Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಗರದ ಹೃದಯ ಭಾಗವಾದ ಹನುಮಾನ್ ಚೌಕದಲ್ಲಿ ‘ಸ್ವಚ್ಛತೆಯೇ ಸೇವಾ 2025’ ಎಂಬ ವಿಶೇಷ ಸ್ವಚ್ಛತಾ ಅಭಿಯಾನಕ್ಕೆ ನಗರಸಭೆ ವತಿಯಿಂದ ಚಾಲನೆ ನೀಡದರು.ಹನುಮಾನ್ ಚೌಕದಲ್ಲಿ ನಿರಂತರವಾಗಿ ಕಸ ಬೀಳುತ್ತಿದ್ದ. ಈ ಹಿನ್ನೆಲೆಯಲ್ಲಿ ನಗರಸಭೆಯ ಸಿಬ್ಬಂದಿ ಶ್ರಮಪಟ್ಟು ಸ್ಥಳವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದರು. ನಂತರ, ಆ ಸ್ಥಳದಲ್ಲಿ ವಿವಿಧ ಬಣ್ಣದ ಆಕರ್ಷಕ ರಂಗೋಲಿಗಳನ್ನು ಅಳವಡಿಸಿ, ಸ್ವಚ್ಛತೆಯ ಪ್ರತೀಕವಾಗಿ ಸಾರ್ವಜನಿಕರ ಗಮನ ಸೆಳೆಯುವ ಪ್ರಯತ್ನ ಮಾಡಿ ಈ ಸಾಂಸ್ಕೃತಿಕ ಪರಿವರ್ತನೆಯ ಮೂಲಕ ಕಸ ಎಸೆಯುವ ಸ್ಥಳವನ್ನು ಜಾಗೃತಿಯ ಕೇಂದ್ರವಾಗಿ ರೂಪಿಸಿ, ಜನರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸದರುಸಾರ್ವಜನಿಕರಲ್ಲಿ ವಿನಂತಿ:ನಗರಸಭೆ ಅಧಿಕಾರಿಗಳು “ನಮ್ಮ ನಗರ ನಮ್ಮ ಹೊಣೆ” ಎಂಬ ಘೋಷಣೆಯೊಂದಿಗೆ ಸಾರ್ವಜನಿಕರಿಗೆ ವಿನಮ್ರ ವಿನಂತಿ ಸಲ್ಲಿಸಿದರು. ಎಲ್ಲೆಂದರಲ್ಲಿ ಕಸ ಎಸೆಯದೆ, ನಗರಸಭೆಯ ಟಾಟಾ ವಾಹನಗಳಿಗೆ ಕಸ ನೀಡುವ ಮೂಲಕ ನಗರವನ್ನು ಸ್ವಚ್ಛವಾಗಿಡುವಲ್ಲಿ ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದರು.ಕಂದಾಯ ಇಲಾಖೆ ಅಧಿಕಾರಿ ಯಲ್ಲಪ್ಪ ಬಿದರಿ, ಹಿರಿಯ ಆರೋಗ್ಯ ನಿರ್ದೇಶಕ ಸಚಿನ ಹಿರೇಮಠ,ವಿನಾಯಕ, ಕಿರಿಯ ಆರೋಗ್ಯ…
ಇಂದು (ಸೆಪ್ಟಂಬರ್ ೨೧, ರವಿವಾರ) ಅಂತರಾಷ್ಟ್ರೀಯ ಶಾಂತಿ ದಿನ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಬಿ.ವಿ.ಹಿರೇಮಠಶಿಕ್ಷಕರು, ಹವ್ಯಾಸಿ ಬರಹಗಾರರುಇಂಡಿಮೊ: 9972658355 ಉದಯರಶ್ಮಿ ದಿನಪತ್ರಿಕೆ ಪ್ರೀತಿ ಇಲ್ಲದ ಮೇಲೆ –ಸಂಶಯದ ಗಡಿಗಳುದ್ದಕ್ಕುಸಿಡಿಗುಂಡುಗಳ ಕದನ ನಿಂತೀತು ಹೇಗೆ?ಜಾತಿ-ಮತ-ಭಾಷೆ-ಬಣ್ಣಗಳ ಗೋಡೆಯ ನಡುವೆನರಳುವ ಪಾಡು ತಪ್ಪೀತು ಹೇಗೆ?ನಮ್ಮ ನಿಮ್ಮ ಮನಸ್ಸುಮರುಭೂಮಿಯಾಗದ ಹಾಗೆತಡಗಟ್ಟುವುದು ಹೇಗೆ?ಈ ಮೇಲಿನ ಜಿ.ಎಸ್.ಶಿವರುದ್ರಪ್ಪನವರ ಕವನದ ಸಾಲುಗಳು ಇಂದಿನ ಪ್ರಸ್ತುತೆಯಲ್ಲವೇ? ಪ್ರೀತಿಯ ನೋಟ, ಪ್ರೀತಿಯ ಮಾತು, ಪ್ರೀತಿಯ ಮನಸ್ಥಿತಿ ಎಂತಹ ಪರಿಸ್ಥಿತಿಗಳನ್ನು ಶುದ್ಧಗೊಳಿಸುತ್ತವೆಯಂತೆ, ಅಂತಹುದರಲ್ಲಿ ಶಾಂತಿ ಸ್ಥಾಪನೆಯಾಗುವುದಿಲ್ಲವೇ? ಪ್ರೀತಿಗೆ ಅಂಗುಲಿಮಾಲಾನಂತಹ ರಾಕ್ಷಸರೇ ಶರಣಾಗಿರುವಾಗ ಹುಲು ಮಾನವರಿಗೆ ಕಷ್ಟವೇ? ಜಗತ್ತು ಇತರ ರಾಷ್ಟ್ರಗಳ ಮೇಲೆ ಕ್ರೌರ್ಯ ಬಿತ್ತುವಾಗಲೇ ಶಾಂತಿಯ ಬೆಳಕನ್ನು ಪಸರಿಸಿದ ರಾಷ್ಟ್ರ ನಮ್ಮದು. ನಮ್ಮ ಚರಿತೆಯನ್ನು ತಿಳಿದು ಇತರ ರಾಷ್ಟ್ರಗಳು ಬದಲಾಗಲಿ, ಶಾಂತಿ ಎಲ್ಲೆಡೆ ಸ್ಥಾಪನೆಯಾಗಲಿ.
