Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಓಡಿಸಲು ಕೊಟ್ಟಿದ್ದಕ್ಕೆ ಅಫಜಲಪುರ ಠಾಣೆ ಪೊಲೀಸ್ರು ಪ್ರಕರಣ ದಾಖಲು ಮಾಡಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಈ ಪ್ರಕರಣದ ತೀರ್ಪು ನೀಡಿರುವ ನ್ಯಾಯಾಧೀಶರು ವಾಹನದ ಮಾಲೀಕನಿಗೆ ೨೬ ಸಾವಿರ ದಂಡ ವಿಧಿಸಿದ ಘಟನೆ ಅಫಜಲಪುರದಲ್ಲಿ ನಡೆದಿದೆ.ವಾಹನ ಮಾಲೀಕರ ಗುರುಲಿಂಗಪ್ಪ ಮಲ್ಲಪ್ಪ ಜಂಬಗಿ(೪೫) ಎನ್ನುವವರು ೧೮ ವರ್ಷದೊಳಗಿನ ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಓಡಿಸಲು ನೀಡಿದ್ದರು. ಈ ಕುರಿತು ಪ್ರಕರಣ ದಾಖಲಾಗಿತ್ತು.ಅಫಜಲಪುರ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರು ವಾಹನ ಮಾಲೀಕನಿಗೆ ೨೬ ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಗುತ್ತೇದಾರ ನೇತೃತ್ವದಲ್ಲಿ ನೂರಾರು ಜನ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಮಾಲೀಕಯ್ಯ ಗುತ್ತೇದಾರ ನೇತೃತ್ವದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಜಮೀಲ್ ಗೌಂಡಿ ಹಾಗೂ ನೂರಾರು ಕಾರ್ಯಕರ್ತರು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪೂರದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.ಪಕ್ಷ ಸೇರ್ಪಡೆಯ ಬಳಿಕ ಜಮೀಲ್ ಗೌಂಡಿ ಮಾತನಾಡಿ ಜೆಡಿಎಸ್ ಪಕ್ಷ ಜಾತ್ಯಾತೀತ ತತ್ವದ ಮೇಲೆ ನಂಬಿಕೆ ಇಟ್ಟ ಪಕ್ಷವೆಂದು ಭಾವಿಸಿ ನಾವು ಸಾಕಷ್ಟು ಪಕ್ಷಕ್ಕಾಗಿ ದುಡಿದಿದ್ದೇವೆ. ಪಕ್ಷವನ್ನು ತಾಲೂಕಿನಲ್ಲಿ ಬಲಪಡಿಸಲು ಶ್ರಮಿಸಿದ್ದೇವೆ. ಆದರೆ ಪಕ್ಷದ ವರೀಷ್ಠರು ಇಂದು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸಿದ್ದರಿಂದ ಬೇಸರಗೊಂಡು ಜಾತ್ಯಾತೀತ ತತ್ವದ ಮೇಲೆ ನಿಂತಿರುವ ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ನೇತೃತ್ವದಲ್ಲಿ ನೂರಾರು ಬೆಂಬಲಿಗರೊಂದಿಗೆ ಸೇರ್ಪಡೆಗೊಂಡಿದ್ದೇವೆ. ಬರುವ ದಿನಗಳಲ್ಲಿ ತಾಲೂಕಿನಾದ್ಯಂತ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ದುಡಿಯಲಿದ್ದೇವೆ ಎಂದರು.ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಮಾತನಾಡಿ ಕಾಂಗ್ರೆಸ್ ಪಕ್ಷ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ವಿಭಾಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ಇತ್ತೀಚೆಗೆ ನಡೆಯಿತು.