Subscribe to Updates
Get the latest creative news from FooBar about art, design and business.
Author: editor.udayarashmi@gmail.com
ನಾವು – ನಮ್ಮ ಮಕ್ಕಳು(ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಕುರಿತ ಲೇಖನ ಮಾಲಿಕೆ) ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಮನೆಯಲ್ಲಿ ಅಮ್ಮ ಅಡುಗೆ ಮಾಡುವಾಗ ಮಕ್ಕಳು ಕೂಡ ಹಾಗೆ ಮಾಡುವ ಕೆಲಸಗಳನ್ನು ತದೇಕ ಚಿತ್ತದಿಂದ ನೋಡುತ್ತಾರೆ. ತಾಯಿಯ ಮಾತುಗಳನ್ನು, ಹಾವಭಾವಗಳನ್ನು, ಅಡುಗೆ ಮಾಡುವ ಸಮಯದಲ್ಲಿ ಆಕೆಯ ವೈಖರಿಯನ್ನು ಮಕ್ಕಳು ಅನುಕರಿಸುತ್ತಾರೆ. ಪ್ರಾಯೋಗಿಕವಾಗಿ ಹೀಗೆ ವಸ್ತುಗಳನ್ನು ಮುಟ್ಟಿ ನೋಡಿ ಅನುಭವಿಸಿ ಕಲಿಯುವ ಶಿಕ್ಷಣ ಪದ್ಧತಿಯನ್ನು ನಮ್ಮಲ್ಲಿ ಅನುಷ್ಠಾನಗೊಳಿಸಬೇಕು. ಇದು ಮಕ್ಕಳ ಕಲಿಕಾ ಆಸಕ್ತಿಗೆ ನೆರವಾಗುತ್ತದೆ.ಸಾಧಾರಣವಾಗಿ ಶಿಕ್ಷಣದಲ್ಲಿ ನಾವು ‘ನೋಡಿ ಕಲಿ ಮಾಡಿ ಕಲಿ’ ಎಂಬ ಮಾತುಗಳನ್ನು ಕೇಳಿದ್ದೇವೆ, ಆದರೆ ಸರ್ವೋತ್ಕೃಷ್ಟವಾದ ಶಿಕ್ಷಣ ಪದ್ಧತಿ ಎಂದರೆ ಪರಿಕಲ್ಪನೆ ಆಧಾರಿತ ಶಿಕ್ಷಣ.ಪ್ರಾತ್ಯಕ್ಷಿಕೆಗಳ ಮೂಲಕ ಸ್ವತಹ ಅರಿತು ಕಲಿಯುವ ಈ ಶಿಕ್ಷಣ ಪದ್ಧತಿಯ ಮೂಲಕ ಮಕ್ಕಳನ್ನು ಸರ್ವೋತ್ಕೃಷ್ಟ ವಿದ್ಯಾರ್ಥಿಯನ್ನಾಗಿಸಬಹುದು.ಒಂದು ಭಾಷೆಯನ್ನು ಕಲಿಯಬೇಕಾದರೆ ನಾವು ವರ್ಣಮಾಲೆಯಲ್ಲಿನ ಅಕ್ಷರಗಳನ್ನು ಅವುಗಳ ಉಚ್ಚಾರಗಳನ್ನು ಕಲಿಯುತ್ತೇವೆ. ಸ್ಲೇಟುಗಳಲ್ಲಿ ಪುಸ್ತಕಗಳಲ್ಲಿ ಮತ್ತೆ ಮತ್ತೆ ಬರೆದು ಅಕ್ಷರಗಳನ್ನು ಕಲಿಯುತ್ತೇವೆ. ಪ್ರತಿಯೊಂದು…
ಲೇಖನ- ಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ವಿಕ್ರಮ್ ಅಂಬಾಲಾಲ್ ಸಾರಾಭಾಯ್ (ಆಗಸ್ಟ್ ೧೨, ೧೯೧೯ – ಡಿಸೆಂಬರ್ ೩೦, ೧೯೭೧) ಒಬ್ಬ ಭಾರತೀಯ ಭೌತಶಾಸ್ತ್ರಜ್ಞ ಮತ್ತು ಖಗೋಳಶಾಸ್ತ್ರಜ್ಞರಾಗಿದ್ದರು , ಅವರು ಬಾಹ್ಯಾಕಾಶ ಸಂಶೋಧನೆಯನ್ನು ಪ್ರಾರಂಭಿಸಿದರು ಮತ್ತು ಭಾರತದಲ್ಲಿ ಪರಮಾಣು ಶಕ್ತಿಯನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡಿದರು . ಸಾಮಾನ್ಯವಾಗಿ “ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ” ಎಂದು ಪರಿಗಣಿಸಲ್ಪಡುವ ಸಾರಾಭಾಯ್ ಅವರನ್ನು ೧೯೬೬ ರಲ್ಲಿ ಪದ್ಮಭೂಷಣ ಮತ್ತು ೧೯೭೨ ರಲ್ಲಿ ಪದ್ಮವಿಭೂಷಣ (ಮರಣೋತ್ತರ) ನೀಡಿ ಗೌರವಿಸಲಾಯಿತು .