Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸರ್ಕಾರದ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸಲು ವಾರ್ತಾ ಇಲಾಖೆಯಿಂದ ಬೀದಿನಾಟಕ-ಜಾನಪದ ಕಲಾ ತಂಡಗಳ ಆಯ್ಕೆ | ಸಹಾಯಕ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರ ಜಾರಿಗೊಳಿಸಿರುವ ಪಂಚಗ್ಯಾರಂಟಿ ಯೋಜನೆಗಳು ಹಾಗೂ ಸರ್ಕಾರದ ಜನಪ್ರಿಯ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಮತ್ತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಂಗಳವಾರ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಆವರಣದಲ್ಲಿ ವಾರ್ತಾ ಇಲಾಖೆಯಿಂದ ಬೀದಿ ನಾಟಕ ಹಾಗೂ ಜಾನಪದ ಕಲಾ ತಂಡಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಉದ್ದೇಶಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ಅವರು, ಸರ್ಕಾರದ ಪಂಚ ಗ್ಯಾರಂಟಿಗಳ ಯೋಜನೆ ಮತ್ತು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಹಾಗೂ ಮನವರಿಕೆ ಮಾಡಿಕೊಡುವಲ್ಲಿ ಬೀದಿ ನಾಟಕ ಹಾಗೂ ಜಾನಪದ ಕಲಾತಂಡಗಳ ಪಾತ್ರ ಬಹುಮುಖ್ಯವಾಗಿದೆ. ಸರ್ಕಾರ ಮತ್ತು ಸಾರ್ವಜನಿಕರ ಮಧ್ಯೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಇದರ ಭಾಗವಾಗಿಯೇ ವಿವಿಧ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕೋಟಾದಡಿ ೨೦೨೫-೨೬ನೇ ಸಾಲಿನ ವಿವಿಧ ಸ್ನಾತಕೋತ್ತರ ಅಧ್ಯಯನದ ಪ್ರವೇಶಾತಿ ಪ್ರಕ್ರಿಯೆಯು ಆಗಸ್ಟ್ ೧೨ ರಿಂದ ಆಗಸ್ಟ್ ೨೩ರವರೆಗೆ ಹಂತ ಹಂತವಾಗಿ ನಡೆಯಲಿವೆ. ವೇಳಾಪಟ್ಟಿಯ ಅನ್ವಯ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಿತಿತಿ.ಡಿಛಿub.ಚಿಛಿ.iಟಿ ವೆಬ್ಸೈಟ್ ಸಂಪರ್ಕಿಸಬಹುದಾಗಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಉಪಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೀನುಗಾರಿಕೆ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಜಿಲ್ಲಾ ವಲಯ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಸೌಲಭ್ಯ ಯೋಜನೆಯಡಿ ಬಾವಿ ಹಾಗೂ ಕೃಷಿ ಹೊಂಡ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ವಿಜಯಪುರ, ಬಬಲೇಶ್ವರ, ತಿಕೋಟಾ, ಸಿಂದಗಿ, ಚಡಚಣ, ಇಂಡಿ, ದೇವರಹಿಪ್ಪರಗಿ, ಆಲಮೇಲ ತಾಲೂಕಿನ ರೈತರು ಆಗಸ್ಟ್ ೨೦ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲೆ ಸಂಖ್ಯೆ: ೯೮೪೫೯೨೭೧೧೦ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿ ವತಿಯಿಂದ ೨೦೨೫-೨೬ನೇ ಸಾಲಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.೨೦೨೫ ಮೇ ೩೧ರ ಪೂರ್ವದಲ್ಲಿ ನೋಂದಾಯಿತವಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಸಹಾಯ ಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅಕ್ಟೋಬರ್ ೩೧ರೊಳಗಾಗಿ https://ssp.karnataka.gov.inವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿಜಯಪುರ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗುರು ಸಾರ್ವಭೌಮರ 354 ನೇ ಆರಾಧನಾ ಮಹೋತ್ಸವದ ಅಂಗವಾಗಿ ಇಲ್ಲಿನ ದಿವಟಗೇರಿ ಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿದ್ದ ಗುರು ರಾಯರ ಆರಾಧನಾ ಮಹೋತ್ಸವವು ಮಂಗಳವಾರ ಉತ್ತಾರಾರಾಧನೆ ಮೂಲಕ ಸಂಪನ್ನಗೊಂಡಿತು.ಬೆಳಗ್ಗೆ ಸುಪ್ರಭಾತ, ವಿವಿಧ ಅರ್ಚಕರ ನೇತೃತ್ವದಲ್ಲಿ ರಥಾಂಗ ಹವನ, ಶ್ರೀಹರಿ-ವಾಯುಸ್ತುತಿ ಪುನಶ್ಚರಣ, ಶ್ರೀಗುರುಸ್ತೋತ್ರ ಅಷ್ಟೋತ್ತರ ಶತಃಪಠಣಪೂರ್ವಕ ಶ್ರೀಗುರುಸಾರ್ವಭೌಮರಿಗೆ 108 ಕಲಶದಿಂದ ವಿವಿಧ ಹಣ್ಣು ಹಂಪಲಗಳ ಕ್ಷೀರಾಭಿಷೇಕ ಹಾಗೂ ಮಹಾಪಂಚಾಮೃತಾಭಿಷೇಕ ನೆರವೇರಿಸಲಾಯಿತು.ನಂತರ ಶ್ರೀಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ ಸೇವೆ ಜತೆಗೆ ವಿವಿಧ ಫಲ ಪುಷ್ಪಗಳಿಂದ ಅಲಂಕರಿಸಿದ ರಜತ ರಥೋತ್ಸವ ಸಂಭ್ರಮದಿಂದ ನಡೆಯಿತು. ವಿವಿಧ ಭಜನಾ ತಂಡಗಳು ಗುರು ರಾಯರ ಸ್ಮರಣೆಯ ಹಾಡುಗಳನ್ನು ಹಾಡಿದರು. ಬಡಾವಣೆಯ ಮಹಿಳೆಯರು ಸಾಂಪ್ರಾದಾಯಿಕ ಉಡುಗೆಯಲ್ಲಿ ಕೋಲಾಟ ಆಡಿ ಗಮನ ಸೆಳೆದರು.