Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ 23 ನೆಯ ಶರಣಮಾಸದ ಅನುಭಾವ ಮಾಲಿಕೆಯಲ್ಲಿ ಡಾ ಕಸ್ತೂರಿ ದಳವಾಯಿ ಅವರು ಮಾತನಾಡುತ್ತಾ ಮೈಲಾರ ಮಹಾದೇವಪ್ಪನವರು ೧೯೧೧ರಲ್ಲಿ ಹಾವೇರಿ ಜಿಲ್ಲೆಯ ಮೋಟೆಬೆನ್ನೂರಿನಲ್ಲಿ ಜನಿಸಿದರು. ಇವರ ತಾಯಿ ಬಸಮ್ಮ ; ತಂದೆ ಮಾರ್ತಾಂಡಪ್ಪ. ಮೋಟೆಬೆನ್ನೂರಿನಲ್ಲಿ ಪ್ರಾಥಮಿಕ ಶಿಕ್ಷಣವನ್ನೂ ಹಾಗು ಹಂಸಭಾವಿಯಲ್ಲಿ ಮಾಧ್ಯಮಿಕ ಶಿಕ್ಷಣವನ್ನು ಪಡೆದರು. ಹೈಸ್ಕೂಲಿನಲ್ಲಿ ಹರ್ಡೇಕರ ಮಂಜಪ್ಪನವರಿಂದ ರಾಷ್ಟ್ರೀಯ ಭಾವನೆಯ ಉದಯವಾಯಿತು. ಅದೇ ಸಮಯದಲ್ಲಿ ಗಳಗನಾಥರ ಸಾಹಿತ್ಯ ಹಾಗು ಲೋಕಮಾನ್ಯ ತಿಲಕರ[೧] ಕೇಸರಿ ಪತ್ರಿಕೆಯಲ್ಲಿಯ ಲೇಖನಗಳಿಂದ ಇವರಿಗೆ ಪ್ರೇರಣೆ ದೊರೆಯಿತು. ಇದರಿಂದ ೧೯೨೯ರಲ್ಲಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಖಾದಿ ಪ್ರಚಾರದಲ್ಲಿ ತೊಡಗಿದರು. ಮಹಾತ್ಮಾ ಗಾಂಧೀಜಿಯವರು ಉಪ್ಪಿನ ಸತ್ಯಾಗ್ರಹ[೨] ಪ್ರಾರಂಭಿಸಿ ದಾಂಡಿ ಯಾತ್ರೆ ಕೈಗೊಂಡಾಗ ಅದರಲ್ಲಿ ಭಾಗವಹಿಸಿದ ಅತಿ ಕಿರಿಯ ಚಳುವಳಿಗಾರರಾಗಿದ್ದರು. ಜೊತೆಗೆ, ಮೈಲಾರ ಮಹಾದೇವಪ್ಪನವರು ಕರ್ನಾಟಕದಿಂದ ದಂಡಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಏಕೈಕ ವ್ಯಕ್ತಿ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ.ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಅಧ್ಯಕ್ಷರಾದ ಡಾ ಶಶಿಕಾಂತ ಪಟ್ಟಣ ಅವರು ಉತ್ತರ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪಂಚಮಹಾಭೂತಗಳಿಂದ ಕೂಡಿರುವ ಈ ಬ್ರಹ್ಮಾಂಡದಲ್ಲಿ ನಾವು ಭೂಮಿಯ ಮೇಲೆ ನಡೆದಾಡುವ, ಗಾಳಿಯನ್ನು ಸೇವಿಸುವ, ನೀರನ್ನು ಕುಡಿಯುವ, ಬೆಂಕಿಯನ್ನು ಬಳಸಿ ಅಡುಗೆ ಮಾಡುವ ಮತ್ತು ಆಕಾಶ ತತ್ವವನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವ ಮೂಲಕ ಎಲ್ಲ ನೈಸರ್ಗಿಕ ವಸ್ತುಗಳನ್ನು ನಮ್ಮದಾಗಿಸಿಕೊಂಡಿದ್ದೇವೆ, ಬಳಸುತ್ತೇವೆ ಎಲ್ಲವೂ ನಿಜ ಆದರೆ ಈ ನಿಸರ್ಗ ಸಹಜ ಸಂಪತ್ತುಗಳನ್ನು ಕೆಲವೊಮ್ಮೆ ನಾವು ದುರ್ಬಳಕೆ ಮಾಡಿಕೊಳ್ಳುವುದು ಕೂಡ ಉಂಟು.