Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನಲ್ಲಿ ಹರಿಯುವ ಭೀಮಾ ನದಿಗೆ ಹದಿನಾರು ಸಾವಿರ ಕ್ಯೂಸೆಕ್ ನೀರು ಹರಿಯಬಿಡಲಾಗಿದೆ ಎಂದು ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಮೂರ್ತಿ ತಿಳಿಸಿದ್ದಾರೆ.ನೀರು ಇಂದು ಧೂಳಖೇಡ ವರೆಗೆ ಬಂದಿದ್ದು ಸಂಜೆಯ ವರೆಗೆ ಇಂಡಿ ತಾಲೂಕು ಪ್ರವೇಶಿಸುವ ಸಾಧ್ಯತೆ ಇದೆ.ಈ ನೀರು ಇಂಡಿ ಪಟ್ಟಣಕ್ಕೆ ಕುಡಿಯುವ ನೀರಿನ ಕುರಿತು ಮತ್ತು ನದಿ ದಂಡೆಯ ಪಾತ್ರದ ಹಳ್ಳಿಗಳಿಗೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಕುರಿತು ಉಪಯೋಗಿಸಲಾಗುವದು ಎಂದು ಗುರುಮೂರ್ತಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ಮಹಾವೀರ ವೃತ್ತದಲ್ಲಿ ಆಯಿಷಾ ಮಜಿದದ ಇಮಾಮ ಅಹಮ್ಮದ ಸಲಾವೂದ್ದೀನ ನಾಗೂರ ಇವರ ನೇತೃತ್ವದಲ್ಲಿ ನಗರದ ಮಹಾವೀರ ವೃತ್ತದಲ್ಲಿ ಮಂಗಳವಾರ ಸಂತೆಯ ನಿಮಿತ್ಯ ಉಚಿತ ಬಿಸ್ಲೇರಿ ತಂಪಾದ ಕುಡಿಯುವ ನೀರು ವಿತರಿಸಿದರು.ಗ್ರಾಮೀಣ ಮತ್ತು ನಗರದ ಜನತೆಗೆ ಸಂತೆಯ ದಿನ ಪ್ರತಿ ಮಂಗಳವಾರ ಬಾಯಾರಿಕೆ ನಿವಾರಿಸಿಕೊಳ್ಳಲು ಈ ಸೌಲಭ್ಯ ಮಾಡಲಾಗಿದೆ.ಈಗಾಗಲೇ ನಿನ್ನೆಯ ಮಂಗಳವಾರ ಪ್ರಾರಂಭವಾಗಿದ್ದು ಮೇ ತಿಂಗಳವರೆಗೂ ಇರುವದು.೧೫ ತರುಣರು ನೀರು ಕೊಡಲು ಸಹಕರಿಸುವರು. ಮತ್ತು ಪ್ರತಿ ಮಂಗಳವಾರ ಒಂದು ನೂರು ಕ್ಯಾನ ನೀರು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ.ಹಸನ್ ಮುಜಾವರ, ವಸೀಮ ವಾಲಿಕಾರ,ಉಮರ ಫಾರುಕ ಬಾಗವಾನ, ಮೀರ್ ಅಯಾನ ಸುಲ್ತಾನ, ವಕಾಸ ಪಟೇಲ, ಫೈಝಾನ ಮುಲ್ಲಾ, ಅಜರ ಇಂಡಿಕರ, ಅಬ್ಬು ಕೋಟ್ನಾಳ, ಮಾಝ ನಾಯಿಕೊಡಿ, ಅಜಾಜ ಮುನಸಿ ವಿತರಣೆಯಲ್ಲಿದ್ದರು.