ಆರಂಭಿಕ ಜೀವನ ಮತ್ತು ಶಿಕ್ಷಣವಿಕ್ರಮ್ ಸಾರಾಭಾಯ್ 1919 ರ ಆಗಸ್ಟ್ 12 ರಂದು ಭಾರತದ ಅಹಮದಾಬಾದ್ನಲ್ಲಿ ಗುಜರಾತಿ ಶ್ವೇತಾಂಬರ ಶ್ರೀಮಾಲಿ ಜೈನ ಕುಟುಂಬದಲ್ಲಿ ಜನಿಸಿದರು. ಅವರ ತಂದೆ ಅಂಬಾಲಾಲ್ ಸಾರಾಭಾಯ್ , ಭಾರತೀಯ ಸ್ವಾತಂತ್ರ್ಯ ಚಳವಳಿಗೆ ಬದ್ಧರಾಗಿದ್ದ ಪ್ರಮುಖ ಕೈಗಾರಿಕೋದ್ಯಮಿ.ವೃತ್ತಿಪರ ಜೀವನಭಾರತದಲ್ಲಿ ಬಾಹ್ಯಾಕಾಶ ವಿಜ್ಞಾನದ ತೊಟ್ಟಿಲು ಎಂದು ಕರೆಯಲ್ಪಡುವ ಭೌತಿಕ ಸಂಶೋಧನಾ ಪ್ರಯೋಗಾಲಯವನ್ನು (PRL) 1947 ರಲ್ಲಿ ವಿಕ್ರಮ್ ಸಾರಾಭಾಯ್ ಸ್ಥಾಪಿಸಿದರು. [ 7 ]…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಲ್ಲ ನಿಷೇಧಾತ್ಮಕ ಮನೋಭಾವನೆಗೆ ದಿವ್ಯ ಔಷಧಿಯೇ ನಮ್ಮಲ್ಲಿರುವ ಆತ್ಮವಿಶ್ವಾಸ. ವಿದ್ಯಾರ್ಥಿಗಳು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ಮಾಡುವ ಯಾವುದೇ ಕೆಲಸ-ಕಾರ್ಯದ ಬಗ್ಗೆ ಕೀಳರಿಮೆ, ನನಗೆ ಸಾಧ್ಯವಿಲ್ಲ, ನನ್ನಿಂದ ಅಸಾಧ್ಯ, ನಕಾರಾತ್ಮಕ ಭಾವನೆಗಳನ್ನು ಬಿಟ್ಟು ಸಾಧಿಸಿಯೇ ತೀರುತ್ತೇನೆಂಬ ದೃಢ ಸಂಕಲ್ಪ ಮಾಡಬೇಕು. ಸಾಧಕರು ನಮ್ಮಂತೆ ಸಾಮಾನ್ಯರಾಗಿ ಅಸಾಮಾನ್ಯವಾದ ಸಾಧನೆಗೈದಿದ್ದಾರೆ ಎಂದು ರಮೇಶ ಬಲ್ಲಿದ ಅಭಿಪ್ರಾಯಪಟ್ಟರು.ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ೨೦೨೫-೨೬ ನೇಯ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರೆಡಕ್ರಾಸ್, ಎನ್.ಎಸ್.ಎಸ್ ಮತ್ತು ವಿವಿಧ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ದೀಪ ಬೆಳಗಿಸುವದರ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.ವಿದ್ಯಾರ್ಥಿಗಳು ಶಿಕ್ಷಣವನ್ನು ಕೇವಲ ಅಂಕ, ಪದವಿ, ಉದ್ಯೋಗ ಅಥವಾ ನೌಕರಿಗಾಗಿ ಪಡೆಯದೇ ಪಡೆದ ಜ್ಞಾನದಿಂದ ತಂದೆ-ತಾಯಿ, ಸಮಾಜ, ಸಮುದಾಯ ಮತ್ತು ರಾಷ್ಟ್ರಕ್ಕೆ ಏನನ್ನಾದರೂ ಕೊಡುಗೆ ನೀಡಿ ಋಣ ತೀರಿಸಬೇಕು. ವಿದ್ಯೆಯ ಜತೆಗೆ ಜೀವನದಲ್ಲಿ ಸಂಸ್ಕೃತಿ-ಸಂಸ್ಕಾರ, ಮೌಲ್ವಿಕ, ನೈತಿಕ, ವೈಚಾರಿಕ ಮತ್ತು ಜೀವನಾದರ್ಶಗಳನ್ನು ಅಳವಡಿಸಿಕೊಂಡು ಭವ್ಯ ಭಾರತದ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಕೋರವಾರ-ಕೊಕಟನೂರ ಗ್ರಾಮಗಳ ನಡುವಿನ ಸುಮಾರು ೮ ಕಿ.ಮೀ ರಸ್ತೆ ತಗ್ಗು ದಿನ್ನೆಗಳಿಂದ ಕೂಡಿದ್ದು ಪ್ರಯಾಣಿಸಲು ಬಾರದಂತಾಗಿದೆ.