Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಮನವಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಈ ಹಿಂದೆ ಹುಬ್ಬಳ್ಳಿ ಕಾಲೇಜಿನಲ್ಲಿ ನೇಹಾ ಹಿರೇಮಠ ಕಗ್ಗೊಲೆ ಮಾಡಿದ ಮತಾಂಧ ಪಯಾಝನ ಪ್ರಕರಣ, ಗದುಗಿನ ಅಪೂರ್ವ ಪುರಾಣಿಕ್ ಪ್ರಕರಣ, ವಿಜಯಲಕ್ಷ್ಮೀ ತಳವಾರ ಜಿಹಾದಿ ಸದ್ದಾಂ ಎಂಬಾತನ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಪ್ರಕರಣ ಸೇರಿ ಇವೆಲ್ಲವೂ ಲವ್ ಜಿಹಾದನಿಂದ ಮಾಡುವ ವಿವಿಧ ಕರಾಳ ಮುಖಗಳಾಗಿವೆ. ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಂರನ್ನು ಓಲೈಕೆ ಮಾಡುವಲ್ಲಿ ತೊಡಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಪ್ರಮುಖ ಶೇಖರಗೌಡ ಹರನಾಳ ಆಕ್ರೋಶ ವ್ಯಕ್ತಪಡಿಸಿದರು.ಸಿಂದಗಿ ವಿಶ್ವ ಹಿಂದೂ ಪರಿಷತ್, ಭಜರಂಗದಳದ ವತಿಯಿಂದ ರಂಜಿತಾ ಬರ್ಬರ ಹತ್ಯೆ ಮತ್ತು ಹೋರಾಟಗಾರರ ಬಂಧನ ಬಿಡುಗಡೆ ಮಾಡುವಂತೆ ಪ್ರತಿಭಟಿಸಿ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಯಲ್ಲಾಪುರದ ರಾಮಪುರ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡಿ ತನ್ನ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಶ್ರಮಿಸುತ್ತಿದ್ದ ಕಡುಬಡತನದ ಹಿಂದೂ ಹೆಣ್ಣು ಮಗಳು ರಂಜಿತಾ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಿಜಿಟಲ್ ಇ-ಸ್ಟ್ಯಾಪ್ ವ್ಯವಸ್ಥೆಯನ್ನು ರಾಜ್ಯದಾದ್ಯಂತ ಜಾರಿಗೊಳಿಸುವ ಹಿನ್ನಲೆಯಲ್ಲಿ ವಿಜಯಪುರ ಜಿಲ್ಲೆಯ ಉಪ ನೊಂದಣಾಧಿಕಾರಿಗಳು, ಸಿಬ್ಬಂದಿ ವರ್ಗ, ಡಿಇಓಗಳು, ಉಪ ನೊಂದಣಿ ಕಚೇರಿಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ದಸ್ತು ಬರಹಗಾರರು, ವಕೀಲರು, ಬ್ಯಾಂಕ್ ಪ್ರತಿನಿಧಿಗಳು, ಸಿಎಸ್ಸಿ ಕರ್ನಾಟಕ ಒನ್ ಕೇಂದ್ರಗಳ ನಿರ್ವಾಕರು ಹಾಗೂ ಆಸಕ್ತ ಸಾರ್ವಜನಿಕರಿಗೆ ಡಿಜಿಟಲ್ ಇ-ಸ್ಟ್ಯಾಂಪ್ ಸೃಜನೆ ಪರಿಶೀಲನೆ ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ಬಳಕೆ ಕುರಿತು ಜನವರಿ 11 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ನೊಂದಣಿ ಕಚೇರಿಯಲ್ಲಿ ತರಬೇತಿ ಆಯೋಜಿಸಲಾಗಿದೆ.