Read More

ಬಸವಣ್ಣನವರ ಸಾಮಾಜಿಕ ನ್ಯಾಯದಲ್ಲಿ ನನಗೆ ನಂಬಿಕೆ | ಸಂಪತ್ತು- ಆಡಳಿತ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು | ಸಿಎಂ ಸಿದ್ದರಾಮಯ್ಯ ಹೇಳಿಕೆ ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದಿಂದ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಸಮಸಮಾಜ ನಿರ್ಮಿಸುವ ಸಂಕಲ್ಪವನ್ನು ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ ಎಂದರು.ಸಿದ್ದರಾಮೇಶ್ವರರೂ ಸೇರಿದಂತೆ ಸಂತಮಹಾಶಯರು, ಸಮಾಜದಲ್ಲಿ ಜಾತಿವರ್ಗಗಳ ವ್ಯವಸ್ಥೆಗಳು ತೊಲಗಬೇಕು ಎಂದು ಬಯಸಿದ್ದರು. ಬಸವಾದಿ ಶರಣರು 12 ನೇ ಶತಮಾನದಲ್ಲಿ ಸಮಾನತೆಯ ಸಿದ್ಧಾಂತವನ್ನು ಬೋಧಿಸಿದ್ದರು. ಶೋಷಣೆಗೊಳಗಾದ ಹಾಗೂ ಅವಕಾಶವಂಚಿತ ಸಮುದಾಯಗಳು ಸಂಘಟಿತರಾಗುವ ಸಮ್ಮೇಳನಗಳು ಉತ್ತಮ ಕಾರ್ಯಗಳಾಗಿವೆ ಎಂದು ತಿಳಿಸಿದರು.ಬಸವಣ್ಣನವರು ಬೋಧಿಸಿದಂತೆ ಸಾಮಾಜಿಕ ನ್ಯಾಯದಲ್ಲಿ ನಾನು ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯ ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ…

Read More

ಬೀದರನಲ್ಲಿ ನಡೆದ ರಾಜ್ಯ ಪತ್ರಕರ್ತರ ಸಮ್ಮೇಳನ | ಧನ್ಯವಾದ ಸಮರ್ಪಣಾ ಸಮಾರಂಭದಲ್ಲಿ | ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಬಸವನ ನಾಡು, ಸೂಫಿ ಸಂತರ ಬೀಡು ಬೀದರನಲ್ಲಿ ಎರಡು ದಿನಗಳು ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಸಂಘಟಿಸಿ, ಯಶಸ್ವಿಗೊಳಿಸಿದ ಹಿನ್ನೆಲೆಯಲ್ಲಿ ಸಮ್ಮೇಳನದ ಯಶಸ್ವಿಗಾಗಿ ಶ್ರಮಿಸಿದವರು ಮತ್ತು ಸಹಕರಿಸಿದವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿದರು.ಬೀದರ ಎಸ್‌ಪಿ ಗೆಸ್ಟ್ ಹೌಸ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ವಸತಿ, ಆಹಾರ, ಸಾರಿಗೆ, ಪ್ರಚಾರ, ಮೆರವಣಿಗೆ, ನೋಂದಣಿ, ಅತಿಥಿ ಸತ್ಕಾರ, ಸಾಂಸ್ಕೃತಿಕ, ಸ್ಮರಣ ಸಂಚಿಕೆ, ಮಹಿಳಾ ಸಮಿತಿಯಿಂದ ಹಿಡಿದು ವಸ್ತು ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ ಸಮಿತಿ ತನಕ ಎಲ್ಲಾ ಉಪ ಸಮಿತಿಗಳ ಪ್ರಧಾನ ಸಂಚಾಲಕರು, ಸಂಚಾಲಕರು, ಸಹ ಸಂಚಾಲಕರ ಸೇವೆಯನ್ನು ಸ್ಮರಿಸಿ ಸನ್ಮಾನಿಸಲಾಯಿತು. ಸಮ್ಮೇಳನಕ್ಕೆ ಒಂದೊಂದು ಜವಬ್ದಾರಿ ವಹಿಸಿಕೊಂಡು ಸಹಕಾರ ನೀಡಿದವರನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ…

