Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರ ಪಾಲಿಕೆ ೨೨ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರನ್ನು ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ದಿನಾಂಕ:೧೧-೦೮-೨೦೨೫ ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ದಿನಾಂಕ:೧೧-೦೮-೨೦೨೫ರ ಬೆಳಿಗ್ಗೆ ೬ ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶಿಸಿದ್ದಾರೆ.ಈ ಸಮಯದಲ್ಲಿ ನಿಷೇಧಿತ ಪ್ರದೇಶದಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡಿ ಓಡಾಡುವುದನ್ನು ನಿಷೇಧಿಸಿದೆ..ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ೨೦೦ ಮೀಟರ್ ಪ್ರದೇಶದಲ್ಲಿ ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು, ಕ್ಷಾರಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳನ್ನು ಈ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: 12ನೇ ಶತಮಾನದ ಕಾಲದಲ್ಲಿ ಭಾಷೆಯಲ್ಲಿ ಸಾಕಷ್ಟ್ಟು ಬದಲಾವಣೆ ಗಳಾಗಿವೆ. ನಮ್ಮಲ್ಲಿರುವ ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು. ಕಾಯಕ ನಿಷ್ಠೆಯಲ್ಲಿ ನುಲಿಯ ಚಂದಯ್ಯ ರಂತಹ ಶರಣರ ತತ್ವ ಸಿದ್ದಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ತಾಲ್ಲೂಕು ಅಧ್ಯಕ್ಷ ರೇವಣ್ಣ ಹತ್ತಳ್ಳಿ ಹೇಳಿದರು.ತಾಲ್ಲೂಕಿನ ಲಚ್ಯಾಣ ಗ್ರಾಮ ಪಂಚಾಯತ್ ವ್ಯಾಪಿಯ ಬಜಂತ್ರಿ ವಸ್ತಿಯಲ್ಲಿ ಕಾಯಕಯೋಗಿ ಶ್ರೀ ನೂಲಿ ಚಂದಯ್ಯನವರ 918 ನೇ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚಾಣೆ ಮಾಡಿ ಮಾತನಾಡಿದರು.ಕಾಯಕದಲ್ಲಿ ಕೈಲಾಸ ಕಂಡ ಮಹಾನ್ ಶರಣರು ನುಲಿಯ ಚಂದಯ್ಯ ಅವರು. ಲಿಂಗ ನಿಷ್ಠೆಗಿಂತ ಕಾಯಕ ನಿಷ್ಠೆ ಮೇಲು ಎಂದು ಅವರು ಸಾರಿದ್ದಾರೆ. ತನು ಮನ ಧನದಿಂದ ವಚನ ಸಾಹಿತ್ಯಕ್ಕೆ ಶ್ರಮಿಸಿದ್ದಾರೆ ಎಂದರು.