳ ಪಾತ್ರ ಹಾಗೂ ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಮತ್ತು ಜಿಲ್ಲಾಸ್ಥರದ ದತ್ತಾಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು.ಅರಣ್ಯ ಇಲಾಖೆಯ…
ದಿನದಿಂದ ದಿನಕ್ಕೆ ಏರುತ್ತಲೇ ಇರುವ ಸೂರ್ಯನ ತಾಪಮಾನ | ಕಸುಬು ನಂಬಿದ ಕುಟುಂಬಗಳ ಮೊಗದಲ್ಲಿ ಮಂದಹಾಸ ಉದಯರಶ್ಮಿ ದಿನಪತ್ರಿಕೆ ವರದಿ: ರತ್ನಾಂಜಲಿ ವಾಲಿಕಾರವಿಜಯಪುರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪಮಾನ ಏರುತ್ತಲೇ ಇದೆ. ಬಿರು ಬೇಸಿಗೆಯ ದಾಹ ನೀಗಿಸಿಕೊಳ್ಳಲು ಸಾರ್ವಜನಿಕರು ಈಗ ನೈಸರ್ಗಿಕವಾದ ‘ಮಣ್ಣಿನ ಮಡಿಕೆ’ಗಳ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ಮಣ್ಣಿನ ಮಡಿಕೆಗಳ ವ್ಯಾಪಾರ ವಹಿವಾಟು ಜೋರಾಗಿದ್ದು, ಈ ಕಸುಬು ನಂಬಿದ ಕುಟುಂಬಗಳ ಮೊಗದಲ್ಲಿ ಮಂದಹಾಸ ಮೂಡಿದೆ.ಆರೋಗ್ಯಕ್ಕೆ ಮಡಿಕೆ ನೀರು ಅಮೃತ. ಮಣ್ಣಿನ ಮಡಿಕೆಯಲ್ಲಿನ ಸಣ್ಣ ರಂಧ್ರಗಳ ಮೂಲಕ ನೀರು ನಿಧಾನವಾಗಿ ಆವಿಯಾಗುವುದರಿಂದ ನೀರು ಸ್ವಾಭಾವಿಕವಾಗಿ ತಂಪಾಗುತ್ತದೆ. ಇದು ದೇಹಕ್ಕೆ ಸಮತೋಲಿತ ತಂಪನ್ನು ನೀಡುತ್ತದೆ. ಈ ನೈಸರ್ಗಿಕ ಗುಣವೇ ಜನರನ್ನು ಮಡಿಕೆಯತ್ತ ಆಕರ್ಷಿಸುತ್ತಿದೆ.ಕುಲಕಸುಬಿಗೆ ಆರ್ಥಿಕ ಬಲ: ಮಣ್ಣಿನ ಮಡಿಕೆಗಳ ಬೇಡಿಕೆ ಕುಸಿದು ಆರ್ಥಿಕ ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ಈ ಬೇಸಿಗೆ ವರದಾನವಾಗಿದೆ. ಕೆಲವು ಕಡೆಗಳಲ್ಲಿ ದಿನಕ್ಕೆ ನೂರಾರು ಮಡಿಕೆಗಳು ಮಾರಾಟವಾಗುತ್ತಿದ್ದು, ಗ್ರಾಮೀಣ ಭಾಗದ ಗುಡಿ ಕೈಗಾರಿಕೆಗೆ ಹೊಸ ಚೈತನ್ಯ ಬಂದಿದೆ.ಪರಿಸರ ಸ್ನೇಹಿ ಆಯ್ಕೆ:…
ಉದಯರಶ್ಮಿ ದಿನಪತ್ರಿಕೆ ಚಡಚಣ: ಬೇಸಿಗೆ ಆರಂಭವಾಗುತ್ತಿದ್ದಂತೆ ಭೀಮಾ ನದಿ ಬತ್ತಿ ಹೋಗಿ, ಪಶು-ಪಕ್ಷಿ, ಜನ-ಜಾನುವಾರುಗಳಿಗೆ ನೀರಿನ ಹಾಹಾಕಾರ ಉಲ್ಬಣಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಜನಿ ಜಲಾಶಯದಿಂದ ನೀರು ಬಿಡುಗಡೆ ಮಾಡಿದೆ. ಪಂಡರಪುರ ಹಾಗೂ ಸೊಲ್ಲಾಪುರ ನಗರಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಭೀಮಾ ನದಿಗೆ ನೀರು ಹರಿಸಿದೆ.