ಈ ತರಬೇತಿಗೆ ನೊಂದಣಿ ಕಚೇರಿಯ ಅಧೀನದಲ್ಲಿರುವ ಎಲ್ಲರೂ ಕಡ್ಡಾಯವಾಗಿ ಭಾಗವಹಿಸುವಂತೆ ಉಪನೊಂದಣಾಧಿಕಾರಿಗಳು ಸೂಚಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪಿಡಿಜೆ ಪದವಿ ಪೂರ್ವ ಕಾಲೇಜಿನ ಸಭಾ ಭವನದಲ್ಲಿ ರವಿವಾರ ಸಂಜೆ (ದಿನಾಂಕ ೧೧ ರ) ಸಂಜೆ ೫.೩೦ ಗಂಟೆಗೆ ವಿವೇಕಾನಂದರ ಜಯಂತಿ ನಿಮಿತ್ತವಾಗಿ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. “ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ” ಆಯೋಜನೆಯ ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಶ್ರೀಮತಿ ಭಾರತಿ ಹಾಗೂ ಆನಂದ ಗೋಡಸೆ ದಂಪತಿಗಳು ವಹಿಸಿಕೊಂಡಿದ್ದು, “ವಿವೇಕಾಂದರ ರಾಷ್ಟ್ರೀಯ ಚಿಂತನೆಗಳು” ವಿಷಯದ ಮೇಲೆ ನಿವೃತ್ತ ಪ್ರಾಂಶುಪಾಲರು ಹಾಗೂ ಸಾಹಿತಿಗಳಾದ ಜಿ ಆರ್ ಕುಲಕರ್ಣಿಯವರು ಉಪನ್ಯಾಸ ಮಾಡಲಿದ್ದಾರೆ ಎಂದು “ಅಭಾಸಾಪ ವಿಜಯಪುರ” ಜಿಲ್ಲಾಧ್ಯಕ್ಷರಾದ ನಾರಾಯಣ ಬಾಬಾನಗರ ಹಾಗೂ ಉಪಾಧ್ಯಕ್ಷರಾದ ವಿವೇಕ ಕುಲಕರ್ಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ 9880050818 ವಿವೇಕ ಕುಲಕರ್ಣಿ , ಸುಕಾಂತ 8105473275 , ಅನಿಲ ಬಳ್ಳುಂಡಗಿ 9535792295 ಸಂಪರ್ಕಿಸಲು ಕೋರಲಾಗಿದೆ.
ಉದಯರಶ್ಮಿ ದಿನಪತ್ರಿಕೆ ಇಂಡಿ: ಪಾಲಕರ ಸಭೆಯು ಶಾಲಾ ನಿರ್ವಹಣೆಯಲ್ಲಿ ಪಾಲಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಮತ್ತು ಶಾಲೆಯ ಅಭಿವೃದ್ಧಿಯಲ್ಲಿ ಪಾರದರ್ಶಕತೆ ತರುವ ಉದ್ಧೇಶ ಹೊಂದಿದೆ. ಈ ನಿಮಿತ್ತ ಸಾಮಾಜಿಕ ಪರಿಶೋಧನೆಯನ್ನು ಸರ್ಕಾರವು ಆಯ್ದ ಶಾಲೆಗಳಲ್ಲಿ ನಡೆಸಲಾಗುತ್ತಿದೆ ಎಂದು ದೇವರ ಹಿಪ್ಪರಗಿ ತಾಲೂಕ ಪಂಚಾಯಿತಿ ಸಾಮಾಜಿಕ ಲೆಕ್ಕ ಪರಿಶೋಧನಾ ಅಧಿಕಾರಿ ಬಸವರಾಜ ಮಾದನಶೆಟ್ಟಿ ಹೇಳಿದರು.