ಈ ಸಂದರ್ಭದಲ್ಲಿ ಕೊರಮ ಸಮಾಜದ ತಾಲ್ಲೂಕ ಉಪಾಧ್ಯಕ್ಷ ಸಿದ್ದಲಿಂಗ ರಾ ಬಜಂತ್ರಿ ಅವರ ನೇತೃತ್ವದಲ್ಲಿ ಹಾಗೂ ಸಮಾಜದ ಮುಖಂಡರು ಕಾಯಕಯೋಗಿ ಶ್ರೀ ನೂಲಿ ಚಂದಯ್ಯನವರ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಜನರ ಸರ್ಕಾರ ಎಂಬ ಮಾತು ಸುಳ್ಳಾಗಿದೆ. ಅಧಿಕಾರಿಗಳು ಮನಸ್ಸು ಮಾಡಿದರೆ ಮಾತ್ರ ಕೆಲಸಗಳಾಗುತ್ತದೆ. ಏನೇ ಅಭಿವೃದ್ಧಿ ಕೆಲಸಗಳಾಗಲಿ ವೈಯಕ್ತಿಕ ಕೆಲಸಗಳಾಗಬೇಕಾದರೆ ಅಧಿಕಾರಿಗಳು ಮನಸ್ಸು ಮಾಡಬೇಕು. ಗ್ರಾಮಗಳ ಅಭಿವೃದ್ಧಿಗೆ ಪಿಡಿಒಗಳು ಮನಸ್ಸು ಮಾಡಬೇಕು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಮಹತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೂತನವಾಗಿ ನಿರ್ಮಿಸಿದ ಗ್ರಾಮ ಪಂಚಾಯ್ತಿ ಕಟ್ಟಡ ರಾಜೀವ ಗಾಂಧಿ ಸೇವಾ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಅಧಿಕಾರಿ ಸಾರ್ವಜನಿಕರ ಸೇವೆಗಾಗಿ ಬಂದಿದ್ದೇವೆ ಎಂಬುದನ್ನು ಮರೆಯಬಾರದು. ಸಾರ್ವಜನಿಕರು ಕಟ್ಟುವ ಟ್ಯಾಕ್ಸನಿಂದ ನಾವೆಲ್ಲ ಸಂಬಳ ಪಡೆಯುತ್ತೇವೆ. ಆದ್ದರಿಂದ ಸಾರ್ವಜನಿಕರ ಸೇವೆ ಮಾಡಬೇಕು ಎಂದು ತಿಳಿಹೇಳಿದರು.ವಿಪ ಸದಸ್ಯ ಹಣಮಂತ ನಿರಾಣಿ ಮಾತನಾಡಿ, ಉತ್ತಮ ಶಿಕ್ಷಣದ ವ್ಯವಸ್ಥೆ, ಸ್ವಚ್ಛ ಗ್ರಾಮ, ರೈತರಿಗೆ ಹಣಕಾಸು ಒದಗಿಸುವ ಸಂಸ್ಥೆಗಳು ಉತ್ತಮವಾಗಿ ಕಾರ್ಯ ನಿರ್ವ ಹಿಸಿದರೆ ಗ್ರಾಮದ ಅಭಿವೃದ್ಧಿಯಾಗುತ್ತದೆ. ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದ ಮಹತ್ಮಾಗಾಂಧಿ ಅವರ ಕನಸು ನನಸು ಮಾಡಲು ಗ್ರಾಪಂ ಆಡಳಿತ ಶ್ರಮಿಸಬೇಕು.…

Read More

ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ತಾಲೂಕಿನ ಜಂಬಿಗಿ ಕೆ.ಡಿ ಹಾಗೂ ತುಂಗಳ ರಸ್ತೆ ಮಾರ್ಗದ ಮಧ್ಯೆದ ಜಂಬಗಿ ಕೆ.ಡಿ ಗ್ರಾಮದ ಗಿರಮಲ್ಲ ಬಿರಾದಾರ ತೋಟದ ವಸ್ತಿ ಕಾಡುಪ್ರಾಣಿಯೊಂದು ಇವರ ನಾಯಿ ಮರಿ ಮತ್ತು ಆಡು ತಿಂದು ಅವರ ಹೊಲದಲ್ಲಿ ಹೆಜ್ಜೆ ಗುರುತು ಪತ್ತೆಯಾದ ಹಿನ್ನಲೆಯಲ್ಲಿ ಸುತ್ತಲಿನ ಗ್ರಾಮಗಳಲ್ಲಿ ಹಾಗೂ ತೋಟದ ವಸ್ತಿ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.