Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಜಮಖಂಡಿಯಲ್ಲಿ ಉದ್ಯೋಗ ಭರವಸಾ ಕೋಶ, ಐಕ್ಯೂಎಸಿ. ಮ್ಯಾಗ್ನೆಸ್ ಇಂಟರ್‌ನ್ಯಾಶನಲ್ ಪ್ರೈವೇಟ್ ಲಿಮಿಟೆಡ್ ಹಾಗೂ ಪೋರ್ಟಲ್ ಹೆಚ್.ಆರ್. ಕನ್ಸಲನ್ಸಿ ಸರ್ವಿಸಸ್ ಇವರ ಸಹಯೋಗದೊಂದಿಗೆ “ಕ್ಯಾಂಪಸ್ ಸಂದರ್ಶನ” ಅನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮ್ಯಾಗ್ನೆಸ್ ಇಂಟರ್‌ನ್ಯಾಶನಲ್ ಪ್ರೈವೇಟ್ ಲಿಮಿಟೆಡ್ ಹೆಚ್.ಆರ್. ಸುಹಾಸ ಜೆ. ಇವರು ಮಾತನಾಡುತ್ತಾ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿ, ಸಂದರ್ಶನದಲ್ಲಿ ಯಶಸ್ವಿಯಾಗಲು ಅಗತ್ಯವಾದ ಕೌಶಲ್ಯಗಳು, ಆತ್ಮವಿಶ್ವಾಸ, ಸಂವಹನ ಕೌಶಲ್ಯ ಹಾಗೂ ವ್ಯಕ್ತಿತ್ವ ವಿಕಾಸದ ಮಹತ್ವವನ್ನು ವಿವರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸುನಂದಾ ಎಸ್. ಶಿರೂರ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂತಹ ಕ್ಯಾಂಪಸ್ ಸಂದರ್ಶನ (ಡ್ರೈವ್) ಗಳು ವಿದ್ಯಾರ್ಥಿನಿಯರಿಗೆ ಉತ್ತಮ ಉದ್ಯೋಗಾವಕಾಶಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದೊಂದಿಗೆ ಕೌಶಲ್ಯಾಭಿವೃದ್ಧಿಯ ಮೇಲೂ ಗಮನಹರಿಸಿ, ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದು ಪ್ರೇರೇಪಿಸಿದರು. ಪದವಿ ಮುಗಿಸಿದ ನಂತರ ತಮ್ಮ…

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಕನ್ನಡ ಸಾಹಿತ್ಯ ಪರಿಷತ್ತಿನ 112 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯನ್ನು ಪಟ್ಟಣದ ಕನ್ನಡ ಭವನದಲ್ಲಿ ಆಚರಣೆ‌ ಮಾಡಲಾಯಿತು.ಬಳಿಕ ಮಾಜಿ ಕಸಾಪ ತಾಲೂಧ್ಯಕ್ಷ ಡಿ.ಎಂ.ನದಾಫ್ ಮಾತನಾಡಿ, ಕನ್ನಡ ಸಾಹಿತದಯ ಪರಿಷತ್ತು ಕನ್ನಡ ನಾಡಿನ ಹೆಮ್ಮೆಯ ಸಂಸ್ಥೆಯಾಗಿದೆ. ಪರಿಷತ್ತಿನ ಧ್ಯೇಯಧೋರಣೆಯನ್ನು ಸಕಾರಗೊಳಿಸುವಲ್ಲಿ ಎಲ್ಲರೂ ಶ್ರಮಿಸಬೇಕು.ಆಗಾಗ ದತ್ತಿ ಉಪನ್ಯಾಸಗಳು ನಡೆಯುತ್ತಿರಬೇಕು ಎಂದರು.ಹಿರಿಯ ಮಹಿಳಾ ಲೇಖಕಿ ಅನುಮಪಾ ಅಪಗೊಂಡೆ ಮಾತನಾಡಿ ಯುವ ಜನಾಂಗ ಓದುವ ಹವ್ಯಾಸ ಹೆಚ್ಚಿಸಿಕೊಳ್ಳಬೇಕು ಎಂದರು.ಹಿರಿಯ ಸಾಹಿತಿ ಮುನೀರ್ ಪಟೇಲ್ ಮಾತನಾಡಿ ತಾಲೂಕಿನ ಹಿರಿಯ ಸಾಹಿತಿಗಳನ್ನು ಗುರುತಿಸಿ‌ ಸನ್ಮಾನಿಸಿರುವುದು ಖುಷಿ ತಂದಿದೆ ಎಂದರು.ಮಾಜಿ ಕಸಾಪ ತಾಲೂಕಾಧ್ಯಕ್ಷ ಮುರಗೇಂದ್ರ ಮಸಳಿ,ಕಸಾಪ ಅಧ್ಯಕ್ಷ ಪ್ರಭಾವತಿ ಮೇತ್ರಿ ಅಧ್ಯಕ್ಷೆತೆ ವಹಿಸಿ ಮಾತನಾಡಿದರು. ವಕೀಲರ ಸಂಘದ ತಾಲೂಕಾಧ್ಯಕ್ಷ ಅರ್ಜುನ ಕೇರೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಈ ಸಂಧರ್ಭದಲ್ಲಿ ಮೃತ್ಯುಂಜಯ ಕಳ್ಳಿಮಠ, ಮಲ್ಲಿನಾಥ ಆಲೇಗಾಂವ, ಬಸಣ್ಣ ಗುಣಾರಿ, ಗುರಣ್ಣ ಪಡಶೇಟ್ಟಿ, ಜಗದೇವಪ್ಪ ಅಂಜುಟಗಿ, ಶೇಕಪ್ಪ ಮಾಸ್ತಾರ ಜೋಗೂರ, ಬಿ.ಎಂ.ರಾವ್, ಗೋಪಾಲ ಹಳ್ಯಾಳ, ಚಿನ್ನು ಮನಿಯಾರ, ಗೌತಮ ಸಕ್ಕರಗಿ, ಬಿ.ಡಿ.ಅಂಜುಟಗಿ,…

