Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ವಿಶ್ವನಾಥ ಕೋಟಾರಗಸ್ತಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ (ಟಿ.ಎ.ನಾರಾಯಣಗೌಡ ಬಣ) ತಾಲೂಕು ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕನ್ನಡ ನಾಡು, ನುಡಿ, ನೆಲ, ಜಲ, ನಿಸ್ವಾರ್ಥ ಕನ್ನಡದ ಸೇವಾ ಮನೋಭಾವ ಗುರುತಿಸಿ ಈ ಹುದ್ದೆಯನ್ನು ನೀಡಲಾಗಿದೆ ಎಂದು ಕರವೇ ತಾಲೂಕಾಧ್ಯಕ್ಷ ಮುತ್ತು ಹಿಪ್ಪರಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಸಂಭ್ರಮದಿಂದ ರಕ್ಷಾಬಂಧನ ಹಬ್ಬ ಆಚರಿಸಲಾಯಿತು.ನೂರಾರು ವಿದ್ಯಾರ್ಥಿಗಳು ವಿದ್ಯಾರ್ಥಿನಿಯರಿಗೆ ರಾಖಿ ಕಟ್ಟಿ ಸಂಭ್ರಮಿಸಿದರು. ಇದೇ ವೇಳೆ ಶಿಕ್ಷಕಿಯರು ಅತಿಥಿಗಳಿಗೆ ರಾಖಿ ಕಟ್ಟಿ ಆರತಿ ಬೆಳಗಿ ದೀರ್ಘಾಯುವಾಗಿ ಬಾಳುವಂತೆ ಹರಿಸಿದರು.ಸಾನಿಧ್ಯ ವಹಿಸಿ ಮಾತನಾಡಿದ ವೇದಮೂರ್ತಿ ಅಮರೇಶ್ವರ ಶಾಸ್ತಿಗಳು, ಸತತವಾಗಿ ೩೬ ವರ್ಷಗಳ ಕಾಲ ನಿರಂತರವಾಗಿ ರಕ್ಷಾ ಬಂಧನ ಹಬ್ಬವನ್ನು ಶಾಲೆಯಲ್ಲಿ ಆಚರಿಸುತ್ತಾ ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಭಾತೃತ್ವ ಭಾವನೆಗಳನ್ನು ಕೊಡುತ್ತಾ ಬಂದಿರುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದರು.ಇದೇ ವೇಳೆ ಬೀರಪ್ಪ ಹೊಸೂರ ಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಈ ವೇಳೆ ಸಂಸ್ಥೆಯ ಅಧ್ಯಕ್ಷ ಎಸ್.ಆಯ್.ಜೋಗೂರ, ಅಲೋಕ ಬಡದಾಳ, ಅಕ್ಷಯ ಕುಲಕರ್ಣಿ, ಮುಖ್ಯ ಗುರು ಲಕ್ಷ್ಮೀಪುತ್ರ ಕಿರನಳ್ಳಿ, ಸಮರ್ಥ ಕೊಳಾರಿ, ಈರಣ್ಣ ಕಲಶೆಟ್ಟಿ, ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ, ಸೀತಾ ಆರೇಶಂಕರ, ಸರುಬಾಯಿ ಬಂಡಗರ, ಸುನೀತಾ ಗುಂಡದ, ವೀಣಾ ರಾಂಪೂರಮಠ, ರಕ್ಷಿತಾ ಹಡಪದ ಮುಂತಾದವರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನಲ್ಲಿ ಶನಿವಾರ ಸಹೋದರಿಯರು ಸಹೋದರರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದರು. ಬಳಿಕ ಹಣೆಗೆ ತಿಲಕವಿಟ್ಟು, ಹೂನೀಡಿ, ಕಲ್ಲುಸಕ್ಕರೆಯ ಸವಿಯನ್ನು ನೀಡಿ ಸಂಭ್ರಮಿಸಿದರು.