Author: editor.udayarashmi@gmail.com

ಅಭಿಯಾನ ಮಾರ್ಗಸೂಚಿಗಳಂತೆ ಕಾರ್ಯನಿರ್ವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬಡಾವಣೆ, ರಸ್ತೆ ಬದಿ, ಉದ್ಯಾನವನ, ಖಾಲಿ ನಿವೇಶನಗಳಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಸಾರ್ವಜನಿಕರ ಸಹಕಾರದೊಂದಿಗೆ ದೂರು ಸ್ವೀಕರಿಸಿದ ೨೪ ಗಂಟೆಯೊಳಗೆ ವಿಲೇವಾರಿ ಮಾಡಲು ಕಸ ಕಂಡರೆ ಫೋಟೋ ಕಳುಹಿಸಿ ಎಂಬ ಅಭಿಯಾನವನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದ್ದು, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಈ ಅಭಿಯಾನದ ಮಾರ್ಗಸೂಚಿಗಳಂತೆ ಕಾರ್ಯನಿರ್ವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಅವರು ಸೂಚನೆ ನೀಡಿದ್ದಾರೆ.ಕಸ ಕಂಡರೆ ಫೋಟೋ ಕಳುಹಿಸಿ ಅಭಿಯಾನ ಯಶಸ್ವಿಗೊಳಿಸಲು ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಕಂಡಾಗ ತಕ್ಷಣದ ಫೋಟೋ ಮೂಲಕ ದೂರು ಸಲ್ಲಿಸುವ ವ್ಯವಸ್ಥೆ ಕಲ್ಪಿಸುವುದು, ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಚ್ಛ ನಗರ ನಿರ್ಮಾಣ, ದೂರು ಬಂದ ೨೪ ಗಂಟೆಯೊಳಗೆ ಪರಿಹಾರ ಒದಗಿಸುವ ಮೂಲಕ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವುದು, ದೂರುಗಳಿಂದ ಬಂದ ಡೇಟಾವನ್ನು ವಿಶ್ಲೇಷಿಸಿ ಬ್ಲಾಕ್‌ಸ್ಪಾಟ್ ಏರಿಯಾ ಗುರುತಿಸಿ ಭವಿಷ್ಯದ ಕ್ಲೀನಿಂಗ್…

Read More

ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ಧ-ಸಹಾಯವಾಣಿ ಕೇಂದ್ರ ಸ್ಥಾಪನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಮಳೆಯಿಂದ ಪ್ರಾಥಮಿಕ ವರದಿಯಂತೆ ೫೩೨೨.೧೯ ಹೆಕ್ಟೇರ್ ಕೃಷಿ ಬೆಳೆ ಹಾಗೂ ೨೭೨.೨೦ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಪರಿಹಾರ ವಿತರಿಸಲು ಬೆಳೆ ಹಾನಿ ಜಂಟಿ ಸಮೀಕ್ಷಾ ತಂಡವನ್ನು ರಚಿಸಿ, ಶೇ.