ಚಿರತೆ ಆಕಾರದ ಪ್ರಾಣಿಯನ್ನು ನೋಡಿದ್ದೇನೆ ಎಂದು ರೈತರಾದ ಗಿರಮಲ್ಲ ಬಿರಾದಾರ ಹೇಳುತ್ತಾರೆ. ಹಾಗೂ ಗ್ರಾಮಸ್ಥರು ಹೆಜ್ಜೆ ಗುರುತು ಹಾಗೂ ನಾಯಿಮರಿಯನ್ನು ತಿಂದು ಬಿಟ್ಟಿದ್ದನ್ನು ನೋಡಿ ಸಾವಳಗಿ ಪೊಲೀಸ್ ಠಾಣೆ ಹಾಗೂ ಅರಣ್ಯ ಅಧಿಕಾರಿಗಳಿಗೆ ಗಮನಕ್ಕೆ ತಂದಿರುತ್ತಾರೆ.ಇದಕ್ಕೆ ತಕ್ಷಣ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾವಳಗಿ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜೊತೆಗೆ ಚರ್ಚಿಸಿ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಸಾವಳಗಿ ಉಪವಲಯ ಅರಣ್ಯ ಅಧಿಕಾರಿ ಮಹೇಶ್ ಗುಡಿಮನಿ, ಸಿಬ್ಬಂದಿಗಳಾದ ಮಲ್ಲಿಕಾರ್ಜುನ ಹಾರಗೊಂಡ, ಪ್ರಕಾಶ್ ಕರಾವಳಿ, ಈರಣ್ಣ ಪೋದ್ದಾರ,…

Read More

ಲೇಖನ- ವಿವೇಕಾನಂದ. ಎಚ್. ಕೆ.ಮೊ: 9663750451..Watsapp)9844013068 ಉದಯರಶ್ಮಿ ದಿನಪತ್ರಿಕೆ ಧರ್ಮಸ್ಥಳದ ಪರ ವಿರೋಧದವಾದ ವಿವಾದಗಳು, ಚರ್ಚೆಗಳು, ಮಾತುಗಳು ದಿಕ್ಕು ತಪ್ಪುತ್ತಿದೆ. ಭಾಷೆ ಮತ್ತು ಭಾವನೆಗಳು ತೀರಾ ಕೆಳಹಂತಕ್ಕೆ ಇಳಿದಿವೆ ಮತ್ತು ಕ್ರೌರ್ಯವನ್ನು ಸೃಷ್ಟಿಸುತ್ತಿವೆ ಹಾಗು ಹೊರಹಾಕುತ್ತಿದೆ.ನಮ್ಮದೇ ಜನಗಳು, ನಾವೆಲ್ಲ ಭಾರತೀಯರು, ಬಹುತೇಕ ಕನ್ನಡಿಗರು, ಹೆಚ್ಚು ಕಡಿಮೆ ಸಹಪಾಠಿಗಳು, ಸಹವರ್ತಿಗಳು, ಸಮಕಾಲೀನರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ‌, ಎಲ್ಲರಿಗೂ ಬಹುತೇಕ ವಿದ್ಯಾಭ್ಯಾಸ ಇದೆ. ಸಾಮಾನ್ಯ ತಿಳುವಳಿಕೆಯೂ ಇದೆ. ಪರವಾಗಿ ವಾದ ಮಾಡುವವರಿಗೆ ಧರ್ಮ, ಭಕ್ತಿ, ಸಂಪ್ರದಾಯ ಹೆಚ್ಚು ಕಡಿಮೆ ಮೂಲವಾದರೆ, ವಿರೋಧವಾಗಿ ಮಾತನಾಡುತ್ತಿರುವವರಿಗೆ ಬಹುತೇಕ ಬುದ್ಧ, ಗಾಂಧಿ, ಅಂಬೇಡ್ಕರ್, ಬಸವಣ್ಣ, ವಿವೇಕಾನಂದ ಮುಂತಾದವರ ಚಿಂತನೆಗಳೇ ಮೂಲಾಧಾರ. ಇಷ್ಟರ ನಡುವೆಯೂ ಈ ಜನಗಳ ವರ್ತನೆ ಎಷ್ಟು ಕೆಳಮಟ್ಟಕ್ಕೆ ಇಳಿದಿದೆ ಎಂದರೆ ಕುಡುಕನೊಬ್ಬ ತೀರಾ ನಿಯಂತ್ರಣ ಮೀರಿ ಕುಡಿದಾಗ ಆಡುವ ಮಾತುಗಳಂತೆ, ಹುಚ್ಚನೊಬ್ಬನ ಹೊಲಸು ಮಾತುಗಳಂತೆ, ಮಾನಸಿಕ ರೋಗಿಯೊಬ್ಬನ ಸ್ಥಿಮಿತ ಕಳೆದುಕೊಂಡ ಭಾಷೆಯಂತೆ, ಕೆಟ್ಟ ಕೊಳಕ ಭಾಷೆಯನ್ನು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಳಸುತ್ತಿದ್ದಾರೆ.ತನ್ನ ಸಹವರ್ತಿಗಳ ಬಗ್ಗೆ…