ರಕ್ಷಾ ಬಂಧನವು ಮಾನ್ಸೂನ್ ಹಬ್ಬವಾಗಿದ್ದು, ಇದು ಆಳವಾದ ಅರ್ಥವನ್ನು ಹೊಂದಿದೆ. ಮಳೆಗಾಲವು ಜೀವನದ ಎಲ್ಲಾ ಕೊಳಕು ಮತ್ತು ಸಂಕೋಚನಗಳನ್ನು ನಿರ್ಮೂಲನೆ ಮಾಡುತ್ತದೆ. ಋತುವು ನಮಗೆ ಶ್ರೀಮಂತಿಕೆಯನ್ನು ನೀಡುತ್ತದೆ ಮತ್ತು ಜೀವನವನ್ನು ಪೂರ್ಣವಾಗಿ ಸವಿಯಲು ಹೊಸ ಭರವಸೆಯನ್ನು ನೀಡುತ್ತದೆ. ಅದಕ್ಕಾಗಿಯೇ ಸಹೋದರ ಸಹೋದರಿಯರ ನಡುವಿನ ಪ್ರೀತಿಯ ಕಳಂಕರಹಿತ ಬಂಧನ ಮತ್ತು ಅದೃಷ್ಟದ ಆಗಮನವನ್ನು ಆಚರಿಸಲು ಶ್ರಾವಣ ಮಾಸವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ.

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಇಂದಿನ ಮಕ್ಕಳೆ ಮುಂದಿನ ಸತ್ಪ್ರಜೆಗಳು. ಸರ್ಕಾರಿ ಶಾಲೆಯಲ್ಲಿನ ಶಿಕ್ಷಕರ ಮೇಲೆ ಮಕ್ಕಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವ ಮಹತ್ತರ ಜವಾಬ್ದಾರಿ ಇದೆ ಎಂದು ಶಾಸಕ ನಾಡೋಜ ಜಗದೀಶ ಗುಡಗುಂಟಿ ಹೇಳಿದರು.ಸ್ಥಳೀಯ ಶಾಂತಿ ನಗರದಲ್ಲಿ ಪಿಎಂಶ್ರೀ ಸರಕಾರಿ ಉರ್ದು ಮಾದರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ನಂ.6ರಲ್ಲಿನ ವಿದ್ಯಾರ್ಥಿಗಳಿಗೆ ಶನಿವಾರ ನಡೆದ ರಾಷ್ಟ್ರೀಯ ಗ್ರಾಮಿಣ ಸಾಕ್ಷರತಾ ಮಿಶನ್ ಅಡಿಯಲ್ಲಿ ಶಾಲಾ ಬ್ಯಾಗ್, ಸ್ವೆಟರ್‌ಗಳನ್ನು ವಿತರಿಸಿ ಅವರು ಮಾತನಾಡಿದರು.ವಿಜ್ಞಾನ ದಿನದಿಂದ ದಿನಕ್ಕೆ ಬೆಳೆಯುತ್ತಿದೆ, ಸ್ಪರ್ಧಾತ್ಮಕ ಯುಗದಲ್ಲಿ ಇಂದಿನ ಮಕ್ಕಳು ಬೆಳೆಯಬೇಕು, ಬಾಲ್ಯದಲ್ಲೆ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗದಿದ್ದರೆ ಅವರು ಬದುಕಿನುದ್ದಕ್ಕೂ ಪರಿತಪಿಸುವಂತಾಗುತ್ತದೆ ಮಕ್ಕಳಿಗೆ ಬಾಲ್ಯದಲ್ಲೆ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.ಶಾಲೆಗೆ ಮೂಲ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಚಿವರ ಜೊತೆ ಮಾತನಾಡುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಶಾಲೆ ಅಭಿವೃದ್ದಿಗೆ ವೈಯಕ್ತಿಕವಾಗಿ 51 ಸಾವಿರ ರೂಗಳನ್ನು ನೀಡಿದರು.ವೇದಿಕೆಯಲ್ಲಿ ಅಜಯ ಕಡಪಟ್ಟಿ, ಮಲ್ಲು ದಾನಗೌಡ, ಕಾಶಿಬಾಯಿ ಹೂಗಾರ, ಮಲ್ಲು ಮಠ, ಕುಶಾಲ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಸಹೋದರರ ಸಹೋದರಿಯರ ನಡುವೆ ಪ್ರೀತಿ, ವಿಶ್ವಾಸ, ಹಾಗೂ ರಕ್ಷಣೆ ನೀಡುವ ಸಂಕೇತವಾದ ರಕ್ಷಾ ಬಂಧನ ಹಬ್ಬ ಆಚರಿಸಿ ಶಾಲಾ ವಿಧ್ಯಾರ್ಥಿನಿಯರು ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಹಬ್ಬ ಆಚರಿಸಿದರು.