Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಧರ್ಮಸ್ಥಳ ಪ್ರಕರಣ | ಕರ್ನಾಟಕದ ಜನರಿಗೆ ಮುಖ್ಯಮಂತ್ರಿಯೇ ಉತ್ತರಿಸಲಿ | ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಲು ತಮ್ಮ ಮೇಲೆ ಯಾರು ಒತ್ತಡ ಹೇರಿದರು ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕೆಂದು ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸೋಮವಾರ ಒತ್ತಾಯಿಸಿದ್ದಾರೆ.ಹಲವಾರು ಶವಗಳನ್ನು ತಾನೇ ಹೂತು ಹಾಕಿರುವುದಾಗಿ ಆರೋಪಿಸಿರುವ ಅನಾಮಧೇಯ ದೂರುದಾರನ ಹೇಳಿಕೆಯ ಆಧಾರದ ಮೇಲೆ ಶವಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿರುವ ಮಧ್ಯೆಯೇ ಬಿಜೆಪಿ ರಾಜ್ಯಾಧ್ಯಕ್ಷರ ಈ ಹೇಳಿಕೆ ಬಂದಿದೆ.ವಿಜಯೇಂದ್ರ ಅವರ ಪ್ರಕಾರ, ಮಂಜುನಾಥಸ್ವಾಮಿ ದೇವಸ್ಥಾನವಿರುವ ದೇವಾಲಯ ಪಟ್ಟಣ ಧರ್ಮಸ್ಥಳದ ವಿರುದ್ಧ “ದೊಡ್ಡ ಪಿತೂರಿ” ನಡೆಯುತ್ತಿದೆ.ಮುಖ್ಯಮಂತ್ರಿಗಳು ಎರಡು ವಾರಗಳ ಹಿಂದೆ ತಾವು ಎಸ್ಐಟಿ ರಚಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಮರುದಿನವೇ ಅವರು ತಮ್ಮ ನಿಲುವು ಬದಲಾಯಿಸಿ ಎಸ್ಐಟಿ ರಚಿಸಿದರು ಎಂದರು.ಎಸ್ಐಟಿ ರಚಿಸಲು ಸಿದ್ದರಾಮಯ್ಯ ಅವರ ಮೇಲೆ ಯಾರು ಒತ್ತಡ ಹೇರಿದರು? ಇದು ಕರ್ನಾಟಕದ ಜನರಿಗೆ ಮುಖ್ಯಮಂತ್ರಿಯೇ ಉತ್ತರಿಸಬೇಕು ಎಂದು…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಜಿಲ್ಲೆಯಲ್ಲಿ ಮಳೆಯಿಂದ ಬೆಳೆ ಹಾನಿಯಾಗಿರುವ ಕುರಿತು ಜಂಟಿ ಸಮೀಕ್ಷೆ ನಡೆಸಿ ಹಾನಿಗೀಡಾದ ರೈತರಿಗೆ ಪರಿಹಾರ ಕೊಡಲಾಗುವುದು ಎಂದು ಜಿಲ್ಲಾಕಾರಿ ಡಾ.ಆನಂದ ಕೆ. ಹೇಳಿದರು.ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮಳೆಯಿಂದಾಗಿ ಬೆಳೆ ಹಾನಿಯಾಗಿರುವ ಮಾಹಿತಿ ಇದ್ದು, ಕೂಡಲೇ ಸಮೀಕ್ಷೆ ಮಾಡಲು ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಕಾರಿಗಳೊಂದಿಗೆ ಜಂಟಿ ಸಮೀಕ್ಷೆ ಮಾಡಲು ಸೂಚಿಸಲಾಗಿದೆ. ಬೆಳೆ ಹಾನಿಗೀಡಾದ ರೈತರಿಗೆ ಮಾರ್ಗಸೂಚಿಯನ್ವಯ ಪರಿಹಾರ ತಂತ್ರಾಂಶ ಮೂಲಕ ರೈತರ ಖಾತೆಗೆ ಜಮೆ ಮಾಡಲಾಗುವುದು ಎಂದರು.ಪಿಒಪಿ ಗಣೇಶ ಮೂರ್ತಿಗಳ ಮಾರಾಟ ನಿಷೇಸಲಾಗಿದೆ. ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಿಗೂ ಸೂಚನೆ ಕೊಟ್ಟಿದ್ದೇವೆ. ಪೊಲೀಸ್ ಇಲಾಖೆ ನಿಗಾ ವಹಿಸಿದೆ. ಬುಧವಾರ ಕೂಡ ಸಮಗ್ರವಾಗಿ ಚರ್ಚಿಸಲು ಸಭೆ ನಡೆಸಲಾಗುವುದು ಎಂದರು.ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಿಸುವ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದರು.
