Author: editor.udayarashmi@gmail.com

ವಿಜಯಪುರ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜ.೧೧ ರಂದು ಜಿಲ್ಲೆಯ ೧೬ ಪರೀಕ್ಷಾ ಕೆಂದ್ರಗಳಲ್ಲಿ ವಿವಿಧ ಇಲಾಖೆ-ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿರುವುದರಿಂದ ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೇಳಿದರು.ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ಇಲಾಖೆ-ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯಲಿದ್ದು, ೧೬ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿವೆ ಪ್ರಥಮಾವಧಿಯಲ್ಲಿ ೬,೬೦೮ ಅಭ್ಯರ್ಥಿಗಳು,ದ್ವೀತಿಯ ಅವಧಿಯಲ್ಲಿ ೬,೫೫೮ ಅಭ್ಯರ್ಥಿ ಪರೀಕ್ಷೆ ಬರೆಯಲಿದ್ದು, ಯಾವುದೇ ತೊಂದರೆಯಾಗದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಜಾಗ್ರತೆಯಿಂದ ಕಾರ್ಯ ನಿರ್ವಹಿಸಬೆಕು ಎಂದು ಸೂಚನೆ ನೀಡಿದರು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ೧೬ ವೀಕಕ್ಷರನ್ನು ನೇಮಕ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಉಪ ಮುಖ್ಯ ಅಧಿಕ್ಷಕರು, ಪ್ರಶ್ನೆಪತ್ರಿಕೆ ಪಾಲಕರನ್ನು ಹಾಗೂ ಜಾಗ್ರತಾದಳ ಸದಸ್ಯರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದಲ್ಲಿ ಅಶ್ಲೀಲ ಸಾಹಿತ್ಯ ಮತ್ತು ಸಿನಿಮಾಗಳ ನಿಷೇಧಕ್ಕೆ ಆಗ್ರಹಿಸಿ ಕೆಆರ್‌ಎಸ್ ಪಕ್ಷವು ಗುರುವಾರ ಜಿಲ್ಲಾಧಿಕಾರಿ ಗೆ ಮನವಿ ಸಲ್ಲಿಸಿತು.ಈ ವೇಳೆ ಮಾತನಾಡಿದ ಪಕ್ಷದ ಮುಖಂಡರು, ಉತ್ತರ ಕರ್ನಾಟಕದಲ್ಲಿ ಅಶ್ಲೀಲ ಸಾಹಿತ್ಯ ಮತ್ತು ಸಂಗೀತದಿಂದಾಗಿ ಈ ಭಾಗದ ಮಕ್ಕಳ ಮನಸ್ಸಿನ ಮೇಲೆ ವ್ಯಾಪಕ ಪರಿಣಾಮ ಬೀರುತ್ತಿವೆ. ಇದರಿಂದಾಗಿ ಮಕ್ಕಳ ಶೈಕ್ಷಣಿಕ ಮಟ್ಟ ಕುಸಿಯುತ್ತಿದೆ. ಸಮಾಜದಲ್ಲಿ ಮೌಲ್ಯಗಳು ಕುಸಿತಗೊಂಡು ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ. ರಾಜ್ಯದ ಹಿತದೃಷ್ಟಿಯಿಂದಾಗಿ ಉತ್ತರ ಕರ್ನಾಟಕದ ಜಾನಪದ ಸಾಹಿತ್ಯ ಸಿನಿಮಾ/ಚಲನಚಿತ್ರಗಳಲ್ಲಿ ಹಿಂಸೆಯನ್ನು ಪ್ರಚೋದಿಸುವ ಮತ್ತು ಅತ್ಯಾಚಾರದಂತ ದೃಶ್ಯಗಳನ್ನು ಬಳಸದಂತೆ ನಿಷೇಧಾಜ್ಞೆ ಹೇರಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು.ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ದುರ್ಗಪ್ಪ ಬೂದಿಹಾಳ, ವಿಕ್ರಮ ವಾಘಮೋರೆ, ಸೀನು ಹಿಪ್ಪರಗಿ, ರಾಕೇಶ ಇಂಗಳಗಿ, ಪ್ರವೀಣ ಕನಸೇ, ರಾಘವೇಂದ್ರ ಛಲವಾದಿ, ಮೈಬು ತಾಂಬೋಳಿ, ಸುರೇಂದ್ರ ಕುನಸಲೇ, ನಬಿರಸೂಲ ಹುಣಶ್ಯಾಳ, ಹಮಿದ ಇನಾಮದಾರ, ಅಣ್ಣಾ ಪೂಜಾರಿ, ಗಣಪತಿ ರಾಠೋಡ, ಮಲ್ಲಿಕಾರ್ಜುನ ಬಿರಾದಾರ ಇತರರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯದ ಪರೀಕ್ಷೆಯಾದ ಈ ಸ್ಪರ್ಧೆಯಲ್ಲಿ ನೀವು ಯಶಸ್ವಿಯಾಗಲು ಶಕ್ತಿ, ಏಕಾಗ್ರತೆ ಮತ್ತು ಅಸಾಧಾರಣ ಛಲ ಪ್ರದರ್ಶಿಸಬೇಕು, ದೇಶದ ಕೀರ್ತಿ ಪತಾಕೆ ಹಾರಿಸಿ, ಉತ್ತಮ ಕ್ರೀಡಾ ಮನೋಭಾವ ಪ್ರದರ್ಶಿಸಿ ಮತ್ತು ಸುರಕ್ಷಿತವಾಗಿ ಸ್ಪರ್ಧಿಸಿ ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಎ.ಬಿರಾದಾರ ಹೇಳಿದರು.ಜಾರ್ಖಂಡದ ರಾಂಚಿಯಲ್ಲಿ ಜ.೧೩ ರಿಂದ ೧೯ ರವರೆಗೆ ನಡೆಯುವ ರಾಷ್ಟ್ರ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ತೆರಳುತ್ತಿರುವ ಕರೀಷ್ಮಾ ತಟಗಾರ, ಸಂಗವ್ವ ಬನಸೋಡೆ ಹಾಗೂ ಆಕಾಶ ತೇರದಾಳ ವಿದ್ಯಾರ್ಥಿಗಳಿಗೆ ಶುಭ ಹಾರೈಯಿಸಿ ಬೀಳ್ಕೋಡುವ ವೇಳೆಯಲ್ಲಿ ಮಾತನಾಡಿದ ಅವರು. ಸೈಕ್ಲಿಂಗ್ ಮನಸ್ಸು, ದೇಹ ಮತ್ತು ನಿಮ್ಮ ಆತ್ಮಕ್ಕೆ ಅದ್ಭುತ ಉಲ್ಲಾಸವನ್ನು ನೀಡುವಂತದ್ದಾಗಿದೆ ಎಂದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಇ.ಡಿ.ಲಮಾಣಿ, ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್.ಎಲ್.ದೊಡಮನಿ, ಎ.ಎಂ.ನಾಗೊಂಡ, ಎಸ್.ಕೆ.ಶಿಂಧೆ, ಎಸ್.ಬಿ.ಒಡೆಯರ, ಆರ್.ವ್ಹಿ.ಭುಜಂಗನವರ, ಜೆ.ಕೆ.ರಾಠೋಡ, ಎಸ್.ಡಿ.ಚವ್ಹಾಣ್, ಅಶ್ವಿನಿ ದೊಡ್ಡಿ, ಜೆ.ವ್ಹಿ.ಬಿರಾದಾರ, ಬಿ.ಎಸ್.ದ್ಯಾಬೇರಿ, ಆರ್.ಎನ್.ಬಡಿಗೇರ, ಎಚ್.ಎಂ.ಬೋರಾವತ, ದೇಸು ದೊಡಮನಿಯವರು ಸೇರಿದಂತೆ, ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಕಾರ್ಯಾಧ್ಯಕ್ಷರುಗಳು…