೮೦ ರಷ್ಟು ಸಮೀಕ್ಷೆ ಕೈಗೊಂಡಿದ್ದು, ಕೂಡಲೇ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ.ಅವರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಆ.೫ರಿಂದ ಈವರೆಗೆ ಮಳೆಯಿಂದ ಯಾವುದೇ ಮಾನವ ಜೀವಹಾನಿಯಾಗಿರುವುದಿಲ್ಲ. ೦೨ ಜಾನುವಾರು ಹಾಗೂ ೧೦೪ ಮನೆಗಳ ಗೃಹೋಪಯೋಗಿ ವಸ್ತುಗಳು ಹಾನಿಯಾಗಿದ್ದು, ಪರಿಹಾರವನ್ನು ವಿತರಿಸಲಾಗಿದೆ. ಭಾಗಶ: ಹಾನಿಯಾದ ೨೧೩ ಮನೆಗಳ ಪೈಕಿ ಜಂಟಿ ಸಮೀಕ್ಷಾ ವರದಿಯಂತೆ ಈಗಾಗಲೇ ೧೬೦ ಮನೆಗಳಿಗೆ ಪರಿಹಾರಧನ ನೀಡಿ ಆರ್‌ಜಿಆರ್‌ಎಚ್‌ಸಿಎಲ್ ತಂತ್ರಾಂಶದಲ್ಲಿ ಅಳವಡಿಸಲಾಗಿದ್ದು, ಬಾಕಿ ಉಳಿದ ೫೩ ಭಾಗಶ: ಮನೆಗಳು ಇತ್ತೀಚಿನ ೨-೩ ದಿನಗಳಲ್ಲಿ ಹಾನಿಯಾಗಿದ್ದು, ಮನೆ ಹಾನಿಗೆ ಪರಿಹಾರ ವಿರಿಸಲು ಜಂಟಿ ಸಮೀಕ್ಷಾ ಕಾರ್ಯ…

Read More

ಡಿಸಿಎಂ ಡಿಕೆಶಿ ಸದನದಲ್ಲಿ ವಿಧೇಯಕ ಮಂಡನೆ | ಜಿಬಿಎ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ಬೆಂಗಳೂರು: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆ ಮಂಗಳವಾರ ಅಂಗೀಕರಿಸಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸದನದಲ್ಲಿ ವಿಧೇಯಕವನ್ನು ಮಂಡಿಸಿದರು. ವಿರೋಧ ಪಕ್ಷದ ನಾಯಕರು, ಶಾಸಕರು ಕೆಲಹೊತ್ತು ವಿಧೇಯಕ ಕುರಿತು ಚರ್ಚೆ ನಡೆಸಿದ ಬಳಿಕ ಅನುಮೋದನೆ ನೀಡಲಾಯಿತು. ಬೆಂಗಳೂರು ಆಡಳಿತ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದರೂ ಕೆಲವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಐದು ಹೊಸ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಈ ವಿಧೇಯಕದಲ್ಲಿ ಸ್ಪಷ್ಪಪಡಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.ಸದ್ಯದ ಕಾಯ್ದೆ ಪ್ರಕಾರ ಬೃಹತ್ ಬೆಂಗಳೂರು ಪ್ರಾಧಿಕಾರವು ಅಂತಹ ಅಧಿಕಾರವನ್ನು ಚಲಾಯಿಸುತ್ತದೆ ಮತ್ತು ಈ ಕಾಯಿದೆಯಡಿಯಲ್ಲಿ ರಚಿಸಲಾದ ನಗರ ನಿಗಮಗಳಿಗೆ ಸಂಬಂಧಿಸಿದಂತೆ ಈ ಕಾಯಿದೆಯ ನಿಬಂಧನೆಗಳ ಪ್ರಕಾರ ಅಂತಹ ಕಾರ್ಯಗಳನ್ನು ನಿರ್ವಹಿಸುತ್ತದೆ ಎಂದು ಅವರು ಹೇಳಿದರು.ಒಂದು…