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಮಕ್ಕಳು ಶಿಕ್ಷಣದ ಜೊತೆಗೆ ಕಲೆ, ಸಂಗೀತ, ಕ್ರೀಡೆ ಇವುಗಳಿಗೂ ಕೂಡ ಗಮನ ಕೊಡಬೇಕು ಇದರಿಂದ ಆತಂಕ, ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಂಡು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಸಾಧಿಸಲು, ಆರೋಗ್ಯಪೂರ್ಣ ಜೀವನ ಸಾಗಿಸಲು ಸಹಾಯಕವಾಗುತ್ತವೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ ಕೆ. ಆನಂದ ಹೇಳಿದರು.ಇಲ್ಲಿಯ ಪಿಎಂಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ಆಂಧ್ರಪ್ರದೇಶ ಮತ್ತು ಕರ್ನಾಟಕದ ವಿವಿಧ ನವೋದಯ ಶಾಲೆಗಳ ವಲಯ ಮಟ್ಟದ ‘ಶಿಕ್ಷಣದಲ್ಲಿ ಕಲೆ ಮತ್ತು ಕಲೋತ್ಸವ’ವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಮೀಣ ವಿದ್ಯಾರ್ಥಿಗಳು ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನವೋದಯ ಶಾಲೆಯಲ್ಲಿ ದೊರೆಯುತ್ತದೆ. ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಲ್ಲಿ ಹುದುಗಿರುವ ನಾನಾ ಕಲೆಗಳ ಅನಾವರಣವೂ, ಆ ಕಲೆಗಳಿಗೆ ಪ್ರೋತ್ಸಾಹವೂ ಇಂತಹ ಕಾರ್ಯಕ್ರಮಗಳಿಂದ ದೊರೆಯುತ್ತದೆ ಎಂದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಮುಖ್ಯ ಎಂಜಿನಿಯರ್ ಡಿ. ಬಸವರಾಜ ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಓದುವುದರ ಜೊತೆಗೆ ಸಹಪಠ್ಯ ಚಟುವಟಿಕೆಗಳು ಕೂಡ ಮುಖ್ಯ ಎಂದರು.ವೇದಿಕೆಯ ಮೇಲೆ ತಹಶೀಲ್ದಾರ್ ಎ.ಡಿ. ಅಮರಾವದಗಿ ಇದ್ದರು.ಜವಾಹರ ನವೋದಯ ವಿದ್ಯಾಲಯದ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಮಾದಿಗ ಸಮಾಜ ಬಾಂಧವರು ಸೋಮವಾರ ಸಂಜೆ ಆ.೧೯ ರಂದು ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ ದಾಸ ಆಯೋಗದ ವರದಿಯನ್ನು ಸಿಎಂ, ಡಿಸಿಎಂ, ಸಚಿವ ಶಿವಾನಂದ ಪಾಟೀಲ ಅವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ಮೂಲಕ ಸಲ್ಲಿಸಿದರು.ಮನವಿ ಪತ್ರವನ್ನು ಗ್ರೇಡ್-೨ ತಹಸೀಲ್ದಾರ ಅರಕೇರಿ ಸ್ವೀಕರಿಸಿದರು.ಅವರು ಸಲ್ಲಿಸಿದ ಮನವಿಯಲ್ಲಿ ಮಾದಿಗ ಸಂಬಂಧಿತ ಜನಾಂಗದ ವಿವಿಧ ಸಂಘಟನೆಗಳು ಸು.