ವಿಜಯಪುರದಲ್ಲಿ ನಡೆದ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬರಪೀಡಿತ ಪ್ರದೇಶ ಎಂಬ ಹಣೆಪಟ್ಟಿ ಹೊಂದಿದ ವಿಜಯಪುರ ಜಿಲ್ಲೆಯಲ್ಲಿ ಪರಿಸರ ಕಾಳಜಿಯೊಂದಿಗೆ ಕೋಟಿ ವೃಕ್ಷ ಅಭಿಯಾನದ ಮೂಲಕ ೦.೧೭ರಷ್ಟಿದ್ದ ಜಿಲ್ಲೆಯ ಅರಣ್ಯ ಪ್ರದೇಶವನ್ನು ಶೇಕಡಾ ೨ರಷ್ಟು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಶೇ.೧೦ ರಷ್ಟು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಹೇಳಿದರು.ಶುಕ್ರವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಕೈಗಾರಿಕೆ ಇಲಾಖೆ ವ್ಯಾಪ್ತಿಯ ಕೆಎಸ್ಡಿಎಲ್- ಸಿಎಸ್ಆರ್ ಅನುದಾನದಲ್ಲಿ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ೨೦ಜನ ಸಿಬ್ಬಂದಿಗಳಿಗೆ ಕಿಟ್ ವಿತರಿಸಿ ಅವರು ಮಾತನಾಡಿದರು.ಅತಿ ಕಡಿಮೆ ಅರಣ್ಯ ಪ್ರದೇಶ ಹೊಂದಿರುವ ವಿಜಯಪುರ ಜಿಲ್ಲೆಯ ಅರಣ್ಯ ಪ್ರದೇಶ ಹೆಚ್ಚಿಸುವ ನಿಟ್ಟಿನಲ್ಲಿ ಕಳೆದ ೨೦೧೬ರಲ್ಲಿ ಆರಂಭಿಸಿದ ಕೋಟಿ…
ಮಣ್ಣೂರ ಗ್ರಾಮದ ಭೀಮಾ ನದಿಯಲ್ಲಿ ಘಟನೆ | ಅಗ್ನಿಶಾಮಕ ಸಿಬ್ಬಂದಿಯಿಂದ ಮೃತ ದೇಹಕ್ಕಾಗಿ ಹುಡುಕಾಟ ಉದಯರಶ್ಮಿ ದಿನಪತ್ರಿಕೆ ಅಫಜಲಪುರ:ಮಣ್ಣೂರ ಗ್ರಾಮದ ಭೀಮಾ ನದಿಯಲ್ಲಿ ಶನಿವಾರ ಬೆಳಿಗ್ಗೆ ಬಟ್ಟೆ ತೊಳೆಯಲು ಹೋಗಿದ್ದಾಗ ಕಾಲು ಜಾರಿ ಬಿದ್ದು ಭಾಗೇಶ ರೇವಣಸಿದ್ದಪ್ಪ ಬುರುಡ(20 ) ಎಂಬ ಯುವಕ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುವ ದುರ್ಘಟನೆ ಶನಿವಾರ ಸಂಭವಿಸಿದೆ.ಭಾಗೇಶ ಬುರುಡ ಪದವಿ ವಿದ್ಯಾರ್ಥಿ ಆಗಿದ್ದಾನೆ. ಶನಿವಾರ ಬೆಳಿಗ್ಗೆ ಬಟ್ಟೆ ತೊಳೆಯಲು ಭೀಮಾ ನದಿಗೆ ಹೋಗಿ ನದಿಯಲ್ಲಿ ಬಟ್ಟೆ ತೊಳೆಯುವ ಸಂದರ್ಭದಲ್ಲಿ ಕಾಲು ಜಾರಿ ನದಿಗೆ ಬಿದ್ದಿರುವುದರಿಂದ ಈಜಲು ಸಾಧ್ಯವಾಗದೆ ನೀರಿನ ರಭಸಕ್ಕೆ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ರಕ್ಷಣೆಗೆ ಹೋಗಿದ್ದ ಗ್ರಾಮಸ್ಥರು, ನೀರಿನಲ್ಲಿ ಹುಡುಕಾಡಿದರೂ ಸುಳಿವು ಸಿಕ್ಕಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಭಾಗೇಶನಿಗಾಗಿ ಹುಡುಕಾಟ ನಡೆಸಿದ್ದಾರೆ.ಈ ಕುರಿತು ಅಫಜಲಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು ರೈತರಿಗೆ ಎಕರೆಗೆ ೨೫ ಸಾವಿರ.