Read More

ಉದಯರಶ್ಮಿ ದಿನಪತ್ರಿಕೆ ಝಳಕಿ: ಸತತವಾಗಿ ಮೂರು ದಿನಗಳಿಂದ ವರುಣನ ಆರ್ಭಟಕ್ಕೆ ಶಿಥಿಲಗೊಂಡ ಮನೆಗಳನ್ನು ಇಂಡಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಭೀಮಾಶಂಕರ ಕನ್ನೂರ ತಾಲೂಕಿನ ಹಡಲಸಂಗ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪಂಚಾಯತ್ ರಾಜ್ಯ ಇಲಾಖೆ, ನರೇಗಾ ಯೋಜನೆ ಹಾಗೂ ಕರ ವಸೂಲಾತಿ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೊತೆ ಚರ್ಚಿಸಿ ನಿಗದಿ ಪಡಿಸಿದ ಗುರಿಯನ್ನು ಪ್ರಗತಿ ಸಾಧಿಸಬೇಕೆಂದು ಸೂಚಿಸಿದರು.ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ಉಪ ತಹಶೀಲ್ದಾ ಎ ಎಸ್ ಗೋಟ್ಯಾಲ, ಪಂಚಾಯತ ಅಭಿವೃದ್ಧಿ ಅಧಿಕಾರಿ ಸಿದ್ದು ಲೋಣಿ, ಗ್ರಾಮ ಲೆಕ್ಕಾಧಿಕಾರಿ ಪ್ರವೀಣ ಲಮಾಣಿ, ಸರ್ಕಲ( ಕಂದಾಯ ಇಲಾಖೆ ) ಬಿ ಜಿ ಕೊಡವಾನ್ ಮತ್ತು ಗ್ರಾಮಸ್ಥರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಗ್ರಾಹಕಸ್ನೇಹಿ ಆಗುವ ಉದ್ದೇಶ ಹೊಂದಿದೆ. ಜೊತೆಗೆ ಭದ್ರತೆಯ ದೃಷ್ಟಿಯಿಂದಾಗಿ ಆಧುನಿಕ ಸೌಲಭ್ಯಗಳನ್ನು ನೀಡಲು ಶಾಖಾ ಕಛೇರಿಗಳಿಗೆ ಸ್ವಂತ ಕಟ್ಟಡ ನಿರ್ಮಾನ ಮಾಡುತ್ತಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಬಿ. ಗುಡದಿನ್ನಿ ತಿಳಿಸಿದರು.ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿರುವ ಬ್ಯಾಂಕಿನ ಶಾಖೆಯ ನೂತನ ಸ್ವಂತ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನಮ್ಮ ಬ್ಯಾಂಕ್ ತನ್ನ ಗ್ರಾಹಕರಿಗೆ ತನ್ನ ಸೇವೆಯನ್ನು ಇನ್ನೂ ಗುಣಮಟ್ಟ ಹಾಗೂ ತ್ವರಿತಗತಿಯಲ್ಲಿ ನೀಡಲು ಬದ್ಧವಾಗಿದೆ. ಇದಕ್ಕಾಗಿ ಸ್ವಂತ ಕಟ್ಟಡ ನಿರ್ಮಿಸಿ ಆಧುನಿಕ ಸೌಲಭ್ಯಗಳೊಂದಿಗೆ ಗ್ರಾಹಕರಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ವಿವರಿಸಿದರು.ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರೈತರು ಹಾಗೂ ರೈತೇತರ ಗ್ರಾಹಕರಿಗೆ ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದು, ಗ್ರಾಹಕರು ಈ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕ ಪ್ರಗತಿ ಸಾಧಿಸುವಂತೆ…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪ್ರಾಚ್ಯ ಅವಶೇಷಗಳ ಇತಿಹಾಸ ಹೇಳುವಂತೆ ಸುಮಾರು ಮೂರು ಸಾವಿರ ವರ್ಷಗಳ ಹಿಂದೆಯೇ ಮಹೆಂಜೋದಾರೋ, ಹರಪ್ಪ, ಲೋಥಲ್ ಮತ್ತು ಇನ್ನಿತರ ಸಿಂಧೂ ಕಣಿವೆಯ ನಾಗರಿಕತೆಗಳು ಅತ್ಯಂತ ಆಧುನಿಕ ತಂತ್ರಜ್ಞಾನಗಳನ್ನು ತಮ್ಮಲ್ಲಿ ಅಳವಡಿಸಿಕೊಂಡಿದ್ದರು ಎಂಬುದಕ್ಕೆ ನಮಗೆ ಸಾಕಷ್ಟು ಪುರಾವೆಗಳು ದೊರೆಯುತ್ತವೆ. ಸುಮಾರು 3000 ವರ್ಷಗಳ ಹಿಂದೆಯೇ ಅವರು ಬಳಸುತ್ತಿದ್ದ ವಸ್ತುಗಳನ್ನು ಕಾರ್ಬನ್ ಪರೀಕ್ಷೆಯ ಮೂಲಕ ಪತ್ತೆ ಹಚ್ಚಿರುವ ಪ್ರಾಚ್ಯಶಾಸ್ತ್ರಜ್ಞರು ಆ ಸಿಂಧೂ ನಾಗರಿಕತೆಯು ಅತ್ಯಂತ ಮುಂದುವರಿದ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದ್ದರು ಎಂದು ದಾಖಲಿಸಿದ್ದಾರೆ.ಉಳ್ಳವರು ತಮ್ಮ ಮನೆಗಳಲ್ಲಿ ಬಚ್ಚಲು ಕೋಣೆಗಳನ್ನು ಮತ್ತು ಶೌಚಾಲಯಗಳನ್ನು ಹೊಂದಿದ್ದು ಸಾಕಷ್ಟು ಮನೆಗಳಲ್ಲಿ ಒತ್ತು ಇಟ್ಟಿಗೆಯ ನಿರ್ಮಾಣದ ಪುಟ್ಟ ಕೋಣೆಗಳು ದೊರೆತಿವೆ ಮತ್ತು ಅವುಗಳಲ್ಲಿ ಬಳಸಿದ ನೀರು ಹೊರ ಹೋಗಲು ಗಾರೆಯಿಂದಲೇ ತಯಾರಿಸಿದ ಪೈಪಿನ ಮಾದರಿಗಳಿವೆ. ಮತ್ತೆ ಕೆಲವೆಡೆ ಶೌಚಾಲಯಗಳು ಇದ್ದು ಅವುಗಳ ತ್ಯಾಜ್ಯವೂ ಹೊರಹೋಗುವಂತೆ ಮುಖ್ಯ ಚರಂಡಿಗೆ ಸಂಪರ್ಕವನ್ನು ಕಲ್ಪಿಸಲಾಗಿದೆ ಎಂಬುದು ಅವರ ತಾಂತ್ರಿಕ ಮುಂದುವರಿಕೆಯನ್ನು ಸೂಚಿಸುತ್ತದೆ..…

Read More

ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ 26 ನೆಯ ಶರಣ ಮಾಸದ ಅನುಭಾವ ಮಾಲಿಕೆಯಲ್ಲಿ ಶರಣೆ ಜಯಶ್ರೀ ಆಲೂರ ಅವರು ಢಕ್ಕೆಯ ಬೊಮ್ಮಣ್ಣ ಅವರ ಬಗೆಗೆ ಹೇಳುವುದರ ಜೊತೆಗೆ ಅವರ ವಚನಗಳ ಅರ್ಥವನ್ನು ವಿಶ್ಲೇಷಣೆ ಮಾಡುವುದರ ಮೂಲಕ ಅತ್ಯಂತ ಪ್ರಬುದ್ಧವಾಗಿ ತಮ್ಮ ಅನುಭಾವವನ್ನು ಪ್ರಸ್ತುತ ಪಡಿಸಿದರು.ವಚನಕಾರರ ಆಂದೋಲನದ ಈ ಕಾಲವು ಕನ್ನಡ ಸಾಹಿತ್ಯಕ್ಕೆ ಸಮಾಜಕ್ಕೆ ಒಂದು ಹೊಸ ತಿರುವು ಕೊಟ್ಟಿತು. ಆ ಸಮಯವು ವರ್ಗ ರಹಿತ, ವರ್ಣರಹಿತ, ಲಿಂಗರಹಿತವಾಗಿತ್ತು ಎಂಬುದನ್ನು ಅನೇಕ ವಚನಗಳಲ್ಲಿ ನಾವು ನೋಡಬಹುದಾಗಿದೆ. 12ನೇ ಶತಮಾನದಲ್ಲಿ ಬರುವ ಹೆಚ್ಚು ವಚನಕಾರ ಶರಣರು ಕೆಳವರ್ಗಕ್ಕೆ ಸೇರಿದವರೇ ಆಗಿದ್ದರು. ಸಾಮಾಜಿಕ ನೆಲೆಯ ಬೇರೆ ಬೇರೆ ಸ್ಥರಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರು.ಬಸವಾದಿ ಶರಣರ ಸಂಪರ್ಕಕ್ಕೆ ಬರುವ ಮುನ್ನ ಡೊಳ್ಳು ಬಾರಿಸುತ್ತಾ ಗುಡಿಯಲ್ಲಿ ತಡಿಯಲ್ಲಿ ಬೇವಿನ ಸೊಪ್ಪನ್ನು ಕಟ್ಟಿಕೊಂಡು ಮಾರಿಯನ್ನು ಮೊರದಲ್ಲಿ ಹಾಕಿಕೊಂಡು ಭಕ್ತರ ಮನೆ ಮನೆ ಮುಂದೆ ನಿಂತು ಬೇಡುವುದು ಇವರ ಕಾಯಕವಾಗಿದ್ದಿರಬಹುದು. ತನುವೆಂಬ ಮೂರದಲ್ಲಿ ಮಾಯಾ ಗುಣವೆಂಬ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ಹಾಗೂ ಭಾರತೀಯ ಜನತಾ ಪಕ್ಷದ ಸಂಘಟನಾತ್ಮಕ ಹಿತದೃಷ್ಟಿಯಿಂದ ವಿಜಯಪುರ ನಗರ ಮಂಡಲದ ಅಧ್ಯಕ್ಷ ಜವಾಬ್ದಾರಿಗೆ ಸಂದೀಪ ರಾಮನಗೌಡ ಪಾಟೀಲ ರವರನ್ನು ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡುವ ಸಲುವಾಗಿ ಶಾಂತಿ ಸಭೆಯು ಪಟ್ಟಣದ ಪೊಲೀಸ್ ಠಾಣಾ ಅವರಣದಲ್ಲಿ ಜರುಗಿತು.ಪಿಎಸ್‌ಐ ರೇಣುಕಾ ಹಳ್ಳಿ ಮಾತನಾಡಿ, ಗಣೇಶ ಪ್ರತಿಷ್ಠಾಪನೆಗೆ ಸಂಬಂಧಪಟ್ಟ ಇಲಾಖೆಗಳಿಂದ ಪರವಾನಿಗೆ ಕಡ್ಡಾಯ, ಮೂರ್ತಿ ಪ್ರತಿಷ್ಠಾಪನೆ ಬಳಿಕ ಪ್ರತಿದಿನ ಮೂರ್ತಿಯನ್ನು ಕಾಯಲು 1-2 ಮಂದಿ ಕಡ್ಡಾಯವಾಗಿ ಇರತಕ್ಕದ್ದು ವಿಸರ್ಜನೆ ವೇಳೆ ಕರ್ಕಶ ಡಿಜೆ ನಿಷೇಧ ಎಂದು ಸ್ಪಷ್ಟ ಸೂಚನೆ ನೀಡಿದರು.