೩೫-೪೦ ವರ್ಷಗಳಿಂದ ಸತತವಾಗಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಸಲುವಾಗಿ ಹಲವಾರು ಹೋರಾಟಗಳನ್ನು ಮಾಡುತ್ತಾ ಬಂದಿವೆ. ಒಳಮೀಸಲಾತಿಗಾಗಿ ಹೋರಾಟ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಹೋರಾಟದಲ್ಲಿ ಭಾಗವಹಿಸಲು ಹೋಗುವಾಗ ನಡೆದ ಅಪಘಾತದಲ್ಲಿ ಬಸವನಬಾಗೇವಾಡಿಯಲ್ಲಿ ಏಳು ಜನರು ಮೃತಪಟ್ಟಿದ್ದಾರೆ. ಅಲ್ಲದೇ ರಾಜ್ಯದ ಇತರೇ ಜನರು ಸಹ ಒಳಮೀಸಲಾತಿಗಾಗಿ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ಆಡಳಿತಕ್ಕೆ ಬಂದರೂ ಮಾದಿಗ ಜನಾಂಗಕ್ಕೆ ಮೂಗಿಗೆ ತುಪ್ಪ ಒರೆಸುವ ಕಾರ್ಯ ಮಾಡುತ್ತಾ ಬರಲಾಗಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ಪ್ರಣಾಳಿಕೆಯಲ್ಲಿ ಪಕ್ಷಗಳು ಒಳಮೀಸಲಾತಿ…
ಉದಯರಶ್ಮಿ ದಿನಪತ್ರಿಕೆ ವರದಿ: ಬಸವರಾಜ ನಂದಿಹಾಳಬಸವನಬಾಗೇವಾಡಿ: ಪಟ್ಟಣದ ಐತಿಹಾಸಿಕ ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನಕ್ಕೆ ಪವಿತ್ರ ಶ್ರಾವಣ ಮಾಸದ ಕೊನೆಯ ಸೋಮವಾರವಾದ ಇಂದು ಮಳೆ ಬರುತ್ತಿದ್ದರೂ ರಾಜ್ಯದ ವಿವಿಧೆಡೆಗಳಿಂದ ಅಪಾರ ಪ್ರಮಾಣದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಂಡು ಧನ್ಯತೆ ಅನುಭವಿಸಿದರು.ಬೆಳಗ್ಗೆ ಮೂಲನಂದೀಶ್ವರನಿಗೆ ರುದ್ರಾಭಿಷೇಕ, ವಿಶೇಷ ಪೂಜೆಯನ್ನು ಗೌರಿಶಂಕರ ಚರಂತಿಮಠ ನೆರವೇರಿಸಿದರು. ಅಪಾರ ಪ್ರಮಾಣದ ಜನರು ದೇವಸ್ಥಾನದ ಸುತ್ತ ದೀಡ್ ನಮಸ್ಕಾರ, ಉರುಳುಸೇವೆ ಹಾಕಿ ತಮ್ಮ ಹರಕೆ ಸಲ್ಲಿಸಿದರು. ಅಪಾರ ಜನರು ಮೂಲನಂದೀಶ್ವರ ದೇವರಿಗೆ ರುದ್ರಾಭಿಷೇಕ ಮಾಡಿಸಿ ಕಾಯಿ-ಹಣ್ಣು, ಕರ್ಪೂರ ಸಲ್ಲಿಸಿ ಭಕ್ತಿಯನ್ನು ಸಮರ್ಪಿಸಿದರು. ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ಆಗಾಗ ಮಳೆ ಬಿಟ್ಟು ಬಿಡದೇ ಬರುತ್ತಿದ್ದರೂ ದೇವಸ್ಥಾನದ ದರ್ಶನಕ್ಕೆ ಕೆಲ ಜನರು ಮಳೆಯಲ್ಲಿಯೇ ನೆನೆದುಕೊಂಡು ಬಂದರೆ ಕೆಲವರು ಛತ್ರಿ ಹಿಡಿದುಕೊಂಡು ಬಂದರು. ಮಧ್ಯಾನ್ಹ ಒಂದು ಗಂಟೆಯಿಂದ ಮೂರು ಗಂಟೆಯಿಂದ ಮಳೆ ವಿರಾಮ ನೀಡಿದ್ದರಿಂದ ದೇವಸ್ಥಾನದಲ್ಲಿ ಹೆಚ್ಚು ಜನರು ಕಂಡುಬಂದರು. ಜಾತ್ರೆಯಂಗವಾಗಿ ಹಾಕಲಾಗಿದ್ದ ವಿವಿಧ ಅಂಗಡಿಗಳಲ್ಲಿ ಮಳೆಯಲ್ಲಿ ಹೋಗಿ ಜನರು ತಮಗೆ…
ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ, ಹಿರಿಯಛಾಯಾಗ್ರಾಹಕರಿಗೆ ಗೌರವ ಸನ್ಮಾನ, ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಛಾಯಾಚಿತ್ರಗಳ ಪ್ರದರ್ಶನ ಉದಯರಶ್ಮಿ ದಿನಾಚರಣೆ ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಹಾಗೂ ಕರ್ನಾಟಕ ರಾಜ್ಯ ಛಾಯಾಚಿತ್ರಗ್ರಾಹಕರ ಸಂಘದ ಸಹಯೋಗದಲ್ಲಿ ಆ.೧೮ ರಂದು ವಿಶ್ವ ಛಾಯಾಗ್ರಹಣ ದಿನಾಚರಣೆ, ಹಿರಿಯ ಛಾಯಾಗ್ರಾಹಕರಿಗೆ ಗೌರವ ಸನ್ಮಾನ, ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಛಾಯಾಚಿತ್ರಗಳ ಪ್ರದರ್ಶನ ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ್ ರಂಗಮಂದಿರದಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಯುವ ಭಾರತ್ ಸಮಿತಿಯ ಅಧ್ಯಕ್ಷ ಹಾಗೂ ಹವ್ಯಾಸಿ ಛಾಯಾಗ್ರಾಹಕರದ ಉಮೇಶ್ ಕಾರಜೋಳ ಮಾತನಾಡುತ್ತ, ಛಾಯಾಗ್ರಾಹಕರು ಇಂದು ಬಹಳ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಸರ್ಕಾರ ಛಾಯಾಗ್ರಹಣ ಅಕಾಡೆಮಿ ಪ್ರಾರಂಭ ಮಾಡಿದರೆ ಛಾಯಾಗ್ರಾಹಕರಿಗೆ ಹೆಚ್ಚಿನ ಜ್ಞಾನ ವಿಸ್ತರಿಸಿಕೊಳ್ಳಲು ಮತ್ತು ಸರ್ಕಾರದ ಸವಲತ್ತುಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದರು.ಒಂದು ಚಿತ್ರ ಸಾವಿರ ಕಥೆ ಹೇಳುವ ಸಾಮರ್ಥ್ಯ ಹೊಂದಿದೆ. ಅದರಲ್ಲೂ ಛಾಯಾಗ್ರಹಣ ಐತಿಹಾಸಿಕ ದಾಖಲೆ ಸೃಷ್ಟಿಸುವ, ದಾಖಲಿಸುವ ಒಂದು ಅದ್ಭುತ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ತಿಳಗುಳ ಗ್ರಾಮದಲ್ಲಿ ಹಾಗೂ ಇಂಡಿ ಪಟ್ಟಣದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಾಗಿಸುತ್ತಿರುವ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಜಿಲ್ಲೆಯಲ್ಲಿ ದೇವರಹಿಪ್ಪರಗಿ ತಾಲೂಕಿನ ತಿಳಗುಳ ಗ್ರಾಮದಲ್ಲಿ ಟಾಟಾ ಎಸಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲಿಸ್ ಅಧಿಕಾರಿಗಳು ದಾಳಿ ನಡೆಸಿದ ೭ ಪ್ಲಾಸ್ಟಿಕ್ ಚೀಲ್ಗಳಲ್ಲಿ ತುಂಬಿರುವ ಅಕ್ಕಿ ಹಾಗೂ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದು, ವಾಹನ ಚಾಲಕ ಸೈಫನ್ ಆಲಮೇಲ್ ಮೇಲೆ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಇನ್ನೊಂದು ಪ್ರತ್ಯೇಕ ಘಟನೆಯಲ್ಲಿ ಇಂಡಿ ಪಟ್ಟಣದ ಕುಂಬಾರ ಓಣಿಯ ರಸ್ತೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ೭೫೧೧೦ ರೂ. ಮೌಲ್ಯದ ೨೫೯೦ ಕೆ.ಜಿ. ಅಕ್ಕಿ, ಹಾಗೂ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಾಹನ ಚಾಲಕ ಪರಾರಿಯಾಗಿದ್ದು, ಈ ಕುರಿತು ಇಂಡಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರದ ಭೂತನಾಳ ಕೆರೆ ಹತ್ತಿರದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಆಗಸ್ಟ್ ೨೨ ರಂದು ಕಟ್ಲಾ, ರೋಹು ಹಾಗೂ ಸಾಮಾನ್ಯ ಗೆಂಡೆ (ಗೌರಿ) ಮೀನುಮರಿಗಳನ್ನು ತಲಾ ೧.