Read More

ಹೆಚ್ ಡಿ ಕೋಟೆಯಲ್ಲಿ ಗಾಳಿ-ಮಳೆಗೆ ಬಾಳೆ ಗಿಡಗಳು ನೆಲಸಮ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಕಳೆದ ಮೂರು-ನಾಲ್ಕು ದಿನಗಳಿಂದ ಆಗಾಗ್ಗೆ, ಅಲ್ಲಲ್ಲಿ ಸುರಿಯುತ್ತಿರುವ ಮಳೆಗೆ ಕೆಲ ರೈತರ ಬದುಕು ಅತಂತ್ರವಾಗಿದೆ. ಕಟಾವಿಗೆ ಬಂದಿದ್ದ ಬೆಳೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ತಾಲೂಕಿನ ತುಂಬಸೋಗೆ ಸಮೀಪವಿರುವ ನಿಲುವಾಗಿಲು ಗ್ರಾಮದ ಕಾಂತನಾಯಕ ಅವರ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣ ನೆಲಕಚ್ಚಿದೆ. ಬಿರುಗಾಳಿ ಸಹಿತ ಮಳೆಗೆ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಸಂಪೂರ್ಣ ನೆಲಸಮವಾಗಿದೆ. ಇನ್ನು 15-20 ದಿನದಲ್ಲಿ ಬಾಳೆ ಬೆಳೆ ಕಟಾವಿಗೆ ಬಂದಿತ್ತು. ವ್ಯಾಪಾರಸ್ಥರು ಕೂಡ ಬಾಳೆ ಗೊನೆ ನೋಡಿ, ಕೆಲವೇ ದಿನಗಳಲ್ಲಿ ಬಂದು ಕಟಾವು ಮಾಡುವುದಾಗಿ ಹೇಳಿ ಹೋಗಿದ್ದರು. ಆದರೆ ಅಷ್ಟರೊಳಗೆ ಬಿರುಗಾಳಿ ಸಹಿತ ಮಳೆಗೆ ಬಾಳೆ ಗಿಡಗಳು ನೆಲಸಮವಾಗಿವೆ. ಸಾಲಸೋಲ ಮಾಡಿ ಬಾಳೆ ಬೆಳೆದಿದ್ದೀವಿ. 15 ದಿನದೊಳಗೆ ಕಟಾವು ಮಾಡಿಸಿ, ಅಲ್ಪಸ್ವಲ್ಪ ದುಡ್ಡು ನೋಡುವ ಆಸೆ ಇತ್ತು. ಆದರೆ ಇದೀಗ ನಮ್ಮ ಆಸೆಗೆ ಮಳೆರಾಯ ತಣ್ಣೀರು ಎರಚಿದ್ದಾನೆ. ಬಾಳೆ ಕಳೆದುಕೊಂಡ…

Read More

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ಹೇಳಿದ್ದಾರೆ.ಬುಧವಾರ ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ‌ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರೂ. 100 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೋಮದೇವರಹಟ್ಟಿ- ಮಲಕನದೇವರಹಟ್ಟಿ ವರೆಗೆ ಮೂಲಸೌಕರ್ಯ ಅಭಿವೃದ್ಧಿ ಅನುದಾನದಲ್ಲಿ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಎಲ್ಲ ಫಲಾನುಭವಿಗಳಿಗೆ ತಲುಪಿಸಲಾಗಿದೆ ಎಂದು ಅವರು ಹೇಳಿದರು.ನೀರಾವರಿ ಮತ್ತು‌ ಕೋಟಿ‌ ವೃಕ್ಷ ಅಭಿಯಾನದ ಪರಿಣಾಮ‌ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಉಷ್ಣಾಂಶ 40 ಡಿ. ಸೆ. ದಾಟಿಲ್ಲ. ಮಲಕನದೇವರಹಟ್ಟಿ ಗ್ರಾಮದ ಎರಡು ಕೆರೆಗಳ ಕಾಮಗಾರಿ ಪೂರ್ಣಗೊಂಡಿದೆ. ‌ಮುಂಬರುವ ದಿನಗಳಲ್ಲಿ ನೀರು…