Read More

ಲೇಖನ. – ಜಯಶ್ರೀ ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಹುಟ್ಟು ನಮ್ಮ ಕೈಯಲ್ಲಿಲ್ಲ. ಆದ್ದರಿಂದಲೇ ಕೆಲವರು ಬೆಳ್ಳಿಯ ಚಮಚ ಬಾಯಲ್ಲಿಟ್ಟುಕೊಂಡು ಹುಟ್ಟಿದರೆ, ಇನ್ನು ಕೆಲವರು ಕಿತ್ತು ತಿನ್ನುವ ಬಡತನದಲ್ಲಿ ಹುಟ್ಟುತ್ತಾರೆ. ಅಂಥವರು ಕನಿಷ್ಟ ಅಗತ್ಯಗಳಿಗೂ ದಿನನಿತ್ಯ ಹೋರಾಡಬೇಕಾಗುತ್ತದೆ. ಈ ಸಂಗತಿ ನಮ್ಮ ಸುತ್ತಲಿನ ಸಮಾಜ ನೋಡಿದಾಗ ಅನುಭವಕ್ಕೆ ಬಂದೇ ಬರುತ್ತದೆ. ಹುಟ್ಟು ಸಾವುಗಳ ನಡುವಿನ ಜೀವನ ಮಾತ್ರ ನಮ್ಮ ಕೈಯಲ್ಲಿದೆ ಎಂಬುದನ್ನು ಬಹುತೇಕರು ಮರೆತು ನಡೆಯುತ್ತಾರೆ. ವಿಚಿತ್ರವೆಂದರೆ ಇತಿಹಾಸ ಸೃಷ್ಟಿಸಿದ ಅನೇಕರು ಹುಟ್ಟಿದ್ದು ಬೆಳೆದದ್ದು ಏನೂ ಇಲ್ಲದ ಪರಿಸ್ಥಿತಿಯಲ್ಲಿ ಇಲ್ಲವೇ ಸಾಮಾನ್ಯವೆನಿಸುವ ಕುಟುಂಬದಲ್ಲಿ. ಇಲ್ಲಿ ಕಷ್ಟಗಳು ಕತ್ತಲೆಯಂತೆ ಕತ್ತಲೆಯನ್ನು ಎದೆಗಾರಿಕೆಯಿಂದ ಎದುರಿಸಿದ ಮೇಲೆ ಬಾಲ ನೇಸರನ ಹೊಂಬಣ್ಣದ ಸುಖದ ಹಗಲು ಎದುರು ಆಗಲೇಬೇಕು. ಏನೂ ಇಲ್ಲದ ಸ್ಥಿತಿಯಿಂದ ಆರಂಭಿಸಿ, ಸಾಧನೆಯ ಹಾದಿಯಲ್ಲಿರುವ ಕಲ್ಲು ಮುಳ್ಳುಗಳಂತಿರುವ ಕಷ್ಟಗಳನ್ನು ಮೆಟ್ಟಿ ನಿಂತು ವಿಜಯದ ಶಿಖರವನ್ನು ತಲುಪಿದ ಎಷ್ಟೋ ಮಹನೀಯರ ಕಥೆಗಳು ನಮಗೆ ಸ್ಪೂರ್ತಿಯಾಗಿ ನಿಲ್ಲುತ್ತವೆ.ಹಾಗಾದರೆ ಕಷ್ಟಗಳ ನಡುವೆಯೂ ಗೆಲುವಿನ ಶಿಖರವೇರಲು ಶೂನ್ಯದಿಂದ ಶಿಖರದೆತ್ತರಕ್ಕೇರಲು…