ಇದರಿಂದ ಕರ್ನಾಟಕದ ಇಂಡಿ, ಆಲಮೇಲ, ಆಫಜಲಪುರ, ಯಾದಗಿರಿ, ಗುಲ್ಬರ್ಗ, ರಾಯಚೂರು ನಗರಗಳ ಭೀಮಾತೀರದ ಗ್ರಾಮಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ.ಬಿಸಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಪಶು-ಪಕ್ಷಿ, ಜನ-ಜಾನುವಾರುಗಳು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಂದೇ ಭಾರತ ರೈಲು ಸಂಚಾರ ವಿಜಯಪುರದಲ್ಲಿ ಸಂಚರಿಸಲು ಜಿಲ್ಲೆಯ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದು, ಗುಲ್ಬರ್ಗಾ, ಹುಬ್ಬಳ್ಳಿ, ಬೆಳಗಾವಿಯಲ್ಲಿ ಸದ್ಯ ರೈಲು ಸಂಚರಿಸುತ್ತಿದೆ. ಆದರೆ ವಸ್ತುಸ್ಥಿತಿ ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕು. ಸೊಲ್ಲಾಪುರ, ಬಿಜಾಪುರ, ಗದಗ, ಹುಬ್ಬಳ್ಳಿಯವರೆಗೆ ರೈಲು ಮಾರ್ಗ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ. ಸದ್ಯ ಓಡುತ್ತಿರುವ ರೈಲಿನ ವೇಗವು ೯೨ ರಿಂದ ೧೦೦ ರವರೆಗೆ ಇರುತ್ತದೆ. ಆದರೆ ವಂದೇ ಭಾರತ ರೈಲಿನ ವೇಗ ೧೧೦ ರಿಂದ ೧೪೦ರ ವೇಗವಾಗಿದೆ. ಆದ ಕಾರಣ ರೈಲಿನ ಮಾರ್ಗ ಕಾಮಗಾರಿಯಲ್ಲಿದ್ದು, ಈ ರೈಲು ಚಾಲನೆಯಾದರೆ ಏನಾದರೂ ಸಮಸ್ಯೆಯಾಗಬಾರದೆಂಬ ಹಿನ್ನೆಲೆ ವಂದೇ ಭಾರತ ರೈಲು ಸಂಚಾರ ಮಾಡುವುದು ವಿಳಂಬವಾಗುತ್ತಿದೆ. ರೈಲು ಮಾರ್ಗ ೨-೩ ತಿಂಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾಮಗಾರಿ ಮುಗಿದ ನಂತರ ಈ ರೈಲು ಸಂಚರಿಸಲು ಚಾಲನೆಯಾಗುತ್ತದೆ. ವಿದ್ಯಾವಂತರು ಇದನ್ನು ಅರಿತುಕೊಳ್ಳಬೇಕು. ಯಾವುದೇ ರೀತಿಯ ಧ್ವಂಧಕ್ಕೆ ಅಂಟಿಕೊಳ್ಳದೇ ರೈಲಿನ ಕುರಿತು ಅಪಪ್ರಚಾರ ಮಾಡಬಾರದು ಎಂದು ಲೋಕಸಭಾ ಸದಸ್ಯರಾದ ರಮೇಶ ಜಿಗಜಿಣಗಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