ಶುಕ್ರವಾರದಂದು ತಾಲೂಕಿನ ಹಿರೇರೂಗಿಯ ಕೆಜಿಎಸ್ ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಬೆಂಗಳೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು, ಸಮಗ್ರ ಶಿಕ್ಷಣ ಅಭಿಯಾನ ಮತ್ತು ಪಿ ಎಂ ಪೋಷಣ್ ಅಭಿಯಾನದ ಸಹಯೋಗದಲ್ಲಿ ಹಮ್ಮಿಕೊಂಡ ‘ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ’ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಾಲೆಯಲ್ಲಿ ಮಕ್ಕಳ ಕಲಿಕೆ, ಸುರಕ್ಷತೆ, ಇಲಾಖೆಯ ಯೋಜನೆಗಳು, ಶಾಲೆಯ ಕುಂದು-ಕೊರತೆಗಳ ಬಗ್ಗೆ ಪಾಲಕರೊಂದಿಗೆ ಚರ್ಚಿಸಿ, ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧಿಸಲು ಈ ಪಾಲಕರ ಸಭೆಯು ಸಹಕಾರಿಯಾಗಿದೆ ಎಂದು ಹೇಳಿದರು.ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಮನೆಯೇ ಮೊದಲ ಪಾಠ ಶಾಲೆ, ಜನನಿ ಮೊದಲ ಗುರು…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ನಾವು ಬಹಳಷ್ಟು ಬಾರಿ ತಾಳಿದವನು ಬಾಳಿಯಾನು ಎಂಬ ಮಾತನ್ನು ಕೇಳಿದ್ದೇವೆ. ಪ್ರಸ್ತುತ 21ನೇ ಶತಮಾನ ಮಾಹಿತಿಗಳ ಯುಗ. ಪತ್ರಿಕೆಗಳಲ್ಲಿ ಮಾಧ್ಯಮಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೀಗೆ ಹತ್ತು ಹಲವು ವಿಧಗಳಲ್ಲಿ ನಾವು ಮಾಹಿತಿಯನ್ನು ಪಡೆದುಕೊಳ್ಳುತ್ತೇವೆ, ನಿಜ. ಆದರೆ ಸಂಶೋಧನೆಗಳು ಮಾತ್ರ ಕಡಿಮೆಯಾಗಿದೆ. ಸಂಶೋಧನೆಗಳು ತಾವಾಗಿ ಹುಟ್ಟಿಕೊಂಡದ್ದಲ್ಲ. ಎಲ್ಲೋ ಮಾರುಕಟ್ಟೆಯಲ್ಲಿ ಕೆರೆಯ ದಡದಲ್ಲಿ ಯಾವುದೋ ಮನೆಯ ಮೂಲೆಯಲ್ಲಿ ಅಥವಾ ಹರಟೆ ಕಟ್ಟೆಯಲ್ಲಿ ಕುಳಿತಾಗ ಸಂಶೋಧನೆಗಳು ಹುಟ್ಟಿಕೊಂಡಿಲ್ಲ ವಿವಿಧ ವಿಷಯಗಳ ಜ್ಞಾನಿಗಳು, ಪಂಡಿತರು ಕಾರ್ಯನಿರತರಾಗಿದ್ದಾಗ ಆಕಸ್ಮಿಕವಾಗಿ ಹುಟ್ಟಿಕೊಂಡ ಸಂಶೋಧನೆಗಳು ನಮ್ಮ ಬಾಳನ್ನು ಬೆಳಗಿವೆ. ಕವಿಗಳು ಸಾಹಿತಿಗಳು ತಮ್ಮ ಮನಸ್ಸಿನ ಮಾತುಗಳನ್ನು ಕತೆ ಕವನಗಳನ್ನಾಗಿ ರಚಿಸಿದರು. ಅವರು ಕೂಡ ಎಲ್ಲೋ ಸಂತೆಯ ಗದ್ದಲದಲ್ಲಿ ತಮ್ಮ ಸಾಹಿತ್ಯವನ್ನು ರಚಿಸಿಲ್ಲ. ಅತ್ಯಂತ ಪ್ರಶಾಂತವಾದ ವಾತಾವರಣದಲ್ಲಿ ಅವರ ಅನುಭವದ ಮೂಸೆಯಿಂದ ಹೊರಬಿದ್ದ ಪದಗಳು ಕಥೆಗಳಾಗಿ ಕವನಗಳಾಗಿ ರೂಪುಗೊಂಡವು. ಹಾಗಾದರೆ ಸಂಶೋಧನೆಗಳಾಗಲಿ, ಕತೆ ಕವನಗಳ ರಚನೆಯೇ ಆಗಲಿ ಯಾವುದೇ ಒಂದು