Subscribe to Updates
Get the latest creative news from FooBar about art, design and business.
Author: editor.udayarashmi@gmail.com
“ಸ್ವಸ್ತ ನಾರಿ ಸಶಕ್ತ ಪರಿವಾರ” ಅಭಿಯಾನಕ್ಕೆ ಚಾಲನೆ ನೀಡಿದ ಸಂಸದ ರಮೇಶ ಜಿಗಜಿಣಗಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಅನೇಕ ಜನಪರ ಅಭಿವೃದ್ಧಿ ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿವೆ. ಇಂದು ದೇಶ ಹಾಗೂ ರಾಜ್ಯಾದ್ಯಂತ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನವನ್ನು ೦೨-೧೦-೨೦೨೫ರ ವರೆಗೆ ಹಮ್ಮಿಕೊಳ್ಳಲಾಗಿದ್ದು. ಸಮುದಾಯದ ಅಭಿವೃದ್ಧಿಯ ಸಂಕಲ್ಪವನ್ನು ಹೊಂದಲಾಗಿರುತ್ತದೆ. ಮಹಿಳೆಯರು ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ “ಸ್ವಸ್ತ ನಾರಿ ಸಶಕ್ತ ಪರಿವಾರ “ಅಭಿಯಾನಕ್ಕೆ ಮಹಾನಗರ ಪಾಲಿಕೆಯ ಮಹಾಪೌರ ಎಮ್.ಎಸ್. ಕರಡಿಯವರೊಂದಿಗೆ ಜಂಟಿಯಾಗಿ ಚಾಲನೆ ನೀಡಿ ಅವರು ಮಾತನಾಡಿದರು.ಮಹಾನಗರ ಪಾಲಿಕೆಯ ಮಹಾಪೌರ ಮಡಿವಾಳಪ್ಪ ಕರಡಿ ಮಾತನಾಡಿ, ಸಮಾಜದ ಏಳಿಗೆಗಾಗಿ ಮಹಿಳೆಯರು ಸ್ವಾವಲಂಬಿ ಬದಕನ್ನು ಕಟ್ಟಿಕೊಳ್ಳಲು ಅವರು ಮಾನಸಿಕ, ದೈಹಿಕ, ಕೌಟಂಬಿಕ ಸಮಾಜಿಕವಾಗಿ ಆರೋಗ್ಯವಂತರಾಗಿ ಇರಲು ಈ ಅಭಿಯಾನದಲ್ಲಿ ನಡೆಯುವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಬ್ಲಾಕ್ ಕಾಂಗ್ರೆಸ್ ಪ.ಜಾ. ಘಟಕ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಕೊಪ್ಪಳದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಆರ್. ಪಾಟೀಲ (ಯತ್ನಾಳ) ರವರು ದಲಿತ ಮಹಿಳೆ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ.ಜಾ. ಘಟಕದ ಅಧ್ಯಕ್ಷ ರಮೇಶ ಗುಬ್ಬೇವಾಡ ಅವರು, ಮುಸ್ಲಿಂ ಹೆಣ್ಣುಮಕ್ಕಳು ಅಷ್ಟೇ ಅಲ್ಲ, ದಲಿತ ಹೆಣ್ಣುಮಕ್ಕಳು ಕೂಡ ಚಾಮುಂಡೇಶ್ವರಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ ಎನ್ನುವುದರ ಮುಖಾಂತರ ಸಾಸಕ ಯತ್ನಾಳ ದಲಿತ ಮಹಿಳೆಯನ್ನು ಅವಮಾನಿಸಿದ್ದಾರೆ. ಅಲ್ಲದೆ ಹಲವಾರು ಕಾರ್ಯಕ್ರಮಗಳಲ್ಲಿ ಅವರು ಮಾತನಾಡುವಾಗ ಹಿಂದುಗಳು ನಾವೆಲ್ಲರೂ ಒಂದು, ದಲಿತರು ಮತ್ತು ಹಿಂದುಳಿದವರು ಎಲ್ಲ ಜಾತಿ ಸಮುದಾಯದವರನ್ನು ಒಂದು ಎಂದು ಹೇಳುವ ತಾವು ದಲಿತರನ್ನು ಅವಮಾನಿಸಿ ಮಾತನಾಡಿರುವದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.