ಈದ್ ಮಿಲಾದ್ ಮೆರವಣಿಗೆಯೂ ಶಾಂತಿಯುತವಾಗಿರಬೇಕು, ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಶಾಂತ ರೀತಿಯಿಂದ ಯಾವುದೇ ಧರ್ಮಕ್ಕೆ ತೊಂದರೆಯಾಗದಂತೆ, ಹಿಂದೂ-ಮುಸ್ಲಿಂ ಸಹೋದರತ್ವ ಕಾಪಾಡಬೇಕು ಎಂದು ತಿಳಿಸಿದರು.ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ವೀರೇಶ ಹಟ್ಟಿ ಮಾತನಾಡಿ ಪಿಒಪಿ ಗಣೇಶ ಮೂರ್ತಿಗಳನ್ನು ಯಾರು ಕೂಡ ಮಾರಾಟ ಮಾಡಬಾರದು ಅದರಿಂದ ಪರಿಸರ ನಾಶವಾಗುತ್ತದೆ. ಪಟ್ಟಣ ಪಂಚಾಯಿತಿಯಿಂದ ಮನೆಗಳ ಗಣಪತಿ ವಿಸರ್ಜನೆಗೆ ಮೊಬೈಲ್ ಟ್ಯಾಂಕರ್ ಗಳು ಮತ್ತು ಸಾರ್ವಜನಿಕ ಗಣೇಶ ವಿಸರ್ಜನೆಗೆ ಬೇಕಾದಲ್ಲಿ ಬೇರೆ ಸ್ಥಳಗಳಲ್ಲಿ ಒಂದು…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ದಾರ: ಪಟ್ಟಣದ ಶ್ರೀ ದ್ಯಾಮವ್ವ ದೇವಿ ಸೇವಾ ಸಮಿತಿ ಹಾಗೂ ಸ್ಥಳೀಯ ಕಲಾವಿದರ ಬಳಗದ ಸಹಯೋಗದಲ್ಲಿ ಶ್ರಾವಣ ಮಾಸದ ಪರ್ಯಂತ ಕೈಗೊಂಡ ಹರ ಭಜನೆ ಮುಕ್ತಾಯ ಸಮಾರಂಭದ ಪ್ರಯುಕ್ತ 18ನೇ ವರ್ಷದ ಭಜನಾ ತಂಡಗಳ ಸ್ಪರ್ಧಾ ಕಾರ್ಯಕ್ರಮವನ್ನು ಆ.26ರಂದು ಬೆಳಗ್ಗೆ 9.25ಕ್ಕೆ ನಡೆಯಲಿದೆ ಎಂದು ದ್ಯಾಮವ್ವ ದೇವಿ ಸೇವಾ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೆಳ್ಳುಬ್ಬಿ ಹಾಗೂ ಕಾರ್ಯದರ್ಶಿ ಈರಯ್ಯ ಮಠಪತಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಪ್ರತಿ ವರ್ಷದಂತೆ ಈ ವರ್ಷವೂ 53ನೇ ವರ್ಷದ ಭಜನಾ ಮುಕ್ತಾಯ ಸಮಾರಂಭ ನಿಮಿತ್ತ ಭಜನಾ ಸ್ಪರ್ಧೆ ನಡೆಯಲಿದೆ. ಆಸಕ್ತ ಭಜನಾ ತಂಡಗಳು ಭಾಗವಹಿಸಬಹುದು. ಸ್ಪರ್ಧೆ ವಿಜೇತ ತಂಡಗಳಿಗೆ ಪ್ರಥಮ 21001, ದ್ವಿತೀಯ 15001, ತೃತೀಯ 11100, ಚತುರ್ಥ 7501 ಹಾಗೂ 5ನೇಯ 5001 ರೂಪಾಯಿಗಳ ಬಹುಮಾನವನ್ನು ಪಟ್ಟಣದ ಪ್ರಗತಿಪರ ರೈತರು ಕೊಡಮಾಡಿದ್ದು ಅವುಗಳನ್ನು ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿ ತಂಡಕ್ಕೆ ಒಂದು ಸಾವಿರ ರೂಪಾಯಿಗಳನ್ನು ಕೊಡಲಾಗುತ್ತದೆ. ಆಸಕ್ತರು ಕಲಾವಿದ ಭೀಮಪ್ಪ ಬೀಳಗಿ ಮೊ: 9902453741 ಹಾಗೂ…

Read More