ಕೆಲಸ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯದ ಟರ್ಮ್ ಎಂಡ್ ಪರೀಕ್ಷೆಗಳನ್ನು ಡಿಸೆಂಬರ್ ೧ ರಿಂದ ಜನವರಿ ೧೪ ೨೦೨೬ರ ವರೆಗೆ ನಡೆಯಲಿದ್ದು, ವಿಜಯಪುರ ಪ್ರಾದೇಶಿಕ ಕೇಂದ್ರದ ವ್ಯಾಪ್ತಿಯ ಐದು ಇಗ್ನೋ ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆಗಳು ನಡೆಯಲಿವೆ. ನೋಂದಾಯಿಸಿಕೊAಡಿರುವವರು https://ignou.samarth.edu.inವೆಬ್ಸೈಟ್ ಮೂಲಕ ಪರೀಕ್ಷಾ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ೦೮೩೫೨-೨೫೨೦೦೬ ಅಥವಾ ಡಿಛಿbiರಿಚಿಠಿuಡಿ@igಟಿou.ಚಿಛಿ.iಟಿ ಸಂಪರ್ಕಿಸಬಹುದಾಗಿದೆ ಎಂದು ಇಗ್ನೋದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೊಲಾಪೂರದಲ್ಲಿ ನಡೆದ ಕಾರ್ಯಾಗಾರದಲ್ಲಿ ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಪೋರೇಟ್ ಜಗತ್ತಿನಲ್ಲಿ ಉದ್ಯೋಗಿಗಳು ತಮ್ಮ ಸ್ವಂತ ಭಾವನೆಗಳನ್ನು ಅರ್ಥೈಸಿಕೊಂಡು ಇತರ ಸಹದ್ಯೋಗಿಗಳ ಶಕ್ತಿ-ಸಾಮರ್ಥ್ಯ ಗುರುತಿಸಿ, ಒತ್ತಡ ನಿವಾರಣೆ, ಪರಿಣಾಮಕಾರಿ ಸಂವಹನ, ಸಹಾನುಭೂತಿ ಮತ್ತು ಸವಾಲುಗಳನ್ನು ನಿಭಾಯಿಸಲು ಭಾವನಾತ್ಮಕ ಬುದ್ಧಿಮತ್ತೆ ಪ್ರಮುಖ ಪಾತ್ರವಹಿಸುತ್ತದೆ ಎಂದು ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಎಂ.ಎಸ್.ಖೊದ್ನಾಪೂರ ಅವರು ಅಭಿಪ್ರಾಯಪಟ್ಟರು.ಅವರು ಮಹಾರಾಷ್ಟ್ರದ ಸೋಲಾಪೂರದ ಅಹಲ್ಯಾಬಾಯಿ ಹೋಳ್ಕರ ಸೋಲಾಪೂರ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯಶಾಸ್ತ್ರ ಮತ್ತು ವ್ಯವಹಾರ ನಿರ್ವಹಣೆ ವಿಭಾಗದಡಿಯಲ್ಲಿ “ಕಾರ್ಪೋರೇಟ್ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿಮತ್ತೆ” ವಿಷಯ ಕುರಿತು ಆಯೋಜಿಸಿದ್ದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡುತ್ತಿದ್ದರು.ಅವರು ಮಾತನಾಡುತ್ತಾ, ಕಂಪನಿಯಲ್ಲಿ ಉದ್ಯೋಗಿಯು ತನ್ನ ಆತ್ಮ ಅರಿವು, ಸ್ವಯಂ ನಿಯಂತ್ರಣ, ಸಾಮಾಜಿಕ ಅರಿವು ಮತ್ತು ಸಂಬಂಧ ನಿರ್ವಹಣೆಯಂತಹ ಭಾವನಾತ್ಮಕ ಬುದ್ಧಿಮತ್ತೆಯ ಅಂಶಗಳು ನಾಯಕತ್ವ ಮತ್ತು ಉದ್ಯೋಗಿಗಳ ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಮತ್ತು ಯಶಸ್ವಿಗೆ ಅಡಿಪಯವಾಗಲಿವೆ. ಭಾರತದ ವೇಗವಾಗಿ ಬೆಳೆಯುತ್ತಿರುವ ಕಾರ್ಪೋರೇಟ್ ಕ್ಷೇತ್ರದಲ್ಲಿ ಕೇವಲ ತಾಂತ್ರಿಕ ಕೌಶಲ್ಯಗಳು ಸಾಲದು.…
ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಹೇಳಿಕೆ ಹಿಂದಿನ ಲೆಕ್ಕಾಚಾರ ಏನು? ಉದಯರಶ್ಮಿ ದಿನಪತ್ರಿಕೆ ವಿಶೇಷ ವರದಿ: ಶ್ರೀಕಂಠ ಈಶ್ವರ್ಹೆಚ್ ಡಿ ಕೋಟೆ: ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಾದರೆ ಹೆಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆ ಲಾಭವಾಗುತ್ತಾ? ಎರಡೆರಡು ಕಡೆ ಗುರುತಿನ ಚೀಟಿ ಹೊಂದಿರುವವರನ್ನು ಮತಪಟ್ಟಿಯಿಂದ ಡಿಲೀಟ್ ಮಾಡಿದರೆ ಕಾಂಗ್ರೆಸ್ ಗೆ ಮುಳುವಾಗುತ್ತಾ? ಮತದಾರರ ಸಂಖ್ಯೆ ಕಡಿಮೆಯಾದಷ್ಟು ಜೆಡಿಎಸ್ ಗೆ ಲಾಭ ಹೇಗೆ? ಇಂತದೊಂದು ಚರ್ಚೆಗೆ ಕಾರಣ ಜೆಡಿಎಸ್. ಮುಖಂಡ ಕೆ.ಎಂ. ಕೃಷ್ಣನಾಯಕ ಅವರ ಹೇಳಿಕೆ.ಮಂಗಳವಾರ ಜೆಡಿಎಸ್ ಕಚೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ವೇಳೆ ಕೆ.ಎಂ. ಕೃಷ್ಣನಾಯಕ ಒಂದು ಅಚ್ಚರಿಕೆಯ ಹೇಳಿಕೆ ನೀಡಿದ್ದರು. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಬೂತ್ ಮಟ್ಟದ ಕಾರ್ಯಕತರು ಹದ್ದಿನ ಕಣ್ಣಿಡಬೇಕು. ಬೇರೆ ರಾಜ್ಯಗಳಿಂದ, ಬೇರೆ ಜಿಲ್ಲೆಗಳಿಂದ ಇಲ್ಲಿಗೆ ಬಂದಿರುವವರು, ಮತದಾರರ ಪಟ್ಟಿ ಹೊಂದಿರುತ್ತಾರೆ. ಹೀಗಾಗಿ ಎರಡು ಕಡೆಯೂ ಮತದಾನ ಮಾಡುತ್ತಿದ್ದರು. ಆದರೆ ಈ ಬಾರಿ ಮತಪಟ್ಟಿ ಪರಿಷ್ಕರಣೆಯಾದರೆ ಒಂದು ಕ್ಷೇತ್ರದಲ್ಲಿ 10 ಸಾವಿರಕ್ಕೂ ಅಧಿಕ ಮತದಾರರ ಸಂಖ್ಯೆ…
ಸಿಎಂ ಸಿದ್ದರಾಮಯ್ಯ ಜಿಲ್ಲೆಗೆ ಭೇಟಿ | ಸಿದ್ದತೆ ಪರಿಶೀಲಿಸಿದ ಸಚಿವ ಡಾ. ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜ.೯ರಂದು ವಿಜಯಪುರಕ್ಕೆ ಆಗಮಿಸಿ ವೀರರಾಣಿ ಕಿತ್ತೂರು ಚನ್ನಮ್ಮ ಪ್ರತಿಮೆ ಅನಾವರಣ ಒಳಗೊಂಡಂತೆ, ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮದ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಗುರುವಾರ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ ಹಾಗೂ ಕಾರ್ಯಕ್ರಮದ ವೇದಿಕೆ ಸ್ಥಳಕ್ಕೆ ಭೇಟಿ ನೀಡಿ ಕೈಗೊಂಡಿರುವ ಸಿದ್ಧತೆಯ ಕುರಿತು ಪರಿಶೀಲನೆ ನಡೆಸಿದರು.ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ವೇದಿಕೆ ಕಾರ್ಯಕ್ರಮವನ್ನು ಸೂಸೂತ್ರವಾಗಿ ನಡೆಸುವಂತೆ ಸೂಚಿಸಿದ ಅವರು, ಆಸನದ ವ್ಯವಸ್ಥೆ, ಕುಡಿಯುವ ನೀರು ಹಾಗೂ ಕೈಗೊಂಡಿರುವ ಭದ್ರತಾ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಹಾಗೂ ಭೂತನಾಳದ ಸಮೀಪ ನಿರ್ಮಾಣಗೊಂಡಿರುವ ಸೈಕ್ಲಿಂಗ್ ವೇಲೋಡ್ರಾಮ್…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಿಂದಗಿ-ಆಹೇರಿ ಹಳೆಯ ರಸ್ತೆಗೆ ರೂ.೧ಕೋಟಿ ೫೦ಲಕ್ಷ, ಸಿಂದಗಿ-ಬಂಕಲಗಿ ರಸ್ತೆಗೆ ರೂ.೧ಕೋಟಿ ಅನುದಾನ ಮಂಜೂರಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದಲ್ಲಿ ಜಿಲ್ಲಾ ಪಂಚಾಯತ್, ಪಂಚಾಯತ್ ರಾಜ ಇಂಜಿನಿಯರ್ ಉಪ ವಿಭಾಗ ಇಲಾಖೆಯ ೨೦೨೪-೨೫ನೇ ಸಾಲಿನ ಮಳೆ ಪರಿಹಾರದ ಕಾರ್ಯಕ್ರಮದಡಿಯಲ್ಲಿ ರೂ.೧ಕೋಟಿ ವೆಚ್ಚದ ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಹಳೆ ಬ್ಯಾಕೋಡ-ಸಿಂದಗಿ ಕೂಡುವ ರಸ್ತೆ ಡಾಂಬರಿಕರಣ ಹಾಗೂ ಸಿಸಿ ಚರಂಡಿ ಸೇತುವೆ ನಿರ್ಮಾಣ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ರೈತರ ಜಮೀನು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎನ್ನುವ ದಿಸೆಯಲ್ಲಿ ಹಳೆಯ ರಸ್ತೆಗಳನ್ನು ಸುಧಾರಣೆ ಮಾಡುವ ಕಾರ್ಯವನ್ನು ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಮಾಡಲಾಗುತ್ತಿದೆ. ಕೆರೆಯ ಪಕ್ಕದ ಶಾಂತವೀರ ಪಟ್ಟಾಧ್ಯಕ್ಷರ ಉದ್ಯಾನವನದಲ್ಲಿ ತೊಂಟದ ಲಿಂ.ಸಿದ್ದಲಿಂಗ ಶ್ರೀಗಳ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ಇಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಜೊತೆಗೆ ರಾಣಿ ಚನ್ನಮ್ಮ ವೃತ್ತದ ಹತ್ತಿರವಿರುವ ಹಳೆಯ ಕೊಕಟನೂರ ರಸ್ತೆಯ ಸುಧಾರಣೆಗೆ…