ಈ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ ಜೊತೆಗೆ ಎಲುಬು ಮತ್ತು ಕೀಲು ಚಿಕಿತ್ಸೆ, ನೇತ್ರ ತಪಾಸಣೆ, ಚಿಕ್ಕ ಮಕ್ಕಳ ಆರೋಗ್ಯ ತಪಾಸಣೆ, ಚರ್ಮರೋಗ ಚಿಕಿತ್ಸೆ ಹಾಗೂ ಸ್ತ್ರೀರೋಗ ಮತ್ತು ಪ್ರಸುತಿ ಚಿಕಿತ್ಸೆ ವಿಭಾಗದ ನುರಿತ ತಜ್ಞ ವ್ಯದ್ಯರು ಆರೋಗ್ಯ ತಪಾಸಣೆ ನಡೆಸಿದರು. ಈ ಶಿಬಿರದಲ್ಲಿ ಸುಮಾರು 130 ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.ಈ ಶಿಬಿರದಲ್ಲಿ 40 ಜನ ಪೊಲೀಸ ಸಿಬ್ಬಂದಿ ಸ್ವಯಂ ಪ್ರೇರಿತವಾಗಿ ರಕ್ತದ ಗುಂಪು ತಪಾಸಣೆ ಮಾಡಿಸಿಕೊಂಡು ರಕ್ತದಾನ ಮಾಡಿದರು.ಈ ಸಂದರ್ಭದಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಡಿಆರ್ ವಿಭಾಗದ ಡಿವೈಎಸ್ಪಿ ಎಂ.…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಶರಣ ಸಾಹಿತಿ ಎಂ.ಎಸ್. ಸಿಂಧೂರ ಅವರಲ್ಲಿ ದೇಶಾಭಿಮಾನ, ಭಾಷಾಭಿಮಾನ, ಬಸವಾಭಿಮಾನ ಮುಪ್ಪರಿಗೊಂಡಿತ್ತು. ಅಧ್ಯಯನಶೀಲರಾಗಿದ್ದ ಅವರು ನಡೆದಾಡುವ ನಿಘಂಟು ಆಗಿದ್ದರು. ಮಹಾರಾಷ್ಟ್ರದ ಜತ್ತ ಭಾಗದ ಗಡಿನಾಡಿನಲ್ಲಿ ಕನ್ನಡ ಧ್ವಜ ಹಾರಿಸಿದ್ದರು ಎಂದು ವಿಜಯಪುರ ಜಿಲ್ಲೆಯ ಮುಳವಾಡದ ಸಾಹಿತಿ ಪ.ಗು. ಸಿದ್ದಾಪುರ ಹೇಳಿದರು.ತಾಲ್ಲೂಕಿನ ತುಂಗಳ ಗ್ರಾಮದ ಸಿಂಧೂರ ತೋಟದಲ್ಲಿ ಮಂಗಳವಾರ ಆಯೋಜಿಸಿದ್ದ ಶರಣ ಮಲ್ಲಪ್ಪ ಸಿಂಧೂರ, ಶರಣೆ ಶಾಂತಲಾ ಸಿಂಧೂರ ಸ್ಮರಣಾರ್ಥ ಸಿಂಧೂರ ಪ್ರತಿಷ್ಠಾನ ಆಶ್ರಯದಲ್ಲಿ ‘ಪ್ರತಿಭಾ ಪುರಸ್ಕಾರ’ ಹಾಗೂ ‘ಸಿಂಧೂರ ಸಿರಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಂಧೂರ ಸಿರಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.ಮರೇಗುದ್ದಿ ಅಡವಿ ಸಿದ್ಧೇಶ್ವರ ಮಠದ ಡಾ.ನಿರುಪಾದೀಶ ಸ್ವಾಮಿಗಳು ‘ಸಿಂಧೂರ ಸಿರಿ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಲೇಖಕರು ಮತ್ತು ಸ್ವಾಮಿಗಳ ಕೈ ಸದಾ ಆಡುತ್ತಿರಬೇಕು ಎಂದು ಎಂ.ಎಸ್. ಸಿಂಧೂರ ಅವರು ಸದಾವಕಾಲ ಹೇಳಿತ್ತಿದ್ದರು. ಅವರಲ್ಲಿ ವಾಕ್ಚಾತುರ್ಯ ಕೌಶಲವಿತ್ತು ಎಂದರು.ಓಲೆಮಠದ ಆನಂದ ದೇವರು ಮಾತನಾಡಿ, ಸಿಂಧೂರ ಅವರು ತಮ್ಮ ಸಂಸ್ಕಾರವಂತ ಮಕ್ಕಳಲ್ಲಿ ಅವರು ಜೀವಂತವಾಗಿದ್ದಾರೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಅಧ್ಯಾತ್ಮದಲ್ಲಿ ನಂಬಿಕೆ ಮುಖ್ಯ. ವಿಜ್ಞಾನದಲ್ಲಿ ಮೂಲನಂಬಿಕೆ ಇರಬೇಕೆ ವಿನಹ ಮೂಢನಂಬಿಕೆ ಇರಬಾರದು. ಯಾವುದನ್ನು ಪ್ರಶ್ನಿಸಿದೆ ಒಪ್ಪಿಕೊಳ್ಳಬಾರದು. ಸರಿಯಾಗಿ ಪರಿಶೀಲಿಸಿ, ಪರೀಕ್ಷಿಸಿ ಸರಿಯಾದುದನ್ನು ಮಾತ್ರ ಒಪ್ಪಿಕೊಳ್ಳಬೇಕು ಎಂದು ಸರ್ಕಾರಿ ಪಿ.ಬಿ.ಪ.ಪೂ ಕಾಲೇಜಿನ ಉಪನ್ಯಾಸಕ ಡಾ.ಲಿಂಗಾನಂದ ಗವಿಮಠ ಹೇಳಿದರು.ಶ್ರಾವಣ ಮಾಸದ ನಿಮಿತ್ತ ಓಲೆಮಠದ ಆಶ್ರಯದಲ್ಲಿ ಜರುಗುತ್ತಿರುವ ಓಣಿಗೊಂದು ದಿನ ವಚನ ಶ್ರಾವಣ ಅಂಗವಾಗಿ ಮೂಲ ಸಿದ್ಧೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ಹತ್ತೊಂಬತ್ತನೆ ದಿನದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ‘ನಂಬಿಕರೆದಡೆ ಓ ಎನ್ನನೆ ಶಿವನು? ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು.ಯಾರು ಒಳ್ಳೆಯವರಾಗಿರುತ್ತಾರೆ ಅವರಿಗೆ ಒಳ್ಳೆಯದಾಗುತ್ತದೆ. ಬೇರೆಯವರಿಗೆ ಒಳ್ಳೆಯದಾಗಲಿ ಎಂದು ಬಯಸುವವರಿಗೂ ಒಳ್ಳೆಯದಾಗುತ್ತದೆ. ಯಾರು ತಮ್ಮನ್ನು ತಾವು ಅರಿತುಕೊಳ್ಳುತ್ತಾರೆ ಅವರಿಗೆ ಎದುರಿಗೆ ಬರುವ ಮನುಷ್ಯರಲ್ಲಿಯೂ ದೇವರು ಕಾಣಲು ಸಾಧ್ಯ ಎಂದರು.ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮುಖ್ಯ ಅತಿಥಿಯಾಗಿ ಮಾತನಾಡಿ, ಓಲೆಮಠದಿಂದ ನಡೆಯುತ್ತಿರುವ ಓಣಿಗೊಂದು ದಿನ ವಚನ ಶ್ರಾವಣ ಜನಜಾಗೃತಿ ಕಾರ್ಯಕ್ರಮವಾಗಿದೆ. ಇದೊಂದು ಸಮಾಜ ಮತ್ತು ದೇಶ ಕಟ್ಟುವ…
ಜಿ.ಪಿ ಪೋರವಾಲ ಕಲಾ ವಾಣಿಜ್ಯ ಮತ್ತು ವಿ.ವಿ ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ “ನಶಾ ಮುಕ್ತ ಭಾರತದ ಅಭಿಯಾನ” ಅಡಿಯಲ್ಲಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ದೈಹಿಕ ನಿರ್ದೇಶಕರಾದ ಡಾ. ರವಿ ಗೋಲಾ ಮುಖ್ಯ ಅತಿಥಿಯಾಗಿ ಮಾತನಾಡಿ, ನಶಾ ಮುಕ್ತ ಭಾರತದ ಅಭಿಯಾನದಡಿಯಲ್ಲಿ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳನ್ನು ತ್ಯಜಿಸಲು ಮತ್ತು ಇತರರನ್ನು ಮಾದಕ ದ್ರವ್ಯಗಳಿಂದ ದೂರವಿರಲು ಪ್ರೋತ್ಸಾಹಿಸಲು, ಕುಟುಂಬ, ಸ್ನೇಹಿತರು ಮತ್ತು ಸಮಾಜವನ್ನು ಮಾದಕ ದ್ರವ್ಯ ಮುಕ್ತ ಮಾಡಲು ಕೈಲಾದಷ್ಟು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.