ಇದರಲ್ಲಿ ಮುಖ್ಯವಾಗಿ ವಿದ್ಯುತ್. ಅವಶ್ಯಕತೆ ಇದ್ದಾಗ ಲೈಟನ್ನು ಫ್ಯಾನುಗಳನ್ನು ಹಾಕಿಕೊಂಡು ಅವಶ್ಯಕತೆ ಇಲ್ಲದಾಗ ಅವುಗಳನ್ನು ಬಂದ್ ಮಾಡುವ ಜರೂರತ್ತು ನಮಗಿದೆ. ಯಾವುದನ್ನು ನಮಗೆ ಉತ್ಪಾದಿಸಲು ಸಾಧ್ಯವಿಲ್ಲವೂ ಅದನ್ನು ಅನವಶ್ಯಕವಾಗಿ ಬಳಸುವ ಹಕ್ಕು ನಮಗಿಲ್ಲ. ಅದು ಅಲ್ಲದೆ ಅನವಶ್ಯಕವಾಗಿ ವಿದ್ಯುತ್ ಬಳಕೆಯನ್ನು ಮಾಡುವ ಮೂಲಕ ನಾವು ಹೆಚ್ಚಿನ ವಿದ್ಯುತ್ ದರವನ್ನು ನೀಡಬೇಕಾಗುತ್ತದೆ ಎಂಬುದು ನಮಗೆ ಗೊತ್ತಿರಬೇಕು.ನಮಗೆ ಎಲ್ಲವನ್ನೂ ನೀಡುವ ಭೂಮಿ ತಾಯಿಯ ಮೇಲೆ ನಾವು ಉಗುಳುತ್ತೇವೆ. ಬಹಳಷ್ಟು ಬಾರಿ ಸಂಬಂಧಿಸದ ಸ್ಥಳಗಳಲ್ಲಿ ಕೂಡ ಸಾರ್ವಜನಿಕವಾಗಿ ರಸ್ತೆಗಳ…
ವಿಜಯಪುರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಮಾತನಾಡಿದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು, ನಮ್ಮ ದೇಶ ಸ್ವಾತಂತ್ರ್ಯ ಹೊಂದಲು ಹಲ ಮಹನೀಯರು ತಮ್ಮ ತ್ಯಾಗ ಮಾಡಿದ್ದಾರೆ. ಕೆಲವರು ತಮ್ಮ ಅಮೂಲ್ಯ ದಿನಗಳನ್ನು ದೇಶಕ್ಕಾಗಿ ಸೆರೆಮನೆಯಲ್ಲಿ ಕಳೆದಿದ್ದಾರೆ. ಅಂತಹ ಮಹನೀಯರ ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.ಜಿಲ್ಲಾ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪರಿಸರದ ಸುಸ್ಥಿರತೆ ಮತ್ತು ಜಲ ಸಂರಕ್ಷಣೆಯ ದೃಷ್ಠಿಯಿಂದ ಸಮಗ್ರವಾಗಿ ಅನುಷ್ಠಾನ ಮಾಡಿರುವ ಎಲ್ಲಾ ಅಮೃತ ಸರೋವರಗಳ ದಡದಲ್ಲಿ ನಮ್ಮ ರಾಷ್ಟ್ರೀಯ ಏಕತೆ ಮತ್ತು ಸಾರ್ವಭೌಮತ್ವ ಹಾಗೂ ಜಲ ಸಂರಕ್ಷಣೆಯ ಮಹತ್ವ ಸಾರುವ ಉದ್ದೇಶದಿಂದ “ಒಂದು ಸರೋವರ-ಒಂದು ಸಂಕಲ್ಪ, ಜಲ ಸಂರಕ್ಷಣೆಗೆ” ಎಂಬ ಘೋಷವಾಕ್ಯದಂತೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗಿದೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ ಬಿ ಪಾಟೀಲ ಅವರು ಶುಕ್ರವಾರ ವಿಜಯಪುರ ನಗರದಲ್ಲಿ ಮಳೆಯಿಂದ ಹಾನಿ ಹಾಗೂ ಮಹಾನಗರ ಪಾಲಿಕೆಯಿಂದ ಮುಂಜಾಗ್ರತೆ ಶಾಶ್ವತವಾಗಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.