Author: editor.udayarashmi@gmail.com

ಲೇಖನ- ವಿವೇಕಾನಂದ. ಎಚ್. ಕೆ.ಪ್ರಗತಿಪರ ಚಿಂತಕರುಬೆಂಗಳೂರು ಉದಯರಶ್ಮಿ ದಿನಪತ್ರಿಕೆ ಈ ಪದಗಳ ನಿಜವಾದ ಅರ್ಥವನ್ನು, ಆಶಯವನ್ನು ಗ್ರಹಿಸಲು ಓದು, ಅಧ್ಯಯನ, ಚಿಂತನೆ, ಅನುಭವ, ಅನುಭಾವ, ಸಂವೇದನಾಶೀಲತೆ, ಕ್ರಿಯಾಶೀಲತೆ, ವಿಶಾಲತೆ, ಒಳ್ಳೆಯತನ, ಭೌಗೋಳಿಕ, ಕಾನೂನಾತ್ಮಕ ಮತ್ತು ಪ್ರಾಕೃತಿಕ ಮೌಲ್ಯಗಳ ಜ್ಞಾನ ಇರಬೇಕಾಗುತ್ತದೆ. ಇಲ್ಲದಿದ್ದರೆ ಎಲ್ಲವೂ ಒಂದು ಹುಚ್ಚರ ಸಂತೆಯಂತೆ ಭಾಸವಾಗುತ್ತದೆ.ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಕ್ರಾಂತಿಯಿಂದ ಇವುಗಳ ನಡುವಿನ ವ್ಯತ್ಯಾಸವನ್ನು ಗ್ರಹಿಸುವಲ್ಲಿ ನಾವು ವಿಫಲರಾಗುತ್ತಿದ್ದೇವೆ ಎನಿಸುತ್ತದೆ.ಈ ವಿಫಲತೆಯನ್ನು ರಾಜಕಾರಣಿಗಳು, ಅಧಿಕಾರಿಗಳು ಮತ್ತು ಕಾರ್ಪೊರೇಟ್ ಕುಳಗಳು ಬಹಳ ಯಶಸ್ವಿಯಾಗಿ ಉಪಯೋಗಿಸಿಕೊಂಡು ಜನರನ್ನು ನೇರ ನಿಯಂತ್ರಣಕ್ಕೆ ಒಳಪಡಿಸಿಕೊಂಡಿದೆ. ಒಂದು ರೀತಿ ಶ್ವಾನಗಳಿಗೆ ಬಿಸ್ಕೆಟ್ ಹಾಕುವಂತೆ ಜನರ ಮನೋಭಾವವನ್ನೇ ದಿವಾಳಿತನದತ್ತ ದೂಡಿ ಜೀತದಾಳುಗಳಂತೆ ಉಪಯೋಗಿಸಿಕೊಳ್ಳುತ್ತಿದೆ.ತಿನ್ನುವುದಕ್ಕಾಗಿ ಬದುಕಬೇಕೋ, ಬದುಕುವುದಕ್ಕಾಗಿ ತಿನ್ನಬೇಕೋ ಎಂಬ ಗೊಂದಲ ಸೃಷ್ಟಿ ಮಾಡಿದೆ. ಆದರೆ ತಿನ್ನುವುದಕ್ಕೂ, ಬದುಕುವುದಕ್ಕೂ ಜೀವನ ಪರ್ಯಂತ ದುಡಿಯಲೇ ಬೇಕಾದ ಅನಿವಾರ್ಯತೆಯಂತು ಸೃಷ್ಟಿಯಾಗಿದೆ. ಬಹುತೇಕ ಮದ್ಯಮ ಮತ್ತು ಕೆಳ ಮದ್ಯಮ ಜನರ ಬದುಕು ಬೀಳುತ್ತಿರುವ ಗೋಡೆಯನ್ನು ಹಿಡಿದು ನಿಲ್ಲಿಸುವುದರಲ್ಲಿಯೇ ತಮ್ಮ ಇಡೀ ಜೀವನ…

Read More

ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ವ್ಯಕ್ತಿ ಪೂಜೆ ಬೇಕೇ..?? ಮಾನವರೇ ದೇವರಾದರೆ ದೇವರ ಅಸ್ತಿತ್ವಕ್ಕೆ ಬೆಲೆ ಎಲ್ಲಿ..?! ಎಂದು ಕೇಳುತ್ತಾರೆ ನಮ್ಮ ದೊಡ್ಡವರುಬೇಕು ಎನ್ನುತ್ತೇನೆ ನಾನು. ಅದರೆ ವ್ಯಕ್ತಿಗಲ್ಲ, ದೇವರಂತಹ ವ್ಯಕ್ತಿಗೆ. ಮನುಷ್ಯ ದೇವರಾಗಿಬಿಡಬೇಕು ತನ್ನ ಉತ್ತಮ ಯೋಚನೆಗಳಿಂದ, ಉತ್ತಮ ಕೆಲಸಗಳಿಂದ.ಇನ್ನು ದೇವರೆಂದರೆ ಯಾರು? ನೀವು ರಾಮ, ಕೃಷ್ಣ, ಅಲ್ಲಾ, ಯೇಸು ಇವರೆಲ್ಲರೂ ದೇವರೆಂದರೆ, ನಾನು ಮನುಷ್ಯನಲ್ಲಿರಬೇಕಾದ ಒಳ್ಳೆಯತನವನ್ನೇ ದೇವರೆನ್ನುತ್ತೇನೆ. ದೇವರು ಒಬ್ಬೊಬ್ಬರಿಗೆ ಒಂದೊಂದು ರೂಪ. ಅವರವರ ಅಸ್ಮಿತೆಗೆ ಬಿಟ್ಟಂತೆ. ಆದರೆ ದೇವರು ಎಂಬ ಪದದ ತೂಕ ಮಾತ್ರ ಬಲು ಎತ್ತರದ್ದು. ಯಾರಿಗೂ ನಿಲುಕದ್ದು. ಅಷ್ಟೆಲ್ಲಾ ಒಳ್ಳೆಯವರಾಗಿ ಬಾಳಿದ ಪಾಂಡವರೇ, ಸ್ವರ್ಗಕ್ಕೆ ಹೋಗಿ ಸೇರುವಷ್ಟು ಪುಣ್ಯ ಸಂಪಾದನೆ ಮಾಡಲಾಗಲಿಲ್ಲ. ಸ್ವರ್ಗಕ್ಕೆ ಹೋಗುವ ದಾರಿಯಲ್ಲೇ, ಹೋಗುತ್ತಲೇ ಪ್ರಾಣ ಬಿಟ್ಟವರು. ಇನ್ನೂ ನಾವು-ನೀವು ಎಲ್ಲಿಯವರು?ಹುಲು ಮಾನವರು ದೇವರಾಗಬಾರದೆಂದಿಲ್ಲ, ಆಗಬಹುದು ಅದು ಅವರ ಒಳ್ಳೆಯ ಕೆಲಸಗಳಿಂದ. ಆದರೆ ಒಳ್ಳೆಯವರನ್ನು ಪೂಜಿಸುವವರು ಬೇಕಲ್ಲಾ!ಯಾರಿದ್ದಾರೆ?!.ಇರುವವರೆಲ್ಲಾ ಅರ್ಹರಲ್ಲದ ವ್ಯಕ್ತಿಪೂಜೆಯಲ್ಲಿ ನಿರತರಾಗಿಬಿಟ್ಟಿದ್ದಾರೆ. ಊರತುಂಬಾ ಹರಡಿಕೊಂಡಿರುವ ಅನರ್ಹರು, ಅಲ್ಲಲ್ಲೇ ಇರುವ…

Read More

ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ 20 ನೆಯ ಶರಣಮಾಸದ ಮಾಲಿಕೆಯಲ್ಲಿ ಅಂತರಾಷ್ಟ್ರೀಯ ಗಾಯಕರಾದ ಡಾ. ಮೃತ್ಯುಂಜಯ ಶೆಟ್ಟರ ಅವರು ವಚನ ಗಾಯನ ಪರಂಪರೆಯ ಕುರಿತು ಅತ್ಯಂತ ವಿದ್ವತ್ಪೂರ್ಣವಾಗಿ ಮಾತನಾಡಿದರು.12 ನೆಯ ಶತಮಾನದಲ್ಲಿ ಹಲವಾರು ಶರಣರು ವಚನ ರಚನೆಯೊಂದಿಗೆ ವಚನಗಳನ್ನು ವಾದ್ಯಗಳ ಮೂಲಕ, ಗಾಯನದ ಮೂಲಕ, ನರ್ತನ ಕಲೆ ಮೂಲಕ ಸಾಮಾಜಿಕ ಪರಿವರ್ತನೆಯ ಸಲುವಾಗಿ ಹೇಗೆ ಬಳಸಿಕೊಂಡಿದ್ದರು ಎನ್ನುವುದರಿಂದ ಹಿಡಿದು ಈಗಿನವರೆಗೆ ಮಧ್ಯ ಮಧ್ಯ ಶರಣರ ವಚನಗಳನ್ನು ಸುಶ್ರಾವ್ಯವಾಗಿ ಭಕ್ತಿ ಪೂರ್ವಕದಿಂದ ಹಾಡುತ್ತಾ ವಿವರಿಸಿದರು.