ಆರಾಧನಾ ಮಹೋತ್ಸವದ ಕೊನೆಯ ದಿನದ ಹಿನ್ನೆಲೆಯಲ್ಲಿ ಅಪಾರ ಭಕ್ತರು ಶ್ರೀಮಠಕ್ಕೆ ಭೇಟಿ ನೀಡಿ ಗುರು ರಾಯರ ದರ್ಶನ ಪಡೆದು ಪುನೀತರಾದರು.ಗಣ್ಯರಾದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ನೂತನ ಮೇಯರ್ ಎಂ.ಎಸ್.…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ ಜಾಗತಿಕ ಜಿನಿವಾ ಸಮಾವೇಶ ದಿನಾಚರಣೆಯಲ್ಲಿ ಪ್ರೊ.ಎಸ್.ಪ್ರದೀಪ್ ಕುಮಾರ್ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿನೀವಾ ಒಪ್ಪಂದಗಳು ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಹೃದಯವಾಗಿದ್ದು, ಸಶಸ್ತ್ರ ಸಂಘರ್ಷಗಳ ನಡವಳಿಕೆಯನ್ನು ನಿಯಂತ್ರಿಸಿ, ಅದರ ಪರಿಣಾಮಗಳನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತವೆ ಎಂದು ಅಂಜುಮನ್ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ಎಸ್.ಪ್ರದೀಪ್ ಕುಮಾರ್ ಹೇಳಿದರು.ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಮತ್ತು ರೆಡ್ ಕ್ರಾಸ್ ಸೆಲ್ ಸಹಯೋಗದಲ್ಲಿ ಮಂಗಳವಾರ ದಿನಾಂಕ ೧೨-೮-೨೦೨೫ ರಂದು ಅಯೋಜಿಸಲಾದ ಜಾಗತಿಕ ಜಿನಿವಾ ಸಮಾವೇಶ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತಾಡಿದ ಅವರು ವಿಶ್ವ ಜಿನೀವಾ ಒಪ್ಪಂದ ದಿನವನ್ನು ಪ್ರತಿವರ್ಷ ಆಗಸ್ಟ್ ೧೨ ರಂದು ಆಚರಿಸಲಾಗುತ್ತದೆ. ಇದು ೧೯೪೯ರಲ್ಲಿ ಅಂಗೀಕರಿಸಲ್ಪಟ್ಟ ಜಿನೀವಾ ಒಪ್ಪಂದಗಳ ವಾರ್ಷಿಕೋತ್ಸವವನ್ನು ಗುರುತಿಸುತ್ತದೆ. ಇವು ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಮೂಲಭೂತ ಒಪ್ಪಂದಗಳಾಗಿದ್ದು, ಸಶಸ್ತ್ರ ಸಂಘರ್ಷದ ಸಮಯದಲ್ಲಿ ಹೋರಾಟದಲ್ಲಿ ಭಾಗವಹಿಸದ ಜನರನ್ನು ರಕ್ಷಿಸುವ ಉದ್ದೇಶ ಹೊಂದಿವೆ…
ಉದಯರಶ್ಮಿ ದಿನಪತ್ರಿಕೆ ನಾನು ಧಾರವಾಡ ಕರ್ನಾಟಕ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಯಾಗಿದ್ದಾಗ ಐಚ್ಚಿಕ ಹಿಂದಿ ವಿಷಯವನ್ನು ತೆಗೆದು ಕೊಂಡಿದ್ದರೂ ನನ್ನ ಸಾಹಿತಿಕ ಅಭಿರುಚಿ ಗುರುತಿಸಿ ಬರೆಯಲು ಬೆನ್ನು ತಟ್ಟಿದ ನನ್ನ ಗುರುಗಳು. ಅವರೊಬ್ಬ ಭವ್ಯ ಮಾನವ ವಿದ್ಯಾರ್ಥಿಗಳನ್ನು ಅತಿಯಾಗಿ ಪ್ರೀತಿಸಿ ಪ್ರೋತ್ಸಾಹಿಸಿದ ಶಿಸ್ತಿನ ಶಿಪಾಯಿ. ಮೃತರ ಕುಟುಂಬಕ್ಕೆ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಪುಣೆ ರಾಮದುರ್ಗದ ವತಿಯಿಂದ ಭಕ್ತಿಪೂರ್ವಕ ಶೋಕದ ನಮನಗಳು.- ಡಾ ಶಶಿಕಾಂತ ಪಟ್ಟಣರಾಮದುರ್ಗ ಗುರುವಿಗೆ ಕಂಬನಿ ಕರುನಾಡ ನೆಲದಲ್ಲಿಹುಲುಸು ಧಾರವಾಡದ ಪುರವುಕರ್ನಾಟಕ ಕಾಲೇಜಿನಲ್ಲಿಇದ್ದರೊಬ್ಬರು ಗುರು ಇಲ್ಲದಂತೆಅತಿ ಶಿಸ್ತಿನ ಶಿಕ್ಷಕಸಮಯ ಪಾಲಕಗಂಭೀರ ನಡೆ ಸೌಮ್ಯ ನುಡಿಪಾಠ ಮಾಡುವ ಕಾರ್ಯಜಪ ತಪ ಪೂಜೆಮಂದಹಾಸದ ನಗೆವಿದ್ಯಾರ್ಥಿಗಳ ಚಿಲುಮೆಬರಹ ಓದು ಕವನನಾಟಕಗಳ ಗೀಳುಅದೆಷ್ಟೋ ಮಕ್ಕಳಿಗೆ ಮಾರ್ಗದರ್ಶಿಸ್ನೇಹ ಸಮತೆಯ ಪ್ರೇಮದರ್ಶಿಚೆಲುವಾಯಿತು ಕನ್ನಡವುಗೋಕಾಕ ಚಳುವಳಿಯುವಿದ್ಯಾವರ್ಧಕ ಭವನದಹೊನ್ನ ಗುಡಿಯುಭರತೇಶನ ಭೋಗವೈಭವಕಾವ್ಯ ಕುಸುಮವು ನಿಮಗೆಯಾರಿಲ್ಲದ ಹಾದಿಯಲಿಸದ್ದಿಲ್ಲದೇ ಹೋದಿರಿಬಿಕ್ಕುತಿಹೆವು ನಾವುನಿಮ್ಮ ಕರುಣೆ ಕುಡಿಗಳುಹೋಗಿ ಬನ್ನಿರಿ ಗುರುಗಳೇನಿಮಗಿಂದು ವಿದಾಯನಾನು ಏಕಲವ್ಯನಾದೆ ಗುರುವೇಆಗಲಿಲ್ಲ ನೀವು ದ್ರೋಣರುನಿಮ್ಮ ನೆನಪಿನಲಿ ನಡೆಯುವೆವುಬಿ ವಿ ಗುಂಜೇಟ್ಟಿಯವರೇನಿಮಗೆ ನಮ್ಮ ಶೋಕದನೋವಿನ…
ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶಕ್ಕೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಮಾಡಿದ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಒಪ್ಪಿಗೆ ನೀಡಿದ್ದಾರೆ.ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ ಅಧಿವೇಶನದಲ್ಲಿ ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಲಿಖಿತ ಉತ್ತರ ನೀಡಿದ್ದರು. ಈ ಉತ್ತರಕ್ಕೆ ತೃಪ್ತರಾಗದ ಶಾಸಕರು, ಕೇರಳ, ಹರಿಯಾಣ, ತಮಿಳನಾಡು, ತೆಲಗಾಂಣ ಹಾಗೂ ಮದ್ಯಪ್ರದೇಶ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನೀಡಲಾಗುತ್ತಿರುವ ಗೌರವಧನ ಅತೀ ಕಡಿಮೆ ಇದೆ. ಬೆಲೆ ಏರಿಕೆಯ ಈ ದಿನಗಳಲ್ಲಿ ಸಚಿವರು, ಶಾಸಕರು ಹಾಗೂ ಸರಕಾರಿ ನೌಕರರ ವೇತನ ಹೆಚ್ಚಿಸಲಾಗಿದೆ. ಆದರೆ, ನಗರಸಭೆ, ಪುರಸಭೆ, ಪಟ್ಟಣ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಮಂಗಳವಾರ ಹರ್ ಘರ್ ತಿರಂಗಾ ರ್ಯಾಲಿ ನಡೆಯಿತು.ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು ತಿರಂಗಾ ರ್ಯಾಲಿಗೆ ಚಾಲನೆ ನೀಡಿದರು.ಈ ರ್ಯಾಲಿಯು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಮುಂಭಾಗದ ಸೋಲಾಪೂರ ರಸ್ತೆಯಿಂದ 770 ಲಿಂಗದ ದೇವಸ್ಥಾನ, ಸಂಗನಬಸವ ಕಲ್ಯಾಣ ಮಂಟಪ ಮಾರ್ಗವಾಗಿ ಬಿ.ಎಲ್.ಡಿ.ಇ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಏನ್.ಆರ್.ಐ ಹಾಸ್ಟೇಲ್ ಮಾರ್ಗವಾಗಿ ಮರಳಿ ವಿಶ್ವವಿದ್ಯಾಲಯದಲ್ಲಿ ಮುಕ್ತಾಯವಾಯಿತು.ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿಗಳು, ಸ್ಕೂಲ್ ಆಫ್ ಅಲೈಡ್ ಹೆಲ್ತ್ ಸಾಯಿನ್ಸಸ್, ಭೌತಚಿಕಿತ್ಸೆ ಶಾಲೆ ಹಾಗೂ ಕಾನೂನು ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
ಉದಯರಶ್ಮಿ ದಿನಪತ್ರಿಕೆ ಚಡಚಣ: ಸ್ಥಳೀಯ ಶ್ರೀ ಸಂಗಮೇಶ್ವರ ಬಾಲಕ, ಬಾಲಕಿಯರ ಮಾಧ್ಯಮಿಕ ಶಾಲೆಯಲ್ಲಿ ರಕ್ಷಾ ಬಂಧನದ ಹಬ್ಬವನ್ನು ಗಿಡಗಳಿಗೆ ರಾಖಿ ಕಟ್ಟುವುದರ ಮೂಲಕ ವಿಶೇಷವಾಗಿ ಆಚರಿಸಲಾಯಿತು.ಇದೆ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಗುರು ಎಚ್ ಆರ್ ಬಗಲಿ, ಪ್ರತಿಯೊಬ್ಬ ಸಹೋದರ ಸಹೋದರಿಯರು ಇದೆ ರೀತಿ ಒಂದೊಂದು ಗಿಡಗಳಿಗೆ ರಾಖಿ ಕಟ್ಟಿ ದತ್ತು ತೆಗೆದುಕೊಂಡು ಸರಿಯಾಗಿ ಬೆಳೆಸಿದರೆ, ಪರಿಸರ ಸಂರಕ್ಷಣೆ ಆಗುತ್ತದೆ ಅಲ್ಲದೆ ಮಾಲಿನ್ಯ ನಿಯಂತ್ರಣ ಸಹ ಆಗುತ್ತದೆ. ಇಂತಹ ಕಾರ್ಯಕ್ರಮಗಳು ನಡೆದರೆ ಪ್ರತಿಯೊಬ್ಬರಿಗೂ ಪರಿಸರ ಸಂರಕ್ಷಣೆಯ ಅರಿವು ಮೂಡುತ್ತದೆ. ರಾಖಿ ಕಟ್ಟಿದ ಸಹೋದರಿಯ ಸಂರಕ್ಷಣೆಯ ಜವಾಬ್ದಾರಿ ಸಹೋದರ ಹೇಗೆ ತೆಗೆದುಕೊಳ್ಳುತ್ತಾನೆ ಹಾಗೆ ಗಿಡಗಳಿಗೆ ರಾಖಿ ಕಟ್ಟಿ ಅವುಗಳ ಸಂರಕ್ಷಣೆ ಹೊಣೆಯನ್ನು ಪ್ರತಿಯೊಬ್ಬರೂ ತೆಗೆದುಕೊಳ್ಳಬೇಕು ಅಂದಾಗ ಮಾತ್ರ ನಮ್ಮ ಪರಿಸರ ಸಂರಕ್ಷಣೆಯೂ ಆಗುತ್ತದೆ ಮತ್ತು ಮಾಲಿನ್ಯ ಆಗುವುದಿಲ್ಲ ಅಲ್ಲದೆ ಮಳೆಯೂ ಚೆನ್ನಾಗಿ ಆಗುತ್ತದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಶಿವಶರಣ ನೂಲಿಚೆಂದಯ್ಯನವರ ಜನ್ಮದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ನೂಲಿ ಚೆಂದಯ್ಯನವರ ಕುರಿತು ಅನೇಕ ಮಕ್ಕಳು ಮಾತನಾಡಿದರು.ಸಹ ಶಿಕ್ಷಕ ಎಸ್…