Read More

ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ | ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್ ಅವರು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ವ್ಯಾಪ್ತಿಯ ಅಕ್ರಮ ಬಡಾವಣೆಗಳಲ್ಲಿರುವ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.ಗ್ರೇಟರ್ ಬೆಂಗಳೂರು ಅಥಾರಿಟಿ ಮಾದರಿಯಲ್ಲೇ ನಿಯಮ ರೂಪಿಸಿ ರಾಜ್ಯದಾದ್ಯಂತ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡಲಾಗುತ್ತೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.ರಾಜ್ಯದ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರದ…

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)2024ನೇ ಸಾಲಿನ ಕೆಳಕಂಡ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಆ ವರ್ಷದ ವರದಿ/ಲೇಖನ/ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಬೆಂಗಳೂರು-09 ಇಲ್ಲಿಗೆ ದಿನಾಂಕ 20-01-2026 ರೊಳಗೆ ತಲುಪುವಂತೆ ತಮ್ಮ ಸ್ವ ಪರಿಚಯದೊಂದಿಗೆ ಅರ್ಜಿಯನ್ನು ಕಳುಹಿಸಿಕೊಡಬೇಕು ಎಂದು ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.ಪ್ರಶಸ್ತಿಗಳ ವಿವರ ಷರತ್ತುಗಳನ್ನು ಉಲ್ಲಂಘಿಸಿ ಬರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಪ್ರಶಸ್ತಿಗೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ಕೆಯುಡಬ್ಲ್ಯೂಜೆ ವಿಳಾಸಕ್ಕೆ ಕಳುಹಿಸಿಕೊಡಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಜ.10 ಶನಿವಾರ ಬೆಳಗ್ಗೆ 11.38 ಗಂಟೆಗೆ ಅದ್ಧೂರಿಯಾಗಿ ಆಯೋಜಿಸಲು ತಿರ್ಮಾನಿಸಲಾಗಿದೆ ಎಂದು ಚಡಚಣ ಶಿಕ್ಷಕರ ಸೊಸಾಯಿಟಿ ಅಧ್ಯಕ್ಷ ಎಸ್. ಎಸ್. ಪಾಟೀಲ, ಹೇಳಿದರು.ಕಾರ್ಯಕ್ರಮದ ಸಾನಿಧ್ಯವನ್ನು ಅಮೃತಾನಂದ ಮಹಾಸ್ವಾಮಿಗಳು (ಗುರುದೇವ ಆಶ್ರಮ, ಕಾತ್ರಾಳ), ಷಡಕ್ಷರಿ ಮಹಾಸ್ವಾಮಿಗಳು (ವಿರಕ್ತಮಠ, ಚಡಚಣ) ಹಾಗೂ ರಾಜಯೋಗಿನಿ ಬ್ರಹ್ಮಾಕುಮಾರಿ ಶ್ರೀದೇವಿ ಅಕ್ಕನವರು ವಹಿಸಲಿದ್ದಾರೆ.ನೂತನ ಕಟ್ಟಡದ ಉದ್ಘಾಟನೆಯನ್ನು ವಿಠ್ಠಲ ಧೋ. ಕಟಕಧೋಂಡ (ಶಾಸಕರು, ನಾಗಠಾಣ ಮತಕ್ಷೇತ್ರ) ನೆರವೇರಿಸಲಿದ್ದು, ಜ್ಯೋತಿ ಬೆಳಗಿಸುವ ಕಾರ್ಯಕ್ರಮವನ್ನು ಯಶವಂತರಾಯಗೌಡ ವಿ. ಪಾಟೀಲ (ಶಾಸಕರು, ಇಂಡಿ ಮತಕ್ಷೇತ್ರ) ನೆರವೇರಿಸಲಿದ್ದಾರೆ.ಸುವರ್ಣ ಮಹೋತ್ಸವದ ಅಂಗವಾಗಿ ಫೋಟೋ ಪೂಜೆ ಹಾಗೂ ಸ್ಮರಣಾರ್ಥ ಬ್ಯಾಗಗಳ ವಿತರಣೆಯನ್ನು ರಮೇಶ್ ಚ. ಜಗಜಿಣಗಿ (ಸಂಸದರು, ವಿಜಯಪುರ) ನೆರವೇರಿಸಲಿದ್ದು, ಕ್ಯಾಲೆಂಡರ್ ವಿತರಣೆಯನ್ನು ಶ್ರೀಮತಿ ಎಸ್. ಕೆ. ಭಾಗ್ಯಶ್ರೀ (ಉಪ ನಿಬಂಧಕರು, ಸಹಕಾರ ಸಂಘಗಳು, ವಿಜಯಪುರ) ನಡೆಸಿಕೊಡಲಿದ್ದಾರೆ.ಈ ಸಂದರ್ಭದಲ್ಲಿ ರಾಹುಲ್ ತಿಪ್ಪಣ್ಣ ಸಿದ್ದಾ…