ರೂಗಳ ಪರಿಹಾರ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ರೈತರ ಸಂಘದ ಪದಾಧಿಕಾರಿಗಳು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಶನಿವಾರ ಆಗಮಿಸಿದ ರಾಷ್ಟ್ರೀಯ ರೈತರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ತಾಲ್ಲೂಕಿನ ಎಲ್ಲ ಹಳ್ಳಿಗಳಲ್ಲಿ ಮುಂಗಾರು ಬೆಳೆ ತೊಗರಿ, ಹತ್ತಿ ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ನಿಂತು ಹಾನಿಗೊಳಗಾದ ಬಗ್ಗೆ ತಹಶೀಲ್ದಾರರ ಗಮನ ಸೆಳೆದರು.ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಕಾರ್ಯದರ್ಶಿ ರೇಣುಕಾ ಪಾಟೀಲ ಮಾತನಾಡಿ, ತೊಗರಿ ಬೆಳೆ ನೆಟೆ ರೋಗದಿಂದ, ಹತ್ತಿ ತಾಂಬ್ರ ರೋಗ ಹಾಗೂ ಕಾಂಡ ಕೊರೆವ ಹುಳದ ಕಾರಣ ಹಾಗೂ ಮಕ್ಕೆಜೋಳ, ಹೆಸರು, ಉದ್ದ, ಅಲಸಂದಿ, ಶೇಂಗಾ, ಉಳ್ಳಾಗಡ್ಡಿ ಬೆಳೆಗಳು ನೀರಿನಲ್ಲಿ ನಿಂತು ಸಂಪೂರ್ಣ ಹಾಳಾಗಿದೆ. ಭಿತ್ತಿದ ಬೆಳೆ ನಾಶದಿಂದ ಈಗ ರೈತರು ಸಂಕಟದಲ್ಲಿದ್ದಾರೆ ಆದ್ದರಿಂದ ತಹಶೀಲ್ದಾರ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಮಂಜೂರ ಮಾಡಬೇಕು ಎಂದು ಆಗ್ರಹಿಸಿದರು.ರಾಷ್ಟ್ರೀಯ ರೈತ ಸಂಘದ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತವೆ. ಸದೃಢ ದೇಹವಿದ್ದಲ್ಲಿ, ಸದೃಢ ಮನಸ್ಸಿರುತ್ತದೆ. ಸದೃಢ ಮನಸ್ಸಿದ್ದಲ್ಲಿ ಯಶಸ್ಸು ಗಟ್ಟಿಯಾಗಿರುತ್ತದೆ. ಸಮಾಜದಲ್ಲಿ ರಾಜಕೀಯ ಮತ್ತು ಸಾಮಾಜಿಕ ವ್ಯಕ್ತಿಗಳಿಗಿಂತ ಕ್ರೀಡಾ ಪಟುಗಳಿಗೆ ಹೆಚ್ಚಿನ ಜನಪ್ರೀಯತೆ ಇದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಆರ್.ಡಿಪಾಟೀಲ ಕಾಲೇಜಿನ ಆರ್.ಬಿ.ಬೂದಿಹಾಳ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ವಿಜಯಪುರ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಹಾಗೂ ಆರ್.ಪಾಟೀಲ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಪಪೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ೨೦೨೫-೨೬ನೆಯ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ಹ್ಯಾಂಡಬಾಲ್, ನೆಟ್ ಬಾಲ್, ಬಾಲ್ ಬ್ಯಾಡ್ಮಿಂಟನ್, ಟೆನಿಸ್, ವಾಲಿಬಾಲ್ ಹಾಗೂ ಜಿಮ್ನಾಸ್ಟಿಕ್ಸ್ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ನಮ್ಮ ದೇಶದ ಹೆಸರನ್ನು ಕೊಂಡೊಯ್ಯುವಲ್ಲಿ ಕ್ರೀಡಾ ಪಟುಗಳು ಪ್ರಮುಖ ಪಾತ್ರವಹಿಸುತ್ತಾರೆ. ಕ್ರೀಡಾಭಿಮಾನ ಕಡಿಮೆಯಾಗುತ್ತಿರುವ ಪ್ರಸ್ತುತ ದಿನಮಾನಗಳಲ್ಲಿ ಹ್ಯಾಂಡಬಾಲ್, ನೆಟ್ ಬಾಲ್, ಬಾಲ್…