ಮೊದಲಿನಿಂದಲೂ ಸಂಗೀತವು ಆಯಾ ಪ್ರದೇಶದ ಪ್ರಾದೇಶಿಕ ಹಿನ್ನೆಲೆಯಿಂದ ಮೂಡಿಬಂದಿದೆ, ಆಗಿನಿಂದಲೂ ನಾದ ಪ್ರಪಂಚ ಸಮೃದ್ಧವಾಗಿತ್ತು, ಭಕ್ತಿ, ಶ್ರದ್ಧೆ ವಿಚಾರ,ಭಾವನೆಗಳಿಂದ ವಿಕಾಸಗೊಂಡು ಕವಲು ಹೊಂದಿ ಗಾಯನ ಸ್ವರೂಪದ ಸಂಗೀತವು ರೂಪುಗೊಳ್ಳುತ್ತಾ ಬಂದಿದೆ. ನಾಲ್ಕನೆಯ ಶತಮಾನದಲ್ಲಿ ಮಾನಸೋ ಲ್ಲಾಸ ಗ್ರಂಥಬಂದದ್ದು, ರಾಜಾಶ್ರಯದಲ್ಲಿ ಸಂಗೀತ ಗಾರರು ಬೆಳೆದದ್ದನ್ನು ಹಂಚಿಕೊಂಡರು.1951 ರಿಂದ 2025ರ ವರೆಗೆ ಮಲ್ಲಿಕಾರ್ಜುನ ಮನ್ಸೂರ ಬಸವರಾಜ ರಾಜಗುರು ಸಿದ್ದರಾಮಯ್ಯ ಜಂಬಲದಿನ್ನಿ ಇನ್ನೂ ಅನೇಕ ಪ್ರಖ್ಯಾತ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಕೂಡಗಿ ಟೌನಸಿಪನ ಬಾಲ ಭಾರತಿ ಪಬ್ಲಿಕ್ ಸ್ಕೂಲ್ ನಲ್ಲಿ “ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ, ರಾಷ್ಟ್ರಗೀತೆ” ಕುರಿತ ಕಾರ್ಯಾಗಾರವನ್ನು ಆಯೋಜಿಸಲಾಯಿತು.ಭಾರತ ಸೇವಾದಳ ಜಿಲ್ಲಾ ಸಮಿತಿ ಸದಸ್ಯರಾದ ಅಶೋಕ್ ಗುಡದಿನ್ನಿ, ಶಾಲೆಯ ಪ್ರಾಂಶುಪಾಲ ಸಂದೀಪ್ ಸಮಸೋಲೆ, ಶಿಕ್ಷಕರ ವೃಂದ, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಸೇವಾದಳ ಸಂಪನ್ಮೂಲ ವ್ಯಕ್ತಿ ಎಸ್.ಎಲ್. ರಾಠೋಡ ಕಾರ್ಯಾಗಾರದಲ್ಲಿ ಭಾಗವಹಿಸಿದರು.ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಅವರು ತರಬೇತಿ ನೀಡಿದರು. ಅವರು ರಾಷ್ಟ್ರೀಯ ಏಕತೆ, ಧ್ವಜದ ಗೌರವ ಹಾಗೂ ರಾಷ್ಟ್ರಗೀತೆ ಪಠಿಸುವ ಶಿಷ್ಟಾಚಾರಗಳ ಬಗ್ಗೆ ವಿವರಿಸಿ, ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಮನೋಭಾವವನ್ನು ಬೆಳೆಸುವಂತೆ ಪ್ರೇರಣೆ ನೀಡಿದರು.