ವಿಜಯಪುರ ನಗರದ ಶಿವಾಜಿ ಸರ್ಕಲ್ ಹತ್ತಿರವಿರುವ ಕೋಟೆಗೋಡೆ ಕಂದಕ, ನವಭಾಗ ರಸ್ತೆಯ ಸಿಕ್ಯಾಬ್ ಕಾಲೇಜ್ ಹತ್ತಿರ, ರಾಮನಗರ ಹಾಗೂ ಜುಮ್ಮಾ ಮಸೀದಿ ಹತ್ತಿರದ ಬಾಗಾಯತ್ಗಲ್ಲಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಹಿಂದಿನ ಸಮಯದಲ್ಲಿ ಮಳೆಯಿಂದ ಹಾನಿಗೊಳಗಾದ ಸಂದರ್ಭದಲ್ಲಿಯೇ ಅಧಿಕಾರಿಗಳಿಗೆ ಕಾಮಗಾರಿಗಳನ್ನು ಕೈಗೊಂಡು ಶಾಶ್ವತ ಪರಿಹಾರ ಕೈಗೊಳ್ಳಲು ಸೂಚಿಸಿದ್ದೇನೆ. ಅದರಂತೆ ಪರಿಹಾರ ಕಲ್ಪಿಸಲು ವಿವಿಧ ಕಾಮಗಾರಿಗಳನ್ನು ಪಾಲಿಕೆಯಿಂದ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಮುಖವಾಗಿ ಬೇಗಂ ತಲಾಬ್ ಕೆರೆಯಿಂದ ಬರುವ ಹಾಗೂ ಕೋಟೆಗೋಡೆ ಹೊರಗಡೆಯಿಂದ ಬರುವ ನೀರನ್ನು ತಡೆಯಲು ೧೫ ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ ಕಾಮಗಾರಿ ಕೈಗೊಳ್ಳಲಾಗಿದೆ. ಇನ್ನೂ ೧೫೦ ಕೋಟಿ ರೂ. ಅನುದಾನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ-ಧೀರರ ತ್ಯಾಗ ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಸಂದಿದೆ. ಈ ಮಹನೀಯರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಜಿಲ್ಲೆಯಲ್ಲಿರುವ ಗಾಂಧಿ ಭವನ ಮಾದರಿ ಎನಿಸಿದೆ. ಇಲ್ಲಿನ ಪ್ರಶಾಂತ ವಾತಾವರಣದಲ್ಲಿರುವ ಗಾಂಧಿ ಭವನವು ಪ್ರೇರಣಾ ತಾಣವಾಗಿದೆ. ಗಾಂಧೀಜಿಯವರ ಹೋರಾಟದ ಬದುಕು, ಅವರು ಅನುಸರಿಸಿದ ತತ್ವಾದರ್ಶಗಳ ಸಮಗ್ರ ಮಾಹಿತಿ ವಿವರ ಒಳಗೊಂಡಿರುವ ಗಾಂಧಿ ಭವನವಕ್ಕೆ ಯುವಕರು, ನಾಗರಿಕರು ಭೇಟಿ ನೀಡಿ, ವೀಕ್ಷಣೆ ಮಾಡುವ ಮೂಲಕ ಅರಿತುಕೊಳ್ಳಬೇಕೆಂದು ಕರೆ ನೀಡಿದರು.ಜಿಲ್ಲಾಧಿಕಾರಿಗಳು ಗಾಂಧಿ ಭವನ ವೀಕ್ಷಿಸಿ, ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ವಾರ್ತಾಧಿಕಾರಿ ಅಮರೇಶ ದೊಡಮನಿ, ಗಾಂಧಿ ಭವನದ ನಿರ್ವಹಣಾ ಸಮಿತಿ ಸದಸ್ಯರಾದ ಫಿರೋಜ್ ರೋಜಿಂದಾರ, ಪೀಟರ್ ಅಲೆಕ್ಸಾಂಡರ್, ನೇತಾಜಿ ಗಾಂಧಿ,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಉದ್ಯೋಗ ಸೃಷ್ಟಿ ಮಾಡುವ ಹಾಗೂ ಸಮಾಜ ಸೇವೆಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಲು ವಿದ್ಯಾವಂತರಾಗಿ ಸದೃಢ ವ್ಯಕ್ತಿಯಾಗಿ ಹಲವು ಜನರಿಗೆ ಹಾಗೂ ಕುಟುಂಬಗಳಿಗೆ ನೇರವಾಗಿ ಎಂದು ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.ಸಿಂದಗಿ ಪಟ್ಟಣದ ಶ್ರೀ ಸಮರ್ಥ ವಿದ್ಯಾವಿಕಾಸ ವಿವಿದೊದ್ದೇಶಗಳ ಸಂಸ್ಥೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಪ್ರಾಥಮಿಕ ಶಾಲೆ, ಪ್ರೇರಣಾ ಪ್ರಾಥಮಿಕ ಶಾಲೆ, ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ೭೯ನೆಯ ಸ್ವಾತಂತ್ರ್ಯೋತ್ಸವ ದಿನಾಚರಣೆಯ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇವಲ ಅಂಕಗಳಿಕೆ ವಿದ್ಯಾಭ್ಯಾಸವಾಗದೇ ಜ್ಞಾನಪೂರ್ವಕವಾಗಿ ಬಳಸಿಕೊಳ್ಳಬೇಕು. ಉತ್ತಮ ಹವ್ಯಾಸ ಮತ್ತು ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಹಾಗೂ ಸರ್ವಾಂಗೀಣ ಪ್ರಗತಿಗೆ ವಿದ್ಯಾಭ್ಯಾಸ ಅಗತ್ಯವೆಂದರು.ಈ ವೇಳೆ ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಮುಖ್ಯ ಅತಿಥಿ ಎಸ್.ಬಿ.ಸಾಲೋಟಗಿ ಮಾತನಾಡಿದರು.ಶಾಲೆಯ ಮುಖ್ಯಗುರುಮಾತೆ ಎಸ್.ಐ.ಅಸ್ಕಿ ಹಾಗೂ ಎಮ್.ಪಿ.ಬುಕ್ಕಾ, ಕಿರಣ ಕುಲಕರ್ಣಿ, ಸನತ ಕುಲಕರ್ಣಿ, ಅಲ್ತಾಪ ತಾಂಬೋಳಿ, ಯಲ್ಲಾಲಿಂಗ ಹೊಸೂರ, ಎಸ್.ಬಿ.ಕುಂಟೋಜಿ, ಎಮ್.ಎಮ್.ಜುಮನಾಳ, ಬಿ.ಎಸ್. ಪಾಟೀಲ, ಎಸ್ವ್ಹಿ.ಕಡಣಿ, ವಿ.ಎ.ನಾಯಕ,…
೭೯ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಸಕ ಅಶೋಕ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸ್ವತಂತ್ರ ಪೂರ್ವದಲ್ಲಿ ೨೦೦ವರ್ಷಗಳ ಕಾಲ ಆಳಿದ ಬ್ರಿಟಿಷರ ವಿರುದ್ಧ ಶಾಂತಿ ಮತ್ತು ಕ್ರಾಂತಿಯಿಂದ ದೇಶಕ್ಕಾಗಿ ಹೋರಾಡಿದ ಹೋರಾಟಗಾರರನ್ನು, ವೀರಯೋಧರನ್ನು ಇಂದು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ೭೯ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಭಾರತವು ಇಂದು ಸಧೃಡವಾಗಿ, ಆರ್ಥಿಕವಾಗಿ ಸಬಲವಾಗಿದೆ ಎಂದರೆ ಅದಕ್ಕೆ ಕಾರಣ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ದೇಶಾಭಿಮಾನ, ರಾಷ್ಟ್ರಾಭಿಮಾನ ನಮ್ಮ ರಕ್ತದ ಕಣ ಕಣದಲ್ಲೂ ಅಳವಡಿಸಿಕೊಳ್ಳುವ ಮೂಲಕ ರಾಷ್ಟ್ರ ಪ್ರೇಮಿಯಾಗಿ ಮೆರೆಯಬೇಕು ಎಂದರು.ಈ ವೇಳೆ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಮಾತನಾಡಿ, ಸಿಂದಗಿ ನೆಲದಲ್ಲಿ ಆದರ್ಶ ವ್ಯಕ್ತಿಗಳಾಗಿ, ಮಹನೀಯರು ಹುಟ್ಟಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಸಿಂದಗಿಯ ಹೆಸರನ್ನು ಬೆಳೆಸಿದ ಮಹನೀಯರನ್ನು ಅಜರಾಮರವಾಗಿಸುವ ನಿಟ್ಟಿನಲ್ಲಿ ಪುರಸಭೆ ವತಿಯಿಂದ ಪಟ್ಟಣದ ಪ್ರಮುಖ ರಸ್ತೆಗಳಿಗೆ ಸಾಧಕರ ಹೆಸರನ್ನಿಡಲಾಗುವುದು. ಸಿಂದಗಿ…
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿದಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ವ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವ ಶಕ್ತಿಯು ಶಿಕ್ಷಣದಲ್ಲಿದೆ. ಶಿಕ್ಷಣವೆಂದರೆ ಕೇವಲ ಪದವಿ ಪಡೆಯುವುದು ಅಲ್ಲ, ಅದು ಚಿಂತನೆಗೆ ಬಲ. ಸಮಾಜಕ್ಕೆ ದೃಷ್ಟಿ, ಮತ್ತು ವ್ಯಕ್ತಿತ್ವಕ್ಕೆ ದಿಕ್ಕು ನೀಡುತ್ತದೆ. ಮಹಿಳೆಯರು ಶಿಕ್ಷಣದ ಮೂಲಕ ಸ್ವಾವಲಂಬಿಗಳಾದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ೭೯ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮಹಿಳಾ ವಿಶ್ವವಿದ್ಯಾಲಯವು ಮಹಿಳೆಯರ ಶೈಕ್ಷಣಿಕ, ಬೌದ್ಧಿಕ, ಸಾಂಸ್ಕೃತಿಕ ಮತ್ತು ತಾಂತ್ರಿಕ ಸಬಲೀಕರಣಕ್ಕೆ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ನಾವು ಗುಣಮಟ್ಟದ ಬೋಧನೆ ಮತ್ತು ಸಂಶೋಧನೆ, ಡಿಜಿಟಲ್ ಮತ್ತು ಕೌಶಲ್ಯ ಆಧಾರಿತ ಶಿಕ್ಷಣ, ಅಂತಾರಾಷ್ಟ್ರೀಯ ಸಹಯೋಗಗಳು, ಉದ್ಯಮ-ವಿಶ್ವವಿದ್ಯಾಲಯ ಸಂಪರ್ಕ, ಗ್ರಾಮೀಣ ಮತ್ತು ಹಿಂದುಳಿದ ಮಹಿಳೆಯರ ಒಳಗೊಳ್ಳುವಿಕೆಗೆ ವಿಸ್ತರಣಾ ಚಟುವಟಿಕೆಗಳನ್ನು ಬಲಪಡಿಸುವುದರತ್ತ ನಾವು ಹೆಚ್ಚಿನ ಗಮನ ಹರಿಸಬೇಕಿದೆ. ಈ ನಿಟ್ಟಿನಲ್ಲಿ…