ಬಿಜೆಪಿ ಪಕ್ಷದ ತಳವಾರ ಸಮಾಜದ ಮುಖಂಡರ ನಿಲುವಿಗೆ ತಳವಾರ ಮಹಾಸಭಾ ಖಂಡನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಎಲ್ಲ ಸಮಾಜಗಳೊಟ್ಟಿಗೆ ತಳವಾರ ಸಮಾಜದೊಂದಿಗೂ ಅನ್ಯೋನ್ಯತೆಯಿಂದಿರುವ ಶಾಸಕರ ಮೇಲೆ ವಿನಾಕಾರಣ ಇಲ್ಲ ಸಲ್ಲದ ಆರೋಪ ಮಾಡುತ್ತಿರುವ ಬಿಜೆಪಿ ಪಕ್ಷದ ತಳವಾರ ಸಮಾಜದ ಮುಖಂಡರ ನಿಲುವು ಖಂಡನೀಯ ಎಂದು ಪುರಸಭೆ ಸದಸ್ಯ ಬಸವರಾಜ ಯರನಾಳ ಹರಿಹಾಯ್ದರು.ಸಿಂದಗಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ತಳವಾರ ಮಹಾಸಭಾ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ದೊರಕಿರುವುದು ಸಂವಿಧಾನಾತ್ಮಕವಾಗಿಯೇ ಹೊರತು ಬಿಜೆಪಿ ಅವರ ಕೃಪಾ ಕಟಾಕ್ಷದಿಂದಲ್ಲ. ಶಾಸಕರ ಸಾಧನೆ ಏನು ಎಂದು ಪ್ರಶ್ನಿಸುವವ ನೀವು ಮಾಡಿದ ೧೨ವರ್ಷಗಳ ಸಾಧನೆಗಳಿಗಿಂತ ಹೆಚ್ಚಿನ ಅಭಿವೃದ್ಧಿಯನ್ನು ಅಶೋಕ ಮನಗೂಳಿ ಅವರು ಕೇವಲ ಎರಡೂವರೆ ವರ್ಷಗಳಲ್ಲಿ ಮಾಡಿದ್ದಾರೆ. ಅಭಿವೃದ್ಧಿಯನ್ನು ಪ್ರಶಂಸಿಸಬೇಕೆ ಹೊರತು ವಿರೋಧ ಪಕ್ಷವೆಂಬ ಒಂದೆ ಕಾರಣಕ್ಕೆ ಎಲ್ಲವನ್ನು ದ್ವೇಷಿಸುವುದು ಬಾಲಿಶತನವಾಗುತ್ತದೆ ಎಂದರು.ಈ ವೇಳೆ ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಭು ವಾಲೀಕಾರ ಮಾತನಾಡಿ, ಮಾಜಿ ಶಾಸಕರ ಕೊಡುಗೆ ಸಮಾಜಕ್ಕೆ…
ವಿಜಯಪುರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಮಳೆಯಿಂದ ಪದೇ ಪದೇ ಪ್ರವಾಹದಂತಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರತಿ ಬಾರಿ ಮಳೆ ಬಂದಾಗ ನಗರದ ವಿವಿಧ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ತೊಂದರೆಯಾಗುತ್ತಿದೆ. ಮಳೆ ನೀರು ಚರಂಡಿ ನಿರ್ಮಾಣ ಕಾರ್ಯ ಕೈಗೊಂಡು ಎಲ್ಲಿಯೂ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿದುಹೋಗುವಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ಕಷ್ಟ-ಕಾರ್ಪಣ್ಯಗಳನ್ನು ಅರಿತುಕೊಂಡು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಇಂತಹ ಪ್ರದೇಶದಲ್ಲಿ ಕಾಮಗಾರಿಗಳನ್ನು ಕೈಗೊಂಡು, ಸಮಸ್ಯೆ ಮರುಕಳಿಸದಂತೆ ಶಾಶ್ವತವಾಗಿ ಸಮಸ್ಯೆಗೆ ಪರಿಹಾರ ದೊರಕಿಸಲು ಸೂಕ್ತ ಕ್ರಿಯಾಯೋಜನೆಯನ್ನು ರೂಪಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ನಗರಾಭಿವೃದ್ದಿ ಪ್ರಾಧಿಕಾರದ…