ಮಹಾನಗರ ಪಾಲಿಕೆ ಸದಸ್ಯರಾದ ಆರತಿ ಶಹಾಪೂರ ಮಾತನಾಡಿ, ಎಲ್ಲ ಹೆಣ್ಣುಮಕ್ಕಳಿಗೆ ಸಮಾನವಾದ ಹಕ್ಕನ್ನು ನೀಡಿರುವ ಬಾಬಾಸಾಹೇಬ ಅಂಬೇಡ್ಕರ ಅವರ ಸಂವಿಧಾನವನ್ನು…
ಬೆಂಗಳೂರಿನ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ತೊರೆಯಲು ಸ್ವತಂತ್ರ | ಹೋಗೋರನ್ನ ತಡೆಯಲ್ಲ | ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಬೆಂಗಳೂರು: ಮಹಾನಗರದ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ತೊರೆಯಲು ಸ್ವತಂತ್ರವಾಗಿವೆ. ಆದರೆ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಸಂದರ್ಶನದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ‘ನಗರದ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್ ಗಡುವು ನೀಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.ಇದೇ ವೇಳೆ ಉದ್ಯಮಿಗಳ ಬೆಂಗಳೂರು ತೊರೆಯುವ ಟ್ವೀಟ್ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ‘ಬೆಂಗಳೂರಿನ ಬಗ್ಗೆ ತೃಪ್ತಿ ಇಲ್ಲವೆಂದು ಹೋಗೋರನ್ನ ತಡೆಯಲ್ಲ. ಆದರೆ, ಸರ್ಕಾರಕ್ಕೆ ಬೆದರಿಸಲು, ಬ್ಯಾಕ್ಮೇಲ್ ಮಾಡೋಕೆ ಬರಬೇಡಿ. ಕಂಪನಿಗಳು ತಮ್ಮ ಸ್ಥಳವನ್ನು ಬದಲಾಯಿಸುವ ನಿರ್ಧಾರವು ವ್ಯಾಪಾರ ಸಮಸ್ಯೆಗಳ ಕಾರಣದಿಂದಾಗಿರಬಹುದು.ಬೆಂಗಳೂರು ನೀಡುವ ಸೌಲಭ್ಯಗಳು ಮತ್ತು ಪ್ರತಿಭೆಗಳಿಂದ ತೃಪ್ತರಾಗದಿದ್ದರೆ ಯಾರಾದರೂ ಸ್ಥಳಾಂತರಗೊಳ್ಳಲು ಸ್ವತಂತ್ರರು. ಆದರೆ, ಅವರು ಸರ್ಕಾರವನ್ನು ಬೆದರಿಸಲು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಸುಕ್ಷೇತ್ರ ಜಾಯವಾಡಗಿ ಗ್ರಾಮದ ಶಿವಪ್ಪ ವ ಸೋಮನಾಥ ಮುತ್ಯಾನ ದೇವಸ್ಥಾನದ ಹಿಂಭಾಗದಲ್ಲಿದ್ದ 100 ವರ್ಷದ ಬೃಹತ್ ಆಲದ ಮರ ಬುಧವಾರ ಬೆಳಗ್ಗೆ ಧರೆಗೆ ಉರುಳಿತು. ಆಲದ ಮರವು ತಾನಾಗಿಯೆ ಸಾವಕಾಶವಾಗಿ ಯಾವ ಜೀವಿಗೂ ಹಾಗೂ ಯಾವ ವಸ್ತುವಿಗೂ ಹಾನಿಯಾಗದಂತೆ ಧರೆಗೆ ಉರುಳಿದೆ. ಶಿವಪ್ಪ ಮತ್ತು ಸೋಮನಾಥ ಮುತ್ತ್ಯಾ ಅವರ ಶಕ್ತಿ ಒಂದು ಪವಾಡದಿಂದ ಯಾರಿಗೂ ಹಾನಿಯಾಗಿಲ್ಲ.ಸದ್ಭಕ್ತರು ಆ ದೇವರ ಮೇಲೆ ಇಟ್ಟಿರುವ ಅಪಾರವಾದ ಭಕ್ತಿ ನಿಜವಾಗಿ ಇಲ್ಲಿ ಕಾಣಬಗುದಾಗಿದೆ. ಸುಮಾರು 100 ವರ್ಷಗಳ ಹಳೆಯದಾದ ಆಲದ ಮರವು ಎಲ್ಲರಿಗೂ ನೆರಳು ಕೊಟ್ಟು ಎಲ್ಲರಿಗೂ ಬೇಕಾಗಿ ಯಾವದಕ್ಕೂ ಹಾನಿ ಮಾಡದೆ ಒಬ್ಬ ಶರಣರ ಆಯಸ್ಸು ಮುಗಿದಂತೆ ಆ ಮರದ ಆಯಸ್ಸು ಮುಗಿದು ಧರೆಗೆ ಉರುಳಿದೆ. ಅದೇ ಸ್ಥಾನದಲ್ಲಿ ಬರುವ ದಿನಗಳಲ್ಲಿ ಮತ್ತೊಂದು ಮರವು ಉದ್ಭವಿಸಲಿ ಬೆಳೆಯುವಂತಾಗಲೆಂದು ಜಾಯವಾಡಗಿ, ಹರಸೂರಿನ ಕರಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮತ್ತು ಸೋಮನಾಥ, ಶಿವಪ್ಪ ಮುತ್ತ್ಯಾ ಅವರ ಟ್ರಸ್ಟ್ ಕಮಿಟಿ ಪದಾಧಿಕಾರಿಗಳು ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಡಾ.ಅಂಬೇಡ್ಕರ್ ಉದ್ಯಾನವನದಲ್ಲಿ ಬುಧವಾರ ಪುರಸಭೆ ಹಮ್ಮಿಕೊಂಡಿದ್ದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಂಗವಾಗಿ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು,ಮುಖ್ಯಾಧಿಕಾರಿ, ಸದಸ್ಯರು, ಸಿಬ್ಬಂದಿ ಶ್ರಮದಾನ ಮಾಡಿದರು.ಜನ ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲ ಪಡಿಸುವ ನಿಟ್ಟಿನಲ್ಲಿ ದೇಶದೆಲ್ಲೆಡೆ ಆಚರಿಸಲಾಗುತ್ತಿರುವ ಸೆ.17 ರಿಂದ ಅಕ್ಟೋಬರ್ 2 ರ ವರೆಗಿನ 15 ದಿನಗಳ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಪುರಸಭೆಯಿಂದ ಚಾಲನೆ ನೀಡಲಾಯಿತು.ಪಟ್ಟಣದ ಸ್ವಚ್ಛತೆಗೆ ಪಣ ತೊಟ್ಟು, ಶಾಲಾ ಕಾಲೇಜು, ದೇವಾಲಯ ಆವರಣಗಳು ಹಾಗೂ ರಸ್ತೆಗಳನ್ನು ಸ್ವಚ್ಛಗೊಳಿಸುವ ಜೊತೆಗೆ ಪ್ರತಿಯೊಬ್ಬರು ಸ್ವಚ್ಛತೆಯ ಅಭಿಯಾನದಲ್ಲಿ ಸ್ವಯಂ ಪ್ರೇರಿತರಾಗಿ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡು ಸಂಪೂರ್ಣ ಕಸಮುಕ್ತ ಹಾಗೂ ಸ್ವಚ್ಛ ಬಸವನಬಾಗೇವಾಡಿ ಪಟ್ಟಣವನ್ನಾಗಿ ಬದಲಾಯಿಸಲು ಶ್ರಮಿಸಬೇಕೆಂದು ತಿಳಿಸಲಾಯಿತು.ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಉಪಾಧ್ಯಕ್ಷ ಅಶೋಕ ಹಾರಿವಾಳ, ಮುಖ್ಯಾಧಿಕಾರಿ ವಿದ್ಯಾಧರ ಕಲಾದಗಿ ಸೇರಿದಂತೆ ಮಾಜಿ, ಹಾಲಿ ಸದಸ್ಯರು ಹಾಗೂ ಮುಖಂಡರುಗಳು, ಪೌರ ಕಾರ್ಮಿಕರು, ಸಿಬ್ಬಂದಿಗಳು ಇದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿಎಲ್ಡಿಇ ಸಂಸ್ಥೆಯ ಎಸ್ಬಿ ಕಲಾ ಮತ್ತು ಕೆ.ಸಿ.ಪಿ. ವಿಜ್ಞಾನ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಅರ್ಥಶಾಸ್ತ್ರ ವಿಭಾಗದಿಂದ ಬುಧವಾರದಂದು ವಿಜಯಪುರದ ಎಪಿಎಂಸಿ ಕೃಷಿ ಮಾರುಕಟ್ಟೆಗೆ ಕ್ಷೇತ್ರ ಭೇಟಿಯನ್ನು ಆಯೋಜಿಸಿತ್ತು.ಈ ವೇಳೆಯಲ್ಲಿ ಕೃಷಿ ಮಾರುಕಟ್ಟೆಗಳ ಕಾರ್ಯವೈಖರಿ ಮತ್ತು ಮಾರುಕಟ್ಟೆ ಪದ್ಧತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ನೀಡಲಾಯಿತು.ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಕಾರ್ಯವೈಖರಿ, ಹರಾಜು, ಬೆಲೆ ನಿಗದಿ, ತೂಕ, ಶ್ರೇಣೀಕರಣ ಮತ್ತು ಕಮಿಷನ್ ಏಜೆಂಟ್ಗಳ ಪಾತ್ರ ಸೇರಿವೆ. ರೈತರಿಗೆ ನ್ಯಾಯಯುತ ಬೆಲೆಗಳನ್ನು ಖಚಿತಪಡಿಸಿಕೊಳ್ಳುವಲ್ಲಿ, ಮಧ್ಯವರ್ತಿಗಳಿಂದ ಶೋಷಣೆಯನ್ನು ಕಡಿಮೆ ಮಾಡುವಲ್ಲಿ ಮತ್ತು ಕೃಷಿ ವ್ಯಾಪಾರದಲ್ಲಿ ಪಾರದರ್ಶಕತೆಯನ್ನು ಉತ್ತೇಜಿಸುವಲ್ಲಿ ನಿಯಂತ್ರಿತ ಮಾರುಕಟ್ಟೆಗಳ ಮಹತ್ವವನ್ನು ಮಾರುಕಟ್ಟೆಯಲ್ಲಿರುವ ಸಂಪನ್ಮೂಲ ವ್ಯಕ್ತಿಗಳು ವಿವರಿಸಿದರು.ಈ ಭೇಟಿಯು ವಿದ್ಯಾರ್ಥಿಗಳಲ್ಲಿ ಸೈದ್ಧಾಂತಿಕ ಜ್ಞಾನ ಮತ್ತು ಪ್ರಾಯೋಗಿಕ ತಿಳುವಳಿಕೆಯ ನಡುವಿನ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡಿತು. ಇದು ಕೃಷಿ ಮಾರುಕಟ್ಟೆ ವ್ಯವಸ್ಥೆಗಳು, ನೀತಿಗಳು ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ APMC ಗಳ ಪಾತ್ರದ ಬಗ್ಗೆ ಅವರ ಅರಿವನ್ನು ಮೂಡಿಸಲಾಯಿತು.ಈ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತರ್ ರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ವಿಜಯಪುರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ದಿ.26 ಶುಕ್ರವಾರ ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ.2024 ಮತ್ತು 2025 ನೇ ಶೈಕ್ಷಣಿಕ ವರ್ಷದಲ್ಲಿ ಬಿ.