Read More

ಮಂಜೂರು ಮಾಡಿದ ಸಿಎಂ‌ ಸಿದ್ದರಾಮಯ್ಯ‌ಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಹಳ್ಳಿಕೇರಿ ಅವರಿಗೆ ಆಸ್ಪತ್ರೆ ಚಿಕಿತ್ಸೆಗಾಗಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.ಹನುಮಂತಪ್ಪ ಹಳ್ಳಿಕೇರಿ ಅವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು, ಅದರ ಚಿಕಿತ್ಸೆಗಾಗಿ ಹೆಚ್ಚಿನ ಹಣಕಾಸು ನೆರವು ಅಗತ್ಯವಿತ್ತು.ಈ ಬಗ್ಗೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದು ನೆರವು ಕೋರಿದ್ದರು.ಶಾಸಕರು & ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ ಸಿಎಂ‌ ಸಿದ್ದರಾಮಯ್ಯ‌ಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಧನ್ಯವಾದ ಸಲ್ಲಿಸಿದೆ.

Read More

ಹೆಚ್ ಡಿ ಕೋಟೆಯಲ್ಲಿ ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಭವಿಷ್ಯ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: 2028 ಕ್ಕೆ ಎನ್ ಡಿಎ ಸರ್ಕಾರ ಬರಲಿದ್ದು, ಹೆಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದ ಜನರಿಗೆ, ರೈತರಿಗೆ, ಕೂಲಿಕಾರ್ಮಿಕರಿಗೆ, ಪಕ್ಷದ ಕಾರ್ಯಕರ್ತರಿಗೆ ಒಳ್ಳೆಯದಾಗುತ್ತೆ ಎಂದು ಜೆಡಿಎಸ್ ಮುಖಂಡ ಕೆ.ಎಂ. ಕೃಷ್ಣನಾಯಕ ಭವಿಷ್ಯ ನುಡಿದರು.ಪಟ್ಟಣದ ಬಿಜಿಎಸ್ ಕಲ್ಯಾಣ ಮಂಟಪದಲ್ಲಿ 53 ನೇ ಹುಟ್ಟುಹಬ್ಬದ ನಿಮಿತ್ತ ಎಸ್ ಎಸ್ ಎಲ್ ಸಿ, ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗು ಸಹಾಯಧನ ವಿತರಿಸಿ ಮಾತನಾಡಿದರು. ಕಳೆದ 10 ವರ್ಷಗಳಿಂದ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಆದರೆ ಈ ಬಾರಿ ಕಾರ್ಯಕರ್ತರು, ಅಭಿಮಾನಿಗಳ ಒತ್ತಾಯದ ಮೇರೆಗೆ ಹುಟ್ಟುಹಬ್ಬ ಸಂಭ್ರಮದಲ್ಲಿ ಪಾಲ್ಗೊಂಡಿದ್ದೇನೆ. ಇಷ್ಟು ವರ್ಷಗಳಿಂದ ಹೆಚ್ ಡಿ ಕೋಟೆ ಕೋಟೆ ಕ್ಷೇತ್ರದಲ್ಲಿ ಏನು ಸಂಪಾದನೆ ಮಾಡಿದ್ದೇನೋ ಇಲ್ವೋ ಗೊತ್ತಿಲ್ಲ. ಆದರೆ ಜನರ ಪ್ರೀತಿ ಸಂಪಾದನೆ ಮಾಡಿದ್ದೇನೆ. ಜನರ ವಿಶ್ವಾಸ ಗಳಿಸಿದ್ದೇನೆ. ಇದಕ್ಕಿಂತ ಮತ್ತೇನು ಬೇಕು? ಎಂದರು.ಈ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಂಪೂರ ಕೆಬಿಜೆಎನ್‌ಎಲ್ ಐಬಿಸಿ ಓ ಮತ್ತು ಎಂ ವಿಭಾಗ ಕಾರ್ಯಾಲಯದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ರಾಘವೇಂದ್ರ ಹಾದಿಮನಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಪಿರೂ ಕೆರೂರ ಅವರು ಮುಖ್ಯ ಇಂಜನೀಯರ್ ಅವರಿಗೆ ಮನವಿ ಸಲ್ಲಿಸಿದರು.ಇಲಾಖೆಯ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ರಾಘವೇಂದ್ರ ಆರ್. ಹಾದಿಮನಿ ಅವರು ಕಛೇರಿಗೆ ಬಂದ ರೈತರೊಡನೆ ಅನುಚಿತವಾಗಿ ವರ್ತನೆ ಮಾಡುತ್ತಾರೆ. ಜೊತೆಗೆ ಕರ್ತವ್ಯದ ಸಮಯದಲ್ಲಿ ಕಛೇರಿ ಬಿಟ್ಟು ಹೆಚ್ಚಿಗೆ ಹೊರಗೆ ಇರುತ್ತಾರೆ. ಸರ್ಕಾರದ ಸುತ್ತೋಲೆ ಪ್ರಕಾರ ೫ ವರ್ಷಗಳಿಗಿಂತ ಹೆಚ್ಚಿಗೆ ಒಂದೇ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ವರ್ಗಾವಣೆ ಮಾಡುವ ಆದೇಶವಿದೆ. ಈ ರೀತಿ ಸರ್ಕಾರದ ಆದೇಶವಿದ್ದರೂ ಸಹ ಇವರು ಅನೇಕ ವರ್ಷಗಳಿಂದ ಇಲ್ಲಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ವರ್ಗಾವಣೆ ಇಲ್ಲಿಯವರೆಗೂ ಆಗಿರುವುದಿಲ್ಲ. ಇನ್ನೂ ಕರ್ತವ್ಯದ ಸಮಯದಲ್ಲಿ ಗುರುತಿನ ಚೀಟಿ ಧರಿಸದೇ ಬೇಜವಾಬ್ದಾರಿತನದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ದೂರಿದರು.ಜೊತೆಗೆ ತಮ್ಮ…

Read More

ನೋಟಿಸ್ ನೀಡದೆ ಕಾಲುವೆ ಕಾಮಗಾರಿ | ರೈತ ಸಂಘದ ನೇತೃತ್ವದಲ್ಲಿ ಸಂಕನಾಳ ಭಾಗದ ರೈತರಿಂದ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಂಕನಾಳ ಶಾಖಾ ಕಾಲುವೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡ ಜಮೀನಿನ ರೈತರಿಗೆ ೧೧(೧) ನೋಟಿಸ್ ನೀಡಿ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಸಂಕನಾಳ ಭಾಗದ ರೈತರು ಸೋಮವಾರ ಆಲಮಟ್ಟಿಯಲ್ಲಿ ಪ್ರತಿಭಟನೆ ನಡೆಸಿದರು.ರಾಮಲಿಂಗೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಟ ರೈತರು ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಗೆ ತೆರಳಿ ಎಸ್‌ಎಲ್‌ಒ ಎಂ.ಬಿ. ನಾಗಠಾಣ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಉಮೇಶ ವಾಲೀಕಾರ, “ಮುಳವಾಡ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಸಂಕನಾಳ ಶಾಖಾ ಕಾಲುವೆ ನರಸಲಗಿ, ಅಗಸಬಾಳ, ಸಂಕನಾಳ, ಕಣಕಾಲ, ಸೋಲವಾಡಗಿ, ಕನ್ನಾಳ, ವಡವಡ, ಗಿಜಾಯವಾಡಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಹಾದು ಹೋಗಿದೆ. ಈ ಮೊದಲು ಸಂಕನಾಳದವರೆಗೆ ಕಾಲುವೆ ಕಾಮಗಾರಿ ಮುಗಿದಿದೆ. ಆದರೆ ಕನ್ನಾಳ ಗ್ರಾಮದವರೆಗೆ ಇನ್ನೂ ವಿತರಣಾ ಕಾಲುವೆ ಕಾಮಗಾರಿ ಬಾಕಿ ಉಳಿದಿದೆ” ಎಂದರು.”ಈ ಹಿಂದೆ ಬಾಕಿ ಉಳಿದ…