‘ಚಿಗುರು’ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶೈಕ್ಷಣಿಕ ಕ್ಷೇತ್ರದಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಮಹತ್ವದ ಸ್ಥಾನವಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮಹತ್ವದ ಪಾತ್ರ ನಿರ್ವಹಿಸುತ್ತವೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರು ಸಂಗಮೇಶ ಅಪ್ಪಾಸಿ ಬಬಲೇಶ್ವರ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಇಬ್ರಾಹಿಂಪೂರದಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ.೬ರ ಆವರಣದಲ್ಲಿ “ಚಿಗುರು” ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಸರ್ವೋತಮ ಬೆಳವಣಿಗೆಗೆ ಪಠ್ಯೇತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಬಬಲೇಶ್ವರ ಸಲಹೆ ನೀಡಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಮಾತನಾಡಿ, ಮಕ್ಕಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಸಾಂಸ್ಕೃತಿಕ ವೇದಿಕೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಬಹುಮುಖ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದು ಹೇಳಿದರು.ಕಾರ್ಯಕ್ರಮದಲ್ಲಿ ಸಮೀರ ಶೇಖ ಹಾಗೂ ಸಂಗಡಿಗರು ಸುಗಮ ಸಂಗೀತ, ಕೃಷ್ಣಾಬಾಳಪ್ಪ ತಳವಾರ ಹಾಗೂ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶುಶ್ರೂಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಹಾಗೂ ಸಮುದಾಯ ಆರೋಗ್ಯಾಧಿಕಾರಿಗಳಿಗೆ ಗುಣಮಟ್ಟ ಪ್ರಸವ ಪೂರ್ವ ಆರೈಕೆ ಕುರಿತು ಹಮ್ಮಿಕೊಂಡ ೩ ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ಕುಮಾರ ಗುಣಾರಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಪಿ.ಎ.ಹಿಟ್ನಳ್ಳಿ, ರಾಜ್ಯ ಮಟ್ಟದ ತರಬೇತಿದಾರ ಶಬ್ಬೀರ ನದಾಫ್, ಡಾ.ಕವಿತಾ, ಡಾ.ನಂದಿನಿ, ಡಾ.ಜಾನ್ ಕಟವಟೆ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಎಂ.ಜಿ.ನೀಲಂಗಿ ಉಪಸ್ಥಿತರಿದ್ದರು.ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ ಸ್ವಾಗತಿಸಿ ವಂದಿಸಿದರು.