ರಾಷ್ಟ್ರೀಯ ಸೇವಾ ಯೋಜನೆಯ ಘಟಕ ೧ ಕಾರ್ಯಕ್ರಮ ಅಧಿಕಾರಿ ಡಾ. ಶ್ರೀಕಾಂತ್ ಎಲ್. ಪಾಟೀಲ್ ಪ್ರತಿಜ್ಞಾವಿಧಿ ಬೋಧಿಸಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ಡಿ.ಎಂ. ಪಾಟೀಲ್, ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಪ್ರೊ. ಬಸವರಾಜ್ ಮಹಾಜನ್ ಶೆಟ್ಟಿ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ೨ ಕಾರ್ಯಕ್ರಮ ಅಧಿಕಾರಿ ಪ್ರೊ. ವಿ.ಎ ಪಾಂಡೆ ವೇದಿಕೆ ಮೇಲಿದ್ದರು.ಡಾ.…
ಉದಯರಶ್ಮಿ ದಿನಪತ್ರಿಕೆ ಚಡಚಣ: ಸತ್ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಹೊಂದಿರುವ ಶಿಕ್ಷಕ ಈ ಸಮಾಜದ ಶ್ರೇಷ್ಠ ವ್ಯಕ್ತಿ. ಅಂತಹ ಶಿಕ್ಷಕರಿಗೆ ನಿವೃತ್ತಿ ಎಂಬುದಿಲ್ಲ. ಇವರು ಸಮಾಜಕ್ಕೆ ಸದಾ ಮಾರ್ಗದರ್ಶಕರಾಗಿರುತ್ತಾರೆ ಎಂದು ಭೀಮಾಶಂಕರ ಸಕ್ಕರೆ ಕಾರ್ಖಾನೆ ಮರಗೂರ ನಿರ್ದೇಶಕ ಸಿದ್ದಣ್ಣಸಾಹುಕಾರ ಬಿರಾದಾರ ಅಭಿಪ್ರಾಯಪಟ್ಟರು.ಚಡಚಣ ಪಟ್ಟಣದಲ್ಲಿ ನಿವೃತ್ತ ಶಿಕ್ಷಕಿ ಶ್ರೀಮತಿ ಸುವರ್ಣಾ ಭೀಮಷ್ಯಾ ತೇಲಿ ಗುರುಮಾತೆ ಅವರ ಅಭಿನಂದನಾ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಹೇಳಿ, ಸಂಸ್ಕಾರ ಕಲಿಸಿ ಸಮಾಜ ಸೇವೆ ಮಾಡಿದ ಶಿಕ್ಷಕರು ನಿವೃತ್ತಿಯಾಗುವುದು ಸೇವಾ ದಾಖಲೆಯಲ್ಲಿ ಮಾತ್ರವೇ ಹೊರತು ನಿಜವಾದ ಅರ್ಥದಲ್ಲಿ ಸಮಾಜಕ್ಕೆ ಸದಾ ಮಾರ್ಗದರ್ಶಕರಾಗಿಯೇ ಇರುವ ಶಿಕ್ಷಕರಿಗೆ ನಿವೃತ್ತಿ ಎಂಬುದಿಲ್ಲ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿ ನಿವೃತ್ತ ಉಪನ್ಯಾಸಕ ಶಿವಶರಣ ಹಂಜಗಿ ಮಾತನಾಡಿ, ಸುವರ್ಣಾ ತೇಲಿ ಅವರು ಉಮರಾಣಿಯಲ್ಲಿ 28 ವರ್ಷಗಳ ಪ್ರಾಮಾಣಿಕ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ, ಶಿಕ್ಷಕರ ಶಿಕ್ಷಕ ಸಂಘಗಳ, ಹಾಗೂ ಸಮಾಜದ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದರು.ಮುಖ್ಯ ಅತಿಥಿ ಎಸ್ ಬಿ ಪಾಟೀಲ ಅವರು,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಂಗಳೂರಿನ ಕೊಡತಿ ಗ್ರಾಮದ ಸರ್ವೆ ನಂಬರ್ ೮೨ರಲ್ಲಿ ೭ ಎಕರೆ ಜಮೀನಿನಲ್ಲಿ ಮೀಸಲಿರುವ ೧೭ ನಿವೇಶನಗಳಿಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕರ್ನಾಟಕ ಮೂಲದ ಅರ್ಹ ನಿವೇಶನ ರಹಿತ ಸೈನಿಕರು/ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಹಾಗೂ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿ, ಅನುಷ್ಠಾನಗೊಳಿಸುತ್ತಿದ್ದು, ಈ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕಾರ್ಯ ಯೋಜನೆ ಸಿದ್ಧಪಡಿಸಿಕೊಂಡು ಕಾರ್ಯನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೫-೨೬ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಜುಲೈ -೨೦೨೫ರ ಅಂತ್ಯಕ್ಕೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಎಸ್ಸಿಪಿ ಟಿಎಸ್ಪಿ ಅನುದಾನವನ್ನು ಕಾಲಮಿತಿಯೊಳಗೆ ವೆಚ್ಚ ಮಾಡಬೇಕು. ಎಸ್ಸಿಪಿ ಟಿಎಸ್ಪಿ ಅನುದಾನ ಉಳಿಕೆಯಾಗದಂತೆ ನೋಡಿಕೊಂಡು ಸಮರ್ಪಕವಾಗಿ ಬಳಕೆ ಮಾಡುವಂತೆ ಸೂಚಿಸಲಾಯಿತು.ವಿವಿಧ ನಿಗಮಗಳಿಂದ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ, ವಿದ್ಯುತ್ ಪರಿವರ್ತಕ ಹಾಗೂ ವಿದ್ಯುತ್ ಕಂಬ ಒದಗಿಸುವಂತೆಯೂ, ಅವಶ್ಯ ಇರುವ ಕಾಲೋನಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಕ್ರಮವಹಿಸಬೇಕು.…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದೇಶ ಭಕ್ತಿಯನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಸಮಸ್ತ ಭಾರತೀಯರು ಮನೆಗಳ ಮೇಲೆ ತಿರಂಗ ಧ್ವಜ ಹಾರಿಸಬೇಕಿದೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.ಸಿಂದಗಿ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಸ್ತುತ ದೇಶವು ಹಿಂದೆಂದಿಗಿಂತಲೂ ಸದೃಢವಾಗಿದೆ. ಬಿಜೆಪಿ ಸ್ನೇಹಕ್ಕೆ ಮತ್ತು ಪ್ರೀತಿಗೆ ಮುಂದಾಳತ್ವ ವಹಿಸುವ ಪಕ್ಷವಾಗಿದೆ. ದೇಶ ಭಕ್ತಿಯ ಮೂಲಕ ಸ್ವಾತಂತ್ರ್ಯ ಕಾಪಾಡುವುದು ಮೊದಲ ಆಶಯವಾಗಿದೆ. ಆಪರೇಶನ್ ಸಿಂಧೂರ ಮತ್ತು ಆಪರೇಶನ್ ಮಹಾದೇವ ಯಶಸ್ಸಿಗೆ ಕಾರಣರಾದ ದೇಶದ ಸೈನಿಕರಿಗೆ ನಮನ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಆ.13ರಿಂದ 15ರವರೆಗೆ ದೇಶದ ಎಲ್ಲಡೆ ಹರ್ ಘರ್ ತಿರಂಗ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.ಈ ವೇಳೆ ಅಭಿಯಾನದ ಮೂಲಕ ಬೈಕ್ ರ್ಯಾಲಿ ನಡೆಸಿ ಪಟ್ಟಣದ ಬಸವೇಶ್ವರ ವೃತ್ತದಿಂದ, ಸ್ವಾಮಿ ವಿವೇಕಾನಂದ ವೃತ್ತ, ತೋಂಟದ ಸಿದ್ದಲಿಂಗ ಶ್ರೀಗಳ ರಸ್ತೆಯ…