Read More

ವಿಜಯಪುರ ಕಸಾಪ ಬಬಲೇಶ್ವರ ಘಟಕದ ವತಿಯಿಂದ ಕಸಾಪ ಸಂಸ್ಥಾಪನಾ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಉಳಿಗಾಗಿ ನಾವು ಒಂದಾಗಬೇಕಿದ್ದು, ಬೇರೆ ಬೇರೆ ಭಾಷೆಯಿಂದ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿ. ಆದಕ್ಕಾಗಿ ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಿ, ಕನ್ನಡ ಉಳಿವಿಗಾಗಿ ಹೋರಾಟ ಮಾಡಬೇಕು ಎಂದು ರೈತ ಹೋರಾಟಗಾರ್ತಿ ಸಂಗೀತಾ ರಾಠೋಡ ಹೇಳಿದರು.ನಗರದಲ್ಲಿ ಬಬಲೇಶ್ವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ೧೧೨ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ಮು ಉದ್ಘಾಟಿಸಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಬಬಲೇಶ್ವರ ಕಸಾಪ ತಾಲೂಕು ಅಧ್ಯಕ್ಷ ಹಾಗೂ ಪತ್ರಕರ್ತ ಖಾಜಾಮೈನುದ್ದೀನ್ ಪಟೇಲ್ ಮಾತನಾಡಿ, ಕನ್ನಡ ನಾಡು, ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆಗಾಗಿ ಜನ್ಮತಾಳಿದ ಏಕೈಕ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು. ಸುಮಾರು ಒಂದು ಶತಮಾನಕ್ಕೂ ಅಧಿಕ ಇತಿಹಾಸವಿರುವ ಈ ಸಂಸ್ಥೆಯು ಕೇವಲ ಒಂದು ಕಟ್ಟಡವಲ್ಲ, ಅದು ಏಳು ಕೋಟಿ ಕನ್ನಡಿಗರ ಭಾವನಾತ್ಮಕ ಕೇಂದ್ರವಾಗಿದೆ ಎಂದರು.ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ಬಬಲೇಶ್ವರದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು…

Read More

ಸಿಂದಗಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ೧೧೨ನೆಯ ಸಂಸ್ಥಾಪನಾ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡವೆಂದರೆ ಕೇವಲ ಅದೊಂದು ಭಾಷೆಯಲ್ಲ. ಅದೊಂದು ಸಂಸ್ಕೃತಿಯ ಹಿರಿಮೆ. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದು ನಿವೃತ್ತ ಪ್ರಾಚಾರ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಂ.ಎಸ್.ಹೈಯ್ಯಾಳಕರ ಹೇಳಿದರು.ಸಿಂದಗಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ಕನ್ನಡ ಸಾಹಿತ್ಯ ಪರಿಷತ್ತಿನ ೧೧೨ನೆಯ ಸಂಸ್ಥಾಪನಾ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಮುಚ್ಚುತ್ತಿರುವ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡಪರ ಸಂಘಟನೆಗಳು ಕಾರ್ಯಪ್ರವೃತ್ತರಾಗಬೇಕು. ಕನ್ನಡ ಭಾಷೆಯ ಅಸ್ಮಿತೆಗಾಗಿ ನಾವೆಲ್ಲರೂ ಹೋರಾಡಬೇಕು. ಭಾಷಾವಾರು ಹಾಗೂ ವಿಭಾಗವಾರು ತುಲನೆ ಮಾಡಿದಾಗ ಉತ್ತರ ಕರ್ನಾಟಕಕ್ಕೆ ಸದಾ ಅನ್ಯಾಯವಾಗುತ್ತಲೇ ಬಂದಿದೆ. ಇಂತಹ ಅನ್ಯಾಯವನ್ನು ಸರಿದೂಗಿಸುವ ನಿಟ್ಟಿನಲ್ಲಿ ನಮ್ಮ ಜನಪ್ರತಿನಿಧಿಗಳು ಮುತುವರ್ಜಿ ವಹಿಸಬೇಕು. ಎಲ್ಲ ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಪತ್ರ ವ್ಯವಹಾರ ಕಡ್ಡಾಯಗೊಳಿಸಬೇಕು ಎಂದರು.ಈ ವೇಳೆ ಉಪನ್ಯಾಸ ನೀಡಿದ…

Read More