Read More

ಕೊಲ್ಹಾರದ ಜ್ಞಾನಜ್ಯೋತಿ ಶಾಲಾ ಆವರಣದಲ್ಲಿ ನಡೆದ ಸಂತೆ | ಇಲ್ಲಿ ಮಕ್ಕಳೇ ವ್ಯಾಪಾರಿಗಳು, ಪಾಲಕರೇ ಗ್ರಾಹಕರು ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗುರುವಾರ ನಡೆದ ಮಕ್ಕಳ ಸಂತೆ ( ಮಾರ್ಕೆಟಿಂಗ್ ಡೇ) ಯಲ್ಲಿ ವ್ಯಾಪಾರ ಜೋರಾಗಿಯೇ ನಡೆಯಿತು.ಸಂತೆಯಲ್ಲಿ ವಿವಿಧ ಬಗೆಯ ಸೊಪ್ಪು, ತರಕಾರಿ, ಹಣ್ಣು ಹಂಪಲ, ಹೂವು ,ಬೇಲಪುರಿ, ವಡಾ ಪಾವ, ಬಜಿ , ಟೀ ಸ್ಟಾಲ್, ಬುಕ್ ಸ್ಟಾಲ್, ದಿನಸಿ ಅಂಗಡಿ ಸೇರಿದಂತೆ ಹಲವು ವಸ್ತುಗಳನ್ನು ಮಾರಾಟ ಮಾಡಲಾಯಿತು. ಮಕ್ಕಳು ಸಾರ್ವಜನಿಕರಿಗೆ ಮಾರುತಿದ್ದ ವಸ್ತುಗಳ ವ್ಯಾಪಾರವು ನೈಜ ವ್ಯಾಪಾರಸ್ತರನ್ನು ನಾಚಿಸುವಂತಿತ್ತು.ಪರಸ್ಪರ ಸ್ಪರ್ಧಾಮನೋಭಾವದಿಂದ ಮಕ್ಕಳು ನಾವೇ ಹೆಚ್ಚು ವ್ಯಪಾರ ಮಾಡಬೇಕೆಂಬ ಛಲದಿಂದ ಪೋಷಕರನ್ನು ಕರೆದು ತಮ್ಮ ಅಂಗಡಿಯ ಸಾಮಗ್ರಿ ಖರೀದಿಸಲು ಒತ್ತಾಯಿಸುತ್ತಿದ್ದರು.ಕರ್ನಾಟಕಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಅರುಣ ಔರಸಂಗ ಹಾಗೂ ಪತ್ರಕರ್ತ ಮಲ್ಲಿಕಾರ್ಜುನ ಕುಬಕಡ್ಡಿ ಜಂಟಿಯಾಗಿ ಮಕ್ಕಳ ಸಂತೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ವ್ಯವಹಾರ ಜ್ಞಾನ ಬೆಳೆಯಲು…