Read More

ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಶರಣಮಾಸದ 16 ನೆಯ ದಿವಸದ ಉಪನ್ಯಾಸ ಮಾಲಿಕೆಯಲ್ಲಿ ಪ್ರೊ. ಪೊಲೀಸ್ ಪಾಟೀಲ ಅವರು ಜಾನಪದ ಸಾಹಿತ್ಯದಲ್ಲಿ ಶರಣರ ನೆನಹು ಎನ್ನುವ ವಿಷಯದ ಬಗೆಗೆ ಅತ್ಯಂತ ಸಮರ್ಪಕವಾಗಿ ನಮ್ಮೊಡನೆ ಹಂಚಿಕೊಂಡರು.ಜಾನಪದಿಗರ ತ್ರಿಪದಿಗಳಲ್ಲಿ, ಹಾಡುಗಳಲ್ಲಿ,ತೊಂಬತ್ತರಷ್ಟು ಪಾಲು ಬಸವಣ್ಣನವರನ್ನು ನೆನೆಯುವುದನ್ನು ನಾವು ಕಾಣುತ್ತೇವೆ. ಹಂತಿ ಹೊಡೆಯುವಾಗ, ರಾಶಿ ಮಾಡುವಾಗ ಬೀಸುವಾಗ, ಕುಟ್ಟುವಾಗ ಹಾಡುವ ಪದಗಳಸ್ವಾರಸ್ಯ, ಅದರ ತಿರುಳು, ಮಹತ್ವವನ್ನು ಹೇಳುತ್ತಾ ಹಂತಿಯ ಅನಸ್ವರ ತೆಗೆದರೆ ಹತ್ತಿ ಆಗುತ್ತದೆ. ಹತ್ತಿ ಎಂದರೆ ಗಿರಿಯನ್ನು ಹತ್ತುವುದು, ಪ್ರಪಂಚವೆಂಬ ಕಣದಲ್ಲಿ ತನ್ನ ತಾನು ಅರಿಯುವುದು, ಪ್ರಪಂಚ, ಪಾರಮಾರ್ಥ ಮತ್ತು ಪರಾರ್ಥ ಎಂಬ ಮೂರು ಹುರಿಯನ್ನು ಹೊಸೆದು ಬದುಕನ್ನು ಹೇಗೆ ಕಟ್ಟಿಕೊಳ್ಳಬೇಕು ಎನ್ನುವುದನ್ನು ಜಾನಪದಿಗರು ಹೇಳುವುದನ್ನು ಅತ್ಯಂತ ಸರಳ ರೀತಿಯಲ್ಲಿ ಹೇಳಿದರುಜಾನಪದಿಗರು ಎರಡು ನೆಲೆಯಲ್ಲಿ ಬಸವಣ್ಣನವರನ್ನು ಕಂಡುಕೊಂಡರು. ಹೆಗಲಿಗೆ ಹೆಗಲು ಕೊಟ್ಟು, ಕೃಷಿಗೆ ಆಧಾರಿತವಾದ ಎತ್ತು ಬಸವಣ್ಣ ಮತ್ತು ಅವರ ಬದುಕನ್ನು ಎತ್ತಿ ಕೊಟ್ಟ, ಆನುಭಾವಿಕ ನೆಲೆಯಲ್ಲಿ ಉದ್ದರಿಸಿದ,…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಜನತಾ ಪ್ರಾಥಮಿಕ ಗ್ರಾಹಕರ ಸಹಕಾರಿ ಸಂಘಕ್ಕೆ ೨೦೨೫-೨೬ ನೇ ಸಾಲಿನಿಂದ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಪದಾದಿಕಾರಿಗಳನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.ಡಾ.