Read More

ವಾಣಿಜ್ಯ ಗ್ಯಾಸ್ ಸಿಲಿಂಡರ್ & ಆಟೋ ಎಲ್‌ಪಿಜಿ ದರ ಏರಿಕೆ | ಬಡ ಜನರ ಮೇಲೆ ಕೇಂದ್ರ ಸರ್ಕಾರ ಚಾಟಿ ಏಟು | ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಸರ್ಕಾರವು ವಾಣಿಜ್ಯ ಗ್ಯಾಸ್ ಸಿಲಿಂಡರ್ ಹಾಗೂ ಆಟೋ ಎಲ್‌ಪಿಜಿ ದರಗಳನ್ನು ನಿರಂತರವಾಗಿ ಹೆಚ್ಚಿಸುತ್ತಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.ಮಾಧ್ಯಮದವರೊಂದಿಗೆ ಮಾತನಾಡಿದ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ “ಈ ಅನ್ಯಾಯಕರ ದರ ಏರಿಕೆ ಪಂಚ್ ರಾಜ್ಯಗಳ ಚುನಾವಣೆ ಮುಗಿದ ಮರುದಿನವೇ ಕೇಂದ್ರ ಸರ್ಕಾರ ಬಡ ಜನರ ಮೇಲೆ ಚಾಟಿ ಏಟು ಬೀಸಿದೆ. ಸಾಮಾನ್ಯ ಜನರ ಬದುಕಿನ ಮೇಲೆ ಭಾರೀ ಹೊರೆ ಹಾಕಿದ್ದು, ಸಣ್ಣ ವ್ಯಾಪಾರಿಗಳು, ಹೋಟೆಲ್ ಉದ್ಯಮಿಗಳು ಹಾಗೂ ಆಟೋ ಚಾಲಕರನ್ನು ಸಂಕಷ್ಟದ ಅಂಚಿಗೆ ತಳ್ಳಿದೆ” ಎಂದು ಹೇಳಿದರು.”ಈಗಾಗಲೇ ದುಬಾರಿ ಬದುಕಿನ ಹೊರೆ ಹೊತ್ತಿರುವ ಜನರಿಗೆ ಈ ದರ ಏರಿಕೆ ಮತ್ತಷ್ಟು ಸಂಕಷ್ಟ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ಹಾಗೂ ದೀರ್ಘಕಾಲದ ಉಸಿರಾಟ ಇಂತಹ ಸಮಸ್ಯೆ ಕುರಿತು ಉಚಿತ ತಪಾಸಣೆ ಶಿಬಿರ ಮೇ 11 ರಿಂದ ಮೇ 14ರ ವರೆಗೆ ನಡೆಯಲಿದೆ.ಸೋಮವಾರದಿಂದ ಗುರವಾರದ ವರೆಗೆ ನಾಲ್ಕು ದಿನ ನಡೆಯಲಿರುವ ಈ ಶಿಬಿರವನ್ನು ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರು ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 9513397413 ಸಂಪರ್ಕಿಸಬಹುದಾಗಿದೆ.

Read More

ಬಿ.ಎಸ್. ಯಡಿಯೂರಪ್ಪನವರ ಅಭಿಮಾನೋತ್ಸವದ ಹಿನ್ನೆಲೆ ವಿಜಯಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೇ.09 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಭಿಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ವಿಜಯಪುರ ನಗರ ಮಂಡಲದ ವತಿಯಿಂದ ಬುಧವಾರ ಪೂರ್ವಭಾವಿ ಸಭೆ ಜರುಗಿತು.ಈ ಸಭೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಕರ್ನಾಟಕ ಕಂಡ ಅತ್ಯಂತ ಧೀಮಂತ ರಾಜಕೀಯ ಮುತ್ಸದ್ಧಿಗಳು ಅವರು ಮುಖ್ಯಮಂತ್ರಿಗಳಾಗಿ ಭಾಗ್ಯಲಕ್ಷ್ನೀ ಯೋಜನೆ, ಶಾಲಾ ಮಕ್ಕಳಿಗೆ ಸೈಕಲ್ , ರೈತರಿಗಾಗಿ ಪ್ರತ್ಯೇಕ ಕೃಷಿ ಬಜೆಟ್ ಹೀಗೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ. ವಿಜಯಪುರ ಜಿಲ್ಲೆಗೆ ಅನೇಕ ಕೊಡುಗೆಗಳನ್ನು ಕೊಟ್ಟಿದ್ದು ಯಡಿಯೂರಪ್ಪನವರು ಅಜಾತಶತ್ರುವಾಗಿದ್ದು ಎಲ್ಲ ಸಮುದಾಯದ ಜನರನ್ನು ಸಮಾನರಾಗಿ ಕಂಡವರಾಗಿದ್ದಾರೆ. ಅವರ ಅಭಿಮಾನೋತ್ಸವದ ಈ ಕಾರ್ಯಕ್ರಮಕ್ಕೆ ನಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕಾರ್ಯಕರ್ತರಿಗೆ ಕರೆ ಕೊಟ್ಟರು ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ಬಿರಾದಾರ, ಮಳುಗೌಡ ಪಾಟೀಲ, ಸಂದೀಪ ಪಾಟೀಲ, ಭೀಮಾಶಂಕರ ಹದನೂರ, ಸ್ವಪ್ನಾ ಕಣಮುಚನಾಳ,…

Read More