ತಾಲ್ಲೂಕಿನ ಕನಮಡಿ ಗ್ರಾಮದ ಮಾಣಿಕೇಶ್ವರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಸಹೋದರರ ದೀರ್ಘಾಯುಷ್ಯ, ಪ್ರಗತಿ ಮತ್ತು ಉತ್ತಮ ಆರೋಗ್ಯವನ್ನು ಬಯಸಿ ರಾಖಿ ಕಟ್ಟಿ‌ ಶುಭ ಹಾರೈಸಿದರು.ಈ ಶುಭ ದಿನದಂದು ಪ್ರತಿ ಮನೆಯಲ್ಲೂ ರಕ್ಷಾ ಬಂಧನ‌ ಹಬ್ಬ ಆಚರಿಸಿ ಸಿಹಿ ತಿನ್ನಿಸಿ ಸಹೋದರತ್ವ ಭಾವ ಗಟ್ಟಿಗೊಳಿಸಿದರು. ಆರತಿ ಬೆಳಗಿ ಹಣೆಗೆ ತಿಲಕ ಇಟ್ಟು ನಂತರ ಉಡುಗೋರೆ ನೀಡಿ ಸಂಭ್ರಮಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಮೇಸನ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಯ ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ ಕಾರ್ಡ್ ಮತ್ತು ಫಲಾನುಭವಿಯ ಭಾವಚಿತ್ರ, ಸದರಿ ದಾಖಲೆಗಳನ್ನು ಆ೨೫ರೊಳಗಾಗಿ ಷರತ್ತುಗಳ ಅನ್ವಯ ಸಿಂದಗಿ ವೃತ್ತ ಕಾರ್ಮಿಕ ನಿರೀಕ್ಷಕರ ಕಛೇರಿ, ಗಣಿಹಾರ ಬಿಲ್ಡಿಂಗ್, ಅಂಬೇಡ್ಕರ್ ಸರ್ಕಲ್ ಹಿಂದುಗಡೆ, ಚಾಂದಕವಟೆ ರಸ್ತೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹತ್ತಿರ ಸಿಂದಗಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಕಟ್ಟಡ ಕಾರ್ಮಿಕರಿಗೆ ತಿಳಿಸಲಾಗಿದೆ. ಸದರಿ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇರೆಗೆ ವಿತರಿಸಲಾಗುವುದು. ಕಡ್ಡಾಯವಾಗಿ ಕಟ್ಟಡ ಕಾರ್ಮಿಕರು ನೋಂದಾಯಿಸಿ ಒಂದು ವರ್ಷ ಪೂರ್ಣಗೊಂಡಿರಬೇಕು. ಕಾರ್ಮಿಕ ಗುರುತಿನ ಚೀಟಿ ಚಾಲ್ತಿಯಲ್ಲಿರಬೇಕು. ಕಾರ್ಮಿಕ ಗುರುತಿನ ಚೀಟಿಯಲ್ಲಿ ನಮೂದಿಸಿದ ವೃತ್ತಿಯ ಕಿಟ್‌ಗಳನ್ನು ಮಾತ್ರ ವಿತರಿಸಲಾಗುವುದು. ಹಿಂದಿನ ಅವಧಿಯಲ್ಲಿ ಮೇಸನ್ ಕಿಟ್ ತೆಗೆದುಕೊಂಡವರಿಗೆ ಅವಕಾಶ ಇರುವುದಿಲ್ಲ ಎಂದು ಸಿಂದಗಿ ಕಾರ್ಮಿಕ ನಿರೀಕ್ಷಕರು ಪತ್ರಿಕಾ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಮೇಸನ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಯ ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ ಕಾರ್ಡ್ ಮತ್ತು ಫಲಾನುಭವಿಯ ಭಾವಚಿತ್ರ, ಸದರಿ ದಾಖಲೆಗಳನ್ನು ಆ೨೫ರೊಳಗಾಗಿ ಷರತ್ತುಗಳ ಅನ್ವಯ ಸಿಂದಗಿ ವೃತ್ತ ಕಾರ್ಮಿಕ ನಿರೀಕ್ಷಕರ ಕಛೇರಿ, ಗಣಿಹಾರ ಬಿಲ್ಡಿಂಗ್, ಅಂಬೇಡ್ಕರ್ ಸರ್ಕಲ್ ಹಿಂದುಗಡೆ, ಚಾಂದಕವಟೆ ರಸ್ತೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹತ್ತಿರ ಸಿಂದಗಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಕಟ್ಟಡ ಕಾರ್ಮಿಕರಿಗೆ ತಿಳಿಸಲಾಗಿದೆ. ಸದರಿ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇರೆಗೆ ವಿತರಿಸಲಾಗುವುದು. ಕಡ್ಡಾಯವಾಗಿ ಕಟ್ಟಡ ಕಾರ್ಮಿಕರು ನೋಂದಾಯಿಸಿ ಒಂದು ವರ್ಷ ಪೂರ್ಣಗೊಂಡಿರಬೇಕು. ಕಾರ್ಮಿಕ ಗುರುತಿನ ಚೀಟಿ ಚಾಲ್ತಿಯಲ್ಲಿರಬೇಕು. ಕಾರ್ಮಿಕ ಗುರುತಿನ ಚೀಟಿಯಲ್ಲಿ ನಮೂದಿಸಿದ ವೃತ್ತಿಯ ಕಿಟ್‌ಗಳನ್ನು ಮಾತ್ರ ವಿತರಿಸಲಾಗುವುದು. ಹಿಂದಿನ ಅವಧಿಯಲ್ಲಿ ಮೇಸನ್ ಕಿಟ್ ತೆಗೆದುಕೊಂಡವರಿಗೆ ಅವಕಾಶ ಇರುವುದಿಲ್ಲ ಎಂದು ಸಿಂದಗಿ ಕಾರ್ಮಿಕ ನಿರೀಕ್ಷಕರು ಪತ್ರಿಕಾ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ‌ಕೆಲವು ಪದಾರ್ಥಗಳನ್ನು ಒಲೆಯ ಮೇಲೆ ಬೇಯಿಸಿ ಮಾಡಿದರೆ ಹಿತಕರ ಇನ್ನೂ ಕೆಲವು ಬೇಯಿಸದೇ ಮಾಡಿದರೆ ಹಿತಕರ. ಅವುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜೀವಸತ್ವ ಪಡೆಯಬಹುದು ಎಂದು ಹಿರಿಯ ವಿಜ್ಞಾನಿ ಕೆವಿಕೆ ಮುಖ್ಯಸ್ಥ ಡಾ.ಶಿವಶಂಕರ ಮೂರ್ತಿ ಹೇಳಿದರು.ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡದ ಆಶ್ರಯದಲ್ಲಿ ಆಯೋಜಿಸಲಾದ ಕೃಷಿ ಮೇಳದ ಭಾಗವಾಗಿ, ಒಲೆರಹಿತ ಅಡುಗೆ, ಕಸೂತಿ ಮತ್ತು ರಂಗೋಲಿ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಮಾತನಾಡಿದರು.ಇಂತಹ ವೇದಿಕೆಗಳು ಸೃಜನಶೀಲತೆ ಮತ್ತು ಅವಿಷ್ಕಾರವನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.ತೀರ್ಪುಗಾರರಾಗಿ ವಿಜಯಪುರ, ಡಾ. ಅರುಣ್ ಕುಮಾರ್ ಸತ್‌ರಡ್ಡಿ, ಪ್ರಾಥಮಿಕ ಶಾಲೆ, ಇಂಡಿ ಶ್ರೀಮತಿ ಭಗವಂತ ಗೌಡ, ಚಿತ್ರಕಲಾ ಶಿಕ್ಷಕರು, ಕಿತ್ತೂರಾಣ ಚೆನ್ನಮ್ಮ ವಸತಿ ಶಾಲೆ, ಅಂಜುಟಗಿಯ ಶಿವಾನಂದ ಜೇವೂರ್ ತೀರ್ಪು ನಿರ್ಣಯಿಸಿದರು.ಗೃಹ ವಿಜ್ಞಾನಿ ಡಾ. ವೀಣಾ ಚಂದಾವರಿ, ಡಾ. ಪ್ರೇಮ್‌ಚಂದ್, ಡಾ. ಬಾಲಾಜಿ ನಾಯಕ್, ಮಜೀದ ಜಿ. ಮತ್ತು ಶ್ರೀಮತಿ ಮಂಜುಳಾ ಹೊಸಮನಿ ಒಳಗೊಂಡ ಕಾರ್ಯಕ್ರಮ ಸಂಘಟಿಸಿದರು. ಅಡುಗೆ ಸ್ಪರ್ಧೆ ವಿಜೇತರು ಒಲೆರಹಿತ…