ಎಕ್ಸಲಂಟ್ ವಿಜ್ಞಾನ ಪ.ಪೂ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೀನು ಏನಾದರು ಆಗಿರು, ಆದರೆ ದೇಶ ಸೇವೆ ಎನ್ನುವ ಮಾತು ಬಂದಾಗ ನೀನೊಬ್ಬ ಭಾರತೀಯ ಎನ್ನುವುದನ್ನು ಮಾತ್ರ ಮರೆಯದಿರು ಎಂದು ರಾಜಭವನದ ನಿವೃತ್ತ ಜಂಟೀ ಕಮಿಷನರ್ ಅಣ್ಣಾಸಾಹೇಬ ಬಡಿಗೇರ ಹೇಳಿದರು.ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರೋತ್ಸವ ಸಂದೇಶ ನೀಡಿದ ಅವರು; ಇಂದು ಭಾರತ ಅಭಿವೃದ್ಧಿಯ ಪಥದಲ್ಲಿ ಹೆಜ್ಜೆ ಹಾಕುತ್ತಿದ್ದರೂ ಸಹ ಸುತ್ತಮುತ್ತಲೂ ಶತ್ರುಗಳು ನಮ್ಮನ್ನು ಹಿಂದೆ ಎಳೆಯುವುದಕ್ಕೆ ಹೊಂಚು ಹಾಕುತ್ತಿದ್ದಾರೆ. ಅವರನ್ನು ಹತ್ತಿಕ್ಕುವ ಕಾರ್ಯವನ್ನು ಭಾರತೀಯ ಸೈನ್ಯ ಮಾಡುತ್ತಿದ್ದು ಯುವಕರು ಈ ದೇಶದ ವಿಚಾರಕ್ಕೆ ಬಂದಾಗ ದೇಶವೇ ಮೊದಲು ಮಿಕ್ಕಿದ್ದೆಲ್ಲ ನಂತರ ಎನ್ನುವ ಮಟ್ಟದಲ್ಲಿ ದೇಶಭಕ್ತಿಯನ್ನು ಮೈಗೂಡಿಸಿಕೊಂಡು ನಡೆದಾಗ ಮಾತ್ರ ಜಗತ್ತಿನಲ್ಲಿಯೇ ಭಾರತ ಮತ್ತಷ್ಟು ಬಲಶಾಲಿ ರಾಷ್ಟ್ರವಾಗಿ ಹೊರ ಹೊಮ್ಮುತ್ತದೆ ಎಂದು ಹೇಳಿದರು.ಮಹಾನಗರ ಪಾಲಿಕೆಯ ೩೫ನೇ ವಾರ್ಡಿನ ಸದಸ್ಯ ರಾಜಶೇಖರ ಕುರಿಯವರ ಮುಖ್ಯ ಅತಿಥಿಯಾಗಿ ಪಾಲ್ಗೊಂಡು; ಭಾರತದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತ್ಯಾಗ ಬಲಿದಾನದ ಸಂಕೇತವಾಗಿರುವ ಸ್ವಾತಂತ್ರ್ಯವನ್ನು ನಾವೆಲ್ಲ ರಾಷ್ಟ್ರ ಭಕ್ತಿಯ ಮೂಲಕ ಕಾಪಾಡಿಕೊಂಡು ಹೋಗಬೇಕೆಂದು ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ ಮುಶ್ರೀಫ ಹೇಳಿದರು.ನಗರದ ಶಿಖಾರಖಾನೆ ಸೇರಿದಂತೆ ವಿವಿಧ ಕಡೆ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣದಲ್ಲಿ ನಿಸ್ವಾರ್ಥ ಸೇವೆ ನಮ್ಮ ಆದ್ಯ ಕರ್ತವ್ಯವಾಗಬೇಕೆಂದರು.ಮುಖಂಡರಾದ ಮಹಾದೇವ ರಾವಜಿ, ಅಕ್ರಮ ಮಾಶಾಳಕರ, ಶಬ್ಬಿರಪಟೇಲ, ಅಬೀದ್ ಸಂಗಮ, ಜವಾಹರ ಗೋಸಾವಿ, ಹೊನುಟಗಿ, ಅಬ್ದುಲ್ ಅಜೀಜ, ನ್ಯಾಯವಾದಿ ಹಾಜಿ ಪಿಂಜಾರ ಸೇರಿದಂತೆ ಗಣ್ಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.