ಎಂ ಎಲ್ ವಡ್ಡರ್ ಅಧ್ಯಕ್ಷರಾಗಿ, ಜಿ ಎಂ ಗುಮಶೆಟ್ಟಿ ಉಪಾಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಎಸ್ ಎಂ ಕಡಕೋಳ, ಡಿ ಎಸ್ ಕಡಕೋಳ, ಎಸ್ ಎಸ್ ಪಾಟೀಲ, ಎಸ್ ಸಿ ದೇಸಾಯಿ, ಬಿ ಎಸ್ ಅಡಕಿ, ಜಿ ಎಸ್ ಚಿಕ್ಕಮಠ,ಬಿ ಎಂ ಬೇನಾಳ, ಎಸ್ ಸಿ ಚಳ್ಳಗಿ, ಎಂ ಎಂ ವಲ್ಲಿಬಾಯಿ ಸದಸ್ಯರಾಗಿ ಹಾಗೂ ಎಸ್ ಎಸ್ ದೇಸಾಯಿ,ಜಿ ಐ ಝಳಕಿ ಮಹಿಳಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದರು, ಚುನಾವಣಾಧಿಕಾರಿಯಾಗಿ ಡಿ ಬಿ ಅಡಕಿ ಕಾರ್ಯನಿರ್ವಹಿಸಿದರು ಎಂದು ಕಾರ್ಯದರ್ಶಿ ಎಂ ಎಂ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

*ಉದಯರಶ್ಮಿ ದಿನಪತ್ರಿಕೆ*ಬಸವನಬಾಗೇವಾಡಿ: ಎಲ್ಲ ಸಂಪನ್ಮೂಲಗಳಿಂದ ಕೂಡಿದ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅನೇಕ ಕೋಶಗಳನ್ನು ರಚಿಸಿ ಪ್ರತಿಯೊಂದು ಕೋಶದ ಅಡಿಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕೆಲಸ ಮಾಡುವ ಪದ್ಧತಿ ನಮ್ಮ ಮಹಾವಿದ್ಯಾಲಯದಲ್ಲಿದೆ ಎಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಪ್ರೊ. ಸಿ. ಪಿ ಧಡೇಕರ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹೊಸದಾಗಿ ಪ್ರವೇಶ ಪಡೆದ ಬಿಎ ಮತ್ತು ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂಥ ನಿಟ್ಟಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ದೀಕ್ಷಾರಂಭ (ಒರಿಯೆಂಟೇಶನ್ ಪ್ರೋಗ್ರಾಮ್) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಮಹಾವಿದ್ಯಾಲಯದಲ್ಲಿ ಐಕ್ಯೂ ಎಸಿ, ರಿಸರ್ಚ್, ಕಲ್ಚರಲ್, ಟೈಮ್ ಟೇಬಲ್, ಎಸ್ಸಿಎಸ್ಟಿ ಸ್ಕಾಲರ್ಷಿಪ್, ಅಲುಮಿನಿ ಕಮಿಟಿ, ಇಂಟರ್ನಲ್ ಎಕ್ಸಾಮಿನೇಷನ್, ಪೇರೆಂಟ್ಸ್ ಅಂಡ್ ಟೀಚರ್ ಕಮಿಟಿ, ಲೈಬ್ರರಿ, ಸ್ಪೋರ್ಟ್ಸ್, ವಿಮೆನ್ ಎಂಪವರ್ ಮೆಂಟ್ ಪ್ರಿವೆನ್ಷನ್ ಆಫ್ ಸೆಕ್ಸವಲ್ ಕಮಿಟಿ, ಪ್ರೆಸ್ ಅಂಡ್ ಪಬ್ಲಿಸಿಟಿ ಕಮಿಟಿ, ಲ್ಯಾಂಗ್ವೇಜ್ ಫೋರಂ, ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್ ಅಂಡ್…

Read More