Read More

ವಿಜಯಪುರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿ | ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾದ ಹಾನಿ ಹಾಗೂ ಅದರ ಪರಿಣಾಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಾಳಾಗಿರುವ ರಸ್ತೆಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸಬೇಕು. ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆ ನಡೆಸಬೇಕು. ಜಿಪಿಎಸ್ ಫೋಟೋ ಬಳಸಿ ಯಾವುದೇ ರೈತರಿಂದ ದೂರು ಬರದಂತೆ ನೋಡಿಕೊಂಡು ಎಚ್ಚರಿಕೆ ವಹಿಸಬೇಕು. ಯಾವುದೇ ರೈತರಿಂದ ದೂರುಗಳು ಬಂದಲ್ಲಿ ಸಂಬಂಧಿಸಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಯಕತತ್ವದ ಮಹತ್ವ ಸಾರಿದ ನುಲಿಯ ಚಂದಯ್ಯನವರ ಜಯಂತ್ಯೋತ್ಸವದ ನಿಮಿತ್ತ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಪುಷ್ಪ ನಮನ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಯಕ ಶರಣರ ತತ್ವಾದರ್ಶಗಳು ಸಾರ್ವಕಾಲಕ್ಕೂ ಪ್ರಸ್ತುತವಾಗಿವೆ. ಶರಣರ ಕಾಯಕ ಕಲ್ಪನೆಯ ತತ್ವಾದರ್ಶಗಳನ್ನು ಅವರ ಜೀವನ ಸಂದೇಶ ಬಹುಮೂಲ್ಯ ವಿಷಯಗಳನ್ನು ಜನಸಾಮಾನ್ಯರು ತಮ್ಮ ಜೀವನಗಳಲ್ಲಿ ಅಳವಡಿಕೊಂಡು ಶರಣರು ತೋರಿದ ಮಾರ್ಗದಲ್ಲಿ ಸಾಗಬೇಕು ಎಂದು ಹೇಳಿದರು.ಮೆರವಣಿಗೆಯ ಬಸವೇಶ್ವರ ವೃತ್ತದ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಸಮಾವೇಶಗೊಂಡಿತು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ,ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಸಮಾಜಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮಹೇಶ ಪೋತದಾರ, ಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ ಸೇರಿದಂತೆ ಹಲವು…

Read More