Read More

ವಿಧಾನಸಭೆಯಲ್ಲಿ ಕೋಲಾಹಲ | ಬಿಜೆಪಿಯಿಂದ ಸರ್ಕಾರಕ್ಕೆ ತರಾಟೆ | ಬಿಜೆಪಿ ಮುಖಂಡರ ಮೇಲೆ ಕಿಡಿಕಾರಿದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು: ಕರ್ನಾಟಕ ಸಚಿವ ಸಂಪುಟದಿಂದ ಕೆ.ಎನ್. ರಾಜಣ್ಣ ಅವರನ್ನು ವಜಾಗೊಳಿಸಿರುವುದು ಮಂಗಳವಾರ ವಿಧಾನಸಭೆಯಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದು, ಪ್ರತಿಪಕ್ಷ ಬಿಜೆಪಿ ಅವರ ವಜಾಕ್ಕೆ ಕಾರಣಗಳನ್ನು ತಿಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದೆ.ಮತಕಳ್ಳತನ ವಿಚಾರವಾಗಿ ಬಹಿರಂಗವಾಗಿ ಮಾತನಾಡಿ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಹಕಾರ ಸಚಿವ ಕೆಎನ್ ರಾಜಣ್ಣ ಅವರನ್ನು ಸಿದ್ದರಾಮಯ್ಯ ಸಂಪುಟದಿಂದ ನಿನ್ನೆ ವಜಾಗೊಳಿಸಲಾಗಿತ್ತು. ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದ ನಂತರ ಸಹಕಾರ ಸಚಿವರಾಗಿ ಸೇವೆ ಸಲ್ಲಿಸಿದ್ದ ರಾಜಣ್ಣ ಅವರನ್ನು ಸೋಮವಾರ ಸಂಪುಟದಿಂದ ಕೈಬಿಡಲಾಗಿತ್ತು. ಈ ಬೆಳವಣಿಗೆ ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ರಾಜಕೀಯ ಚರ್ಚೆಗೆ ಕಾರಣವಾಗಿದೆ.ಮಂಗಳವಾರ ಇದೇ ವಿಚಾರ ವಿಧಾನಸಭೆ ಕಲಾಪದಲ್ಲೂ ಮಾರ್ದನಿಸಿದ್ದು, ಪ್ರತಿಪಕ್ಷ ಬಿಜೆಪಿ ಈ ಕುರಿತು ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ರಾಜಣ್ಣ ಅವರ ವಜಾಕ್ಕೆ ಸರ್ಕಾರ ಕಾರಣಗಳನ್ನು ನೀಡಲೇಬೇಕು ಎಂದು ಒತ್ತಾಯಿಸಿದೆ. ಆದರೆ ಸರ್ಕಾರ ಮಾತ್ರ ಯಾವುದೇ ಚರ್ಚೆಯಿಂದ…

Read More

ಉದಯರಶ್ಮಿ ದಿನಪತ್ರಿಕೆ ಬಸವನ ಬಾಗೇವಾಡಿ: ಪಟ್ಟಣದ ಉತ್ತರಾದಿ ಮಠದಲ್ಲಿ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮಠವನ್ನು ತಳಿರು ತೋರಣ ಹಾಗೂ ವಿಶೇಷವಾದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.ಅರ್ಚಕ ಶ್ರೀವಾದಿರಾಜಾಚಾರ್ಯ ಯಜುರ್ವೇದಿ ಅವರ ನೇತೃತ್ವದಲ್ಲಿ ರಾಯರ ವೃಂದಾವನಕ್ಕೆ ಕ್ಷೀರಾಭಿಷೇಕ, ತುಳಸಿ ಅರ್ಚನೆ, ವಿಶೇಷ ಅಲಂಕಾರ ಹಾಗೂ ಅಷ್ಟೋತ್ತರ ಮುಂತಾದ ಕಾರ್ಯಕ್ರಮಗಳು ನಡೆದವು. ನಂತರ ವೇ.ಮೂ. ನರಹರಿ ಆಚಾರ್ಯ ಜೋಶಿ ಮುತ್ತಗಿ ಅವರಿಂದ ಪ್ರವಚನವನ್ನು ಏರ್ಪಡಿಸಲಾಗಿತ್ತು.ಮಧ್ಯಾಹ್ನ ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ನಡೆಸಲಾಯಿತು. ಪ್ರತಿದಿನ ಸಾಯಂಕಾಲ ಪಂಚ ಸುಳಾದಿ, ಪಲ್ಲಕ್ಕಿ ಉತ್ಸವ, ಸಂಗೀತ ಸೇವೆ, ಅಷ್ಟಾವಧಾನ ಸೇವೆ, ತೊಟ್ಟಲು ಸೇವೆ ಹಾಗೂ ಸ್ವಸ್ತಿವಾಚನಗಳು ಜರುಗಿದವು.ಉತ್ತರಾರಾಧನೆಯ ದಿನ ವೈಭವದ ಜಯಘೋಷ ಹಾಗೂ ಭಜನೆಯೊಂದಿಗೆ ರಥೋತ್ಸವ ನಡೆಯಿತು. ಬಳಿಕ ಶ್ರೀಮಠದ ಅಧ್ಯಕ್ಷ ವಸಂತಾಚಾರ್ಯ ಇಂಗಳೇಶ್ವರ ಅವರು ಮಾತನಾಡಿ, ರಾಯರ ಪಾದೋದಕ ಮತ್ತು ಮೃತ್ತಿಕೆಗಳಿಗೆ ಅದ್ಭುತ ಶಕ್ತಿ ಇದೆ. ತನ್ಮೂಲಕ ಎಲ್ಲರಿಗೂ ರಾಯರ ಆಶೀರ್ವಾದ ಸಿಗುವಂತಾಗಲಿ. ಎಲ್ಲ ಭಕ್ತರ ಅಭೀಷ್ಠೆಗಳನ್ನೂ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಶ್ರೀಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕು ೨೦೨೪-೨೫ ನೇ ಹಣಕಾಸು ವರ್ಷದಲ್ಲಿ ಒಟ್ಟು ರೂ. ೩೫,೧೩೨.೩೭ ಲಕ್ಷ ವ್ಯವಹಾರ ಮಾಡಿ ಒಂದು ಕೋಟಿ ರೂಪಾಯಿ ಆದಾಯ ಗಳಿಸಿದೆ. ೨೦೨೪-೨೫ ನೇ ೬೧ ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಆ.೧೭ ರಂದು ಬೆಳಗ್ಗೆ ೧೦ ಗಂಟೆಗೆ ಮುದ್ದೇಬಿಹಾಳ ರಸ್ತೆಯಲ್ಲಿರುವ ಜಗದ್ಗುರು ಪಂಚಾಚಾರ್ಯ ಜನಕಲ್ಯಾಣ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಲೋಕನಾಥ ಅಗರವಾಲ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಮ್ಮ ಬ್ಯಾಂಕಿನಲ್ಲಿ ಪ್ರಸ್ತುತ ೩,೨೫೬ ಸಾಮಾನ್ಯ ಸದಸ್ಯರು, ೩,೨೭೨ ಸಹ ಸದಸ್ಯರನ್ನು ಹೊಂದಿದೆ. ಒಟ್ಟು ರೂ. ೩೪೮.೮೨ ಲಕ್ಷ ಶೇರು ಬಂಡವಾಳ, ೪೧೦.೧೩ ಲಕ್ಷ ಕಾಯ್ದಿಟ್ಟ ನಿಽ ಹಾಗೂ ಇತರೇ ನಿಽಗಳು ಸೇರಿ ಒಟ್ಟು ೯೫೬.೪೯ ಲಕ್ಷ ರೂ. ಹೊಂದಿದೆ. ಗ್ರಾಹಕರಿಂದ ರೂ.೧೦,೩೩೮.೧೯ ಲಕ್ಷ ಠೇವುಗಳು ಹೊಂದಿದೆ. ದುಡಿಯುವ ಬಂಡವಾಳ ರೂ. ೧೨,೦೯೦.೯೭ ಲಕ್ಷ ಇದೆ. ೨೦೨೫ರ ವರ್ಷಾಂತ್ಯಕ್ಕೆ ಸಾಲಗಾರರಿಂದ ಬರತಕ್ಕ ಸಾಲ ಬಾಕಿ ೬,೮೩೧.೬೨…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಪ.ಪಂ. ಹಾಗೂ ತಲಶೀಲ್ದಾರ ಕಛೇರಿ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ಧಿಡೀರ ದಾಳಿ ನಡೆಸಿ, ವಿವಿಧ ಕಡತಗಳನ್ನು ಪರಿಶೀಲನೆ ಮಾಡಿದರು.ಪ.ಪಂ. ಕಛೇರಿಯಲ್ಲಿ ೨೦೨೩-೨೪, ೨೦೨೪-೨೫ನೇ ಸಾಲಿನಲ್ಲಿ ಭೂಪರಿವರ್ತನೆ (ಎನ್.ಎ.) ಆಗಿರುವ ಜಮೀನುಗಳ ಎಲ್ಲ ದಾಖಲೆಗಳನ್ನು ಪರಿಶೀಲನೆ ನಡೆಸಿ, ಅದರ ಸಂಪೂರ್ಣ ಮಾಹಿತಿಯನ್ನು ಪಡೆದ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ಮಾಹಿತಿಗಾಗಿ ಎಲ್ಲ ಭೂಪರಿವರ್ತನೆ ಕಡತಗಳ ನಕಲು ಪ್ರತಿಯನ್ನು ಪಡೆದರು. ಇತ್ತಿಚೆಗೆ ಪಟ್ಟಣದ ಹೊರವಲಯದಲ್ಲಿ ಭೂಪರಿವರ್ತನೆಯಾಗಿರುವ ಡೈಮಂಡ ಪಾರ್ಕನ ಸುಮಾರು ೪೦ ಎಕರೆ ಸಿಟಿ ಸರ್ವೆಯಲ್ಲಿ(ಪ.