ಇ ಮತ್ತು ಡಿಪ್ಲೋಮಾ ಪದವಿಯ ಮೆಕ್ಯಾನಿಕಲ್, ಇಲೇಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ಮತ್ತು ಇಲೇಕ್ಟ್ರಾನಿಕ್ಸ್ ಇಲೆಕ್ಟ್ರೀಕಲ್ಸ್ ವಿಭಾಗಗಳಲ್ಲಿ ತೇರ್ಗಡೆ ಹೊಂದಿರುವ ವಿಜಯಪುರ ಹಾಗೂ ಸುತ್ತಲಿನ ಪ್ರದೇಶಗಳ ಎಲ್ಲ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡು, ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.ಅಂತರ್ ರಾಷ್ಟ್ರೀಯ ಬೃಹತ್ ಸಂಸ್ಥೆಯಾಗಿರುವ ಫಾಕ್ಸ್ ಕಾನ್ ಜಗತ್ತಿನಲ್ಲಿಯೇ ಐಪೋನ್ ತಯಾರಿಕೆಯಲ್ಲಿ ಅಗ್ರಗಣ್ಯ ಸಂಸ್ಥೆಯಾಗಿದ್ದು, ಬೆಂಗಳೂರಿನ ದೇವನಹಳ್ಳಿಯಲ್ಲಿ ನೂತನ ಬೃಹತ್ ತಯಾರಿಕಾ ಘಟಕ ಕಾರ್ಯಾರಂಭ ಮಾಡುತ್ತಿರುವ ಹಿನ್ನೆಲೆಯಲ್ಲಿ, ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರವರು, ಫಾಕ್ಸ್ ಕಾನ್ ಆಡಳಿತ ಮಂಡಳಿಗೆ ವಿಜಯಪುರ ಹಾಗೂ ಸುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ತಮ್ಮ ಕಂಪನಿಯಲ್ಲಿ ಹೆಚ್ಚಿನ ಅವಕಾಶ ನೀಡಬೇಕು…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಭೀಮಾ ನದಿಯ ನದಿ ಪಾತ್ರದ ಭಾಗದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಹಾಗೂ ಕರ್ನಾಟಕದಲ್ಲಿಯೂ ಕೂಡ ಎಡಬಿಡದೆ ಸುರಿಯುತ್ತಿರುವ ಮಳೆಯ ಪರಿಣಾಮ ಬೀಮ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಮತ್ತಷ್ಟು ಹೆಚ್ಚಳವಾಗಿದೆಈಗಾಗಲೇ ಉಜನಿ ಜಲಾಶಯದಿಂದ ಬಿಟ್ಟಿರುವ 1 ಲಕ್ಷ ಕ್ಯೂಸೆಕ್ ನೀರು ನದಿ ಅಫ್ಜಲಪುರ ಭಾಗಕ್ಕೆ ಹರಿದು ಬಂದಿದ್ದು ಅಲ್ಲದೇ ಅಫ್ಜಲಪುರ ತಾಲ್ಲೂಕಿನಲ್ಲಿ ಭೀಮಾ ನದಿಗೆ ಸೇರುವ ಬೋರಿ ಹಳ್ಳಕ್ಕೂ ಕೂಡ ಅಪಾರ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಅಲ್ಲದೇ ವಿಜಯಪುರ ಜಿಲ್ಲೆಯ ಆಲಮೇಲ, ಸಿಂದಗಿ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಲೂ ಕೂಡ ಭೀಮಾನದಲ್ಲಿ ನೀರು ಹೆಚ್ಚಳವಾಗುವುದಕ್ಕೆ ಕಾರಣವಾಗಿದೆದೇವಣಗಾಂವ ಸಮೀಪ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೊನ್ನ ಬ್ಯಾರೇಜ್ ಗೆ ಒಟ್ಟು 1 ಲಕ್ಷ 60 ಸಾವಿರ ಒಳ ಹರಿವು ಹಾಗೂ 1ಲಕ್ಷ 70 ಸಾವಿರ ಹೊರಹರಿವು ಇದೆ ಎಂದು ಅಫಜಲಪುರದ ಕೆ ಎನ್ ಎನ್ ಎಲ್ ಇ ಇ ಶಿವಕುಮಾರ ಸ್ವಾಮಿ ತಿಳಿಸಿದ್ದಾರೆಈಗಾಗಲೇ ಅಫಜಲಪುರ ತಾಲೂಕಿನ ಮಣ್ಣೂರು…
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಸಿಮೆಂಟ ತುಂಬಿಕೊಂಡು ಹೊರಟ್ಟಿದ್ದ ಲಾರಿ, ಕಂಕರ ತುಂಬಿಕೊಂಡು ಹೊರಟಿದ್ದ ಟಿಪ್ಪರ್ಗೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನ ಕಾಲು ಕಟ್ ಆಗಿರುವ ಘಟನೆ ತಾಲೂಕಿನ ಗೊಬ್ಬೂರ ವಾಡಿ ಕ್ರಾಸ್ ಬಳಿ ನಡೆದಿದೆ.ಅಪಘಾತದಲ್ಲಿ ಲಾರಿ ಚಾಲಕ ಜೇವರ್ಗಿ ತಾಲೂಕಿನ ಹರವಾಳ ಗ್ರಾಮದ ಶರಣಬಸಪ್ಪ ಸಾಯಬಣ್ಣ ತಳವಾರ(೨೮) ಎಂಬಾತನ ಕಾಲು ಮುರಿದಿದ್ದು ಸ್ಥಳಕ್ಕೆ ದೇವಲ ಗಾಣಗಾಪೂರ ಠಾಣೆ ಪಿಎಸ್ಐ ಸಂಗೀತಾ ಸಿಂಧೆ ಹಾಗೂ ಸಿಬ್ಬಂದಿಗಳಾದ ಸಂಗಣ್ಣ ತಳವಾರ, ಹೈವೆ ಪೆಟ್ರೊಲಿಂಗ್ ಎಎಸ್ಐ ಹಣಮಂತ ಚವಾಣ, ಎಚ್ಸಿಪಿ ಅವ್ವಣ್ಣಗೌಡ, ೧೧೨ ಸಿಬ್ಬಂದಿ ಬೀರಣ್ಣ, ಸಂತೋಷ ಬಿರಾದಾರ ಬಂದು ಗಾಯಗೊಂಡು ನರಳುತ್ತಿದ್ದ ಚಾಲಕನನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ದೇವಲ ಗಾಣಗಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮಹಾರಾಷ್ಟçದ ವೀರ, ಶೀನಾ, ಉಜನಿ ಜಲಾಶಯಗಳಿಂದ ಹಾಗೂ ತಾಲೂಕಿನ ಭೋರಿ ಹಳ್ಳದಿಂದ ಹರಿದು ಭೀಮಾ ನದಿ ಸೇರಿದ ನೀರಿನಿಂದ ೧ ಲಕ್ಷ ೬೦ ಸಾವಿರ ಕ್ಯೂಸೇಕ್ ನೀರು ಹರಿದು ಬಂದಿದೆ ಎಂದು ಕೆಎನ್ಎನ್ಎಲ್ ಎಇಇ ಸಂತೋಷಕುಮಾರ ಸಜ್ಜನ್ ಮಾಹಿತಿ ನೀಡಿದ್ದಾರೆ.ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾರಿ ಪ್ರಮಾಣದ ನೀರು ನದಿಗೆ ಹರಿದು ಬಂದ ಪ್ರಯುಕ್ತ ಬ್ಯಾರೇಜ್ನ ಗೇಟ್ಗಳ ಮೂಲಕ ನೀರು ಹೊರಗಡೆ ಬಿಡಲಾಗುತ್ತಿದೆ. ಇದರಿಂದ ದೇವಲ ಗಾಣಗಾಪೂರ, ಘತ್ತರಗಾ ಹಾಗೂ ಚಿನಮಳ್ಳಿ ಬ್ಯಾರೆಜ್ಗಳು ಮುಳುಗಡೆಯಾಗಿದ್ದು ಸಾರ್ವಜನಿಕರು ನದಿ ಹತ್ತಿರಕ್ಕೆ ಹೋಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