Read More

ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜ್ ಘೋಷಣೆ | ಸಚಿವ ಶಿವಾನಂದ ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಧೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಬರೆದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಜಯಪುರ ಜಿಲ್ಲೆಗೆ ಬರುವ ಮುನ್ನವೇ ಸರ್ಕಾರಿ ವೈದ್ಯಕೀಯ ಕಾಲೇಜ್ ಘೋಷಣೆ ಮಾಡುವ ಮೂಲಕ ಅಪೂರ್ವ ಕೊಡುಗೆ ನೀಡಿದ್ದಾರೆ. ವಿವಿಧ ಸಂಘಟನೆಗಳ ಹೋರಾಟ ಹಾಗೂ ಜನಪ್ರತಿನಿಧಿಗಳ ಮನವಿಗೆ ಮನ್ನಣೆ ನೀಡಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಮೆಡಿಕಲ್ ಕಾಲೇಜ್‌ಗಾಗಿ ಅನೇಕ ಸಂಘಟನೆಗಳು ಹೋರಾಟ ಮಾಡಿದ್ದವು. ಜನಪ್ರತಿನಿಧಿಗಳಾದ ನಾವುಗಳು ಸಹ ಈ ಬಗ್ಗೆ ಮನವಿ ಮಾಡಿಕೊಂಡಿದ್ದೆವು, ಈ ಎಲ್ಲ ಮನವಿಗೆ ಮುಖ್ಯಮಂತ್ರಿಗಳು ಮನ್ನಣೆ ನೀಡಿದ್ದಾರೆ. ನಾಳೆಯೂ ಇನ್ನೊಮ್ಮೆ ಈ ಬಗ್ಗೆ ಪುನರುಚ್ಚರಿಸಬಹುದು. ಯಾರು ಈ ಬಗ್ಗೆ ಹೋರಾಟ ಮಾಡಿದ್ದಾರೋ ಅವರಿಗೆ ಈ ಕ್ರೆಡಿಟ್ ಹೋಗಲಿ ಎಂದರು.ವಿಜಯಪುರ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಅನುದಾನದ ಅಡಿಯಲ್ಲಿ ಇಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣವಾಗುತ್ತದೆ. ಉಳಿದ ಜಿಲ್ಲೆಗಳಲ್ಲಿ ೫೦೦,…