ಉದಯರಶ್ಮಿ ದಿನಪತ್ರಿಕೆ ಬಸವವನಬಾಗೇವಾಡಿ: ತಾಲೂಕಿನ ಉಕ್ಕಲಿ ಗ್ರಾಮದ ಸರ್ಕಾರಿ ಉರ್ದು ಬಾಲಕರ ಪ್ರಾಥಮಿಕ ಶಾಲೆಯನ್ನು ಸರ್ಕಾರ ಉನ್ನತೀಕರಿಸಿ ಪ್ರೌಢಶಾಲೆ ಹಂತಕ್ಕೆ ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರೌಢ ಶಾಲಾ ವಿಭಾಗದ ಅಧೀನ ಕಾರ್ಯದರ್ಶಿ ಎಸ್. ಪ್ರಕಾಶ ಆದೇಶ ಹೊರಡಿಸಿದ್ದಾರೆ. ಬಸವನಬಾಗೇವಾಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಇವರ ಪರಿಶ್ರಮದ ಫಲವಾಗಿ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೆ ಏರಿಕೆಯಾಗಿದೆ.ಸಚಿವ ಶಿವಾನಂದ ಪಾಟೀಲ ಅವರು ತಮ್ಮೂರಿನ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾಳಜಿ ತೋರಿದ್ದಕ್ಕೆ ಉಕ್ಕಲಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಸಚಿವರನ್ನು ಅಭಿನಂದಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮೊದಲು ಮೂರು ದಿನಗಳ ನಡೆಯುತ್ತಿದ್ದ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ಐತಿಹಾಸಿಕ ಜಾತ್ರಾಮಹೋತ್ಸವವು ಕಳೆದ ಮೂರು ವರ್ಷಗಳಿಂದ ಐದು ದಿನಗಳ ಕಾಲ ನಡೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಎಲ್ಲರ ಸಹಕಾರದಿಂದ ಐತಿಹಾಸಿಕ ಜಾತ್ರೆಗೆ ಮೆರಗು ಬರುತ್ತಿರುವುದು ಹರ್ಷದಾಯಕ ಸಂಗತಿ. ಈ ವರ್ಷದ ಜಾತ್ರಾಮಹೋತ್ಸವವು ಆ. ೧೧ ರಿಂದ ೧೫ ರವರೆಗೆ ಐದು ದಿನಗಳ ಕಾಲ ನಡೆಯಲಿದೆ. ಈ ವರ್ಷದ ಜಾತ್ರಾಮಹೋತ್ಸವದ ಯಶಸ್ವಿಗೆ ವಿವಿಧ ಇಲಾಖೆಯ ಸಹಕಾರ ಸೇರಿದಂತೆ ಎಲ್ಲ ಜನರ ಸಹಕಾರ ಅಗತ್ಯ ಎಂದು ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.ಪಟ್ಟಣದ ಬಸವೇಶ್ವರ ದೇವಾಲಯದ ಅಂತರಾಷ್ಟ್ರೀಯ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದ ಮುಂಭಾಗ ಗುರುವಾರ ಸಂಜೆ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಲವು ವರ್ಷಗಳಿಂದ ನಡೆಯುತ್ತಿರುವ ಬಸವೇಶ್ವರ ಜಾತ್ರೆಯಲ್ಲಿ ಕಳೆದ ಎರಡು ವರ್ಷದ ಹಿಂದೆ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಕಳ್ಳರು ಜನರ ಕೊರಳಲ್ಲಿದ್ದ ಬಂಗಾರದ ಚೈನ್ ಹೊಡೆದಿದ್ದು ಬಿಟ್ಟರೆ ಯಾವುದೇ ಅಹಿತಕರ…

Read More