ಗ್ರಾಮದ ಮುಖ್ಯ ಸಂಪರ್ಕ ರಸ್ತೆಯ ಜೊತೆಗೆ ಐತಿಹಾಸಿಕ ಶ್ರೀಕೋರವಾರೇಶ(ಹನುಮಾನ) ದೇವಸ್ಥಾನಕ್ಕೆ ತೆರಳುವ ರಸ್ತೆ ಹಾಗೂ ದ್ವಾರಬಾಗಿಲು ಬಳಿ ಇರುವ ಸೇತುವೆ ಸಹ ಬಲಿಗಾಗಿ ಕಾದು ಕುಳಿತಂತೆ ಆಗಿದ್ದು, ನಿತ್ಯ ರಸ್ತೆಯಲ್ಲಿ ಸಂಚಾರ ಮಾಡುವ ಸಾರ್ವಜನಿಕರ ದ್ವಿಚಕ್ರ ವಾಹನ ಸವಾರರು ಒಂದಿಲ್ಲೊಂದು ಗುಂಡಿಯಲ್ಲಿ ಬೀಳುವಂತಾಗಿದೆ.ತಗ್ಗು ಗುಂಡಿಗಳಿಂದ ಕೂಡಿದ ರಸ್ತೆಯ ಸಮಸ್ಯೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರು ಸಹ ಯಾವುದೇ ರೀತಿ ಸ್ಪಂದಿಸಿರುವುದಿಲ್ಲ. ರಸ್ತೆ ಸಮಸ್ಯೆಯ ಕುರಿತು ಮುಂದಿನ ವಾರದೊಳಗಾಗಿ ಪಿಡಿಓ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ರಸ್ತೆ ತಡೆ ಮಾಡಿ ಉಗ್ರ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ವಕ್ತಾರ ಚನ್ನಪ್ಪಗೌಡ ಬಿರಾದಾರ, ಬುಡ್ಡೇಸಾಬ ಅರಬ, ಜುಬೇರ ಕೆರೂಟಗಿ, ರಫೀಕ್ ವಡಗೇರಿ, ಯಾಸೀನ್ ಕೆರೂಟಗಿ, ಶಾಹಿದ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೊಂದಣಿಯಾದ ಫಲಾನುಭವಿಗಳಿಗೆ ಮೇಷನ್ ಸುರಕ್ಷಾ ಕಿಟ್, ಎಲೆಕ್ಟಿçಷಿಯನ್ ಸುರಕ್ಷಾ ಕಿಟ್, ಕಾರಪೆಂಟರ್ ಸುರಕ್ಷಾ ಕಿಟ್, ವೆಲ್ಡಿಂಗ್ ಸುರಕ್ಷಾ ಕಿಟ್, ಪ್ಲಂಬರ್ ಸುರಕ್ಷಾ ಕಿಟ್ & ಪೇಂಟರ್ ಸುರಕ್ಷಾ ಕಿಟ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.ಫಲಾನುಭವಿಗಳು ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ ಕಾರ್ಡ ಮತ್ತು ಫಲಾನುಭವಿಯ ಭಾವಚಿತ್ರ ದಾಖಲೆಗಳೊಂದಿಗೆ ದಿನಾಂಕ : ೩೦-೦೯-೨೦೨೫ರೊಳಗಾಗಿ ಕಾರ್ಮಿಕ ನಿರೀಕ್ಷಕರ ಕಚೇರಿ, ೧ನೇ ವೃತ್ತ ಮತ್ತು ೨ನೇ ವೃತ್ತ, ಕಲ್ಯಾಣ ಸಮುದಾಯ ಭವನ ಸಿಂದಗಿ ನಾಕಾ ಅಲ್ಲಾಪೂರ ಓಣಿ, ವಿಜಯಪುರ ಕಚೇರಿಗೆ ಅರ್ಜಿ ಸಲ್ಲಿಸಬೇಕು.ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇಲೆ ಕಾರ್ಮಿಕ ಕಿಟ್ಗಳನ್ನು ವಿತರಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ೨೦೨೫-೨೬ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಜೈನ್ ಬಸದಿ-ಸಿಖ್ ಗುರುದ್ವಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜೈನ್ ಮುಖ್ಯ ಅರ್ಚಕರಿಗೆ ಮತ್ತು ಸಿಖ್ ಮುಖ್ಯ ಗ್ರಂಥಿಗಳು ಹಾಗೂ ಸಹಾಯಕ ಅರ್ಚಕರು-ಗ್ರಂಥಿಗಳಿಗೆ ಮಾಸಿಕ ಗೌರವಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹರು ಅರ್ಜಿ ನಮೂನೆಯನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಜಯಪುರ ಕಚೇರಿ ಪಡೆದು, ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : ೩೦-೦೯-೨೦೨೫ರೊಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ, ಅಥವಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಾದ ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ಇಂಡಿಗೆ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಅಧಿಕಾರೇತರ ಅಭ್ಯರ್ಥಿಗಳನ್ನು ಹಾಗೂ ಎಂಎಸ್ಡಬ್ಲೂ- ಕಾನೂನು ಪದವಿ ಅಥವಾ ಇತರೆ ಯಾವುದೇ ಪದವಿ ವಿದ್ಯಾರ್ಥಿ ಅಥವಾ ಪದವೀಧರರನ್ನು ಗುರುತಿಸಿ ಅವರನ್ನು ಅರೆಕಾಲಿಕ ಸ್ವಯಂ ಸೇವಕರನ್ನಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ದಿನಾಂಕ : ೦೬-೧೦-೨೦೨೫ರೊಳಗಾಗಿ ವಿಜಯಪುರ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್https://districts.ecourts.gov ನಲ್ಲಿ ಲಭ್ಯವಿರುವ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ಜಿಲ್ಲಾ ನ್ಯಾಯಾಲಯ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್.ಹಾಗರಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಸುಳ್ಳು ಭರವಸೆಗಳನ್ನೇ ಯುವಕರಿಗೆ ನೀಡಿ, ಅವರನ್ನು ಭ್ರಮೆಯಲ್ಲಿಯೇ ಇಟ್ಟು, ಮತ ಪಡೆಯುತ್ತಿರುವ ಕೇಂದ್ರ ಬಿಜೆಪಿ ಸರಕಾರ ಯುವಕರಿಗೆ ಅನ್ಯಾಯ ಮಾಡುತ್ತಿದೆ ಎಂದು ತೇರದಾಳ ಮತಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಪೂಜಾರಿ ಹೇಳಿದರು.ಗ್ರಾಮದ ಬಸ್ ನಿಲ್ದಾಣ ಬಳಿಯ ಬಸವೇಶ್ವರ ವೃತ್ತದಲ್ಲಿ ಪ್ರಧಾನಿ ನರೆಂದ್ರ ಮೋದಿಯವರ ಜನ್ಮದಿನಾಚರಣೆಯ ನಿಮಿತ್ತ ಪಕೋಡಾ (ಭಜಿ) ತಯಾರಿಸಿ ನಿರುದ್ಯೋಗ ದಿನ ಆಚರಣೆ ಮಾಡುವ ಮೂಲಕ ನಡೆಸಿದ ಪ್ರತಿಭಟಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಠಿಸುವ ಭರವಸೆ ನೀಡಿದ ಪ್ರಧಾನಿಯವರು ಇದುವರೆಗೆ ನೀಡಿದ ಯಾವುದೇ ಭರವಸೆ ಈಡೆರಿಸದೆ ದೇಶದ ಜನರಿಗೆ ಮೋಸ ಮಾಡಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಪ್ರಭು ದೊಡವಾಡ, ನಿಂಗಪ್ಪ ದೊಡಮನಿ, ಅಲ್ಲಪ್ಪ ಮುಗಳಖೋಡ, ದಾದೇಸಾಬ ಸರಕಾವಸ, ಯಲ್ಲಪ್ಪ ಭಜಂತ್ರಿ, ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕ ಸಲೀಮ ಸರಕಾವಸ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಪ್ರೊ. ಶ್ರೀನಿವಾಸ ಅವರಿಗೆ ‘ಫಿಸಿಕಲ್ ಎಜುಕೇಟರ್ ಅವಾರ್ಡ್–೨೦೨೫’ ಪುರಸ್ಕಾರ ಲಭಿಸಿದೆ.ಪುರಸ್ಕಾರ ಪಡೆದಿರುವ ಪ್ರೊ. ಶ್ರೀನಿವಾಸ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.ಈ ಪ್ರಶಸ್ತಿಯನ್ನು ಕ್ಯಾಪ್ಟನ್ ಎಂ.ಪಿ. ಸಿಂಗ್ ಸ್ಪೋರ್ಟ್ಸ್ ಟ್ರಸ್ಟ್ (ರಿ) ವತಿಯಿಂದ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಕ್ಯಾಪ್ಟನ್ ಮಂಜೀತ್ ಪಾಳ್ ಸಿಂಗ್, ಅಧ್ಯಕ್ಷ ಸುಖವಿಂದರ್ ಸಿಂಗ್ ಹಾಗೂ ಪ್ರಧಾನ ಕಾರ್ಯದರ್ಶಿ ಸುಖವಂತ್ ಸಿಂಗ್ ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಇಂಡಿ: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆಯ ಗೊಡೆ ಕುಸಿದು 4 ವರ್ಷದ ಮಗುವಿನ ಮೇಲೆ ಬಿದ್ದ ಪರಿಣಾಮ ಮಗು ಸಾವುನಪ್ಪಿರುವ ಘಟನೆ ತಾಲ್ಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ರಾಜು ಪತ್ತಾರ್ ಎಂಬುವರ ಮಗ ಸಮರ್ಥ ರಾಜು ಪತ್ತಾರ ವಯಸ್ಸು (೪) ಮೃತ ದುರ್ದೈವಿ.ಘಟನೆ ವಿವರ: ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಣ್ಣಿನ ಗೋಡೆ ಕುಸಿದು ಬಿದ್ದ ಪರಿಣಾಮ ದುರಂತ ಸಂಭವಿಸಿದೆ.ಗುರುವಾರ ಮಧಾಹ್ನ ಮಗು ತನ್ನ ಮನೆಯ ಎದುರು ಆಟ ಆಡುತ್ತಿರುವಾಗ ಎದುರು ಮನೆಯ ಗೊಡೆ ಕುಸಿದು ಮಗುವಿನ ಮೇಲೆ ಬಿದ್ದಿದೆ. ವಿಷಯ ತಿಳಿದ ತದನಂತರ ಗ್ರಾಮಸ್ಥರು ಆ ಮಗುವಿನ ಮೇಲೆ ಕುಸಿದ ಗೊಡೆಯ ಮಣ್ಣನ್ನು ತೆಗೆದು ಮಗುವಿನ ರಕ್ಷಣೆಗೆ ಪ್ರಯತ್ನ ಪಟ್ಟಿದ್ದಾರೆ. ಆದರೆ ಮಗುವಿನ ಉಸಿರಾಟ ತೊಂದರೆ ಇರುವುದರಿಂದ ಚಿಕಿತ್ಸೆಗಾಗಿ ವಿಜಯಪುರ ನಗರಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ ಎಂದು ಕುಟುಂಬದ ಪ್ರಾಥಮಿಕ ಮಾಹಿತಿಯಾಗಿದೆ.ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಗ್ರಾಮ ಆಡಳಿತ…