ರೂ ನಂತೆ ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: ೯೯೪೫೯೫೯೭೦೪, ೯೯೦೦೭೭೬೨೦೫, ೦೮೩೫೨-೨೬೪೫೧೬ ಹಾಗೂ ೯೪೮೦೫೧೮೬೭೯ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯ ಅವಧಿಯೂ ಎರಡು ವರ್ಷದಾಗಿದ್ದು, ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ಆದಾಯ ೧೦,೦೦೦ ಶಿಷ್ಯ ವೇತನ ನೀಡಲಾಗುವುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯವರಾಗಿಬೇಕು. ೪೦ ವರ್ಷ ವಯಸ್ಸು ಹಾಗೂ ಕುಟುಂಬದ ವಾರ್ಷಿಕ ಆದಾಯ ೨ಲಕ್ಷ ೫೦ಸಾವಿರ ರೂ. ಮೀರಿರಬಾರದು. ಎರಡು ವರ್ಷದ ಒಳಗೆ ಕಾನೂನು ಪದವಿ ಪಡೆದಿರಬೇಕು.ಆಸಕ್ತ ಅಭ್ಯರ್ಥಿಗಳು tw.kar.nic.inವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿರುವ ಅಗತ್ಯ ದಾಖಲೆಗಳನ್ನು ವಿಜಯಪುರ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಅಥವಾ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕಿನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹೊಸದಾಗಿ ನಿರ್ಮಿಸಿದ ತೋಟಗಾರಿಕೆ ಉತ್ಪನ್ನಗಳ ಪೂರ್ಣ ಪ್ರಮಾಣದ ಮೌಲ್ಯವರ್ಧಿತ ಸಂಸ್ಕೃರಣೆ ಘಟಕಗಳು, ಔಷಧಿ ಮತ್ತು ಸುಗಂಧ ದ್ರವ್ಯಗಳ ಘಟಕಗಳನ್ನೊಳಗೊಂಡಂತೆ, ಪ್ರಾಯೋಗಿಕ ಉತ್ಪಾದನೆ ಮತ್ತು ವಾಣಿಜ್ಯ ಉತ್ಪಾದಣೆ ಕೈಗೊಳ್ಳುವ ಘಟಕಗಳಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಒದಗಿಸಲಾಗುವ ಶೇ.೨೫ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ದ್ರಾಕ್ಷಾರಸ ಉತ್ಪಾದನಾ ಘಟಕ, ಹಣ್ಣು ಮತ್ತು ತರಕಾರಿ ಸಂಸ್ಕರಣೆ-ಕ್ಯಾನಿಂಗ್ ಘಟಕ, ಉಪ್ಪಿನಕಾಯಿ ಘಟಕ, ಸುಗಂಧದ್ರವ್ಯ-ಔಷಧಿ ಸಸ್ಯಗಳ ಸಂಸ್ಕರಣಾ ಘಟಕಗಳು, ಗರ್ಕಿನ್ ಘಟಕಗಳು ಇತ್ಯಾದಿ ಘಟಕಗಳನ್ನು ಸಹಾಯಧನಕ್ಕೆ ಪರಿಗಣಿಸಲಾಗುವುದು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ-ಮೊ:೯೫೩೫೧೮೫೯೯೯, ಇಂಡಿ- ಮೊ:೯೦೦೮೪೦೪೦೪೧, ಸಿಂದಗಿ-ಮೊ:೭೭೯೫೯೫೨೬೫೩, ಬ.ಬಾಗೇವಾಡಿ-ಮೊ:೯೮೪೫೨೧೫೩೬೨, ಮುದ್ದೇಬಿಹಾಳ-ಮೊ:೯೬೦೨೫೭೮೫೫೧ ಸಂಖ್ಯೆಗೆ ಅಥವಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