Read More

ಲೇಖನ- ಡಾ.ಶಶಿಕಾಂತ ಪಟ್ಟಣರಾಮದುರ್ಗಬೆಳಗಾವಿ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಕನ್ನಡ ಚಿತ್ರರಂಗದ ಹಿರಿಯ ನಟ ಪರಿಸರ ಪ್ರೇಮಿ ಪ್ರಾಣಿಪ್ರಿಯ ಖ್ಯಾತ ಕಳ ನಟ ಎಂ ಪಿ ಶಂಕರ ಚಲನ ಚಿತ್ರಗಳಲ್ಲಿ ಹಲವು ಹೊಸ ಪ್ರಯೋಗಗಳನ್ನು ಕಾಡು ಮೇಡುಗಳಲ್ಲಿ ಚಿತ್ರಿಸಿ ಹೆಸರುವಾಸಿಯಾದ ಅಪ್ರತಿಮ ಕೆಚ್ಚೆದೆಯ ಗಂಡುಗಲಿ ಎಂ ಪಿ ಶಂಕರಜನನ ಮತ್ತು ಬಾಲ್ಯಎಂ ಪಿ ಶಂಕರ ಇವರು 20, ಆಗಸ್ಟ್, 1935 ರಂದು ಮೈಸೂರು ಪುಟ್ಟಲಿಂಗಪ್ಪ ಮತ್ತು ಗಂಗಮ್ಮ ಎಂಬ ಲಿಂಗಾಯತ ಕುಟುಂಬದಲ್ಲಿ ಜನಿಸಿದರು.ಅಜಾನು ಬಾಹು ಶಂಕರ್ ಕನ್ನಡ ಚಿತ್ರರಂಗದ ದಿಗ್ಗಜರಲ್ಲಿ ಒಬ್ಬರು. ಇವರು ಅನೇಕ ಖಳನಾಯಕ ಪಾತ್ರಗಳಲ್ಲಿ ನಟಿಸಿದ್ದಾರೆ. ಸತ್ಯ ಹರಿಶ್ಚಂದ್ರ, ಶನಿ ಪ್ರಭಾವ, ಬಂಗಾರದ ಮನುಷ್ಯ, ಗಂಧದ ಗುಡಿ,ಭೂತಯ್ಯನ ಮಗ ಅಯ್ಯು ಇವರ ಕೆಲವು ಪ್ರಮುಖ ಚಿತ್ರಗಳು. ಇವರು ಪೋಷಕ ನಟರಾಗಿ ಕೂಡ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ನಟನೆಯ ಜೊತೆಗೆ, ದಿಗ್ದರ್ಶನ, ಚಿತ್ರನಿರ್ಮಾಣ, ವಿತರಣೆ ಹಾಗೂ ಸಂಬಂಧಿಸಿದ ಎಲ್ಲಾ ಮಜಲುಗಳನ್ನು ಚೆನ್ನಾಗಿ ಅರಿತಿದ್ದರು. ಕಾಡು, ಪರಿಸರ ಸಂರಕ್ಷಣೆಯ ಬಗ್ಗೆ ಮತ್ತು ವನ್ಯಜೀವಿಗಳಿಗೆ…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಶೀರ್ಷಿಕೆ ನೋಡಿದಾಕ್ಷಣ ದಾಂಪತ್ಯ ಮತ್ತು ಸಮಾನತೆ ಎರಡು ವಿರುದ್ಧ ಪದಗಳಲ್ಲವೆ ಎಂದು ಕೆಲವರಿಗೆ ಅನಿಸಿದರೆ ಅದು ಅವರ ತಪ್ಪೇನಲ್ಲ..ಎಷ್ಟೋ ಜನ ಗಂಡಸರು ತಾವು ಮದುವೆಯಾಗುವುದೇ ತಾಯಿಯ ನಂತರ ತಮ್ಮನ್ನು ಜೀವನಪರ್ಯಂತ ಪೊರೆವ, ಸಹಿಸುವ, ಮತ್ತು ತಮಗಾಗಿ ಜೀವನವನ್ನೇ ಮುಡುಪಾಗಿಡುವ ತಮ್ಮ ವಂಶೋದ್ಧಾರ ಮಾಡುವ ಉತ್ತಮ ಕೌಟುಂಬಿಕ ಜೀವನಕ್ಕಾಗಿ ತನ್ನದೆಲ್ಲವನ್ನು ಕೊಟ್ಟು ಬರಿದಾಗುವ, ತಮ್ಮೆಲ್ಲ ಮನೋ ದೈಹಿಕ ಆಸೆ ಆಕಾಂಕ್ಷೆಗಳನ್ನು ಪೂರೈಸುವ ಹೆಣ್ಣು ಬೇಕೆಂದು.ಹೆಣ್ಣು ಮಕ್ಕಳನ್ನು ಮದುವೆ ಮಾಡುವುದು ಆಕೆಗೆ ಓರ್ವ ಉತ್ತಮ ಸಂಗಾತಿ ದೊರೆಯಲಿ ತಂದೆ ತಾಯಿಯ ನಂತರ ಆಕೆಯನ್ನು ಸಂರಕ್ಷಿಸಲಿ, ಆಕೆಯ ಎಲ್ಲಾ ರೀತಿಯ ಅಗತ್ಯತೆಗಳನ್ನು ಪೂರೈಸಲಿ ಎಂಬ ಭಾವದಿಂದ ದಾಂಪತ್ಯಕ್ಕೆ ಕಾಲಿಡಿಸುತ್ತಾರೆ.ಆದರೆ ದಾಂಪತ್ಯ ಎಂಬುದು ಕೇವಲ ಗಂಡು ಹೆಣ್ಣಿನ ನಡುವಣ ಸಮಾಜ ಒಪ್ಪಿದ ಸಂಬಂಧ ಮಾತ್ರವಲ್ಲ.. ದಾಂಪತ್ಯವೆಂಬುದು ಎರಡು ಸಮತೋಲನದಿಂದ ಕೂಡಿದ ಕುಟುಂಬಗಳ ನಡುವಣ ಮೈತ್ರಿ.ದಾಂಪತ್ಯದಲ್ಲಿ ಯಾರೂ ಮೇಲಲ್ಲ ಕೀಳಲ್ಲ, ಹಿಂದಿನ ಕಾಲದಿಂದಲೂ ದೈಹಿಕವಾಗಿ ಬಲಿಷ್ಠನಾದ ಪುರುಷ…

Read More