ಪಂಚಾಯತಿ ಸರಹದ್ದಿನಲ್ಲಿ) ಬರುವದಿಲ್ಲ ಮತ್ತು ಅದರಲ್ಲಿ ಈಗಾಗಲೇ ೪೦% ನಿವೇಶನಗಳ ಉತಾರಿಯನ್ನು ಪ.ಪಂ.ನವರು ನೀಡಿದ್ದಾರೆ ಎಂದು ಸಾರ್ವಜನಿಕರು ಆಕ್ಷೇಪಣೆ ಮಾಡಿದಾಗ ಲೋಕಾಯುಕ್ತ ಅಧಿಕಾರಿಗಳು ಇದರ ಕುರಿತು ಪ.ಪಂ.ನ ಮುಖ್ಯಾಧಿಕಾರಿಯನ್ನು ವಿಚಾರಿಸಿ, ಹೆಚ್ಚಿನ ಮಾಹಿತಿಗಾಗಿ ಈ ಭೂಪರಿವರ್ತನೆ ಕಡತದ ನಕಲು ಪ್ರತಿಯನ್ನು ನೀಡುವಂತೆ ಸೂಚಿಸಿದರು.ನಂತರ ಪ.ಪಂ.ನ ಎಲ್ಲ ವಾಹನಗಳ ಲಾಗ್‌ಬುಕ್ ಪರಿಶೀಲನೆ ನಡೆಸಿ, ಅದರ ಖರ್ಚು ವೆಚ್ಚಗಳ ಬಗ್ಗೆ ಸಂಪೂರ್ಣ ಮಾಹಿತಿ ಪರಿಶೀಲನೆ ನಡೆಸಿದರು.…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಐತಿಹಾಸಿಕ ಹೋರಿಮಟ್ಟಿ ಗುಡ್ಡಕ್ಕೆ ತೆರಳಿದ್ದ ಅಲಂಕೃತ ಮೂಲನಂದೀಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಭಕ್ತರ ಜಯಘೋಷ, ಬಸವಣ್ಣನ ಕುದರಿ ಶಿವಾನಂದ ಈರಕಾರಮುತ್ಯಾ ಅವರ ಹೇಳಿಕೆ ನುಡಿದ ನಂತರ ದೇವಸ್ಥಾನದಲ್ಲಿರುವ ಬೆಳ್ಳಿ ಪಲ್ಲಕ್ಕಿ ಇಡುವ ಕಟ್ಟೆಗೆ ಮರಳುವ ಮೂಲಕ ಪಲ್ಲಕ್ಕಿ ಉತ್ಸವ ಸಂಪನ್ನಗೊಂಡಿತ್ತು.ಪಟ್ಟಣದಿಂದ ಸುಮಾರು ೫ ಕಿಮೀ ಅಂತರದಲ್ಲಿರುವ ಐತಿಹಾಸಿಕ ಹೋರಿಮಟ್ಟಿ ಗುಡ್ಡಕ್ಕೆ ಸೋಮವಾರ ತೆರಳಿದ್ದ ಮೂಲನಂದೀಶ್ವರ (ಬಸವೇಶ್ವರ) ದೇವರ ಅಲಂಕೃತ ಬೆಳ್ಳಿ ಪಲ್ಲಕ್ಕಿ ಉತ್ಸವ ಸಂಜೆ ಆಕರ್ಷಕ ಸಿಡಿಮದ್ದು, ವಿವಿಧ ಕಲಾ ತಂಡಗಳ ಮೆರವಣಿಗೆ, ವಿವಿಧ ವಾದ್ಯಮೇಳದೊಂದಿಗೆ ಭಕ್ತರ ಜಯಘೋಷದೊಂದಿಗೆ ಪುರ ಪ್ರವೇಶ ಮಾಡಿದ ನಂತರ ಅದ್ದೂರಿ ಮೆರವಣಿಗೆಯ ಮೂಲಕ ದೇವಸ್ಥಾನಕ್ಕೆ ತಲುಪಿದ ನಂತರ ರಾತ್ರಿ ಪಲ್ಲಕ್ಕಿ ಪಲ್ಲಕ್ಕಿ ಕಟ್ಟೆಗೆ ಮರಳಿತು. ಮಂಗಳವಾರ ನಸುಕಿನ ಜಾವ ಬಸವಣ್ಣನ ಕುದರಿ ಶಿವಾನಂದ ಈರಕಾರಮುತ್ಯಾ ಅವರು ಆಗಮಿಸಿದ ನಂತರ ಪಲ್ಲಕ್ಕಿ ಉತ್ಸವವು ದೇವಸ್ಥಾನದ ಪ್ರಾಂಗಣದಲ್ಲಿ ಮೂರು ಪ್ರದಕ್ಷಿಣೆ ಹಾಕಿದ ನಂತರ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವದ ಉತ್ತರಾಧನೆ ಭಕ್ತಿಭಾವದಿಂದ ಅದ್ಧೂರಿಯಾಗಿ ಜರುಗಿತು.ಪಟ್ಟಣದ ವಿಠ್ಠಲಮಂದಿರದಲ್ಲಿ ಕಳೆದ ೩ ದಿನಗಳಿಂದ ಆರಂಭಗೊಂಡ ಆರಾಧನಾ ಮಹೋತ್ಸವದಲ್ಲಿ ಮೊದಲದಿನ ಪೂರ್ವಾರಾಧನೆ, ಎರಡನೆಯ ದಿನ ಮಧ್ಯಾರಾಧನೆ ನಂತರ ಉತ್ತರಾಧನೆ ಜರುಗಿದವು. ಪ್ರತಿದಿನ ಬೆಳಿಗ್ಗೆ ರಾಯರ ಮಹಾಪೂಜೆ, ಅಷ್ಠೋತ್ತರ ಸಾಂಗವಾಗಿ ಜರುಗಿ ನಂತರ ತೀರ್ಥ, ಮಹಾಪ್ರಸಾದ ವಿತರಣೆಯಾದವು. ರಾತ್ರಿ ರಾಯರ ಕುರಿತು ಭಕ್ತಿಗೀತೆಗಳ ಭಜನೆ ಜರುಗಿತು.ಮಹೋತ್ಸವದಲ್ಲಿ ವೈದ್ಯರುಗಳಾದ ಆರ್.ಆರ್.ನಾಯಿಕ್, ಸತೀಶ ನಾಡಗೌಡ, ಚಿದಂಬರ ಸೇವಾ ಸಮಿತಿಯ ವೆಂಕಟೇಶ ಕುಲಕರ್ಣಿ, ಸುಧೀರ ಪಾಟೀಲ, ಶ್ರೀಪಾದ ಜೋಷಿ, ಗುರುರಾಜ್ ಕುಲಕರ್ಣಿ, ನರೇಂದ್ರ ನಾಡಗೌಡ, ಪ್ರಲ್ಹಾದ ಕುಲಕರ್ಣಿ, ಪ್ರಭಾಕರ ಕುಲಕರ್ಣಿ, ಅಶೋಕ ಜೋಷಿ, ಶರತ್ ಕುಲಕರ್ಣಿ, ಸಂಗೀತಾ ನಾಯಿಕ್, ಮಾಧುರಿ ನಾಡಗೌಡ, ಶಶಿಕಲಾ ಕುಲಕರ್ಣಿ, ಪ್ರೀತಿ ಪಾಟೀಲ, ವಿದ್ಯಾಶ್ರೀ ಕುಲಕರ್ಣಿ, ಭಾವನಾ ಪುರೋಹಿತ, ವಿಜಯಲಕ್ಷ್ಮಿ ಕುಲಕರ್ಣಿ, ಪ್ರಮೀಳಾಬಾಯಿ ಕುಲಕರ್ಣಿ, ರೇಖಾ ನಾಡಗೌಡ, ಸುಜಾತಾ ನಾಡಗೌಡ, ಅಂಬಿಕಾ ಕುಲಕರ್ಣಿ, ಅನೀತಾ ಕುಲಕರ್ಣಿ, ಶ್ರೀದೇವಿ ಜೋಷಿ, ಉಮಾಬಾಯಿ ಜೋಷಿ, ವಾಸಂತಿ ಕುಲಕರ್ಣಿ ಸೇರಿದಂತೆ…

Read More